Author: admin

ವೀರ ಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ. ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ 2025 ಜನವರಿ 11 ಶನಿವಾರ ಸಂಜೆ 4 ಗಂಟೆಗೆ ಸುರತ್ಕಲ್ ಬಂಟರ ಭವನದ ಹತ್ತಿರ ನಡೆಯಲಿದೆ. ಉದ್ಘಾಟನಾ ಸಮಾರಂಭ ಸಂಜೆ 4 ಗಂಟೆಗೆ ನಡೆಯಲಿದೆ. ಅಧ್ಯಕ್ಷತೆಯನ್ನು ಬಿ.ಎ.ಎಸ್.ಎಫ್ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ್ ಪ್ರಾಣೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಸದಾಶಿವ ಮಹಾಗಪತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಎಸ್ ಗಣಪತಿ ಮಯ್ಯ, ಶ್ರೀ ಮಹಮ್ಮಾಯಿ ದೇವಸ್ಥಾನದ ಧರ್ಮದರ್ಶಿ ಅರುಣ್ ಪೈ, ಮೋಹನ್ ಪೂಜಾರಿ ಅಗರಮೇಲು, ಸಚ್ಚೀಂದ್ರ ಮೆಂಡನ್ ದೊಡ್ಡಕೊಪ್ಲ, ಕಾರ್ಪೋರೇಟರ್ ಗಳಾದ ಸರಿತಾ ಶಶಿಧರ್, ನಯನ ಕೋಟ್ಯಾನ್, ಶ್ವೇತಾ ಪೂಜಾರಿ, ಶೋಭಾ ರಾಜೇಶ್, ರಾಷ್ಟ್ರಭಕ್ತ ನಾಗರೀಕ ವೇದಿಕೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ…

Read More

ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 04-01-2025 ರಂದು ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು “ವಿವಿಧತೆಯಲ್ಲಿ ಏಕತೆ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್ ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ನಾ ಸೋಮೇಶ್ವರ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ ಸಂವಾದ ಕಾರ್ಯಕ್ರಮವು ಖ್ಯಾತ ನಿರೂಪಕ ಅವಿನಾಶ್ಕಾ ಮತ್ ರವರ ಮುಖೇನ ನಡೆಸಲ್ಪಟ್ಟಿತು. ” ಕವಿತೆ ಹುಟ್ಟುವ ಸಮಯ ” ಸಂವಾದ ಕಾರ್ಯಕ್ರಮದಲ್ಲಿ ಬಿ ಆರ್ ಲಕ್ಷ್ಮಣರಾವ್ ರವರು ಸಂವಾದ ನಡೆಸುತ್ತಾ ವಿದ್ಯಾರ್ಥಿ ಸಮೂಹವನ್ನುದ್ದೇಶಿಸಿ ಹಾಡುಗಳ ನಿರಂತರತೆಗೆ ಕಾರಣ ಮುಂದಿನ ಪೀಳಿಗೆಯಾಗಿರುವ ವಿದ್ಯಾರ್ಥಿಗಳು ಎಂದರು. ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ಬಿ ಆರ್ ಲಕ್ಷ್ಮಣರಾವ್ ವಿರಚಿತ ಕವಿತೆಗಳ ಗಾಯನ ಕಾರ್ಯಕ್ರಮ ಜರುಗಿತು. ಪ್ರಖ್ಯಾತ ವೈದ್ಯ, ಕ್ವಿಜ್ ಮಾಸ್ಟರ್, ಲೇಖಕರು ಹಾಗೂ ಅಂಕಣಕಾರರಾದ ಡಾ. ನಾ ಸೋಮೇಶ್ವರರವರು…

Read More

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ವತಿಯಿಂದ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ಭಾಗವಹಿಸಿದ ತಂಡ ಎರಡು ವಿಭಾಗದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಬಾಲಕರ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ, ಮೈಸೂರು ಜಿಲ್ಲಾ ತಂಡವನ್ನು 35-11 ಹಾಗೂ 35 14 ನೇರ ಸೆಟ್‌ಗಳಿಂದ ಸೋಲಿಸಿ  ಗೆಲುವು ಸಾಧಿಸಿತು. ಬಾಲಕಿಯರ ವಿಭಾಗದ ಫೈನಲ್ಸ್ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವು ಮಂಡ್ಯ ಜಿಲ್ಲಾ ತಂಡವನ್ನು 35-14 ಹಾಗ 35-11 ನೇರ ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ತಂಡದಲ್ಲಿ ಪ್ರಮುಖ ಆಟಗಾರರಾಗಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ 5 ಬಾಲಕರು ಹಾಗೂ 5 ಬಾಲಕಿಯರು ಪ್ರತಿನಿಧಿಸಿದ್ದು ಗೆಲುವಿಗೆ ಸಹಕಾರಿಯಾಯಿತು. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ತಂಡ, ಬಾಲಕ ಹಾಗೂ ಬಾಲಕಿಯರ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಸಮಾಜ ಕಲ್ಯಾಣ ಸಹಾಯಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಂಟ ಸಮಾಜ ಎಲ್ಲರನ್ನೂ ಒಗ್ಗೂಡಿಸಿ ಕಾರ್ಯಪ್ರವೃತ್ತವಾಗುತ್ತದೆ. ಅದೇ ರೀತಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇತರೆ ಸಮಾಜದವರಿಗೂ ನೆರವಿನ ಹಸ್ತ ನೀಡುತ್ತಿದೆ ಎಂದರು.ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿ, 37 ವರ್ಷಗಳ ಇತಿಹಾಸ ಇರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹಲವು ಕಾರ್ಯಗಳು ನಿರಂತರವಾಗಿ ನಡೆದಿದೆ. ದಾನಿಗಳ ನೆರವಿನಿಂದ ಮತ್ತು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಶ್ರಮದಿಂದ ಸಹಾಯಹಸ್ತ ನೀಡಲು ಸಾಧ್ಯವಾಯಿತು. ಈ ಬಾರಿ 16 ಲಕ್ಷ ರೂಪಾಯಿ ಹಣವನ್ನು ವಿತರಿಸಲಾಗುತ್ತಿದೆ…

Read More

ಜನವರಿ 26 ರಂದು ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವಕ್ಕೆ ಸುರತ್ಕಲ್ ಬಂಟರ ಸಂಘದಿಂದ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಂಟರ ಭವನದಲ್ಲಿ ಮಹೂರ್ತ ನೆರವೇರಿತು. ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿ ಛೇರ್ಮನ್ ಕರುಣಾಕರ ಎಂ ಶೆಟ್ಟಿ ಮದ್ಯಗುತ್ತು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಾವು ನೀಡುವ ಕಾರ್ಯಕ್ರಮದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಪೂರಕವಾಗಿ ಶಿಸ್ತು ಏಕಾಗ್ರತೆ ಛಲಗಳಿಂದ ಸಾಧಿಸಿದಾಗ ಯಶಸ್ಸು ನಮ್ಮದಾಗುತ್ತದೆ. ಪುಣೆಯಲ್ಲಿ ಸುರತ್ಕಲ್ ಬಂಟರ ಸಂಘದ ಸದಸ್ಯರು ನೀಡುವ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಲಿ, ಕಾರ್ಯಕ್ರಮಕ್ಕೆ ತನ್ನಿಂದಾದ ಸಹಾಯ ಮಾಡುವುದಾಗಿ ಶುಭ ಹಾರೈಸಿದರು. ಮಾಜಿ ಅಧ್ಯಕ್ಷ ಎಂ ದೇವಾನಂದ ಶೆಟ್ಟಿ ಮಾತನಾಡಿ, ಸತತ ಪರಿಶ್ರಮ ಪಟ್ಟಾಗ ನಮ್ಮ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ರಂಗದಲ್ಲಿ ಸುರತ್ಕಲ್ ಬಂಟರ ಸಂಘವು ಪ್ರತಿಯೊಂದು ಪ್ರದೇಶದಲ್ಲೂ ಒಳ್ಳೆಯ ಸಾಧನೆ ಮಾಡಿದೆ. ಪುಣೆಯಲ್ಲಿ ಎಲ್ಲಾ ಸದಸ್ಯ ಕಲಾವಿದರು ಉತ್ತಮ ಪ್ರದರ್ಶನ ನೀಡುವಂತಾಗಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಲೋಕಯ್ಯ ಶೆಟ್ಟಿ ಮುಂಚೂರು ಮಾತನಾಡಿ,…

Read More

ಪಡುಬಿದ್ರಿ ಆಸ್ಪೆನ್ ವಿಶೇಷ ವಿತ್ತ ವಲಯ ಇದರ ಸೀನಿಯರ್ ಜನರಲ್ ಮ್ಯಾನೇಜರ್ ಮತ್ತು ಮುಖ್ಯಸ್ಥರು ಹಾಗೂ ಮಣಿಪುರ ಕುಂತಳ ನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಅವರನ್ನು ಶಾಲಾ ಶತಮಾನೋತ್ಸವ ಸಂಭ್ರಮದ ಸಮಾರಂಭದಲ್ಲಿ ಹಳೆ ವಿದ್ಯಾರ್ಥಿ ವೃಂದ, ವಿದ್ಯಾರ್ಥಿಗಳು, ಶಿಕ್ಷಕ ವೃಂದ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.ಈ ಸಂದರ್ಭ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿಗಳಾದ ರಾಜೇಂದ್ರ ವಿ. ಶೆಟ್ಟಿ ಹುಬ್ಬಳ್ಳಿ, ಮಧುಕರ್ ಶೆಟ್ಟಿ ಮುಂಬಯಿ, ಅಶೋಕ್ ಶೆಟ್ಟಿ ಮುಂಬಯಿ, ಸುಭಾಸ್ ಸಾಲಿಯಾನ್, ಬೆಂಗಳೂರು ಉದ್ಯಮಿ ಸಂದೀಪ್ ಶೆಟ್ಟಿ, ಉದ್ಯಮಿ ಸತೀಶ್ ಶೆಟ್ಟಿ ಮಣಿಪುರ, ಸಮಾಜ ಸೇವಕಿ ಬಿಂದು ಶೆಟ್ಟಿ ಬಡಗು ಮನೆ, ರಘು ಪೂಜಾರಿ ಕಲ್ಮಂಜೆ, ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೇರಾ, ಗ್ರಾ. ಪಂ. ಸದಸ್ಯ ಸಂತೋಷ್ ಶೆಟ್ಟಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವೈ, ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಹಳೆ…

Read More

ಪುಣೆ ಬಂಟರ ಸಂಘದ ವತಿಯಿಂದ ಜರಗಿದ ಅಂತರ್ ರಾಷ್ಟ್ರೀಯ ಬಂಟರ ಕ್ರೀಡಾ ಕೂಟದಲ್ಲಿ ಗುರುಪುರ ಬಂಟರ ಮಾತೃ ಸಂಘ ತ್ರೋಬಾಲ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕೆ.ಎಸ್.ಎಚ್ ಟ್ರೋಫಿ ಹಾಗೂ ನಗದನ್ನು ತನ್ನದಾಗಿಸಿಕೊಂಡಿದೆ.

Read More

ಬೈಲೂರು : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಬೈಲೂರಿನ ಶ್ರೀ ರಾಮಕೃಷ್ಣಾಶ್ರಮಕ್ಕೆ ಮಕ್ಕಳು ಭೇಟಿ ನೀಡಿದರು. ಆಶ್ರಮದ ಪೂಜ್ಯ ಯತಿ ಸ್ವಾಮಿ ವಿನಾಯಕಾನಂದ ಮಹಾರಾಜ್‍ರವರು ಆಶೀರ್ವಚನ ನೀಡಿ, ವ್ಯಕ್ತಿಯ ಸಮಗ್ರ ಬೇಳವಣಿಗೆಯಲ್ಲಿ ದೈಹಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ ಹಾಗೂ ಆದ್ಯಾತ್ಮಿಕ ಅಂಶಗಳು ಮುಖ್ಯ. ಈ ನಿಟ್ಟಿನಲ್ಲಿ ಜ್ಞಾನಭಾರತ್ ತಂಡವು ಮಕ್ಕಳ ಶ್ರೇಯೋಭಿವೃದ್ದಿಗಾಗಿ ಇಂತಹ ಕಾರ್ಯವನ್ನು ಕೈಗೊಂಡಿರುವುದು ಪ್ರಶಂಸನೀಯ ಎಂದರು.ಬಾಲ ಸಂಸ್ಕಾರ ವಿಹಾರದಲ್ಲಿ ಉಪಸ್ಥಿತರಿದ್ದ ಸಾಹಿತಿ ಶ್ರೀ ಗಣೇಶ್ ಜಾಲ್ಸೂರು ಮಾತನಾಡಿ, ಇಂತಹ ಆಶ್ರಮಗಳು ಬೇಕು, ವೃದ್ಧಾಶ್ರಮಗಳಲ್ಲ. ಯಾಕೆಂದರೆ ನಾವೇ ನಮ್ಮ ಪ್ರೀತಿಯಿಂದ ಮನೆಯ ಹಿರಿಯರನ್ನು ಗೌರವಿಸಬೇಕು. ಸಂಸಾರದಲ್ಲಿ ಸಂಸ್ಕಾರವಿದ್ದರೆ ಬಹಳ ಸುಂದರವಾದ ಜೀವನವನ್ನು ಸಾಗಿಸಬಹುದು. ಹಣದ ಹಿಂದಿರುವ ಮಾನವ ಇತಿಮಿತಿಯನ್ನರಿಯದೆ ಹೆಣವಾಗುತ್ತಿದ್ದಾನೆ. ಜ್ಞಾನಭಾರತ್-ಬಾಲಸಂಸ್ಕಾರ ವೃಂದದ ಮುಖೇನ ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಸುಧಾಕಾರ್ ಶೆಟ್ಟಿಯವರ ಕಾರ್ಯ ಶ್ಲಾಘನೀಯ ಎಂದರು.ಮಕ್ಕಳು ಆಶ್ರಮದ ಪ್ರಶಾಂತ ವಾತವರಣದಲ್ಲಿ ವಿಹರಿಸಿ…

Read More

ಮೂಡುಬಿದಿರೆ: ವಾರ್ಷಿಕ ಸಂಚಿಕೆಗಳು ಶಿಕ್ಷಣ ಸಂಸ್ಥೆಯ ಸಾಹಿತ್ಯದ ಸೃಜನಾತ್ಮಕ ಚಟುವಟಿಗೆಗಳಿಗೆ ಹಿಡಿದ ಕೈಗನ್ನಡಿ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್  ವೇಣುಗೋಪಾಲ್ ಶೆಟ್ಟಿ ನುಡಿದರು. ಅವರು ಕಾಲೇಜಿನ ಕುವೆಂಪು ಸಭಾಂಗಣ ದಲ್ಲಿ ಶನಿವಾರ ನಡೆದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ “ಉತ್ತುಂಗ”  ಚೊಚ್ಚಲ ವಾರ್ಷಿಕ ಸಂಚಿಕೆ  ಬಿಡುಗಡೆ ಕರ‍್ಯಕ್ರಮದಲ್ಲಿ ಮಾತನಾಡಿದರು. ಪ್ರಶಿಕ್ಷಣಾರ್ಥಿಗಳು ಮುಂದೆ ಗುರುಗಳಾಗುವವರು. ಇಂತಹ ಸ್ಮರಣ ಸಂಚಿಕೆಗಳು ಮುಂದೆ ಬರುವ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದರು. ಈಗಿನ ವಿದ್ಯಾರ್ಥಿಗಳು ಬರವಣಿಗೆಯ ಹವ್ಯಾಸವನ್ನು ಬೆಳೆಸಿಕೊಳ್ಳುವುದಿಲ್ಲ. ಅತಿಯಾದ ಮೊಬೈಲ್ ಫೋನ್ ಬಳಕೆಯಿಂದ ರೋಬೋಟ್ಗಳಂತೆ ವರ್ತಿಸುತ್ತಾರೆ. ಇಂತಹ ಸಾಹಿತ್ಯ ಕಾರ್ಯಕ್ರಮಗಳು ಸಾಮಾಜಿಕ ವಿಷಯಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸುತ್ತದೆ ಎಂದರು.ಆಳ್ವಾಸ್ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಎನ್‌ಪಿ ನಾರಾಯಣ ಶೆಟ್ಟಿ ವಾರ್ಷಿಕ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ, ಒಂದು ವಾರ್ಷಿಕ ಸಂಚಿಕೆ ಬಿಡುಗಡೆಯಾಗುವಾಗ ಮೊದಲು ನೋಡುವುದು ವಿನ್ಯಾಸ, ವಿಷಯಗಳ ವೈವಿಧ್ಯತೆ, ಭಾಷಾ ವೈವಿಧ್ಯತೆ. ವಿದ್ಯಾರ್ಥಿಗಳು ಬೇರೆ ಬೇರೆ ವಿಷಯಗಳಲ್ಲಿ ಬರವಣಿಗೆಯನ್ನು ವೃದ್ಧಿಸಿಕೊಂಡಾಗ ಆ ಬರವಣಿಗೆಗಳು ಆಕಾರ…

Read More

ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳದಲ್ಲಿ 03-01-2025 ರಂದು ಕ್ರಿಯೇಟಿವ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು. ಉದ್ಘಾಟಕರಾಗಿ ಆಗಮಿಸಿದ ಶ್ರೀ ಗೋಪಾಲಕೃಷ್ಣ ಸಾಮಗ ಬಿ, ಉಪಪ್ರಧಾನ ವ್ಯವಸ್ಥಾಪಕರು, ಮಾನವ ಸಂಪನ್ಮೂಲ ಇಲಾಖೆ, ಕರ್ಣಾಟಕ ಬ್ಯಾಂಕ್, ಪ್ರಧಾನ ಕಚೇರಿ, ಮಂಗಳೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಜ್ಞಾನಾರ್ಜನೆಯ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿಯನ್ನು ರೂಢಿಸಿ ಕೊಂಡಾಗ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು.ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ ಎಸ್ ರವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಗಿಬಂದ ಸಾಧನೆಯ ಹಾದಿಯ ಸಮಗ್ರ ಮಾಹಿತಿಗಳನ್ನು ಒದಗಿಸಿದರು. ಮುಖ್ಯ ಅತಿಥಿ ಅಂ ನಿತೇಶ್ ಶೆಟ್ಟಿ, ಸ್ಥಾಪಕರು, ಎನ್ ಸಿ ಎಸ್ ಮತ್ತು ಕೋ. ರವರು ಮಾತನಾಡಿ ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಮತ್ತು ಇದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದರು. Ar. ಸುನಿಲ್ ಕುಮಾರ್, ಪ್ರಧಾನ ಶಿಲ್ಪಿಗಳು ಇವರು ಮಾತನಾಡಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಹಕಾರಿ ಎಂದರು.…

Read More