Author: admin

ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡವು ಪ್ರಥಮ ಸ್ಥಾನವನ್ನು ಪಡೆದರೆ, ಮಹಿಳೆಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಆ ಮೂಲಕ ಆಳ್ವಾಸ್ ಪದವಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನೆರವೇರಿತು. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್ ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದರು. ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ಅಧ್ಯಕ್ಷರಾದ ವಸಂತ ಶೆಟ್ಟಿ ಬೆಳ್ಳಾರೆಯವರು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಅತಿಥಿಗಳಾಗಿ ಜಮ್ಮು ಕಾಶ್ಮೀರ ಸರ್ಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ರಾಜೇಶ್ ಪ್ರಸಾದ್, ಐಎಎಸ್ ಸಿಬಿಐಯ ಜಂಟಿ ನಿರ್ದೇಶಕ ಅಶ್ವಿನ್ ಶೇನ್ವಿ ಐಪಿಎಸ್, ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಪಟ್ಲ ಟ್ರಸ್ಟ್ ನ ಮಹಾದಾನಿ ಶಶಿಧರ ಶೆಟ್ಟಿ ಬರೋಡ, ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ದೆಹಲಿಯ ಪ್ರಸಿಧ್ಧ ಉದ್ಯಮಿಗಳಾದ ವಿವೇಕ್ ಅಗರ್ವಾಲ್, ಶ್ರೀಮತಿ ದೀಪ್ತಿ ಶರ್ಮ, ದೆಹಲಿ ಕರ್ನಾಟಕ ಸಂಘದ…

Read More

ಮೂಡುಬಿದಿರೆ: ನದಿ ಹಾಗೂ ಸಮುದ್ರ ತೀರಗಳಲ್ಲಿ ಜನರ ಸೆಲ್ಫಿಯ ಹುಚ್ಚಿನಿಂದಾಗಿ ಹೆಚ್ಚಿನ ಅವಘಡಗಳು ಸಂಭವಿಸುತ್ತಿವೆ. ಜೀವಕ್ಕೆ ಅಪಾಯ ತಂದೊಡ್ಡುವ ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು ಎಂದು ಸಮಾಜ ಸೇವಕ ಹಾಗೂ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ನುಡಿದರು. ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸ್ಪಟಿಕ ಫೋರಂನ ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಬಾರಿಯ ಮಳೆಗಾಲದಲ್ಲಿ ಒಟ್ಟು 50ಕ್ಕೂ ಹೆಚ್ಚು ಜನರು ನೀರಿನಲ್ಲಿ ಕೊಚ್ಚಿಹೋಗುತ್ತಿರುವ ಸಂದರ್ಭಗಳಲ್ಲಿ ಕೇವಲ ಐವರನ್ನು ಮಾತ್ರ ರಕ್ಷಿಸಲು ಸಾಧ್ಯವಾಯಿತು ಎಂದು ಬೇಸರ ವ್ಯಕ್ತಪಡಿಸಿದರು. ತನ್ನ ಬದುಕಿನ ವೃತ್ತಾಂತವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡ ಅವರು, ತಾನು ಬಾಲ್ಯದಲ್ಲಿ ಸೇನೆಗೆ ಸೇರಬೇಕೆಂದು ಕನಸು ಕಂಡಿದ್ದೆ, ಆದರೆ ಬಡತನದಿಂದಾಗಿ ವಿದ್ಯಾಭ್ಯಾಸ ಪಡೆಯಲಾಗಲಿಲ್ಲ. ಆದರೆ ಇಂದು ತನ್ನಿಷ್ಟದ ಈಜು ಕಲೆಯನ್ನು ಕರಗತ ಮಾಡಿಗೊಂಡು ಕೈಲಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದೇನೆ. ನದಿ ಹಾಗೂ ಸಮುದ್ರದ ಅಲೆಗಳಲ್ಲಿ ಕೊಚ್ಚಿಹೋಗುವವರನ್ನು ರಕ್ಷಿಸುವುದು ನನ್ನ ಕಾಯಕವಾಗಿದೆ. ಅದರಲ್ಲೆ ಆತ್ಮ ತೃಪ್ತಿ ಕಾಣುತ್ತಿದ್ದೇನೆ.…

Read More

ಮುಂಬಯಿ: ನಮ್ಮ ಕನ್ನಡ ಸಾಹಿತ್ಯಕ್ಕೆ ಪ್ರಭುದ್ಧವಾದ ಹಿನ್ನೆಲೆಯಿದೆ. ನಮಗೆ ಕಲಿಯುವ ಹುಮ್ಮಸ್ಸು ಇರಬೇಕು. ಜ್ಞಾನಕಾಂಕ್ಷೆ ಬಹಳ ಮುಖ್ಯವಾದುದು.ಮುಂಬಯಿಯಲ್ಲಿ ಸೃಜನಶೀಲತೆಗೆ ಸಾವಿರ ದಾರಿಗಳಿವೆ. ಇಲ್ಲಿ ಪ್ರೋತ್ಸಾಹ ಸಿಗುವಷ್ಟು ಬೇರೆಲ್ಲೂ ಸಿಗುವುದಿಲ್ಲ. ಇಂತಹ ಮುಂಬಯಿ ಕೇಂದ್ರಿತ ಕಾರ್ನಾಡ್ ಅವರ ಕತೆಗಳಲ್ಲಿ ಧನಾತ್ಮಕ ಚಿಂತನೆಗಳಿವೆ ಎಂದು ಜಾನಪದ ವಿದ್ವಾಂಸರಾದ ಡಾ.ಕಾಳೇಗೌಡ ನಾಗವಾರ ಅವರು ನುಡಿದರು. ಅವರು ಸೆಪ್ಟೆಂಬರ್ 26ರ ಶುಕ್ರವಾರದಂದು ಮುಂಬಯಿ ವಿಶ್ವವಿದ್ಯಾಲಯದ ಜೆ.ಪಿ.ನಾಯಕ್ ಭವನದಲ್ಲಿ ನಡೆದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಅಂದು ಡಾ.ವಿಶ್ವನಾಥ ಕಾರ್ನಾಡರ ‘ಲಿಲ್ಲಿ ಬಂದು ಹೋದಳು’ ಕತಾ ಸಂಕಲನ, ಅಪರಾಧಿ(ಕನ್ನಡದಿಂದ ಮರಾಠಿಗೆ) ಹಾಗೂ ಇಂತಹ ‘ಮಂಗಳಮೂರ್ತಿ ಗಣೇಶ’ (ಮರಾಠಿಯಿಂದ ಕನ್ನಡಕ್ಕೆ) ಸರೋಜಿನಿ ತರೆ ಅವರ ಅನುವಾದಿತ ಕೃತಿಗಳನ್ನು ವೇದಿಕೆಯ ಗಣ್ಯರು ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ನಾಡ್ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಜಿ.ಎನ್.ಉಪಾಧ್ಯ ಅವರು ಮಾತನಾಡುತ್ತಾ ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯ ಬಲವರ್ಧನೆಗೆ ಡಾ.ವಿಶ್ವನಾಥರ ಕೊಡುಗೆ ದೊಡ್ಡದು. ಕಳೆದ ಅನೇಕ ವರ್ಷಗಳಿಂದ…

Read More

ಬಂಟರ ಸಂಘ (ರಿ) ಬಜಪೆ ವಲಯದ ಮುಂದಿನ 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಮಾಜ ಮುಖಿ ಸೇವಾ ಮನೋಭಾವದ ಸರಳ ವ್ಯಕ್ತಿತ್ವದ ವೇಣುಗೋಪಾಲ್ ಶೆಟ್ಟಿ ಕರಂಬಾರು ಪಡುಮನೆ ಆಯ್ಕೆಯಾಗಿದ್ದಾರೆ. ಹೋಟೆಲು ಉದ್ಯಮಿಯಾಗಿರುವ ವೇಣುಗೋಪಾಲ್ ಎಲ್ ಶೆಟ್ಟಿಯವರು ಮುಂಬಯಿ ಥಾಣೆ ಬಂಟ್ಸ್ ಅಸೋಸಿಯೇಶನ್ ಸಂಘದ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ತಿರುಪತಿ ತಿಮ್ಮಪ್ಪನ ಪರಮ ಭಕ್ತರಾಗಿರುವ ವೇಣುಗೋಪಾಲ್ ಶೆಟ್ಟಿಯವರು ಸಮಾಜ ಸೇವೆಯೊಂದಿಗೆ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ.

Read More

ಹಿಂದೂ ಧರ್ಮದ ಪ್ರಕಾರ ಕೆಲವೊಂದು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವುದರಿಂದ ವ್ಯಕ್ತಿಯು ತನ್ನೆಲ್ಲಾ ಸಂಕಷ್ಟಗಳಿಂದ ಮುಕ್ತನಾಗಿ ಮೋಕ್ಷವನ್ನು ಪಡೆದುಕೊಳ್ಳುತ್ತಾನೆ ಎಂಬ ನಂಬಿಕೆ ಅನಾದಿ ಕಾಲದಿಂದಲೂ ನಡೆದು ಬಂದಿದೆ. ಅದಲ್ಲದೇ ತೀರ್ಥಯಾತ್ರೆ ಭಾರತೀಯ ಸನಾತನ ಹಿಂದೂ ಸಂಸ್ಕ್ರತಿಯ ಅವಿಭಾಜ್ಯ ಅಂಗವಾಗಿದೆ. ಅದೇ ಧಾರ್ಮಿಕ ಭಾವನೆಯನ್ನು ಮನವರಿಸಿಕೊಂಡು ಬಾಂಬೆ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿ, ಉಪಾಧ್ಯಕ್ಷ ಐಕಳ ಕಿಶೋರ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ನ್ಯಾ. ಶೇಖರ್ ಆರ್ ಶೆಟ್ಟಿ ಹಾಗೂ ಇನ್ನಿತರನ್ನೊಳಗೊಂಡ 57 ಸದಸ್ಯರ ತಂಡ, ಆಡಳಿತ ಮಂಡಳಿಯ ಸದಸ್ಯರುಗಳಾದ ಜಯ ಸಿ ಶೆಟ್ಟಿ ಮತ್ತು ಶಶಿಧರ ಶೆಟ್ಟಿ ಅವರ ಮುಂದಾಳತ್ವದಲ್ಲಿ, ಶ್ರೀ ಸಂತೋಷ್ ಶೆಟ್ಟಿ ಗುರುಸ್ವಾಮಿಯವರ ಮಾರ್ಗದರ್ಶನದಲ್ಲಿ ಸೆಪ್ಟೆಂಬರ್ 21 ರಿಂದ 24 ರ ತನಕ ಉತ್ತರ ಪ್ರದೇಶದ ಪುಣ್ಯ ಕ್ಷೇತ್ರಗಳಾದ ಪ್ರಯಾಗ್ ರಾಜ್, ತ್ರಿವೇಣಿ ಸಂಗಮ, ಅಯೋಧ್ಯೆ ರಾಮಮಂದಿರ, ಕಾಶಿ ವಿಶ್ವನಾಥ ಹಾಗೂ ಇನ್ನುಳಿದ ಹಲವಾರು ಕ್ಷೇತ್ರಗಳ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದರು. ಹೆಚ್ಚಿನ ಯಾತ್ರಿಗಳು 60 ವರ್ಷಗಳಿಗಿಂತ ಮೇಲ್ಪಟ್ಟವರಾದರೂ…

Read More

ಬೈಂದೂರು ಬಂಟರ ಯಾನೆ ನಾಡವರ ಸಂಘದ 30 ರ ಸಂಭ್ರಮದ ಅತ್ಯುನ್ನತ ಸಾಧಕಿ ಪ್ರಶಸ್ತಿಯನ್ನು ಹೇರoಜಲು ಡಾ. ಸಿಂಚನಾ ಎಸ್ ಶೆಟ್ಟಿಯವರಿಗೆ ಅವರ ಸ್ವಗೃಹದಲ್ಲಿ 30 ರ ಸಂಭ್ರಮದ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆಯವರು ನೀಡಿ ಸನ್ಮಾನಿಸಿದರು. ಈ ಸಂಧರ್ಭ ಹಿರಿಯರಾದ ಗಂಟೆಹೊಳೆ ನಾರಾಯಣ ಶೆಟ್ಟಿ, ಜಯಶೀಲಾ ಶೆಟ್ಟಿ, ಶ್ರೀಮತಿ ಶಶಿಕಲಾ ಶೆಟ್ಟಿ, ಮಂಜುನಾಥ್ ಶೆಟ್ಟಿ ಹೇರಂಜಲು, ಸದಾಶಿವ ಶೆಟ್ಟಿ ಕಾಲ್ತೋಡು, ಸೀತಾರಾಮ್ ಶೆಟ್ಟಿ ಕಾಲ್ತೋಡು, ಸತ್ಯರoಜನ್ ಶೆಟ್ಟಿ, ಶ್ರೀಮತಿ ಬೇಬಿ ಶೆಟ್ಟಿ, ಡಾ. ಸಿಂಚನ ಶೆಟ್ಟಿಯವರ ತಂದೆ ಶರತ್ ಶೆಟ್ಟಿ ಗುಲ್ವಾಡಿ, ತಾಯಿ ಶ್ರೀಮತಿ ನಾಗರತ್ನ ಶೆಟ್ಟಿ ಹಾಗೂ ಅನೇಕ ಸಮಾಜ ಬಾಂಧವರು ಉಪಸ್ಥಿತರಿದ್ದು ಸಾಧಕಿಯನ್ನು ಆಶೀರ್ವದಿಸಿದರು. ಶಶಿಧರ್ ಶೆಟ್ಟಿ ಸಾಲ್ಗದ್ದೆಯವರು ಡಾ. ಸಿಂಚನ ಅವರನ್ನು ಸನ್ಮಾನಿಸಿ ಮಾತನಾಡಿ, ಸಿಂಚನ ಅವರು ಈವಾಗಲೇ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆದಿದ್ದಾರೆ. ಇನ್ನೂ ಉನ್ನತ ಮಟ್ಟದ ಸಾಧನೆ ಮಾಡಲಿ ಇವರಿಗೆ ದೇವರು ಹೆಚ್ಚಿನ ಶಕ್ತಿ ಕೊಟ್ಟು ಬೈಂದೂರು ಬಂಟರ ಸಂಘಕ್ಕೆ ಹಾಗೂ ಸಮಾಜಕ್ಕೆ…

Read More

ತುಳುಕೂಟ ಪುಣೆ ಇದರ ವತಿಯಿಂದ ಪ್ರಯಾಗ್ ರಾಜ್, ತ್ರಿವೇಣಿ ಸಂಗಮ, ಕಾಶಿ ಪುಣ್ಯ ಕ್ಷೇತ್ರಗಳ ದರ್ಶನದ ತೀರ್ಥಯಾತ್ರೆ ಜರಗಿತು. ಪುಣೆ ತುಳುಕೂಟದ ಅದ್ಯಕ್ಷರಾದ ದಿನೇಶ್ ಶೆಟ್ಟಿ ಕಳತ್ತೂರುರವರ ನೇತೃತ್ವದಲ್ಲಿ ಸುಮಾರು 43 ಜನ ಯಾತ್ರಾರ್ಥಿಗಳು 5 ದಿನಗಳ ಈ ಯಾತ್ರೆಯಲ್ಲಿ ಪಾಲ್ಗೊಂಡರು. ಪವಿತ್ರ ನದಿಗಳಾದ ಗಂಗಾ, ಯಮುನಾ, ಸರಸ್ವತಿ ನದಿಗಳ ತ್ರಿವೇಣಿ ಸಂಗಮ ಪ್ರಯಾಗ್ ರಾಜ್ ನಲ್ಲಿ ಪವಿತ್ರ ಸ್ಥಾನ ಮಾಡಿ, ನಂತರ ಭಾರತದ ಪವಿತ್ರ ಹನ್ನೆರಡು ಜ್ಯೋತಿರ್ಲಿಂಗಳಲ್ಲಿ ಒಂದಾದ ಗಂಗಾ ನದಿ ತಪ್ಪಲಿನಲ್ಲಿರುವ ಕಾಶಿ ಶ್ರೀ ವಿಶ್ವನಾಥೇಶ್ವರ, ವಿಶಾಲಕ್ಷಿ ದೇವಸ್ಥಾನ ದರ್ಶನ ಮಾಡಿ ನಂತರ ಶ್ರೀ ರಾಮ ಲಲ್ಲಾ ಮಂದಿರ ಅಯೋಧ್ಯೆ ಶ್ರೀ ರಾಮಚಂದ್ರ ದೇವಾಲಯ ಮತ್ತು ಪ್ರದೇಶದ ಹಲವು ದೇವಸ್ಥಾನಗಳ ದರ್ಶನ ಪಡೆದರು. ಪುಣೆ ತುಳುಕೂಟದ ವತಿಯಿಂದ ಪ್ರಥಮ ಬಾರಿಗೆ ಜರಗಿದ ಈ ತೀರ್ಥಯಾತ್ರೆಯಲ್ಲಿ ಸಂಘದ ಸದಸ್ಯರು, ಪುಣೆಯ ತುಳು ಕನ್ನಡಿಗ ಬಾಂಧವರು, ಹಿರಿಯರು, ಮಹಿಳೆಯರು, ದಂಪತಿಗಳು ಪಾಲ್ಗೊಂಡರು. ತುಳುಕೂಟದ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಕಾರ್ಯದರ್ಶಿ ರಾಜಾರಾಮ್…

Read More

ಅರಣ್ಯಗಳತ್ತ ನಮ್ಮ ನಿಲುವು ಸದಾ ವಿವೇಚನೆಯಿಂದ ಕೂಡಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಅವರು ಆಳ್ವಾಸ್ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ, ಹಳೆ ವಿದ್ಯಾರ್ಥಿಗಳ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಒಂದು ದಿನದ ಜೀವ ವೈವಿಧ್ಯತೆಯ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದರು. ಪ್ರಕೃತಿಯನ್ನು ಅವಲೋಕಿಸುವುದು ಬಹಳ ಮುಖ್ಯ. ಪ್ರಕೃತಿಯ ಪ್ರತಿಯೊಂದು ಅಂಶವೂ ನಮಗೆ ಬದುಕಿಗೆ ಪಾಠವನ್ನು ಕಲಿಸುತ್ತದೆ. ಪ್ರಕೃತಿ ಕೇವಲ ಸಂಪನ್ಮೂಲವಲ್ಲ, ಅದು ಸುಖ ಶಾಂತಿಯ ಅಮೂಲ್ಯ ಸಂಪತ್ತು. ಅದನ್ನು ಕಾಪಾಡುವುದು ನಮ್ಮ ನೈತಿಕ ಕರ್ತವ್ಯ ಮಾತ್ರವಲ್ಲ ಭವಿಷ್ಯದ ಪೀಳಿಗೆಗಾಗಿ ಜೀವ ಸಂಪತ್ತನ್ನು ಉಳಿಸುವ ಅಗತ್ಯವೂ ನಮ್ಮದಾಗಿದೆ. ನಾವು ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಬದುಕಿದರೆ ಮಾತ್ರ ಸುಖ ಮತ್ತು ಶಾಂತಿಯಿಂದ ಬದುಕಲು ಸಾಧ್ಯ. ನಾವು ವಾಸಿಸುತ್ತಿರುವ ಪ್ರದೇಶ ಜೀವ ವೈವಿಧ್ಯತೆಯ ಹಾಟ್ ಸ್ಪಾಟ್. ಜಗತ್ತಿನಲ್ಲಿ ಕೇವಲ ೨ ರಿಂದ ೩ ಶೇಕಡಾದಷ್ಟು ಪ್ರದೇಶವಷ್ಟೇ ಜೀವ ವೈವಿಧ್ಯ ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಆದ್ದರಿಂದ ಜನರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು…

Read More

ಭೂಮಂಡಲದಲ್ಲಿ ನಮ್ಮಮಾನವ ಜನ್ಮದ ಸೃಷ್ಟಿಯಲ್ಲಿ ನಮ್ಮ ಹಿರಿಯರು ಅಳವಡಿಸಿಕೊಂಡಿರುವ ಮೂಲ ನಂಬಿಕೆಗಳು, ಆಚರಣೆಗಳು, ಸಂಪ್ರದಾಯಗಳು, ಭಕ್ತಿ ಭಾವ ಯುಗ ಯುಗಾಂತರಗಳಿಂದ ನಡೆದುಕೊಂಡು ಬಂದಿರುವಂತಹದ್ದು. ಇದು ಭಾರತದ ಸನಾತನ ಹಿಂದೂ ಸಂಸ್ಕ್ರತಿಯ ಪ್ರತೀಕ. ದುರ್ಗಾ ದೇವಿಯನ್ನು ಜಗನ್ಮಾತೆಯಾಗಿ ಪೂಜಿಸುವ ನಾವು ನವರಾತ್ರಿಯಲ್ಲಿ ಒಂಬತ್ತು ದಿನಗಳ ಕಾಲ ಅರಾದಿಸುವ ಜೊತೆಯಲ್ಲಿ ನಮಗೆ ಪ್ರಕೃತಿದತ್ತವಾಗಿ ಬಂದಂತಹ ಸಂಪ್ರದಾಯ ಆಚರಣೆಗಳ ತೆನೆಹಬ್ಬ ಆಚರಣೆ ಕೂಡಾ ನಡೆಯುತ್ತದೆ. ಇದು ಮನೆ ತುಂಬುವ ಕಾರ್ಯ ಎಂದು ಕೂಡಾ ಕರೆಯುತ್ತೇವೆ. ತುಳುನಾಡಿನಲ್ಲಿ ಮನೆ ಮನೆಯಲ್ಲೂ ನಡೆಯುವ ಈ ತೆನೆ ಹಬ್ಬ ಹೊರ ರಾಜ್ಯದಲ್ಲಿರುವ ನಾವು ಸಮಾಜದ ಎಲ್ಲರನ್ನೂ ಕೂಡಿಕೊಂಡು ಸಾರ್ವಜನಿಕವಾಗಿ ನಡೆಸುತಿದ್ದೇವೆ. ಬಂಟ್ಸ್ ಅಸೋಸಿಯೇಷನ್ ಇಂತಹ ಸಂಪ್ರದಾಯದ ಹಬ್ಬ ನವರಾತ್ರಿ ಉತ್ಸವ, ತೆನೆ ಹಬ್ಬವನ್ನು ಭಕ್ತಿ ಶ್ರದ್ದೆಯೊಂದಿಗೆ ಪೂಜನೀಯವಾಗಿ ನಡೆಸಿಕೊಂಡು ಬರುತ್ತಿದೆ. ಇದು ನಮ್ಮ ಏಕತೆ ಮತ್ತು ಸಂಘಟನೆಯ ಬಲವೃದ್ದಿಗೂ ಪೂರಕವಾಗಿದೆ. ಅಲ್ಲದೇ ನಮ್ಮ ಯುವ ಪೀಳಿಗೆಗೆ ತಿಳಿಸುವಲ್ಲಿ ಬಹು ಮುಖ್ಯ ಪಾತ್ರ ಹಾಗೂ ಸಕಾರತ್ಮಕ ಚಿಂತನೆಗೆ ಪ್ರೇರಣೆಯಾಗುತ್ತದೆ ಎಂದು ಪುಣೆ…

Read More