Author: admin
ಗಣಿತನಗರ : ಇಂದಿನ ಬದುಕು ಒತ್ತಡದಲ್ಲಿರಲು ಕಾರಣ ಮನುಷ್ಯನಿಗೆ ತೃಪ್ತಿ ಇಲ್ಲದಿರುವುದೇ ಆಗಿದೆ. ನೆಮ್ಮದಿಯನ್ನು ಕಳಕೊಂಡ ಮನುಜ ತಾಳ್ಮೆ, ಸಹನೆಯ ಮನೋಭಾವವನ್ನು ಇಟ್ಟುಕೊಳ್ಳುವುದು ಮುಖ್ಯ. ವಿದ್ಯಾರ್ಥಿ ಜೀವನದಲ್ಲಿಯೇ ಸಾವಧಾನದ ಮನಸ್ಥಿತಿಯನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಗೌರವದ ಉಪಸ್ಥಿತಿಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯ ಎಂದು ಪಳ್ಳಿ ಸ.ಪ.ಪೂ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶ್ರೀ ವಸಂತ ಆಚಾರ್ ನುಡಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು. ಜ್ಞಾನಸುಧಾ ಒತ್ತಡರಹಿತವಾಗಿ ವಿದ್ಯಾರ್ಥಿಗಳ ಏಳಿಗೆಗೆ ತನ್ನ ಯೋಜನಾ ಬದ್ಧವಾದ ಶೈಕ್ಷಣಿಕ ಚಟುವಟಿಕೆಯನ್ನು ರೂಪಿಸಿಕೊಂಡು, ಮೌಲಿಕವಾದ ವಿಚಾರಧಾರೆಯನ್ನು ಪಸರಿಸುವ ಸಾಮಾಜಿಕ ಕಾರ್ಯಕ್ರಮಗಳ ಮುಖೇನ ಶೈಕ್ಷಣಿಕ ಕ್ಷೇತ್ರದಲ್ಲಿ ನಾಡಿನಲ್ಲಿ ಮಾದರಿಯಾಗಿ ನಿಂತಿದೆ ಎಂದರು. ನಿವೃತ್ತರಾದ ಬೋಳಾದ ಶ್ರೀ ರಾಮಕೃಷ್ಣ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶ್ರೀ ಸತೀಶ್ ಕುಮಾರ್ ಕೆಮ್ಮಣ್ಣು, ಬೆಳ್ಮಣ್ಣುವಿನ ಸ.ಪ್ರೌ.ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸುಶೀಲಾ ಎನ್, ಎರ್ಲಪ್ಪಾಡಿಯ ಶ್ರೀ…
ಆಳ್ವಾಸ್ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ 3.55 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ನಡೆದ ಸಂಘದ 2024-25 ನೇ ಸಾಲಿನ 9ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 170 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಈ ವರ್ಷ 19 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ 99.62 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊಂಡಿದ್ದು, ಪ್ರಸ್ತುತ 5543 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. ಆಳ್ವಾಸ್ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಮಾತನಾಡಿ, ನಮ್ಮ ಆಳ್ವಾಸ್ ಸಹಕಾರಿ ಸಂಘ ಮುಂದಿನ ವರ್ಷ ತನ್ನ ದಶಮಾನೋತ್ಸವದ ಹಿರಿಮೆಯ ಮೈಲಿಗಲ್ಲನ್ನು ತಲುಪಲಿದೆ.…
ಚಿಣ್ಣರಬಿಂಬ ಪ್ರತಿವರ್ಷ ಶಿಬಿರ ಮಟ್ಟದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತಾ ಬಂದಿರುವುದು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ. ಮುಂಬಯಿ ಮರಾಠಿ ನೆಲದಲ್ಲಿ ಚಿಣ್ಣರು ಕನ್ನಡ ಮಾತು ಕೇಳಲು ನಿಜಕ್ಕೂ ಸಂತೋಷವಾಗುತ್ತದೆ. ಇಂದು ಎಸ್.ಎಂ ಶೆಟ್ಟಿ ಶಿಬಿರದ ಮಕ್ಕಳ ಸ್ಪರ್ಧೆ ಉತ್ತಮವಾಗಿ ಮೂಡಿಬರುತ್ತಿದೆ. ಇಲ್ಲಿ ಎಲ್ಲರೂ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೀರಿ. ಮಕ್ಕಳಲ್ಲಿರುವ ಪ್ರತಿಭೆಗೆ ಅವಕಾಶವನ್ನು ನೀಡುವ ಇಂತಹ ಸ್ಪರ್ಧೆಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸೋಪಾನವಾಗಬಲ್ಲದು ಎಂದು ಚಿಣ್ಣರಬಿಂಬದ ರೂವಾರಿ ಶ್ರೀ ಪ್ರಕಾಶ್ ಭಂಡಾರಿ ಅವರು ನುಡಿದರು. ಅವರು ಆಗಸ್ಟ್ 24ರಂದು ರವಿವಾರ ಮಧ್ಯಾಹ್ನ 1ಗಂಟೆಗೆ ಬಂಟರ ಸಂಘ ಎಸ್ ಎಮ್ ಶೆಟ್ಟಿ ಹೈಸ್ಕೂಲ್ ಹಾಗೂ ಜೂನಿಯರ್ ಕಾಲೇಜಿನ ಏಳನೇಯ ಮಹಡಿಯ ಸಭಾಂಗಣದಲ್ಲಿ ನಡೆದ ಮಕ್ಕಳ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದರು. ಅವರು ಪಾಲಕರನ್ನು ಹಾಗೂ ಚಿಣ್ಣರನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರತಿ ರವಿವಾರ ಶಿಬಿರದಲ್ಲಿ ಕನ್ನಡ ಮತ್ತು ಭಜನೆ ತರಗತಿ ನಡೆಯುತ್ತಿದೆ. ಶಿಬಿರ ಮುಖ್ಯಸ್ಥರು, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರು, ಕನ್ನಡ ಮತ್ತು…
ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2025ನೇ ಸಾಲಿನ ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ವಿವಿಧ ನೇಮಕಾತಿ ಪರೀಕ್ಷೆಗಳು ಸದ್ಯದಲ್ಲೇ ನಡೆಯಲಿದ್ದು, ಈ ನೇಮಕಾತಿ ಮಂಡಳಿಯು ಕುರಿತು ಮಾಹಿತಿಯನ್ನು ಪ್ರಕಟಿಸಿರುತ್ತದೆ. ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿಯನ್ನು ನೀಡಲಿದ್ದು, ಈ ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ತರಗತಿಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಕ್ರ್ಯಾಶ್ ಕೋರ್ಸ್ ತರಬೇತಿಯ ನೇರ ತರಗತಿಗಳು ಬೆಳಿಗ್ಗೆ ಸಮಯ 10.00ರಿಂದ ಸಂಜೆ 3.00ರ ವರೆಗೆ ಹಾಗೂ ಆನ್ಲೈನ್ ತರಗತಿಗಳು ರಾತ್ರಿ ಸಮಯ 8 ರಿಂದ 9 ರವರೆಗೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಸ್ಥೆಯನ್ನು ಸಂಪರ್ಕಿಸಿ ದಾಖಲಾತಿಯನ್ನು ಪಡೆದುಕೊಳ್ಳಲು ವಿದ್ಯಾಮಾತಾ ಅಕಾಡೆಮಿಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆಗಳು: 9620468869, 9148935808
ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಯುಎಇ ವತಿಯಿಂದ ನಡೆದ 11ನೇಯ ಗಣೇಶೋತ್ಸವ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಕುಮಾರಿ ದಿವ್ಯನಿಧಿ ರೈ ಎರುಂಬುರವರಿಗೆ “ಸಂಗೀತ ಯಕ್ಷನಾಟ್ಯ ಭೂಷಣ” ಎಂಬ ಬಿರುದನ್ನು ಕೊಟ್ಟು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿದ್ವಾನ್ ಡಾ. ಸತ್ಯ ಕೃಷ್ಣ ಭಟ್, ಉದ್ಯಮಿ ಡಾ. ಬಿ.ಆರ್ ಶೆಟ್ಟಿ ಅಬುಧಾಬಿ, ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಮಾಜಿ ಸಚಿವರಾದ ಶ್ರೀ ಕೃಷ್ಣ ಜೆ. ಪಾಲೆಮಾರ್, ಮೂಡಬಿದ್ರೆ ಶಾಸಕರಾದ ಉಮನಾಥ್ ಕೋಟ್ಯಾನ್, ಉದ್ಯಮಿ ರಾಘವೇಂದ್ರ ಕುಡ್ವ, ಮಾರ್ಗದೀಪ ಸಮಿತಿಯ ಅಧ್ಯಕ್ಷರಾದ ಮಹೇಶ್ ಚಂದ್ರಗಿರಿ, ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು, ಜೊತೆ ಕಾರ್ಯದರ್ಶಿಯಾದ ಬಿಪಿನ್ ಚಂದ್ರ ನಾಯಕ್, ಕೋಶಾಧಿಕಾರಿ ರಾಜೇಶ್ ರಾವ್, ಕಾರ್ಯಕ್ರಮದ ಸಂಚಾಲಕರಾದ ಸುಗಂಧರಾಜ ಬೇಕಲ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಕುಮಾರಿ ದಿವ್ಯನಿಧಿ ರೈಯವರಿಂದ “ಸ್ವರ- ಸಮರ್ಪಣೆ” ಕಾರ್ಯಕ್ರಮ ನಡೆಯಿತು.
ಸುವರ್ಣ ಮಹೋತ್ಸವ ಸಂಭ್ರಮಾಚರಣೆಯಲ್ಲಿರುವ ಮೂಡುಬಿದಿರೆ ಲಯನ್ಸ್ ಕ್ಲಬ್ ವತಿಯಿಂದ ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಕೀರ್ತಿನಗರ ಲಯನ್ಸ್ ಪಾರ್ಕ್ನ ಹರಿಭವ ಸಭಾಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಕ್ಲಬ್ ಅಧ್ಯಕ್ಷ ಲ. ಶಿವಪ್ರಸಾದ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆಯ ಶಂಕರ ಭಟ್, ಕೋಟೆಬಾಗಿಲು ಸ. ಉ. ಹಿ.ಪ್ರಾ ಶಾಲೆಯ ಮೇಬಲ್ ಫೆರ್ನಾಂಡಿಸ್ ಹಾಗೂ ಮಿಜಾರು ಕೆ.ಪಿ.ಎಸ್. ಶಾಲೆಯ ನಾಗೇಶ್ ಎಸ್. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸದಸ್ಯ ವಿನೋದ್ ಕುಮಾರ್ ಅವರು ಶಿಕ್ಷಕ ವೃತ್ತಿ ಎಂಬುದು ಎಲ್ಲಾ ವೃತ್ತಿಗಳ ತಾಯಿಯಾಗಿದ್ದು ಅದಕ್ಕೆ ದೇವರಿಗೆ ಸಮಾನವಾದ ಸ್ಥಾನವನ್ನು ನೀಡಿದ ಉದಾತ್ತವಾದ ಸಂಸ್ಕೃತಿ ಬೆಳೆಸಿಕೊಂಡು ಬಂದ ಪರಂಪರೆ ನಮ್ಮದು. ಮಾಹಿತಿ ತಂತ್ರಜ್ಞಾನದ ಬೆಳವಣಿಗೆಯಿಂದ ಶಿಕ್ಷಣವೆಂಬುದು ಶಾಲೆಗೆ ಮಾತ್ರ ಸೀಮಿತವಾಗಿರದೆ ಗೂಗಲ್ ನಿಂದಲೂ ಬಹಳಷ್ಟು ಮಾಹಿತಿಯನ್ನು ಶಿಕ್ಷಣದ ರೂಪದಲ್ಲಿ ಪಡೆಯಬಹುದಾದ ಈ ಕಾಲಘಟ್ಟದಲ್ಲಿ ಶಿಕ್ಷಕರು ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಆದುದರಿಂದ ಗೂಗಲ್ ನಲ್ಲಿ…
ಆದರ್ಶಪ್ರಾಯ : ಶ್ಯಾಮಲ ಕುಂದರ್ ವಿದ್ಯಾರ್ಥಿ ಎಂಬ ನಾಣ್ಯ ಬಹುಮೂಲ್ಯವಾಗಲು ಶಿಕ್ಷಕರು ಮತ್ತು ಪೋಷಕರೆಂಬ ಎರಡು ಮುಖಗಳ ಪಾತ್ರ ಬಹುಮುಖ್ಯ. ಕನಸು ಹೊತ್ತ ವಿದ್ಯಾರ್ಥಿಗಳನ್ನು ಪೋಷಿಸುವ ಪೋಷಕರು, ವಿದ್ಯಾಭ್ಯಾಸ ನೀಡುವ ಶಿಕ್ಷಕರನ್ನು ನಾವು ಗೌರವಿಸಬೇಕು. ಈ ನಿಟ್ಟಿನಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಯ ಮೆಚ್ಚುವಂತಹದ್ದು. ಶಿಕ್ಷಣದ ಜೊತೆಜೊತೆಗೆ ಸಂಸ್ಕಾರ, ದೇಶಭಕ್ತಿ, ಮೌಲ್ಯಯುತ ಶಿಕ್ಷಣಕ್ಕೂ ಪ್ರಾಶಸ್ತ್ಯ ಕೊಡುತ್ತಿರುವುದು ಆದರ್ಶಪ್ರಾಯ ಎಂದು ರಾಷ್ಟಿçಯ ಮಹಿಳಾ ಅಯೋಗದ ಮಾಜಿ ಸದಸ್ಯರಾದ ಶ್ರೀಮತಿ ಶ್ಯಾಮಲಾ ಎಸ್ ಕುಂದರ್ ಹೇಳಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬ್ರಹ್ಮಾವರ ಸರಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಸಂಜೀವ ಶೆಟ್ಟಿ ಕೊರ್ಗಿ, ಬಿ.ಎಮ್.ಎಮ್. ಪ್ರೌಢಶಾಲೆ ಕೂರಾಡಿಯ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಎಸ್ ಮೂರ್ತಿ ರಾವ್, ಶ್ರೀ ವಿಷ್ಣು ಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಅನಂತ ಪದ್ಮನಾಭ ಭಟ್, ಪಂಚನಬೆಟ್ಟು ವಿದ್ಯಾವರ್ಧಕ…
ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ‘ಪ್ರಥಮ’ ಪ್ರಶಸ್ತಿ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ 2024- 25 ನೇ ಸಾಲಿನಲ್ಲಿ ಲೆಕ್ಕಪರಿಶೋಧನೆ ‘ಅ’ ವರ್ಗದ ಸಹಕಾರ ಸಂಘಗಳಲ್ಲಿ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪ್ರಥಮ ಪ್ರಶಸ್ತಿಯನ್ನು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಪಡೆಯಿತು. ಡಾ| ಎಂ ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತಿ ಕುಮಾರ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಹರೀಶ್ ಕಿಣಿ ಬಿ, ನಿರ್ದೇಶಕರಾದ ಕೃಷ್ಣ ನಾಯ್ಕ್, ಸದಸ್ಯರಾದ ಅಚ್ಯುತ್ ಶೆಟ್ಟಿ ಉಪಸ್ಥಿತರಿದ್ದರು.
ಚಿಣ್ಣರಬಿಂಬ ಮೀರಾ ರೋಡ್ ಶಿಬಿರದ ಮಕ್ಕಳ ಉತ್ಸವ ಹಾಗೂ ಪ್ರತಿಭಾನ್ವೇಷಣಾ ಸ್ಪರ್ಧೆಯು ಆಗಸ್ಟ್ 24 ರಂದು ರವಿವಾರ ಮಧ್ಯಾಹ್ನ 1 ಗಂಟೆಗೆ ಭಾಯಂದರ್ ಪೂರ್ವದ ನ್ಯೂ ಸೈಂಟ್ ಆಗ್ನೇಸ್ ಹೈಸ್ಕೂಲ್ ನಲ್ಲಿ ನಡೆಯಿತು. ಮಕ್ಕಳ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮವನ್ನು ರೈ ಸುಮತಿ ಎಜುಕೇಷನಲ್ ಟ್ರಸ್ಟ್, ಸೈಂಟ್ ಆಗ್ನೇಸ್ ಇಂಗ್ಲೀಷ್ ಹೈಸ್ಕೂಲ್, ಕೆ ಎಸ್ ಮೆಹ್ತಾ ಸ್ಕೂಲ್ ಮತ್ತು ಜೂನಿಯರ್ ಕಾಲೇಜ್ ನ ಕಾರ್ಯಾಧ್ಯಕ್ಷರಾಗಿರುವ ಆಗಿರುವ ಡಾ| ಅರುಣೋದಯ ರೈ ಬಿಳಿಯೂರು ಗುತ್ತು ಇವರು ಚಿಣ್ಣರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಶಿಸ್ತು ಬದ್ಧ ಚಟುವಟಿಕೆ ಮತ್ತು ಕಾರ್ಯ ವೈಖರಿಯಿಂದ ಚಿಣ್ಣರಬಿಂಬ ಪರಿಪೂರ್ಣತೆಯನ್ನು ಹೊಂದಿದೆ ಎಂದು ಮನಪೂರ್ವಕವಾಗಿ ಶ್ಲಾಘಿಸಿದರು. ತನ್ನ ಸಹಕಾರ ಸದಾ ಇದೆ ಎನ್ನುವ ಪ್ರೋತ್ಸಾಹದ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟರ ಸಂಘ ಮುಂಬಯಿಯ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಜೊತೆ ಕಾರ್ಯದರ್ಶಿಯಾಗಿರುವ ಉದ್ಯಮಿ ರಮೇಶ ಎಂ ಶೆಟ್ಟಿ ಸಿದ್ಧಕಟ್ಟೆಯವರು ಮಾತನಾಡುತ್ತಾ, ಮಕ್ಕಳ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವು ಬಹಳ ಚೆನ್ನಾಗಿ…
ಕಲ್ಯಾಣ್ ಸೀಲ್ ಪಾಟ ರೋಡ್ ಡೊಂಬಿವಲಿ ಪೂರ್ವದಲ್ಲಿರುವ ಹೋಟೆಲ್ ತನಿಷ್ಕಾ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಆಗಸ್ಟ್ 27 ರ ಬುಧವಾರದಿಂದ ಸೆಪ್ಟೆಂಬರ್ 6 ರ ಶನಿವಾರದ ತನಕ ನಾಲ್ಕನೇ ವರ್ಷದ ಗಣೇಶೋತ್ಸವದ ಅಂಗವಾಗಿ ‘ತನಿಷ್ಕಾ ಕಾ ರಾಜಾ’ನನ್ನು ಪ್ರತಿಷ್ಠಾಪಿಸಿ, ವಿಜೃಂಭಣೆಯಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹೋಟೆಲ್ ನ ಮಾಲಕ ಕಲ್ಯಾ ಗುರ್ಮೆದ ಬೈಲು ಗಣೇಶ್ ಹೆಚ್ ಶೆಟ್ಟಿ ಮತ್ತು ಪರಿವಾರ ಸದಸ್ಯರು ಆಚರಿಸಿಕೊಂಡು ಬರುತ್ತಿದ್ದಾರೆ. ಸೆಪ್ಟೆಂಬರ್ 6ರ ಶನಿವಾರದಂದು ಅನಂತ ಚತುರ್ದಶಿ ಪ್ರಯುಕ್ತ ಅಜ್ಡೆಪಾಡ ಅಯ್ಯಪ್ಪ ಮಂದಿರದ ಅರ್ಚಕ ರಾಮಚಂದ್ರ ಬಾಯರಿ ಅವರ ಪೌರೋಹಿತ್ಯದೊಂದಿಗೆ ಬೆಳಗ್ಗೆ 11 ರಿಂದ 01ರ ತನಕ ಶ್ರೀ ಸತ್ಯನಾರಾಯಣ ಮಹಾಪೂಜೆ, 01 ರಿಂದ 03 ರ ತನಕ ಅನ್ನದಾನ ಜರಗಲಿದೆ. ಸಂಜೆ 04 ಗಂಟೆಗೆ ಉಡುಪಿಯಿಂದ ಆಗಮಿಸಲಿರುವ ಹುಲಿ ವೇಷ, ಯಕ್ಷಗಾನ ವೇಷ ಮುಂತಾದ ಮನೋರಂಜನಾ ವೇಷಗಳೊಂದಿಗೆ ಗಣೇಶ ಮೂರ್ತಿಯನ್ನು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ ಮಾಡಲಿದ್ದಾರೆ ಎಂದು ಕಲ್ಯಾ…