Author: admin
ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆಯುವ 50ನೇ ರಾಷ್ಟ್ರೀಯ ಜ್ಯೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕುಮಾರಿ ಸಾಕ್ಷಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಈಕೆಗೆ ಕಾಲೇಜಿನ ದೈಹಿಕ ಶಿಕ್ಷಕಿ ಪ್ರಭಾವತಿ ಹೆಗ್ಡೆ ಹಾಗೂ ಕೋಚ್ ಶಶಿಧರ್ ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಫೆಡರೇಷನ್ ವತಿಯಿಂದ ತರಬೇತಿಯನ್ನು ನೀಡುತ್ತಿದ್ದಾರೆ.
ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ‘ಲೈಫ್ ಸ್ಕಿಲ್ ಡೆ’ ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಶಿಕ್ಷಣವೆಂದರೆ ಕೇವಲ ವಿದ್ಯಾಭ್ಯಾಸ ಮಾತ್ರವಲ್ಲ, ಜೀವನ ಕೌಶಲಗಳೊಂದಿಗೆ ಜ್ಞಾನಾರ್ಜನೆ ನಿಜವಾದ ಕಲಿಕೆ ಎಂದರು. ಕೌಶಲ್ಯಗಳು ಯಾವಾಗಲೂ ನಮ್ಮನ್ನು ಹಿಂಬಾಲಿಸಿಕೊಂಡು ಬರುತ್ತದೆ ಎಂದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ 21ನೇ ಶತಮಾನದ ಲೈಫ್ ಸ್ಕಿಲ್ನ ಕುರಿತು ಮಾಹಿತಿಯನ್ನು ನೀಡಿದರು. ಕೋಟ ಸರಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಹೇಮಾರವರು ಮಕ್ಕಳ ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ಉತ್ತಮ ನಾಯಕತ್ವ, ಸಮಸ್ಯೆ ಪರಿಹಾರದ ಕುರಿತು ಕಿರು ನಾಟಕ, ಒತ್ತಡ ನಿರ್ವಹಣೆಯ ಕಿರು ಚಿತ್ರ, ಸೃಜನ ಶೀಲತೆ ವಿಮರ್ಶಾತ್ಮಕ ಚಿಂತನೆಯ ನೀತಿ ಕಥೆಗಳು, ಸಹಾನುಭೂತಿ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ಗೀತೆ, ನೃತ್ಯಗಳು ವಿದ್ಯಾರ್ಥಿಗಳಿಂದ ಅದ್ಭುತವಾಗಿ ಮೂಡಿ ಬಂದವು. ಬೆಂಕಿ ಉಪಯೋಗವಿಲ್ಲದೆ ಆಹಾರ ತಯಾರಿಕೆ, ವೆಜಿಟೇಬಲ್ ಆರ್ಟ್, ಬಟ್ಟೆಗಳನ್ನು ಇಸ್ತ್ರಿ ಮಾಡುವುದು, ಕಾರಿನ ಚಕ್ರವನ್ನು ಬದಲಾಯಿಸುವುದು,…
ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂನಲ್ಲಿ ಜನವರಿ 11 ಮತ್ತು 12ರಂದು ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ ‘ವಿಶೇಷ ಆಹ್ವಾನಿತ ಯೂತ್ ಐಕಾನ್’ ಆಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉದ್ಯಮಿ ಇನ್ನಾ ಉದಯ ಶೆಟ್ಟಿ ಮತ್ತು ಜಿ.ಪಂ ಮಾಜಿ ಸದಸ್ಯೆ ರೇಷ್ಮಾ ಉದಯ ಶೆಟ್ಟಿ ಅವರ ಪುತ್ರಿ. ವಿಕಸಿತ ಭಾರತದ ನಿರ್ಮಾಣದಲ್ಲಿ ಯುವ ಜನರ ಭಾಗವಹಿಸುವಿಕೆಯನ್ನು ಖಾತ್ರಿಗೊಳಿಸಲು ನಡೆಯುವ ರಾಷ್ಟ್ರೀಯ ಮಟ್ಟದ ಯುವ ಪ್ರತಿಭೆಗಳ ಎರಡು ದಿನದ ಈ ಅಧಿವೇಶನದಲ್ಲಿ ಭಾರತಾದ್ಯಂತದ 3000 ಯುವಕ ಯುವತಿಯರು ಆಯ್ಕೆಯಾಗಿದ್ದಾರೆ. ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಕಸಿತ ಭಾರತದ ವಿವಿಧ ಕ್ಷೇತ್ರಗಳ ವಿಷಯಗಳ ಬಗ್ಗೆ ಚರ್ಚೆ, ವಿಚಾರ ಮಂಡನೆ ಮತ್ತು ಸಂವಾದಗಳು ನಡೆಯಲಿದ್ದು ಆಹ್ವಾನಿತರು ತಮ್ಮ ವಿಚಾರಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ವಿವಿಧ ಇಲಾಖೆಗಳ ಪ್ರದರ್ಶನಗಳು ಇರಲಿವೆ. ಪ್ರಧಾನಿ ನರೇಂದ್ರ ಮೋದಿಯೂ ಸೇರಿದಂತೆ ಕೇಂದ್ರದ ವಿವಿಧ…
ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಮತ್ತು ಕೋಟತಟ್ಟು ಗ್ರಾಮ ಪಂಚಾಯತ್ 2024ನೇ ಸಾಲಿನ ಡಾ| ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಪುತ್ತೂರಿನ ಬಹುಮುಖ ಪ್ರತಿಭೆ, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಜ್ಞಾನ ರೈ ಆಯ್ಕೆಯಾಗಿದ್ದಾರೆ. ಈ ಬಾರಿಯ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಯಾಗಿರುವ ಬಹುಮುಖ ಪ್ರತಿಭೆ ಜ್ಞಾನ ರೈಯವರು ಕುರಿಯ ಗ್ರಾಮದ ಉದ್ಯಮಿ ಜಯರಾಮ್ ರೈ ಹಾಗೂ ಸುದ್ದಿ ನ್ಯೂಸ್ ಚಾನಲ್ ನ ನಿರೂಪಕಿ ಹೇಮಾ ಜಯರಾಮ್ ರೈಯವರ ಪುತ್ರಿ.
ಬಂಟರ ಯಾನೆ ನಾಡವರ ಸಂಘ ಬೈಂದೂರು ಆಶ್ರಯದಲ್ಲಿ ಬಂಟರ ಪ್ರತಿಭಾ ಸಂಭ್ರಮ ಜನವರಿ 5 ರಂದು ಬೈಂದೂರಿನ ಬಂಟರ ಭವನದಲ್ಲಿ ನಡೆಯಲಿದೆ. 18 ವರ್ಷ ವಯೋಮಾನದವರಿಗೆ ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಭಾಷಣ, ಚಿತ್ರಕಲೆ, ಗಾಯನ, ರಸಪ್ರಶ್ನೆ ಸಹಿತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಬಂಟರ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಹೆಸರನ್ನು ನೋಂದಾಯಿಸಲು ಜನವರಿ 3 ಕೊನೆಯ ದಿನವಾಗಿತ್ತು ಎಂದು ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ ಮಾತೆರ್ಲಾ ಒಂಜೆ – ಕಲಾ ತಂಡದ 18 ನೇ ವಾರ್ಷಿಕೋತ್ಸವ ಸಮಾರಂಭ ಡಿಸೆಂಬರ್ 19ರಂದು ಇಲ್ಲಿನ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಸಾಧಕರಿಗೆ ಸನ್ಮಾನ ಆಶಕ್ತರಿಗೆ ಆರ್ಥಿಕ ನೆರವು, ಯಕ್ಷಗಾನ ಬಯಲಾಟ ಸಹಿತ ವಿವಿಧ ಕಾರ್ಯಕ್ರಮಗಳು ನಡೆದವು. ವಾರ್ಷಿಕೋತ್ಸವ ಸಮಾರಂಭದ ಸಭಾ ಕಾರ್ಯಕ್ರಮವನ್ನು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಲಿನಿಕ್ ನ ವೈದ್ಯರಾದ ಎನ್. ಎಂ. ತುಳುಪುಳೆ ವಹಿಸಿದ್ದರು. ವೇದಿಕೆಯಲ್ಲಿ, ಗಂಗಾಧರ ಮಿತ್ತಮಾರ್, ಸುಲ್ಕೇರಿಮೊಗ್ರು, ಸುಭಾಶ್ಚಂದ್ರ ರೈ ಪಡ್ಯೋಡಿ ಗುತ್ತು, ಸುಂದರ ಹೆಗ್ಡೆ, ಸದಾನಂದ ಪೂಜಾರಿ ಉಂಗಿಲಬೈಲು, ನಾಗಕುಮಾರ ಜೈನ್, ಸತೀಶ್ ಪೂಜಾರಿ, ಹಿಲರಿ ಫೆರ್ನಾಂಡಿಸ್, ಅಬ್ದುಲ್ ಹಮೀದ್ ಸುನ್ನತ್ ಮೊದಲಾದವರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಾದ ಚಿದಾನಂದ ಪೂಜಾರಿ ಎಲ್ದಕ್ಕ ಶಿರ್ಲಾಲ್ (ಸಾಮಾಜಿಕ, ಧಾರ್ಮಿಕ), ಪ್ರಕಾಶ್ ಶೆಟ್ಟಿ ನೊಚ್ಚ ಅಳೆದಂಗಡಿ (ಸಾಮಾಜಿಕ,ಧಾರ್ಮಿಕ) ಅಲೋಶಿಯಸ್ ಡಿಸೋಜಾ ದೈಲಾ ಅಳದಂಗಡಿ, (ಸಹಕಾರಿ ಕ್ಷೇತ್ರ), ರಾಕೇಶ್ ಹೆಗ್ಡೆ ಬಳೆಂಜ (ಕೃಷಿ,…
ಮಣಿಪುರ ಕುಂತಳನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಎರಡು ದಿನಗಳ ಅದ್ದೂರಿ ಸಮಾರಂಭಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಲೋಕಕಲ್ಯಾಣಕ್ಕೆ ತೆರೆದಿಟ್ಟ ಅರಿವಿನ ಹೆಬ್ಬಾಗಿಲು ಆಗಿರುವ ಭಾರತಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಆಚರಿಸುವುದು ಸಂಭ್ರಮದ ಸಾರ್ಥಕ ಕ್ಷಣ. ಸಮಾಜದ ಕಟ್ಟ ಕಡೆಯ ಮಗುವನ್ನೂ ಅಕ್ಷರ ಪ್ರಪಂಚಕ್ಕೆ ತೆರೆದುಕೊಳ್ಳುವಲ್ಲಿ ನೀಡಿರುವ ಸೇವೆಯು ಪ್ರಶಂಸನೀಯ ಎಂದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಕನ್ನಡ ಶಾಲೆಯೊಂದರ 100 ವರ್ಷದ ಸಂಭ್ರಮ ನಿಜಕ್ಕೂ ಸ್ಥಾಪಕರ ಸೇವಾ ಮನೋಭಾವದ ನೈಜ ಪರಿಶ್ರಮಕ್ಕೆ ಸಂದ ಮೌಲ್ಯವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಪ್ರಸ್ತಾವನೆಗೈದು ಶಾಲೆ ನಡೆದು ಬಂದ ದಾರಿ ಬಗ್ಗೆ ಮಾಹಿತಿ ನೀಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಶಾಬನ್ ಬ್ಯಾರಿ, ಸಾಧಕರಾದ ರಾಘು ಪೂಜಾರಿ ಕಲ್ಮಂಜೆ, ಸಮಾಜ ಸೇವಕ ಅಶೋಕ್ ಶೆಟ್ಟಿ, ಸೆಲಿನ್…
ಬಂಟ್ಸ್ ವೆಲ್ಫೇರ್ ಟ್ರಸ್ಟ್ ಹಾಗೂ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಜರಗಿದ ಅಂತರ್ ರಾಜ್ಯ ಮಟ್ಟದ ಬಂಟರ ಕ್ರೀಡಾಕೂಟದಲ್ಲಿ ಗುರುಪುರ ಬಂಟರ ಮಾತೃ ಸಂಘವು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಹಾಗೂ ಕಬಡ್ಡಿ ಪಂದ್ಯಾಟದಲ್ಲಿ ತೃತೀಯ ಸ್ಥಾನವನ್ನು ಪಡೆದು ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ವಾಲಿಬಾಲ್ ಪಂದ್ಯಾಟದಲ್ಲಿ ಗುರುಪುರ ಬಂಟರ ಮಾತೃ ಸಂಘದ ಅನೀಶ್ ರೈ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದರು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಮನೋಹರ್ ಎಸ್ ಶೆಟ್ಟಿ ಸಾಯಿರಾಧ ಹಾಗೂ ಪಡುಬಿದ್ರಿ ಬಂಟರ ಸಂಘದ ಪದಾಧಿಕಾರಿಗಳು ಗುರುಪುರ ಬಂಟರ ಮಾತೃ ಸಂಘಕ್ಕೆ ಟ್ರೋಫಿ ಹಾಗೂ ನಗದನ್ನು ವಿತರಿಸಿದರು. ಈ ಸಂಧರ್ಭ ಸಂಘದ ಆಟಗಾರರ ಜೊತೆಗೆ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ, ಮಾಜಿ ಸಂಚಾಲಕ ಸುದರ್ಶನ್ ಶೆಟ್ಟಿ ಪೆರ್ಮಂಕಿ, ಯುವ ವಿಭಾಗದ ಅಧ್ಯಕ್ಷ ಸಂದೀಪ್ ಆಳ್ವ ಕೊಳವೂರು,…
ಡಾ. ಅವಿನ್ ಆಳ್ವರವರು ಮಂಗಳೂರು ಶಾಖೆಯ ಭಾರತೀಯ ವೈದ್ಯಕೀಯ ಸಂಘದ (IMA) ಕಾರ್ಯದರ್ಶಿಯಾಗಿದ್ದು, 2023 -24ನೇ ಸಾಲಿನ ಕರ್ನಾಟಕ ರಾಜ್ಯದ ಅತ್ಯುತ್ತಮ ಕಾರ್ಯದರ್ಶಿ ಮತ್ತು ಭಾರತದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಎಂಬ ಎರಡು ಪ್ರತಿಷ್ಠಿತ ಗೌರವಗಳನ್ನು ಗಳಿಸಿದ್ದಾರೆ. ಈ ಪ್ರಶಸ್ತಿಗಳು ಕ್ರಮವಾಗಿ ಕರ್ನಾಟಕ ರಾಜ್ಯ ಮಂಡಳಿ ಮತ್ತು ನವದೆಹಲಿಯ IMA ಕೇಂದ್ರ ಕಚೇರಿಯಿಂದ ಪ್ರದಾನ ಮಾಡಲ್ಪಟ್ಟಿವೆ. ಈ ಪ್ರಶಸ್ತಿಗಳು ವೈದ್ಯಕೀಯ ಕ್ಷೇತ್ರದಲ್ಲಿ ಅವರ ಅಪರೂಪದ ಶ್ರೇಷ್ಠ ನಾಯಕತ್ವ, ಅಪಾರ ಸೇವಾ ಮನೋಭಾವ ಮತ್ತು ಉತ್ತಮ ಕೊಡುಗೆಗಳಿಗೆ ನೀಡಲಾದ ಗೌರವವಾಗಿದೆ. ಡಾ. ಅವಿನ್ ಆಳ್ವರವರು 11 ತಿಂಗಳ ಅವಧಿಯಲ್ಲಿ 123 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿ ಮಂಗಳೂರನ್ನು ಕರ್ನಾಟಕದ 180 IMA ಶಾಖೆಗಳಲ್ಲಿಯೇ ಮೊದಲ ಸ್ಥಾನಕ್ಕೆ ತಂದು ನಿಲ್ಲಿಸಿದರು. ರಾಷ್ಟ್ರೀಯ ಮಟ್ಟದಲ್ಲಿ ಅವರು 28 ರಾಜ್ಯಗಳು ಮತ್ತು ಸುಮಾರು 3000 ಶಾಖೆಗಳ ನಡುವೆ ಅಗ್ರಸ್ಥಾನ ಪಡೆದು ವೈಶಿಷ್ಟತೆಯನ್ನು ಸಾಧಿಸಿದ್ದಾರೆ.
ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಹೇಮಂತ್ ರೈ ಮನವಳಿಕೆಗುತ್ತು
ಕುಕ್ಕೆ ಸುಬ್ರಹ್ಮಣ್ಯ ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎರಡನೆ ಎ ದರ್ಜೆಯ ದೇವಸ್ಥಾನವಾದ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಹೇಮಂತ್ ರೈ ಮನವಳಿಕೆಗುತ್ತು ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾಗಿರುವ ಹೇಮಂತ್ ರೈ ಅವರು ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿ, ಉದ್ಯಮಿಯಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದಾರೆ.