Author: admin
ದೇಹದ ಭಾಗಗಳಿಗೆ ಕಾಡುವ ಕಾಯಿಲೆಗೆ ಕರಿಬೇವು ಮನೆಮದ್ದು ; ಜಠರ ಮತ್ತು ತಲೆ ಕೂದಲಿನ ಸಮಸ್ಯೆಗೆ ಕರಿಬೇವು ಔಷಧೀಯ ಸಸ್ಯಜನ್ಯ ಸಂಪತ್ತು….!
ನಮ್ಮ ಆಹಾರದಲ್ಲಿ ದಿನವೂ ಇರಲಿ ಕರಿಬೇವು….!” ಆರೋಗ್ಯ ಸಮಸ್ಯೆ ನಿವಾರಣೆಗೆ ಎಂದೂ ಕಾಡುವುದಿಲ್ಲ ದೇಹದ ಉಷ್ಣತೆಯ ಕಾವು….!” ಕರಿಬೇವು ಔಷಧೀಯ ಸಸ್ಯ…! ಕೆ. ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ. ಉಡುಪಿ ಜಿಲ್ಲೆ (ಪತ್ರಕರ್ತರು & ಮಾಧ್ಯಮ ವಿಶ್ಲೇಷಕರು) ನಮ್ಮ ದೈನಂದಿನ ಅಡುಗೆಯಲ್ಲಿ ಬಳಸುವಂತಹ ಕರಿಬೇವು ದೇಹದಲ್ಲಿನ ಪ್ರತಿಕೂಲ ಪರಿಸ್ಥಿತಿ ಹಾಗೂ ಜಠರ ಸಂಬಂಧಿ ಕಾಯಿಲೆಗಳನ್ನು ದೂರ ಮಾಡುವುದರೊಂದಿಗೆ, ಮನುಷ್ಯನ ದೇಹಕ್ಕೆ ಬೇಕಾಗುವಂತಹ ವಿಟಮಿನ್ ಗಳನ್ನು ನೀಡುವಲ್ಲಿ ಸಹಕರಿಯಾಗುತ್ತದೆ. ಮನುಷ್ಯನ ದೇಹದಲ್ಲಿನ ಉಷ್ಣಾಂಶವನ್ನು ಇರುವುದರಿಂದ ತಲೆ ಕೂದಲಿನ ಸಮಸ್ಯೆ ತಲೆ ಹೊಟ್ಟು ನಿವಾರಣೆ, ಹಾಗೂ ಅತಿ ಉಷ್ಣವದಂತಹ ಜಾಗದಲ್ಲಿನ ಭಾಗಗಳನ್ನು ವಿಶೇಷ ರೀತಿಯಲ್ಲಿ ಸಂರಕ್ಷಿಸುವುದರ ಮೂಲಕ ಕರಿಬೇವು ಕಾರ್ಯನಿರ್ವಹಿಸುತ್ತದೆ. ಮನುಷ್ಯನ ದಿನಬಳಕೆ ವಸ್ತುಗಳಲ್ಲಿ ಕರಿಬೇವು ಅಗ್ರಪಂತಿಯಲ್ಲಿ ಇರುವುದರಿಂದ ಕೃಷಿಕರು ಎಚ್ಚೆತವಾಗಿ ತಮ್ಮ ಹಿತ್ತಲು ಗಿಡಗಳಲ್ಲಿ ಕರಿಬೇವನ್ನು ಬೆಳೆಸಿ ಇತರರಿಗೆ ಮಾದರಿ ಕೂಡ ಆಗಿದ ಉದಾರಣೆ, ರಾಜ್ಯದ ವಿವಿಧ ಭಾಗದಲ್ಲಿದೆ ಕರಿಬೇವು ನಮ್ಮ ಹಿತ್ತಲಗಳಲ್ಲಿ ಒಂದು ವೈಜ್ಞಾನಿಕ ಉಪಯೋಗಗಳಲ್ಲಿ ದೈನಂದಿನ ಅಡುಗೆ ಪದಾರ್ಥದಲ್ಲಿ ಕರಿಬೇವು…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’. ಈ ವರ್ಷ ಆಳ್ವಾಸ್ ವಿರಾಸತ್ಗೆ …29ನೇ ವರ್ಷವಾಗಿದ್ದು ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಯಲ್ಲಿ ತೊಡಗಿದ್ದು ‘ಆಳ್ವಾಸ್ ವಿರಾಸತ್ 2023’ ಅತ್ಯಂತ ಯಶಸ್ವಿ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ. ‘ಆಳ್ವಾಸ್ ವಿರಾಸತ್ 2023’ ಕ್ಕೆ ದಿನಾಂಕ ನಿಗದಿಯಾಗಿದ್ದು ಡಿಸೆಂಬರ್ 14ರಂದು ಪ್ರಾರಂಭವಾಗಿ 17ರಂದು ಮುಕ್ತಾಯಗೊಳ್ಳಲಿದೆ. ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ನಾಲ್ಕು ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ಜರುಗಲಿದೆ. ಪ್ರತಿದಿನ ಮುಸ್ಸಂಜೆ 6.00 ಗಂಟೆಗೆ ಪ್ರಾರಂಭವಾಗುವ ಈ ಉತ್ಸವವು ರಾತ್ರಿ 9.30ಕ್ಕೆ ಮುಕ್ತಾಯಗೊಳ್ಳುತ್ತವೆ ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ವಿ ರಾಸತ್ ಕಾರ್ಯಕ್ರಮಗಳು ನಡೆಯಲಿದೆ. ಇದು ಬೃಹತ್ ವೇದಿಕೆಯಿದಾಗಿದ್ದು, 50 ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು ಕಣ್ತುಂಬಿಕೊಳ್ಳಲು ಅನುವಾಗುವಂಥಾ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಡಿಸೆಂಬರ್ 14,…
ಬಹುಮುಖ ಪ್ರತಿಭೆಯ ಖ್ಯಾತ ನೃತ್ಯ ನಿರ್ದೇಶಕ ನವೀನ್ ಶೆಟ್ಟಿ ಪ್ರಸ್ತುತ ತುಳು, ಕನ್ನಡ, ಕೊಂಕಣಿ ಮುಂತಾದ ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿ ಗಮನ ಸೆಳೆಯುತ್ತಿರುವ ಬಹುಮುಖ ಪ್ರತಿಭೆ ನವೀನ್ ಶೆಟ್ಟಿ. ರೂಪೇಶ್ ಶೆಟ್ಟಿ ಜತೆಗೆ ಆರಂಭದಿಂದಲೂ ಇರುವ ಇವರು ಅವರ ಪ್ರತಿಯೊಂದು ಹೆಜ್ಜೆಯಲ್ಲೂ ಜತೆಗಾರರಾಗಿದ್ದಾರೆ. ರೂಪೇಶ್ ಶೆಟ್ಟಿ ಬಿಗ್ಬಾಸ್ಗೆ ಹೋಗಿದ್ದಾಗ ಅವರ ಎಲ್ಲ ವ್ಯವಹಾರಗಳನ್ನೂ ಸಮರ್ಥವಾಗಿ ನಿಭಾಯಿಸಿದವರು. ಇವರ ಬಗ್ಗೆ ಒಂದು ಕಿರುಪರಿಚಯ ಇಲ್ಲಿದೆ. ಶಿವಾನಂದ ಶೆಟ್ಟಿ ಮತ್ತು ಶೋಭಾ ಶೆಟ್ಟಿ ದಂಪತಿಯ ಪುತ್ರರಾಗಿರುವ ಇವರು ಆರಂಭದ ಶಿಕ್ಷಣವನ್ನು ಕಾಸರಗೋಡಿನ ಕೂಡ್ಲು ಹೈಸ್ಕೂಲ್ನಲ್ಲಿ ಮುಗಿಸಿ ಬಳಿಕ ಶಿಕ್ಷಣಕ್ಕಾಗಿ ಮಂಗಳೂರಿಗೆ ಬಂದು ಬೊಕ್ಕಪಟ್ಣ ಕಾಲೇಜಿನಲ್ಲಿ ಪಿಯುಸಿ ಹಾಗೂ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಪದವಿ ಮುಗಿಸಿದರು. ಆಗಲೇ ಅವರಿಗೆ ನೃತ್ಯ ಮತ್ತು ಸಿನೆಮಾದಲ್ಲಿ ಅಪಾರ ಆಸಕ್ತಿ. ಮಂಗಳೂರಿಗೆ ಬಂದ ಬಳಿಕ ಆ ಆಸಕ್ತಿ ಮತ್ತಷ್ಟು ಚಿಗುರಿತು, ಬೆಳೆಯಿತು. ಶಿಕ್ಷಣ ಮುಗಿಸಿದ ಬಳಿಕ ಬೆಂಗಳೂರು, ದುಬಾಯಿಯಲ್ಲಿ ಸ್ವಲ್ಪ ಕಾಲ ಉದ್ಯೋಗ ಮಾಡಿದ ಅವರು ಬಳಿಕ ಊರಿಗೆ ಮರಳಿದರು. ಪತ್ನಿ…
ಸುಮಾರು ಮೂವತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ ಧಾರ್ಮಿಕ ಕಾರ್ಯಕ್ರಮವು ಜೂ. 11 ಮತ್ತು 12 ರಂದು ನಡೆಯಲಿದೆ ಎಂದು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತದ ಕಾಮಗಾರಿಗೆ ಅನುಗುಣವಾಗಿ ಅಗ್ರಸಭೆ, ಮುಖ ಮಂಟಪ ನಿರ್ಮಾಣವಾಗಬೇಕಿದ್ದು ಅದಕ್ಕೆ ಪೂರ್ವಭಾವಿಯಾಗಿ ಪ್ರಸ್ತುತ ಇರುವ ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ಗುಡಿಗಳನ್ನು ವಿಸರ್ಜಿಸಬೇಕಾಗಿದೆ. ಈ ಉದ್ದೇಶದಿಂದ ಅಮ್ಮನ ಅಭಯ ನುಡಿ ಮತ್ತು ಪ್ರಾಜ್ಞರ ಪ್ರಶ್ನಾ ಚಿಂತನೆಯಂತೆ ತಾತ್ಕಾಲಿಕ ಗುಡಿಗಳನ್ನು ನಿರ್ಮಿಸಲಾಗಿದ್ದು ಜೂ. 11ರಂದು ಬೆಳಿಗ್ಗೆ ಗಂಟೆ 8 ರಿಂದ ಚಂಡಿಕಾಯಾಗ ಪ್ರಾರಂಭಗೊಂಡು, 11 ಕ್ಕೆ ಪೂರ್ಣಾಹುತಿ, ಪ್ರಸಾದ ವಿತರಣೆ ನಡೆಯಲಿದೆ. ಜೂ. 12ರಂದು ಅಮ್ಮನ ಗದ್ದುಗೆ…
ಮನುಷ್ಯನ ಜೀವನದಲ್ಲಿ ಸುಖ- ದುಃಖ, ಲಾಭ-ನಷ್ಟ, ನಗು- ಅಳು ಎಲ್ಲವೂ ಸಹಜ. ಇವೆಲ್ಲವೂ ಒಳಗೊಂಡಿದ್ದರೆ ಅದು ಜೀವನ. ಯಾವನೇ ವ್ಯಕ್ತಿಯಾಗಲೀ ತನ್ನ ಬದುಕಿನುದ್ದಕ್ಕೂ ಕೇವಲ ಸುಖ ಅಥವಾ ಕೇವಲ ದುಃಖವನ್ನೇ ಕಂಡಿದ್ದರೆ ಆತನ ಜೀವನದ ನಿಜಾ ರ್ಥದಲ್ಲಿ ಬರಡು. ಇವೆರಡೂ ಸಮ್ಮಿಳಿತ ಗೊಂಡಿದ್ದರೆ ಆ ಬದುಕಿಗೂ ಒಂದು ಅರ್ಥ. ಹಾಗೆಂದು ಸಂಕಷ್ಟಗಳು ಎದುರಾದವೆಂದು ಕೊರಗುವುದಾಗಲೀ ಸುಖಮಯವಾಗಿದೆ ಎಂದು ಹಿಗ್ಗುವುದಾಗಲೀ ಸರಿಯಲ್ಲ. ಸಮಸ್ಯೆ, ಕಷ್ಟಗಳು ಎದುರಾದಾಗ ಅದನ್ನು ಎದುರಿಸುವ ಛಾತಿಯನ್ನು ನಾವು ಬೆಳೆಸಿಕೊಳ್ಳಬೇಕು. ಸಕಾರಾತ್ಮಕ ಮನೋಭಾವದಿಂದ ಮುನ್ನಡೆದಲ್ಲಿ ಯಶಸ್ಸನ್ನು ಕಾಣಬಹುದು. ಒಮ್ಮೆ ಒಬ್ಬಳು ಗೃಹಿಣಿ ಎರಡು ಮಾವಿನ ಹಣ್ಣುಗಳನ್ನು ತಿಂದು ಅದರ ಗೊರಟುಗಳನ್ನು (ಓಟೆ) ತಿಪ್ಪೆ ಗುಂಡಿಗೆ ಬಿಸಾಡಿದಳು. ಆಗ ಒಂದನೆಯ ಗೊರಟು ಯೋಚನೆ ಮಾಡಿತು ನನ್ನ ಬೇರುಗಳು ಭೂಮಿಯೊಳಕ್ಕೆ ಹೋಗುತ್ತವೆ, ಅಂತರ್ಜಲವನ್ನು ಹೀರಿಕೊಳ್ಳುತ್ತವೆ, ತಿಪ್ಪೆಯು ಗೊಬ್ಬರ ಮತ್ತು ಪೌಷ್ಟಿಕಾಂಶ ಕೊಡುತ್ತದೆ, ಇದರಿಂದ ಸಸಿಯಾಗಿ ಸಣ್ಣ ಗಿಡವಾಗುತ್ತೇನೆ, ಕಾಲಾಂತರದಲ್ಲಿ ದೊಡ್ಡ ಮರವಾಗಿ ಬೆಳೆಯುತ್ತೇನೆ. ಮಾವಿನ ಸೊಪ್ಪು, ರುಚಿಕರವಾದ ಮಾವಿನ ಹಣ್ಣನ್ನು ಕೊಡುತ್ತೇನೆ. ನೂರಾರು ವರ್ಷಗಳು ಬದುಕುತ್ತೇನೆಂದು ಯೋಚಿಸಿ…
ಚಂದನವನದಲ್ಲಿ ಉತ್ತಮ ಪಾತ್ರಗಳ ನಿರೀಕ್ಷೆಯಲ್ಲಿರುವ ಸುಂದರ ಮುದ್ದು ಮುಖದ ಚೆಲುವೆ ನಟಿ ಶಿಲ್ಪಾ ಆರ್ ಶೆಟ್ಟಿ. ಒಳ್ಳೆ ನಿರ್ಮಾಣ ಸಂಸ್ಥೆ ಅಥವಾ ಪಾತ್ರವು ಶಕ್ತಿಶಾಲಿಯಾಗಿದ್ದರೆ ಎಲ್ಲದಕ್ಕೂ ಸೈ ಎಂದು ಪ್ರಸಕ್ತ ಚಿತ್ರರಂಗಕ್ಕೆ ಬರುವ ಕಲಾವಿದೆಯರು ಹೇಳುವುದುಂಟು. ಅಪರೂಪ ಎನ್ನುವಂತೆ ನಮ್ಮ ಕರ್ನಾಟಕ ಸಂಸ್ಕ್ರತಿ ಬಿಂಬಿಸುವಂತ ಪಾತ್ರಗಳು ಬಂದರೆ ಮಾಡುತ್ತೇನೆ. ಯಾವುದೇ ದೊಡ್ಡ ಬ್ಯಾನರ್ ಸಿಗುತ್ತದೆ ಅಂಥ ಬೇರೆ ತರಹದ ರೋಲ್ ಮಾಡಲಾರೆ. ಇದು ಹೊಸ ಪ್ರತಿಭೆ ಮಂಗಳೂರು ಮೂಲದ ನಿರಾಡಂಬರ ಚೆಲುವೆ ಶಿಲ್ಪಾ ಆರ್ ಶೆಟ್ಟಿ ಅವರ ಖಡಕ್ ನುಡಿಗಳು. ವೃತ್ತಿಯಲ್ಲಿ ಬ್ಯೂಟಿಷಿಯನ್ ಆಗಿ, ಆದರ್ಶ ಗೃಹಿಣಿಯಾಗಿದ್ದುಕೊಂಡು ಹಲವಾರು ತುಳು ನಾಟಕಗಳಲ್ಲಿ ನಟಿಸಿ, ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್, ಶ್ರೀನಗರ ಕಿಟ್ಟಿ ಅಭಿನಯದ ಗೌಳಿ, ಕಿಶೋರ್ ಡಿ ಶೆಟ್ಟಿ ನಿರ್ಮಾಣದ ಅಕ್ಷಮ್ಯ ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಗತ ವೈಭವ ಸಿನಿಮಾದಲ್ಲಿ ವಿಶಿಷ್ಟ ಪಾತ್ರದಲ್ಲಿ ಅಭಿನಯಿಸಿದ್ದು ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶಿಲ್ಪಾ ಅವರು ಹಲವಾರು ತುಳು ಚಿತ್ರಗಳಲ್ಲೂ ಅಭಿನಯಿಸಿದ್ದು…
ನಮ್ಮ ಸಂಘದ ಮೂಲಕ ಪ್ರತೀ ವರ್ಷ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸುತ್ತಿದ್ದು ನಮ್ಮ ಸಂಘದ ಕ್ರೀಡಾ ಸಮಿತಿ ಈ ಕಾರ್ಯಕ್ರಮವನ್ನು ಬಹಳ ಶಸ್ತುಬದ್ಧವಾಗಿ ಆಯೋಜಿಸುತ್ತಿದ್ದು ಅಭಿನಂದನೀಯವಾಗಿದೆ . ಇಂದಿನ ಬದಲಾದ ಕಾಲಘಟ್ಟದಲ್ಲಿ ಕ್ರೀಡಾಕೂಟದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾಗಿದ್ದು ಮುಖ್ಯವಾಗಿ ಯುವ ಪೀಳಿಗೆಗೆ ಉತ್ಸಾಹ ತುಂಬುವಲ್ಲಿ ಪೂರಕವಾಗಿದೆ . ನಮ್ಮ ದಿನನಿತ್ಯದ ಜೀವನದಲ್ಲಿ ನಡಿಗೆ ,ಯೋಗ ,ವ್ಯಾಯಾಮ ,ಪ್ರಾಣಾಯಾಮಗಳನ್ನೂ ಅಳವಡಿಸಿಕೊಳ್ಳುವುದರಿಂದ ನಮ್ಮ ಜೀವನ ಶೈಲಿ ಬದಲಾಗುವುದರೊಂದಿಗೆ ನಮ್ಮ ದೈಹಿಕ ,ಮಾನಸಿಕ ಆರೋಗ್ಯದೊಂದಿಗೆ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ. ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಉತ್ತಮ ಕೊಡುಗೆ ನೀಡುವಂತಾಗುತ್ತದೆ ಎಂದು ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಅಭಿಪ್ರಾಯಪಟ್ಟರು . ಅವರು ಜ . ೧೫ ರಂದು ನಗರದ ಎಸ್ . ಪಿ . ಕಾಲೇಜು ಮೈದಾನದಲ್ಲಿ ನಡೆದ ಪುಣೆ ಬಂಟರ ಸಂಘದ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಇಂದಿನ ಕ್ರೀಡಾಕೂಟದಲ್ಲಿ ಮಕ್ಕಳು ಉತ್ಸಾಹಪೂರ್ಣವಾಗಿ ಕ್ರೀಡಾಸ್ಪರ್ಧೆಗಳಲ್ಲಿ…
ಒಮ್ಮೆ ನೋಡ ಬನ್ನಿ ,ರಾಷ್ಟ್ರಕವಿಯ ತವರೂರು….! ಹಚ್ಚ ಹಸಿರಿನ ಮಧ್ಯೆ ನಿಸರ್ಗ ರಮಣೀಯ ತಾಣ – ಕುಪ್ಪಳ್ಳಿ….! ಮಲೆನಾಡಿನ ಸೌಂದರ್ಯದ ಸೊಬಗು ಕುವೆಂಪು ಹುಟ್ಟೂರು ಕುಪ್ಪಳ್ಳಿಯ ರಮಣೀಯ ಸೊಬಗು….! ಸಾಹಿತಿಗಳ ಕಣ್ಣಂಚಿನಲ್ಲಿ ಮನಮೋಹಕವಾದ ಪ್ರವಾಸೋದ್ಯಮದ ಬೆರಗು….! ಭವ್ಯ ಮಲೆನಾಡು -ಕುಪ್ಪಳ್ಳಿ…! ✍ಕೆ .ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ. ಉಡುಪಿ ಜಿಲ್ಲೆ (ಪತ್ರಕರ್ತರು &ಅಂಕಣಕಾರರು) Mob:9632581508 ಸುದ್ದಿ@ ಶಿವಮೊಗ್ಗ :- ಸುಂದರ ಹಚ್ಚ ಹಸಿರಿನ ವಾತಾವರಣ ಅದುವೇ ಮಲೆನಾಡು ,ಮಲೆನಾಡಿಗೆ ಹೊಂದಿಕೊಂಡಂತೆ ಇರುವ ತೀರ್ಥಹಳ್ಳಿ ಸಮೀಪದ ಹೊಸಳ್ಳಿ ಇಡೀ ಜಗತ್ತಿಗೆ ಪ್ರಸಿದ್ಧಿ .ರಾಷ್ಟ್ರಕವಿ ಕುವೆಂಪು ಅವರ ನೀಡಿದ ಧೀಮಂತ ಕ್ಷೇತ್ರವೇ ಈ ಕುಪ್ಪಳ್ಳಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ನೂರಾರು ಜನರು ದಿನಲೂ ಭೇಟಿಕೊಡುತ್ತಿರುವ ಶೈಕ್ಷಣಿಕ ಪ್ರವಾಸೋದ್ಯಮ ಕ್ಷೇತ್ರವಾಗಿ ಮಾರ್ಪಟ್ಟಿದೆ.ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎನ್ನುವ ಶಿರೋನಾಮೆಯೊಂದಿಗೆ ಕುಪ್ಪಳ್ಳಿ ಜಗದಗಲ ಪ್ರಸಿದ್ಧಿ ಆಗುವುದರೊಂದಿಗೆ ಐತಿಹಾಸಿಕ ತಾಣವಾಗಿ ಮಾರ್ಪಟ್ಟಿರುವುದು ನಮ್ಮ ಹೆಮ್ಮೆಯ ಸಂಗತಿ. ಕುಪ್ಪಳಿ – ಕರ್ನಾಟಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಒಂದು…
ಮುಂಬಯಿ ಬಂಟರ ಸಂಘದ ಮಾಜಿ ಕಾರ್ಯದರ್ಶಿ, ಸದಾಶಿವ ಶೆಟ್ಟಿ & ಕೊ. ಚಾರ್ಟರ್ಡ್ ಅಕೌಂಟೆಂಟ್ಸ್ ಹಾಗೂ ಶೆಟ್ಟಿ & ಬಾಳ ಚಾರ್ಟರ್ಡ್ ಅಕೌಂಟೆಂಟ್ಸ್ ಮಾಲಕರು ಆದಂತಹ ಸಮಾಜ ಸೇವಕ ಸಿ.ಎ. ಸದಾಶಿವ ಶೆಟ್ಟಿ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ. ಪ್ರಸ್ತುತ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉನ್ನತ ಶಿಕ್ಷಣದ ಮಹತ್ತರ ಯೋಜನೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಈ ಹಿಂದೆ ಒಕ್ಕೂಟದ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಭಾರತೀಯ ಸೇನೆ ಎಂದಾಕ್ಷಣ ಏನೋ ರೋಮಾಂಚನ. ಗಡಿ ನುಸುಳುವ ವೈರಿಗಳ ಗುಂಡಿಗೆ ಎದೆಯೊಡ್ಡಿ ಪ್ರತಿದಾಳಿ ನಡೆಸುತ್ತ ಭಾರತಾಂಬೆಯ ರಕ್ಷಣೆಯೊಂದೇ ತನ್ನ ಧ್ಯೇಯವಾಗಿರಿಸಿಕೊಂಡು ತಮ್ಮ ಬದುಕನ್ನು ಮುಡಿಪಿಟ್ಟು ಹೋರಾಟ ಮಾಡುವ ಮೂಲಕ ದೇಶದ ಜೊತೆಗೆ ನಮ್ಮೆಲ್ಲರನ್ನು ಕಾಯುವ ಸೈನಿಕರ ಸೇವೆ ಅನನ್ಯ. ಹತ್ತೊಂಬತ್ತು ವರ್ಷಗಳ ಕಾಲ ಭೂ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ತಾಯ್ನಾಡಿಗೆ ಸೇವೆ ಸಲ್ಲಿಸಿರುವ ದಿಟ್ಟತನದ ವೀರ ಜಗನ್ನಾಥ ಶೆಟ್ಟಿ ಮಾಣಿ. 12-07-1980 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ರಘುರಾಮ ಶೆಟ್ಟಿ ಹಾಗೂ ಗುಲಾಬಿ ಶೆಟ್ಟಿ ದಂಪತಿಗಳ ಪುತ್ರನಾಗಿ ಜನಿಸಿದ ಜಗನ್ನಾಥ ಶೆಟ್ಟಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಣಿಯಲ್ಲಿ ಪೂರ್ಣಗೊಳಿಸಿ ತಮ್ಮ ಪ್ರೌಢಶಾಲಾ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಮಾಣಿ ಹಾಗೂ ತಮ್ಮ ಪದವಿಪೂರ್ವ ಶಿಕ್ಷಣವನ್ನು ಜೂನಿಯರ್ ಕಾಲೇಜು ಕೊಂಬೆಟ್ಟಿನಲ್ಲಿ ಪಡೆದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ_ಪದವಿ ಪಡೆದರು. ಹೈಸ್ಕೂಲ್ ಶಿಕ್ಷಣದ ಸಂದರ್ಭದಲ್ಲೇ ಕ್ರೀಡೆಯತ್ತ ಒಲವನ್ನಿಟ್ಟುಕೊಂಡಿದ್ದ ಜಗನ್ನಾಥ ಶೆಟ್ಟಿ ಕಬಡ್ಡಿ ವಾಲಿಬಾಲ್ ಹಾಗೂ ಫುಟ್ಬಾಲ್…















