Author: admin
ಇನ್ನಂಜೆಯ ಎಸ್. ವಿ. ಎಚ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಘನಾ ಆರ್. ಶೆಟ್ಟಿಗೆ 600 ಅಂಕದಲ್ಲಿ 549 ಅಂಕಗಳನ್ನು ಪಡೆದು ಶೇ. 91.5 ಅಂಕದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ. ಈಕೆ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಭಿವಂಡಿ ಹೋಟೆಲ್ ಉದ್ಯಮಿ ಕುರ್ಕಾಲು ಕುಲೇದು ರಮೇಶ್ ಶೆಟ್ಟಿ ಮತ್ತು ನಿಟ್ಟೆ ಪರಪ್ಪಾಡಿ ವಿಮಲಾ ಶೆಟ್ಟಿ ದಂಪತಿಯ ಪುತ್ರಿ.
“ರಸಋಷಿ ರಘುರಾಮಂ” “ಯಕ್ಷಕವಿ ವಂದನಂ” ಕಾರ್ಯಕ್ರಮವು ಶ್ವೇತಛತ್ರ ಯಕ್ಷಮಿತ್ರ ಕೋಣಿ, ಕುಂದಾಪುರ ಇವರ ಸಹಯೋಗದಲ್ಲಿ ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಏ. 29ರಂದು ಸಂಜೆ 4:30ಕ್ಕೆ ಕಂದಾವರ ರಘುರಾಮ ಶೆಟ್ಟಿಯವರಿಗೆ ಅಭಿನಂದಿಸುವ ಕಾರ್ಯಕ್ರಮವಾಗಿ ಜರುಗಲಿದೆ. ಪೆರ್ಡೂರು ಮೇಳದ ಯಜಮಾನರಾದ ವೈ. ಕರುಣಾಕರ ಶೆಟ್ಟಿ, ಸಂಕಾಪುರ ಶಿವರಾಮ ಶೆಟ್ಟಿ ಅರ್ಥದಾರಿಗಳು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಕಲಾವಿದ ಎಂ.ಕೆ. ರಮೇಶ್ ಆಚಾರ್ಯ, ಎಂ.ಐ.ಟಿ ಉಪನ್ಯಾಸಕರಾದ ಎಸ್.ವಿ. ಉದಯ್ ಕುಮಾರ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಶ್ರೀ ದುರ್ಗಾ ಕನ್ಸ್ಟ್ರಕ್ಷನ್ ದಾಂಡೇಲಿ, ಬೆಳ್ವೆ ಶ್ರೀನಿವಾಸ ಆಚಾರ್ಯ, ಪ್ರಸಂಗಕರ್ತ ಪ್ರಸಾದ್ಕುಮಾರ್ ಮೊಗೆಬೆಟ್ಟು ಗೌರವ ಉಪಸ್ಥಿತಿಯಲ್ಲಿದ್ದಾರೆ. ಸತೀಶ್ ಶೆಟ್ಟಿ ಮೂಡುಬಗೆ ನಿರೂಪಣೆಯಲ್ಲಿರುತ್ತಾರೆ. ಬಳಿಕ ಪ್ರಸಿದ್ಧ ಕಲಾವಿದರಿಂದ ಗಾನ ವೈಭವ ಕಾರ್ಯಕ್ರಮ ರಂಗದಲ್ಲಿ ಪ್ರಸ್ತುತಿಗೊಳ್ಳಲಿದೆ ಎಂದು ಶ್ವೇತಛತ್ರ ಯಕ್ಷಮಿತ್ರದ ಅಧ್ಯಕ್ಷ ಸುರೇಶ್ ಶೆಟ್ಟಿ ಶಂಕರನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆ ಮೂಕವಾದರೆ ಲೋಕವೂ ಲೂಟಿ ಮಾಡಿತು : ನಳಿನಾ ಪ್ರಸಾದ್ ಮುಂಬಯಿ (ಆರ್ಬಿಐ), ಮಾ.05: ಪರಿಪೂರ್ಣ ಅರ್ಪಣೆಯ ಸಂಸ್ಕಾರಯುತ ಜೀವನ ಮಹಿಳೆಯದ್ದಾಗಿದೆ. ಸದಾ ಸಮರ್ಪಣಾ ಭಾವನೆಯ ಸ್ತ್ರೀಯರು ಮಾನವತೆಯ ಪರಿಪಾಠವಾಗಿದ್ದಾರೆ. ಇಂತಹ ನಾರಿಶಕ್ತಿಯ ಆತ್ಮಸ್ಥೆರ್ಯ ಸಾಂಪ್ರದಾಯಿಕವಾಗಬೇಕು. ಮಿತ್ಯವನ್ನು ಭಗ್ನಗೊಳಿಸಲು ಮತ್ತು ಸತ್ಯವನ್ನು ನಗ್ನಗೊಳಿಸಲು ಸ್ತ್ರೀಯರು ತಮ್ಮ ಆತ್ಮಧ್ಯೇಯ ಬಲವಾಗಿಸಬೇಕು. ಮಹಿಳೆಯರು ಮೂಕವಾದರೆ ಲೋಕವೂ ಲೂಟಿ ಮಾಡಿತು ಜೋಕೆ ಎಂದು ಬೃಹನ್ಮುಂಬಯಿಯಲ್ಲಿನ ಪ್ರತಿಭಾನ್ವಿತ ಕಂಠದಾನ ಕಲಾವಿದೆ ನಳಿನಾ ಪ್ರಸಾದ್ ತಿಳಿಸಿದರು. ಮಮೂರವರ್ಮ ಸಾಂಸ್ಕøತಿಕ ಪ್ರತಿಷ್ಠಾನ(ರಿ.) ಮುಂಬಯಿ ಸಂಸ್ಥೆಯು ಇಂದಿಲ್ಲಿ ಆದಿತ್ಯವಾರ ಸಂಜೆ ಫಾಟ್ಕೋಪರ್ ಪೂರ್ವದ ಪಂತ್ನಗರ್ನಲ್ಲಿನ ಕನ್ನಡ ವೆಲ್ಫೇರ್ ಸೊಸೈಟಿ ಸಭಾಗೃಹದಲ್ಲಿ `ತವರು ಮನೆಯ ಬಾಂಧವ್ಯ’ ಮಹಿಳಾ ಸ್ನೇಹ ಸಮ್ಮಿಲನ ಆಯೋಜಿಸಿದ್ದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಳಿನಾ ಪ್ರಸಾದ್ ಮಾತನಾಡಿದರು. ನಳಿನಾ ಪ್ರಸಾದ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಅಭ್ಯಾಗತರುಗಳಾಗಿ ಸ್ತ್ರೀಶಕ್ತಿ ಫೌಂಡೇಶನ್ ವಿೂರಾ ಭಯಂದರ್ ಇದರ ಕಾರ್ಯಾಧ್ಯಕ್ಷೆ ಶಾಲಿನಿ ಶೆಟ್ಟಿ ಮತ್ತು ಕನ್ನಡ ವೆಲ್ಫೇರ್ ಸೊಸೈಟಿಯ ಮಹಿಳಾ ವಿಭಾಗಧ್ಯಕ್ಷೆ…
ಬೆಳಗಾವಿಯಲ್ಲಿ ಆಸರೆಯನ್ನರಸಿ ಹೊರಟವರಿಗೆ ಸಂತೈಸುವ ಸಣ್ಣ ಪ್ರಯತ್ನವಾಗಿ ದಾನಿ – ದೀನರ ನಡುವಿನ ಸೇತುವೆಯಾಗಿ ಯುವ ಬಂಟರ ಸಂಘವೊಂದು ಸ್ಥಾಪನೆಯಾಗಲು ಹೊರಟಿವೆ
ಬೆಳಗಾವಿಯಲ್ಲಿ ಆಸರೆಯನ್ನರಸಿ ಹೊರಟವರಿಗೆ ಸಂತೈಸುವ ಸಣ್ಣ ಪ್ರಯತ್ನವಾಗಿ ದಾನಿ – ದೀನರ ನಡುವಿನ ಸೇತುವೆಯಾಗಿ ಯುವ ಬಂಟರ ಸಂಘವೊಂದು ಸ್ಥಾಪನೆಯಾಗಲು ಹೊರಟಿವೆ. ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ಪಾಲುದಾರ ರಂಜಿತ್ ಶೆಟ್ಟಿ ಕಾರ್ಕಳ ಇವರು ಉದ್ಯಮ ಕ್ಷೇತ್ರದ ಗುರು, ಸೋದರ ಸಂಬಂಧಿ, ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕ ರಾಜೇಂದ್ರ ವಿ ಶೆಟ್ಟಿಯವರ ಆಶೀರ್ವಾದ ಪ್ರೋತ್ಸಾಹದೊಂದಿಗೆ ಈ ಮಹಾನ್ ಕಾರ್ಯಕ್ಕೆ ಕೈ ಹಾಕಿದ್ದಾರೆ. ಬೆಳಗಾವಿಯ ಬಂಟ ಯುವಕರೆಲ್ಲರೂ ರಂಜಿತ್ ಶೆಟ್ಟಿ ಕಾರ್ಕಳ ಇವರನ್ನು ಸಂಪರ್ಕಿಸಿ ವಿವರಗಳನ್ನು ಪಡೆಯಬಹುದು. ಸಮಸ್ತ ಬಂಟ ಸಮಾಜದ ಪ್ರೋತ್ಸಾಹ, ಆಶೀರ್ವಾದ ಬೆಳಗಾವಿಯ ಯುವ ಬಂಟ ತಂಡಕ್ಕಿರಲಿ.ರಂಜಿತ್ ಶೆಟ್ಟಿ ಕಾರ್ಕಳ – 7411745666
ನವೆಂಬರ್ 1 ಎಲ್ಲೆಡೆ ಕನ್ನಡಗೀತೆಗಳ ಮಾರ್ದನಿ, ಹಳದಿ ಕೆಂಪು ಬಣ್ಣಗಳಿಂದ ಅಲಂಕೃತಗೊಂಡ ಜಿ ಎಮ್ ಛತ್ರ ಛಾಯದಲ್ಲಿ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಮತ್ತು ಜಿ ಎಮ್ ಗ್ಲೋಬಲ್ ಸ್ಕೂಲ್ ಜಂಟಿಯಾಗಿ ಸುವರ್ಣ ಕರ್ನಾಟಕದ 68ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿತು. ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಕನ್ನಡ ಧ್ವಜವನ್ನು ಅರಳಿಸಿ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭವನ್ನು ಹಾರೈಸಿ ಮಾತನಾಡಿ, ನಮ್ಮ ಮಾಧ್ಯಮ ಯಾವುದಾದರೇನು ನಮ್ಮೆಲ್ಲರ ಮಾತೃಭಾಷೆ ಕನ್ನಡವಾಗಿದೆ. ಸ್ಪಷ್ಟ ಓದು, ಶುದ್ಧ ಬರಹದ ಮೂಲಕ ಕನ್ನಡ ಭಾಷೆಯನ್ನು ಅಭಿವೃದ್ಧಿ ಪಡಿಸುವ. ಕನ್ನಡ ನಮ್ಮೆಲ್ಲರ ಉಸಿರಾಗಲಿ, ಕನ್ನಡದ ಕಂಪು ಎಲ್ಲ ಕಡೆ ಪಸರಿಸಲಿ ಎಂದರು. ಕಾರ್ಯಕ್ರಮದಲ್ಲಿ ಜಿ ಎಮ್ ಗ್ಲೋಬಲ್ ಸ್ಕೂಲ್ನ ಉಪ ಪ್ರಾಂಶುಪಾಲೆ ದೀಪ್ತಿ ನವೀನ್ ಶೆಟ್ಟಿ, ಜಿ ಎಮ್ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿರಿದ್ದರು. ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ಸಮೂಹ ಗಾಯನ, ನೃತ್ಯಗಳು…
ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ ನವರಾತ್ರಿಯ ಪ್ರಯುಕ್ತ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಹಾಗೂ ದಾಂಡಿಯಾ ರಾಸ್ ಧಾರ್ಮಿಕ ಕಾರ್ಯಕ್ರಮವು ಅಕ್ಟೋಬರ್ 22 ರಂದು ರವಿವಾರ ಸಂಜೆ 5 ಗಂಟೆಗೆ ಪುಣೆಯ ಕ್ಯಾಂಪ್ ನಲ್ಲಿಯ ಪುಣೆ ಕ್ಲಬ್ ಸಿನೆಮಾ ಹಾಲ್ ನಲ್ಲಿ ವಿವಿಧ ಧಾರ್ಮಿಕ, ಮನೋರಂಜನಾ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಚೂರು ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ದಸರಾ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಹಾಗೂ ಗೌರವ ಅತಿಥಿಯಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವೀಜೆತೆ, ಕಾರ್ಕಳದ ಹೆಸರಾಂತ ನೃತ್ಯ ಶಿಕ್ಷಕಿ, ಕಲಾ ಸಂಕುಲ ರಾಜ್ಯ ಮಟ್ಟದ ಶಿಕ್ಷಕಿ ರತ್ನ ಪ್ರಶಸ್ತಿ -23 ವಿಜೇತೆ ವಂದನಾ ಜಿ. ರೈ ಆಗಮಿಸಲಿದ್ದಾರೆ. ದಸರಾ ನಿಮಿತ್ತ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀದೇವಿ ದುರ್ಗಾ ಪೂಜೆ,…
ಚಿಣ್ಣರ ಬಿಂಬ ಮುಂಬಯಿ ಇದರ ಮೀರಾರೋಡ್ ಶಿಬಿರದ ಮಕ್ಕಳ ಪ್ರತಿಭಾನ್ವೇಷಣೆ ಸ್ವರ್ಧೆ ಆ.13 ರಂದು ಮಧ್ಯಾಹ್ನ ಭಾಯಂದರ್ ಪೂರ್ವದ ನ್ಯೂ ಸೈಂಟ್ ಅಗ್ನೇಸ್ ಹೈಸ್ಕೂಲ್ ಸಭಾಗೃಹದಲ್ಲಿ ಚಿಣ್ಣರ ಬಿಂಬದ ರೂವಾರಿ ಪ್ರಕಾಶ್ ಭಂಡಾರಿ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಶಿಬಿರದ ಮಕ್ಕಳ ಭಜನೆಯೊಂದಿಗೆ ಪ್ರತಿಭಾ ಸ್ವರ್ಧೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ಭಾಷಣ, ಭಾವಗೀತೆ, ಜಾನಪದ ಗೀತೆ, ಏಕಪಾತ್ರಾಭಿನಯ, ಛದ್ಮವೇಷ ಹಾಗೂ ಪಾಲಕರಿಗಾಗಿ ದೇಶ ಭಕ್ತಿಗೀತೆ ಸ್ವರ್ಧೆ ನಡೆಯಿತು. ಶಿಬಿರ ಮುಖ್ಯಸ್ಥೆ ವೀಣಾಕ್ಷಿ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಜತೆ ಕೋಶಾಧಿಕಾರಿ ರಮೇಶ್ ಎಂ.ಶೆಟ್ಟಿ ಸಿದ್ಧಕಟ್ಟೆ ಮಾತನಾಡಿ, ಚಿಣ್ಣರ ಬಿಂಬ ಸಂಸ್ಥೆ ಮಕ್ಕಳ ಭವಿಷ್ಯಕ್ಕೆ ಉತ್ತಮ ಆಡಿಪಾಯ ಹಾಕಿ ಕೊಡುತ್ತಿದೆ. ಪಾಲಕರು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈ ಸಂಸ್ಥೆಗೆ ಚಿಣ್ಣರಿಗೆ ನನ್ನಿಂದಾಗುವ ಅಳಿಲ ಸೇವೆ ಸದಾ ಇದೆ ಎಂದರು. ಕಾರ್ಯಕ್ರಮವನ್ನು ಸೈಂಟ್ ಆಗ್ನೇಸ್ ಇಂಗ್ಲಿಷ್ ಹೈಸ್ಕೂಲ್ ನ ಕಾರ್ಯಧ್ಯಕ್ಷ ಡಾ. ಅರುಣೋದಯ ರೈ…
ಕರಾವಳಿ ಮೂಲದ ಸಾಕಷ್ಟು ಕಲಾವಿದರು ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟದ ಯಶಸ್ಸು ಪಡೆದು ಜಗತ್ತಿನ ಗಮನ ಸೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಇದೀಗ ಮಂಗಳೂರು ಮೂಲದ ಮತ್ತೊಂದು ಪ್ರತಿಭಾವಂತರ ತಂಡ ಹೊಸ ಚಿತ್ರಕ್ಕೆ ಕೈಹಾಕಿದೆ. ಪಂಚರಂಗಿ ಫಿಲಂಸ್ ಲಾಂಛನದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಮತ್ತು ಗುರು ಹೆಗ್ಡೆ ನಿರ್ಮಾಣದಲ್ಲಿ ‘ಅಮರ್ಥ’ ನೂತನ ಕನ್ನಡ ಚಿತ್ರದ ಸ್ಕ್ರಿಪ್ಟ್ ಪೂಜೆ ಮತ್ತು ಮುಹೂರ್ತ ಸಮಾರಂಭ ಸಹಿಹಿತ್ಲು ಶ್ರೀ ಭಗವತಿ ಕ್ಷೇತ್ರದಲ್ಲಿ ನಡೆಯಿತು. ವಿನಯ್ ಪ್ರೀತಮ್ ನಿರ್ದೇಶನದಲ್ಲಿ ಸಿನಿಮಾ ತಯಾರಾಗುತ್ತಿದ್ದು, ಕ್ಯಾಮರಾಮ್ಯಾನ್ ಆಗಿ ಗುರುಪ್ರಶಾಂತ್ ರೈ, ನಿರ್ಮಾಣ ವಿನ್ಯಾಸಕರಾಗಿ ಪ್ರಶಾಂತ್ ಆಳ್ವ ಕಲ್ಲಡ್ಕ, ಕಲಾ ನಿರ್ದೇಶಕರಾಗಿ ಸಂತೋಷ್ ವೇಣೂರು, ಸಂಗೀತ ನಿರ್ದೇಶಕರಾಗಿ ಶಿನೋಯ್ ಜೋಸೆಫ್, ಸಂಕಲನಕಾರರಾಗಿ ಗಣೇಶ್ ನಿರ್ಚಾಲ್ ಕೆಲಸ ಮಾಡಲಿದ್ದಾರೆ. ತಾರಾಗಣದಲ್ಲಿ ರಾಜ್ ದೀಪಕ್, ಮೇಘನಾ ರಾಜ್, ಕೃತಿ ಶೆಟ್ಟಿ, ರೂಪ ವರ್ಕಾಡಿ, ನಮಿತಾ, ಶೈಲಾಶ್ರೀ, ಮಂಜುಭಾಷಿಣಿ, ಗೋಪಿನಾಥ್ ಭಟ್, ರಘು ಪಾಂಡೇಶ್ವರ್, ಉಷಾ ಭಂಡಾರಿ, ರವಿ ಭಟ್, ಮಂಜುನಾಥ ಹೆಗಡೆ, ಮಧು ಹೆಗಡೆ, ಅಶ್ವಿನಿ…
ಸದ್ಯ ದೇಶದಲ್ಲಿರುವ ಅಮೆಜಾನ್ ಮತ್ತು ಪ್ಲಿಪ್ಕಾರ್ಟ್ನಂಥ ಇ ಕಾಮರ್ಸ್ ವೇದಿಕೆಗಳಿಗೆ ಪ್ರತಿಯಾಗಿ ಕೇಂದ್ರ ಸರ್ಕಾರವೇ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್(ಓಎನ್ಡಿಸಿ) ಎಂಬ ಪ್ರತಿ ವೇದಿಕೆಯೊಂದನ್ನು ಸೃಷ್ಟಿಸಿದ್ದು, ಈಗ ಅದರಡಿಯಲ್ಲಿ ನಾನಾ ಇ ಕಾಮರ್ಸ್ ವೇದಿಕೆಗಳು ಆರಂಭವಾಗುತ್ತಿವೆ. 2022ರ ಏಪ್ರಿಲ್ನಲ್ಲೇ ಇದರ ಐಡಿಯಾ ಮೊಳಕೆಯೊಡೆದಿದ್ದು, ಈಗ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದಿದೆ. ಹಾಗಾದರೆ, ಏನಿದು ಓಎನ್ಡಿಸಿ? ಏಕೆ ಇದಕ್ಕಿಷ್ಟು ಮಹತ್ವ? ಇಲ್ಲಿದೆ ಮಾಹಿತಿ.. ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಮಾರ್ಕೆಟ್ ಎಂಬುದು ಓಎನ್ಡಿಸಿಯ ವಿಸೃತ ರೂಪ. ಸರಕು ಮತ್ತು ಸೇವೆಗಳನ್ನು ವರ್ತಕರಿಗೆ ಮಾರಾಟಕ್ಕೆ ಮತ್ತು ಗ್ರಾಹಕರಿಗೆ ಖರೀದಿಗೆ ಅವಕಾಶ ಮಾಡಿಕೊಡುವುದೇ ಈ ಓಎನ್ಡಿಸಿಯ ಧ್ಯೇಯ. ಕೇಂದ್ರ ಸರ್ಕಾರದ ಅಧೀನದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಒಎನ್ಡಿಸಿ ತನ್ನದೇ ವಿಶೇಷ ಇ- ವ್ಯವಸ್ಥೆ, ತಂತ್ರಗಳನ್ನು ಒಳಗೊಂಡಿದೆ. ಅಲ್ಲದೇ ನಿರ್ದಿಷ್ಟ ವಸ್ತುವಿಗೆ ಬೇಡಿಕೆ ಹೆಚ್ಚಾದಾಗ ಈ ನೆಟ್ವರ್ಕ್ ಜಾಲ ಖರೀದಿದಾರ ಮತ್ತು ಮಾರಾಟಗಾರನ ನಡುವಿನ ಸಂಪರ್ಕ ಸೇತುವಾಗಿ ಕೆಲಸ ಮಾಡುತ್ತದೆ. ಇದು ಒಂದು ಜಾಲವಾಗಿದ್ದು, ಮುಕ್ತವಾದ, ಎಲ್ಲವನ್ನೂ ಒಳಗೊಂಡ,…
ಕಾರ್ಕಳದಲ್ಲಿ ಬಿಜೆಪಿ ಭ್ರಷ್ಟಾಚಾರ ಹಾಗೂ ದರ್ಪ ರಾಜಕೀಯದಿಂದ ಬೇಸತ್ತ ಜನ ಬದಲಾವಣೆ ಬಯಸಿದ್ದು ದಕ್ಷ ಹಾಗೂ ಪ್ರಮಾಣಿಕ ಜನ ಸೇವಕ ಮುನಿಯಾಲು ಉದಯ ಶೆಟ್ಟಿ ಅವರನ್ನು ಜನ ಬೆಂಬಲಿಸುತ್ತಿದ್ದು ಪ್ರತಿಯೊಂದು ಕಡೆ ನಡೆಯುವ ಪ್ರಚಾರ ಸಭೆಗಳಲ್ಲಿ ಸೇರುತ್ತಿರುವ ಜನ ಸಾಗರವೇ ಸಾಕ್ಷಿಯಾಗಿದ್ದು ಬಹುಮತದಿಂದ ಉದಯಕುಮಾರ್ ಶೆಟ್ಟಿ ಅವರ ಗೆಲುವು ಖಚಿತವಾಗಿದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಸುಧೀರ್ ಕುಮಾರ್ ಮರೋಳಿ ಹೇಳಿದರು. ಅವರು ಮೇ 6 ರಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಹೆಬ್ರಿ ಬಸ್ ತಂಗುದಾಣದ ವಠಾರದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾರ್ಕಳ ಜನತೆಯ ಗೆಲುವು: ಸಮಾಜ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪುವುದು ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸುವುದು ನಿಜವಾಗ ಅಭಿವೃದ್ಧಿ ಎಂದು ತಿಳಿದ ಉದಯಕುಮಾರ್ ಶೆಟ್ಟಿ ಅವರ ಅಭಿವೃದ್ಧಿ ಪರ ಚಿಂತನೆ ಕಾರ್ಕಳಕ್ಕೆ ವರದಾನವಾಗಲಿದೆ. ಉತ್ಸವ ಅಬ್ಬರದ ಪ್ರಚಾರದಿಂದ ಜನರ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಯಾವುದೇ ಅಹಂ ಇಲ್ಲದೆ ಸಾಮಾನ್ಯ ಕಾರ್ಯಕರ್ತನನ್ನು ತಲುಪಬೇಕು ಆಗ…















