Author: admin

ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಡಾ. ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ -2023’ ಏಕಾದಶ ಸರಣಿ ‘ಹನ್ನೊಂದನೇ ವರ್ಷದ ನುಡಿ ಹಬ್ಬ’ ದಿನಾಂಕ 19-11-2023ರಿಂದ 25-11-2023ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಜರಗಲಿದೆ. ನಗರದ ಖಾಸಗಿ ಹೋಟೆಲಿನಲ್ಲಿ ಜರಗಿದ ಯಕ್ಷಾಂಗಣದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರು ‘ಸಪ್ತಾಹದಲ್ಲಿ ಏಳು ಜನಪ್ರಿಯ ಪ್ರಸಂಗಗಳ ತಾಳಮದ್ದಳೆ ಮತ್ತು ಗತಿಸಿದ ಹಿರಿಯರ ಸಂಸ್ಮರಣಾ ಕಾರ್ಯಕ್ರಮಗಳನ್ನು ನಡೆಸಲಾಗುವುದು’ ಎಂದರು. ಯಕ್ಷಾಂಗಣದ ಆಶ್ರಯದಲ್ಲಿ ‘ಶ್ರೀಹರಿ ಚರಿತ್ರೆ’ ಎಂಬ ಪರಿಕಲ್ಪನೆಯೊಂದಿಗೆ ಜರಗುವ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023’ ನವೆಂಬರ್ 19ನೇ ಭಾನುವಾರ ಉದ್ಘಾಟನೆಗೊಳ್ಳಲಿದ್ದು ಅಂದಿನಿಂದ ಕ್ರಮವಾಗಿ ‘ಧ್ರುವ ಚರಿತ್ರೆ, ರುಕ್ಮಾಂಗದ…

Read More

ತುಳು ರಂಗಭೂಮಿ ಅನ್ಯ ಭಾಷಾ ರಂಗಭೂಮಿಗಳಿಗೆ ಸರಿಸಮನಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಪ್ರಾರಂಭಗೊಂಡ ಕೆಮ್ತೂರು ನಾಟಕ ಪ್ರಶಸ್ತಿಗಾಗಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ 22ನೇ ವರ್ಷದ ಸ್ಪರ್ಧೆಯನ್ನು 2024ರ ಜನವರಿ ಮೊದಲ ವಾರದಿಂದ ಉಡುಪಿಯಲ್ಲಿ ಆಯೋಜಿಸಲಾಗಿದೆ. ದೇಶದ ಯಾವುದೇ ಪ್ರದೇಶದ ಯೋಗ್ಯ ತುಳು ಹವ್ಯಾಸಿ ನಾಟಕ ತಂಡಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಗರಿಷ್ಠ 7 ನಾಟಕಗಳನ್ನು ಆಯ್ಕೆ ಮಾಡಲಾಗುವುದು. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳೊಂದಿಗೆ ರೂ.20,000/-, ರೂ.15,000/- ಮತ್ತು ರೂ.10,000/- ನಗದು ಬಹುಮಾನ ಅಲ್ಲದೇ ನಿರ್ದೇಶನ, ಸಂಗೀತ, ರಂಗವಿನ್ಯಾಸ, ಬೆಳಕು, ನಟ, ನಟಿ ವಿಭಾಗಗಳಲ್ಲಿ ಪ್ರಥಮ ರೂ.1,000/- ಮತ್ತು ದ್ವಿತೀಯ, ತೃತೀಯ ಬಹುಮಾನ ಕೊಡಲಾಗುವುದು. ಸ್ಪರ್ಧೆಗೆ ಆಯ್ಕೆಯಾದ ರಾಜ್ಯದೊಳಗಿನ ತಂಡಗಳಿಗೆ ರೂ.5,000/- ಮತ್ತು ಹೊರರಾಜ್ಯದ ತಂಡಗಳಿಗೆ ರೂ.10,000/- ಭತ್ತೆಯೊಂದಿಗೆ ಊಟ ಉಪಚಾರ ಮತ್ತು ಉತ್ತಮ ಸೌಕರ್ಯ ಒದಗಿಸಲಾಗುವುದು. ಭಾಗವಹಿಸಲಿಚ್ಛಿಸುವ ಕ್ರಿಯಾಶೀಲ ತುಳು ಹವ್ಯಾಸಿ ರಂಗತಂಡಗಳು ಮುದ್ರಿತ ಪ್ರವೇಶ ಪತ್ರ ಮತ್ತು ನಿಯಮಾವಳಿಗಳ ಬಗ್ಗೆ ಬಿ.…

Read More

ಆಳ್ವಾಸ್ ಸಹಕಾರ ಸಂಘವು 2022-23 ನೇ ಸಾಲಿನಲ್ಲಿ 2.87 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. ಆಳ್ವಾಸ್ ಕಾಲೇಜು ಸುಂದರಿ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ವೇದಿಕೆಯಲ್ಲಿ ನಡೆದ ಸಂಘದ 2022-23 ನೇ ಸಾಲಿನ 7ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 150 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಶೇ 28 ಹೆಚ್ಚುವರಿ ಲಾಭ ಗಳಿಸಿದೆ. ಶೇ 99.74 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊಂಡಿದ್ದು, ಪ್ರಸ್ತುತ 2033 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ಸಂಘದ ಅಧ್ಯಕ್ಷರೂ ಆಗಿರುವ ಡಾ. ಮೋಹನ ಆಳ್ವ ಅವರು ಸಮಾಜಮುಖಿ ಚಿಂತನೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳನ್ನು ಕಟ್ಟಿದ್ದಾರೆ.…

Read More

ಹೆತ್ತವರಿಗೆ ತಮ್ಮ ಕಂದಮ್ಮಗಳಿಗಿಂತ ದೊಡ್ಡ ಆಸ್ತಿ ಇನೊಂದಿಲ್ಲ. ಯಾವ ತಂದೆ, ತಾಯಿಯಾದರು ಅವರ ಮಕ್ಕಳ ಭವಿಷ್ಯ ತಮಗಿಂತ ಉತ್ತಮವಾಗಿರಲಿ ಎಂದೇ ಬಯಸುತ್ತಾರೆ. ತಾವು ಕಂಡ ಕಷ್ಟ, ನೋವು, ಏರಿಳಿತಗಳನ್ನು ಮಕ್ಕಳು ಅನುಭವಿಸಬಾರದೆಂದು ದೇವರಲ್ಲಿ ಸದಾ ಪ್ರಾರ್ಥಿಸುತ್ತಾರೆ. ಅವರ ಉತ್ತಮ ಭವಿಷ್ಯಕ್ಕಾಗಿ ತಮ್ಮ ಕೈಲಾದಷ್ಟು ಶ್ರಮ ಪಡುತ್ತಾರೆ. ಆದರೆ ಇವೆಲ್ಲದರಿಂದ ಕೇವಲ ಮನುಷ್ಯನ ಬಾಹ್ಯ ಜೀವನವನ್ನು ರೂಪಿಸಬಹುದೇ ವಿನಃ ಒಬ್ಬ ವ್ಯಕ್ತಿಯನ್ನು ಅಂತರಂಗದಿಂದ ಶ್ರೀಮಂತನನ್ನಾಗಿ ಮಾಡಲು ಸಾಧ್ಯವಿಲ್ಲ. ಆಂತರಿಕವಾಗಿ ಬೆಳೆಯಲು, ಉತ್ತಮ ವ್ಯಕ್ತಿತ್ವ ಹೊಂದಲು ಸನ್ಮಾರ್ಗದ ಶಿಕ್ಷಣ ಅತ್ಯಗತ್ಯ. ಇದನ್ನು ಯಾವ ಶಾಲೆ ಕಾಲೇಜುಗಳೂ ಕಲಿಸುವುದಿಲ್ಲ. ಅದಕ್ಕಾಗಿ ಮನೆಯೆ ಮೊದಲ ಪಾಠ ಶಾಲೆ ತಾಯಿಯೆ ಮೊದಲ ಗುರು ಎಂದು ಹೇಳುವುದು. ತಂದೆ, ತಾಯಿ ಮಗುವಿಗೆ ಲೋಕದ ಅರಿವು ಆರಂಭವಾದಾಗಲೇ ನೈತಿಕ ಶಿಕ್ಷಣವನ್ನು, ಮನುಷ್ಯತ್ವದ ಮೌಲ್ಯಗಳನ್ನು, ಆದರ್ಶ ವ್ಯಕ್ತಿಗಳ ಚರಿತ್ರೆಯನ್ನು ಬೋಧಿಸಬೇಕು. ಮಕ್ಕಳು ಬೆಳೆದು ದೊಡ್ಡವರಾಗುವ ಮುನ್ನವೇ ಅವರಲ್ಲಿ ಉತ್ತಮ ಆಲೋಚನೆಗಳನ್ನು ಮೂಡಿಸುವುದು ಅಗತ್ಯ. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗಿತೆ ಎಂಬ ಗಾದೆಯಂತೆ ಸಣ್ಣ…

Read More

ಮುಂಬಯಿ ಬಂಟರ ಸಂಘವು ಸುಮಾರು 2 ವರ್ಷಗಳ ಹಿಂದೆ ಆಯೋಜಿಸಿದ ರಕ್ತದಾನ ಶಿಬಿರದಲ್ಲಿ ರಕ್ತ ಸಂಗ್ರಹಿಸುವ ಯೋಜನೆಯಲ್ಲಿ ಕೊರತೆಯು ಉಂಟಾದಾಗ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರುಗಳ ಸಹಾಯದಿಂದ 5000 ಬಾಟಲ್ ರಕ್ತವನ್ನು ಸಂಗ್ರಹಿಸಲಾಗಿತ್ತು. ಸಂಘದ 9 ಪ್ರಾದೇಶಿಕ ಸಮಿತಿಗಳಲ್ಲಿ ಕ್ಯಾನ್ಸರ್ ತಡೆಗಟ್ಟುವ ಬಗ್ಗೆ ಶಿಬಿರಗಳನ್ನು ಆಯೋಜಿಸುವ ಬಗ್ಗೆ ನಿರ್ಧರಿಸಲು ಯೋಚಿಸಿದಾಗ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗವು ಮೊತ್ತ ಮೊದಲಾಗಿ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಬಂಟರ ಸಂಘ ಮುಂಬಯಿ ಇದರ ಉಪಾಧ್ಯಕ್ಷರಾದ ರತ್ನಾಕರ್ ಶೆಟ್ಟಿ ಮುಂಡ್ಕೂರುರವರು ಹೇಳಿದರು. ಅವರು ಬಂಟರ ಸಂಘ ಮುಂಬಯಿ ಇದರ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದವರು ಆಯೋಜಿಸಿದ ಸೇವ್ ದಿ ಬ್ರೆಸ್ಟ್ ಫೌಂಡೇಶನ್ ಹಾಗೂ ವಸಂತ್ ಚಾರಿಟೇಬಲ್ ಟ್ರಸ್ಟ್ ರವರ ಸೌಜನ್ಯದಲ್ಲಿ ಕ್ಯಾನ್ಸರ್ ತಡೆಗಟ್ಟುವ ಶಿಬಿರ ತುಂಗಾ ಹಾಸ್ಪಿಟಲ್ ಸಹಕಾರದೊಂದಿಗೆ ಹಾಸ್ಪಿಟಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಪವನ್ನು ಪ್ರಜ್ವಲಿಸಿ ಮಾತನಾಡುತ್ತಾ ಸಾಮಾನ್ಯವಾಗಿ ಮಹಿಳೆಯರಲ್ಲಿ ಮೂರು ಹಂತದಲ್ಲಿ ಎದುರಾಗುವ ಕ್ಯಾನ್ಸರ್ ಸಮಸ್ಯೆಯನ್ನು…

Read More

ಸಮಾಜ ಮುಖೀ ಚಿಂತನೆ ಹಾಗೂ ಸೇವೆಗೆ ಸಹಕಾರ ಕ್ಷೇತ್ರ ಹೆಸರಾಗಿದ್ದು ರಾಷ್ಟ್ರೀಯ ಬ್ಯಾಂಕ್‌ಗಳ ವಿಲೀನದಿಂದ ಗ್ರಾಹಕರಿಗೆ ತೊಂದರೆಯಾದಾಗ ಸಹಕಾರಿ ಬ್ಯಾಂಕ್‌ಗಳು ಮನೆ ಮನೆಗೆ ತಲುಪಿ ಉನ್ನತ ಸೇವೆ ನೀಡಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು. ಅವರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ “ಸಮೃದ್ಧಿ ಸಹಕಾರಿ ಸೌಧ’ದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಡ್ಕೂರು ಶ್ರೀ ದುರ್ಗಾಪರ ಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ವೇ|ಮೂ| ರಾಮದಾಸ ಆಚಾರ್ಯ ಶುಭಾಶಂಸನೆಗೈದರು. ಸಹಕಾರಿ ಸೌಧವನ್ನು ಸಚಿವ ವಿ. ಸುನಿಲ್‌ ಕುಮಾರ್‌, ನವೋದಯ ಸಹಕಾರಿ ಭವನವನ್ನು ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ. ವಾದಿರಾಜ ಶೆಟ್ಟಿ, ಭದ್ರತಾ ಕೊಠಡಿಯನ್ನು ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ನಿರ್ದೇಶಕ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ…

Read More

ಮುಂಬೈ ಬಂಟ್ಸ್ ಚಾರ್ಟರ್ಡ್ ಅಕೌಂಟೆಂಟ್‌ಗಳ ವೇದಿಕೆಯು ಫೆಬ್ರವರಿ 4 ರಂದು ಸಂಜೆ ಬಂಟ್ಸ್ ಸಂಘ ಮುಂಬೈ, ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸಹಯೋಗದಲ್ಲಿ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಕೇಂದ್ರ ಬಜೆಟ್ – 2023 ರ ವಿಶ್ಲೇಷಣೆಯನ್ನು ನಡೆಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಫ್‌ಎಂಬಿಸಿಎ ಕಾರ್ಯಾಧ್ಯಕ್ಷ ಸಿಎ ಹರೀಶ್ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಲಿಮಿಟೆಡ್ ಅಧ್ಯಕ್ಷ ಕೆ.ಸಿ.ಶೆಟ್ಟಿ, ಇಂಡಿಯನ್ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಶನ್ ಅಧ್ಯಕ್ಷ ಸುಕೇಶ್ ಶೆಟ್ಟಿ, ಎಫ್‌ಎಂಬಿಸಿಎ ಉಪಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ, ಗೌರವ ಕಾರ್ಯದರ್ಶಿ ಸಿಎ ಜಗದೀಶ್ ಬಿ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಸುದೇಶ್ ಶೆಟ್ಟಿ ಉಪಸ್ಥಿತರಿದ್ದರು. ಸಿಎ ರಾಜೇಶ್ ಸಾಗ್ವಿ ಮತ್ತು ವಕೀಲ ಪ್ರಭಾಕರ ಶೆಟ್ಟಿ ಕ್ರಮವಾಗಿ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆಗಳನ್ನು ವಿಶ್ಲೇಷಿಸಿದರು. ಈ ಸಂದರ್ಭದಲ್ಲಿ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಸಿಎ ಎನ್‌ಬಿ ಶೆಟ್ಟಿ, ಸಿಎ ಪ್ರಭಾಕರ್ ಬಿ…

Read More

ಕಣ್ಣು ಹಾಯಿಸಿದಷ್ಟು ದೂರಕ್ಕೂ ಆವೃತಗೊಂಡ ದಟ್ಟ ಹಸಿರು, ಬೆಟ್ಟಗುಡ್ಡ ಅಪರೂಪದ ಮರಗಳು ಹೇರಳವಾಗಿ ಬೆಳೆದು ನಿಂತು ತಂಪನ್ನೆರೆವ ಕಾಡು, ಪಕ್ಷಿಗಳ ಇಂಚರ, ಸರೀಸೃಪಗಳ ಸರಪರ ಸದ್ದು, ವಿಶಿಷ್ಟವಾದ ಪಕ್ಷಿಗಳು ಕಾಣಸಿಗುವ ಸಸ್ಯಸಂಪತ್ತು ಹಾಗೂ ವನ್ಯಜೀವಿಗಳನ್ನು ಕಣ್ತುಂಬಿಕೊಳ್ಳಬಹುದಾದ ಅರಣ್ಯ ಸುತ್ತಾಡಿ ಪ್ರಾಣಿ, ಪಕ್ಷಿ, ಅರಣ್ಯ ಸಂಪತ್ತನ್ನು ನೋಡಲು ಯಾರ ‌ಮನ‌ಬಯಸುವುದಿಲ್ಲ. ಆದರೆ ಕೆಲ ದಿನಗಳ ಹಿಂದೆ ಹಾಸನ ಜಿಲ್ಲೆಯ ಸಕಲೇಶ್ವರಪುರ ತಾಲೂಕಿನಲ್ಲಿ ಪಶ್ಚಿಮ ಘಟ್ಟ ರಕ್ಷಿತಾರಣ್ಯದಲ್ಲಿ ಸಂಭವಿಸಿದ ಅಗ್ನಿ ದುರಂತ, ಕಾಡ್ಗಿಚ್ಚು ನಂದಿಸಲು ಹೋಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ ಮೃತ ಪಟ್ಟು ಕೆಲವರು ಗಾಯಗೊಂಡಿರುವ ಸುದ್ದಿ ನಿಜಕ್ಕೂ ಆಘಾತಕಾರಿ. ಸಮೃದ್ದ ಅರಣ್ಯ ಸಂಪತ್ತಿನ ಕಾರಣ ತಂಪಾದ ವಾತಾವರಣ ಹೊಂದಿದ ದಟ್ಟಾರಣ್ಯ ಕಾಡ್ಗಿಚ್ಚಿಗೆ ಆಹುತಿಯಾಗಿ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದು ಅಪಾರ ಸಂಖ್ಯೆಯಲ್ಲಿ ಪ್ರಾಣಿ ಪಕ್ಷಿಗಳ ಜೀವಹಾನಿಗೆ ಕಾರಣವಾಗಿರುವುದು ದಾಖಲಾಗಿದೆ. ಕಾಡ್ಗಿಚ್ಚು ಕೆಲವೊಮ್ಮೆ ಉದ್ದೇಶ ಪೂರ್ವಕವಾಗಿ ಹಚ್ಚಿದ್ದು ಎಂಬ ಆರೋಪ ಪಡೆದಿದ್ದು ಮಾನವ ನಿರ್ಮಿತ ಕಾಡ್ಗಿಚ್ಚು ಅಕ್ಷಮ್ಯ ಅಪರಾಧ. ಅರಣ್ಯಕ್ಕೆ ಬೆಂಕಿ ಬೀಳುವ…

Read More

ಜಗತ್ತಿನಾದ್ಯಂತ ಇರುವ ಬಂಟ ಸಮಾಜವು ಇಂದು ಪ್ರತಿಯೊಂದು ವಿಭಾಗದಲ್ಲೂ ಮುಂದುವರಿಯುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಬಂಟರಲ್ಲಿ ಅಡಗಿರುವ ರಕ್ತ ಶಕ್ತಿಯ ಗುಣ. ನಮ್ಮವರು ಸಾಹಸಿಗರು ಮಾತ್ರವಲ್ಲದೆ ಧೀರರು. ವಿಶ್ವದಲ್ಲಿರುವ ನಾವೆಲ್ಲಾ ಒಂದೇ ಮನೆತನದವರು. ನಮ್ಮಲ್ಲಿ ಭಿನ್ನಾಭ್ರಿಪ್ರಾಯ ಸಲ್ಲದು. ದೇಶ ವಿದೇಶದಲ್ಲೂ ಇಂದು ಅದೆಷ್ಟೋ ಮಂದಿ ಕ್ರೀಡಾ ಕೌಶಲ್ಯತೆಯಲ್ಲಿ ಮೆರೆಯುತ್ತಿದ್ದಾರೆ ಎಂದು ನುಡಿದರು. ಅವರು ಮೀರಾಡಹಣೂ ಬಂಟ್ಸ್ ವತಿಯಿಂದ ವಿರಾರ್ ಹಳೇ ವಿವಾ ಕಾಲೇಜಿನ ಮೈದಾನದಲ್ಲಿ ನಡೆದ ಸಂಸ್ಥೆಯ ಪ್ರಥಮ ವರ್ಷದ ಕ್ರೀಡೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಇಂದು ಆಯೋಜಿಸುತ್ತಿರುವ ಮೀರಾಡಹಣೂ ಬಂಟ್ಸ್ ನ ಕ್ರೀಡೋತ್ಸವ ಅತ್ಯಂತ ವಿಶೇಷ ಮೆರಗನ್ನು ನೀಡುತ್ತಿದೆ. ಆಕರ್ಷಕ ಶೈಲಿಯ ಉಡುಪುಗಳು ಕಾರಣವಾಗಿದೆ. ನಾವು ಬಂಟರು, ಉತ್ತಮ ಜನಾಂಗದವರು. ನಮ್ಮಲ್ಲಿ ಎಲ್ಲಾ ರೀತಿಯ ಕ್ರೀಯಾ ಶಕ್ತಿಗಳು ಅಡಕವಾಗಿದೆ ಅದನ್ನು ನಾವು ಸದುಪಯೋಗಿಸಬೇಕಾಗಿದೆ ಎಂದರು. ಇಂದಿನ ಕ್ರೀಡಾ ಆಯೋಜನೆಯನ್ನು ಪ್ರಶಂಸಿಸುತ್ತಾ ಕ್ರೀಡಾಳುಗಳಿಗೆ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಮೀರಾಡಹಣೂ ಬಂಟ್ಸ್ ನ ಅಧ್ಯಕ್ಷ ಪ್ರಕಾಶ್ ಹೆಗ್ಡೆಯವರು ಮಾತನಾಡುತ್ತಾ ಇದು…

Read More

ಬಂಟ ಸಮಾಜದ ಸಂಘಟನೆಯ ಮೂಲಕ ಇತರ ಸಮಾಜದ ವರ್ಗಕ್ಕೂ ಮುಕ್ತ ನೆರವು ನೀಡುವ ಮೂಲಕ ಸಮಾಜದಲ್ಲಿ ಮೇಲ್ಪಂಕ್ತಿಗೆ ಕಾರಣವಾಗಿರುವ ಒಕ್ಕೂಟಕ್ಕೆ ಸಮಾಜ ಬಾಂಧವರಿಂದ ನೀಡುತ್ತಿರುವ ಸ್ಪಂದನೆಯೇ ಮೂಲ ಕಾರಣವಾಗಿದೆ. ಸಮಾಜದಲ್ಲಿ ಎಲ್ಲಾ ಸಮಾಜದ ಸಂಘಟನೆಯೂ ಇದೇ ರೀತಿಯ ಯೋಚನೆಯಲ್ಲಿ ಯೋಜನೆ ರೂಪಿಸಬೇಕು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪಡುಬೈಲ್ ನಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೂತನ ಜಮೀನಿಗೆ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ನಾಮಕರಣ ಮಾಡುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯ ಯೋಜನೆಗಳಿಗೆ ದಾನಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರು ಮೂರುವರೆ ಕೋಟಿ ರೂ.ಗೂ ಮಿಕ್ಕಿದ ಮೊತ್ತವನ್ನು ಒಕ್ಕೂಟದ ಯೋಜನೆಗಳಿಗೆ ಒದಗಿಸಿ ಸೂಕ್ತ ನಿವೇಶನ ಪಡೆಯುವಲ್ಲಿ ಹಾಗೂ ನೆರವು ನೀಡುವ ಯೋಜನೆಗಳಿಗೆ ಸಹಕರಿದ್ದಾರೆ ಎಂದರು. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ನಿರ್ಮಾಣಗೊಂಡ ಬಳಿಕ ಬಿಪಿಲ್ ಕಾರ್ಡುದಾರರಿಗೆ ಮದುವೆಗೆ ಹಾಲ್…

Read More