Author: admin
ಸದಾ ಭಿನ್ನ ವಿಭಿನ್ನ ಸೇವಾ ಚಟುವಟಿಕೆಗಳನ್ನು ಸಂಘಟಿಸುತ್ತಾ, ಅಶಕ್ತರಿಗೆ ನೆರವಾಗುತ್ತಾ ಸೇವೆಯೇ ಪರಮ ಧರ್ಮ ಎಂದು ಪ್ರತಿವಾದಿಸುತ್ತಾ ಮುನ್ನಡೆಯುತ್ತಿರುವ ಶಿವಾಯ ಫೌಂಡೇಶನ್ ಸಂಸ್ಥೆ ವತಿಯಿಂದ ಪಂಜ ನಲ್ಕಗುತ್ತು ದಾಮೋದರ್ ಶೆಟ್ಟಿಯವರ ರಾಮ್ ಪಂಜಾಬ್ ಹೋಟೆಲ್ ಕಾಟನ್ ಗ್ರೀನ್ ಪರಿಸರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಫೆಬ್ರವರಿ 16ರಂದು ನಡೆಯಿತು. ರಕ್ತದಾನ ಶಿಬಿರದಲ್ಲಿ ಶಿವಾಯ ಫೌಂಡೇಶನ್ ಸದಸ್ಯರು, ಹಿತೈಷಿಗಳು, ಮುಂಬಯಿ ಮತ್ತು ನವಿಮುಂಬಯಿಯ ಹಲವಾರು ಮಂದಿ ಪಾಲ್ಗೊಂಡಿದ್ದರು. ಮುಖ್ಯ ಅತಿಥಿಯಾಗಿದ್ದ ಬಾಂಬೆ ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ, ಶಿವಾಯ ಸಂಸ್ಥೆಯ ಹಿತೈಷಿ ಶ್ಯಾಮ್ ಎನ್. ಶೆಟ್ಟಿ ದೀಪ ಪ್ರಜ್ವಲಿಸಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಶಿವಾಯದ ಕೆಲಸವನ್ನು ನಾನು ತುಂಬಾ ಹತ್ತಿರದಿಂದ ನೋಡಿದವನು. ಈ ಸಂಸ್ಥೆಯ ಯುವಕ, ಯುವತಿಯರ ಸೇವಾ ಮನೋಭಾವಕ್ಕೆ ಬೆಲೆ ಕಟ್ಟಲಾಗದು. ಶಿವಾಯದ ಕೆಲಸದ ವೇಗ ನೋಡಿದರೆ ಸಂಸ್ಥೆ ಅತೀ ಎತ್ತರದ ಸ್ಥಾನಕ್ಕೆ ಏರುವ ದಿನ ದೂರವಿಲ್ಲ ಎಂದರು. ಮುಖ್ಯ ಅತಿಥಿಯಾಗಿ ಕಿಶನ್ ಗುರಾವ್, ಆನಂದ್ ರಾಯ್ ಮಾನೆ ಉಪಸ್ಥಿತರಿದ್ದರು.…
ಕಲಾಸಂಗಮ, ಮಂಗಳಾ ಕಲಾವಿದೆರ್ ಸಹಿತ ಬೇರೆ ಬೇರೆ ನಾಟಕ ತಂಡಗಳಲ್ಲಿ ಅಭಿನಯಿಸುವ ಮೂಲಕ ಒರಿಯರ್ದೊರಿ ಅಸಲ್ ನಾಟಕ ಸಿನಿಮಾದ ತಾರಾಯಿ ದೆಪ್ಪುನ ನಾಥನ್ನ ಖ್ಯಾತಿಯ ಅಶೋಕ್ ಅಂಬ್ಲಮೊಗರು ಕಳೆದ ಕೆಲವು ತಿಂಗಳ ಹಿಂದೆ ನಿಧನರಾಗಿದ್ದು, ಅವರ ಕುಟುಂಬ ಕಡುಬಡತನದಲ್ಲಿ ಜೀವನ ನಡೆಸಿರುವುದನ್ನು ಮನಗಂಡು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದಿಂದ ಆರ್ಥಿಕ ನೆರವು ನೀಡಿದ್ದಾರೆ. ಅಶೋಕ್ ಶೆಟ್ಟಿ ಅಂಬ್ಲಮೊಗರು ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ತಂಡದಲ್ಲಿದ್ದರು. ಬಳಿಕ ತನ್ನದೇ ಆದ ಮಂಗಳ ಕಲಾವಿದೆರ್ ನಾಟಕ ತಂಡವನ್ನು ಕಟ್ಟಿ ಕಟ್ಟೆದ ಗುಳಿಗೆ ನಾಟಕವನ್ನು ರಚಿಸಿ ನಾಟಕ ಪ್ರದರ್ಶಿಸಿದ್ದರು. ಆರಂಭದ ದಿನಗಳಲ್ಲಿ ಸುಧೀರ್ ರಾಜ್ ಉರ್ವ ಅವರ ನಾಟಕ ತಂಡದಲ್ಲಿ ಕಾಣಿಸಿಕೊಂಡಿದ್ದರು. ನಾಟಕದ ಜೊತೆಗೆ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅವರು ಸಾಯುವ ಮುನ್ನ ವಿಜಯ ರಾಘವೇಂದ್ರ ಜೊತೆ ಪ್ರಮುಖ ಪಾತ್ರವೊಂದರಲ್ಲಿ ಇಪ್ಪತ್ತು ದಿನಗಳ ಕಾಲ ಶೂಟಿಂಗ್ ನಲ್ಲಿದ್ದರು. ಕೆಲವು ದಿನಗಳ ಬಳಿಕ ಹೃದಯಾಘಾತಕ್ಕೊಳಗಾಗಿ ಮೃತ ಪಟ್ಟಿದ್ದರು.…
ಕಾಪು ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಹೊರೆಕಾಣಿಕೆಯನ್ನು ಸಮಸ್ತ ಬಂಟರ ವತಿಯಿಂದ ನೀಡಲಾಗುವುದು ಎಂದು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಮುಂಬಯಿಯ ಜಾಗತಿಕ ಬಂಟರ ಸಂಘದ ಅನೇಕ ಪದಾಧಿಕಾರಿಗಳು, ದಾನಿಗಳು ಮಾರಿಯಮ್ಮ ದೇವಸ್ಥಾನಕ್ಕೆ ಅನೇಕ ದೇಣಿಗೆ ಕೊಡುಗೆಗಳನ್ನು ನೀಡಿದ್ದಾರೆ ಎನ್ನಲು ಖುಷಿಯಾಗುತ್ತದೆ ಎಂದರು. ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷ ಐಕಳ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಮಾರ್ಚ್ 25 ರಿಂದ 9 ದಿನಗಳ ಕಾಲ ವೈಭವದ ಬ್ರಹ್ಮಕಲಶೋತ್ಸವ ನಡೆಯಲಿದೆ. ಅನೇಕ ದೇವಸ್ಥಾನಗಳ ಬ್ರಹ್ಮಕಲಶೋತ್ಸವಗಳಲ್ಲಿ ತೊಡಗಿಸಿಕೊಂಡ ಐಕಳ ಹರೀಶ ಶೆಟ್ಟರ ಮುತುವರ್ಜಿಯಲ್ಲಿ ಹೊರೆಕಾಣಿಕೆ ಬಂಟರ ಸಂಘಗಳ ಒಕ್ಕೂಟದಿಂದ ಬರಲಿದೆ. ಮುಂಬಯಿ ಹಾಗೂ ನಾನಾ ಕಡೆಗಳ ಊರ ದಾನಿಗಳ ಸಹಕಾರದಿಂದ 99 ಕೋಟಿ ರೂಪಾಯಿಯಲ್ಲಿ ದೇಗುಲ ನಿರ್ಮಾಣ ಅತ್ಯಂತ ಸುಂದರವಾಗಿ ಆಗಿದೆ. ಮೂಲ್ಕಿಯ ಒಕ್ಕೂಟದ ಕಚೇರಿಗೆ ಹೊರಕಾಣಿಕೆ ನೀಡುವವರು ತಲುಪಿಸಬಹುದು ಎಂದು ಹೇಳಿದರು.ಫೆಬ್ರವರಿ 22ಕ್ಕೆ ದಕ್ಷಿಣ ಕನ್ನಡದಿಂದ ಹಾಗೂ 23ಕ್ಕೆ ಉಡುಪಿ ಜಿಲ್ಲೆಯಿಂದ ಹೊರ ಕಾಣಿಕೆ ಬರಲಿದೆ. ಎಲ್ಲಾ ಬಂಟ ಸಂಘಗಳ…
ಕುಂದಾಪುರ ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಶ್ರೇಷ್ಠ ಕವಯತ್ರಿ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಉಪ್ಪಿನಕಾಯಿ ಅಜ್ಜಿ ಎಂದೇ ಖ್ಯಾತರಾದ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ ಶ್ರೀಮತಿ ಗುಲಾಬಿ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಪರವಾಗಿ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿಯವರ ಸ್ವಗೃಹದಲ್ಲಿ ಸನ್ಮಾನಿಸಿ ಯುವ ಬಂಟರ ಸಂಘ ಗ್ರಾಮೀಣ ಪ್ರದೇಶದಲ್ಲಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಇಂತಹ ಗ್ರಾಮೀಣ ಪ್ರದೇಶದ ಮಹಿಳೆಯನ್ನು ಗುರುತಿಸಿ ಗೌರವಿಸುವುದು, ಶ್ಲಾಘನೀಯ. ಇಂತಹ ಕೆಲಸಗಳನ್ನು ಎಲ್ಲಾ ಸಂಘ ಸಂಸ್ಥೆಗಳು ಮಾಡಿದಾಗ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುವ ಜೊತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು, ಸ್ಥಾಪಕಾಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಗೋಳಿಯಂಗಡಿ ಉಪಸ್ಥಿತರಿದ್ದು, ಡಾ|…
‘ಕವಿತೆ ಕಟ್ಟುವುದು ಸುಲಭದ ಮಾತಲ್ಲ. ನಮ್ಮ ಪರಿಸರವನ್ನು ಸೂಕ್ಷ್ಮವಾಗಿ ಅವಲೋಕಿಸುವ ಚಿಕಿತ್ಸಕ ಬುದ್ಧಿಯೊಂದಿಗೆ ಭಾಷೆಯ ಮೇಲಿನ ಪ್ರಭುತ್ವವೂ ಬೇಕಾಗುತ್ತದೆ. ಈ ದೃಷ್ಟಿಯಿಂದ ಕಾವ್ಯ ರಚನೆ ಎಂಬುದು ಒಂದು ಅದ್ಭುತ ಸೃಷ್ಟಿ ಕಾರ್ಯವೇ. ವಿವಿಧ ಮಾದರಿಯ ಕವಿತಾ ರಚನೆಯ ಮೂಲಕ ಕುಕ್ಕುವಳ್ಳಿ ಅವರು ಅದನ್ನು ಸಾಧಿಸಿದ್ದಾರೆ’ ಎಂದು ಖ್ಯಾತ ರಂಗಭೂಮಿ ಮತ್ತು ಸಿನಿಮಾ ನಿರ್ದೇಶಕ ವಿಜಯಕುಮಾರ್ ಕೊಡಿಯಾಲಬೈಲ್ ಹೇಳಿದ್ದಾರೆ. ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಫೆಬ್ರವರಿ 14ರಂದು ನಗರದ ಪುರಭವನದಲ್ಲಿ ಜರಗಿದ ಪುಸ್ತಕ ಪ್ರೇಮಿಗಳ ದಿನಾಚರಣೆಯಲ್ಲಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ‘ಸೃಷ್ಟಿಸಿರಿಯಲಿ ಪುಷ್ಪವೃಷ್ಟಿ’ ಭಾವ ಅನುಭಾವ ಗೀತೆಗಳ ಗುಚ್ಛವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಗುಲ್ಬರ್ಗ ಆಕಾಶವಾಣಿಯ ವಿಶ್ರಾಂತ ಕಾರ್ಯಕ್ರಮ ಅಧಿಕಾರಿ ಡಾ. ಸದಾನಂದ ಪೆರ್ಲ ಕೃತಿಯ ಬಗ್ಗೆ ಮಾತನಾಡಿ ‘ವೃಕ್ಷರಾಜಿಗಳೆಲ್ಲ ಹೂ ಬಿಡುವ ಭೂಮಿಯ ಫಲವಂತಿಕೆಯ ಕಾಲದಲ್ಲಿ ಕೃತಿ ಹೊರಬರುತ್ತಿದೆ. ಅದಕ್ಕನುಗುಣವಾಗಿ ಕೃತಿಯ ಶೀರ್ಷಿಕೆ ಹೊಂದಿಕೆ ಯಾಗುವುದೊಂದು ಯೋಗಾಯೋಗ’ ಎಂದರು. ಕೃತಿಕಾರ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ, ಪ್ರಕೃತಿಯಲ್ಲಾಗುವ ಪುಷ್ಪ…
ಪುತ್ತೂರು ತಾಲೂಕು ಯುವ ಬಂಟರ ಸಂಘದ ಸಾರಥ್ಯದಲ್ಲಿ ಸಹಕಾರಿ ಧುರೀಣ ದಿ. ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಫೆಬ್ರವರಿ 22 ಮತ್ತು 23ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಪುತ್ತೂರ್ದ ಬಂಟ ಜವನೆರೆ ಗೊಬ್ಬು ಬಂಟ್ಸ್ ಪ್ರೀಮಿಯರ್ ಲೀಗ್ – 2025, ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರ ಬಿಡುಗಡೆ ಫೆಬ್ರವರಿ 15ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷ ಕುಮಾರ್ ರೈ ಮಾಡಾವುರವರು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ದಯಾನಂದ ರೈ ಕೊರ್ಮಂಡ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ…
ನೀರೆ ಬೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಚ್ಚಿದಾನಂದ ಶೆಟ್ಟಿ ಹಾಗೂ ಉಪಾದ್ಯಕ್ಷರಾಗಿ ವಾಣಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ 15ರಂದು ಸಂಘದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭ ಆಡಳಿತ ಮಂಡಳಿಯ ನಿರ್ದೇಶಕರಾದ ನರೇಂದ್ರ ಶೆಟ್ಟಿ, ಸುಜಾತ ಶೆಟ್ಟಿ, ರವೀಂದ್ರನಾಥ, ಶರತ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಜಗದೀಶ, ಕರುಣಾಕರ ಶೆಟ್ಟಿ, ರತ್ನಾಕರ ಶೆಟ್ಟಿ, ಸುಂದರ ರಾಣೆರ, ಸುರೇಶ್ ಕೋಟೆಕಾರ್ ಹಾಗೂ ಸಂಘದ ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಆರ್.ಬಿ.ಐ ಮಾಜಿ ನಿರ್ದೇಶಕರಾಗಿರುವ ಸಹಕಾರ ರತ್ನ ಡಾ| ಅಗರಿ ನವೀನ್ ಭಂಡಾರಿಯವರು ಬೆಂಗಳೂರಿನ ಅನ್ವೇಷಣೆ ಅಕಾಡೆಮಿಯವರು ನೀಡುವ ಸಮಾಜಶ್ರೀ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಮಾಜ ಸೇವೆ, ಸಹಕಾರ, ಧಾರ್ಮಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಅಭೂತಪೂರ್ವವಾದ ಸೇವೆಯನ್ನು ಮಾಡುತ್ತಿರುವ ನವೀನ್ ಭಂಡಾರಿಯವರ ಸಮಾಜ ಸೇವಾ ಕ್ಷೇತ್ರದ ಅವಿರತ ಸಾಧನೆಗಾಗಿ ಸಮಾಜಶ್ರೀ ರಾಜ್ಯ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
ಸಂಘ ಸಂಸ್ಥೆಗಳಲ್ಲಿ ಮಹಿಳೆಯರು ಕ್ರಿಯಾಶೀಲರಾದಾಗ ಆ ಸಂಸ್ಥೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾ ಪ್ರತಿಷ್ಠಿತ ಸಂಸ್ಥೆಯಾಗಿ ಬೆಳೆಯುತ್ತದೆ. ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಮಹಿಳಾ ವಿಭಾಗವು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸದಾ ಕ್ರಿಯಾಶೀಲವಾಗಿದೆ. ಹಳದಿ ಕುಂಕುಮದಂತಹ ನಮ್ಮ ಸಂಸ್ಕೃತಿ ಸಂಸ್ಕಾರವನ್ನು ಬಿಂಬಿಸುವಂತಹ ಕಾರ್ಯಕ್ರಮಗಳು ಸಂಘ ಸಂಸ್ಥೆಗಳಲ್ಲಿ ನಿರಂತರ ನಡೆಯುತ್ತಿರಬೇಕು. ಆಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷ ಬಾಬಾಸ್ ಗ್ರೂಪ್ ಆಫ್ ಕಂಪನೀಸ್ ಆಡಳಿತ ನಿರ್ದೇಶಕ ಮಹೇಶ್ ಎಸ್. ಶೆಟ್ಟಿ ತಿಳಿಸಿದರು. ಘಾಟ್ಕೋಪರ್ ಪೂರ್ವದ ಕನ್ನಡ ವೆಲ್ಫೇರ್ ಸೊಸೈಟಿಯ ಮಹಿಳಾ ವಿಭಾಗದ ಆಶ್ರಯದಲ್ಲಿ ಫೆಬ್ರವರಿ 13 ರಂದು ಜರಗಿದ ಅರಶಿನ ಕುಂಕುಮ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕನ್ನಡ ವೆಲ್ಫೇರ್ ಅಸೋಸಿಯೇಷನ್ ಘಾಟ್ಕೋಪರ್ ಸಂಸ್ಥೆಯ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆಯವರು ನಾಡು ನುಡಿ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ವರ್ಷಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ ಎಂದರು.ಅತಿಥಿಯಾಗಿದ್ದ ಖ್ಯಾತ…
ಒಂದು ಕಾಲದಲ್ಲಿ, ಒಂದು ಸಣ್ಣ ಹಳ್ಳಿಯಲ್ಲಿ ಒಬ್ಬ ಸರಳ ಮನುಷ್ಯ ವಾಸಿಸುತ್ತಿದ್ದ. ಅವನು ಪ್ರತಿದಿನ ಬೆಳಗ್ಗೆ ಎದ್ದು, ತನ್ನ ತೋಟದಿಂದ ತಾಜಾ ತರಕಾರಿಗಳನ್ನು ಕೊಯ್ದು, ಅದನ್ನು ಕೈಯಲ್ಲಿ ಹಿಡಿದು, ಮನೆಯಲ್ಲಿ ಸರಳವಾದ ಊಟ ಮಾಡುತ್ತಿದ್ದ. ಅವನು ಊಟ ಮಾಡುವಾಗ, ಪ್ರತಿ ಬೆರಳು ಆಹಾರವನ್ನು ಸ್ಪರ್ಶಿಸುವಾಗ, ಅವನಿಗೆ ಅನುಭವವಾಗುತ್ತಿತ್ತು. ಆಹಾರವು ಅವನ ದೇಹಕ್ಕೆ ಪೋಷಣೆ ನೀಡುತ್ತಿದೆ ಎಂಬುದಕ್ಕಿಂತ ಹೆಚ್ಚಾಗಿ, ಅದು ಅವನ ಆತ್ಮಕ್ಕೆ ಶಾಂತಿ ನೀಡುತ್ತಿದೆ. ಒಮ್ಮೆ, ಅವನ ಹಳ್ಳಿಗೆ ಒಬ್ಬ ವಿದೇಶಿಯೊಬ್ಬ ಬಂದ. ಅವನು ಚಮಚ ಮತ್ತು ಫೋರ್ಕ್ ಬಳಸಿ ಊಟ ಮಾಡುತ್ತಿದ್ದ. ಗ್ರಾಮಸ್ಥರು ಅವನನ್ನು ವಿಚಿತ್ರವಾಗಿ ನೋಡುತ್ತಿದ್ದರು. ಆ ವಿದೇಶಿಯು ಚಮಚ ಮತ್ತು ಫೋರ್ಕ್ ಬಳಸುವುದು ಏಕೆ ಎಂದು ಕೇಳಿದಾಗ, ಗ್ರಾಮಸ್ಥನು, “ಕೈಗಳಿಂದ ತಿನ್ನುವುದು ನಮ್ಮ ಸಂಸ್ಕೃತಿ. ಕೈಗಳು ಆಹಾರವನ್ನು ಪವಿತ್ರಗೊಳಿಸುತ್ತವೆ ಮತ್ತು ನಮ್ಮ ಆತ್ಮಕ್ಕೆ ನೇರವಾಗಿ ಸಂಪರ್ಕ ಕಲ್ಪಿಸುತ್ತವೆ” ಎಂದು ಹೇಳಿದ. ವಿದೇಶಿಯು ಇದನ್ನು ಕೇಳಿ ಆಶ್ಚರ್ಯಚಕಿತನಾದ. ಅವನು ಕುತೂಹಲದಿಂದ ಗ್ರಾಮಸ್ಥನೊಂದಿಗೆ ಊಟ ಮಾಡಲು ಕುಳಿತ. ಅವನು ಕೈಗಳಿಂದ…