Author: admin

ಕುವೆಂಪು, ಶಿವರಾಮ ಕಾರಂತರು ನನ್ನ ಊರಿನ ಸೊಗಡಿಗೆ ಬರಹದ ರೂಪ ಕೊಟ್ಟಿದ್ದಾರೆ. ಅದೇ ರೀತಿ ರಾಜ್ಯದ ಎಲ್ಲ ಪ್ರದೇಶಗಳಲ್ಲಿಯೂ ಆಯಾಯ ಊರಿನ, ನೆಲದ ಸೊಗಡು ಬಿಂಬಿಸುವ ಕಥೆಗಾರರು ಮೂಡಿಬರಬೇಕು ಎಂದು “ಕಾಂತಾರ’ ಖ್ಯಾತಿಯ ನಟ, ನಿರ್ದೇಶಕ ರಿಷಭ್‌ ಶೆಟ್ಟಿ ಹೇಳಿದರು. ಮಂಗಳೂರು ಸಾಹಿತ್ಯ ಉತ್ಸವ ದಲ್ಲಿ ರವಿವಾರ ಮಾತನಾಡಿದ ಅವರು, ಕಾಂತಾರ ದೈವರಾಧನೆಯ ಸಿನೆಮಾವಲ್ಲ. ಅಲ್ಲಿ ಹಿಂದುಳಿದ ವರ್ಗದ ಧ್ವನಿ, ಕಾಡಂಚಿನ ಮಕ್ಕಳ ಕಥೆಯಿದೆ. ಕಾಂತಾರದ ಗೆಲುವು ನಿರೀಕ್ಷೆ ಮಾಡಿರಲಿಲ್ಲ. ರೀಜನಲ್‌ ವಿಚಾರದಿಂದ ಗ್ಲೋಬಲ್‌ ಮಟ್ಟದಲ್ಲಿ ಕನೆಕ್ಟ್ ಆಗಿದ್ದೇವೆ ಎನ್ನುವುದಕ್ಕೆ ಈ ಸಿನೆಮಾ ಉದಾಹರಣೆ ಎಂದರು. ಮಂಗಳೂರು ಕನ್ನಡ ಭಾಷೆಯನ್ನು ಈ ಹಿಂದೆ ಸಿನೆಮಾದ ಹಾಸ್ಯದ ವಿಚಾರದಲ್ಲಿ ಮಾತ್ರ ಬಳಸಲಾಗುತ್ತಿತ್ತು. ಆದರೆ ನನ್ನ ಸಿನೆಮಾದಲ್ಲಿ ಕಾಸರಗೋಡಿನಿಂದ ಕುಂದಾಪುರದ ತನಕದ ಕನ್ನಡವನ್ನು ಬಳಕೆ ಮಾಡಿದ್ದೇನೆ. ಅದು ಮಣ್ಣಿನ ಸೊಗಡನ್ನು ಹೊಂದಿದೆ ಎಂದರು. ಬರಲಿದೆ ಕಾಂತಾರ 1 ಈಗ ಬಂದಿರುವುದು ಕಾಂತಾರ-2. ಇನ್ನು ಬರಬೇಕಾಗಿರುವುದು ಕಾಂತಾರ-1. ಇದಕ್ಕಾಗಿ ಸಂಶೋಧನೆ ಸಾಗುತ್ತಿದೆ. ದೊಡ್ಡ ಬಜೆಟ್‌ ಸಿನೆಮಾ,…

Read More

ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಶಿರ್ವ ಗ್ರಾ.ಪಂ. ವ್ಯಾಪ್ತಿಯ ಪಂಜಿಮಾರು ಬಸ್‌ ನಿಲ್ದಾಣದಿಂದ ರಾಬಿನ್‌ ಬಸ್‌ ನಿಲ್ದಾಣದವರೆಗಿನ ರಸ್ತೆಯಲ್ಲಿ ಹಲವಾರು ಅಪಘಾತಗಳು ನಡೆದು ಜೀವಬಲಿ ಪಡೆಯುತ್ತಿದ್ದು,ಅಪಘಾತ ವಲಯವಾಗಿ ಪರಿಣಮಿಸಿದೆ. ದಿನವೊಂದಕ್ಕೆ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.ವಾಹನ ದಟ್ಟಣೆಯಿರುವ ರಸ್ತೆಯ ರಾಬಿನ್‌ ಬಸ್‌ ನಿಲ್ದಾಣದ ತಿರುವು ಮತ್ತು ಪಂಜಿಮಾರು ಬಸ್‌ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ಆಗಾಗ್ಗೆ ರಸ್ತೆ ಅಪಘಾತಗಳು ನಡೆಯುತ್ತಿದ್ದು ವಾಹನ ಸವಾರರ ಜೀವಕ್ಕೆ ಸಂಚಕಾರವಿದೆ. ವೇಗವಾಗಿ ಬರುವ ವಾಹನಗಳು ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸುತ್ತಿರುತ್ತಿದೆ. ದ್ವಿಪಥ ರಸ್ತೆ ವಿಸ್ತರಣೆ ಯಾವಾಗ? ಕಟಪಾಡಿ-ಶಿರ್ವ 10.5 ಕಿ.ಮೀ. ರಾಜ್ಯ ಹೆದ್ದಾರಿಯ 8.5 ಕಿ.ಮೀ. ರಸ್ತೆ ಕಾಪು ಶಾಸಕರ ಅನುದಾನದ ಸುಮಾರು 7 ಕೋ.ರೂ. ವೆಚ್ಚದಲ್ಲಿ ಪಂಜಿಮಾರು ಫಲ್ಕೆಯವರೆಗೆ 2018ರಲ್ಲಿ ದ್ವಿಪಥಗೊಂಡು ವಿಸ್ತರಣೆಯಾಗಿತ್ತು. ಮಾಣಿಪ್ಪಾಡಿ ಫಲ್ಕೆಯಿಂದ ಶಿರ್ವ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದವರೆಗಿನ ಸುಮಾರು 2 ಕಿ.ಮಿ. ರಸ್ತೆಯು ಅಂಕುಡೊಂಕಾಗಿದ್ದು 4 ವರ್ಷ…

Read More

ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 27ನೇ ವರ್ಷದ ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕೇ¤ಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು.ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ಶಿರ್ವ ನಡಿಬೆಟ್ಟು ಕಂಬಳವು ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆದ ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯಘೋಷಗಳೊಂದಿಗೆ ಮನೆಯ ಕೋಣಗಳನ್ನು ಗದ್ದೆಗಿಳಿಸಲಾಯಿತು. ಹಗ್ಗ ಕಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಮತ್ತು ಸಬ್‌ಜೂನಿಯರ್‌ ವಿಭಾಗದಲ್ಲಿ 48 ಜತೆ ಒಟ್ಟು 78 ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸಿದ್ದವು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನಗೊಂಡಿತು.ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿ ಸುರೇಶ್‌ ಶೆಟ್ಟಿ ಗುರ್ಮೆ, ಶಿರ್ವ ಗ್ರಾ.ಪಂ. ಅಧ್ಯಕ್ಷ ರತನ್‌ ಕುಮಾರ್‌ ಶೆಟ್ಟಿ,…

Read More

ದೀಪಾವಳಿ ಕೆಲವರಿಗೆ ಪಂಚ ದಿನಗಳ ಹಬ್ಬ. ಕೆಲವರಿಗೆ ನಾಲ್ಕಾದರೆ, ಉಳಿದವರಿಗೆ ಮೂರು ದಿನದ ವೈಭವ. ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಸಡಗರ ವಿಸ್ತರಿಸುತ್ತದೆ. ನವರಾತ್ರಿ ಉಕ್ಕಿಸಿದ ನವೋಲ್ಲಾಸ ಮನಸ್ಸಲ್ಲಿನ್ನೂ ಹಿತವಾಗಿ ಹರಡಿಕೊಂಡಿರುವಂತೆಯೇ ಮುಸ್ಸಂಜೆಯ ಮುದ್ದಾದ ಮಳೆ, ಚೂರುಚೂರೇ ಆವರಿಸಿಕೊಳ್ಳುತ್ತಾ ಖುಷಿ ಕೊಡುವ ಚಳಿಯ ನಡುವೆ ಮತ್ತೊಂದು ಸಂಭ್ರಮ ಮೈದಳೆದಿದೆ. ಅದು ಬೆಳಕಿನ ಹಬ್ಬ, ಬದುಕಿನ ಹಬ್ಬ, ಕುಟುಂಬದ ಹಬ್ಬ, ಊರ ಹಬ್ಬವಾದ ದೀಪಾವಳಿ. ನವರಾತ್ರಿಯ ವಿಜಯದಶಮಿಗೂ ದೀಪಾವಳಿ ಆರಂಭದ ಚತುರ್ದಶಿಗೂ ನಡುವೆ ಇರುವುದು ಹದಿನೆಂಟೇ ದಿನದ ಅಂತರ. ಅದರ ನಡುವೆಯೇ ಹಾಲು ಪೈರಿನ ಮೊಳಕೆ ಬೆಳೆದು ಭತ್ತವಾಗುತ್ತದೆ, ಪ್ರಕೃತಿಯಲ್ಲಿ ಹೊಸ ಹೂವು ಅರಳುತ್ತದೆ, ಬದುಕು ಸಡಗರದ ಮತ್ತೊಂದು ಶಿಖರದೆಡೆಗೆ ಹೊರಳುತ್ತದೆ. ದೀಪಾವಳಿ ಕೆಲವರಿಗೆ ಪಂಚ ದಿನಗಳ ಹಬ್ಬ. ಕೆಲವರಿಗೆ ನಾಲ್ಕಾದರೆ, ಉಳಿದವರಿಗೆ ಮೂರು ದಿನದ ವೈಭವ. ಧನ ತ್ರಯೋದಶಿಯಿಂದ ಆರಂಭಿಸಿ ಅಮಾವಾಸ್ಯೆ ದಾಟಿ ಬಿದಿಗೆವರೆಗೂ ಸಡಗರ ವಿಸ್ತರಿಸುತ್ತದೆ. ಈ ಎಲ್ಲ ದಿನಗಳಲ್ಲಿ ಮೆರೆಯವುದು ಭಕ್ತಿ, ಪ್ರೀತಿ ಮತ್ತು ಪ್ರಕೃತಿ.…

Read More

ಕರ್ನಾಟಕ ಜಾನಪದ ಅಕಾಡೆಮಿಯ 2020 ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಡಾ ತಲ್ಲೂರು ಶಿವರಾಮ್ ಶೆಟ್ಟಿಯವರ ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು ಎಂಬ ಕೃತಿ ಆಯ್ಕೆಯಾಗಿವೆ. ಲಯನ್ಸ್ ಜಿಲ್ಲಾ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದ ಡಾ ತಲ್ಲೂರು ಶಿವರಾಮ್ ಶೆಟ್ಟಿ ಮೂಲತಃ ಕುಂದಾಪುರದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ನೆಲೆಸಿ ಹೊಟೇಲು ಉದ್ಯಮದ ಜೊತೆಗೆ ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವರಾಮ್ ಶೆಟ್ಟರು ಬಿಎ ಪದವೀಧರರಾಗಿದ್ದು, ಯಕ್ಷಗಾನ ಪೋಷಕರಾಗಿ ಹವ್ಯಾಸಿ ಕಲಾವಿದರಾಗಿದ್ದಾರೆ. ಇವರು 8 ಕೃತಿಗಳನ್ನು ಬರೆದಿದ್ದಾರೆ. ಹೊಂಬೆಳಕು, ಮುಂಬೆಳಕು, ಕಲಾ ಸಂಚಯ, ಹೊಂಗಿರಣ, ಪಾಥೇಯ ಇವರ ಪ್ರಮುಖ ಕೃತಿಗಳು. ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷ, ಜಿಲ್ಲಾ ಹೊಟೇಲು ಮಾಲೀಕರ ಸಂಘ, ಉಡುಪಿ ರಂಗಭೂಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More

ಐಕ್ಯತೆ, ಒಗ್ಗಟ್ಟು ಮತ್ತು ಏಕತೆಯಿಂದ ಕೂಡಿಕೊಂಡು ಸಂಘಟನೆಗಳು ಆಯೋಜಿಸುವ ಯಾವುದೇ ರೀತಿಯ ಕಾರ್ಯವಿರಲಿ ಅದರಲ್ಲಿ ಯಶಸನ್ನು ಗಳಿಸಲು ಸಾಧ್ಯ. ಪರಸ್ಪರ ಚರ್ಚಿಸಿ ವಿಮರ್ಶೆ ಮಾಡುವ ಮೂಲಕ ಸಂಘಟನಾತ್ಮಕವಾಗಿ ಮತ್ತು ಸಮಾಜಮುಖಿಯಾಗಿ ಕೈಗೊಳ್ಳುವ ಕಾರ್ಯ ಯೋಜನೆಗಳು ಕೈಗೂಡಿದಾಗ ಸಂಘಟನೆಗಳು ಮತ್ತಷ್ಟು ಬಲಗೊಳ್ಳುತ್ತದೆ. ಸಮಾನ ಮತ್ತು ಸಶಕ್ತ ಸಮಾಜವನ್ನು ನಿರ್ಮಿಸಲು ಇಂತಹ ಮೌಲ್ಯಯುತವಾದ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಕ್ರೀಡೆ, ಕಲೆ, ಧಾರ್ಮಿಕ, ಸಾಮಾಜಿಕ, ಅಥವಾ ಇನ್ನಿತರ ಯಾವುದೇ ರೀತಿಯ ಕಾರ್ಯಕ್ರಮಗಳಲ್ಲಿ ಸಮೂಹವಾಗಿ ಮನಸ್ಸುಗಳು ಒಂದುಗೂಡಿದಾಗ ಬಲವರ್ಧನೆಯಾಗುತ್ತದೆ. ಕ್ರೀಡೆ ಅಥವಾ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಮೂಲಕ ಸ್ವಾಭಿಮಾನ, ನೈತಿಕತೆ, ಧೈರ್ಯ, ಶಾಂತಿ, ಮತ್ತು ಸಂತೋಷವನ್ನು ಪ್ರಸಾರ ಮಾಡುವ ಮೂಲಕ ಸಹಬಾಳ್ವೆಯನ್ನು ಬೆಂಬಲಿಸಲು ಇಂತಹ ಕೂಟಗಳ ಆಯೋಜನೆ ಬಹಳ ಮುಖ್ಯ ಮತ್ತು ಮಾನವ ಸಂಪನ್ಮೂಲ ಕ್ರೋಡಿಕರಿಸುವಲ್ಲಿ ವೇದಿಕೆಗಳಾಗುತ್ತವೆ. ಪುಣೆ ತುಳುಕೂಟ ಸುಮಾರು 25 ವರ್ಷಗಳಿಂದ ಪುಣೆ ತುಳುವರ ಸಂಘಟನೆಯಾಗಿ ಉತ್ತಮ ಕಾರ್ಯ ಮಾಡುತ್ತಿದ್ದು, ಯುವ ವಿಭಾಗದ ವತಿಯಿಂದ ಆಯೋಜಿಸಿರುವ ಈ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ…

Read More

ಬಂಟರು ಹೋಟೆಲ್ ಉದ್ಯಮ ಜೊತೆಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ತನ್ನ ಸ್ವಂತ ಪರಿಶ್ರಮದಿಂದ ಯಶಸ್ವಿಯಾಗಿದ್ದಾರೆ. ಇಂತಹ ಕಾರ್ಯಕ್ರಮದಿಂದ ನಮ್ಮವರಿಗೆ ಅವಕಾಶ ಹಾಗೂ ಪ್ರೋತ್ಸಾಹದ ವೇದಿಕೆ ನಿರ್ಮಾಣವಾಗುತ್ತದೆ ಎಂದು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಹೇಳಿದರು. ಇವರು ಬಂಟರ ಸಂಘದ ಎಸ್. ಎಂ. ಶೆಟ್ಟಿ ಸಭಾಂಗಣದಲ್ಲಿ ಜರುಗಿದ ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ವಜ್ರಾಭರಣ ಹಾಗೂ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸಂಘದಿಂದ ಸಂಘಟನೆ, ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದರ್ಶನಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಎಲ್ಲಾ ಬಂಧುಗಳು ಸೇರಿ ಸದುಪಯೋಗ ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ದಿನ ಪೂರ್ತಿ ಜರುಗಿದ ವಜ್ರಾಭರಣ ಹಾಗೂ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮಕ್ಕೆ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ ಕೆ. ಶೆಟ್ಟಿಯವರ ಪತ್ನಿ ಶುಭ ಸಿ. ಶೆಟ್ಟಿ ಬೆಳಗ್ಗೆ ರಿಬ್ಬನ್ ಕತ್ತರಿಸುವುದರೊಂದಿಗೆ…

Read More

ಕುಂದಾಪುರ ಸೇರಿದಂತೆ ಕರಾವಳಿಯ ಕೃಷಿ ಮತ್ತು ರೈತರಿಗೆ ಸಂಬಂಧಪಟ್ಟ ರೈತನೊಂದಿಗೆ ಬಾಂಧವ್ಯವನ್ನು ಗಟ್ಟಿಗೊಳಿಸುವ ವಿಶೇಷ ಆಚರಣೆಯೇ ಹೊಸ್ತು ಎನ್ನುವ ಪರಿಕಲ್ಪನೆ ಇಟ್ಟುಕೊಂಡು ಮಾಡುತ್ತಿರುವಂತಹ ವಿಶೇಷ ಆಚರಣೆ. ಈ ಆಚರಣೆಯಲ್ಲಿ ಮನೆ ಮಂದಿ, ಅಂಗಳವನ್ನು ಸಗಣಿಯ ಮೂಲಕ ಲೇಪನ ಮಾಡಿ, ಸ್ವಚ್ಛಗೊಳಿಸಿ, ಮನೆಯ ಎದುರಿಗಿರುವ ಮೆಟ್ಟಿ ಕಂಬಕ್ಕೆ ಪೂಜೆಯನ್ನ ಸಲ್ಲಿಸಿ, ತಂದಿರುವಂತಹ ಕದಿರನ್ನ ಮನೆಯ ಮುಂಭಾಗದಲ್ಲಿ ಇಟ್ಟು ವಿಶೇಷ ಪೂಜೆಯನ್ನು ಸಲ್ಲಿಸಿ, ಮನೆಯ ಯಜಮಾನ ಅದನ್ನು ಹೊತ್ತು ಹೊಸ ಪಸಲನ್ನು ಮನೆಯ ಒಳಗೆ ತರುವ ವಿಶಿಷ್ಟ ಪರಿಕಲ್ಪನೆಯ ಆಚರಣೆ ಈ ಹೊಸ್ತ್ ಎನ್ನುವ ಸಂಭ್ರಮ ತುಂಬಾ ವರುಷಗಳ ಹಿಂದೆ ಆಚರಿಸಲ್ಪಡುತ್ತಿರುವ ಸಾಂಪ್ರದಾಯಿಕ ಹಬ್ಬವಾಗಿ ಪರಿಣಮಿಸಿದೆ. ಮನೆ ಸೇರಿದಂತೆ ಅಂಗಳದ ಪರಿಸರವನ್ನು ಸ್ವಚ್ಛಗೊಳಿಸಿ ಹೊಸ್ತು ಕದಿರು ಕಟ್ಟುವ ತಯಾರಿ ನಡೆಸುತ್ತಾರೆ. ಹೊಸ್ತ್ ಹಬ್ಬ ಎನ್ನುವ ಪರಿಕಲ್ಪನೆ ಆಧರಿತ ಈ ವಿಶಿಷ್ಟ ಸಂಸ್ಕೃತಿ ಕರಾವಳಿ ಭಾಗದಲ್ಲಿ ಇನ್ನೂ ಆಚರಣೆ ಪ್ರಸ್ತುತವಾಗಿ ನಡೆಸಲ್ಪಡುತ್ತದೆ. ಹೊಸ್ತು ಕದಿರು ಕಟ್ಟುವ ಹಬ್ಬದ ಬೆಳಿಗ್ಗಿನ ಜಾವ ಹತ್ತಿರದ ಗದ್ದೆಯಲ್ಲಿ ಬೆಳೆದ ಭತ್ತದ…

Read More

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಬಹಳ ಮಹತ್ವವಾಗಿ ಅನುಷ್ಠಾನಗೊಳಿಸಲು ವಿವಿಧ ಗ್ರಾಮ ಪಂಚಾಯತ್ ಕಾರ್ಯ ನಿರ್ವಹಣೆ ಸಿದ್ಧಪಡಿಸಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಮೊಳಹಳ್ಳಿ ಇವರ ಸಹಯೋಗದೊಂದಿಗೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ- 2023 ಜರುಗಿತು. ಅದೇ ರೀತಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರಕಾರ ಮೈಸೂರಿನಲ್ಲಿಯೂ ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆಯನ್ನು ನೀಡಿದರು. ಅದೇ ರೀತಿ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಆವರಣದಲ್ಲಿ ಸಂಭ್ರಮದಿಂದ ಜರುಗಿತು. ಗೃಹಿಣಿಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಗ್ರಾಮ ಪಂಚಾಯತ್ ಆವರಣಕ್ಕೆ ಆಗಮಿಸಿ ರಂಗೋಲಿಯನ್ನು ಹಾಕುವುದರ ಮೂಲಕ, ನಾ – ನಾಯಕಿ ಎನ್ನುವ ಘೋಷಣೆಯೊಂದಿಗೆ ಗೃಹಲಕ್ಷ್ಮಿ ಯೋಜನೆಯನ್ನು ಬರಮಾಡಿಕೊಂಡರು. ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಅದೇ ರೀತಿ “ನುಡಿದಂತೆ ನಡೆದಿದ್ದೇವೆ” ಎನ್ನುವ…

Read More

ಈ ಮೀಡಿಯಾ ಕನ್ನಡ ವೆಬ್ ಸೈಟ್ ಇದರ ಅನಾವರಣ ಕಾರ್ಯಕ್ರಮ ಕಾಪುವಿನ ರೋಹಿತ್ ಆಳ್ವ ಹಾಗೂ ಪ್ರಶಾಂತ್ ಶೆಟ್ಟಿ ಮಾಲಕತ್ವದ ಹೋಟೆಲ್ K1 ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಈ ಮೀಡಿಯಾ ವೆಬ್ ಸೈಟ್ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಪಡುಬಿದ್ರಿ ಆಸ್ಪೆನ್ ಎಸ್ ಇ ಝೆಡ್ ನ ಮುಖ್ಯಸ್ಥರಾದ ಶ್ರೀ ಅಶೋಕ್ ಶೆಟ್ಟಿ, ಎಸ್.ಕೆ.ಪಿ.ಎ ಅಧ್ಯಕ್ಷರಾದ ವಿನೋದ್ ಕಾಂಚನ್, ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಸಂಚಾಲಕರಾದ ಮಹಮ್ಮದ್ ಶರಿಫ್ ಉಪಸ್ಥಿತರಿದ್ದು ಸಂಸ್ಥೆಗೆ ಶುಭ ಕೋರಿದರು.

Read More