Author: admin

ಮಂಗಳೂರಿನ ಹೊಟೇಲೊಂದರಲ್ಲಿ ಕೂತು ಊಟ ಮಾಡುತ್ತಿದ್ದೆವು. ಅಲ್ಲಿ ರಘು ದೀಕ್ಷಿತ್ ಹಾಡು ಹಚ್ಚಿದ್ದರು! ನಮ್ಮ ಮುಂದೆ ಕೂತಿದ್ದ ವ್ಯಕ್ತಿ ವೈಟರನ್ನ ಕರೆದು ’ಪ್ಲೀಸ್ ಆ ಹಾಡು ಬಿಟ್ಟು ಬೇರೆ ಯಾರದ್ದಾದ್ರೂ ಹಾಕಿ, ಕಿರಿ ಕಿರಿ ಆಗೊತ್ತೆ’ ಎಂದರು. ಅಸಲಿಗೆ ಅವತ್ತು ನಮ್ಮ ಮುಂದೆ ಕೂತಿದ್ದ ವ್ಯಕ್ತಿ ರಘು ದೀಕ್ಷಿತ್ ! ನಾನು ಎಲ್ಲೇ ಹೋಗಲಿ ನನಗೆ ಖುಶಿ ಆಗೊತ್ತೆ ಅಂತ ನನ್ನದೇ ಹಾಡು ಹಾಕ್ತಾರೆ, ಹೀಗಾದ್ರೆ ಬೇರೆಯವರ ಹಾಡು ಕೇಳುವ ಸುಖವೆಲ್ಲಿ? ಎನ್ನುವುದು ರಘು ದೀಕ್ಷಿತ್ ಪ್ರಶ್ನೆ! ಹೀಗೆ ಮಾತಿನ ನಡುವೆ ಅಭಿಮತದ ಹಿಂದಿನ ಕಾರ್ಯಕ್ರಮದ ಬಗ್ಗೆ ಮಾತಾಡುತ್ತಾ ಜರ್ನಿಥೇಟರ್ ಟೀಮಿನ ಹಾಡಿನ ಅದರಲ್ಲೂ ಮೇಘನ ಕುಂದಾಪುರ ಹಾಡಿನ ಬಗ್ಗೆ ಅವರು ಪ್ರಸ್ತಾಪಿಸುತ್ತಾರೆ. ’ಏನ್ ಸಕ್ಕತ್ತಾಗಿ ಹಾಡ್ತಾಳಲ್ಲ ಆ ಹುಡ್ಗಿ’ ಅಂತ! ಚಕ್ ಅಂತ ಮೇಘನಾಗೆ ಕಾಲ್ ಹಚ್ಚಿ ಯಾರೋ ನಿನ್ನ ಹಾಡಿನ ಬಗ್ಗೆ ಮಾತಾಡ್ತಾ ಇದ್ದಾರೆ ಕೇಳು ಎಂದು ಕೊಟ್ಟೆ! ’ನಾನು ನಿಮ್ಮ ಹಾಡಿಗೆ ಫ಼್ಯಾನ್ ಎಂದರು ದೀಕ್ಷಿತ್! ಆ…

Read More

ಫೇಮಸ್ ಯೂತ್ ಕ್ಲಬ್ (ರಿ) 10ನೇ ತೋಕೂರು ಇದರ ವಾರ್ಷಿಕ ಮಹಾಸಭೆಯನ್ನು ದಿನಾಂಕ 26.01.2027 ನೇ ಭಾನುವಾರ ಸಂಸ್ಥೆಯ ಕಾರ್ಯಾಲಯದಲ್ಲಿ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರುವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು. ವಾರ್ಷಿಕ ವರದಿ ಮತ್ತು ಆಯವ್ಯಯದ ಮಂಡನೆಯನ್ನು ಕಾರ್ಯದರ್ಶಿ, ಹಿಮಕರ್ ಕೋಟ್ಯಾನ್ ರವರು ನೆರವೇರಿಸಿಕೊಟ್ಟರು. ಗೌರವ ಅಧ್ಯಕ್ಷರಾದ ಗುರುರಾಜ ಪೂಜಾರಿಯವರು ಉಪಸ್ಥಿತರಿದ್ದು, ಈ ಹಿಂದಿನ ಆರು ವರ್ಷಗಳ ಕಾಲ ಸಂಸ್ಥೆಯು ಅತ್ಯುತ್ತಮ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿರುತ್ತದೆ. ಈ ಬಗ್ಗೆ ಅಭಿನಂದನೆಯನ್ನು ಸಲ್ಲಿಸಿದರು. ಅಧ್ಯಕ್ಷೀಯ ಮಾತಿನಲ್ಲಿ ಭಾಸ್ಕರ್ ಅಮೀನ್ ರವರು ಮಾತನಾಡಿ, ತನ್ನ ಅಧ್ಯಕ್ಷತೆಯ ಆರು ವರ್ಷಗಳ ಕಾಲ ಸಂಸ್ಥೆಯ ಸದಸ್ಯರ ವಿಶೇಷವಾಗಿ ಮಹಿಳಾ ಮಂಡಲದ ಸದಸ್ಯರ ಸಹಕಾರವನ್ನು ಸ್ಮರಿಸಿದರು. ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಜವಾಬ್ದಾರಿ ನೂತನ ಸಮಿತಿ ಸಮಿತಿಯದ್ದಾಗಿದೆ ಎಂಬ ಅಬಿಪ್ರಾಯವನ್ನು ವ್ಯಕ್ತಪಡಿಸಿದರು. ನೂತನ ಅಧ್ಯಕ್ಷರಾಗಿ ಸಂಘಟಕ ಸಂಪತ್ ಜೆ. ಶೆಟ್ಟಿ, ಕಾರ್ಯದರ್ಶಿಯಾಗಿ ಮೋಹನ್ ದಾಸ್ ದೇವಾಡಿಗ, ಉಪಾಧ್ಯಕ್ಷರಾಗಿ ಮಹಮ್ಮದ್ ಶರೀಫ್, ಕೋಶಾಧಿಕಾರಿಯಾಗಿ ಶಂಕರ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಗಳಾಗಿ ಸಂದೇಶ ಆಚಾರ್ಯ…

Read More

ಪುತ್ತೂರು ಸೇರಿದಂತೆ ವಿವಿಧೆಡೆ ಹೆಚ್.ಪಿ.ಆರ್ ಇನ್ಸ್ಟಿಟ್ಯೂಷನ್ ನಡೆಸುತ್ತಿರುವ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಮುಖಂಡ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ನಿವಾಸಿ ಹರಿಪ್ರಸಾದ್ ರೈ ಅವರ ಉಡುಪಿಯ ಮನೆಗೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸೌಹಾರ್ದ ಭೇಟಿ ನೀಡಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಯಿತು. ಮಾಜಿ ಸಚಿವರುಗಳಾದ ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಹರಿಪ್ರಸಾದ್ ರೈಯವರ ಪತ್ನಿ ವಿಜೇತ ರೈ ಅತಿಥಿಗಳನ್ನು ಸತ್ಕರಿಸಿದರು.

Read More

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕುಂದಾಪುರದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ದೀನಪಾಲ ಶೆಟ್ಟಿ ಮೊಳಹಳ್ಳಿ ಆಯ್ಕೆಯಾಗಿದ್ದಾರೆ.ನಿರ್ದೇಶಕರಾಗಿ ದಿವಾಕರ ಪೂಜಾರಿ, ಅಣ್ಣಯ್ಯ ಗಾಣಿಗ, ಜಿ. ಮಹಮ್ಮದ್, ಗೋಪಾಲ ಬಳೆಗಾರ, ಗೀತಾ ಎಸ್. ಶೆಟ್ಟಿ, ಗೌರಿ, ಶೇಖರ ಜಾತ್ರಬೆಟ್ಟು ಸುಖಾನಂದ ಶೆಟ್ಟಿ, ಲಲಿತಾ, ವೆಂಕಪ್ಪ ಪೂಜಾರಿ, ರಾಜೇಂದ್ರ ಶೆಟ್ಟಿ ಬಿ ಆಯ್ಕೆಯಾಗಿದ್ದಾರೆ.

Read More

ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರದ ಉದ್ಘಾಟನಾ ಸಮಾರಂಭ 27.01.2025 ರಂದು ಲಯನ್ಸ್ ಪ್ರೌಢಶಾಲಾ ಸಭಾಂಗಣ, ಶಿರಸಿ (ಉ. ಕ )ಯಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟಕರಾಗಿ ಆಗಮಿಸಿದ ಶಿರಸಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಎಂ.ಎಸ್ ಪ್ರಸನ್ನಕುಮಾರ್ ರವರು ಪ್ರೇರಣಾ ಶಿಬಿರ ಸಾಗಿ ಬಂದ ಹಾದಿಯ ಕುರಿತು ಮಾತನಾಡಿದರು. ಕಳೆದ ಬಾರಿಯ ವಾರ್ಷಿಕ ಫಲಿತಾಂಶದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ 39 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ಅತ್ಯುತ್ತಮ ಅಂಕಗಳೊಂದಿಗೆ ಗುರುತಿಸಿಕೊಂಡಿದ್ದು, ಈ ಪ್ರೇರಣಾ ಶಿಬಿರಕ್ಕೆ ಸಹಕರಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಪ್ರಪ್ರತಿಷ್ಠಾನ, ಕಾರ್ಕಳದ ಸಹಕಾರವನ್ನು ಸ್ಮರಿಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್ ರವರು ಎಸ್.ಎಸ್.ಎಲ್.ಸಿ ಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಪಡೆಯುವ ಸಲುವಾಗಿ ವಿಶೇಷ ತರಬೇತಿ ನೀಡುವ ಈ ಪ್ರೇರಣಾ ಶಿಬಿರದ…

Read More

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್‌ವತಿಯಿಂದ ಸೋಮವಾರ ಕುವೆಂಪು ಸಭಾಂಗಣದಲ್ಲಿ ಅಘನಾಶಿನಿ ಸ್ಪೀಕ್ಸ್ – ರಿವರ್ ರಿದಮ್ಸ್ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಘನಾಶಿನಿ ಸಾಕ್ಷ್ಯಚಿತ್ರ ನಿರ್ದೇಶಕ ಅಶ್ವಿನಿ ಕುಮಾರ್ ಭಟ್ ಮಾತನಾಡಿ, ಸಾಕ್ಷ್ಯಚಿತ್ರ ರಚನೆಯ ಸೂಕ್ಷ್ಮಗಳನ್ನು ವಿವರಿಸಿದರು. ಕಥೆ ಹೇಳುವ ಮಹತ್ವವನ್ನು ತಿಳಿಸಿದರು. “ಸಾಕ್ಷ್ಯಚಿತ್ರ ನಿರ್ಮಾಣ ಕೇವಲ ಕ್ಷಣಗಳನ್ನು ಸೆರೆಹಿಡಿಯುವುದೇ ಮುಖ್ಯ ಅಲ್ಲ, ಚಿತ್ರಕಥೆ, ಸಂಕಲನ ಮತ್ತು ಛಾಯಾಗ್ರಹಣದ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಅಂಶಗಳು ಸಮ್ಮಿಳಿತಗೊಂಡು ನೈಜ್ಯತೆಯ ಸಾಕ್ಷೀಕರಣವಾದಾಗ ಮನಸೆಳೆಯುವ ಸಾಕ್ಸ್ಯಚಿತ್ರ ಹೊರಹೊಮ್ಮಲು ಸಾಧ್ಯ ಎಂದರು. ಅಘನಾಶಿನಿ ಸಾಕ್ಷ್ಯಚಿತ್ರ ನಿರ್ಮಾಣ ನಂತರದ ಪ್ರಭಾವದ ಕುರಿತು ಮಾತನಾಡಿದ ಅವರು ಈ ಸಾಕ್ಸ್ಯಚಿತ್ರವು ನದಿಗಳನ್ನ ಅವುಗಳ ನೈಸರ್ಗಿಕ ಸ್ಥಿತಿಯಲ್ಲಿ ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಿತು.”ಅಘನಾಶಿನಿ ಅಳಿವೆ ಪ್ರದೇಶವನ್ನು ರಾಮ್ಸಾರ್ ಸೈಟ್ ಎಂದು ಪ್ರಸ್ತಾಪಿಸುವಲ್ಲಿ ಈ ಸಾಕ್ಸ್ಯಚಿತ್ರವು ಪ್ರಮುಖ ಪಾತ್ರ ವಹಿಸಿತು ಎಂದರು. ಸ್ಥಳೀಯ ನೇತ್ರಾವತಿ ನದಿಯನ್ನು ಸಂರಕ್ಷಿಸಲು ಹೇಗೆ ಕೊಡುಗೆ ನೀಡಬಹುದು ಎಂದು ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ “ಜನಸಾಮಾನ್ಯರು ನದಿ…

Read More

ಉಳ್ಳಾಲದ ಯುವಕನೋರ್ವ ಕ್ರೀಡಾ ಜಗತ್ತಿನಲ್ಲಿ ಸಾಧಿಸಿದ ಸಾಧನೆ ಅದ್ಭುತವಾದುದು. ಅದರಲ್ಲೂ ಕಬಡ್ಡಿ ಆಟದಲ್ಲಿ ವಿಶೇಷ ಆಸಕ್ತಿ ವಹಿಸಿ ಸತತ ಅಭ್ಯಾಸದಿಂದ ಓರ್ವ ಅಪ್ರತಿಮ ಕಬಡ್ಡಿ ಕ್ರೀಡಾ ಪಟು ಎಂದು ಗುರುತಿಸಿಕೊಳ್ಳುವುದರ ಜೊತೆಗೆ ಅದೆಷ್ಟೋ ಯುವ ಕ್ರೀಡಾಪಟುಗಳಿಗೆ ತರಬೇತುದಾರನಾಗಿ ಅವರನ್ನು ಶ್ರೇಷ್ಠ ಆಟಗಾರರನ್ನಾಗಿ ಸಿದ್ಧಗೊಳಿಸಿದ ಹೆಗ್ಗಳಿಕೆ ಇವರಿಗಿದೆ. 1992ರಲ್ಲಿ ಉಳ್ಳಾಲದಲ್ಲಿ ಜನಿಸಿದ ಆಕಾಶ್ ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ದೈಹಿಕ ಶಿಕ್ಷಣ ತರಬೇತಿ ಪಡೆದರು. ಮುಂದೆ 2015 ರಿಂದ 2020 ರವರೆಗೆ ವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಕಬಡ್ಡಿ ಕೋಚ್ ಆಗಿ ವೃತ್ತಿ ಜೀವನ ಆರಂಭಿಸಿದ ಆಕಾಶ್ ಅಲ್ಲಿಯೇ ಮುಂಬಡ್ತಿ ಹೊಂದಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಬಡ್ಡಿ ಕೋಚ್ ಆಗಿ 2019 ರಿಂದ 2021ರ ವರೆಗೆ ಸೇವೆ ಸಲ್ಲಿಸಿದರು. ಬಳಿಕ ಪ್ರೇರಣಾ ಕಾಲೇಜು ಮಂಗಳೂರು ಅಲ್ಲಿ ತಾತ್ಕಾಲಿಕ ನಿಯಮದಡಿ ಕೆಲಸ ಮಾಡಿ 2021 ರಿಂದ 2023 ರವರೆಗೆ ಶಕ್ತಿ ರೆಸಿಡೆನ್ಸಿ ಶಿಕ್ಷಣ ಸಂಸ್ಥೆ ಹಾಗೂ ಕಾಲೇಜು ವಿಭಾಗದಲ್ಲಿ ತರಬೇತುದಾರರಾಗಿ ಸೇರಿಕೊಂಡರು. 2020 ರಿಂದ ಉಳ್ಳಾಲದ…

Read More

ಮೂಡುಬಿದಿರೆ: ಭಾರತೀಯ ವೈದ್ಯಕೀಯ ಪರಂಪರೆಯಲ್ಲಿ ಆಯುರ್ವೇದ ವೈದ್ಯ ಪದ್ದತಿಗೆ ಶ್ರೇಷ್ಠ ಸ್ಥಾನಮಾನವಿದೆ. ಆದರೆ ಅದನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಾಕ್ಷಾಧಾರದ ಕೊರತೆಯಿದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ಆಯುರ್ವೇದ ವಿಜ್ಞಾನದಲ್ಲಿ ಇನ್ನಷ್ಟು ಸಂಶೋಧನೆಯನ್ನು ಕೈಗೊಳ್ಳಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ. ಆಳ್ವಾಸ್‌ನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಆಯುರ್ವೇದ ಕಾಲೇಜಿನ ಆಳ್ವಾಸ್ ‘ಧನ್ವಂತರಿ ಪೂಜಾ ಮಹೊತ್ಸವ’, ಶಿಶ್ಯೋಪನಯನ ಸಂಸ್ಕಾರ ಹಾಗೂ ಆಳ್ವಾಸ್ ಧನ್ವಂತರಿ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡುತ್ತಾ ಆಯುವೇದದಲ್ಲಿ ಉಜ್ವಲ ಭವಿಷ್ಯವಿದ್ದು, ಅದನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಪರಿಚಯಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹೆಚ್ಚು ಹೆಚ್ಚು ಸಂಶೋಧನೆಗೆ ಒತ್ತು ಕೊಡಬೇಕು. ಕಾಲೇಜಿನಲ್ಲಿ ಕಲಿತ ವಿದ್ಯೆ ಕೇವಲ ಮೆದುಳಿಗೆ ಜ್ಞಾನವನ್ನು ಕೊಡುತ್ತದೆ.ತರಗತಿಯ ಹೊರಗೆ ಕಲಿತ ಬಯಲು ಶಿಕ್ಷಣ ಪ್ರಾಯೋಗಿಕತೆಯಿಂದ ಕೂಡಿದ್ದು, ಅದು ಶ್ರೇಷ್ಠ ಜ್ಞಾವನ್ನಾಗಿಸುತ್ತದೆ. ಆಯುರ್ವೇದದಲ್ಲಿರುವ ವಿಫುಲ ಅವಕಾಶಗಳನ್ನು ಅರ್ಥಮಾಡಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಆಳ್ವಾಸ್…

Read More

“ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿನ ರಾಜರುಗಳ ದುರ್ಬಲ ಆಡಳಿತ ಮತ್ತು ಅರಾಜಕತೆ ಹಾಗೂ ಭಿನ್ನಾಭಿಪ್ರಾಯ ವಿದೇಶಗರಿಗೆ ಇಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಗಾಗಿ ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಸುಮಾರು 250 ವರ್ಷಗಳ ಕಾಲ ನಿರಾತಂಕವಾಗಿ ನಮ್ಮ ದೇಶದಲ್ಲಿ ಆಳ್ವಿಕೆ ನಡೆಸಿದರು. ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿ ಅರ್ಥಪೂರ್ಣ ಬದುಕು ನಡೆಸಲು ಸಾಧ್ಯವಾಯಿತು. ಇಂದು ನಾವು ನಮ್ಮ ಸಂವಿಧಾನದ ಆಶಯದ ಅಡಿಯಲ್ಲಿ ಒಂದು ಸುಂದರವಾದ ಬದುಕನ್ನು ಸಾಗಿಸುತ್ತಿದ್ದೇವೆ. ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ನಮ್ಮ ದೇಶದ ಸಂವಿಧಾನವು ಜಗತ್ತಿಗೆ ಒಂದು ಮಾದರಿ ಸಂವಿಧಾನವಾಗಿದೆ” ಎಂದು ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ ಹೇಳಿದರು.ಅವರು ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ…

Read More

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 25 – 01 – 2025ರಂದು ದ್ವಿತೀಯ ಪಿಯುಸಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆಯನ್ನು ನಡೆಸಲಾಯಿತು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ರವರು ಶೈಕ್ಷಣಿಕ ಮಾಹಿತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕೂಲಂಕುಷವಾಗಿ ವಿವರಿಸಿದರು.ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ ಗಣನಾಥ ಶೆಟ್ಟಿ ರವರು ವಿದ್ಯಾರ್ಥಿ – ಪೋಷಕರ ಜವಾಬ್ದಾರಿಯ ಜೊತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಸಂಸ್ಥೆಯ ಕಾಳಜಿಗಳ ಕುರಿತು ಸಮಗ್ರ ವಿವರಗಳನ್ನು ನೀಡಿದರು. ಈ ಸಂದರ್ಭದಲ್ಲಿ ಆಪಲ್ ಸರ್ವಿಸ್ ಶಿವಮೊಗ್ಗದ ವಿಜಯಕುಮಾರ್ ರವರು ಮುಂದಿನ ಶಿಕ್ಷಣಕ್ಕೆ ದೊರಕುವ ವಿದ್ಯಾರ್ಥಿವೇತನಗಳ ಸಂಕ್ಷಿಪ್ತ ಮಾಹಿತಿಗಳನ್ನು ಒದಗಿಸಿದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More