Author: admin
ನಮ್ಮ ಬಂಟರ ಸಂಘದ ಪ್ರಾದೇಶಿಕ ಸಮಿತಿಗಳ ಮುಖೇನ ಉತ್ತಮವಾದ ಕೆಲಸವನ್ನು ಮಾಡುತ್ತಿದ್ದೇವೆ. ಪ್ರಾದೇಶಿಕ ಸಮಿತಿಯವರು ಇವತ್ತು ಆಯೋಜಿಸಿರುವಂತಹ ಈ ಉಚಿತ ವೈದ್ಯಕೀಯ ಶಿಬಿರ ಪ್ರತಿ ಮೂರು ತಿಂಗಳಿಗೊಮ್ಮೆ ಆದರೂ ನಡೆಯಬೇಕು. ಈ ಮೂಲಕ ನಮ್ಮ ಜನರನ್ನು ಅನಾರೋಗ್ಯದಿಂದ ಪಾರು ಮಾಡುವ ನಿಟ್ಟಿನಲ್ಲಿ ಸ್ವಲ್ಪವಾದರೂ ಸಹಾಯವಾದಿತು. ಜನರಿಗೆ ಮನೆ ಮನೆಗೆ ವೈದ್ಯಕೀಯ ಸಹಾಯ ದೊರೆಯುವಲ್ಲಿ ಡಾ| ಆರ್.ಕೆ. ಶೆಟ್ಟಿ, ಬಾಬಾ ಮಹೇಶ್ ಶೆಟ್ಟಿ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಪ್ರಾದೇಶಿಕ ಸಮಿತಿಯ ಮೂಲಕ ಸೂರಜ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸಂತೋಷ್ ಶೆಟ್ಟಿ ಮೊದಲಾದವರು ಶ್ರಮಿಸುತಿದ್ದಾರೆ. ಇವೆಲ್ಲವೂ ಒಗ್ಗಟ್ಟಿನಿಂದ ಮಾತ್ರ ಸಾಧ್ಯ. ಸಂಸ್ಥೆಯಲ್ಲಿ ‘ನಾನು’ ಎನ್ನದೇ ‘ನಾವು’ ಎಂದು ಕೈಜೋಡಿಸಿ ಕೆಲಸ ಮಾಡಬೇಕು. ಆಗ ಯಶಸ್ಸು ನಮ್ಮದಾಗುತ್ತದೆ. ಎಲ್ಲರೂ ಆರೋಗ್ಯವಂತರಾಗಿ ಬಾಳುವಂತಾಗಲಿ ಎಂದು ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ನುಡಿದರು. ಅವರು ಬಂಟರ ಸಂಘ ಮುಂಬಯಿ ಅಂಧೇರಿ- ಬಾಂದ್ರಾ ಪ್ರಾದೇಶಿಕ ಸಮಿತಿಯ ವೈದ್ಯಕೀಯ ಸಮಿತಿಯ ನೇತೃತ್ವದಲ್ಲಿ ನಡೆದ ಉಚಿತ…
ವಿದ್ಯಾಗಿರಿ: ಜಗತ್ತಿನಲ್ಲಿ ಅತಿಹೆಚ್ಚು ಬಳಕೆಯಾದ ಸಮೂಹ ಸಂವಹನ ಮಾಧ್ಯಮಗಳಲ್ಲಿ ರೇಡಿಯೋ ಸಹ ಒಂದು. ೨೦ನೇ ಶತಮಾನದಲ್ಲಿ ಪ್ರಮುಖ ಮಾಧ್ಯಮವಾಗಿ ಉದಯಿಸಿ, ಇಂದಿಗೂ ತನ್ನ ಪ್ರಸ್ತುತತೆಯನ್ನು ಕಾಪಾಡಿಕೊಂಡು ಬಂದಿದೆ ಎಂದು ಮಂಗಳೂರು ಆಕಾಶವಾಣಿಯ ಪ್ರಸರಣ ಕಾರ್ಯನಿರ್ವಾಹಕ ಲತೀಶ್ ಪಾಲ್ದಾನೆ ನುಡಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬುಧವಾರ ಆಳ್ವಾಸ್ನ ಜೆಎಂಸಿ ಹಾಲ್ನಲ್ಲಿ ನಡೆದ ‘ಡಿಜಿಟಲ್ ಯುಗದಲ್ಲಿ ರೇಡಿಯೋ ಅವಕಾಶಗಳು ಹಾಗೂ ಸವಾಲುಗಳು’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ರೇಡಿಯೋವು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಮತ್ತು ಮಹಿಳಾ ಸಬಲೀಕರಣದ ಕುರಿತ ಮಾಹಿತಿಗೆ ಪ್ರಮುಖ ಸಾಧನವಾಗಿದೆ. ಸರಳ ಭಾಷೆಯಲ್ಲಿ ಪರಿಚಾರಕರಿಂದ ಪ್ರಸಾರಮಾಡುವ ಮಾಹಿತಿ, ಸಾರ್ವಜನಿಕರಿಗೆ ನೇರವಾಗಿ ತಲುಪುತ್ತಿದೆ.ಸರ್ಕಾರದ ಅನೇಕ ಯೋಜನೆಗಳು, ಶಿಕ್ಷಣ ಮತ್ತು ಮನರಂಜನೆ ಪಡೆಯಲು ವ್ಯಾಪಕವಾಗಿ ಬಳಸಲ್ಪಡುವ ಮಾಧ್ಯಮವಾಗಿ ಬಳಕೆಯಾಗುತ್ತಿದೆ. ಪ್ರಸ್ತುತ ಭಾರತದಲ್ಲಿ ೪೦೦ ಕ್ಕೂ ಹೆಚ್ಚು ಆಕಾಶವಾಣಿ ರೇಡಿಯೋ ಸ್ಟೇಷನ್ ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಸಾಮಾಜಿಕ ನೆಲೆಯಲ್ಲಿ ವಿಭಿನ್ನ ಮತ್ತು ವಿನೂತನ ಕಾರ್ಯಕ್ರಮಗಳಿಂದ…
ಕುಂದಾಪುರ ಯುವ ಬಂಟರ ಸಂಘದ ಆಶ್ರಯದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನದ ಬದಲು ಆಧುನಿಕ ಕಲಿಕಾ ಸಾಧನಗಳನ್ನು ವಿತರಿಸುವ ಈ ಕಾರ್ಯಕ್ರಮ ಮಾದರಿಯಾಗಿದೆ. ಇದರಿಂದ ಸಮುದಾಯದ ಮಕ್ಕಳ ಶೈಕ್ಷಣಿಕ ಉನ್ನತಿಗೆ ಇನ್ನಷ್ಟು ಉತ್ತೇಜನ ನೀಡಿದಂತಾಗಿದೆ. ಯುವ ಸಂಘಟನೆ ಹತ್ತಾರು ಮಾದರಿ ಕಾರ್ಯ ಮಾಡುತ್ತಿದೆ ಎಂದು ಬೆಂಗಳೂರಿನ ಸೌತ್ ಫೀಲ್ಡ್ ಫೈಂಟ್ಸ್ ನ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ಶ್ಲಾಘಿಸಿದರು. ಅವರು ಕುಂದಾಪುರದ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅರಿವು ಯೋಜನೆಯಡಿ ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ಸಾಧನಗಳ ಹಸ್ತಾಂತರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಬಂಟ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು. ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಲೆಕ್ಕ ಪರಿಶೋಧಕ ಸಿಎ ಸುಧಾಕರ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಿದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ…
ಫೆಬ್ರವರಿ 15 ರಂದು ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ನಡೆಯಲಿರುವ, ಈ ಬಾರಿಯ ‘ಅಭಿಮತ ಸಂಭ್ರಮ -2025’ ಕಾರ್ಯಕ್ರಮದ ಕುರಿತು, ಇಲ್ಲಿನ ರೋಟರಿ ಭವನದಲ್ಲಿ ಜನವರಿ 19 ರಂದು ಸಂಜೆ 4.30 ಕ್ಕೆ ಸಮಾಲೋಚನಾ ಸಭೆ ಕರೆಯಲಾಗಿದೆ ಎಂದು ಅಭಿಮತ ಸಂಭ್ರಮದ ಆಯೋಜಕರಾದ ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ಕಳೆದ 7 ವರ್ಷಗಳಿಂದ ಮೂಡುಗಿಳಿಯಾರಿನಲ್ಲಿ ‘ಅಭಿಮತ ಸಂಭ್ರಮ’ ಎನ್ನುವ ಮೌಲ್ಯಯುತವಾದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಳಕಳಿಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. ಸಾವಿರಾರು ಜನರು ನೇರವಾಗಿ ಹಾಗೂ ಲಕ್ಷಾಂತರ ಜನರು ಆನ್ಲೈನ್ ಮೂಲಕ ವೀಕ್ಷಣೆ ಮಾಡುವ ‘ಅಭಿಮತ ಸಂಭ್ರಮ’ ಕಾರ್ಯಕ್ರಮ ಭಿನ್ನ ಆಯೋಜನೆಯಿಂದಾಗಿ ಜನಪ್ರಿಯವಾಗಿದೆ.ಈ ಕಾರ್ಯಕ್ರಮವನ್ನು ಇನ್ನಷ್ಟು ವಿಸ್ತಾರಗೊಳಿಸಬೇಕು ಎನ್ನುವ ಸದುದ್ದೇಶದಿಂದ ಈ ಬಾರಿಯ 8ನೇ ವರ್ಷದ ‘ಅಭಿಮತ ಸಂಭ್ರಮ’ ಕಾರ್ಯಕ್ರಮವನ್ನು ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ಫೆ.15 ರ ಮುಸ್ಸಂಜೆಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಲಹೆ…
ಬಂಟರ ಚಾವಡಿ ಪರ್ಕಳ (ರಿ) ಇದರ ವತಿಯಿಂದ ಮುಂಬಯಿಯ ಆಲ್ ಕಾರ್ಗೋ ಲಾಗಿಸ್ಟಿಕ್ ಮತ್ತು ಅವಶ್ಯ ಫೌಂಡೇಶನ್ ವತಿಯಿಂದ ಕೊಡಮಾಡುವ ‘ದಿಶಾ’ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಪರ್ಕಳದ ಸುರಕ್ಷಾ ಸಭಾ ಭವನದಲ್ಲಿ ಜನವರಿ 11 ರಂದು ಸಂಘದ ಅಧ್ಯಕ್ಷರಾದ ಅರುಣಾಚಲ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಬಹಳ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಜರಗಿತು. ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಹಾಗೂ ಸವಿಸ್ತಾರ ಆಳ್ವ (ಸೀನಿಯರ್ ಎಕ್ಸಿಕ್ಯೂಟಿವ್ ಆಲ್ ಕಾರ್ಗೋ ಲಾಗಿಸ್ಟಿಕ್ಸ್ ಲಿಮಿಟೆಡ್) ಉಪಸ್ಥಿತರಿದ್ದರು. ವಿವಿಧ ಶಾಲೆಯ 176 ವಿದ್ಯಾರ್ಥಿಗಳಿಗೆ ಸುಮಾರು 9,50,000 ರೂಪಾಯಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಕಾರ್ಯಧ್ಯಕ್ಷ ವಸಂತ ಶೆಟ್ಟಿ ಹಿರೇಬೆಟ್ಟು, ಪ್ರಧಾನ ಕಾರ್ಯದರ್ಶಿ ದಿನೇಶ್ ಹೆಗ್ಡೆ ಆತ್ರಾಡಿ, ಕೋಶಾಧಿಕಾರಿ ವಸಂತ ಶೆಟ್ಟಿ ಚೆನ್ನಿಬೆಟ್ಟು, ಸಂಘಟನಾ ಕಾರ್ಯದರ್ಶಿ ದಿವಾಕರ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಹೆಗ್ಡೆ ಸ್ವಾಗತಿಸಿದರು. ಕಾರ್ಯಧ್ಯಕ್ಷ ವಸಂತ ಶೆಟ್ಟಿ ಹಿರೇಬೆಟ್ಟು ಧನ್ಯವಾದವನ್ನು ಅರ್ಪಿಸಿದರು.
ಬಂಟರ ಸಂಘ ಕಡಂದಲೆ – ಪಾಲಡ್ಕ (ರಿ) ಮೂಡಬಿದರೆ ತಾಲೂಕು ದಕ್ಷಿಣ ಕನ್ನಡ ಆಶ್ರಯದಲ್ಲಿ ಬೆಂಗಳೂರು ಬಂಟರ ಸಂಘ ಇವರ ಸಹಭಾಗಿತ್ವದಲ್ಲಿ ಜನವರಿ 12 ರಂದು ಗಣೇಶ ದರ್ಶನ ಪಲ್ಕೆ ಸಭಾಭವನದಲ್ಲಿ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಂದಲೆ ಬಂಟರ ಸಂಘದ ಅಧ್ಯಕ್ಷ ಸುದರ್ಶನ್ ಶೆಟ್ಟಿಯವರು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಗೌರವ ಕಾರ್ಯದರ್ಶಿ ಹಾಲಾಡಿ ವಿಜಯ್ ಶೆಟ್ಟಿ, ವಿದ್ಯಾರ್ಥಿವೇತನ ಸಮಿತಿಯ ಛೇರ್ಮನ್ ಉಮೇಶ್ ಕುಮಾರ್ ಶೆಟ್ಟಿಯವರು ಉಪಸ್ಥಿತರಿದ್ದು, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಸಿಎ ಅಶೋಕ್ ಶೆಟ್ಟಿ ಹಾಗೂ ಉಮೇಶ್ ಕುಮಾರ್ ಶೆಟ್ಟಿಯವರನ್ನು ಅಧ್ಯಕ್ಷ ಸುದರ್ಶನ್ ಶೆಟ್ಟಿಯವರು ಗೌರವಿಸಿದರು.
ಸೇವಾ ಚೇತನ ಟ್ರಸ್ಟ್ (ರಿ) ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 11ರಂದು ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ನಮ್ಮೂರ ಸಂಭ್ರಮ ಕಾರ್ಯಕ್ರಮದಲ್ಲಿ ಸಂಘಟಕ, ಪ್ರಾಧ್ಯಾಪಕ, ಕುಂದಾಪುರ ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2024ರ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರಧಾನವನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ, ಜಯದೇವ ಹೃದ್ರೋಗ ಆಸ್ಪತ್ರೆಯ ಆಡಳಿತ ನಿರ್ದೇಶಕರೂ ಅದ ಡಾ. ಸಿ.ಎನ್. ಮಂಜುನಾಥ್ ಪ್ರಶಸ್ತಿ ಪ್ರದಾನ ಮಾಡಿದರು. ಸೌತ್ ಫೀಲ್ಡ್ ಪೇಂಟ್ಸ್ ನ ಆಡಳಿತ ನಿರ್ದೇಶಕ ಶ್ರೀ ಎಸ್ ಎಸ್ ಹೆಗ್ಡೆ ನಮ್ಮೂರ ಸಂಭ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿ.ಎ ಅಶೋಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ…
ಮೂಡುಬಿದಿರೆ: ಮೈಸೂರಿನ ಕುಂಬಾರಕೊಪ್ಪಲ್ನಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್ ಬಾಲ್ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ಶಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ತಂಡ ಚಾಂಪಿಯನ್ಶಿಫ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. ಸೆಮಿಫೈನಲ್ನಲ್ಲಿ ಆಳ್ವಾಸ್ ತಂಡ ಅಂಬಾರಿ ಮೈಸೂರು ತಂಡವನ್ನು 35-30, 35-23 ನೇರ ಸೆಟ್ಗಳಿಂದ ಸೋಲಿಸಿದರೆ, ಬನಶಂಕರಿ ತಂಡವು ಸೆಮಿಫೈನಲ್ನಲ್ಲಿ ವಿಜಯನಗರ ಸ್ಪೋರ್ಟ್ಸ್ ಕ್ಲಬ್ ತಂಡವನ್ನು 35-31, 22-35 ಹಾಗೂ 36-34 ಸೆಟ್ ಗಳಿಂದ ಸೋಲಿಸಿ, ಫೈನಲ್ ಹಂತಕ್ಕೆ ಅರ್ಹತೆ ಪಡೆದಿತ್ತು. ಅಂತಿಮ ಸುತ್ತಿನಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ತಂಡವನ್ನು 36- 34 ಹಾಗೂ 35-21 ನೇರ ಸೆಟ್ ಗಳಿಂದ ಸೋಲಿಸಿ ಜಯ ಗಳಿಸಿತು. ಟೂರ್ನಿಯ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಆಳ್ವಾಸ್ನ ಆಕಾಶ್ ‘ಟೂರ್ನಿಯ ಅತ್ಯುತ್ತಮ ಆಟಗಾರ ಪ್ರಶಸ್ತಿ’ಯನ್ನು ಪಡೆದುಕೊಂಡರು. ಜೊತೆಯಲ್ಲಿ ಆಳ್ವಾಸ್ನ ವಿನಯ್ ‘ಬೆಸ್ಟ್ ಸೆಂಟರ್ ಪ್ಲೇಯರ್ ಪ್ರಶಸ್ತಿ’ ಗಳಿಸಿದರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಬಂಟರ ಸಂಘ ಮುಂಬಯಿ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ವತಿಯಿಂದ ಜನವರಿ 8 ರಿಂದ 10 ರವರೆಗೆ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಹಾರಾಷ್ಟ್ರದ ಸೋಲಾಪುರದಲ್ಲಿರುವ ಪಂಢರಾಪುರ ಹಾಗೂ ಬಾಲಾಜಿ ದೇವಾಲಯ ಯಾತ್ರೆಯನ್ನು ಕೈಗೊಂಡಿತ್ತು. ಪಂಢರಾಪುರದ ವಿಠಲನನ್ನು ಭಕ್ತಿ ಶ್ರದ್ಧೆಯಿಂದ ಪೂಜಿಸುವ, ಅತೀ ಹೆಚ್ಚು ಭಕ್ತರು ಭೇಟಿ ನೀಡುವ ಪ್ರಮುಖ ದೇವಸ್ಥಾನವಾಗಿದೆ. ಪುಣೆಯ ಬಾಲಾಜಿ ದೇವಸ್ಥಾನಕ್ಕೆ ಅದರದ್ದೇ ಆದ ಖ್ಯಾತಿ ಇದೆ. ಈ ಎರಡೂ ಧಾರ್ಮಿಕ ಕ್ಷೇತ್ರದ ಯಾತ್ರೆಯಲ್ಲಿ ಸುಮಾರು 43 ಜನರು ಪಾಲ್ಗೊಂಡು ದರ್ಶನ ಪಡೆದರು. ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಸೂರಜ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ ಶೆಟ್ಟಿ ಇವರ ನೇತೃತ್ವದಲ್ಲಿ ಈ ಪ್ರವಾಸವನ್ನು ಏರ್ಪಡಿಸಲಾಗಿತ್ತು. ಮುಂಬಯಿ ಬಂಟರ ಸಂಘದ ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಅಂಧೇರಿ ಬಾಂದ್ರಾದ ಕನ್ವೀನರ್ ರವೀಂದ್ರ ಶೆಟ್ಟಿ, ಉಪಾಧ್ಯಕ್ಷ ಯಶವಂತ ಶೆಟ್ಟಿ, ಜೊತೆ ಕಾರ್ಯದರ್ಶಿ ಅಮರನಾಥ ಶೆಟ್ಟಿ, ಸಮಾಜಸೇವಾ ಸಮಿತಿಯ ಲಕ್ಷ್ಮಣ್ ಶೆಟ್ಟಿ, ವಿವಾಹ ನೋಂದಣಿ ಸಮಿತಿಯ ಕಾರ್ಯಾಧ್ಯಕ್ಷರಾದ ಕೃಷ್ಣ…
ಎಷ್ಟೋ ದಶಕಗಳಿಂದ ಅನೂರ್ಚಿತವಾಗಿದ್ದ ಪಾತ್ರಾಡಿಗುತ್ತಿನ ಸಾಮಾನಿ ಪಟ್ಟಕ್ಕೆ ಯೋಗ್ಯ ವ್ಯಕ್ತಿಯನ್ನೇ ದೈಯ್ಯಂಗಳು ಆಯ್ಕೆ ಮಾಡಿವೆ. ತುಳುನಾಡಿನ ದೈವಗಳಲ್ಲಿ ಕುರಿಯಾಡಿದಾರ್ ಎನ್ನುವುದು ಅತ್ಯಂತ ವಿಶಿಷ್ಟವಾದ ದೈವ. ಅರಸು ಕುಂಜಿರಾಯರ ಹಾಗೆ ಈ ದೈವವೂ ಕೂಡ ಸಾರ್ವತ್ರಿಕವಾಗಿ ಪ್ರಸಾರಗೊಳ್ಳದೆ ಕೆಲವೇ ಕ್ಷೆತ್ರಗಳಲ್ಲಿ ಆರಾಧನೆ ಪಡೆಯುವ ರಾಜಸಿಕ ಶಕ್ತಿ. ಅಂಬಡಾಡಿ ಬೀಡಿನ ಮಂಜಣ್ಣ ಮಡಯೆರ್, ಬೀರಣ್ಣ ಮಡಯರ್ ಎಂಬ ಇಬ್ಬರು ಬಲ್ಲಾಳರಿಗೆ ಸಹಸ್ರಲಿಂಗೇಶ್ವರ ದೇವರ ಸ್ಥಳದಲ್ಲಿ ನಡೆಯುವ ಮಕೆಜಾತ್ರೆಯಲ್ಲಿ ಈ ದೈವ ಸಿಕ್ಕಿತ್ತಂತೆ. ಅದು ಸತ್ಯದ ಕಾಲ ದೈವಗಳು ಕಣ್ಣಾರೆ ಕಾಣ ಸಿಗುತ್ತಿದ್ದವು. ಕಿವಿಯಾರೆ ಮಾತನಾಡುತ್ತಿದ್ದವು. ಈ ಬಳ್ಳಾಲರು ದೈವ ತಂದು ನಂಬಿದ ಒಂದುವರೆ ವರ್ಷಕ್ಕೆ ಅಳಿದು ಹೋದರು. ಅಂಬಡಾಡಿ ಬಳ್ಳಾಲರು ತಪ್ಪಿದಾಗ ದೈವ ಬೆನ್ನು ಹಿಡಿದಿದ್ದು ಕುದಿಗ್ರಾಮ ಮಾಗಣೆಯ ಬಟ್ಟೆಡುಲ್ಲಾಯರದ್ದು. ಬಟ್ಟೆಡುಲ್ಲಯರೂ ದೈವ ನಂಬಿ ಒಂದುವರೆ ವರ್ಷಕ್ಕೆ ಕಾಲವಾದರು. ಇದು ಬಹಳ ಕಟ್ಟುನಿಟ್ಟಿನ ಕಠೋರ ದೈವವಾಗಿತ್ತು ಎಂದು ಕಾಣುತ್ತದೆ.ಆಗ ಈ ದೈವವನ್ನು ಆರಾಧನೆ ಮಾಡುವ ಧೈರ್ಯ ತೋರಿಸಿದವರು ಕುರಿಯ ಕಡಂಬರು. ಬಾರಿಮಲೆ ಉಕ್ಕುಡದಲ್ಲಿ ದೈವಕ್ಕೊಂದು…