Author: admin
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಫೌಂಡೇಷನ್ (ಎಇಎಫ್) ಕ್ಯಾಂಪಸ್ನಲ್ಲಿ ಡಿಸೆಂಬರ್ 21 ರಿಂದ 27 ವರೆಗೆ ಭಾರತದ ಮೊದಲ ಅಂತಾರಾಷ್ಟ್ರೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಜಾಂಬೂರಿ ನಡೆಯಲಿದೆ. ಈ ಜಾಂಬೂರಿಯಲ್ಲಿ 50,000 ಸ್ಕೌಟ್ಸ್ ಹಾಗೂ ಗೈಡ್ ಗಳು ಸೇರಿದಂತೆ ಒಟ್ಟು 63,000 ಮಂದಿ ಭಾಗವಹಿಸಲಿದ್ದಾರೆ. 10 ದೇಶಗಳಿಂದ 10,000 ಮಂದಿ ತರಬೇತಿ ನೀಡುವವರು ಹಾಗೂ 3,000 ಮಂದಿ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ದೇಶದಲ್ಲಿ ಇಂತಹ ಕಾರ್ಯಕ್ರಮ ನಡೆಯುವುದು ಇದೇ ಮೊದಲು ಎನ್ನಲಾಗಿದೆ. ಈ ಕಾರ್ಯಕ್ರಮದ ಕುರಿತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ. ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. “ಈ ಜಾಂಬೂರಿಯಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾದ ಮೇಳಗಳು ಇರಲಿವೆ. ಕೃಷಿ ಮೇಳ, ವಿಜ್ಞಾನ ಮೇಳ, ಆಹಾರ ಮೇಳ ಸೇರಿದಂತೆ ವಿವಿಧ ಮೇಳಗಳು ಇರಲಿವೆ. ಸುಮಾರು ಏಳು ಎಕರೆ ಪ್ರದೇಶದಲ್ಲಿ ಈ ಮೇಳ ನಡೆಯಲಿದೆ. 42 ಬಗೆಯ ಸಾಹಸ ಕಸರತ್ತುಗಳು ಇರಲಿವೆ. ತೋಟಗಾರಿಕಾ…
ಮಂಗಳೂರು: ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ ಸಮಾರಂಭವು ಹರೇಕಳ ಸಂಪಿಗೆದಡಿ ಅರ್ಧನಾರೀಶ್ವರ ದೇವಸ್ಥಾನದಲ್ಲಿ ನೆರವೇರಿತು. ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕ್ಕೆ ಕ್ಲಾಫ್ ಮಾಡಿದರು. ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಕೆಮರಾ ಚಾಲನೆ ಮಾಡಿದರು. ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಕಥೆ ಚಿತ್ರಕತೆ ನಿರ್ದೇಶನದ ಜವಾಬ್ದಾರಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ನಮ್ಮ ನಿಮ್ಮೆಲ್ಲರ ಶುಭ ಹಾರೈಕೆ ಇರಲಿ” ಎಂದರು. ಬಳಿಕ ಮಾತಾಡಿದ ಪ್ರಕಾಶ್ ಪಾಂಡೇಶ್ವರ್ ಅವರು, “ಸ್ವರಾಜ್ ಅನ್ನುವ ಪ್ರತಿಭೆ ಪೂರ್ಣ ಪ್ರಮಾಣದಲ್ಲಿ ಈ ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ್ದಾರೆ. ಅವರಿಗೆ ಶುಭ ಹಾರೈಕೆಗಳು” ಎಂದರು. ಚಿತ್ರದ ನಿರ್ಮಾಪಕ ಭಾಗ್ಯರಾಜ್ ಶೆಟ್ಟಿ ಮಾತನಾಡಿ, “ಕನ್ನಡಿಗರು ಸಹಕಾರ ನೀಡಬೇಕು. ಚಿತ್ರದ ಕಥೆ ಸೊಗಸಾಗಿದ್ದು ತುಳುನಾಡಿನ ಹಲವಾರು ಕಲಾವಿದರು ಬಣ್ಣ ಹಚ್ಚಲಿದ್ದಾರೆ” ಎಂದರು. ಚಿತ್ರ…
ಪುತ್ತೂರಿನ ಪವಿತ್ರ ಶೆಟ್ಟಿ ಅವರು 2022 ರ ಜೂನ್ 26 ರಂದು ದುಬೈ ಸಿಲಿಕಾನ್ ಓಯಸಿಸ್ನ ರಾಡಿಸನ್ ರೆಡ್ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಯುಎಇ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಒಂದನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಯುಎಇಯಲ್ಲಿ ವಾಸಿಸುವ ಎಲ್ಲಾ ರಾಷ್ಟ್ರೀಯತೆಗಳಿಗೆ ಮುಕ್ತವಾಗಿರುವ ಈ ಸ್ಪರ್ಧೆಯು ಮಧ್ಯಪ್ರಾಚ್ಯದಲ್ಲಿ ಅತಿದೊಡ್ಡ ಮತ್ತು ಅತ್ಯಂತ ಪಾರದರ್ಶಕ ಸ್ಪರ್ಧೆಗಳಲ್ಲಿ ಒಂದಾಗಿದೆ ಮತ್ತು ಅತ್ಯಂತ ಪ್ರತಿಷ್ಠಿತ ಶೀರ್ಷಿಕೆಗಳಲ್ಲಿ ಒಂದಾಗಿದೆ. ಹೆಚ್ಚುವರಿಯಾಗಿ, ಸ್ಪರ್ಧೆಯ ಭಾಗವಾಗಿ ಶ್ರೀಮತಿ ಫಿಟ್ನೆಸ್ ಕ್ವೀನ್ ಆಗಿ ಕಿರೀಟವನ್ನು ಸಹ ಪಡೆದಿರುವ ಪವಿತ್ರ ಶೆಟ್ಟಿಯವರಿಗೆ ತುಂಬು ಹೃದಯದ ಅಭಿನಂದನೆಗಳು. ಪವಿತ್ರ ಶೆಟ್ಟಿಯವರು ವೃತ್ತಿನಿರತ ಕರಾಟೆ ಶಿಕ್ಷಕರಾಗಿದ್ದಾರೆ. ರಾಹುಲ್ ಶೆಟ್ಟಿಯವರನ್ನು ವಿವಾಹವಾಗಿ ಮೂರು ವರ್ಷದ ಬಾಲಕನ ತಾಯಿಯಾಗಿ ತನ್ನ ವೃತ್ತಿಪರ ಮತ್ತು ಕೌಟುಂಬಿಕ ಜೀವನದ ನಡುವೆ ಯಶಸ್ವಿಯಾಗಿ ಕಳೆದ 9 ವರ್ಷಗಳಿಂದ ಯುಎಇಯಲ್ಲಿ ವಾಸಿಸುತ್ತಿದ್ದಾರೆ. ಪವಿತ್ರ ಶೆಟ್ಟಿ ಅವರು ಪುತ್ತೂರಿನಲ್ಲಿ ಹುಟ್ಟಿ ಬೆಳೆದು, ಸಂತ ವಿಕ್ಟರ್ಸ್ ಮತ್ತು ಸಂತ ಫಿಲೋಮಿನಾ ಪುತ್ತೂರಿನಲ್ಲಿ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ಮೂಡುಬಿದಿರೆಯ ಆಳ್ವಾಸ್…
ಭೂತದ ನೆನಪಿಲ್ಲದ ವರ್ತಮಾನ ಭವಿಷ್ಯದ ಕಲ್ಪನೆ ಮಾಡಲಾರದು,ನೆಲದಲ್ಲಿ ಬೇರಿಳಿಸದ ವೃಕ್ಷ ಆಕಾಶದಲ್ಲಿ ಕೊಂಬೆಗಳನ್ನು ಚಾಚಲಾರದು ಎನ್ನುವ ವಸ್ತುಸ್ಥಿತಿ ನಮಗಿರಬೇಕು.ನಾವು ನಿಸರ್ಗದ ಕೂಸು,ಈ ಪ್ರಕೃತಿ ನಮ್ಮ ಆಡಂಬೋಲ. ನಮ್ಮ ಸಾಂಸ್ಕೃತಿಕ ಪ್ರಜ್ಞೆ, ಪಾರಂಪರಿಕ ಮೌಲ್ಯ, ನಾಗರಿಕತೆಯ ಅರಿವು, ಆಯುರ್ವೇದ ಸ್ಥಾಪಿತ ಆರೋಗ್ಯ ಸೂತ್ರಗಳು, ಜನಪದದ ಆಚರಣೆ, ಗುರುಹಿರಿಯರ ಜೀವನಾದರ್ಶ, ಸಂತರ ಪಥದರ್ಶನ, ದಾರ್ಶನಿಕರ ನಿರೂಪ….ಹೀಗೆ ಭಾರತೀಯ ಮಣ್ಣಲ್ಲಿ ಕಣ್ಣಾಗಿರುವ ಸಾವಿರದ ಸಾವಿರಸಾವಿರ ಜೀವನ ಪದ್ಧತಿಯ ಅಸಂಖ್ಯ ಎಳೆ ಎಳೆಯ ಸದ್ವಿಚಾರಗಳು, ಸದ್ವೃತ್ತದ ಔನ್ನತ್ಯ ನಮ್ಮ ಬದುಕಿನ ಭಾಗವಾಗಬೇಕು. ಕವಲು ಹಾದಿಯಲ್ಲಿ ನಿಂತ ನಾವೀಗ ಅಂತರಂಗಕ್ಕೆ ಕಿವಿಕೊಡಬೇಕು. ನಮ್ಮ ನಡೆ-ನುಡಿ, ಆಚಾರ-ವಿಚಾರ, ಹಾವ-ಬಾವ, ಆಹಾರ-ವಿಹಾರ, ವಿಧಿ-ನಿಷೇಧ…ಎಲ್ಲವುಗಳ ಬಗೆಗಾಗಿನ ಪರಿಕಲ್ಪನೆಯನ್ನು ಪುನರ್ ವ್ಯಾಖ್ಯಾನಿಸಬೇಕು. ಆತ್ಯಂತಿಕ ಸತ್ಯದ ಸ್ವರೂಪ, ಅಲ್ಲಿರುವ ಗಟ್ಟಿತನದ ಮಾನಕೀಕರಣ, ತಲೆಮಾರುಗಳಿಂದ ಆಚರಿಸಿ ಅನುಸರಿಸಿ ಅನುಭವಿಸಿದ ಗುಣಾತ್ಮಕ ಪರಿಣಾಮ ಆಯುರ್ವೇದದ ಆಹಾರ ಪದ್ಧತಿಯ ಪ್ರತಿ ಪದಗಳಲ್ಲಿ ಪ್ರತಿಫಲಿಸಿದೆ. “ಆಹಾರ” ಜನರ ಜೀವನ ನಿರ್ವಹಣೆಗೆ ಇಂಧನವಾಗಿ,ಆರೋಗ್ಯ ಕಾಪಾಡಲು ಔಷಧವಾಗಿ ಮತ್ತು ಧನಾತ್ಮಕ ಆರೋಗ್ಯದ ಮುಖೇನ ರೋಗರುಜಿನಗಳಿಂದ…
ತಾನು ಕೈಗೆತ್ತಿಕೊಂಡ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿಯೇ ನೆಮ್ಮದಿಯ ಉಸಿರು ಬಿಡುವ ಛಲವಂತ. ಸಮುದಾಯದ ಸೇವೆಗೆಂದೇ ಜನ್ಮ ತಳೆದರೋ ಎಂಬಂತೆ ಅರ್ಪಣಾ ಭಾವದಿಂದ ತನ್ನವರ ಏಳಿಗೆಗಾಗಿ ಟೊಂಕಕಟ್ಟಿ ದುಡಿಯುತ್ತಿರುವ ಸಂತೋಷ್ ವಿ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಅವರನ್ನು ಅಪರೂಪದ ಅಪರಂಜಿ ಎಂದರೂ ತಪ್ಪಾಗಲಾರದು. ಸಮಸ್ತ ಸಮುದಾಯ ಬಾಂಧವರ ಅಸ್ಮಿತೆಯ ಕೇಂದ್ರವಾಗಿ ಗುರುತಿಸಲ್ಪಡುವ ಮಹಾರಾಷ್ಟ್ರದ ಸಾಂಸ್ಕೃತಿಕ ನಗರವೆಂದೇ ಖ್ಯಾತಿವೆತ್ತ ಪುಣೆ ನಗರದಲ್ಲಿ ಇಂದು ತಲೆಯೆತ್ತಿ ನಿಂತ ಸುಂದರ ಸುಸಜ್ಜಿತ ಬಂಟರ ಭವನ ಆದರಣೀಯ ಸಂತೋಷ್ ಶೆಟ್ಟಿ ಅವರ ಸಂಘರ್ಷ, ಛಲ, ಪರಿಶ್ರಮ ಅರ್ಪಣಾ ಭಾವದ ಕತೆಯನ್ನು ಸಾರಿ ಹೇಳುತ್ತಿದೆ. ಹೀಗೆ ಸಿಧ್ಧಿ ಸಾಧನೆಗಳೆರಡೂ ಸಮನ್ವಯಗೊಂಡು ಪ್ರಖರ ತೇಜ ಹೊಂದಿದ ಬಂಟ ನಾಯಕ ಸಂತೋಷ್ ಶೆಟ್ಟಿಯವರು ಇಂದು ಮಹಾನಗರ ಹಾಗೂ ಹುಟ್ಟೂರಿನ ಹೆಮ್ಮೆಯ ಸಮಾಜ ಸೇವಕ, ಸಂಘಟಕ, ಸರ್ವ ಸಮಾಜ ಬಾಂಧವರೊಂದಿಗೆ ಸೌಹಾರ್ದ ಭಾವ ಹೊಂದಿರುವ ಪ್ರಭಾವಿ ನಾಯಕರಾಗಿ ನಿರ್ವಿವಾದಿತ ವ್ಯಕ್ತಿಯಾಗಿ ಆಕರ್ಷಿಸುತ್ತಾರೆ. ನೂರು ಜನರ ನಡುವೆ ಎದ್ದು ಕಾಣುವ ಗಟ್ಟಿ ಧೃಢ…
ವಿದ್ಯಾಗಿರಿ: ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ‘ನುಡಿನಮನ’ ಹಾಗೂ ‘ಸಹಬೋಜನ’ವು ಆಳ್ವಾಸ್ಕಾ ಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಸೋಮವಾರ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ನುಡಿನಮನ ಸಲ್ಲಿಸಿದ ನಿಟ್ಟೆ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ವಿನಯ ಹೆಗ್ಡೆ, ‘ಕೌಟುಂಬಿಕ ಜವಾಬ್ದಾರಿಯಿಂದ ತನ್ನ ವಿದ್ಯಾಭ್ಯಾಸ ಮೊಟುಕಾದರೂ, ವಿದ್ಯಾಕ್ಷೇತ್ರಕ್ಕೆ ಕೊಡುಗೆ ನೀಡಿ ಹಾಗೂ ವಿಶ್ವವಿದ್ಯಾಲಯಕ್ಕೆ ಸಮಾನಾಗಿ ಶಿಕ್ಷಣ ಸಂಸ್ಥೆ ಕಟ್ಟುವಲ್ಲಿ ಮಗನಿಗೆ (ಡಾ.ಮೋಹನ ಆಳ್ವ) ನೆರಳಾಗಿ ನಿಂತ ಆನಂದ ಆಳ್ವರ ವ್ಯಕ್ತಿತ್ವವು ಆದರ್ಶ ಹಾಗೂ ಅನುಕರಣೀಯ’ ಎಂದರು. ‘ಆಳ್ವರದ್ದು ಕೂಡು ಕುಟುಂಬದ ಬದುಕು. ಒಂದೇ ಮನೆಯಲ್ಲಿ ಅಪ್ಪ, ಮಕ್ಕಳು, ಸೊಸೆ, ಮೊಮ್ಮಕ್ಕಳ ಪ್ರೀತಿ. ಅವರಿಗೆ ಊರೆಲ್ಲಾ ತನ್ನವರು ಎಂಬ ಕೌಟುಂಬಿಕ ಭಾವ. ಈ ಚಿಂತನೆ ಹಾಗೂ ಪ್ರೀತಿ ಕೊಟ್ಟವರು ಆನಂದ ಆಳ್ವರು’ ಎಂದು ಅವರು ಬಣ್ಣಿಸಿದರು. ‘ಆನಂದ ಆಳ್ವರನ್ನು ಸಮೀಪದಿಂದ ಬಲ್ಲೆನು. ಅವರದ್ದು ವಿಶಿಷ್ಟ ವ್ಯಕ್ತಿತ್ವ. ನಿಸ್ವಾರ್ಥ ಬದುಕು. ಬಹಿರಂಗದಲ್ಲಿ ಕಠಿಣದಂತೆ ಕಂಡರೂ, ನಂಬಿದ ಮಾರ್ಗದಲ್ಲಿ ನಿಷ್ಠೆಯಿಂದ ಬದುಕುವ ಮೃದುತ್ವ. ಅವರ ಛಾಯೆಯನ್ನು ನಾಲ್ವರು ಮಕ್ಕಳಲ್ಲೂ ಕಾಣಬಹುದು.…
ನಗರದ ಪುರಭವನದಲ್ಲಿ ತುಳುವೆರೆ ಆಯನೊ ಕೂಟ ಕುಡ್ಲ ಇದರ ಪದಗ್ರಹಣ ಸಮಾರಂಭವು ದಿನಾಂಕ 30-09-2023ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಇವರಿಗೆ ‘ತುಳುವೆರೆ ಕರ್ಣೆ’ ಬಿರುದು ನೀಡಿ ಗೌರವಿಸಲಾಯಿತು. ಅವರು ಮಾತನಾಡುತ್ತಾ “ತುಳು ಭಾಷೆಯಲ್ಲಿ ವಿವಿಧ ರೀತಿಯ ಪ್ರಾದೇಶಿಕ ಬದಲಾವಣೆ, ಜಾತಿಯಲ್ಲಿಯೂ ಭಾಷೆಯ ಬದಲಾವಣೆಗಳಿವೆ. ಇದೆಲ್ಲವೂ ತುಳುನಾಡಿನ ತುಳು ಭಾಷೆಯ ವೈಶಿಷ್ಟ್ಯತೆ ಸಾರುತ್ತದೆ” ಎಂದು ಹೇಳಿದರು. ಈ ಸಮಾರಂಭವನ್ನು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಶ್ರೀ ಹರಿನಾರಾಯಣ ಆಸ್ರಣ್ಣ ಉದ್ಘಾಟಿಸಿದರು. ಸಂಸದ ಶ್ರೀ ನಳಿನ್ ಕುಮಾರ್ ಕಟೀಲು, ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ಶ್ರೀ ಬಿ ರಮಾನಾಥ ರೈ, ವಿಶ್ವ ಬಂಟರ ಕೂಟಗಳ ಒಕ್ಕೂಟದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿ, ಮಾಜಿ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಹಣಕಾಸು ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀ ವರುಣ್ ಚೌಟ, ವಕೀಲ ಶ್ರೀ ಪದ್ಮರಾಜ್, ಅಖಿಲ…
ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಮಾಜರತ್ನ ಗೌತಮ್ ಶೆಟ್ಟಿ ಟೊರ್ಪೆಡೋಸ್ ಇವರು ಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗೌತಮ್ ಶೆಟ್ಟಿ ಅವರು ಧಾರವಾಡದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಮುಂದಿನ ನಾಲ್ಕು ವರ್ಷಗಳ ಕಾಲ ಅವರು ಅಧಿಕಾರದಲ್ಲಿ ಇರಲಿದ್ದಾರೆ. ಆಯ್ಕೆಯ ಬಳಿಕ ಮಾತನಾಡಿದ ಗೌತಮ್ ಶೆಟ್ಟಿ “ಮಾನಸಿಕ ಮತ್ತು ದೈಹಿಕ ಅರೋಗ್ಯಕ್ಕೆ ಇದು ಪ್ರಯೋಜನಕಾರಿ, ಏಕಾಗ್ರತೆ ಹೆಚ್ಚಿಸುವ ಆಟಗಳಲ್ಲಿ ಟೇಬಲ್ ಟೆನಿಸ್ ಕೂಡ ಒಂದಾಗಿದ್ದು, ಯುವಕರನ್ನು ಪ್ರೋತ್ಸಾಹಿಸುವ ಮೂಲಕ ಕ್ರೀಡೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸುವುದಾಗಿ ಹೇಳಿದರು. ನೂತನವಾಗಿ ಆಯ್ಕೆಗೊಂಡ ತಂಡಕ್ಕೆ ಸಮಸ್ತ ಬಂಟ ಸಮಾಜದ ಪರವಾಗಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆ ಹಾಗೂ ಬಂಟ್ಸ್ ಬ್ರಿಗೇಡ್ ವತಿಯಿಂದ ಶುಭಾಶಯಗಳು.
ಬಂಟರ ಸಂಘ ಸಿದ್ದಕಟ್ಟೆ ವಲಯ ಇದರ ವತಿಯಿಂದ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ ಎಲಿಯನಡುಗೂಡು ಗ್ರಾಮದ ಕೊನೆರಬೆಟ್ಟು ಗುತ್ತು ಗದ್ದೆಯಲ್ಲಿ ಜರಗಿತು. ದೇಜಣ್ಣ ಶೆಟ್ಟಿ ಗೋಳಿದೊಟ್ಟು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಜಯರಾಮ ಅಡಪ ಕಣಿಯೂರು ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು. ಸಂಘದ ಅಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಬಂಟರ ಸಂಘದ ತಾಲೂಕು ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಜತೆ ಕಾರ್ಯದರ್ಶಿ ಮಂದಾರತಿ ಎಸ್. ಶೆಟ್ಟಿ, ತಾಲೂಕು ಬಂಟರ ಸಂಘದ ಜತೆ ಕಾರ್ಯದರ್ಶಿ ರಂಜನ್ ಶೆಟ್ಟಿ ಅರಳ, ಸಂಘದ ಗೌರವಾಧ್ಯಕ್ಷ ರತ್ನ ಕುಮಾರ್ ಚೌಟ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಕಾರ್ಯದರ್ಶಿ ರತೀಶ್ ಶೆಟ್ಟಿ, ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಧರ್ ಶೆಟ್ಟಿ, ಸುರೇಶ್ ಶೆಟ್ಟಿ, ಗಣೇಶ್ ಶೆಟ್ಟಿ, ಅರುಣಾ ಶೆಟ್ಟಿ, ಪ್ರತಿಭಾ ಶೆಟ್ಟಿ, ಅಶ್ವಿನಿ ಶೆಟ್ಟಿ, ವಾಮದಪದವು ವಲಯ ಬಂಟರ ಅಧ್ಯಕ್ಷ ವಸಂತ್…
ಜುಲೈ 23 ರಂದು ಪುತ್ತೂರು ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಬಂಟೆರೆ ಪರ್ಬ ಕಾರ್ಯಕ್ರಮದ ಸಿದ್ದತಾ ಸಭೆಯು ಪುತ್ತೂರು ಬಂಟರ ಭವನದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳರವರು ಮಾತನಾಡಿ ಜಿಲ್ಲಾ ಮಟ್ಟದ ಬಂಟೆರೆ ಪರ್ಬ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು, ಬಂಟ ಸಮಾಜದ ಪ್ರತಿಭೆಗಳ ಪ್ರದರ್ಶನಕ್ಕೆ ಇದೊಂದು ವೇದಿಕೆಯಾಗಿದ್ದು, ಈ ಕಾರ್ಯಕ್ರಮದ ಸಂಪೂರ್ಣ ಯಶಸ್ವಿಗೆ ಬಂಟ ಸಮಾಜದ ಪೂರ್ಣ ಸಹಕಾರ ಅಗತ್ಯ ಎಂದು ಹೇಳಿ, ಯುವ ಬಂಟರ ಸಂಘದ ಈ ಕಾರ್ಯಕ್ರಮ ಮಾದರಿ ಕಾರ್ಯಕ್ರಮವಾಗಿ ಹತ್ತೂರಿನಲ್ಲಿ ಹೆಸರನ್ನು ಪಡೆಯಲಿ ಎಂದು ಆಶಿಸಿದರು. ಕಾರ್ಯಕ್ರಮದ ಸಂಚಾಲಕರಾದ ಭಾಗ್ಯೆಶ್ ರೈ ಕೆಯ್ಯೂರು ಮತ್ತು ಹರ್ಷಕುಮಾರ್ ರೈ ಮಾಡಾವುರವರುಗಳು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಬಂಟರ ಸಂಘದ ನಿರ್ದೇಶಕ ಸಂತೋಷ್ ಶೆಟ್ಟಿ ಸಾಜ, ಯುವ ಬಂಟರ ಸಂಘದ…














