Author: admin
ಯುವ ಬಂಟರ ಸಂಘ (ರಿ.) ಕಂಬಳಕಟ್ಟ-ಕೊಡವೂರು ಇದರ ದಶಮ ಸಂಭ್ರಮವು ಕಂಬಳಕಟ್ಟ ಕಂಬಳಮನೆ ವಠಾರದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಪ್ರಾರಂಭಗೊಂಡಿತು. ದಶಮಾನೋತ್ಸವ ಸಮಾರಂಭದ ಉದ್ಘಾಟನಾ ಸಮಾರಂಭವು ಮಜಲುಮನೆ ಶ್ರೀಮತಿ ವನಜ ನಾರಾಯಣ ಶೆಟ್ಟಿ ವೇದಿಕೆಯಲ್ಲಿ ಸಮಾರಂಭದ ಅತಿಥಿ ಅಭ್ಯಾಗತರೊಡಗೂಡಿ ದೀಪ ಪ್ರಜ್ವಲನೆ ಮಾಡವುದರ ಮೂಲಕ ನೆರವೇರಿಸಿದರು. ಸಮಾರಂಭದ ಮುಖ್ಯ ಅತಿಥಿ ತುಳುನಾಡಿನ ಸಂಸೃತಿಯ ವಿಮರ್ಶಕರು,ನಟ -ನಿರ್ಮಾಪಕ ಶ್ರೀ ತಮ್ಮಣ್ಣ ಶೆಟ್ಟಿ ಮಾತನಾಡಿ ದೈವಾರಾಧನೆಯು ಮೂಲ ಸ್ವರೂಪ ಕಳಕೊಂಡಿದೆ, ತುಳುನಾಡ ಆಚಾರ ವಿಚಾರಗಳು ಈಗ ಶೋಕಿ ಹಾಗೂ ಶೋಪೀಸ್ ವಸ್ತುಗಳಾಗಿ ಬಿಟ್ಟಿವೆ.ಇವುಗಳನ್ನು ಸುವ್ಯವಸ್ಥಿತಗೊಳಿಸಲು ಬಂಟಸಮಾಜದ ಪ್ರತಿಯೋರ್ವನು ಚಿಂತಿಸುವಂತಾಗಬೇಕು ಎಂದರು. ಇನ್ನೋರ್ವ ಮುಖ್ಯ ಅತಿಥಿ ನಮ್ಮ ಕುಡ್ಲ ವಾಹಿನಿಯ ವಾರ್ತಾವಾಚಕಿ ಡಾl ಪ್ರಿಯಾ ಹರೀಶ್ ಶೆಟ್ಟಿ ಮಾತಾನಾಡಿ ವೈವಿದ್ಯತೆಯಿಂದ ಕೂಡಿದ ಬಂಟರು ಎಲ್ಲಾ ಕ್ಷೇತ್ರಗಳಲ್ಲಿನ ಸಾಧಕರು. ನಮ್ಮ ಸಮಾಜದ ಅಭಿಮಾನ, ಆಚಾರವಿಚಾರಗಳನ್ನು ಇಂದಿನ ಮಕ್ಕಳಲ್ಲಿ ತಿಳಿಯಪಡಿಸಬೇಕಾಗಿದೆ ಎಂದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ…
ನಾವು ನಿಂತ ತುಂಡು ನೆಲ ನಮ್ಮದಾಗಬೇಕು ಎನ್ನುವುದು ಪ್ರತಿಯೊಬ್ಬರ ಕನಸು ಅದು ಆತ್ಮಕಂಟಿದ ತಪನೆ! ಆ ಕನಸುಗಳು ನಸಾಗುವಾಗ ಆ ಕುಟುಂಬದವರ ಕಣ್ಣಲ್ಲಿ ಆನಂದ ಭಾಷ್ಪ! ಅವರ ನೆಮ್ಮದಿಯ ನಿಟ್ಟುಸಿರು ಹೊರ ಹಾಕುವ ಆಶಿರ್ವಾದದ ಭಾವವೇ ನಮ್ಮ ನೆತ್ತಿಕಾಯುತ್ತದೆ. ಕೋಡಿ ಕನ್ಯಾನ ಮತ್ತು ಹೊಸಬೆಂಗ್ರೆಯ ಜನರ ಭೂಮಿ ಹಕ್ಕಿನ ಕನಸು ಮೊನ್ನೆ ನನಸಾಯಿತು. ಒಟ್ಟು ನೂರಾ ಎಪ್ಪತ್ತೆರಡು ಕುಟುಂಬದ ಕೈಗೆ ಹಕ್ಕು ಪತ್ರಗಳು ದಕ್ಕಿದವು. ಆ ನೆಲದ ಪಹಣಿಯಲ್ಲಿ ಮೊನ್ನೆ ಮೊನ್ನೆ ತನಕ ಸರ್ಕಾರ ಎಂದಿದ್ದರೆ ನಾಳೆಯಿಂದ ಆಯಾ ಕುಟುಂಬದ ಸದಸ್ಯರ ಹೆಸರಿರುತ್ತದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಶಕ್ತಿ. ಅದೆಲ್ಲದಕ್ಕೂ ಕಾರಣವಾದದ್ದು ಕುಂದಾಪುರದ ಶಾಸಕ ಹಾಲಾಡಿ. ಮತ್ತು ಸಚಿವ ಕೋಟ. ಈ ಶ್ರೀನಿವಾಸ ಧ್ವಯರಿಗೆ ಅಭಿಮಾನದ ನಮಸ್ಕಾರಗಳು. ಹಿಂದೆ 1993 ರಲ್ಲೇ ಉಡುಪಿ ಪಡುಕರೆಯ ಜನತೆಯ ಬೂಮಿ ಹಕ್ಕಿನ ಬಗ್ಗೆ ಕಾರ್ಯನಿರತರಾಗಿ ಅದರಲ್ಲಿ ಯಶ ಕಂಡವರು ಉಡುಪಿ ಜಿಲ್ಲೆ ಕಂಡ ಮತ್ತೊಬ್ಬ ಅದ್ಭುತ ರಾಜಕಾರಣಿ ಯು.ಆರ್.ಸಭಾಪತಿ. ಮುಂದೆ ಸಭಾಪತಿಯವರನ್ನ ಜಿಲ್ಲೆಯೇ ಮರೆತು…
ಫೆ. 19ರಂದು ಮುಂಬಯಿಯಲ್ಲಿ ಚಿಣ್ಣರಬಿಂಬದ ಇಪ್ಪತ್ತನೆಯ ವಾರ್ಷಿಕ ಮಕ್ಕಳ ಉತ್ಸವ ಪ್ರತಿಭಾ ಸ್ಪರ್ಧೆ, ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ
ಮುಂಬಯಿ:- ಚಿಣ್ಣರಬಿಂಬದ ಇಪ್ಪತ್ತನೆಯ ವರ್ಷದ ಮಕ್ಕಳ ಉತ್ಸವವು ದಿನಾಂಕ 19/2/2023ರ ಭಾನುವಾರದಂದು ಬೆಳಿಗ್ಗೆ 10ರಿಂದ ಕುರ್ಲಾ ಪೂರ್ವದ ಬಂಟರ ಭವನದ ರಾಧಾಬಾಯಿ.ಟಿ.ಭಂಡಾರಿ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿದ್ದು ಚಿಣ್ಣರ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅಂದು 3 ಗಂಟೆಯಿಂದ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು ಆಲ್ ಕಾರ್ಗೋ ಲಾಜಿಸ್ಟಿಕ್ಸ್ನ ಆಡಳಿತ ನಿರ್ದೇಶಕರಾಗಿರುವ ಶ್ರೀ ಶಶಿಕಿರಣ್ ಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ. ವಿ. ಸುನಿಲ್ ಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೇರಂಬ ಇಂಡಸ್ಟ್ರೀಸ್ನ ಆಡಳಿತ ನಿರ್ದೇಶಕರಾದ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಅವರು ಆಗಮಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ಬಂಟರ ಸಂಘದ ಅಧ್ಯಕ್ಷರಾಗಿರುವ ಶ್ರೀ ಚಂದ್ರಹಾಸ.ಕೆ.ಶೆಟ್ಟಿ, ಬಂಟರ ಸಂಘದ ಗೌ.ಪ್ರಧಾನ ಕಾರ್ಯದರ್ಶಿಗಳಾಗಿರುವ ಡಾ.ಆರ್.ಕೆ.ಶೆಟ್ಟಿ, ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕರಾದ ಚಂದ್ರಶೇಖರ ಪಾಲೆತ್ತಾಡಿ, ಬಾಬಾಸ್ ಗ್ರೂಪ್ ಆಫ್ ಕಂಪನೀಸ್ ನ ಆಡಳಿತ ನಿರ್ದೇಶಕರಾಗಿರುವ ಶ್ರಿ ಮಹೇಶ್ ಎಸ್.ಶೆಟ್ಟಿ…
ಗಣರಾಜ್ಯೋತ್ಸವದ ಪ್ರಯುಕ್ತ 2023 ರ ಜನವರಿ 26 ರಂದು ರಾಷ್ಟ್ರರಾಜಧಾನಿ ದೆಹಲಿಯ ಇಂಡಿಯಾ ಗೇಟ್ ಮತ್ತು ರಾಷ್ಟ್ರಪತಿ ಭವನದ ನಡುವಿನ ಕರ್ತವ್ಯ ಪಥದಲ್ಲಿ ನಡೆದ ಕರ್ನಾಟಕದ ಮೂವರು ಮಾತೆಯರ ಕಥನ ಬಿಂಬಿಸುವ ಮನ ಮುಟ್ಟುವ ಮನಸ್ಸು ಅರಳುವ, ಸ್ಪೂರ್ತಿ ತುಂಬುವ ನಾರಿ ಶಕ್ತಿ ಸ್ತಬ್ಧ ಚಿತ್ರ ಪಥಸಂಚಲನದ ಭವ್ಯ ಮೆರವಣಿಗೆಯ ಪೆರೇಡ್ ಗೆ ಆಯ್ಕೆ ಆಗಿರುವುದನ್ನು ವಾರ್ತಾ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಟ್ಯಾಬ್ಲೊ ತಯಾರಾಗಿಸಿದೆ. ನಾರಿ ಶಕ್ತಿಯ ಪರಿಚಯ= ಅಜಾದಿಕಾ ಅಮೃತ ಮಹೋತ್ಸವದ ಹೊತ್ತಲ್ಲಿ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಪದ್ಮ ಶ್ರೀ ಪುರಸ್ಕೃತ ನಾರಿ ಶಕ್ತಿ ಪರಿಕಲ್ಪನೆಯಲ್ಲಿ ಸ್ತಬ್ಧ ಚಿತ್ರಸಿದ್ದಗೊಳಿಸಿ ಈ ಮೂಲಕ ಭಾರತದ ನಾರಿ ಅದರಲ್ಲೂ ಕರ್ನಾಟಕದ ನಾರಿ ಶಕ್ತಿಯ ಮೂಲಬೇರನ್ನು ಪ್ರಪಂಚಕ್ಕೆ ತೋರಿಸುವ ಕೆಲಸ ಆಗಿದೆ. ಈ ಸಲ ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಿಶಕ್ತಿ ಮುಖ್ಯ ಥಿಮ್ ಆಗಿದ್ದು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರ ಕುರಿತು ಟ್ಯಾಬೋಗಳ ಗಮನಸೆಳೆದಿದೆ. ಸ್ತಬ್ಧ ಚಿತ್ರದಲ್ಲಿ ಮುಖ್ಯವಾಗಿ 3 ಭಾಗಗಳಿದ್ದು…
ಮೀರಾ ಭಯಂಧರ್ ಪರಿಸರದ ಹೆಸರಾಂತ ಸಮಾಜ ಸೇವಕಿ, ವಿಧ್ಯಾಧರ ಕನ್ನಡ ಪ್ರತಿಷ್ಠಾನ ಜಯದೇವಿ ತಾಯಿ ಲಿಗಾಡೆ ಪ್ರಶಸ್ತಿ ಪುರಸ್ಕ್ರತೆ, ಬಂಟರ ಸಂಘ ಮುಂಬೈ ಇದರ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ, ಶ್ರೀ ಶಕ್ತಿ ಫೌಂಡೇಶನ್ ಮಹಾರಾಷ್ಟ್ರದ ಅಧ್ಯಕ್ಷೆ , ಕನ್ನಡ ಜಾನಪದ ಪರಿಷತ್ ನ ಮಹಾರಾಷ್ಟ್ರದ ಮಹಿಳಾ ಕಾರ್ಯಾಧ್ಯಕ್ಷೆಯಾಗಿ ಮಾತ್ರವಲ್ಲದೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಪುರಸ್ಕೃತೆಯಾಗಿ ಸಕ್ರೀಯವಾಗಿ ನಿರಂತರ ಸಮಾಜ ಸೇವೆಗೈಯ್ಯುತ್ತಿರುವ ಸಚ್ಚೇರಿಗುತ್ತು ಶಾಲಿನಿ ಎಸ್. ಶೆಟ್ಟಿಯವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಅವಾರ್ಡ್ ನ್ನು ಪಡೆದಿದ್ದಾರೆ. ಅಂಧೇರಿ ಕಂಟ್ರಿ ಕ್ಲಬ್ ಇಲ್ಲಿ ನಡೆದ ಸಮಾರಂಭದಲ್ಲಿ ದಾದಾ ಸಾಹೇಬ್ ಪಾಲ್ಕೆ ಮೆಮೋರಿಯಲ್ ಫೌಂಡೇಶನ್ ವತಿಯಿಂದ ಈ ಪ್ರಶಸ್ತಿಯನ್ನು ಇದರ ಉನ್ನತ ಅಧಿಕಾರಿಗಳು ಪ್ರಶಸ್ತಿಯನ್ನು ಪ್ರಧಾನಿಸಿದರು. ಮಹಾರಾಷ್ಟ್ರದಲ್ಲಿ ತುಳು – ಕನ್ನಡಿಗರ ಪರವಾಗಿ ಬಂಟ ಮಹಿಳೆಯೋರ್ವರು ಇಂತಹ ಮಹಾನ್ ಪ್ರಶಸ್ತಿಗೆ ಭಾಜನರಾಗಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಷಯ.
ದೇಹದಲ್ಲಿನ ನೀರಿನಂಶವನ್ನು ದಿನಪೂರ್ತಿ ಶೇಖರಿಸುವ ಕಲ್ಲಂಗಡಿ ಹಣ್ಣು….! ಜೀವಕೋಶ ಮತ್ತು ವಿಟಮಿನ್ ಕ್ಯಾಲೊರಿಯ ಜೀವಸತ್ವವನ್ನು ಉತ್ಪಾದಿಸುವ ಜ್ಯೂಸ್ ಬಾಕ್ಸ್ – ಕಲ್ಲಂಗಡಿ ಹಣ್ಣು ….!
ಕೆ. ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ ,ಉಡುಪಿ ಜಿಲ್ಲೆ. ಕಲ್ಲಂಗಡಿ ಹಣ್ಣಿನ ವಿಶೇಷ ಗುಣಲಕ್ಷಣಗಳು ಸಮಾಜದ ವಿಶಿಷ್ಟ ಪ್ರಾಕೃತಿಕ ಸೌಂದರ್ಯವನ್ನು ಹೊಂದುವುದರೊಂದಿಗೆ ದೇಹದಲ್ಲಿನ ನೀರಿನಂಶವನ್ನು ಶೇಖರಿಸುವುದು ಅದರ ಗುಣಲಕ್ಷಣವಾಗಿದೆ.ಬೇಸಿಗೆಯಲ್ಲಿ ತಿನ್ನುವುದರಿಂದ ದೇಹದಲ್ಲಿನ ಖನಿಜಾಂಶ ಮತ್ತು ತೇವಾಂಶವನ್ನು ಕ್ರೋಡೀಕರಿಸುತ್ತದೆ ಕಲ್ಲಂಗಡಿ ಹಣ್ಣು ರಸಭರಿತ ಹಣ್ಣು ಎಂಬುದು ಎಲ್ಲರಿಗೂ ಗೊತ್ತಿದೆ. ಹಣ್ಣುಗಳಲ್ಲಿ ಕಲ್ಲಂಗಡಿ ಹಣ್ಣನ್ನು ಜನರು ಹೆಚ್ಚು ಇಷ್ಟಪಟ್ಟು ಸೇವಿಸುತ್ತಾರೆ. ಹೆಚ್ಚು ಸಿಹಿಯಾಗಿರುವುದರ ಜತೆಗೆ ಆಂಟಿ ಆಕ್ಸಿಡೆಂಟ್ಗಳನ್ನು ಹೊಂದಿಹರುತ್ತದೆಜೀವಸತ್ವ ಮತ್ತು ಖನಿಜಾಂಶಗಳನ್ನು ಕ್ಯಾಲೊರಿಯ . ಜತೆಗೆ ಜೀವಸತ್ವಗಳು, ಖನಿಜಗಳು ಮತ್ತು ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿ ಕ್ಯಾಲೊರಿ ಕಡಿಮೆ ಇರುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಎ ಅಂಶವಿರುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಂದ ಮಾತ್ರಕ್ಕೆ ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಯಾವುದೇ ಆಹಾರವಾಗಲಿ ಹಿತಮಿತವಾಗಿ ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ. ತಿನ್ನಲು ರುಚಿಯಾಗಿದೆ ಎಂದು ಅತಿಯಾಗಿ ತಿಂದರೆ ಆರೋಗ್ಯಕ್ಕೆ ಅನಾರೋಗ್ಯಗಳೇ ಹೆಚ್ಚು. ಅತಿಯಾಗಿ ತಿಂದರೆ ಅಮೃತವೂ ವಿಷ ಎಂಬ ಮಾತಿನಂತೆ ಆಹಾರವನ್ನು ನಿಯಮಿತವಾಗಿ…
ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಯಲ್ಲಿ ನಿರಂತರ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಸಾರ್ವಜನಿಕರಿಂದ ಪ್ರಶಂಸೆಗೆ ಒಳಪಟ್ಟ ತಡಂಬೈಲ್ ನ ವೀರ ಕೇಸರಿ ಸೇವಾಸಂಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತಾಗಲಿ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ, ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ತಿಳಿಸಿದರು. ಮಾರಿಗುಡಿ ಶ್ರೀ ಮಹಮ್ಮಾಯಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಮಾರಿಗುಡಿ ಬಳಿ ವೀರ ಕೇಸರಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವೀರ ಕೇಸರಿ ಸೇವಾ ಸಂಸ್ಥೆ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ಕ್ರೀಡೆ, ಶೈಕ್ಷಣಿಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ, ಪ್ರತಿಭಾವಂತರನ್ನು ಗುರುತಿಸಿ ಗೌರವಿಸುತ್ತಿದೆ. ಈ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆಯಲು ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯೆಯರು ಪ್ರಾಮಾಣಿಕ ಪ್ರಯತ್ನ ನಡೆಸಲಿ ಎಂದರು. ಮನಪಾ ಸದಸ್ಯೆ ಶ್ವೇತಾ ಪೂಜಾರಿ ಮಾತನಾಡಿ ವೀರಕೇಸರಿ ಸಂಸ್ಥೆ ಕೋರೊನಾ ಸಂದರ್ಭದಲ್ಲಿ ಬಹಳಷ್ಟು ಕುಟುಂಬಗಳಿಗೆ ಮಾನವೀಯತೆಯ ನೆಲೆಯಲ್ಲಿ…
ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ನಡುಮೊಗರು ಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲು ಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಗಳ ಸುಪುತ್ರ ಹಾಗೂ ಡಾ.ಸಾಯಿ ರಮೇಶ್ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿಯವರ ಸಹೋದರ ಬಿ.ಗುಣರಂಜನ್ ಶೆಟ್ಟಿ ಮೂಲತಃ ಪುತ್ತೂರಿನ ಬೆಳ್ಳಿಪ್ಪಾಡಿ ಮನೆತನದಲ್ಲಿ ಜನಿಸಿ, ಉರಮಾಲು ಗುತ್ತು ನಿವಾಸಿಯಾಗಿರುವ ಇವರು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ತಮ್ಮ ವಿದ್ಯಾಭ್ಯಾಸವನ್ನು ಬೆಂಗಳೂರಿನಲ್ಲಿ ಮಾಡಿರುವ ಬಿ. ಗುಣರಂಜನ್ ಶೆಟ್ಟಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದಾರೆ. ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಬೆಂಗಳೂರು, ಐ ಕ್ಯಾರ್ ಬ್ರಿಗೇಡ್, ಐ ಕ್ಯಾರ್ ಫೌಂಡೇಶನ್, ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು ಹಾಗೂ ಬೆಂಗಳೂರು ಕಂಬಳ ಸಮಿತಿಯ ಉಪಾಧ್ಯಕ್ಷರೂ ಆಗಿದ್ದಾರೆ. ಪರಿಸರವಾದಿಗಳು ಆಗಿರುವ ಇವರು ಬೆಂಗಳೂರು…
ನವೆಂಬರ್ 13 ರ ರೈ ಎಸ್ಟೇಟ್ನವೆಂಬರ್ 13 ರ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಮಾವೇಶದ ಸಿದ್ಧತೆ ಸಭೆ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಮಾವೇಶದ ಸಿದ್ಧತೆ ಸಭೆ
ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣೆ, ಸಮಾವೇಶ ಕಾರ್ಯಕ್ರಮ ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಮಿಕ್ಕಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದ್ದು ಈಗಾಗಲೇ ಎಲ್ಲಾ ಸಿದ್ಧತೆಗಳು ನಡೆಯುತ್ತಿದೆ ಎಂದು ಟ್ರಸ್ಟಿನ ಅಧ್ಯಕ್ಷ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಶಾಸಕರ ಸಭಾಭವನದಲ್ಲಿ ನಡೆದ ಟ್ರಸ್ಟಿನ ಪ್ರಮುಖರ ಸಭೆಯಲ್ಲಿ ಈ ಮಾಹಿತಿ ನೀಡಿದರು. ಸಭೆಯಲ್ಲಿ ಭಾಗವಹಿಸುವ ಎಲ್ಲರಿಗೂ ವಸ್ತ್ರ ವಿತರಣೆ ನಡೆಯಲಿದೆ. ಅದರ ಜತೆ ಸಹಭೋಜನವೂ ನಡೆಯಲಿದೆ. ಗ್ರಾಮ ಗ್ರಾಮಗಳಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಗಿದ್ದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಭಾಗವಹಿಸುವಂತೆ ಶಾಸಕರು ಮನವಿ ಮಾಡಿದರು. ಸಭೆಯಲ್ಲಿ ಟ್ರಸ್ಟಿನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಪ್ರಮುಖರಾದ ಸುಮಾ ಅಶೋಕ್ ರೈ, ನಿಹಾಲ್ ಶೆಟ್ಟಿ, ರಾಕೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು
ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಲಕ್ಷ್ಮಣ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇನ್ನಂಜೆ ಎಸ್. ವಿ. ಎಚ್. ಪ.ಪೂ ಕಾಲೇಜಿನ ಸಭಾಭವನದಲ್ಲಿ ನಡೆಯಿತು. 2022-2023 ನೇ ಸಾಲಿನಲ್ಲಿ ಗಳಿಸಿದ ನಿವ್ವಳ ಲಾಭ 4,08,675.72 ರೂ. ಯನ್ನು ವಿಂಗಡಣೆ ಮಾಡಲಾಯಿತು. ಶೇ 15 ಶೇರು ಡಿವಿಡೆಂಟ್ ಘೋಷಿಸಲಾಯಿತು. ಸದ್ರಿ ವರ್ಷದಲ್ಲಿ ಹಾಲು ಸರಬರಾಜು ಮಾಡಿದ ಸದಸ್ಯರಿಗೆ 1,75,721 ರೂ. ಬೋನಸ್ ವಿತರಿಸಲಾಯಿತು. ಶೇ 1 ರಂತೆ 85,784 ರೂ. ಪ್ರೋತ್ಸಾಹ ಧನ ವಿತರಿಸಲಾಯಿತು. ಸಂಘದ ಸಕ್ರಿಯ ಹಿರಿಯ ಸದಸ್ಯರಾದ ವೇದಾವತಿ ಪೂಜಾರ್ತಿ, ಸಂಜೀವಿ ಮತ್ತು ವಿಟ್ಟಲ ಮೂಲ್ಯ ಅವರನ್ನು ಸನ್ಮಾನಿಸಲಾಯಿತು. ಇನ್ನಂಜೆ ಅಂಚೆ ಕಚೇರಿಯಲ್ಲಿ 11 ವರ್ಷ ಸೇವೆ ಸಲ್ಲಿಸಿ ಮುಂಬಡ್ತಿ ಹೊಂದಿರುವ ಪ್ರಕಾಶ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಉತ್ತಮ ಗುಣಮಟ್ಟದ ಹಾಲು ಪೂರೈಸಿದ ಎಲಿಜಬೆತ್ ಡಿ‘ಸೋಜಾ – ಪ್ರಥಮ ಆಶಾ – ದ್ವಿತೀಯ ಮತ್ತು ಜಯಂತಿ ಕೆ. ಶೆಟ್ಟಿ – ತೃತೀಯ ಬಹುಮಾನ ನೀಡಿ…














