Author: admin

ಮುಂಬಯಿಯ ಜಾತಿ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿರುವ ಬೋಂಬೆ ಬಂಟ್ಸ್ ಅಸೋಸಿಯೇಶನ್ ತನ್ನ 42ನೇ ವಾರ್ಷಿಕ ಮಹಾಸಭೆಯನ್ನು ನವಿ ಮುಂಬಯಿ ಜೂಹಿನಗರದ ಬಂಟ್ಸ್ ಸೆಂಟರಿನ ಸೌಮ್ಯಲತಾ ಸದಾನಂದ ಶೆಟ್ಚಿ ಸಭಾಗೃಹದಲ್ಲಿ ನವೆಂಬರ್ 16 ರಂದು ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ ನಡೆಸಿ ಅದೇ ದಿನ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬೋಂಬೆ ಬಂಟ್ಸ್ ಅಸೋಸಿಯೇಶನ್ ತನ್ನ 42ನೇ ವಾರ್ಷಿಕ ಮಹಾಸಭೆಯನ್ನು 21ನೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾ. ಡಿ.ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮತ್ತು ಉಪಾಧ್ಯಕ್ಷ ಐಕಳ ಕಿಶೋರ್ ಕೆ ಶೆಟ್ಟಿ, ಗೌ. ಪ್ರ ಕಾರ್ಯದರ್ಶಿ ನ್ಯಾ. ಶೇಖರ ಆರ್ ಶೆಟ್ಟಿ, ಗೌ. ಕೋಶಾಧಿಕಾರಿ ಸಿ.ಎ. ವಿಶ್ವನಾಥ ಎಸ್ ಶೆಟ್ಟಿ ಹಾಗೂ ಇನ್ನುಳಿದವರ ಸಮಕ್ಷತೆಯಲ್ಲಿ ಜರಗಿತು. ಆರಂಭಿಕವಾಗಿ ಅಧ್ಯಕ್ಷರ ಸ್ವಾಗತ ಭಾಷಣದಿಂದ ಪ್ರಾರಂಭಗೊಂಡು, ಗೌ. ಪ್ರ. ಕಾರ್ಯದರ್ಶಿ ನ್ಯಾ. ಶೇಖರ ಆರ್. ಶೆಟ್ಟಿಯವರು 09-03-2025 ರಂದು ನಡೆದ 41ನೇ ವಾರ್ಷಿಕ ಮಹಾಸಭೆಯ ವರದಿ ಮತ್ತು ಗತವರ್ಷದ 2024- 2025ರ ವಾರ್ಷಿಕ ವರದಿಯನ್ನು ಮಂಡನೆ…

Read More

ಮಹಾರಾಷ್ಟ್ರದ ನಾಂದೇಡ್ ನ ಹೋಟೆಲ್ ಉದ್ಯಮಿ ಅಳಕೆಮಜಲು (ಕುದ್ರಿಯಗುತ್ತು) ದಾಮೋದರ ಶೆಟ್ಟಿ ಹಾಗೂ ಬಜನಿಗುತ್ತು ಕರುಣಾ ಡಿ ಶೆಟ್ಟಿಯವರ ಪುತ್ರಿ ಮನೀಶಾ ಶೆಟ್ಟಿ 2025ರಲ್ಲಿ ICAR ನಡೆಸಿದ ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ನಲ್ಲಿ ಪ್ರಾಥಮಿಕ, ಪ್ರೌಡಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಪೂರೈಸಿ ನಂತರ ಸಿಎ ತರಗತಿಗೆ ಸೇರ್ಪಡೆಗೊಂಡರು. ಮಹಾರಾಷ್ಟ್ರದ ಪುಣೆಯಲ್ಲಿ ಕೋಚಿಂಗ್ ಕ್ಲಾಸ್ ನ ಮೂಲಕ ಪ್ರಾರಂಭದಲ್ಲಿ ತರಬೇತಿ ಪಡೆದು ಪುಣೆಯ ಪ್ರಸಿದ್ದ ಕೀರ್ತನ್ & ಪಂಡಿತ್ ಚಾರ್ಟೆಡ್ ಅಕೌಂಟೆನ್ಸ್‌ ಕಂಪನಿಯಲ್ಲಿ ಆರ್ಟಿಕಲ್ ಶಿಪ್ ನಡೆಸಿ 2025ರಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

Read More

ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ಸಮಾರಂಭವು ಡಿಸೆಂಬರ್ ತಿಂಗಳ 28 ರಂದು ನಡೆಯಲಿದ್ದು, 2024- 25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಸ್ವಜಾತಿಯ ವಿದ್ಯಾರ್ಥಿಗಳು ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಂದಿಗೆ ಭಾವಚಿತ್ರ ಮತ್ತು ಸ್ವವಿಳಾಸದ ವಿವರವನ್ನು ತಮ್ಮ ತಮ್ಮ ವಲಯದ ಅಧ್ಯಕ್ಷರಲ್ಲಿ ಅಥವಾ ಕಚೇರಿ ಕಾರ್ಯದರ್ಶಿ ಕುಸುಮೋಧರ ರೈ (9343243257) ಯವರಲ್ಲಿ ಡಿಸೆಂಬರ್ 2ರ ಮೊದಲು ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಅಂಕಗಳ ಪರಿಗಣನೆ ಇರುವುದಿಲ್ಲ. ಅದೇ ರೀತಿ ಜಿಲ್ಲಾಮಟ್ಟದ ವಿಜೇತ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕೂಡ ತಮ್ಮ ಸಾಧನೆಯ ವಿವರಗಳನ್ನು ನೀಡಬಹುದೆಂದು ತಿಳಿಸಿದ್ದಾರೆ.

Read More

ಎರಡು ಕೂಟ ದಾಖಲೆಗಳನ್ನು ಬರೆದ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಇಲ್ಲಿನ ಸ್ವರಾಜ್ ಮೈದಾನದಲ್ಲಿ ಗುರುವಾರ ಮುಕ್ತಾಯಗೊಂಡ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ‘23ನೇ ಅಂತರ ಕಾಲೇಜು ವಾರ್ಷಿಕ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷ ಮತ್ತು ಮಹಿಳಾ ಚಾಂಪಿಯನ್‌ಶಿಫ್ ಸಹಿತ ಎರಡು ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆತಿಥ್ಯದಲ್ಲಿ ಮೂರು ದಿನ ನಡೆದ ಕ್ರೀಡಾಕೂಟದಲ್ಲಿ ಬೆಂಗಳೂರಿನ ಗಂಗೋತ್ರಿ ನರ್ಸಿಂಗ್ ಕಾಲೇಜಿನ ಆಕಾಶ್ ಬೆನಡಿಕ್ಟ್ ಹಾಗೂ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ ಅನುರಾಧಾ ರಾಣಿ, ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದರು. ಪುರುಷರ ಹಾಗೂ ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಅಲೈಡ್ ಹೆಲ್ತ್ಸೈನ್ಸಸ್ ಕಾಲೇಜು ಕ್ರಮವಾಗಿ 48 ಹಾಗೂ 60 ಅಂಕಗಳನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಒಟ್ಟು 108 ಅಂಕಗಳೊಂದಿಗೆ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿ ಪಡೆಯಿತು. ಉದ್ದ ಜಿಗಿತದಲ್ಲಿ…

Read More

ಕುವೈತ್ ಬಂಟರ ಸಂಘ ಕರಿನ 23 ವರ್ಷೋರ್ದಿಂಚ ಕುವೈಟ್ ಡ್ ಸಕ್ರಿಯವಾದ್ ಬಂಟೆರ್ನ ಅಂಚೆನೆ ತುಳುನಾಡ್ದ ಸಂಸ್ಕೃತಿ ಬೊಕ್ಕ ಸಂಪ್ರದಾಯದ ಬುಲೆಚಿಲ್ಗಾದ್ ಪುಣೆಯೊಂದು ಲೋಕ ಪುಗಾರ್ತೆ ಪಡೆತುಂಡು. ಇಂಚಿತ್ತಿ ಬಂಟರ ಸಂಘ ಕುವೈಟ್ ಡ್ ಬಂಟಾಯನ -2025 ನವೆಂಬರ್ 21 ದಾನಿ ಶುಕ್ರವಾರ ಮದ್ಯಾನ 3:30 ಗಂಟೆಗೂ ಇಂಡಿಯನ್ ಸೆಂಟರ್ ಸ್ಕೂಲ್ ಆಡಿಟೋರಿಯಂ ಅಬ್ಬಾಸಿಯಾಡ್ ಅಟ್ಟಣೆ ಆತುಂಡು. ಮಲ್ಲ ಬಿನ್ನೆರಾದು ಕಾಪು ಕ್ಷೇತ್ರದ ಶಾಸಕೆರ್ ಆಯಿನ ಗುರ್ಮೆ ಸುರೇಶ್ ಶೆಟ್ಟಿ, ಅಂಚೆನೆ ಕತಾರ್ ಬಂಟರ ಸಂಘದ ಗುರ್ಕಾರೆ ನವೀನ್ ಶೆಟ್ಟಿ ಇರುವೈಲ್ ಮಾನಾದಿಗೆದ ಬಿನ್ನೆರಾದ್ ಪಾಲ್ಪಡೆಪರ್. ಅವೆರ್ದು ಬೊಕ್ಕ ಸಾಂಸ್ಕೃತಿಕ ಲೇಸುಡ್ ಪುಗಾರ್ತೆದ ಸುನಿಲ್ ನೆಲ್ಲಿಗುಡ್ಡೆ ತಂಡರ್ದು ತೆಲಿಕೆದ ಬರ್ಸ ಮೂಡುದು ಬರ್ಪುಂಡು ಪಂಡುದ್ ಕುವೈಟ್ ಸಂಘದ ಗುರ್ಕಾರೆ ನಕ್ರೆ ಸತೀಶ್ಚಂದ್ರ ಶೆಟ್ಟಿ ಅಂಚೆನೆ ಕಾರ್ಯಕಾರಿ ಸಮಿತಿ ಸದಸ್ಯೆರ್ ಪ್ರಕಟಣೆಡ್ ತೆರಿಪಾದೆರ್.

Read More

ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ವ್ಯಕ್ತಪಡಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರ ಸೂಸಲು ಇಂತಹ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಚಾರಿಟೇಬಲ್ ಟ್ರಸ್ಟ್ (ರಿ.) ಮೊಳಹಳ್ಳಿ ಇದರ ಪ್ರವರ್ತಕರಾದ ದಿನೇಶ್ ಹೆಗ್ಡೆಯವರು ಕರೆ ನೀಡಿದರು. ಅವರು ನವೆಂಬರ್ 15 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕೇಂದ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಬಿದ್ಕಲ್ ಕಟ್ಟೆ ಇವರುಗಳ ಜಂಟಿ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಚೈತ್ರ ವಿವೇಕ್ ಅಡಪ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಂತಿ ಶೆಟ್ಟಿ, ಶಿಕ್ಷಣ ಸಂಯೋಜಕರಾದ ಶೇಖರ್ ಯು, ಕ್ಷೇತ್ರ ಸಂಪನ್ಮೂಲ…

Read More

ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಸ್‌ಡಿಎಮ್ ಪ್ರಕೃತಿ ಚಿಕಿತ್ಸಾ ಕಾಲೇಜಿನ ಡೀನ್ ಡಾ. ಗೀತಾ ಬಿ ಶೆಟ್ಟಿ, ಪ್ರಕೃತಿ ಚಿಕಿತ್ಸಾ ದಿನಾಚರಣೆಯು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ರೋಗ ನಿವಾರಣೆ ಮತ್ತು ಚಿಕಿತ್ಸೆಯ ನೆಲೆಯಲ್ಲಿ, ಸಮಾಜಕ್ಕೆ ನೈಜ ಪರಿಹಾರ ನೀಡುವಂತಾಗಬೇಕು. ಪ್ರಕೃತಿ ಚಿಕಿತ್ಸೆಯ ವೈಜ್ಞಾನಿಕ ತತ್ವಗಳನ್ನು ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಅಲ್ಲದೆ ಚಿಕಿತ್ಸೆಯ ಪರಿಣಾಮಕಾರಿತ್ವವನ್ನು ದೃಢಪಡಿಸಲು ವೈಜ್ಞಾನಿಕ ದಾಖಲೆ ಸಂಗ್ರಹಣೆ ಅತ್ಯಾವಶ್ಯಕ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಳ್ವ ಫಾರ್ಮಸಿಯ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಡಾ. ಗ್ರೀಷ್ಮ ವಿವೇಕ್ ಆಳ್ವ ಮಾತನಾಡಿ, ಪ್ರಕೃತಿ ಚಿಕಿತ್ಸಾ ವಿದ್ಯಾರ್ಥಿಗಳು ಮತ್ತು ವೈದ್ಯರು ಆತ್ಮವಿಶ್ವಾಸ, ಸೇವಾಭಾವದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು. ದಿನಾಚರಣೆಯ ಅಂಗವಾಗಿ ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ…

Read More

ಭಾರತೀಯ ವ್ಯಾಪಾರ ನಿಯತಕಾಲಿಕದ ಐಕಾನ್‌ಗಳು ವತಿಯಿಂದ ೩೭ ನೇ ಆವೃತ್ತಿಯ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ ೨೦೨೫ ಅನ್ನು ಅತ್ಯುತ್ತಮ ಸಾಮಾಜಿಕ ಸೇವೆಗಳಿಗಾಗಿ ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರಿಗೆ ಪ್ರಧಾನ ಮಾಡಲಾಯಿತು. ಅಗರಿ ನವೀನ್ ಭಂಡಾರಿಯವರು ಆರ್‌ಬಿಐಯ ಉತ್ತರ ವಲಯದ ಮಾಜಿ ನಿರ್ದೇಶಕರಾಗಿದ್ದು, ಬೆಂಗಳೂರು ಸುಂದರ್ ರಾಮ್ ಶೆಟ್ಟಿ ನಗರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿ : ಉಮಾಪ್ರಸಾದ್ ರೈ

Read More

ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ವಿದ್ಯಾರಣ್ಯದ ನೂತನ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಅವರು ಕ್ರೀಡಾಜ್ಯೋತಿ ಬೆಳಗಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬಳಿಕ ಟೀಚರ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಕಿಶನ್ ರಾಜ್ ಶೆಟ್ಟಿ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮತ್ತು ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ಅವರು ಕ್ರೀಡಾ ಧ್ವಜಾರೋಹಣ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಗೌರವಪೂರ್ವಕವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕ್ರೀಡೆ ಬದುಕಿನಲ್ಲಿ ಶಿಸ್ತು ಮೂಡಿಸುತ್ತದೆ. ಪ್ರತಿಯೊಬ್ಬರೂ ಕ್ರೀಡಾಸ್ಪೂರ್ತಿಯನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯು ದೈಹಿಕ ಹಾಗೂ ಮಾನಸಿಕವಾಗಿ ವ್ಯಕ್ತಿಯನ್ನು ಸದೃಢವಾಗಿಸುತ್ತದೆ. ಸೋಲು ಮತ್ತು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಗುಣವನ್ನು ವಿದ್ಯಾರ್ಥಿಗಳು ತಮ್ಮ…

Read More

ಮೂಡುಬಿದಿರೆ ಒಂದು ಕಾಲದಲ್ಲಿ ಜೈನಕಾಶಿಯೆಂದೇ ಪ್ರಚಲಿತದಲ್ಲಿದ್ದ ಪ್ರದೇಶ. ಸಾವಿರಕಂಬದ ಬಸದಿ, ತೋಡಾರು ಕೊಡಮಣಿತ್ತಾಯ ದೈವಸ್ಥಾನ, ರಾಣಿ ಅಬ್ಬಕ್ಕನ ಹುಟ್ಟೂರು, ಚೌಟರ ಅರಮನೆ, ಹನುಮಂತ ದೇವಸ್ಥಾನ, ಕಡಲ ಕೆರೆ ನಿಸರ್ಗ ಧಾಮ ಇವೆಲ್ಲವೂ ಒಂದು ಕಾಲದಲ್ಲಿ ಮೂಡುಬಿದಿರೆಗೆ ಮುಕುಟ ಪ್ರಾಯವಾಗಿ ಕೈಬೀಸಿ ಕರೆಯುತ್ತಿತ್ತು ಹಾಗೂ ಕರೆಯುತ್ತಿದೆ. ಪ್ರಸ್ತುತ ಕಾಲದಲ್ಲಿ ಇವೆಲ್ಲವುಗಳ ಸಾಲಿನ ಜೊತೆ ಸೇರಿ ನವಭಾಷ್ಯಕ್ಕೆ ಮುನ್ನುಡಿ ಬರೆಯುತ್ತಿದೆ ಆಳ್ವಾಸ್ ಶಿಕ್ಷಣ ಸಂಸ್ಥೆ. ಇಂದು ಮೂಡುಬಿದಿರೆ ಶಿಕ್ಷಣ ಕಾಶಿಯಾಗಿ ಬೆಳೆದಿದೆ. ಮೂಡುಬಿದಿರೆ ಪ್ರದೇಶದಲ್ಲಿ ಸುಮಾರು ಮುನ್ನೂರು ‌ಎಕರೆ ಜಾಗದಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಇಂಜಿನಿಯರಿಂಗ್ ತನಕ ಬೇರೆ ಬೇರೆ ವಿಭಾಗದಲ್ಲಿ ಸುಮಾರು 22000 ಮಕ್ಕಳು ಕಲಿಯುತ್ತಿದ್ದು, ಅದರಲ್ಲಿ 3000 ಮಕ್ಕಳು ಉಚಿತ ‌ಶಿಕ್ಷಣ ಪಡೆಯುತ್ತಿದ್ದು ವರ್ಷಕ್ಕೆ ಸುಮಾರು 50 ಕೋಟಿ ಆಳ್ವಾಸ್ ವ್ಯಯಿಸುತ್ತದೆ. ಅಂಗ ನ್ಯೂನತೆಯ ಜೊತೆ ಬೇರೆ ಬೇರೆ ವಿಭಾಗದಲ್ಲಿ ದತ್ತು ಸ್ವೀಕರಿಸಿ ಉಚಿತ ಶಿಕ್ಷಣ ‌ನೀಡುತ್ತಿದೆ. ಕನ್ನಡ ಮಾಧ್ಯಮ ಶಾಲೆ ರಾಜ್ಯಕ್ಕೆ ಪ್ರಥಮವಾಗಿದೆ. ಆಳ್ವರ ಸಾಂಸ್ಕೃತಿಕ ವಿಚಾರದಲ್ಲಿ ಈ ತನಕ…

Read More