Author: admin

ಬಂಟರ ಸಂಘ ಬೆಂಗಳೂರು ಈ ಬಾರಿ ಯುವ ಬಂಟರ ಸಮಿತಿ ಬಂಟರನ್ನು ಒಗ್ಗೂಡಿಸಿ ಅದ್ದೂರಿಯಾಗಿ 31ನೇ ಡಿಸೆಂಬರ್ 2024 ರಂದು ಸಂಘದ ಆವರಣದಲ್ಲಿ ಹೊಸ ವರ್ಷಾಚರಣೆಯನ್ನು ಹಮ್ಮಿಕೊಂಡಿತ್ತು. ನವೆಂಬರ್ 22ರಂದು ಗಣ್ಯರ ಸಮ್ಮುಖದಲ್ಲಿ ಪೋಸ್ಟರ್ ಲೋಕಾರ್ಪಣೆ ಮಾಡಿ ಸಮಾಜದ ಜನರ ಜೊತೆ ಕಾರ್ಯಕ್ರಮ ಸಂಬಂಧಿಸಿದ ವಿಚಾರಗಳನ್ನು ಹಂಚಿಕೊಳ್ಳುತ್ತಾ ಬಂದಿದ್ದ ತಂಡ ಜನರ ಮನ ಮುಟ್ಟಲು ಎಲ್ಲಾ ತರದಲ್ಲೂ ಪ್ರಯತ್ನಿಸಿತ್ತು.31ರ ಸಂಜೆ ಕಿಕ್ಕಿರಿದು ತುಂಬಿದ್ದ ಬಂಟರ ಬಳಗ, ದೀಪಾಲಂಕಾರಗೊಂಡು ಮಿರುಗುತ್ತಿದ್ದ ಬಂಟರ ಸಂಘದ ಆವರಣದಲ್ಲಿ ಸಂಜೆ 7 ರಿಂದಲೇ ಕಾರ್ಯಕ್ರಮಗಳು ಪ್ರಾರಂಭವಾದವು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿಜಯ ಶೆಟ್ಟಿ ಹಾಲಾಡಿ, ಕೋಶಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಯುವ ಸಮಿತಿ ಅಧ್ಯಕ್ಷ ಅಜಿತ್ ವಿ ಶೆಟ್ಟಿ ಹಾಗೂ ಸಂಚಾಲಕ ಪ್ರಸಾದ್ ಶೆಟ್ಟಿ ಅರೆಹೊಳೆ ಸಮೇತರಾಗಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವೇದಿಕೆ ಅಲಂಕರಿಸಿ ನೆರೆದ ಬಂಟ ಬಂಧುಗಳಿಗೆ ಸ್ವಾಗತಿಸಿ ಕಾರ್ಯಕ್ರಮಕ್ಕೆ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘಕ್ಕೆ ಒಂದು ಲಕ್ಷ ರೂಪಾಯಿ ಧನಸಹಾಯ ನೀಡಿದರು. ದೇಣಿಗೆಯ ಚೆಕ್ಕನ್ನು ನೀಡಿ ಸಮಾಜಮುಖಿ ಕೆಲಸ ಕಾರ್ಯ ನಿರ್ವಹಿಸುವಂತೆ ಹೇಳಿ ಶುಭ ಹಾರೈಸಿದರು. ಈ ಸಂಧರ್ಭ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪುತ್ತೂರು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷ ಕುಮಾರ್ ರೈ, ಕಾರ್ಯದರ್ಶಿ ಪ್ರಜ್ವಲ್ ರೈ ಸೊರಕೆ, ಪುತ್ತೂರು ಬಂಟರ ಸಂಘದ ಮಾಜಿ ಕಾರ್ಯದರ್ಶಿ ಮೊಹನ ರೈ ನರಿಮೊಗರು, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ ಶೆಟ್ಟಿ ಉಪಸ್ಥಿತರಿದ್ದರು.

Read More

ಕಿಡ್ನಿ ಪೈಲೂರ್ ಪ್ರಕರಣದಲ್ಲಿ ಈಗ ಮೊವ್ವತ್ತರೊಳಗಿನ ಮಕ್ಕಳೂ ಜಾಸ್ತಿಯಾಗಿ ಸಿಲುಕುತ್ತಿದ್ದಾರೆ. ಕಿಡ್ನಿ ಡಯಾಲಿಸೀಸ್ ವಾರ್ಡಿಗೊಮ್ಮೆ ನೀವು ಎಂಟ್ರಿ ಕೊಟ್ಟರೆ ಈ ಕರಾಳ ಸತ್ಯ ನಿಮಗೂ ಅರ್ಥವಾದೀತು. ಸ್ಟಿಂಗ್ ಎನ್ನುವ ಹೆಸರಿನ ಬಣ್ಣ ಬಣ್ಣದ ಪೇಯವೊಂದು ಮಕ್ಕಳ ಕೈಗೆ ಬಹಳ ಸುಲಭವಾಗಿ ಸಿಗುತ್ತಿದೆ, ಕೇವಲ ಮೂರೇ ಮೂರು ದಿವಸ ಯಾವುದೇ ಮಗು ಸ್ಟಿಂಗ್ ಕುಡಿದರೆ ಅದರ ಅಡಿಕ್ಷನ್ ಶುರುವಾಗುತ್ತದೆ ಮತ್ತು ಆ ಮಗುವಿನ ಕರಾಳ ಅಂತ್ಯವೂ ಸಮೀಪಿಸುತ್ತದೆ! ಅಂಗಡಿ, ಬೇಕರಿಗಳ ಮತ್ತು ಮಾಲ್ ಗಳಲ್ಲಿ ಇದನ್ನ ಮಾರಾಟಕ್ಕಿಟ್ಟವರಿಗೆ ಮನೆಯಲ್ಲಿ ಮಕ್ಕಳಿದ್ದರೆ, ಕನಿಷ್ಠ ಪಾಪ ಪ್ರಜ್ಜೆ ಇದ್ದರೆ ದಯವಿಟ್ಟು ಸ್ಟಿಂಗ್ ಎನ್ನುವ ವಿಷವನ್ನ ಮಾರಾಟ ಮಾಡಿ ಪಾಪವನ್ನು ಕೊಳ್ಳಬೇಡಿ! ಯಾರದೋ ಮನೆಯ ಬೆಳಕು ಆರಲಿಕ್ಕೆ ನೀವೂ ಕಾರಣರಾಗುತ್ತೀರಿ ಎನ್ನುವುದನ್ನ ಮರೆಯಬೇಡಿ. ನಮ್ಮ ಟೀಮ್ ಅಭಿಮತ ಇದನ್ನ ಯಾವುದೇ ಅಂಗಡಿಯಲ್ಲಿ ಮಾರಾಟ ಮಾಡುವುದನ್ನ ಗಮನಿಸಿದರೂ ಅವರಿಗೆ ಮನವರಿಕೆ ಮಾಡಿ ಇನ್ನುಮುಂದೆ ಮಾರಾಟ ಮಾಡದಂತೆ ಒತ್ತಾಯಿಸುತ್ತದೆ. ನಾನೂ ರೆಡ್ ಬುಲ್ ಕುಡಿಯುತ್ತೇನೆ! ರಾತ್ರಿ ಪ್ರಯಾಣದ ವೇಳೆಯಲ್ಲಿ ನಿದ್ದೆ…

Read More

‘ಗ್ರಹ ಪಂಕ್ತಿಯಲ್ಲಿ ಅತ್ಯಂತ ಪ್ರಭಾವಶಾಲಿಯಾದ ಶನಿ ಗ್ರಹದ ಕಾರಣದಿಂದ ವಿವಿಧ ಬಗೆಯ ಜಾತಕ ದೋಷಗಳು ಸಂಭವಿಸುತ್ತವೆ. ಅದರ ನಿವಾರಣೆಗಾಗಿ ಉಳ್ಳವರು ದುಬಾರಿ ಶನಿ ಶಾಂತಿ ಪೂಜೆಗಳನ್ನು ಮಾಡಿಸುವುದು ವಾಡಿಕೆಯಾಗಿದೆ. ಆದರೆ ಶನಿಕಥಾ ಪ್ರವಚನ, ಪಠಣ, ಕೀರ್ತನ ಮತ್ತು ಅವುಗಳನ್ನು ಭಕ್ತಿಪೂರ್ವಕ ಶ್ರವಣ ಮಾಡುವುದರಿಂದ ಜನಸಾಮಾನ್ಯರೂ ಬಹು ಸುಲಭವಾಗಿ ಶನಿದೋಷ ಮುಕ್ತರಾಗಲು ಸಾಧ್ಯ’ ಎಂದು ಯಕ್ಷಗಾನ ಅರ್ಥಧಾರಿ ಮತ್ತು ಪ್ರವಚನಕಾರ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಬಜ್ಪೆ ಶ್ರೀ ಶನೈಶ್ಚರ ದೇವಸ್ಥಾನದ ವಾರ್ಷಿಕ ಜಾತ್ರಾ ಸಂದರ್ಭದಲ್ಲಿ ‘ಶ್ರೀ ಶನೈಶ್ಚರ ಮಹಾತ್ಮೆ – ಯಕ್ಷ ಕಾವ್ಯ ಕಥನ’ ಕಾರ್ಯಕ್ರಮದಲ್ಲಿ ಪ್ರವಚನಕಾರರಾಗಿ ಅವರು ಮಾತನಾಡಿದರು. ಖ್ಯಾತ ಹರಿದಾಸ ಮತ್ತು ಗಾಯಕ ತೋನ್ಸೆ ಪುಷ್ಕಳ ಕುಮಾರ್ ಹಾಗೂ ಮಹಿಳಾ ಭಾಗವತರು ಭವ್ಯಶ್ರೀ ಕುಲ್ಕುಂದ ಕಾವ್ಯ ಗಾಯನ ಮಾಡಿದರು. ವರುಣ್ ಆಚಾರ್ಯ ಮತ್ತು ಸಮರ್ಥ್ ಉಡುಪ ಚೆಂಡೆ ಮದ್ದಲೆಗಳಲ್ಲಿ ಸಹಕರಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ವ್ಯಾಖ್ಯಾನ ನೀಡಿದರು.ಶ್ರೀ ಶನೈಶ್ಚರ ದೇವಸ್ಥಾನದ ಧರ್ಮದರ್ಶಿ ಆನಂದ ಪೂಜಾರಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.…

Read More

ಕ್ರಿಯೇಟಿವ್ ಪ.ಪೂ. ಕಾಲೇಜು, ಕಾರ್ಕಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ, ಸಿದ್ಧಾಪುರ, ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸನಿವಾಸ ಪ್ರೇರಣಾ ಶಿಬಿರ – 2025 ಉದ್ಘಾಟನೆಗೊಳಿಸಲಾಯಿತು. ಶಿರಸಿಯ ಸಿದ್ಧಾಪುರ ಕಾನಸೂರಿನಲ್ಲಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶಿಬಿರಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಉದ್ಘಾಟಕರಾಗಿ ಆಗಮಿಸಿ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ಮಾತನಾಡಿ ಹತ್ತನೆಯ ತರಗತಿಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಏನಾಗಬೇಕೆಂದು ಕನಸು ಕಾಣುತ್ತಾರೋ ಅದನ್ನು ನನಸು ಮಾಡಲು ಮುಂದಿನ ಪಿ.ಯು.ಸಿ ಶಿಕ್ಷಣ ಅತ್ಯಂತ ಪ್ರಮುಖವಾದದ್ದು. ದೂರದರ್ಶಿತ್ವದೊಂದಿಗೆ ಮುಂದಿನ ಹೆಜ್ಜೆ ಇರಿಸಿ, ಉತ್ತಮ ಫಲಿತಾಂಶವೂ ಇಂತಹ ಶಿಬಿರಗಳಿಂದ ದೊರಕುತ್ತದೆ. ಶಿರಸಿ – ಸಿದ್ಧಾಪುರದ ಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಎಚ್. ನಾಯ್ಕ ಅವರು ಮುಂದಿನ ಶೈಕ್ಷಣಿಕ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನಿಯಾಗಿ ಮೂಡಿಬರುವಂತೆ ಪ್ರಯತ್ನ…

Read More

ಮೂಡುಬಿದಿರೆ: ಹೊರಗಿನ ಪ್ರಪಂಚವನ್ನು ತೆರೆದ ಕಣ್ಣುಗಳಿಂದ ಕಂಡಾಗ ಅನೇಕ ಸಂಗತಿಗಳು ನಮ್ಮ ಮನಸ್ಸನ್ನು ತಟ್ಟಿ ಯೋಚನೆಗೀಡು ಮಾಡಿದಾಗ ಅಂತಹ ಸಂಗತಿಗಳೇ ನಮ್ಮನ್ನು ಕವಿತ್ವದೆಡೆಗೆ ಸೆಳೆಯುತ್ತವೆ ಎಂದು ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ನುಡಿದರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಮತ್ತು ಶ್ರೀ ಮಹಾವೀರ ಪ.ಪೂ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕನ್ನಡ ಚಿಂತನ ಕಾರ್ಯಕ್ರಮದಲ್ಲಿ ಅವರು ‘ಕನ್ನಡ ಕಾವ್ಯ ಮತ್ತು ಜೀವನಪ್ರೀತಿ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಭಾವನಾತ್ಮಕ ಸಂಗತಿಗಳಿರಬಹುದು, ನೋವಿನ ಘಟನೆಗಳೇ ಇರಬಹುದು, ಸಂತೋಷದ ಕ್ಷಣಗಳೇ ಇರಬಹುದು ಆ ಸಂದರ್ಭಗಳಲ್ಲಿ ನಮ್ಮನ್ನು ಕಾಡುವ ಸಂವೇದನೆ, ಜೀವನಪ್ರೀತಿ ಕವಿಮನಸ್ಸಿಗೆ ಮೂಲ. ಒಳ್ಳೆಯ ಬರಹವೂ ಕಾವ್ಯವಾಗಬಲ್ಲುದು ಮತ್ತು ಕಾವ್ಯ ರಚಿಸದಿದ್ದರೂ ಜೀವನ ಪ್ರೀತಿಯ ಸಂವೇದನೆ ಇರುವವರೆಲ್ಲರೂ ಕವಿಗಳೇ ಆಗಿರುತ್ತಾರೆ ಎಂದರು. ಸಭಾಧ್ಯಕ್ಷತೆಯನ್ನುವಹಿಸಿದ್ದ ಕ.ಸಾ.ಪ. ಮೂಡುಬಿದಿರೆತಾಲೂಕು ಘಟಕದ ಅಧ್ಯಕ್ಷ ಪ್ರೊ. ಕೆ.ವೇಣುಗೋಪಾಲ ಶೆಟ್ಟಿಯವರು ಮಾತನಾಡಿ, ಇಂದಿನ ಯುವಜನತೆಯಲ್ಲಿ ಭಾವನಾತ್ಮಕ ಸಂಬಂಧಗಳು…

Read More

ಮೂಡುಬಿದಿರೆ: ಕಾಲ ಕಾಲಕ್ಕೆ  ಸರಿಯಾದ ವಿದ್ಯೆ ಬುದ್ಧಿಯ ಜೊತೆಗೆ ಹೃದಯಕ್ಕೆ ಸಂಸ್ಕಾರವನ್ನು ಒದಗಿಸುವ ಕೆಲಸ ಈ ಪ್ರತಿಭಾ ಕಲೋತ್ಸವದ  ಮೂಲಕ ಸಹಕಾರಗೊಳ್ಳಲಿದೆ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಆಯಕ್ತ ಹಾಗೂ  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ನುಡಿದರು. ಭಾರತ್ ಸ್ಕೌಟ್ಸ್ ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ  ‘ಪ್ರತಿಭಾ ಕಲೋತ್ಸವ’ವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲೆ ಮೊಟ್ಟ ಮೊದಲ ಬಾರಿಗೆ ಭಾರತ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗಾಗಿ  ಜಿಲ್ಲಾ ಮಟ್ಟದ  ಪ್ರತಿಭಾ ಕಲೋತ್ಸವ ಹಮ್ಮಿಕೊಂಡಿರುವುದು ಖುಷಿ ನೀಡಿದೆ.  ಪಠ್ಯೇತರವಾಗಿ ಮನಸ್ಸನ್ನು ಕಟ್ಟುವ ಇಂತಹ ಕರ‍್ಯಕ್ರಮಗಳು ಎಲ್ಲಾ ಭಾಗಗಳಲ್ಲೂ ನಡೆಯಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್ ಕುರಿತು ಇನ್ನಷ್ಟು ಜಾಗೃತಿ ಮೂಡಿ, ಸ್ಕೌಟ್ಸ್ ಗೈಡ್ಸ್ ಆಂದೋಲನ ದೇಶದಾದ್ಯಂತ ಮುಂಚೂಣಿಯಲ್ಲಿ ನಿಲ್ಲಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕು…

Read More

ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಉದ್ಯೋಗ ಕೌಶಲ್ಯ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ 2025 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಹೊಸ ಬ್ಯಾಚ್ ಗಳನ್ನು ಲಯನ್ಸ್ ವಲಯ-1 ರ ವಲಯ ಅಧ್ಯಕ್ಷ ಹಾಗೂ ದುರ್ಗಾಂಬಾ ವಿದ್ಯಾ ಸಂಸ್ಥೆ ಅಲಂಕಾರು ಇದರ ಸಂಚಾಲಕರಾದ ದಯಾನಂದ ರೈ ಮನವಳಿಕೆ ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತರಬೇತಿಗೆ ಸೇರಿದ ವಿದ್ಯಾರ್ಥಿಗಳಿಗೆ ಅವರು ಶುಭ ಹಾರೈಸಿ ವಿದ್ಯಾಮಾತಾ ಅಕಾಡೆಮಿಯು ನಡೆಸುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಹಾಜಿ ಕುಕ್ಕುವಳ್ಳಿಯವರು ಈಗಾಗಲೇ ತರಬೇತಿ ಮುಗಿಸಿರುವ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರನ್ನು ಸನ್ಮಾನಿಸಲಾಯಿತು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ದಯಾನಂದ ರೈ ಮನವಳಿಕೆಯವರು ಬಹುಮಾನವನ್ನು ವಿತರಿಸಿದರು. ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ವಿದ್ಯಾಮಾತಾ ಅಕಾಡೆಮಿಯಲ್ಲಿ ಎಫ್.ಡಿ.ಎ., ಎಸ್.ಡಿ.ಎ., ಪಿ.ಡಿ.ಓ., ವಿ.ಎ.ಓ., ಬ್ಯಾಂಕಿಂಗ್ ಕಾರ್ಪೊರೇಟಿವ್, ರೈಲ್ವೆ…

Read More

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರ ಉಪಸ್ಥಿತಿಯಲ್ಲಿ ಜನವರಿ 6ರಂದು ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ನೀಲಯ್ಯ ಅಗರಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಡಿ.ಆರ್ ರಮೇಶ್ ಸೇರಿದಂತೆ ಯೂನಿಯನ್ ನ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು. ಚುನಾವಣಾ ರೆಟರ್ನಿಂಗ್ ಅಧಿಕಾರಿ ಸುಧೀರ್ ರವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷರ ಪರಿಚಯ: ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿರುವ ಶಶಿಕುಮಾರ್ ರೈರವರು ಪುತ್ತೂರು ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಎಂಟು ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ…

Read More

ಸಾಣೂರು ಮುರತ್ತಂಗಡಿ ಶ್ರೀ ಭಕ್ತ ವತ್ಸಲ ಅಯ್ಯಪ್ಪ ಸೇವಾ ಸಮಿತಿಯ ಆಶ್ರಯದಲ್ಲಿ 13ನೇ ವರ್ಷದ ಮಹಾಪೂಜೆಯು ಜನವರಿ 10ರಂದು ಜರುಗಲಿದೆ. ಶಿವಾನಂದ ಶಾಂತಿ ಮೂಡಬಿದಿರೆ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಬೆಳಿಗ್ಗೆ 7:30ರಿಂದ ಸ್ವಾಮಿಗಳು ಇರುಮುಡಿ ಕಟ್ಟುವುದು, 10 ಗಂಟೆಗೆ ಭಜನಾ ಕಾರ್ಯಕ್ರಮ, 12 ಗಂಟೆಗೆ ಮಹಾಪೂಜೆಯಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಶ್ರೀ ಸೌಕೂರು ಕ್ಷೇತ್ರ ಮಹಾತ್ಮೆ : ಸಂಜೆ ಏಳರಿಂದ ತುಳಸಿ ಶೆಟ್ಟಿ ಮತ್ತು ಗಣೇಶ್ ಶೆಟ್ಟಿ ಹಾಗೂ ಮಕ್ಕಳು ಇವರ ಸೇವಾರ್ಥವಾಗಿ ಪಂಚ ಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಸಾರಥ್ಯದ ಸದಾಶಿವ ಅಮೀನ್ ಇವರ ಪ್ರಧಾನ ಭಾಗವತಿಕೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಸೌಕೂರು ಇವರು ‘ಭಕ್ತ ವತ್ಸಲ’ ಮನೆಯ ಮುಂಭಾಗದಲ್ಲಿನ ಭವ್ಯ ರಂಗಮಂಟಪದಲ್ಲಿ ಶ್ರೀ ಸೌಕೂರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ಆಡಿ ತೋರಿಸಲಿದ್ದಾರೆ. ಸಂಜೆ 6.30ಕ್ಕೆ ಚೌಕಿ ಪೂಜೆ ನಂತರ 8ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ.ಸಭಾ ಕಾರ್ಯಕ್ರಮದಲ್ಲಿ ಸಾಣೂರು…

Read More