Author: admin
ಇತ್ತೀಚೆಗೆ ಒಂದು ಫೇಸ್ಬುಕ್ ಪೋಸ್ಟ್ ನೋಡ್ತಾ ಇದ್ದೆ. ಅದ್ರಲ್ಲಿ ಕಮೆಂಟ್ ಸೆಕ್ಷನ್ ಅಲ್ಲಿದ್ದ ನೆಗೆಟಿವ್ ಕಮೆಂಟ್ಗಳಿಗೆಲ್ಲ ಆ ಪೋಸ್ಟ್ ಮಾಡಿದ ವ್ಯಕ್ತಿ ಖಾರವಾದ ಪ್ರತಿಕ್ರಿಯೆ ನೀಡ್ತಾ ಇದ್ರು. ಪುನಃ ಆ ಕಮೆಂಟ್ಗಳಿಗೆ ಮತ್ತೆ ವಾದಿಗಳು , ಪ್ರತಿವಾದಿಗಳು ಹೀಗೆ ಪಟ್ಟಿ ಬೆಳೀತಾನೆ ಇತ್ತು .. ಕೊನೆಗೆ ಗೆಲುವು ಯಾರದ್ದು ಅಂತ ಕೇಳಿದ್ರೆ ಅದು ಕೊನೆಯಿರದ ಯುದ್ಧ ಅಷ್ಟೇ.. ಕಮೆಂಟ್ಗಳಿಗೆ, ಬೇರೆಯವರ ಮಾತುಗಳಿಗೆ ತಲೆ ಕೆಡಿಸಿಕೊಳ್ಳದೆ ಇರೋದು ಜೀವನದಲ್ಲಿ ಎಲ್ಲರಿಗೂ ಇರಲೇಬೇಕಾಗಿರುವ ಗುಣ ಅಂದ್ರೆ ಒಪ್ತೀರಿ ಅಲ್ವಾ , ಅದು ಜೀವನ ಬೇಕಾದ್ರೂ ಆಗಿರಲಿ ಅಥವಾ ಸಾಮಾಜಿಕ ಜಾಲತಾಣಗಳು ಬೇಕಾದರೂ ಆಗಿರಲಿ. ಚಿಕ್ಕ ವಯಸ್ಸಿನಲ್ಲಿ ನನಗೆ ಯಾರಾದರೂ ನನ್ನ ವಿಚಾರವಾಗಿ ಕಮೆಂಟ್ಗಳನ್ನು ಮಾಡಿದಾಗ, ತಮ್ಮ ಅಭಿಪ್ರಾಯಗಳನ್ನು ಅನಗತ್ಯ ವಾಗಿ ಹೇರಿದಾಗ ಅದನ್ನ ಸ್ವೀಕರಿಸುವುದಕ್ಕೆ ಬಹಳ ಕಷ್ಟ ಆಗ್ತಿತ್ತು. ಕೋಪ ಬರ್ತಾ ಇತ್ತು ಬೇಜಾರ್ ಆಗ್ತಾ ಇತ್ತು. ಎಲ್ಲೋ ಒಂದು ಕಡೆ ಕೀಳರಿಮೆ ಕೂಡ ಕಾಡ್ತಿತ್ತು. ಆತ್ಮವಿಶ್ವಾಸದ ಮೇಲೆ ಒಂದು ರೀತಿ ಹೊಡೆತ ಬಿದ್ದಂತಹ…
ಮುಂಬಯಿ (ಆರ್ಬಿಐ), ಜ.25: ಐಲೇಸಾ-ದಿ ವಾಯ್ಸ್ ಆಫ್ ಓಷನ್ (ರಿ). ಡಿಜಿಟಲ್ ಸಂಸ್ಥೆಯು ಇದೇ ಶನಿವಾರ (ಜ.28) ಝೂಮ್ ಡಿಜಿಟಲ್ ವೇದಿಕೆಯಲ್ಲಿ `ಬಾನ ಚಂದ್ರೆ ತೆಲಿಪುನಾನಿ’ ತುಳು ಹಾಡು ಬಿಡುಗಡೆ ಮಾಡಲಿದೆ. ಕಳೆದ ವರ್ಷ ಹನ್ನೊಂದು ತುಳು ಹಾಡುಗಳನ್ನು ಬಿಡುಗಡೆ ಗೊಳಿಸಿದ ಐಲೇಸಾ ಸಂಸ್ಥೆ ಈ ವರ್ಷದ ಮೊದಲ ಕಾಣಿಕೆಯಾಗಿ ಯುವ ಸಾಹಿತಿ ನರೇಂದ್ರ ಕಬ್ಬಿನಾಲೆ ಅವರ ಬಾನ ಚಂದ್ರೆ ತೆಲಿಪುನಾನಿ ಎನ್ನುವ ತಾಯಿ ಮಕ್ಕಳ ಬಾಂಧವ್ಯದ ಮಧುರ ಗೀತೆಯನ್ನು ಹೆಣ್ಣು ತನ್ನೆಲ್ಲಾ ಆಸೆ ಆಕಾಂಕ್ಷೆಗಳನ್ನು ತನ್ನ ಸಾಂಸಾರಿಕ ಜೀವನದ ಒತ್ತೆಯಿಡುತ್ತಾ ಗಂಡ ಮಕ್ಕಳ ನಗುವಲ್ಲಿ ಬೆಳದಿಂಗಳಂತೆ ಲೀನಳಾಗುವ ಚಿತ್ರಣದ ಹಾಡನ್ನು ಬಿಡುಗಡೆ ಗೊಳಿಸಲಿದೆ. ಪ್ರೇಮಲತಾ ದಿವಾಕರ್ ಈ ಹಾಡನ್ನು ಮಧುರವಾಗಿ ಸಂಯೋಜಿಸಿದ್ದು ಪ್ರಖ್ಯಾತ ಗಾಯಕಿ ಮಾಲಿನಿ ಕೇಶವ ಪ್ರಸಾದ್ ಅವರ ಧ್ವನಿಯಲ್ಲಿ ಮುದ್ರಿಸಲಾಗಿದೆ. ಪ್ರಮೋದ್ ಸಹಕಾರದಲ್ಲಿ ನಿಶಾಂತ್ ಕ್ಯಾಲಿಕಟ್ ಅವರ ವಾದ್ಯ ಸಂಗೀತವಿದ್ದು ಹಾಡನ್ನು ಮಹಿಷಮರ್ದಿನಿ ದೇವಸ್ಥಾನ ಅಜ್ಜಾವರ ಸುಳ್ಯ ಇದರ ಧರ್ಮದರ್ಶಿ ಶ್ರೀ ಶಿವರಾಯ ಇವರು ಬಿಡುಗಡೆ ಗೊಳಿಸಲಿದ್ದಾರೆ.…
ವಿಶ್ವ ಬಂಟ ಸಮ್ಮೇಳನದ ಹಿನ್ನೆಲೆಯಲ್ಲಿ “ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ” ಕುರಿತ ವಿಚಾರ ಸಂಕಿರಣವು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಜರುಗಿತು. ಹೇರಂಬ ಇಂಡಸ್ಟ್ರೀಸ್ ಲಿ. ಮುಂಬೈ ಇದರ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು. ಅಧ್ಯಕ್ಷತೆಯನ್ನು ವಿಸ್ವತ್ ಕೆಮಿಕಲ್ಸ್ ಲಿ, ಮುಂಬೈ ಇದರ ಸಿಎಂಡಿ ಬಿ.ವಿವೇಕ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ, ಭಾಸ್ಕರ ರೈ ಕುಕ್ಕುವಳ್ಳಿ ಅವರು ಪ್ರಸ್ತಾವನೆಗೈದು “ಇವತ್ತಿನ ಶಿಕ್ಷಣ ಎತ್ತ ಸಾಗುತ್ತಿದೆ, ನಿರುದ್ಯೋಗವನ್ನೇ ಸೃಷ್ಟಿ ಮಾಡುವ ಶಿಕ್ಷಣ ಸಂಸ್ಥೆಗಳು ಉದ್ಯೋಗ ಕಲ್ಪಿಸುವುದು ಹೇಗೆ? ಇಲ್ಲಿ ಕಲಿತ ಅರ್ಹ ಯುವಕರಿಗೆ ಉದ್ಯೋಗ ಸಿಗದೆ ವಿದೇಶಕ್ಕೆ ಹೋಗಬೇಕಾಗುತ್ತದೆ. ಇದನ್ನು ಪ್ರತಿಭಾ ಪಲಾಯನ ಎನ್ನುತ್ತಾರೆ. ಪ್ರತಿಭಾವಂತ ಬಂಟ ಸಮುದಾಯದ ಯುವಕರನ್ನು ನಮ್ಮ ಸಮಾಜದ ಅಭಿವೃದ್ಧಿಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ವಿಚಾರ ವಿನಿಮಯ ನಡೆಯಬೇಕು”…
ಕಾರ್ಕಳ ಬಂಟರ ಸಂಘದ ವತಿಯಿಂದ ಆಟಿಡೊಂಜಿ ಬಂಟ ಕೂಟ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿ ಭಾನುವಾರ ನಡೆಯಿತು. ಮಂಗಳೂರು ತಾಲೂಕು ಬಂಟರ ಸಂಘದ ಸಂಚಾಲಕ ವಸಂತ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜವನ್ನು ಮುನ್ನೆಡೆಸುವ ಜವಾಬ್ದಾರಿ ವಿದ್ಯಾರ್ಥಿಗಳು ಮತ್ತು ಯುವಜನತೆ ಮೇಲಿದೆ. ಬಂಟ ಸಮಾಜದ ಪ್ರತಿಯೊಬ್ಬರೂ ಆರ್ಥಿಕ ಸಾಮಾಜಿಕ ಕಾಣುವಲ್ಲಿ ಸಂಘವು ಪ್ರಯತ್ನಸ ಬೇಕಾಗಿದೆ. ಬಾಲ್ಯದಿಂದಲೇ ಮಕ್ಕಳಿಗೆ ಸಂಘದ ತಿಳುವಳಿಕೆಯ ಜತೆಗೆ ಸಾಮಾಜಿಕ ಜ್ಞಾನವನ್ನು ನೀಡಿದಾಗ ಸಾಮಾಜಿಕ ಪರಿವರ್ತನೆ ಸಾಧ್ಯ. ಈ ನಿಟ್ಟಿನಲ್ಲಿ ಹೆತ್ತವರು ಕೂಡ ಪ್ರಯತ್ನಿಸಬೇಕು. ನಾವು ನಡೆದು ಬಂದ ದಾರಿಯ ಬಗ್ಗೆ ಅವರಿಗೆ ತಿಳಿ ಹೇಳುವ ಕೆಲಸವಾಗಬೇಕು ಎಂದರು. ಬಂಟರ ಸಂಘದ ನಿಕಟಪೂರ್ವ ಸಂಚಾಲಕ ಮಣಿರಾಜ್ ಶೆಟ್ಟಿ ಕಾರ್ಕಳ, ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ರಾಜ್ಯ ಸ್ಟೋನ್ ಆಂಡ್ ಕ್ರಷರ್ ರಾಜ್ಯ ಘಟಕದ ಅಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ, ಬಂಟರ ಮಾತೃ ಸಂಘದ ಸದಸ್ಯ ಚೇತನ್ ಶೆಟ್ಟಿ ಕೊರಳ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸವಿತಾ ಶೆಟ್ಟಿ,…
ಕರ್ನಾಟಕ ಕರಾವಳಿಯ ಆಟಿ ತಿಂಗಳಿಗೆ ಕ್ಷಣಗಣನೆ ಆರಂಭವಾಗಿದೆ. ಜಡಿ ಮಳೆಯ ನಡುವೆ ಆಂಗ್ಲ ಕ್ಯಾಲೆಂಡರಿನ ಜುಲೈ- ಆಗಸ್ಟ್ ನಡುವೆ ಮತ್ತು ಸಾಂಪ್ರದಾಯಿಕ ತುಳುವಿನ ನಾಲ್ಕನೆಯ ತಿಂಗಳು. ಈ ಹಿಂದಿನ ಕಾಲಘಟ್ಟದಲ್ಲಿ ಪ್ರಚಲಿತ ಆಧುನಿಕ ಜೀವನ ಶೈಲಿಯ ಆಟಿ ಆಚರಣೆಗೂ ಬಹಳಷ್ಟು ವ್ಯತ್ಯಾಸಗಳು ಕಾಲ ಸಹಜವಾಗಿ ಉಂಟಾಗಿದೆ. ಇದು ಸಹಜ ಮತ್ತು ಅನಿವಾರ್ಯ ಕೂಡ. ಆದರೆ ಈ ಆಟಿ ಅನ್ನುವುದು ತುಳುನಾಡಿನ ಸಂಪ್ರದಾಯ ಮತ್ತು ಪರಂಪರೆಯ ಮಹತ್ವದ ಕೊಂಡಿ ಎಂಬ ಬಗ್ಗೆ ಎರಡು ಮಾತಿಲ್ಲ. ಈ ಬಗ್ಗೆ ಪುಟ್ಟ ಇಣುಕು ನೋಟ ಇಲ್ಲಿ ಪ್ರಸ್ತುತವಾಗಬಹುದು. ಸುಮಾರು ನಾಲ್ಕೈದು ದಶಕಗಳ ಹಿಂದಿನ ವರೆಗೂ ಈ ಆಟಿ ಅನ್ನುವುದು ದುಡಿಯುವ ಶ್ರಮಿಕ; ಬೇಸಾಯವೇ ಪ್ರಧಾನವಾಗಿದ್ದ, ಆರ್ಥಿಕವಾಗಿ ಸಶಕ್ತವಲ್ಲದ ಕುಟುಂಬಗಳಿಗೆ ಪ್ರಯಾಸಕರ ಆಗಿತ್ತು. ಆಗ ತಾನೇ ಏಣಿಲು ಭತ್ತದ ಉಳುಮೆ- ನಾಟಿ ಕಾರ್ಯ ಪೂರ್ಣಗೊಂಡು ನಿರ್ದಿಷ್ಟ ವರ್ಗಕ್ಕೆ ಆದಾಯ ಮೂಲವಿರಲಿಲ್ಲ. ನಿಜ ಅರ್ಥದ ಕಷ್ಟ ಕಾರ್ಪಣ್ಯದ ದಿನಗಳು. ಧೋ ಎಂದು ಸುರಿಯುವ ಮಳೆಯ ನಡುವೆ ಕೆಲಸ ಕಾರ್ಯಗಳಿಲ್ಲ;…
ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಹುಣ್ಸೆಮಕ್ಕಿ ಇದರ 2023-24ನೇ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹೊಂಬಾಡಿ ಮಂಡಾಡಿಯಲ್ಲಿ ಇತ್ತೀಚಿಗೆ ಜರುಗಿತು. ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ಲಯನ್ ಎಸ್. ರತ್ನಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಲಯನ್ ದಯಾನಂದ, ಕೋಶಾಧಿಕಾರಿಯಾಗಿ ಲಯನ್ ಅನಿಲ್ ಕುಮಾರ್ ಶೆಟ್ಟಿ ಅವರಿಗೆ ಡಿಸ್ಟಿಕ್ಟ್ 317 ಸಿ ಇದರ ಚೀಫ್ ಕೋ ಆರ್ಡಿನೇಟರ್ ಆಗಿರುವ ಲಯನ್ ಸುನೀಲ್ ಕುಮಾರ್ ಶೆಟ್ಟಿ ಪ್ರಮಾಣ ವಚನ ಬೋಧಿಸಿದರು. ಬಿ. ಅರುಣ್ ಕುಮಾರ್ ಹೆಗ್ಡೆ, ಎಚ್. ದೀನ್ ಪಾಲ್ ಶೆಟ್ಟಿ, ಯು. ಮೋಹನ್ ದಾಸ್ ಶೆಟ್ಟಿ, ಇಂಜಿನಿಯರ್ ರತ್ನಾಕರ್ ಶೆಟ್ಟಿ, ಶಂಕರ ಶೆಟ್ಟಿ, ಎಚ್. ಬಾಲಕೃಷ್ಣ ಹೆಗ್ಡೆ, ಸುದೀರ್ ಕುಮಾರ್ ಶೆಟ್ಟಿ, ರಜತ್ ಹೆಗ್ಡೆ ಹಾಗೂ ಕ್ಲಬ್ಬಿನ ಸದಸ್ಯರು ಇದ್ದರು.
ಸುರತ್ಕಲ್ ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಜೂನ್ 4 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಮಹಾಸಭೆ, ಸಂಜೆ 5 ಗಂಟೆಗೆ ಬಂಟರ ಭವನದಲ್ಲಿ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಸಮಾರಂಭವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ) ನ ಸ್ಥಾಪಕಾಧ್ಯಕ್ಷ ಎ ಸದಾನಂದ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ, ಬಂಟರ ಸಂಘ ಮುಂಬೈ ಪೂರ್ವ ವಲಯದ ಸಮನ್ವಯಕ ಸುಬ್ಬಯ್ಯ ಎ ಶೆಟ್ಟಿ, ಹುಬ್ಬಳ್ಳಿ ಪಂಜುರ್ಲಿ ಗ್ರೂಪ್ಸ್ ನ ಮಾಲಕ ರಾಜೇಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಶೈಕ್ಷಣಿಕ ಮತ್ತು ವಿವಿಧ…
ಉಡುಪಿ ಜಿಲ್ಲೆಯ ಪುಟ್ಟ ಹಳ್ಳಿಯೊಂದರ ಬಡ ಕುಟುಂಬವೊಂದರಲ್ಲಿ ಜನಿಸಿದ ರಾಜೇಂದ್ರ ಶೆಟ್ಟಿ ಬಾಲ್ಯದಲ್ಲೇ ಬಡತನದ ಬೇಗೆ ಅನುಭವಿಸಿದರು. ಅವರ ತಂದೆ ತಾಯಿ ಕುಟುಂಬದೊಂದಿಗೆ ಉಡುಪಿಯಿಂದ ಹುಬ್ಬಳ್ಳಿಗೆ ವಲಸೆ ಬಂದಾಗ ರಾಜೇಂದ್ರ ಶೆಟ್ಟಿಯವರು ಬಾಲಕನಾಗಿದ್ದರು. ಹೇಗೋ ಕಷ್ಟಪಟ್ಟು 8ನೇ ತರಗತಿಯವರೆಗೆ ಓದಿದ ಅವರು ಉದ್ಯೋಗಕ್ಕಾಗಿ ಮನೆಯಲ್ಲಿ ಯಾರಿಗೂ ಹೇಳದೆ ರೈಲು ಹತ್ತಿದರು. ಅದು ಹೋಗಿ ನಿಂತದ್ದು ಮುಂಬೈಯಲ್ಲಿ, ಅಲ್ಲಿ ರೈಲ್ವೇ ಸ್ಟೇಷನ್ ಅಕ್ಕಪಕ್ಕದಲ್ಲಿ ಚಹಾ ಮಾರುವ ಕೆಲಸ ಮಾಡಿದರು. ಆರಂಭದಲ್ಲಿ ಬೀದಿ ಬದಿಯಲ್ಲಿ ಮಲಗಿ ಕೆಲಸ ಹುಡುಕುತ್ತಾ ಅಲ್ಲಿನ ಹೊಟೇಲ್ಗಳಿಗೆ ಕೆಲಸಕ್ಕಾಗಿ ಅಲೆದಾಡಿದರು. ಮುಂದೆ ಅವರಿಗೆ ಹೊಟೇಲ್ನಲ್ಲಿ ಕ್ಲೀನರ್ ಕೆಲಸ ಸಿಗುತ್ತದೆ. ವಿವಿಧ ಹೋಟೆಲ್ಗಳಲ್ಲಿ ಅಡುಗೆ ಮನೆಯ ಕೆಲಸ, ಕ್ಲೀನರ್, ವೇಟರ್, ಕ್ಯಾಪ್ಟನ್ನಂತಹ ನಾನಾ ತರಹದ ಕೆಲಸಗಳನ್ನು ಮಾಡಿದರು. ಆ ಬಳಿಕ ದೇವತಾ ಮನುಷ್ಯರಂತಹ ಮಾಲಕರೊಬ್ಬರು ಸಿಕ್ಕಿದ್ದರಿಂದ ಅವರ ಹೊಟೇಲ್ನಲ್ಲಿ 12 ವರ್ಷಗಳ ಕಾಲ ಮ್ಯಾನೇಜರ್ ಆಗಿ ದುಡಿದರು. ಮುಂಬೈಗೆ ಬಂದಾಗ ಅವರಿಗೆ 13ರಿಂದ 14 ವರ್ಷ ಆಗಿತ್ತು. ಅಲ್ಲಿ 18…
ಮಂಗಳೂರು: ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ಡಿಸೆಂಬರ್ 16 ರಂದು ತೆರೆ ಕಾಣಲಿದೆ ಎಂದು ಸಿನಿಮಾದ ನಿರ್ಮಾಪಕರಾದ ಆಶಿಕಾ ಸುವರ್ಣ ಮತ್ತು ಸಹ ನಿರ್ಮಾಪಕ ಕಿರಣ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರು, ಉಡುಪಿ ಸಹಿತ ಬೇರೆ ಬೇರೆ ಪ್ರದೇಶಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಈ ಸಿನಿಮಾಕ್ಕೆ ಒಂದೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚಿತ್ರೀಕರಣ ನಡೆಸಲಾಗಿದೆ ಎಂದವರು ತಿಳಿಸಿದರು. ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬಾರ್, ರೂಪೇಶ್ ಶೆಟ್ಟಿ, ವಿನೀತ್ ಕುಮಾರ್, ಅಥರ್ವ ಪ್ರಕಾಶ್ ಪಾಂಡೇಶ್ವರ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ, ರವಿ ರಾಮಕುಂಜ, ಪ್ರವೀಣ್ ಮರ್ಕಮೆ, ಆರಾಧ್ಯ ಶೆಟ್ಟಿ, ನಿರಿಕ್ಷಾ ಶೆಟ್ಟಿ ಪುತ್ತೂರು, ರೂಪ ವರ್ಕಾಡಿ, ಅನಿತಾ, ಐಸಿರಿ, ಪ್ರಾರ್ಥನಾ ಸುವರ್ಣ, ಮೊದಲಾದ ಬಹು ತಾರಾಗಣ ಈ ಸಿನಿಮಾದಲ್ಲಿದೆ. ಮುಖ್ಯವಾಗಿ ತುಳು ಸಿನಿಮಾರಂಗದ ಖ್ಯಾತ ನಾಮ ಕಲಾವಿದರಾದ ಪೃಥ್ವಿ ಅಂಬಾರ್,…
ಐತಿಹಾಸಿಕ ಮೊಳಹಳ್ಳಿ ಕಂಬಳ ಮಹೋತ್ಸವಕ್ಕೆ ಪಟೇಲರ ಮನೆ ಕಂಬಳಗದ್ದೆ ಸಜ್ಜು…! 40ಕ್ಕೂ ಹೆಚ್ಚು ಕೋಣಗಳು ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ; ಹಗ್ಗ ಮತ್ತು ಹಲಿಗೆಯ ಭಾಗದಲ್ಲಿ ವಿವಿಧ ಸ್ಪರ್ಧೆ…..!”200 ವರ್ಷಗಳ ಇತಿಹಾಸದ ಕಂಬಳಕ್ಕೆ ಕ್ಷಣಗಣನೆ….! -ಕೆ. ಸಂತೋಷ್ ಶೆಟ್ಟಿ ಮೊಳಹಳ್ಳಿ, ಕುಂದಾಪುರ ಉಡುಪಿ ಜಿಲ್ಲೆ (ಪತ್ರಕರ್ತರು & ಮಾಧ್ಯಮ ವಿಶ್ಲೇಷಕರು)santhoshmolahalli@gmail.com ಸುದ್ದಿ @ ಮೊಳಹಳ್ಳಿ: ಐತಿಹಾಸಿಕ ಪುರಾಣ ಪ್ರಸಿದ್ಧ ಮೊಳಹಳ್ಳಿ ಕಂಬಳ ಮಹೋತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಸುಮಾರು 200 ವರ್ಷಗಳಕ್ಕಿಂತಲೂ ಹೆಚ್ಚು ಇತಿಹಾಸವನ್ನ ಹೊಂದಿರುವ ಕಂಬಳ ಮಹೋತ್ಸವ ಈ ಬಾರಿ ವಿಜ್ರಮಣೆಯಿಂದ ನಡೆಯಲು ಸಜ್ಜಾಗಿದೆ. ಕುಂದಾಪುರ ತಾಲೂಕಿನ ಬಹುದೊಡ್ಡ ಗ್ರಾಮಗಳಲ್ಲಿ ಮೊಳಹಳ್ಳಿ ಎಂಬ ಊರು ಹೆಸರುವಾಸಿ. ಅಲ್ಲದೆ, ವಿಶಿಷ್ಟವಾದ ಅಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಿಂತನೆಯುಳ್ಳ ಗ್ರಾಮವಾಗಿ ಬೆಳೆದಿದೆ. ಮೊಳಹಳ್ಳಿ ಗ್ರಾಮ ‘ಸುವರ್ಣ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದಲ್ಲದೆ ,ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರ ವಿಶಿಷ್ಟತೆಯನ್ನ ಸಾರುವ ಮೊಳಹಳ್ಳಿ ಗ್ರಾಮ ಇಂದಿಗೂ ಭತ್ತ ,ತೆಂಗು, ಅಡಿಕೆ, ತರಕಾರಿ ಸಸ್ಯ,ಗಳನ್ನ ಬೆಳೆದು ಕೃಷಿಕರಾಗಿಯೇ…