Author: admin
ವಿಶೇಷ ಲೇಖನ: ಆರೂರು ಸುಕೇಶ್ ಶೆಟ್ಟಿ, ವಕೀಲರು, ಉಡುಪಿ ಸಮಾಜದಲ್ಲಿ ಜನರೊಂದಿಗೆ ಬೆರೆಯುವಲ್ಲಿ ಸುಲಭವಾಗಿ ಲಭ್ಯವಾಗಿರುವುದು ವಕೀಲರು. ಅವರು ಜನರೊಂದಿಗೆ ನಿರಂತರ ಒಡನಾಟವನ್ನು ಹೊಂದಿರುತ್ತಾರೆ. ಸಮಾಜವನ್ನು ತಿದ್ದುವಲ್ಲಿ ವಕೀಲರ ಸಲಹೆ ತುಂಬಾ ಉಪಯುಕ್ತವಾಗಿರುತ್ತದೆ. ಸಮಾಜವನ್ನು ಉತ್ತಮಗೊಳಿಸಲು, ತಿದ್ದುವಲ್ಲಿ ವಕೀಲರು ಮೊದಲಿಗರಾಗಿರುತ್ತಾರೆ. ಕಾನೂನಿನ ಅರಿವನ್ನು ಜನಸಾಮಾನ್ಯರಿಗೆ ಮೂಡಿಸಿದರೆ ಸಮಾಜವು ಉತ್ತಮ ಸ್ವಾಸ್ಥ್ಯದಿಂದ ಕೂಡಿರುತ್ತದೆ. ವಕೀಲರು, ಜನಸಾಮಾನ್ಯರಿಗೆ ಇತ್ತೀಚಿನ ಹೊಸ ಕಾನೂನುಗಳಾದ ಸೈಬರ್ ಪ್ರಕರಣ, ಪೋಕ್ಸೋ ಪ್ರಕರಣ, ಬಾಲ್ಯ ವಿವಾಹ ನಿಷೇಧ ಕಾಯಿದೆ, ಮಕ್ಕಳ ಹಕ್ಕು ಮತ್ತು ರಕ್ಷಣೆ, ಮಹಿಳೆಯರ ಸಂರಕ್ಷಣೆಗಳ ಬಗ್ಗೆ ಹಾಗೂ ಇತರ ಪ್ರಕರಣಗಳ ಬಗ್ಗೆ ಸಮಾಜದಲ್ಲಿ ಅರಿವನ್ನು ಮೂಡಿಸಿದಲ್ಲಿ ಸಮಾಜದಲ್ಲಿ ಅಪರಾಧಗಳನ್ನು ಕಡಿಮೆ ಮಾಡುವಲ್ಲಿ, ಕಾನೂನು ವ್ಯವಸ್ಥೆಯನ್ನು ಕಾಪಾಡುವಲ್ಲಿ ಸಹಕಾರಿಯಾಗಿರುತ್ತದೆ. ವಕೀಲರು ಕಾನೂನು ಸೇವೆಗಳ ಪ್ರಾಧೀಕಾರದ ವತಿಯಿಂದ ನಡೆಸುವ ಲೋಕ ಅದಲಾತ್ನ ಬಗ್ಗೆ ಜನರಿಗೆ ಅರಿವು ಮೂಡಿಸಿದಲ್ಲಿ ಅದರ ಉಪಯೋಗವನ್ನು ಜನರು ಪಡೆಯುವ ಬಗ್ಗೆ ತಿಳಿಸಿದಲ್ಲಿ ಹೆಚ್ಚಿನ ವಿವಿಧ ರೀತಿಯ ಪ್ರಕರಣಗಳು ರಾಜಿ ಸಂದಾನದಲ್ಲಿ ಮುಕ್ತಾಯವಾಗಿ ಸಮಾಜವು ನೆಮ್ಮದಿಯಿಂದ ಇರಲು…
ಮುಂಬಯಿ (ಆರ್ಬಿಐ), ನ.28: ಮುಂಬಯಿಯ ಹೇರಂಬ ಇಂಡಸ್ಟ್ರೀಸ್ನ ಸಿಎಸ್ಆರ್ ನಿಧಿಯಡಿಯಲ್ಲಿ ಉಪ್ಪಳ ಕೊಂಡೆವೂರು ಇಲ್ಲಿನ ಸದ್ಗುರು ಶ್ರೀನಿತ್ಯಾನಂದ ವಿದ್ಯಾಪೀಠಕ್ಕೆ ಶಾಲಾ ಬಸ್ ಅನ್ನು ಇಂದು ಹೇರಂಬ ಇಂಡಸ್ಟ್ರೀಸ್ನ ಕಾರ್ಯಾಧ್ಯಕ್ಷ ಸದಾಶಿವ ಶೆಟ್ಟಿ.ಕುಳೂರು, ಕನ್ಯಾನ ಮತ್ತು ವ್ಯವಸ್ಥಾಪಕ ನಿರ್ದೇಶಕ ರಘುರಾಮ ಶೆಟ್ಟಿ ಅವರು ಕೊಡುಗೆಯಾಗಿ ನೀಡಿದರು. ಶಾಲಾ ಸಮಿತಿ ಅಧ್ಯಕ್ಷ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರು ದಾನಿಗಳನ್ನು ಸನ್ಮಾನಿಸಿ, ಅವರ ಕುಟುಂಬದವರನ್ನು ಆಶೀರ್ವದಿಸಿದರು. ಕಾರ್ಯಕ್ರಮದಲ್ಲಿ ದಾನಿಗಳ ಕುಟುಂಬದವರು, ಆಶ್ರಮದ ಭಕ್ತರು ಹಾಗೂ ಶಾಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಮಚಂದ್ರ ಚೆರುಗೋಳಿ ಅತಿಥಿಗಳು ಮತ್ತು ಅಭ್ಯಾಗತರನ್ನು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಅಕ್ಟೋಬರ್ 31ರಂದು ಪುರಭವನದಲ್ಲಿ ಜರಗಲಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ನಗರ ಘಟಕದ ಪದಗ್ರಹಣ ಮತ್ತು 4ನೇ ವಾರ್ಷಿಕ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ನಗರದ ಅಟ್ಟಣೆ ಹೋಟೇಲಿನಲ್ಲಿ ಜರಗಿದ್ದು, ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ HMS ನ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಸುರೇಶ್ಚಂದ್ರ ಶೆಟ್ಟಿಯವರು ಪಟ್ಲ ಫೌಂಡೇಶನಿನ ಕಾರ್ಯಸಾಧನೆಯ ಬಗ್ಗೆ ಜಗತ್ತೇ ಕೊಂಡಾಡುವಂತೆ ಮಾಡಿದ ಪಟ್ಲ ಸತೀಶ್ ಶೆಟ್ಟಿಯವರಿಗೆ ಕಟೀಲು ದುರ್ಗಾಮಾತೆಯ ಸಂಪೂರ್ಣ ಆಶೀರ್ವಾದವಿದೆ. ಸರಸ್ವತಿ ಮಾತೆಯ ಅನುಗ್ರಹದಿಂದ ನಾವೆಲ್ಲರೂ ಯಕ್ಷಗಾನದ ಮಧುರ ಗಾನವನ್ನು ಅವರಿಂದ ಕೇಳುವಂತಾಗಿದೆ. ಫೌಂಡೇಶನಿನ ಪ್ರತಿಯೊಂದು ಘಟಕಗಳು ಇಂತಹ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಅಶಕ್ತ ಕಲಾವಿದರ ನೆರವಾಗುವುದರೊಂದಿಗೆ ಟ್ರಸ್ಟ್ ಇನ್ನಷ್ಟು ಹೆಮ್ಮರವಾಗಿ ಬೆಳೆಯಲೆಂದು ಕಾರ್ಯಕ್ರಮಕ್ಕೆ ಶುಭಕೋರಿದರು. ಮಹೇಶ್ ಮೋಟಾರ್ಸ್ ಮಾಲಕರಾದ ಶ್ರೀ ಜಯರಾಮ ಶೇಖ ದೀಪ ಬೆಳಗಿಸಿ, ಪಟ್ಲ ಫೌಂಡೇಶನ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆಯುವಂತಾಗಲಿಯೆಂದು ಶುಭ ಹಾರೈಸಿದರು. ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಮಂಗಳಾದೇವಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ Ln ಅನಿಲ್ ದಾಸ್ mjf…
ತೀರ್ಥಹಳ್ಳಿ ಶ್ರೀ ಮಾರಿಕಾಂಬಾ ಜಾತ್ರೆ ಪ್ರಯುಕ್ತ ನಡೆದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಶ್ರೀ ಪಾವಂಜೆ ಮೇಳದ ಸಂಚಾಲಕರು ಹಾಗೂ ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಈ ಸಮಾರಂಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ತೀರ್ಥಹಳ್ಳಿ ಘಟಕದ ಪದಾಧಿಕಾರಿಗಳು, ಯಕ್ಷಗಾನ ಕಲಾಭಿಮಾನಿಗಳು ಬಹು ಸಂಖ್ಯೆಯಲ್ಲಿ ನೆರೆದಿದ್ದರು.
ದೇವರಲ್ಲಿ ಅರ್ಪಣಾ ಭಾವದ ಭಕ್ತಿ, ಸತತ ಪರಿಶ್ರಮ, ಸಮಾಜದ ಸತತ ಸಂಪರ್ಕಗಳಿಂದ ಇಂದು ಬಂಟ ಸಮುದಾಯ ಮಾತ್ರವಲ್ಲ ಸಮಸ್ತ ಮಾನವ ಸಮುದಾಯದ ಮಧ್ಯೆ ಧ್ರುವತಾರೆಯಂತೆ ಪ್ರಕಾಶಮಾನರಾಗಿರುವ ಪ್ರಕಾಶ್ ಶೆಟ್ಟರ ಹೆಸರು ಇಂದು ಅನ್ವರ್ಥವಾಗಿದೆ. ಪ್ರಕಾಶ್ ಶೆಟ್ಟರು ತಾನು ಬೆಳೆಯುತ್ತಿರುವಂತೆಯೇ ತಾನು ಹುಟ್ಟಿದ ಸಮುದಾಯದ ಏಳಿಗೆಗೂ ಕಂಕಣ ಬದ್ಧರಾಗಿ ದುಡಿಯುತ್ತಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಬಹು ಎತ್ತರಕ್ಕೇರಿದರೂ ತಮ್ಮ ಸ್ನೇಹ ಸೌಹಾರ್ದ ಆತ್ಮೀಯತೆಗಳಿಂದ ಎಂಥವರನ್ನೂ ತನ್ನ ಮಿತ್ರವಲಯಕ್ಕೆ ಸೇರಿಸಿಕೊಳ್ಳುವ ಅತ್ಯಂತ ಉದಾರಿ ಸಜ್ಜನ. ತನ್ನ ಹೋಟೆಲ್ ಉದ್ಯಮದಲ್ಲಿ ಗ್ರಾಹಕರನ್ನೂ ತನ್ನ ಕುಟುಂಬದ ಸದಸ್ಯರಂತೆ ಪ್ರೀತಿಸುತ್ತಾ ಅವರ ಅವಶ್ಯಕತೆ ಏನೇ ಇರಲಿ, ದೂರುಗಳಿರಲಿ, ಶ್ಲಾಘನೆ ಇರಲಿ ಎಲ್ಲವನ್ನೂ ಸಮಚಿತ್ತದಿಂದ ಆಲಿಸುವ ತಮ್ಮ ವಿಶಿಷ್ಟ ಗುಣ ಇಂದು ಹೋಟೆಲ್ ಹಾಸ್ಪಿಟಾಲಿಟಿ ಉದ್ಯಮದಲ್ಲಿ ಕೀರ್ತಿಶಿಖರದ ತುತ್ತ ತುದಿಯಲ್ಲಿದ್ದರೂ ತಮ್ಮ ದೃಷ್ಠಿ ತಾನು ಹುಟ್ಟಿ ಬೆಳೆದ ನೆಲದ ತಳದಲ್ಲಿದೆ. 1959ರಲ್ಲಿ ಉಡುಪಿ ಜಿಲ್ಲೆಯ ಕೊರಂಗ್ರಪಾಡಿ ಎಂಬಲ್ಲಿ ಕೊರಂಗ್ರಪಾಡಿ ಮಾಧವ ಶೆಟ್ಟಿ ಮತ್ತು ರತ್ನಾ ಶೆಟ್ಟಿ ಇರ್ವತ್ತೂರು ಹೊಸಮನೆ ದಂಪತಿಗೆ ಜನಿಸಿದ…
ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಉದ್ಘಾಟನಾ ಕಾರ್ಯಕ್ರಮ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಶೆಟ್ಟಿ ತೆರೆದ ಮೈದಾನದಲ್ಲಿನ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ಭಾನುವಾರ ಮುಂಜಾನೆ ನೆರವೇರಿತು. ಬಳಿಕ ಸಭೆಯನ್ನುದ್ದೇಶಿಸಿ ಮಾತಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರು, “ಯಕ್ಷಗಾನಕ್ಕೆ ಬಂಟರು ಕೊಟ್ಟಿರುವ ಕೊಡುಗೆ ಅಪಾರ. ತೆಂಕುತಿಟ್ಟು, ಬಡಗುತಿಟ್ಟುಗಳಲ್ಲಿ ನಮ್ಮ ಅನೇಕ ಕಲಾವಿದರು ಇದ್ದಾರೆ. ಬಂಟ ಸಮುದಾಯ ಇಂದು ಕಲೆಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಾ ಬೆನ್ನೆಲುಬಾಗಿ ನಿಂತಿದೆ. ಕ್ರೀಡೆ ಮತ್ತು ಸಂಸ್ಕೃತಿಯನ್ನು ಬಿಟ್ಟು ಬಂಟರ ಬದುಕೇ ಇಲ್ಲ. ಈ ಹಿನ್ನೆಲೆಯಲ್ಲಿ ಬಂಟರ ಸಮ್ಮೇಳನ ಅರ್ಥಪೂರ್ಣವಾಗಿ ನಡೆಯುತ್ತಿದೆ. ಐಕಳ ಹರೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಬಹಳ ಒಳ್ಳೆಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಹೇರಂಬ ಇಂಡಸ್ಟ್ರಿಸ್ ಸಿಎಂಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ…
ಪುಣೆ : ಜನ ಸಾಮಾನ್ಯರಿಗೆ ಬೇಕಾದ ವಸ್ತುಗಳು ಪ್ರಾಮುಖ್ಯತೆಯನ್ನು ಹೊಂದಿ ಪ್ರದರ್ಶನಗೊಂಡಾಗ ಉತ್ಪನ್ನ ಮತ್ತು ಸೇವೆಯನ್ನು ಉತ್ತೇಜಿಸಲು ಸಹಕಾರಿಯಾಗುತ್ತದೆ, ಇಂತಹ ಪ್ರದರ್ಶನಗಳಿಂದ ನಾವು ಸ್ಪಷ್ಟ ಕಲ್ಪನೆಯೊಂದಿಗೆ ಯೋಜನೆ ರೂಪಿಸಿದರೆ ಸಂಘಕ್ಕೆ ಸಂಪನ್ಮೂಲ ಕ್ರೋಡಿಕರಣಕ್ಕೆದಾರಿ ಯನ್ನು ಮಾಡಿಕೊಳ್ಳಬಹುದು ,ಅಲ್ಲದೆ ಪ್ರದರ್ಶನಕಾರರ ವಿಶ್ವಾಸಾರ್ಹತೆಯನ್ನು ಪ್ರದರ್ಶಿಸಲು ಮತ್ತು ಪ್ರಚಾರ ಪಡೆಯಲು ಕಾರಣವಾಗುತ್ತದೆ .ನಮ್ಮ ಬಂಟರ ಸಂಘದ ಮಹಿಳಾ ವಿಬಾಗವರು ಆಯೋಜಿಸಿರುವ ಈ ಪ್ರದರ್ಶನದಲ್ಲಿ ಉತ್ತಮ ಗುಣ ಮಟ್ಟದ ಸೀರೆಗಳು ನಮಗೆ ಒಂದೇ ಕಡೆ ಸಿಗುವಂಥಹ ಅವಕಾಶವನ್ನು ಕೌಶಿಕಿ ಸಿಲ್ಕ್ ನವರು ಮಾಡಿ ಕೊಟ್ಟಿದ್ದಾರೆ. ಇದರಲ್ಲಿ ಎಲ್ಲರೂ ಬಾಗಿಗಳಾಗಬೇಕು . ನವರಾತ್ರಿಯ ಈ ಶುಭ ಸಂದರ್ಭದಲ್ಲಿ ಮಹಿಳಾ ವಿಭಾಗದವರು ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಶುಭವನ್ನು ಕೋರುತ್ತೇನೆ ಹಾಗೂ ಪ್ರದರ್ಶನ ಮತ್ತು ಮಾರಾಟ ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ, ಶರನ್ನವರಾತ್ರಿಯ ಶುಭಾಶಯಗಳು ಮತ್ತು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪಾಶೀರ್ವಾದ ಸರ್ವರಿಗೂ ಲಬಿಸಲಿ ಎಂದು ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ ನುಡಿದರು. ಬಂಟರ ಸಂಘ…
ಮುಂಬಯಿಯಲ್ಲಿ ನಡೆದ ನಡೆದ ‘ಮಿಸ್ ದಿವಾ ಯೂನಿವರ್ಸ್ 2023’ ಸ್ಪರ್ಧೆಯಲ್ಲಿ ಕರ್ನಾಟಕದ ತ್ರಿಶಾ ಶೆಟ್ಟಿ ‘ಮಿಸ್ ದಿವಾ ರನ್ನರ್ ಅಪ್’ ಕಿರೀಟಕ್ಕೆ ಭಾಜನರಾಗಿದ್ದಾರೆ. ಕಳೆದ ವರ್ಷ ಮಂಗಳೂರು ಮೂಲದ ಸುಂದರಿ ದಿವಿತಾ ರೈ ಅವರು (Diwita Rai) ಅವರು ‘ಮಿಸ್ ದಿವಾ ಯೂನಿವರ್ಸ್ 2022’ ಆಗಿ ಹೊರಹೊಮ್ಮಿದ್ದರು. ಈ ಬಾರಿ ರನ್ನರ್ ಅಪ್ ಸ್ಥಾನಕ್ಕೆ ಕರ್ನಾಟಕ ತೃಪ್ತಿಪಟ್ಟುಕೊಂಡಿದೆ. ‘ಮಿಸ್ ದಿವಾ ಯೂನಿವರ್ಸ್ 2023’ ಕಿರೀಟ ಚಂಡೀಗಢದ ಬೆಡಗಿ ಶ್ವೇತಾ ಶಾರದಾ (Shwetha Sharda) ಅವರ ಪಾಲಾಗಿದೆ. ಕಳೆದ ವರ್ಷದ ವಿಜೇತೆ ದಿವಿತಾ ರೈ ಅವರು ಈ ಕಿರೀಟವನ್ನು ಈ ಸಾಲಿನ ವಿಜೇತೆ ಶ್ವೇತಾ ಶಾರದಾ ಅವರಿಗೆ ತೊಡಿಸಿದರು. ಮಿಸ್ ದಿವಾ ಯೂನಿವರ್ಸ್ 2023 ರಲ್ಲಿ ಕರ್ನಾಟಕದಿಂದ ಬಂದ ತ್ರಿಶಾ ಶೆಟ್ಟಿ ಮೊದಲ ರನ್ನರ್-ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ತ್ರಿಶಾ ಶೆಟ್ಟಿ ಅವರ ಕುರಿತು ಹೇಳುವುದಾದರೆ, 22 ನೇ ವಯಸ್ಸಿನಲ್ಲಿ, ತ್ರಿಶಾ ಮನೋವಿಜ್ಞಾನದಲ್ಲಿ ಪದವೀಧರರಾಗಿ, ಮಾಡೆಲ್ ಮತ್ತು ನಟಿಯಾಗಿ ನಿಂತಿದ್ದಾರೆ. ಈಕೆ ನೃತ್ಯಗಾತಿ. ಭರತನಾಟ್ಯ,…
ಕನ್ನಡ ಶಾಲೆಯಲ್ಲಿ ಇಂದು ಸಮವಸ್ತ್ರ ವಿತರಣೆ ಮಾಡಿದ್ದೇವೆ, ಮುಂದೆಯೂ ಕೂಡ ಪ್ರತಿ ವರ್ಷವೂ ಕೂಡ ನಾನೇ ಈ ಕನ್ನಡ ಶಾಲೆಗಳಿಗೆ ಸಮವಸ್ತ್ರ ವಿತರಿಸುತ್ತೇನೆ. ಕನ್ನಡ ಶಾಲೆಗಳು ಉಳಿಯಬೇಕು ಈ ನಿಟ್ಟಿನಲ್ಲಿ ನಾವು ಕನ್ನಡ ಶಾಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕಲಂಗುಟ್ ಕನ್ನಡ ಸಂಘದ ಅಧ್ಯಕ್ಷ ಮುರಳಿ ಮೋಹನ್ ಶೆಟ್ಟಿ ನುಡಿದರು. ಕನ್ನಡ ಸಂಘ ಜುವಾರಿನಗರ ಹಾಗೂ ಕಲಂಗುಟ್ ಕನ್ನಡ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜುವಾರಿನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 120 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಸಮವಸ್ತ್ರ ವಿತರಣೆ ಮಾಡಲಾಯಿತು. ಕೊರ್ಟಾಲಿಂ ಕ್ಷೇತ್ರದ ಶಾಸಕ ಅಂಥೋನಿ ವಾಜ್ ಕಾರ್ಯಕ್ರಮದ ಉಧ್ಘಾಟನೆ ನೆರವೇರಿಸಿ ಮಾತನಾಡಿ, ಕನ್ನಡ ಶಾಲೆ ಮತ್ತು ಕನ್ನಡಿಗರ ಮೇಲೆ ನನಗೆ ಅಪಾರ ಗೌರವವಿದೆ. ಈ ಭಾಗದ ಕನ್ನಡಿಗರೇ ನನ್ನನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಕನ್ನಡಿಗರೊಂದಿಗೆ ನಾನು ಸದಾ ಇರುತ್ತೇನೆ, ಕನ್ನಡ ಶಾಲೆಯ ದುರಸ್ತಿ ಕಾರ್ಯಕ್ಕಾಗಿ ಕೂಡಲೇ 15 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಲಾಗುವುದು.…
ಬ್ರಹ್ಮಾವರದ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಜೂನ್ 25ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷ ಡಾ. ದೈವಿಕ್ ಟಿ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಂಗಾರಕಟ್ಟೆಯ ಸಾಮಾಜಿಕ ಶಿಕ್ಷಣ ಮತ್ತು ಸಾಂಸ್ಕೃತಿಕ ಸಂಸ್ಥೆ ಇದರ ಅಧ್ಯಕ್ಷ ಬಿ. ಭರತ್ ಕುಮಾರ್ ಶೆಟ್ಟಿ ಮತ್ತು ಸಂಸ್ಥೆಯ ಕಾರ್ಯದರ್ಶಿ ಎಚ್. ಇಬ್ರಾಹಿಂ ಸಾಹೇಬ್ ಹಾಗೂ ಚೇತನಾ ಪ್ರೌಢಶಾಲೆಯ ಕಲ್ಪನಾ ಶೆಟ್ಟಿ ಇವರು ವಹಿಸಿದ್ದರು. ಫಾರ್ಚ್ಯೂನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ತಾರಾನಾಥ್ ಶೆಟ್ಟಿ, ಬಿ. ಡಿ ಶೆಟ್ಟಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸ್ಮಿಥಮೋಲ್ ಇ. ಎಂ, ಫಾರ್ಚ್ಯೂನ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ರುವ ಹಾಗೂ ಬಿ. ಡಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧನುಷ್, ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.