Author: admin
ಪುಣೆ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ : ಕಾರ್ಯಕಾರಿ ಸಮಿತಿ ನೂತನ ಕಾರ್ಯಾಧ್ಯಕ್ಷರಾಗಿ ಜಗದೀಪ್ ಎ ಶೆಟ್ಟಿ
ಪುಣೆ ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವಿಶ್ವಸ್ಥ ಮಂಡಳಿಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಮಹಾಸಭೆಯು ನವೆಂಬರ್ 21 ಶನಿವಾರದಂದು ದೇವಸ್ಥಾನದ ಪ್ರಾಂಗಣದಲ್ಲಿ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಶ್ರೀ ಸುಭಾಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ದೇವಸ್ಥಾನದ ಮುಂದಿನ ಮಹಾಪೂಜೆ ಮತ್ತು ವಾರ್ಷಿಕೋತ್ಸವದ ತಯಾರಿಯ ಬಗ್ಗೆ ಸಭೆಯಲ್ಲಿ ಚರ್ಚಿಸಿ ರೂಪುರೇಷೆಗಳನ್ನು ಸದಸ್ಯರಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಅಯ್ಯಪ್ಪ ಸೇವಾ ಸಂಘದ ವಿಶ್ವಸ್ಥ ಮಂಡಳಿಗೆ ಪೂರಕವಾಗಿ ಕಾರ್ಯಗೈಯುವ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಿ ಪ್ರಕಟಿಸಲಾಯಿತು. ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ದೇವಸ್ಥಾನದ ಪ್ರಮುಖ ಸೇವಾಕರ್ತರಲ್ಲಿ ಒಬ್ಬರಾದ ಜಗದೀಪ್ ಎ ಶೆಟ್ಟಿಯವರನ್ನು ಸರ್ವನುಮತದಿಂದ ಆಯ್ಕೆ ಮಾಡಲಾಯಿತು. ಉಪ ಕಾರ್ಯಾಧ್ಯಕ್ಷರುಗಳಾಗಿ ವರದ ಕುಮಾರ್ ಎಂ ಶೆಟ್ಟಿ, ಗಣೇಶ್ ವಿ ಶೆಟ್ಟಿ, ಮಹೇಶ್ ಸಿ ಶೆಟ್ಟಿ, ಬಾಲಕೃಷ್ಣ ಕೆ ಶೆಟ್ಟಿ, ಪ್ರಕಾಶ್ ಐ ದೇವಾಡಿಗ, ಶಿವಪ್ರಸಾದ್ ಬಿ ಪೂಜಾರಿ, ದಿನೇಶ್ ಎಸ್ ಶೆಟ್ಟಿ ಅಂಜಾರು, ಆನಂದ್ ಎ ಶೆಟ್ಟಿ, ಕಾರ್ಯದರ್ಶಿಯಾಗಿ ಭಗವಾನ್…
ಶ್ರೀಮತಿ ನಾಗರತ್ನ ದಯಾನಂದ ಶೆಟ್ಟಿ ಇವರ ನೆನಪಿನಲ್ಲಿ ನವೆಂಬರ್ 21 ರಂದು ಹೇರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಮತಿ ಮತ್ತು ಶ್ರೀ ಸಿಎ ಜೀವನ್ ಕುಮಾರ್ ಶೆಟ್ಟಿ ಪಟೇಲರ ಮನೆ ಹೇರೂರು ಇವರು ಸೇವಾ ರೂಪದಲ್ಲಿ ನೂತನವಾಗಿ ನಿರ್ಮಿಸಿರುವ “ಶ್ರೀಮತಿ ನಾಗರತ್ನ ದಯಾನಂದ ಶೆಟ್ಟಿ ಸಭಾಂಗಣ” ಇದರ ಉದ್ಘಾಟನೆಯನ್ನು ಶ್ರೀ ಕೆ ಜಯಪ್ರಕಾಶ್ ಹೆಗ್ಡೆ (ಮಾಜಿ ಸಚಿವರು ಕರ್ನಾಟಕ ಸರಕಾರ) ಹಾಗೂ ಶ್ರೀ ಎಚ್ ದಯಾನಂದ ಶೆಟ್ಟಿ ಪಟೇಲರ ಮನೆ ಹೇರೂರು ಇವರು ಜೊತೆಗೂಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಮತ್ತು ಶ್ರೀ ಸಿಎ ಜೀವನ್ ಕುಮಾರ್ ಶೆಟ್ಟಿ ದಂಪತಿಗಳು, ದೇವಸ್ಥಾನದ ಪ್ರಧಾನ ಅರ್ಚಕರಾದ ಆನಂದ ಭಟ್, ಅನುವಂಶಿಕ ಮೊಕ್ತೇಸರರಾದ ಮಂದರ ಶೆಟ್ಟಿ, ಸುನಿಲ್ ಸೂಡ ದೊಡ್ಡಮನೆ, ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಶೆಟ್ಟಿ ಬಡಾಮನೆ, ಉದ್ಯಮಿ ಶ್ರೀ ಚೇತನ್ ಕುಮಾರ್ ಶೆಟ್ಟಿ ಹೇರೂರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು, ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಸ್ಪರ್ಧೆಯ ಫಲಿತಾಂಶ – ಆರ್ಟಿಸ್ಟಿಕ್ ಪೇರ್ : ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್ ಪ್ರಥಮ ಸ್ಥಾನ, ಆರ್ಟಿಸ್ಟಿಕ್ ಪೇರ್ : ಬಾಲಕಿಯರ ವಿಭಾಗದಲ್ಲಿ ಸಂಜನಾ ಮತ್ತು ಕವನ ದ್ವಿತೀಯ ಸ್ಥಾನ, ರಿದಮಿಕ್ ಪೇರ್ : ಬಾಲಕರ ವಿಭಾಗದಲ್ಲಿ ಪೃಥ್ವಿಚಾರ್ ಮತ್ತು ಕುಮಾರ್ ಪ್ರಥಮ ಸ್ಥಾನ, ರಿದಮಿಕ್ ಪೇರ್ : ಬಾಲಕಿಯರ ವಿಭಾಗದಲ್ಲಿ ಕವನ ಮತ್ತು ಅನನ್ಯ ಪ್ರಥಮ ಸ್ಥಾನ, ಆರ್ಟಿಸ್ಟಿಕ್ ಸಿಂಗಲ್ : ಬಾಲಕರ ವಿಭಾಗದಲ್ಲಿ ಕುಮಾರ್ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಆಳ್ವಾಸ್ನ ಐವರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ…
ಆಳ್ವಾಸ್ ನುಡಿಸಿರಿ, ವಿರಾಸತ್ ಕಾರ್ಕಳ ಘಟಕದ ಆಶ್ರಯದಲ್ಲಿ ನವೆಂಬರ್ 29ರಂದು ಶನಿವಾರ ಸಂಜೆ 5:45ಕ್ಕೆ ಕಾರ್ಕಳದ ಸ್ವರಾಜ್ ಮೈದಾನದಲ್ಲಿ ಅದ್ಧೂರಿ ಸಾಂಸ್ಕೃತಿಕ ವೈಭವ ಜರುಗಲಿದೆ. ಸಮಾರಂಭವನ್ನು ಖ್ಯಾತ ಉದ್ಯಮಿ ಬರೋಡ ಶಶಿಧರ ಶೆಟ್ಟಿ ಉದ್ಘಾಟಿಸಲಿದ್ದು, ಸಮಾರಂಭಕ್ಕೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ನುಡಿಸಿರಿ, ವಿರಾಸತ್ ಘಟಕದ ಗೌರವಾಧ್ಯಕ್ಷ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ವಿದ್ಯಾಸಂಸ್ಥೆಯ ಛೇರ್ಮನ್ ಡಾ. ಮೋಹನ್ ಅಳ್ವ ಉಪಸ್ಥಿತರಿರುವರು ಎಂದು ಕಾರ್ಯಕ್ರಮದ ಆಳ್ವಾಸ್ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ವೈಭವದ ಕಾರ್ಕಳದ ಅದ್ಯಕ್ಷ ವಿಜಯ ಶೆಟ್ಟಿ ಹೇಳಿದರು. ಈ ವರ್ಷದ ನುಡಿಸಿರಿ, ವಿರಾಸತ್ ಸಾಂಸ್ಕೃತಿಕ ವೈಭವವನ್ನು ಕೀರ್ತಿಶೇಷ ಎಂ.ಕೆ. ವಿಜಯಕುಮಾರ್ ಅವರ ಸ್ಮರಣೆಗೆ ಅರ್ಪಿಸಲಾಗಿದೆ. ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಹೆಚ್ಚು ವಿದ್ಯಾರ್ಥಿ ಕಲಾವಿದರು ವಿವಿಧ ಭಾರತೀಯ ಕಲಾ ಪ್ರಕಾರಗಳ ಮನಮೋಹಕ ಪ್ರದರ್ಶನ ನೀಡಲಿದ್ದಾರೆ. ಯೋಗ ದೀಪಿಕಾ, ಅಷ್ಟಲಕ್ಷ್ಮಿ ಶಾಸ್ತ್ರೀಯ ನೃತ್ಯ, ಬಡಗುತಿಟ್ಟು ಯಕ್ಷಗಾನ ‘ಶಂಕರಾರ್ಧ ಶರೀರಿಣಿ’, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್…
ಕಳೆದ 12 ವರ್ಷಗಳಿಂದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಮೂಲಕ ಯಕ್ಷಾಂಗಣ ಸಂಸ್ಥೆ ಯಕ್ಷ ಕಲೆ ಮತ್ತು ಕನ್ನಡ ಭಾಷೆಗೆ ವಿಶೇಷ ಕೊಡುಗೆ ನೀಡುತ್ತಾ ಬಂದಿದೆ. ಕಲಾವಿದರು ಮತ್ತು ಕಲಾ ತಂಡಗಳಿಗೆ ಅದು ನೀಡುತ್ತಿರುವ ಪ್ರೋತ್ಸಾಹ ಮತ್ತು ಗೌರವ ಅನನ್ಯವಾದುದು ಎಂದು ಕದ್ರಿ ಶ್ರೀ ಮಂಜುನಾಥ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಎಜೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ| ಎ.ಜೆ ಶೆಟ್ಟಿ ಹೇಳಿದರು. ಅವರು ಮಂಗಳೂರು ವಿವಿ ಕಾಲೇಜಿನಲ್ಲಿ ಯಕ್ಷಾಂಗಣ ಮಂಗಳೂರು, ಮಂಗಳೂರು ವಿವಿಯ ಡಾ| ಪಿ ದಯಾನಂದ ಪೈ ಮತ್ತು ಶ್ರೀ ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ (ರಿ) ಪುತ್ತೂರು ಇವರ ಸಹಯೋಗದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ಹದಿಮೂರನೇ ವರ್ಷದ ನುಡಿಹಬ್ಬ ತ್ರಯೋದಶ ಸರಣಿ ಕಾರ್ಯಕ್ರಮದಲ್ಲಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ವಿವಿ ಕುಲಸಚಿವರಾದ ಕೆ. ರಾಜು ಮೊಗವೀರ…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29 ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಯುಎಇ ಬಂಟ್ಸ್ ನ ನೂತನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಂಗಳವಾರ ನಡೆದ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಯುಎಇ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಮಾತಾಡಿ, “ನಾನು ಬಂಟರ ಸಂಘಕ್ಕೆ ಬರಲು ಐಕಳ ಹರೀಶ್ ಶೆಟ್ಟಿ ಅವರೇ ಕಾರಣ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳು. ಹೊಸ ತಂಡ ಉತ್ಸಾಹದಿಂದ ಕಾರ್ಯ ನಿರ್ವಹಿಸುವ ಮೂಲಕ ಇಲ್ಲಿ ನಿರ್ಮಾಣ ಆಗಬೇಕಿರುವ ನೂತನ ಕಟ್ಟಡಕ್ಕೆ ಎಲ್ಲರೂ ಧನಸಹಾಯ ನೀಡಬೇಕು” ಎಂದರು. ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಉಮಾ ಕೃಷ್ಣ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಹೆಗ್ಡೆ ಪುಣೆ, ಒಕ್ಕೂಟದ…
ಕುಮಾರಿ ಸುರಕ್ಷಾ ಶೆಟ್ಟಿ ಚಾರ್ಟರ್ಡ್ ಅಕೌಂಟೆಂಟ್ (CA) ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣ
ಬೆಳ್ತಂಗಡಿಯ ಆರಂಬೋಡಿ ಗ್ರಾಮದ ಹಕ್ಕೇರಿ ಕಂಬಳದಡ್ಡ ದಿವಂಗತ ಲಿಂಗಪ್ಪ ಶೆಟ್ಟಿ ಮತ್ತು ಶ್ರೀಮತಿ ಸಂಪಾ ಶೆಟ್ಟಿಯವರ ಸುಪುತ್ರಿ ಕುಮಾರಿ ಸುರಕ್ಷಾ ಶೆಟ್ಟಿಯವರು ಚಾರ್ಟರ್ಡ್ ಅಕೌಂಟೆಂಟ್ (CA) ಅಂತಿಮ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಇವರು ಪ್ರಸ್ತುತ ಬೆಂಗಳೂರಿನ CAGK ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಲಿ ಎಂದು ಹಾರೈಸೋಣ.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ ಸಮಾಜಕ್ಕೆ ರಾಜ್ಯವನ್ನು ಆಳುವ ಸಾಮರ್ಥ್ಯವಿದೆ. ನಮ್ಮ ಬಂಟರು ವಿಶ್ವದೆಲ್ಲೆಡೆ ಇದ್ದಾರೆ. ಅವರೆಲ್ಲಾ ಒಗ್ಗೂಡಿದರೆ ರಾಷ್ಟ್ರ ಸುಭದ್ರವಾಗುತ್ತದೆ“ ಎಂದರು. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಮಾತಾಡಿ, “ಜಿಲ್ಲೆಯ ಬೇರೆಲ್ಲಾ ಸಂಘಗಳಿಗೆ ಮಾದರಿಯಾಗಿ ನಮ್ಮ ಜಿಲ್ಲೆಗೆ ಗೌರವ ತಂದ ಸಂಘ ಏನಾದರೂ ಇದ್ದರೆ ಅದು ಬಂಟರ ಸಂಘ. ಬಂಟ ಸಮಾಜದ ಜೊತೆಗೆ ಎಲ್ಲಾ ಸಮಾಜವನ್ನು ಜೊತೆಗೆ ಕೊಂಡೊಯ್ಯುವ ತಾಕತ್ತು ಈ ಸಂಘಕ್ಕಿದೆ. ಭಿನ್ನಾಭಿಪ್ರಾಯ ಇದ್ದಾಗ ಎಲ್ಲಾ…
ಕುಂದಾಪುರ ತಾಲೂಕು ಯುವ ಬಂಟರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ ನವೆಂಬರ್ 15ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಆರ್ ಎನ್ ಶೆಟ್ಟಿ ಸಭಾಂಗಣದ ಎರಡನೇ ಮಹಡಿಯಲ್ಲಿ ಸಂಘದ ಮಹಾಪೋಷಕರಾದ ಗಿಳಿಯಾರು ಉದಯ್ ಕುಮಾರ್ ಹೆಗ್ಡೆಯವರು ರಿಬ್ಬನ್ ಕತ್ತರಿಸುವ ಮೂಲಕ ಕಚೇರಿಯನ್ನು ಉದ್ಘಾಟನೆ ಮಾಡಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವ ಸಲಹೆಗಾರರು, ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಬಿ ಅರುಣ್ ಕುಮಾರ್ ಶೆಟ್ಟಿ ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ಸಂಘದ ಪೋಷಕ ಸದಸ್ಯರಾದ ಸಟ್ಟಾಡಿ ವಿಜಯ್ ಶೆಟ್ಟಿ, ಸಮತಾ ಮೋಟರ್ಸ್ ಮಾಲೀಕರಾದ ಜಡ್ಡಾಡಿ ವಿಜಯ ಶೆಟ್ಟಿ, ಪ್ರಥಮ ದರ್ಜೆಯ ಗುತ್ತಿಗೆದಾರರಾದ ಯಡಾಡಿ ಮತ್ಯಾಡಿ ಅರುಣ್ ಕುಮಾರ್ ಹೆಗ್ಡೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ…
ಜಗತ್ತಿನ ಯಾವ ವೃತ್ತಿಯಲ್ಲೂ ‘ಕಡಿಮೆ ಶ್ರಮ ದೀರ್ಘ ಫಲ’ ಎಂಬ ಸಮೀಕರಣವಿಲ್ಲ. ಆದರೆ ಕೃಷಿಯಲ್ಲಿ ಮಾತ್ರ ಎರಡು ಮೂರು ತಿಂಗಳ ಶ್ರಮವೇ ಹನ್ನೆರಡು ತಿಂಗಳ ಜೀವನಕ್ಕೆ ಸಾಕಾಗುತ್ತದೆ ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೂತನವಾಗಿ ಪ್ರಾರಂಭಿಸಲಾದ ಆಳ್ವಾಸ್ ಇನ್ಸ್ಟಿಟ್ಯೂಟ್ ಅಗ್ರಿಕಲ್ಚರಲ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದರು. ಬೇರೆ ವೃತ್ತಿಗಳಲ್ಲಿ ಹೂಡಿಕೆಯಷ್ಟೇ ಅಪಾಯವೂ ಇರುತ್ತದೆ. ಆದರೆ ಕೃಷಿಯಲ್ಲಿ ಪ್ರಕೃತಿಯೊಡನೆ ತಕ್ಕಮಟ್ಟಿನ ಜಾಗರೂಕತೆ ಮತ್ತು ಸುಧಾರಿತ ವಿಧಾನಗಳು ಇದ್ದರೆ ನಷ್ಟಕ್ಕಿಂತ ಲಾಭವೇ ಹೆಚ್ಚು. ಇಂದು ಭಾರತ ಕೃಷಿಯ ಮೂಲಕ ದೇಶದ ಜಿಡಿಪಿಗೆ ಸುಮಾರು 18% ಕೊಡುಗೆಯನ್ನು ನೀಡುತ್ತಿದೆ. ಈ ಕೊಡುಗೆ 25–30%ಕ್ಕೆ ಏರಿದರೆ, ಭಾರತ ಕೇವಲ ಅಭಿವೃದ್ಧಿಶೀಲ ರಾಷ್ಟ್ರವಲ್ಲ, ವಿಶ್ವದ ನಂ.1 ಆರ್ಥಿಕ ಶಕ್ತಿಯಾಗುವ ಸಾಮರ್ಥ್ಯವನ್ನು ಸಾಧಿಸುತ್ತದೆ. ಕೃಷಿಯ ಬಲವರ್ಧನೆಯೇ ಭಾರತದ ಭವಿಷ್ಯ ಬಲಿಷ್ಠವಾಗುವ ಮೂಲ. ಮೋದಿಯವರ ಆಡಳಿತದಲ್ಲಿ ಕೃಷಿ ವಲಯವನ್ನು ಆಧುನಿಕ, ಲಾಭದಾಯಕ ಮತ್ತು ಸ್ಪರ್ಧಾತ್ಮಕಗೊಳಿಸುವ ಹಲವು ಮಹತ್ತರ ಕ್ರಮಗಳು…















