Author: admin
ತುಳುನಾಡ ಸಂಸ್ಕೃತಿ, ಆಚಾರ- ವಿಚಾರ, ನಡೆ-ನುಡಿ, ಜೀವನ ಪದ್ಧತಿ, ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರಸಿಕೊಂಡು ಕುತೂಹಲ ಹುಟ್ಟಿಸಿ ಸುಂದರವಾಗಿ ಮೂಡಿಬಂದಿರುವ ತುಳು ಸಿನಿಮಾ “ಕೊರಮ್ಮ”, ಇಂದಿನ ಯುವ ಜನತೆಯನ್ನು ಬೆರಗುಗೊಳಿಸುವಂತೆ ಮಾಡಿದೆ. ಈ ಸಿನಿಮಾವನ್ನು ತುಳು ನಾಡಿನ ಎಲ್ಲರೂ ನೋಡಿ ಪ್ರೋತ್ಸಾಹಿಸಬೇಕು ಎಂದು ನಿರ್ದೇಶಕ ಶಿವಧ್ವಜ್ ಶೆಟ್ಟಿ ತಿಳಿಸಿದರು. ಸುರತ್ಕಲ್ ನಲ್ಲಿರುವ ಸಿನಿಗ್ಯಾಲಕ್ಸಿ ಚಿತ್ರಮಂದಿರದಲ್ಲಿ ಕೊರಮ್ಮ ತುಳು ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಸಮಾರಂಭದಲ್ಲಿ ನಿರ್ಮಾಪಕ ಅಡ್ಯಾರ್ ಮಾಧವ ನಾಯ್ಕ್, ಸಿನಿಗ್ಯಾಲಕ್ಸಿ ಸಂಸ್ಥೆಯ ನಿರ್ದೇಶಕ ಶಶಿಕುಮಾರ್, ಕೃಷ್ಣ ಅಡ್ಯಂತಾಯ, ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ, ವೆಂಕಟರಮಣ, ದಿನೇಶ್ ಫರಂಗಿಪೇಟೆ, ಮಧು ಸುರತ್ಕಲ್, ನಟ ಮೋಹನ್ ಶೇಣಿ, ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಸರೋಜ ಟಿ ಶೆಟ್ಟಿ, ಸರಾಯು ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಸಿನಿಗ್ಯಾಲಕ್ಸಿಯ ದೀಪಕ್ ಮೊದಲಾದವರು ಉಪಸ್ಥಿತರಿದ್ದರು. ಮಂಗಳೂರು, ಸುರತ್ಕಲ್, ಪುತ್ತೂರು, ಪಡುಬಿದ್ರೆ, ಮುಂತಾದ ಕಡೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ ಎಂದು ನಿರ್ಮಾಪಕ ಅಡ್ಯಾರ್ ಮಾಧವ ನಾಯ್ಕ್…
ಭಾರತದ ಯುವ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಬರೆದಿದ್ದಾರೆ. ಜಕಾರ್ತಾದಲ್ಲಿ ನಡೆದ ಬ್ಯಾಡ್ಮಿಂಟನ್ ಸೂಪರ್ 1000 ಫೈನಲ್ ನಲ್ಲಿ ಪ್ರಶಸ್ತಿಯನ್ನು ಗೆದ್ದು, ಈ ಸಾಧನೆ ಮಾಡಿದ ಮೊದಲ ಭಾರತೀಯ ಡಬಲ್ಸ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಮತ್ತು ಕಳೆದ ವರ್ಷ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಕಂಚು ಗೆದ್ದಿದ್ದ ವಿಶ್ವದ ನಂ.6 ಜೋಡಿ, ಜಕಾರ್ತದಲ್ಲಿ ನಡೆದ 2 ಗೇಮ್ ಗಳ ಅದ್ಭುತ ಹೋರಾಟದಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವೂಯಿ ಯಿಕಾ ಅವರನ್ನು ಸೋಲಿಸಿದರು. ಇಂಡೋನೇಷ್ಯಾ ಓಪನ್ ನ ಪುರುಷರ ಡಬಲ್ಸ್ ಫೈನಲ್ ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಅವರು ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೋಹ್ ಅವರನ್ನು 21-17, 21-18 ರಿಂದ ಸೋಲಿಸಿದರು. ನಿಧಾನಗತಿಯ ಆರಂಭವನ್ನು ಪಡೆದರೂ ಭಾರತೀಯ ಜೋಡಿ ನೇರ ಗೇಮ್ ಗಳಲ್ಲಿ ಪಂದ್ಯವನ್ನು ಗೆದ್ದರು. ಭಾರತದ ಜೋಡಿ…
ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮಿà ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಎ. 9ರಿಂದ ವರ್ಷಾವಧಿ ಉತ್ಸವ ಮೊದಲ್ಗೊಂಡು ಎ.14ರ ತನಕ ವಿವಿಧ ವಿಧಿ ವಿಧಾನಗಳ ಮೂಲಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ. 12ರಂದು ಶ್ರೀ ಮನ್ಮಹಾರಥೋತ್ಸವ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಮನ್ಮಹಾರಥೋತ್ಸವ ಅಂಗವಾಗಿ ಎ. 9ರ ರವಿವಾರ ಧ್ವಜಾರೋಹಣ, ರಾತ್ರಿ ಭೇರಿ ತಾಡನ, ಕೌತುಕ ಬಂಧನ, ಶಿಬಿಕಾಯನೋತ್ಸವ ಜರಗಿತು. ಎ. 10ರಂದು ಸಿಂಹವಾಹನೋತ್ಸವ, ಎ. 11ರಂದು ಪುಷ್ಪಕ ವಾಹನೋತ್ಸವ, ಎ. 12 ರಂದು ಶ್ರೀ ಮನ್ಮಹಾರಥೋತ್ಸವ. ಎ. 13ರಂದು ಚೂರ್ಣೋತ್ಸವ ಹಾಗೂ ತುಲಾಭಾರ ಸೇವೆ, ಎ. 14ರಂದು ಅವಭೃಥ, ಮೃಗಯಾ ವಿಹಾರ, ಪೂರ್ಣಾಹುತಿ, ಧ್ವಜಾರೋಹಣ, ಕುಂಭಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ. . 13ರಂದು ನಡೆಯುವ ತುಲಾಭಾರ ಸೇವೆ ಮಾಡಲಿಚ್ಛಿಸುವವರು ಎ. 12ರ ಸಂಜೆ ಒಳಗೆ ತಿಳಿಸಬೇಕು. ಭಕ್ತರಿಗೆ ಮಧ್ಯಾಹ್ನದ ಊಟ ಮತ್ತು ರಾತ್ರಿಯ ವಸತಿ ವ್ಯವಸ್ಥೆ ಇದೆ ಎಂದು ದೇವಸ್ಥಾನದ ಮೊಕ್ತೇಸರ ಚಂದ್ರಶೇಖರ ಶೆಟ್ಟಿ ತಿಳಿಸಿದ್ದಾರೆ.
ತ್ರಿವಳಿ ಕಾರ್ಯಕ್ರಮಗಳನ್ನು ಆಯೋಜಿಸಿದ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ಜಾನಪದ ಕಲಾರಾಧನೆಗೆ ಪ್ರೋತ್ಸಾಹದ ಅಗತ್ಯವಿದೆ: ಡಾ| ಆರ್.ಕೆ ಶೆಟ್ಟಿ (ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಜು.23: ಕಲೆಯು ಪಾವಿತ್ರ್ಯತೆಯುಳ್ಳದ್ದು ಇದಕ್ಕೆ ಭೇದವಿಲ್ಲ. ಆದುದರಿಂದ ಎಲ್ಲರಂತೆ ಜಾನಪದ ಕಲಾರಾಧನೆಗೂ ಪ್ರೇರಣೆಯ ಅಗತ್ಯವಿದ್ದು ನಮ್ಮ ಸದಾ ಪ್ರೋತ್ಸಾಹವಿದೆ. ಕಲೆಗಳು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಈ ಕಾರ್ಯಕ್ರಮ ಕಲೆಯೊಂದಿಗೆ ಸಹಬಾಳ್ವೆಯನ್ನು ಕಲಿಸುವಂತಾಗಿದೆ. ಶ್ರೀನಿವಾಸ ಸಾಫಲ್ಯರ ಕಲ್ಪನೆಯ ಸುದಿನ ಇದಾಗಿದ್ದು ಮಹಾರಾಷ್ಟ್ರ ಘಟಕದ ಸದಸ್ಯರಲ್ಲಿ ಮತ್ತಷ್ಟು ಪ್ರೇರಣೆ ಮೊಳಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು ಇದರ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿ ತಿಳಿಸಿದರು. ಇಂದಿಲಿ ಶನಿವಾರ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಅನೇಕ್ಸ್ ಕಾಂಪ್ಲೆಕ್ಸ್ನಲ್ಲಿನ ಶ್ರೀಮತಿ ರಂಜನಿ ಸುಧಾಕರ ಹೆಗ್ಡೆ ಸಮಾಜ ಕಲ್ಯಾಣ ಸಭಾ ಭವನದಲ್ಲಿ ಕಜಾಪ ಮಹಾರಾಷ್ಟ್ರ ಘಟಕವು ಆಯೋಜಿಸಿದ್ದ ಜಾನಪದ ಸಂಸ್ಕೃತಿಯ ಸಂವಾದ `ಆಷಾಡದ ಆಹ್ಲಾದಕರಸವಿ ಸಂಜೆ’ ಮತ್ತು ಜಾನಪದ ಗೀತಾ ಗಾಯನ `ಸಂವಾದ-ಚಿಂತನ-ಮಂಥನ’ ಕಾರ್ಯಕ್ರಮಗಳಸಭಾಧ್ಯಕ್ಷತೆ ವಹಿಸಿ ಗೀತಾ ಗಾಯನದ ಬಳಿಕ ದೀಪನಮನ ಮತ್ತು ನಾಡಗೀತೆಯೊಂದಿಗೆ ನಡೆಸಲ್ಪಟ್ಟ ಸಭಾ ಕಾರ್ಯಕ್ರಮದಲ್ಲಿ ನಾಮಫಲಕ ಅನಾವರಣಗೊಳಿಸಿ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ವಿಭಾಗದ…
ಶ್ರೀ ಮಂದಾರ್ತಿ ಕ್ಷೇತ್ರದ ಯಕ್ಷಗಾನ ಮೇಳವೊಂದು ಮೊದಲ್ಗೊಂಡು ಅಂದಿನಿಂದ ಇಂದಿನವರೆಗೂ ಕೇವಲ ಭಕ್ತಾದಿಗಳ ಹರಕೆ ಸೇವೆಗೆ ಮಾತ್ರ ಮೀಸಲಿದ್ದು,ಕಾಲಾನುಕಾಲಕ್ಕೆ ಶ್ರೀ ದೇವಳದ ಮೇಳಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿ, ಪ್ರಸ್ತುತ ಐದು ಯಕ್ಷಗಾನ ಮೇಳಗಳನ್ನು ಹೊಂದಿದ್ದೂ ವರ್ಷಕ್ಕೆ ಸುಮಾರು 900 ಆಟಗಳನ್ನು ಆಡಿಯೂ 2042 – 43 ರ ಸಾಲಿನವರೆಗೆ ಹರಕೆ ಯಕ್ಷಗಾನ ಬಯಲಾಟ ಬುಕ್ಕಿಂಗ್ ಇರುವ ಏಕಮಾತ್ರ (ಬಹುಶಃ) ಮೇಳ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮೇಳ, ಶ್ರೀ ಕ್ಷೇತ್ರ ಮಂದಾರ್ತಿ ಎಂದರೆ ತಪ್ಪಾಗಲಾರದು. ಹೀಗೊಂದು ಸೇವಾ ಮನೋಭಾವನೆಯನ್ನು ತಮ್ಮದಾಗಿಸಿಕೊಂಡು ತಲೆಮಾರುಗಳಿಂದ ಚಾಚೂ ತಪ್ಪದೆ ಮುನ್ನಡೆಸಿಕೊಂಡು ಬರುತ್ತಿರುವ ಮೊಕ್ತೇಸರ ಕುಟುಂಬದ ಹೆಸರು ಹೆಗ್ಗುಂಜೆ ನಾಲ್ಕು ಮನೆಯವರು. ಹಾಗೆಯೇ ಕುಟುಂಬದ ಹಿರಿಯರಿಂದ ಕಿರಿಯರಿಗೆ, ಮುಂದಿನ ತಲೆಮಾರಿಗೆ ವರ್ಗಾವಣೆಗೊಳ್ಳುತ್ತಾ ಬಂದು ಹೊಣೆಗಾರಿಕೆಯ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾಗಿ ಹೆಗ್ಗುಂಜೆ ಚಾವಡಿಮನೆ ಮಂದಾರ್ತಿ ಶ್ರೀ ಧನಂಜಯ ಶೆಟ್ಟಿ ಅವರು ಸೇವೆಯ ನೊಗಕ್ಕೆ ಹೆಗಲಾಗಿ ಮುನ್ನಡೆಸುತ್ತಿದ್ದಾರೆ. ಇವರು ಶ್ರೀ ದೇವಳದ ಮೊಕ್ತೇಸರರಾಗಿ ಅನುಪಮ…
ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜ.5 ರಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ. ಪ್ರಾಂಜಲ್ ಗೌರವಾರ್ಥ ನಡೆಯಲಿರುವ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಪಿ ಅನಾವರಣಗೊಳಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿಭಿನ್ನತೆಯೇನೆಂದರೆ ಸಾಂಸ್ಕೃತಿಕ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳು ಮುಂದುವರಿದಿದ್ದು, ದೇಶದಲ್ಲಿ ಇಂತಹ ಸ್ವಚ್ಛ, ಸೌಹಾರ್ದತೆಯ ಮತ್ತೊಂದು ನಗರವನ್ನು ಕಾಣಲು ಸಾಧ್ಯವಿಲ್ಲ. ಇಂತಹ ನಾಡಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವುದು ಬ್ರ್ಯಾಂಡ್ ಮಂಗಳೂರಿಗೆ ಮತ್ತಷ್ಟು…
ಈಚೆಗೆ ವಿಶ್ವ ಬಂಟ ಸಮ್ಮೇಳನದಲ್ಲಿ ನಿರುದ್ಯೋಗ ಸಮಸ್ಯೆ ಕೇಂದ್ರೀಕರಿಸಿ ಒಂದು ವಿಚಾರಗೋಷ್ಠಿ ನಡೆದಿತ್ತು. ಅದರಲ್ಲಿ ಖ್ಯಾತ ಉದ್ಯಮಿಗಳು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಅವರೆಲ್ಲರೂ ಮಂಡಿಸಿದ ಒಂದು ಸಮಾನ ವಿಚಾರವೆಂದರೆ – ಈಗಿನ ಸುಶಿಕ್ಷಿತ ಪದವೀಧರರಲ್ಲಿ ಉದ್ಯೋಗಕ್ಕೆ ಬೇಕಾದ ಕೌಶಲಗಳಿಲ್ಲ ಎಂಬುದು! ನಮ್ಮ ಮಕ್ಕಳು ಉನ್ನತ ಶಿಕ್ಷಣ ಮಾಡಿ ದೊಡ್ಡ ದೊಡ್ಡ ಪದವಿಗಳನ್ನು ಪಡೆದುಕೊಂಡಿರುತ್ತಾರೆ. ಉತ್ತಮ ಅಂಕ ಪಟ್ಟಿಯೂ ಅವರಲ್ಲಿದೆ. ಆದರೆ ಕಲಿತ ವಿಷಯದಲ್ಲಾಗಲೀ, ಉದ್ಯೋಗಕ್ಕೆ ಅಗತ್ಯವಿರುವ ವಿಷಯದಲ್ಲಾಗಲೀ ಅವರಲ್ಲಿ ಕೌಶಲ ಇರುವುದಿಲ್ಲ. ಆದ್ದರಿಂದಲೇ ಕಂಪೆನಿಗಳಲ್ಲಿ ಉದ್ಯೋಗ ಖಾಲಿ ಇದ್ದರೂ ಸೂಕ್ತ ಅಭ್ಯರ್ಥಿಗಳು ಸಿಗದೆ ಅವುಗಳನ್ನು ತುಂಬಿಸಲಾಗುತ್ತಿಲ್ಲ. ಕೆಲವು ಅನಿವಾರ್ಯ ಸಂದರ್ಭಗಳಲ್ಲಿ ಕೆಲವರನ್ನು ಉದ್ಯೋಗಕ್ಕೆ ಸೇರಿಸಿಕೊಂಡ ಬಳಿಕ ತಮಗೆ ಬೇಕಾದಷ್ಟು ತರಬೇತಿ ಕೊಟ್ಟು ಕೆಲಸ ಮಾಡಿಸುತ್ತೇವೆ ಎಂಬುದು ಸಂಪನ್ಮೂಲ ವ್ಯಕ್ತಿಗಳ ಅಭಿಪ್ರಾಯವಾಗಿತ್ತು. ಇಂದು ಎಂಜಿನಿಯರಿಂಗ್ ಸಹಿತ ಬೇರೆ ಬೇರೆ ಉನ್ನತ ಕೋರ್ಸ್ ಮಾಡಿದವರಿಗೆ ಕೊರತೆಯಿಲ್ಲ. ಜತೆಗೆ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗವೂ ಇದೆ. ಕೆಲವರು ತಾವು ಮಾಡಿರುವ ಕೋರ್ಸ್ ಬಿಟ್ಟು ಬೇರೆಯೇ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿರುತ್ತಾರೆ.…
ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಹಾಗೂ ಇತರೆ ಖನಿಜಗಳ ಗಣಿಗಾರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಅರುಣ್ .ಕೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ಗಿರೀಶ್. ಆರ್ ಉಪಸ್ಥಿತರಿದ್ದರು.
ಉದ್ಯೋಗ ಅರಸಿ ದೂರದ ಮುಂಬಯಿಗೆ ತೆರಳಿ ಉದ್ಯೋಗದೊಂದಿಗೆ ಗಳಿಕೆಯ ಒಂದಂಶವನ್ನು ಸಮಾಜದ ಏಳಿಗೆಗಾಗಿ ಮೀಸಲಿಡುವ ಶಿವಾಯ ಫೌಂಡೇಶನ್ ಸದಸ್ಯರ ಕಾರ್ಯ ಅನುಕರಣೀಯ ಎಂದು ಆಸ್ಪೆನ್ ಎಸ್ಇಝಡ್ ಮಹಾ ಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಪಡುಬಿದ್ರಿ ಬಂಟರ ಭವನದ ಕೃಷ್ಣ ಸುಧಾಮ ಸಭಾಂಗಣದಲ್ಲಿ ಮುಂಬಯಿ ಶಿವಾಯ ಫೌಂಡೇಶನ್ ವತಿಯಿಂದ ನಡೆಸಲಾದ ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ ಶೆಟ್ಟಿ ಮಾತನಾಡಿದರು. ವೇ. ಮೂ. ಹೆಜಮಾಡಿ ಹರಿದಾಸ ಭಟ್ ಆಶೀರ್ವಚನ ನೀಡಿದರು. ಪಡುಬಿದ್ರಿ ಪಿಎಸ್ಐ ಪ್ರಸನ್ನ ಎಂ. ಎಸ್. ಶುಭ ಹಾರೈಸಿದರು. ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ಪೂಜಾರಿ, ಪಲಿಮಾರು ಗ್ರಾಪಂ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ…
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮಪಂಚಾಯತ್ ನಲ್ಲಿ ಎರಡನೇ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಭಾರತಿ ಸುರೇಶ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಕುವೆಟ್ಟು ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಜನಪ್ರಿಯರಾಗಿರುವ ಭಾರತಿ ಶೆಟ್ಟಿಯವರು ಮುಂಬೈಯ ಥಾಣೆ ಬಂಟ್ಸ್ ನ ಸದಸ್ಯರಾದ ಹೋಟೆಲ್ ಉದ್ಯಮಿ ಸುರೇಶ್ ಕೆ ಶೆಟ್ಟಿಯವರ ಧರ್ಮಪತ್ನಿಯಾಗಿರುತ್ತಾರೆ.















