Author: admin
ಒಬ್ಬ ರಾಜ ತನ್ನ ರಾಜ್ಯ ನೋಡಲು ಕುದುರೆಯನೇರಿ ಹೊರಟ. ಒಂದೂರಿನ ಹಾದಿಯಲ್ಲಿ ಹೋಗುವಾಗ ಆತನಿಗೆ ತುಂಬಾ ಹಸಿವಾಯಿತು. ಸುತ್ತಮುತ್ತ ನೋಡಿದಾಗ ಬೃಹದಾಕಾರದ ಮರದಲ್ಲಿ ತುಂಬಾ ಹಣ್ಣುಗಳು ಜೋತು ಬಿದ್ದಿದ್ದವು. ಆ ಮರ ಎತ್ತರವಿದ್ದ ಕಾರಣ ಒಂದು ಹಣ್ಣೂ ಆತನ ಕೈಗೆ ಎಟಕಲಿಲ್ಲ. ಆಗ ಮರ ಕಡಿಯುವವನೊಬ್ಬ ಸಾಕಷ್ಟು ಹಣ್ಣುಗಳನ್ನು ಕೊಯ್ದು ರಾಜನಿಗೆ ಕೊಟ್ಟ ತಕ್ಷಣ ಆತ ಅದನ್ನು ಗಬಗಬನೆ ತಿಂದು ಮರ ಕಡಿಯುವವನಿಗೆ ಚಿನ್ನದ ನಾಣ್ಯಗಳನ್ನು ಕೊಟ್ಟು ಮುಂದೆ ಸಾಗಿದ. ಹೀಗೆ ಸಾಗುವಾಗ ಆತ, ನಾನು ರಾಜನಾದರೂ ನನಗೆ ಮರ ಏರಲು ತಿಳಿದಿಲ್ಲ. ಇದೆಂತಹ ಅವಮಾನ ಎಂದು ಮರುಗಿದ. ಹೀಗೆ ದೂರ ಸಾಗುವಾಗ ಬಿಸಿಲು ಆತನಿಗೆ ಸುಸ್ತಿನ ಜೊತೆಗೆ ನಿದ್ರೆ ಬರಲು ಶುರುವಾಯಿತು. ಮರದ ಕೆಳಗೆ ಮಲಗಿದರೂ ಆತನಿಗೆ ನಿದ್ರೆ ಬರಲಿಲ್ಲ. ದೂರದಲ್ಲಿ ಮರಗೆಲಸದವನೊಬ್ಬ ತನ್ನ ತಲೆಗೆ ಕಟ್ಟಿದ್ದ ತುಂಡು ಬಟ್ಟೆ ಹಾಸಿ ಗಾಢ ನಿದ್ರೆಗೆ ಜಾರಿದ್ದ. ಆಗ ರಾಜನಿಗೆ, ಅವನಿಗೆ ಆ ಭಗವಂತ ಅದೆಷ್ಟು ಸುಖ ನಿದ್ರೆ ಕರುಣಿಸಿದ್ದಾನೆ. ಕಲ್ಲು,…
ಕರೀಮ್ ನಗರ ಹೋಟೆಲ್ ಉದ್ಯಮಿಗಳಿಂದ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹೋಟೆಲ್ ಗೀತಾ ಭವನ್ ನಲ್ಲಿ ಹಿರಿಯ ಹೋಟೆಲ್ ಉದ್ಯಮಿಗಳಾದ ಕೊಡ್ಲಾಡಿ ಗಂಜಿಕೂಡ್ಲು ಶಿವರಾಮ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರವೀಂದ್ರ ಶೆಟ್ಟಿ ಅಮಾಸೆಬೈಲು, ಅಲ್ತಾರು ಭಾಸ್ಕರ ಶೆಟ್ಟಿ, ಗಿರೀಶ್ ಉಪಸ್ಥಿತರಿದ್ದರು.
ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಮಂಡಲ ನೆಹರೂ ನಗರ ಪಿಂಪ್ರಿ : ಶ್ರೀ ಅಯ್ಯಪ್ಪ ಸ್ವಾಮಿ ದೇವರ ಪುನಃ ಪ್ರತಿಷ್ಠಾ ಮಹೋತ್ಸವ
ಸನಾತನ ಹಿಂದೂ ಧರ್ಮ ನಿರಂತರವಾಗಿದೆ. ಎಷ್ಟೇ ಅಡೆ ತಡೆ ಬಂದರೂ ಯಾವುದೇ ರೀತಿಯಲ್ಲೂ ನಿಲ್ಲದು. ಇದು ಶಾಶ್ವತ ಧರ್ಮ ಎಂಬುದನ್ನು ಜಗತ್ತು ತಿಳಿದುಕೊಳ್ಳಬೇಕು. ನಮ್ಮ ಸನಾತನ ಹಿಂದೂ ಧರ್ಮದ ಜ್ಞಾನ ಭಂಡಾರವನ್ನು ಎಷ್ಟು ಅರಿತು ಕೊಂಡರೂ ಕಡಿಮೆಯೇ. ಅದರೆ ಹಿಂದೂ ಜ್ಞಾನವನ್ನು ಪಡೆಯುವುದು ಇಂದಿನ ಕಾಲಕ್ಕೆ ಬಹು ಮುಖ್ಯ. ನಮ್ಮಹಿಂದೂಗಳ ಜಾತಿಯನ್ನು ಬದಿಗಿಟ್ಟು ಧರ್ಮವನ್ನು ಅಪ್ಪಿಕೊಳ್ಳಿ. ಇದರಿಂದ ಮಾತ್ರ ಧರ್ಮ ಜಾಗೃತಿಯಾಗಲು ಸಾದ್ಯ. ಜಾತಿ ಮನೆಯ ಒಳಗಿರಲಿ, ಆದರೆ ದೇಶಕ್ಕಾಗಿ ಸನಾತನ ಧರ್ಮಕ್ಕಾಗಿ ಹಿಂದೂವಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು. ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು ಎಂಬ ಭಾವನೆ ನಮ್ಮಲ್ಲಿರಲಿ. ಧರ್ಮ ಜಾಗೃತಿ ಮನೆ ಮನೆಯಲ್ಲೂ ಬೆಳಗಬೇಕು. ಮನೆ ಮನೆಯಲ್ಲೂ ಹಿಂದೂ ಧರ್ಮ ಜಾಗೃತಿಯೊಂದಿಗೆ ಮಗು ಹುಟ್ಟಿ ಬರಬೇಕು. ಆವಾಗ ಮಾತ್ರ ಸಂಘಟಿತ ಬಲ ಬರಲು ಸಾಧ್ಯ. ಮಕ್ಕಳಿಗೆ ಧರ್ಮ ಭೋಧನೆ ಪ್ರತಿ ಮನೆಯಲ್ಲೂ ಅಗಬೇಕು. ಹಿಂದೂವಾಗಿ ಜನಿಸಿ, ಬದುಕಿ, ಹಿಂದೂ ನನ್ನ ಜನ್ಮ ಸಿದ್ದ ಹಕ್ಕು ಎಂಬಂತೆ ದೇಶಕ್ಕಾಗಿ ಬದುಕಿ ತೋರಿಸಬೇಕು. ಹಿಂದೂ…
ಭಾಷೆಯ ಸಂಘಟನೆ ಏಕೆ ಬೇಕು ಎಂಬುದನ್ನು ನಾವು ಎಲ್ಲರೂ ಅರಿತವರು. ಜಾತಿಗಿಂತ ಮೊದಲಾಗಿ ನಮಗೆ ಭಾಷೆ ಮುಖ್ಯ, ಅದರಲ್ಲೂ ನಮ್ಮ ತುಳು ಭಾಷೆ ನಮ್ಮ ತಾಯಿ ಭಾಷೆ. ಒಂದೇ ತಾಯಿಯ ಮಕ್ಕಳಂತೆ ಸೇರಿಕೊಂಡು ತುಳು ಭಾಷೆ ಮೇಲಿನ ಪ್ರೀತಿಯಿಂದ ಸ್ಥಾಪನೆಗೊಂಡ ತುಳು ಸಂಘ ಪಿಂಪ್ರಿ ಹದಿಮೂರು ವರ್ಷಗಳ ಉಚ್ಚಾಯದಲ್ಲಿದೆ. ತುಳು ಭಾಷೆ ಸದ್ಯದಲ್ಲೇ ನಮ್ಮ ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ಸೇರ್ಪಡೆಗೊಳ್ಳಲಿದೆ. ಇದು ಸೇರ್ಪಡೆಗೊಂಡರೆ ತುಳುವರಿಗೆ ಶೈಕ್ಷಣಿಕವಾಗಿ ಹಲವಾರು ಪ್ರಯೋಜನವಾಗಲಿವೆ. ಅದಕ್ಕಾಗಿ ನಮ್ಮ ತುಳು ಸಂಘಟನೆಗಳು ಭಾಷೆಯ ಅಭಿವೃದ್ದಿಗೆ ಶ್ರಮಿಸಬೇಕು. ಪಿಂಪ್ರಿ ಚಿಂಚ್ವಾಡ್ ತುಳು ಸಂಘ ಈ ನಿಟ್ಟಿನಲ್ಲಿ ತುಳು ಬಾಷೆಗೆ ಒತ್ತು ನೀಡಿ ಶ್ರಮಿಸುತ್ತಿದೆ. ಇಂದು ಇಲ್ಲಿ ಪ್ರದರ್ಶನಗೊಂಡ ನಾಟಕ ತುಳುನಾಡಿನ ದೈವ ಶಕ್ತಿಯ ಮಹಿಮೆಯನ್ನು ಉತ್ತಮ ರೀತಿಯಲ್ಲಿ ಬಿಂಬಿಸಿದೆ. ಇಂತಹ ನಾಟಕಗಳನ್ನು ನಮ್ಮ ಮಕ್ಕಳು ನೋಡಿ ತಿಳಿದುಕೊಳ್ಳುವ ಅವಶ್ಯಕತೆ ಇದೆ. ನಮ್ಮ ಸ್ವಾಭಿಮಾನದ ಸಂಕೇತವಾದ ನಮ್ಮ ತುಳು ಭಾಷೆಯ ಒಲವನ್ನು ನಾವೆಲ್ಲರೂ ಪಡೆಯಬೇಕು. ನಮ್ಮ ಮಕ್ಕಳು ಕೂಡಾ ಒಲವನ್ನು…
ತಮ್ಮ ಮನಸ್ಸಿನಲ್ಲಿದ್ದ ಹಿಂದವೀ ಸ್ವರಾಜ್ಯದ ಸಂಕಲ್ಪನೆಯನ್ನು ಪ್ರತ್ಯಕ್ಷವಾಗಿ ಜಾರಿಗೆ ತರಲು ಛತ್ರಪತಿ ಶಿವಾಜಿಗೆ ಜ್ಞಾನ, ಚಾರಿತ್ರ್ಯ, ಚಾತುರ್ಯ, ಸಂಘಟನೆ ಹಾಗೂ ಪರಾಕ್ರಮ ಮುಂತಾದ ಸಾತ್ವಿಕ ಮತ್ತು ರಜೌಗುಣಗಳ ಅಮೃತಪಾನ ನೀಡುವ ರಾಜಮಾತೆ. ಹಿಂದವೀ ಸ್ವರಾಜ್ಯದ ಸ್ಥಾಪನೆಯ ಹಾದಿಯಲ್ಲಿ ಅಡ್ಡ ಬರುವ ಹೇಡಿಗಳ ಜೊತೆ ಹೋರಾಡುವ ಧೈರ್ಯವು ಶಹಾಜಿಯ ಪುತ್ರ ಶಿವಾಜಿಗೆ ಸಿಕ್ಕಿದ್ದು ಕೇವಲ ಜಿಜಾಬಾಯಿಯು ಬಿತ್ತಿದ ‘ಶೌರ್ಯದ’ ಸಂಸ್ಕಾರಗಳಿಂದ . ಸಿಂದಖೇಡ ಸಂಸ್ಥಾನದ ರಾಜರ (ಇಂದಿನ ಬುಲಢಾಣಾ ಜಿಲ್ಲೆಯ) ಸನ್ಮಾನನೀಯ ಸರದಾರರಾದ ಲಖೋಜಿ ಜಾಧವ ಹಾಗೂ ಮ್ಹಾಳಸಾಬಾಯಿ ದಂಪತಿಗೆ ಮಗಳಾಗಿ ಜಿಜಾಬಾಯಿ ಜನಿಸಿದರು. ಕರ್ತೃತ್ವವಂತ ತಂದೆಯ ಪರಾಕ್ರಮದ ಉದಾಹರಣೆಗಳನ್ನು ತೊಟ್ಟಿಲಲ್ಲಿರುವ ಜಿಜಾಬಾಯಿ ಬೆರಗಾಗಿ ಕೇಳುತ್ತಿದ್ದರು. ಆದರೆ ವಯಸ್ಸಿನ ಜೊತೆ ಪಾರತಂತ್ರ್ಯದ ಅರಿವೂ ಹೆಚ್ಚಾಯಿತು; ಅಸಹಾಯಕತೆ ಮತ್ತು ಅವಿಶ್ವಾಸ ಎಂಬ ರೋಗಗಳನ್ನು ಅವರು ಮನಸಾರೆ ತಿರಸ್ಕಾರ ಮಾಡಲು ಮುಂದಾದರು. ಗೊಂಬೆಗಳ ಆಟಿಕೆಯ ಸಂಸಾರದಲ್ಲಿ ಮುಳುಗಿರಬೇಕಾದ ಸಮಯದಲ್ಲಿ, ಜಿಜಾಬಾಯಿ ಕತ್ತಿಯನ್ನು ಬಿಗಿಯಾಗಿ ಹಿಡಿದು ಕತ್ತಿವರಸೆಯಲ್ಲಿ ಪರಿಣತಿ ಸಾಧಿಸುವುದರಲ್ಲಿ ಮಗ್ನರಾಗಿದ್ದರು. ಲಷ್ಕರಿನ ಪ್ರಶಿಕ್ಷಣವನ್ನು ಕಲಿಸುವಂತೆ ಲಾಖೋಜಿಯವರಲ್ಲಿ…
ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವ ತುಳುವೆರೆ ಆಯಾನೊ ಕೂಟ ಕುಡ್ಲ ಇದರ ಮಹಾಸಭೆಯು ಇತ್ತೀಚೆಗೆ ಸ್ವರೂಪ ಅಧ್ಯಯನ ಕೇಂದ್ರ ಕೋಡಿಯಾಲ್ ಬೈಲ್ ಇಲ್ಲಿ ನಡೆಯಿತು.ನೂತನ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶಮಿನ ಆಳ್ವ ಮರು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಭೂಷಣ್ ಕುಲಾಲ್, ಖಜಾಂಜಿಯಾಗಿ ಅಮೂಲ್ಯ ಶೆಟ್ಟಿ ಇವರು ಆಯ್ಕೆಯಾದರು. ಅಂತೆಯೇ ಉಪಾಧ್ಯಕ್ಷರಾಗಿ ಗೋಪಾಡ್ಕರ್, ಹರಿಪ್ರಸಾದ್ ರೈ, ರಾಜೇಶ್ ಅಮಿನ್, ಜೊತೆ ಕಾರ್ಯದರ್ಶಿಗಳಾಗಿ ಶ್ರೀಮತಿ ರೋಹಿಣಿ ಶೆಟ್ಟಿ, ಶ್ರೀಮತಿ ಭಾರತೀ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಜ್ವಲ್ ಆಳ್ವ, ರಾಜೇಶ್ ಹೆಗ್ಡೆ ಪೊಳಲಿ, ಕುಸುಮ ಶೆಟ್ಟಿ ಇವರು ಅವಿರೋಧವಾಗಿ ಆಯ್ಕೆಗೊಂಡರು.
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್-2025ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್ವಿ ಕಮಲೇಶ್ ರೋಲಿಂಗ್ ಟ್ರೋಪಿಯನ್ನು ಸತತ 14ನೇ ಬಾರಿ ಪಡೆದು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 27-5 ಅಂಕಗಳ ಅಂತರದಿAದ ಪುತ್ತೂರಿನ ವಿವೇಕಾನಂದ ಕಾಲೇಜು ವಿರುದ್ಧ ಗೆಲುವು ಸಾಧಿಸಿದರೆ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ನ ತಂಡ ಏಕಪಕ್ಷೀಯವಾಗಿ 18-0 ಅಂಕಗಳ ಅಂತರದಲ್ಲಿ ಬೆಳ್ತಂಗಡಿಯ ಜಿಎಫ್ಜಿಸಿ ಕಾಲೇಜು ವಿರುದ್ಧ ಗೆಲುವು ಸಾಧಿಸಿ ಎರಡು ವಿಭಾಗದಲ್ಲಿ ”ಸಮಗ್ರ ಪ್ರಶಸ್ತಿ” ಗೆ ಭಾಜನವಾಯಿತು.ವೈಯಕ್ತಿಕ ಪುರುಷರ ಚಾಂಪಿಯನ್ಶಿಪ್ನಲ್ಲಿ “ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ”ಗೆ ಆಳ್ವಾಸ್ ಕಾಲೇಜಿನ ನಿಖಿಲ್ ಮತ್ತು”ಬೆಸ್ಟ್ ಡಿಫೆಂಡರ್ ಪ್ರಶಸ್ತಿ”ಗೆ ಪ್ರಮೋದ್ ಡಿ ಹಾಗೂ ವೈಯಕ್ತಿಕ ಮಹಿಳೆಯರ…
ವಿದ್ಯಾಗಿರಿ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರದಂದು ಇಂಗ್ಲಿಷ್ ವಿಭಾಗದ ಗ್ಲಿಸನ್ ಸಂಘದ ವತಿಯಿಂದ ವಿಶ್ವ ಕಾವ್ಯ ದಿನವನ್ನು ಆಚರಿಸಲಾಯಿತು. ಕರ್ಯಕ್ರಮದ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದ ಉಡುಪಿಯ ಶ್ರೀ ಅದಮಾರು ಮಠದ ಶಿಕ್ಷಣ ಸಮೂಹಗಳ ಉಪ ಆಡಳಿತಾಧಿಕಾರಿ ಪುಂಡರಿಕಾಕ್ಷ ಕೊಡಂಚ, ಕಾವ್ಯವು ನಮ್ಮ ಸಂಸ್ಕೃತಿಯ ಮಹತ್ವಪೂರ್ಣ ಅಂಗ. ಆ ಮೂಲಕ ನಮ್ಮ ಭಾವನೆ ಹಾಗೂ ಅನುಭವಗಳನ್ನು ವ್ಯಕ್ತಪಡಿಸಲು ಸಹಕಾರಿಯಾಗಿದೆ.ಕಾವ್ಯ ದಿನವನ್ನು ಆಚರಿಸುವುದರ ಮೂಲಕ ಮಹಾನ್ ಕವಿಗಳ ಕೊಡುಗೆಗಳನ್ನು ಗೌರವಿಸುವುದರ ಜೊತೆಗೆ ಹೊಸ ಬರಹಗಾರರಿಗೆ ಪ್ರೇರಣೆಯಾಗಲು ಸಹಾಯ ಮಾಡುತ್ತದೆ ಎಂದರು. ತಾರ್ಕಿಕವಾಗಿ ಯೋಚಿಸಿ ಮತ್ತು ಸಾಮಾನ್ಯ ಜ್ಞಾನವನ್ನು ಬಳಸಿದರೆ ಯಾರೂ ಬದುಕಿನಲ್ಲಿ ಪ್ರಮಾದವನ್ನೆಸಗಲಾರರು. ತಾರ್ಕಿಕ ಯೋಚನೆಯುಳ್ಳ ವ್ಯಕ್ತಿಗೆ ಅವಕಾಶಗಳು ವಿಫುಲವಾಗಿರುತ್ತವೆ ಎಂದು ಸಲಹೆ ನೀಡಿದರು. ಸುಂದರವಾದ ಭೂಮಿಯನ್ನು ಉಳಿಸಬೇಕು. ಅದು ನಮ್ಮ ಆಸೆಗಳನ್ನು ಪೂರೈಸ ಬಲ್ಲದೇ ಹೊರತು, ನಮ್ಮ ದುರಾಸೆಯನ್ನಲ್ಲ ಎಂದರು. ನಂತರ ಗ್ಲಿಸನ್ ಸಂಘದ ವತಿಯಿಂದ ಆಯೋಜಿಸಲಾದ ಕಾವ್ಯ ವಾಚನ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಬಿಎಸ್ಸಿಯ ಮೇಘಾ…
ಹೈದರಾಬಾದ್ ಬಂಟ್ಸ್ ಹೋಟೆಲ್ ಉದ್ಯಮಿಗಳಿಂದ ಯುವ ಸಂಘಟಕ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಹೋಟೆಲ್ ಸುಪ್ರಭಾತಮ್ ನಲ್ಲಿ ಹಿರಿಯ ಹೋಟೆಲ್ ಉದ್ಯಮಿಗಳಾದ ಅಲ್ತಾರು ದೇಬೆಟ್ಟು ಜಯರಾಮ ಶೆಟ್ಟಿ ಹಾಗೂ ಶೇಖರ್ ಶೆಟ್ಟಿ ವಂಡ್ಸೆ ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ಅಣ್ಣಪ್ಪ ಶೆಟ್ಟಿ ಮಲ್ಯಾಡಿ, ಉದಯ್ ಕುಮಾರ್ ಶೆಟ್ಟಿ ಹಕ್ಲಾಡಿ, ಅಜಿತ್ ಶೆಟ್ಟಿ ನೂಜಾಡಿ, ಸುರೇಶ ಶೆಟ್ಟಿ ಯಾಳಹಕ್ಲು, ಚಂದ್ರ ಶೆಟ್ಟಿ ಮಲ್ಯಾಡಿ, ಶ್ರೀಕಾಂತ್ ಶೆಟ್ಟಿ ಉಳ್ತೂರು, ಸಂಯುಕ್ತ ಶೆಟ್ಟಿ ಬಾಳೆಮಣೆ ಉಪಸ್ಥಿತರಿದ್ದರು.
ಮಿತ್ರರೇ, ಹಿಂದೆ ದೇವಗಿರಿ ಹೆಸರಿನ ರಾಜ್ಯವಿತ್ತು. ರಾಜಾ ರಾಮದೇವನು ಆ ರಾಜ್ಯವನ್ನು ಆಳುತ್ತಿದ್ದನು. ಒಮ್ಮೆ ಅಲ್ಲಾಉದ್ದೀನ ಖಿಲಜಿಯು ದೇವಗಿರಿಯ ಮೇಲೆ ದಾಳಿ ಮಾಡಲು ಬಂದನು ಮತ್ತು ರಾಜನಿಗೆ ತನ್ನ ದೂತರ ಮೂಲಕ ಶರಣಾಗುವಂತೆ ಸಂದೇಶವನ್ನು ಕಳುಹಿಸಿದನು. ಆ ಸಂದೇಶದಲ್ಲಿ ಅಲ್ಲಾಉದ್ದೀನನು, ರಾಜಾ ರಾಮದೇವನಿಗೆ ಅವನ ಸಂಪೂರ್ಣ ರಾಜ್ಯವನ್ನು ಅಲ್ಲಾಉದ್ದೀನನಿಗೆ ಒಪ್ಪಿಸಿ, ಅವನಿಗೆ ಶರಣಾಗಬೇಕೆಂದು ಬರೆದಿದ್ದನು. ಈ ಸಂದೇಶವನ್ನು ಕೇಳಿ ರಾಜಾ ರಾಮದೇವನಿಗೆ ಸಹಿಸಲು ಆಗಲಿಲ್ಲ. ತನ್ನ ರಾಜ್ಯದ ಮೇಲೆ ಯಾರೋ ಆಕ್ರಮಣ ಮಾಡಿರುವುದನ್ನು ಅವನು ಹೇಗೆ ತಾನೆ ಸುಮ್ಮನೆ ನೋಡುತ್ತಾ ಕುಳಿತು ಕೊಳ್ಳಬಹುದು. ಅವನು ಬಹಳ ಪರಾಕ್ರಮಿ ರಾಜನಾಗಿದ್ದನು. ಅವನು ಅಲ್ಲಾಉದ್ದೀನನ ಪ್ರಸ್ತಾವನೆ ಒಪ್ಪಿಕೊಳ್ಳಲಿಲ್ಲ. ಇದನ್ನು ಕೇಳಿ ಅಲ್ಲಾಉದ್ದೀನ ಕೋಪಗೊಂಡನು ಮತ್ತು ತನ್ನ ದೊಡ್ಡ ಸೈನ್ಯದೊಂದಿಗೆ ದೇವಗಿರಿಯ ಮೇಲೆ ಆಕ್ರಮಣ ಮಾಡಿದನು. ದೇವಗಿರಿಯ ಕೋಟೆ ಒಂದು ಅಭೇದ್ಯ ಕೋಟೆಯಾಗಿತ್ತು. ಆ ಕೋಟೆಯನ್ನು ಬಹಳ ಸುಲಭವಾಗಿ ಗೆಲ್ಲಲು ಸಾಧ್ಯವಿರಲಿಲ್ಲ. ಅರ್ಥಾತ್ ಆ ಕೋಟೆಯೊಳಗೆ ಯಾರಿಗೂ ಸುಲಭವಾಗಿ ನುಸುಳಲು ಸಾಧ್ಯವಿರಲಿಲ್ಲ. ಸ್ವಲ್ಪ ದಿನದಲ್ಲಿಯೇ ಇಬ್ಬರೂ…