Author: admin
ತುಳುವರು ಪ್ರತಿಯೊಂದನ್ನು ವಿಚಾರವನ್ನು ಆರಾಧಿಸುವ ಗುಣವುಳ್ಳವರು, ಯಾವುದನ್ನು ಬೇಕಾದರೂ ಬಿಟ್ಟುಕೊಟ್ಟರು ಆದರೆ ನಂಬಿಕೆ ಆರಾಧನೆಯನ್ನಲ್ಲ ಎಂಬುದು ಕಟು ಸತ್ಯ. ತೌಳವ ನಾಡಿನಲ್ಲಿ ಪ್ರತಿ ಆರಾಧನೆಗೆ ಅದರದ್ದೆಯಾದ ನಂಬಿಕೆ, ಕಟ್ಟುಪಾಡುಗಳಿವೆ. ಇಂತಹ ಒಂದು ಆರಾಧನೆಯ ಭಾಗವೇ ಪಿಲಿವೇಷ. ಮಾರ್ನೆಮಿ (ನವರಾತ್ರಿ)ಯಲ್ಲಿ ಮನೆ ಮನೆಗೆ, ಪೇಟೆಯಲ್ಲಿ ಸುತ್ತುತ್ತಿದ್ದ ಪಿಲಿವೇಷ ಇಂದು ವ್ಯವಸ್ಥೆಯ ರೀತಿಯಲ್ಲಿ ಅಚ್ಚುಕಟ್ಟಾಗಿ ಸ್ಪರ್ಧಾತ್ಮಕ ರೀತಿಯಲ್ಲಿ ನಡೆಯುತ್ತಿದೆ ಎಂದರೆ ಅದಕ್ಕೆ ಹಲವು ಕಾರಣವಿದ್ದರೂ ಮುಖ್ಯವಾಗಿ ಕಾಣ ಸಿಗುವುದು ಯುವ ನಾಯಕ ಮಿಥುನ್ ರೈ. ಸುಮಾರು ಹತ್ತು ವರ್ಷದ ಹಿಂದೆ ಪಿಲಿವೇಷ ಪ್ರತಿಷ್ಠಾನ (ರಿ) ಎಂಬ ಸಂಘಟನೆಯನ್ನು ಕಟ್ಟಿಕೊಂಡು ನಮ್ಮ ಟಿವಿ (ಚಾನೆಲ್) ಜೊತೆ ಸೇರಿ ಒಂದೊಳ್ಳೆಯ ವೇದಿಕೆ ನಿರ್ಮಿಸಿ ಲಕ್ಷ-ಲಕ್ಷ ಬಹುಮಾನವನ್ನು ಘೋಷಿಸಿ ಪಿಲಿವೇಷದಲ್ಲಿ ಪ್ರಾಮಖ್ಯವಾಗಿರುವ ಧರಣಿ ಮಂಡಲ, ಅಟ್ಟೆ, ಪೌಲ, ಜಂಡೆ ಬೀಸುವುದು, ಬಣ್ಣಗಾರಿಕೆ, ಅಕ್ಕಿಮುಡಿ, ಬ್ಲಾಕ್ ಟೈಗರ್, ಅಪ್ಪೆ ಪಿಲಿ, ಟ್ರಂಪೆಟ್, ದೋಲು, ತಾಸೆ, ಮೂಲಕ ವ್ಯವಸ್ಥಿತ ರೀತಿಯಲ್ಲಿ ಪಿಲಿವೇಷಕ್ಕೆ ಸ್ಟಾರ್ ಟಚ್ ನೀಡಿದ ಕೀರ್ತಿ ರೈ ಅವರಿಗೆ ಸಲ್ಲುತ್ತದೆ.…
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಇದರ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶವು ಅಕ್ಟೋಬರ್ 03 ರಂದು ನಡೆಯಿತು. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್ ಅವರು ಕಟ್ಟಡ ಶಿಲಾನ್ಯಾಸ ನೆರವೇರಿಸಿದರು. ಆ ನಂತರ ಕಾರ್ಯಕರ್ತರ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ…
ಬಹುನಿರೀಕ್ಷಿತ “ಕಾಂತಾರ ಚಾಪ್ಟರ್ -1” ಪ್ರೀಮಿಯರ್ ಶೋ ದುಬೈನಲ್ಲಿ ಹೌಸ್ ಫುಲ್ ಪ್ರದರ್ಶನಗೊಂಡು ಒಳ್ಳೆಯ ಪ್ರತಿಕ್ರಿಯೆಗೆ ಪಾತ್ರವಾಗಿದೆ. ಫೋರ್ಚುನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ ನೇತೃತ್ವದಲ್ಲಿ ನಡೆದ ಪ್ರೀಮಿಯರ್ ಪ್ರದರ್ಶನದಲ್ಲಿ ಯುಎಇಯ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಿನಿಮಾವನ್ನು ನೋಡಿ ಒಳ್ಳೆಯ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸರಳ ರೀತಿಯಲ್ಲಿ ನಡೆದ ಪ್ರೀಮಿಯರ್ ಶೋ ನ ಬಿಡುಗಡೆಯ ಸಭಾ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಯುಎಇಯಲ್ಲಿ ಚಿತ್ರ ಬಿಡುಗಡೆಗೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಯುಎಇ ಎಮಿರೇಟ್ಸ್ ನ ಉದ್ಯಮಿ ಡಾ. ಬು. ಅಬ್ಧುಲ್ಲಾ, ಅಬ್ದುಲ್ಲಾ ಅಲ್ ಝಫಾಲೀ, ಅಮಲ್ ಅಬ್ದುಲ್ಲಾ,ಜ್ಯೊಲ್ಲೆ ಜಬ್ಬಾರ್, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಹರೀಶ್ ಬಂಗೇರ, ದೀಪಕ್ ಸೋಮಶೇಖರ್ ಉಪಸ್ಥಿತರಿದ್ದರು. ಎಲ್ಲಾ ಅತಿಥಿಗಳನ್ನು ಪ್ರವೀಣ್ ಕುಮಾರ್ ಶೆಟ್ಟಿಯವರು ಶಾಲು ಹೊದಿಸಿ ಗೌರವಿಸಿದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಥೆ ಏನು? ಬಾಂಗ್ರಾ ರಾಜ ಮನೆತನ ಮತ್ತು…
ಬ್ರಹ್ಮಾವರ: ಅ 2: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಮಹಾನ್ ನಾಯಕರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮಾತನಾಡಿ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣವನ್ನು ತ್ಯಾಗಮಾಡಿದ್ದಾರೆ. ಆದರೆ ಗಾಂಧೀಜಿಯವರನ್ನು ಮಾತ್ರ ರಾಷ್ಟ್ರಪಿತ ಎಂದು ಕರೆಯುತ್ತೇವೆ. ಅವರು ತಮ್ಮ ಅಹಿಂಸಾ ತತ್ವದಿಂದ ಪ್ರಪಂಚದ ಎಲ್ಲಾ ಜನರ ಮನಸ್ಸನ್ನು ಗೆದ್ದವರು. ಅದೇ ರೀತಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ತಮ್ಮ ಸರಳತೆಯ ಜೊತೆಗೆ ದೇಶವನ್ನು ಕಾಯುವ ಸಶಸ್ತ್ರ ಪಡೆಗಳಿಗೆ ಹೆಚ್ಚಿನ ಗೌರವ ಮತ್ತು ಪ್ರಾಮುಖ್ಯತೆಯನ್ನು ನೀಡಿದ್ದರು. ಅವರ ‘ಜೈ ಜವಾನ್ ಜೈ ಕಿಸಾನ್’ ಘೋಷವಾಕ್ಯ ರೈತರು ಹಾಗೂ ಸೈನಿಕರ ಕುರಿತು ಅವರಿಗಿರುವ ಕಾಳಜಿ ಮತ್ತು ಗೌರವವನ್ನು ಎತ್ತಿ ತೋರಿಸುತ್ತದೆ ಎಂದರು. ಶಾಲಾ ದೈಹಿಕ ಶಿಕ್ಷಕರಾದ ಸೀತರಾಮ ಗೌಡ ಲಾಲ್ ಬಹದ್ದೂರ್ ಶಾಸ್ತ್ರೀಯವರು ದೇಶಕ್ಕೆ ನೀಡಿದ ಕೊಡುಗೆಗಳು ಹಾಗೂ ದಿನೇಶ್ರವರು ಗಾಂಧೀಜಿಯವರ ಜೀವನ ಸಾಧನೆ, ತತ್ವಗಳ…
ಕೇಂದ್ರ ಲೋಕಸೇವಾ ಆಯೋಗ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ನಡೆದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ 14 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಎಸ್.ಎಸ್.ಬಿ. ( ಸರ್ವಿಸ್ ಸೆಲೆಕ್ಷನ್ ಬೋರ್ಡ್ ) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ನಾಗದೇವ ಎಂ.ಜಿ, ಪ್ರಥಮ್ ತಮ್ಮಣ್ಣಗೌಡರ್, ನಿಶಾಂತ್ ಹೊನ್ನಾವರ, ನಮಿತ್ ಕೃಷ್ಣಮೂರ್ತಿ ಹೆಗ್ಡೆ, ಸಂವಿತ್ ಅಮಿತ್ ಗೋಕರ್ಣ, ಸುಕ್ಷಿತ್ ಗಿರೀಶ್ ಗೌಡ, ಅಭಿರಾಮ್ ಭಟ್ ಜಿ.ಪಿ, ಪ್ರಜ್ವಲ್ ಭಟ್, ಆರ್ಯ. ವಿ, ಸೃಜನಾ. ಎಸ್, ಯಜತ್ ಗೌಡ ಎಸ್.ಪಿ, ವಿಶ್ವೇಶ್ ಎನ್.ಎಚ್, ನಿನಾದ್ ರಾಜೇಶ್ ನಾಯ್ಕ್, ಅನುರಾಗ್ ಎಸ್. ಶಿರ್ಸಟ್ ತಮ್ಮ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಸಾಧನೆಗೈದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ತೇರ್ಗಡೆಗೊಂಡ 7,650 ವಿದ್ಯಾರ್ಥಿಗಳಲ್ಲಿ 14 ಜನ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ತೇರ್ಗಡೆಗೊಂಡ 500 ವಿದ್ಯಾರ್ಥಿನಿಯರಲ್ಲಿ ಒಬ್ಬರು ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿನಿ ಎಂಬುದು ಶ್ಲಾಘನೀಯ ವಿಚಾರ. ಎನ್. ಡಿ. ಎ. ದೇಶಮಟ್ಟದಲ್ಲಿ ನಡೆಯುವ ಅತ್ಯಂತ…
ನಾಡಿನೆಲ್ಲೆಡೆ ವಿಜಯ ದಶಮಿಯ ಸಂಭ್ರಮ ಕಳೆಗಟ್ಟಿರುವ ಸಂದರ್ಭದಲ್ಲಿ, ಅಕ್ಟೋಬರ್ 2ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಾರದ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾ ನಗರ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ವಿದ್ಯಾರ್ಥಿಗಳು ಭಕ್ತಿ ಸುಧೆಯ ಗೀತ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ರವಿ ಜಿ, ಹೇಮಂತ್ , ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಭ್ರಮದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆಂಗ್ಲ ಭಾಷೆ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.
ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಅಲ್ಲಿನ ನಿವಾಸಿಗಳಿಗೆ ಆಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬೆರೆತರು. ಇದೇ ಸಂದರ್ಭ ಆಶ್ರಮದ ನಿವಾಸಿಗಳಿಗೆ ವಿದ್ಯಾರ್ಥಿಗಳು ತಂದ ದಿನಸಿ ಸಾಮಾಗ್ರಿಗಳನ್ನು ಹಂಚಿ ಖುಷಿಪಟ್ಟರು. ಇದೇ ಸಂದರ್ಭ ಸಂಸ್ಥೆಯ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಘಟಕಾಧಿಕಾರಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಶೈಲೇಶ್, ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಕೀರ್ತಿ ಆಚಾರ್ಯ, ಹಿಂದಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಕ್ಷೇಮಪಾಲಕರಾದ ಸುಕೇಶ್, ಮಂಜುನಾಥ್, ಚಾಲಕರಾದ ಚಂದ್ರಶೇಖರ್ ಮತ್ತು ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.
ದುಷ್ಟ ಸಂಹಾರಕ್ಕಾಗಿಯೇ ಅವತರಿಸಿದ ದುರ್ಗಾ ಮಾತೆಯ ಪೂಜನೀಯ ಪುಣ್ಯ ಪರ್ವವಿದು. ನವರಾತ್ರಿ ಉತ್ಸವದಲ್ಲಿ ಭಕ್ತರು ಒಂಬತ್ತು ರೂಪಗಳಲ್ಲಿ ದುರ್ಗಾ ದೇವಿಯನ್ನು ಪೂಜಿಸುತ್ತಾರೆ. ಲೋಕ ಕಲ್ಯಾಣಾರ್ಥವಾಗಿ ಕೂಡಾ ಇದು ಮಹತ್ವದ್ದು. ವಿಶೇಷವಾಗಿ ನವರಾತ್ರಿ ಈ ಸುಸಂದರ್ಭದಲ್ಲಿ ಪುಣೆ ಬಂಟರ ಸಂಘದ ದುರ್ಗಾ ಪೂಜೆಯಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ವಿಶೇಷ ರೀತಿಯ ಸಂಪ್ರದಾಯದ ಪ್ರಕಾರ ಇಲ್ಲಿ ದುರ್ಗಾ ಪೂಜೆ, ಮತ್ತು ತಮ್ಮ ಪ್ರಕೃತಿಯೊಂದಿಗಿನ ಬಾಂಧವ್ಯದ ಆಚರಣೆಯನ್ನು ನೋಡುವ ಭಾಗ್ಯ ಸಿಕ್ಕಿದೆ. ಅದೇ ರೀತಿ ನನ್ನ ಸಾಮಾಜಿಕ ಸೇವೆಯನ್ನು ಪರಿಗಣಿಸಿ ನೀಡಿದ ನವದುರ್ಗಾ ಪ್ರಶಸ್ತಿಗೆ ಋಣಿಯಾಗಿದ್ದೇನೆ. ಈ ಪ್ರಶಸ್ತಿಯನ್ನು ನನ್ನ ಸೇವಾ ಸಂಸ್ಥೆಯ ಅನಾಥ ಮಕ್ಕಳಿಗೆ ಅರ್ಪಣೆ ಮಾಡುತಿದ್ದೇನೆ. ಅನಾಥ ಮತ್ತು ಅಂಗವಿಕಲ ಮಕ್ಕಳನ್ನು ಮಾನಸಿಕ ಸಮತೋಲನಕ್ಕೆ ತಂದು, ಸಾಮಾಜಿಕ ಚಿಂತನೆಯನ್ನು ತಿಳಿ ಹೇಳುವ ಮೂಲಕ ಅಜ್ಞಾನದಿಂದ ಜ್ಞಾನದೆಡೆಗೆ ಪರಿವರ್ತಿಸಿ, ಸ್ವಪರಿಶ್ರಮದಿಂದ ಸಬಲೀಕರಣಗೊಳಿಸಿ ಸ್ವಾವಲಂಭಿಗಳಾಗಿ ಮಾಡುವುದರಲ್ಲಿ ನಮಗೆ ಆತ್ಮ ತೃಪ್ತಿ ಇದೆ. ಇದು ನಮಗೆ ಸವಾಲಿನ ಪ್ರಶ್ನೆಯಾದರೂ ಹಲವಾರು ವರ್ಷಗಳಿಂದ ಈ ಅನಿಕೇತ್ ಸೇವಾಭಾವಿ ಸಂಸ್ಥೆ…
ಒಳ್ಳೆಯತನ ಎಂದರೆ ಮಾನವೀಯ ಗುಣಗಳನ್ನು ಹೊಂದಿರುತ್ತದೆ. ಅಂತಹ ಮಾನವೀಯ ಗುಣಗಳೆಂದರೆ ಸಹಕಾರ, ಸಹಾಯ, ದಯೆ, ಕರುಣೆ, ಸಹಾನುಭೂತಿ, ಸಾಮಾಜಿಕ ಪ್ರಜ್ಞೆ, ಭಾತೃತ್ವ, ಪ್ರೀತಿ, ಸೇವಾ ಮನೋಭಾವನೆ, ಹೃದಯ ವೈಶಾಲ್ಯತೆ. ಇಂತಹ ಎಲ್ಲಾ ಗುಣಗಳನ್ನು ಹೊಂದಿರುವ ನಮ್ಮ ಬಂಟ ಸಮಾಜದ ಮುಂದಿನ ಯುವ ಪೀಳಿಗೆಯ ಅಭಿವೃದ್ದಿ ಹೇಗೆ ಎಂಬದನ್ನು ಅರಿತು ಮುನ್ನಡೆಯಬೇಕಾದ ಸವಾಲು ನಮ್ಮ ಸಮಾಜದ ಮುಂದಿದೆ. ಸನಾತನ ಭಾರತೀಯ ಸಂಸ್ಕ್ರತಿ, ಹಿಂದುತ್ವದ ತತ್ವದ ಮೇಲೆ ನಿಂತಿದೆ. ಧಾರ್ಮಿಕ ಆಚರಣೆಗಳ ಮಹತ್ವ, ಸಂಸ್ಕೃತಿ, ಸಂಸ್ಕಾರಗಳ ಅರಿವು ಮಕ್ಕಳಿಗೆ ಮೂಡಿಸುವ ಕಾರ್ಯ ಕೂಡಾ ಆಗಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸಮಾಜದ ಸಂಘ ಸಂಸ್ಥೆಗಳ ಮೇಲೆ ಮಹತ್ತರವಾದ ಜವಾಬ್ದಾರಿ ಇದೆ. ನಮ್ಮಬಂಟರ ಸಾಂಘಿಕ ಶಕ್ತಿಯಿಂದ ಇದು ಸಾಧ್ಯ ಎಂಬುದನ್ನು ಅರಿತಿದ್ದೇವೆ. ಈ ಬಗ್ಗೆ ನಾವು ಬಂಟರ ಸಂಘ ಮುಂಬಯಿ ಮತ್ತು ನನ್ನ ಸೇವಾ ಸಂಸ್ಥೆ ಸಂಜೀವಿನಿ ಟ್ರಸ್ಟ್ ಮೂಲಕ ಬಹಳಷ್ಟು ಕಾರ್ಯಗಳನ್ನು ಮಾಡುತ್ತಿದ್ದೇವೆ. ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘ ಕೂಡಾ ಈ ಕಾರ್ಯ ಮಾಡುತ್ತಿದೆ ಎಂದು…
ಡಾ| ಹರ್ಷಕುಮಾರ್ ರೈ ಮಾಡಾವು ನಿರ್ಮಾಣದ ‘ಇರ್ದೆ ವಿಷ್ಣುಮೂರ್ತಿ’ ತುಳು ಭಕ್ತಿಗೀತೆಯ ಪೋಸ್ಟರ್ ಶಾಸಕ ಅಶೋಕ್ ರೈಯವರಿಂದ ಅನಾವರಣ
ಜನ್ಮ ಕ್ರಿಯೇಷನ್ ಪುತ್ತೂರು ಅರ್ಪಿಸುವ ಉದ್ಯಮಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ| ಹರ್ಷಕುಮಾರ್ ರೈ ಮಾಡಾವು ನಿರ್ಮಾಣದಲ್ಲಿ ಮೂಡಿ ಬಂದಿರುವ ಇರ್ದೆ ಶ್ರೀ ವಿಷ್ಣುಮೂರ್ತಿ ದೇವರ ಕುರಿತಾದ ಮೊಟ್ಟ ಮೊದಲ ತುಳು ಭಕ್ತಿಗೀತೆ ‘ಇರ್ದೆ ವಿಷ್ಣುಮೂರ್ತಿ’ ಇದರ ಪೋಸ್ಟರನ್ನು ಶಾಸಕ ಅಶೋಕ್ ಕುಮಾರ್ ರೈ ಮತ್ತು ಸುಮಾ ಅಶೋಕ್ ರೈಯವರು ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಡಾ| ಹರ್ಷಕುಮಾರ್ ರೈ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು, ರೈ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಸದಾಶಿವ ರೈ ಮಠಂತಬೆಟ್ಟು, ದೇವಸ್ಥಾನದ ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆ ಗುತ್ತು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಅಕ್ಟೋಬರ್ 2ರಂದು ಇರ್ದೆಯಲ್ಲಿ ನಡೆಯುವ ಶಾರದೋತ್ಸವ ಕಾರ್ಯಕ್ರಮದಲ್ಲಿ ಅನು ಆಡಿಯೋಸ್ ಯೌಟ್ಯೂಬ್ ಚಾನೆಲ್ ನಲ್ಲಿ ಭಕ್ತಿಗೀತೆ ಬಿಡುಗಡೆಗೊಳ್ಳಲಿದೆ. ಚರಣ್ ಉಪ್ಪಳಿಗೆ, ಸಾರಥ್ಯ ಶೆಟ್ಟಿ, ಅಜಯ್ ರಾಜ್ ಸಾಹಿತ್ಯದಲ್ಲಿ ಮೂಡಿ ಬಂದಿರುವ…















