Author: admin
ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪರಿಸರದಲ್ಲಿ ಸೋಮವಾರ ಒಂದೆಡೆ ಉಳುಮೆ, ಇನ್ನೊಂದೆಡೆ ನೇಜಿ ಕೀಳುವ ಹಾಗೂ ನಾಟಿ ಮಾಡುವ ಕಾರ್ಯ ಆರಂಭವಾಗಿದೆ. ಮಳೆ ಕೊಂಚ ತಡವಾದರೂ ಕಾದು ಸ್ವಲ್ಪ ಮಳೆಗೆ ತನ್ನ ಅನಿ ವಾರ್ಯ, ಅಗತ್ಯದ ಕಾಯಕವನ್ನು ಬಿಡುವಂತಿಲ್ಲವಾಗಿದೆ. ಸಮಯಕ್ಕೆ ತಕ್ಕಂತೆ ಹೊಂದಿಕೊಂಡು ಕೃಷಿಗೆ ಪ್ರಾಧಾನ್ಯವನ್ನು ನೀಡಬೇಕಾಗಿದೆ. ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವತಿಯಿಂದ ಚೌತಿಯಂದು ನಡೆಯುವ ತೆನೆ ಹಬ್ಬಕ್ಕೆ ತೆನೆಯನ್ನು ನೀಡಲು ಈ ಗದ್ದೆ ಉಳುಮೆ ಮತ್ತು ನಾಟಿ. ಪ್ರತಿ ವರ್ಷದಂತೆ ಈ ಬಾರಿಯೂ ದೇವಸ್ಥಾನದ ವತಿಯಿಂದ ಭಕ್ತರಿಗೆ ತೆನೆಯನ್ನು ನೀಡಲು ಈಗಾಗಲೇ ಸಿದ್ಧತೆ ಮಾಡಲಾಗಿದೆ. ಕಳೆದ ಬಾರಿ 2 ಸಾವಿರ ಕ್ಕಿಂತಲೂ ಅಧಿಕ ಭಕ್ತರು ದೇಗುಲದಿಂದ ತೆನೆಯನ್ನು ಮನೆಗೆ ಕೊಂಡೊಯ್ದಿದ್ದರು. ಈ ಬಾರಿಯೂ ಅದಕ್ಕಿಂತಲೂ ಹೆಚ್ಚಿನ ಭಕ್ತರು ತೆನೆಯನ್ನು ಕೊಂಡೊಯ್ಯಲು ಬರುವ ನಿರೀಕ್ಷೆ ಇದೆ. 75 ಸೆಂಟ್ಸ್ ಗದ್ದೆಯಲ್ಲಿ ಭತ್ತದ ಕೃಷಿ ಈ ಬಾರಿ 75 ಸೆಂಟ್ಸ್ ಗದ್ದೆಯಲ್ಲಿ ಭತ್ತ ಬೇಸಾಯಕ್ಕೆ ತಯಾರು ಮಾಡಲಾಗಿದೆ. ಇದು ವರ್ಷ ಕಳೆದಂತೆ…
ಆಸ್ಪತ್ರೆ, ಶಿಕ್ಷಣ, ತಂತ್ರಜ್ನಾನ, ಪ್ರವಾಸೋದ್ಯಮ, ಸರಕಾರಿ ಕಚೇರಿಗಳ ಸಂಕೀರ್ಣ, ಕೈಗಾರಿಕೆ ಅಭಿವೃದ್ಧಿ, ವಸತಿ – ನಿವೇಶನ ಸಹಿತವಾಗಿ ಅಭಿವೃದ್ಧಿಗೆ ಪೂರಕವಾಗುವ ನವ ಕಾಪು ನಿರ್ಮಾಣ ಘೋಷಣೆಯ ದೂರದರ್ಶಿತ್ವದ ಚಿಂತನೆಯುಳ್ಳ ಕಾಪು ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯನ್ನು ಬುಧವಾರ ಬಿಡುಗಡೆಗೊಳಿಸಲಾಯಿತು. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಷಿಯಾಗಿ ಕ್ಷೇತ್ರದ ಜನತೆಯ ಅಗತ್ಯತೆಗಳನ್ನು ಪಟ್ಟಿ ಮಾಡಿಕೊಂಡು, ಜನಾಭಿಪ್ರಾಯದಂತೆ ನವ ಕಾಪು ನಿರ್ಮಾಣದ ಸಂಕಲ್ಪಕ್ಕೆ ಪೂರಕವಾಗುವ ಪ್ರಣಾಳಿಕೆಯನ್ನು ಸಿದ್ಧ ಪಡಿಸಲಾಗಿದೆ. ನಾಗರಿಕರು ಮತ್ತು ಜನಪ್ರತಿನಿಽಗಳ ಅಭಿಪ್ರಾಯ, ಸಲಹೆ, ಸೂಚನೆಗಳೊಂದಿಗೆ ಕಾಪು ಕ್ಷೇತ್ರವನ್ನು ರಾಜ್ಯಕ್ಕೇ ಮಾದರಿಯಾಗುವಂತಹ ಕ್ಷೇತ್ರವನ್ನಾಗಿ ಪರಿವರ್ತಿಸಬೇಕೆಂಬ ಕಲ್ಪನೆಯಿದೆ. ಅದಕ್ಕಾಗಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಿ, ಮೋದಿ ಅವರ ಕೈ ಬಲಪಡಿಸಲು ಪ್ರೋತ್ಸಾಹ ನೀಡುವಂತೆ ವಿನಂತಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಕಾಪು ಕ್ಷೇತ್ರದ ಹೆಜಮಾಡಿಯಿಂದ ಹಿಡಿದು ಹಿರಿಯಡಕದವರೆಗಿನ ಎಲ್ಲ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾಗುವಂತೆ ಪ್ರಣಾಳಿಕೆ ಸಿದ್ಧ ಪಡಿಸಲಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿ…
ನಮ್ಮ ಬಾಲ್ಯದಲ್ಲಿ ಸಂಬಂಧಿಕರು ಮನೆಗೆ ಬಂದರೆ ಎರಡು ಮೂರು ದಿನವಾದರೂ ಇರುತ್ತಿದ್ದರು. ತಿನಿಸುಗಳು ಕೂಡ ಎಂದಿನಂತೆ ಇರುತ್ತಿದ್ದವು. ಅವರಿಗಾಗಿಯೇ ವಿಶೇಷವಾಗಿ ಏನನ್ನೂ ಮಾಡುತ್ತಿರಲಿಲ್ಲ. ಹೊರಾಂಗಣ ಹಾಸಿಗೆಗಳ ಮೇಲೆ ಮಲಗುವುದು. ಹರಟೆ ಹೊಡೆಯುವುದು ಮತ್ತು ಮಲಗುವುದು. ಮೂರ್ನಾಲ್ಕು ದಿನದ ನಂತರ ಅವರು ಹಿಂತಿರುಗುವ ಹೊತ್ತಿಗೆ ಅವರ ಚಪ್ಪಲಿಗಳು ಎಲ್ಲೂ ಕಾಣುತ್ತಿರಲಿಲ್ಲ. ಮನೆಯ ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗುತ್ತಿರಲಿಲ್ಲ. ಅಷ್ಟರಲ್ಲಿ ಅವರು ಹತ್ತಿ ಹೊರಡಬೇಕಾದ ಬಸ್ಸು ಬಂದು ಹೋಗಿ ಬಿಡುತ್ತಿತ್ತು. ಆಗ ದಿನಕ್ಕೆ ಒಂದೋ ಎರಡೋ ಬಸ್ ಸಂಚಾರವಿರುತ್ತಿತ್ತು. ಕೆಲವು ಹಳ್ಳಿಗಳಲ್ಲಿ ಅವೂ ಇರಲಿಲ್ಲ. ಬಸ್ಸು ಹೊರಟ ತಕ್ಷಣ ಚಪ್ಪಲಿ ಕಾಣಿಸುತ್ತಿತ್ತು. ಸಂಬಂಧಿಕರು ಇನ್ನಷ್ಟು ದಿನ ಇರಲಿ ಎಂಬ ಆಸೆಯಿಂದ ಕುಟುಂಬದ ಸದಸ್ಯರು ಚಪ್ಪಲಿಯನ್ನು ಬಚ್ಚಿಡುತ್ತಿದ್ದರು. ಆದರೆ ಈಗ ತದ್ವಿರುದ್ಧ ಬಂದವರು ಯಾವಾಗ ಹೊರಡುವರು ಎಂಬ ಕಾತುರ. ಬರು ಬರುತ್ತಾ ನಾವು ಆಧುನಿಕರಾದ ನಂತರ ಬಂಧುತ್ವ, ಸಂಬಂಧಗಳು ಇನ್ನೂ ಶಿಥಿಲಗೊಳ್ಳುತ್ತಿವೆ. ಮತ್ತು ಕಳೆದ ಎರಡ್ಮೂರು ದಶಕಗಳಲ್ಲಿ ರಕ್ತ ಸಂಬಂಧಗಳೇ ಶಾಪವಾಗಿ ಪರಿಣಮಿಸುತ್ತಿವೆ, ಅವಿಭಕ್ತ, ಕೂಡು…
ಕುಂಬಳೆ ಸಮೀಪದ ಪುತ್ತಿಗೆಯ ಪಂಜಳ ನಿವಾಸಿ, ನಿವೃತ್ತ ಮುಖ್ಯೋಪಾಧ್ಯಾಯ, ಹಿರಿಯ ರಂಗಕರ್ಮಿ ಬಾಯಾರುಗುತ್ತು ಮಂಜುನಾಥ ಭಂಡಾರಿ (83) ಅವರು ಜ. 26ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಬಿಪಿಎಂ ಭಂಡಾರಿ ಎಂದೇ ಖ್ಯಾತರಾಗಿದ್ದ ಇವರು 26 ವರ್ಷಗಳ ಕಾಲ ಕಳತ್ತೂರಿನ ಎಎಸ್ಬಿಎಸ್ ಇಚ್ಲಂಪಾಡಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, 1995ರಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಹೊಂದಿದ್ದರು. ಕರ್ನಾಟಕ ನಾಟಕ ಅಕಾಡೆಮಿ ನೇತೃತ್ವದಲ್ಲಿ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆದಿದ್ದ ಅದ್ದೂರಿ ಕಾರ್ಯಕ್ರಮವೊಂದರಲ್ಲಿ ಇವರನ್ನು ರಂಗಸೇವೆಗಾಗಿ ಸಮ್ಮಾನಿಸಲಾಗಿತ್ತು. ಪ್ರಸ್ತುತ ಸುವರ್ಣ ಸಂಭ್ರಮದಲ್ಲಿರುವ ಪುತ್ತಿಗೆಯ ಎಸ್ಕೆಎಸ್ ಆರ್ಟ್ಸ್ ಆ್ಯಂಡ್ ನ್ಪೋರ್ಟ್ಸ್ ಕ್ಲಬ್ನ ಸ್ಥಾಪಕ ಸದಸ್ಯರಾಗಿದ್ದರು. ಬಂಟರ ಸಂಘದ ಪುತ್ತಿಗೆ ಪಂಚಾಯತ್ ಘಟಕದ ಅಧ್ಯಕ್ಷರಾಗಿ, ಕಾಸರಗೋಡು ಜಿಲ್ಲಾ ಬ್ಯಾಂಕಿನ ನಿರ್ದೇಶಕರಾಗಿ, ಅಂಗಡಿಮೊಗರು ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಪುತ್ತಿಗೆ ಶ್ರೀ ಸುಬ್ರಾಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಇವರು ತಾಳಿಪ್ಪಾಡಿ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರದ ನೇತೃತ್ವ…
ಯೋಗ ಇದ್ದವರಿಗೆಲ್ಲಾ ಒಂದು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಲು ಯೋಗ್ಯತೆ ಇರಬೇಕೆಂದಿಲ್ಲ. ಹಾಗೇ ಯೋಗ್ಯತೆ ಇದ್ದವರಿಗೆಲ್ಲಾ ಅಂತಾ ಹುದ್ದೆಯನ್ನು ನಿಭಾಯಿಸುವ ಯೋಗ ಕೂಡಿ ಬರಬೇಕೆಂದೂ ಇಲ್ಲ. ಆದರೆ ಯೋಗ್ಯತೆ ಇದ್ದು ಯೋಗವೂ ಕೂಡಿ ಬಂದಾಗ ಒಬ್ಬ ವ್ಯಕ್ತಿ ಅಸಾಮಾನ್ಯನಾಗುತ್ತಾನೆ. ಜನರ ಕಣ್ಮಣಿಯಾಗುತ್ತಾನೆ, ಜನನಾಯಕನಾಗುತ್ತಾನೆ, ಲೋಕ ಮಾನ್ಯನಾಗುತ್ತಾನೆ, ಆತನಿಗೆ ಪಟ್ಟ ಬೇಕಾಗಿಲ್ಲ. ಜನರೇ ಆತನನ್ನು ರತಗನ ಸಿಂಹಾಸನದಲ್ಲಿ ಕೂರಿಸಿ ಮೆರೆಸುತ್ತಾರೆ. ಇಂತಾ ಯೋಗ್ಯತೆ ಯೋಗ ಅದರೊಂದಿಗೆ ಮುಗ್ದತೆ ಮತ್ತು ಸಾಧನೆಯಿಂದ ಅಸಾಧ್ಯವನ್ನು ಸಾಧಿಸಿದ ಮಹಾ ಸಾಧಕ ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಮಾನ್ಯ ಐಕಳ ಹರೀಶಣ್ಣ. ಅಂದು ಆ ಒಂದು ಶುಭ ಘಳಿಗೆಯಲ್ಲಿ ಬಂಟರ ಕುಲದಾಗಸದಲ್ಲಿ ದ್ರುವ ತಾರೆಯೊಂದರ ಉದಯವಾಯಿತು. ಎಳತ್ತೂರು ಗುತ್ತು ಪಡುಮನೆ ರಾಮಣ್ಣ ಶೆಟ್ಟಿ, ಐಕಳ ಕುಂರ್ಬಿಲ್ ಗುತ್ತು ದೇವಕಿ ಶೆಟ್ಟಿ ದಂಪತಿಗಳ ಮುದ್ದಿನ ಮಗನಾಗಿ ಎಪ್ರಿಲ್ ಹತ್ತೊಂಬತ್ತು 1961 ರಂದು ಜಗದ ಬೆಳಕನ್ನು ಕಂಡ ಆ ದ್ರುವ ತಾರೆಯೇ ನಮ್ಮ ಐಕಳ ಹರೀಶಣ್ಣ. ತಂದೆ ರಾಮಣ್ಣ ಶೆಟ್ಟರು ವಿದ್ಯಾವಂತರು, ಧಾರ್ಮಿಕ…
ಎನ್.ಎನ್.ಎಮ್ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ತುಳು ಚಿತ್ರ “ಪಿಲಿ”. ತೆರೆಗೆ ಬರಲು ಸಿದ್ದವಾಗಿದೆ ಎಂದು ಸಿನಿಮಾದ ನಿರ್ದೇಶಕ ಮಯೂರ್ ಆರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪಿಲಿ ಸಿನಿಮಾವನ್ನು ಸೆನ್ಸಾರ್ ಗೆ ಕಳುಹಿಸಿ ಕೊಡಲಾಗಿದೆ. ಭರತ್ ರಾಮ್ ರೈ ಸಹ ನಿರ್ಮಾಕರಾಗಿರುವ ಈ ಸಿನಿಮಾಕ್ಕೆ ಭರವಸೆಯ ಯುವ ನಟ ಭರತ್ ಭಂಡಾರಿಯವರು ಕಥೆ ಬರೆದು, ಮೊದಲ ಬಾರಿಗೆ ನಾಯಕ ನಟನಾಗಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ ಇದಾಗಿದ್ದು ಈ ಚಿತ್ರದ ಛಾಯಾಗ್ರಹಣ ಮತ್ತು ನಿರ್ದೇಶನದ ಹೊಣೆಯನ್ನು ಹೊತ್ತಿರುವವರು ‘ಮೈನೇಮ್ ಈಸ್ ಅಣ್ಣಪ್ಪ’ ಚಿತ್ರದ ನಿರ್ದೇಶಕ, ಮಯೂರ್.ಆರ್.ಶೆಟ್ಟಿ. ಇವರು ಎಕ್ಕಸಕ, ಪಿಲಿಬೈಲ್ ಯಮುನಕ್ಕ ಸೇರಿದಂತೆ ಹಲವಾರು ತುಳು ಕನ್ನಡ ಚಿತ್ರಗಳಿಗೆ ಸಹನಿರ್ದೇಶಕರಾಗಿ, ಛಾಯಾಗ್ರಾಹಕರಾಗಿ, ಚಿತ್ರ ಸಾಹಿತಿಯಾಗಿ ಹೆಸರ ಮಾಡಿರುತ್ತಾರೆ. ತುಳುನಾಡಿನ ಸಂಸ್ಕೃತಿ, ಆಚರಣೆ ಮತ್ತು ನಂಬಿಕೆಗಳಲ್ಲಿ ಒಂದಾಗಿರುವ ಹುಲಿ ಕುಣಿತದ ಕಥಾವಸ್ತುವನ್ನು ಹೊಂದಿರುವಂತಹ ಚಿತ್ರ ‘ಪಿಲಿ’. ತುಳುನಾಡಿನಲ್ಲಿ ಹುಲಿಕುಣಿತಕ್ಕೆ ಅದರದ್ದೇ ಆದ ಗೌರವ ಮತ್ತು ಇತಿಹಾಸ ಇದೆ. ಆ…
ಮೂಡಬಿದಿರೆ ಆಳ್ಚಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಸುಧಾರಾಣಿ ಶೆಟ್ಟಿ ಅವರ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿದೆ
ಮೂಡಬಿದಿರೆ ಆಳ್ಚಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ, ಕಟ್ಲ ದಾಮೋದರ ಶೆಟ್ಟಿ ಮತ್ತು ಸುಶೀಲಾ ಶೆಟ್ಟಿ ದಂಪತಿಯ ಪುತ್ರಿಯಾದ ಸುಧಾರಾಣಿ ಶೆಟ್ಟಿ ಅವರ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿ.ವಿ ಎಸ್.ವಿ.ಪಿ. ಅಧ್ಯಯನ ಸಂಸ್ಥೆಯ ಸಹ ಪ್ರಾಧ್ಯಾಪಕ ಹಾಗೂ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕ ಡಾ. ನಾಗಪ್ಪ ಗೌಡ ಅವರ ಮಾರ್ಗದರ್ಶನದಲ್ಲಿ ಇವರು ತುಳು ಅನುವಾದ ವಾಙ್ಮಯ ಸಾಂಸ್ಕೃತಿಕ ಅನುಸಂಧಾನದ ನೆಲೆಗಳು ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು. ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಹಳೇ ವಿದ್ಯಾರ್ಥಿಯಾದ ಸುಧಾರಾಣಿ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.
ಜ್ಞಾನ ಸರೋವರ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ದಿನಾಂಕ 1.11.2023 ರಂದು 68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಮೈಸೂರು ರಾಜ್ಯವು (ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡ ಹಬ್ಬವನ್ನಾಗಿ ಆಚರಿಸುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣವನ್ನು ನೆರವೇರಿಸಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವುದರ ಮುಖಾಂತರ ಶಾಲೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸುಧಾಕರ ಎಸ್ ಶೆಟ್ಟಿಯವರು ಕರ್ನಾಟಕ ರಾಜ್ಯೋತ್ಸವವನ್ನು ಕುರಿತು ಮಾತನಾಡಿದರು. ಸ್ವತಃ ಹೆತ್ತ ತಾಯಿ ಮತ್ತು ನಾಡಿನ ಬಗ್ಗೆ ಅಪಾರವಾದ ಅಭಿಮಾನವನ್ನು ಹೊಂದಿರುವ ಸುಧಾಕರ ಶೆಟ್ಟಿ ಅವರು ಕನ್ನಡ ನಾಡು, ನುಡಿ, ಆಚಾರ, ವಿಚಾರಗಳ ಬಗ್ಗೆ ಮಾತನಾಡುತ್ತಾ ರಾಷ್ಟ್ರವನ್ನು ಮೊದಲು ಆಳ್ವಿಕೆ ಮಾಡಿದ ಮನೆತನದ ಬಗ್ಗೆ ತಿಳಿಸುತ್ತಾ, ಪ್ರತಿಯೊಬ್ಬ ಕನ್ನಡಿಗನು ನಮ್ಮ ನಾಡು, ನುಡಿಯ ಬಗ್ಗೆ ಹೆಮ್ಮೆ ಮತ್ತು ಪ್ರೀತಿಯನ್ನು ಹೊಂದಿರಬೇಕು ಎಂದು…
ದಕ್ಷಿಣ ಕನ್ನಡ ರೋಲರ್ ಸ್ಪೋರ್ಟ್ಸ್ ಅಸೋಸಿಯೇಶನ್ ಹೊಯ್ಗೆಬೈಲ್ ಬಳಿಯ ಸ್ಕೇಟಿಂಗ್ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಸ್ಪೀಡ್ ರೋಲರ್ ಸ್ಕೇಟಿಂಗ್ ನಲ್ಲಿ ಕುಳಾಯಿ ರಯಾನ್ ಸ್ಕೂಲ್ ನ ವಿದ್ಯಾರ್ಥಿ ಅಕ್ಷರ್ ಜೆ ಶೆಟ್ಟಿ ಸುರತ್ಕಲ್ ಕ್ವಾಡ್ 1 ಲ್ಯಾಪ್ ರೋಡ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಅಕ್ಷರ್ ಜೆ ಶೆಟ್ಟಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಹೆಚ್ ಪಿಸಿಎಲ್ ಉದ್ಯೋಗಿ ಚಿತ್ರಾ ಜೆ ಶೆಟ್ಟಿಯವರ ಪುತ್ರ. ಈತ ಅನಘ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದು, ದೀಪಾಂಶು ಅವರಿಂದ ತರಬೇತಿ ಪಡೆಯುತ್ತಿದ್ದಾನೆ. ಸಾಧಕ ಸ್ಕೇಟಿಂಗ್ ಪಟುಗಳಿಗೆ ಮೇಯರ್ ಸುಧೀರ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಕಾರ್ಪೋರೇಟರ್ ಗಣೇಶ್ ಕುಲಾಲ್, ದ.ಕ. ರೋಲರ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ಫ್ರಾನ್ಸಿಸ್ ಕೊನ್ಸೆಸೋ, ಕಾರ್ಯದರ್ಶಿ ಮಹೇಶ್ ಕುಮಾರ್, ಪ್ರವೀಣ್ ಕುಮಾರ್, ಸಂತೋಷ್ ಶೆಟ್ಟಿ, ಜಯರಾಜ್, ಲೆಸ್ಟರ್ ಡಿ ಸೋಜ, ಉಮೇಶ್ ಗಟ್ಟಿ, ಅರ್ಶದ್ ಮತ್ತು ಮುಖ್ಯ ತೀರ್ಪುಗಾರ ಅಂತೋಣಿ ಜೇಮ್ಸ್ ಉಪಸ್ಥಿತರಿದ್ದರು.
“ಬಂಟ ಸಮಾಜ ಒಗ್ಗಟ್ಟಿನಿಂದಿರುವುದು ಅನಿವಾರ್ಯ” – ಕನ್ಯಾನ ಸದಾಶಿವ ಶೆಟ್ಟಿ ಗುರುಪುರ ಬಂಟರ ಮಾತೃಸಂಘದ “ದಶಮಾನೋತ್ಸವ ಸಮಾರಂಭ”ವು ವಾಮಂಜೂರಿನ ‘ಚರ್ಚ್ ಸಭಾಂಗಣ’ದಲ್ಲಿ ದಿನಾಂಕ 16-07-2023ನೇ ಆದಿತ್ಯವಾರದಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.), ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು, ಬೆಂಗಳೂರು ಬಂಟರ ಸಂಘ (ರಿ.), ಹಾಗೂ ಇಂಟರ್ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ಮಂಗಳೂರು ಇದರ ಸಹಯೋಗದೊಂದಿಗೆ ಬಹಳ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ಯಾನ ಸದಾಶಿವ ಶೆಟ್ಟಿಯವರು “ಬಂಟ ಸಮಾಜ ಒಗ್ಗಟ್ಟಿನಿಂದ ಇರಬೇಕು. ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದಲ್ಲಿ ಸುಸಜ್ಜಿತವಾದ ಬಂಟರ ಭವನ ನಿರ್ಮಾಣ ಆಗಬೇಕು. ಇದಕ್ಕಾಗಿ ನಾನು ಸಮಾಜದ ಪ್ರಮುಖರನ್ನು ಸೇರಿಸಿ ಅತೀ ಶೀಘ್ರದಲ್ಲಿ ಒಂದು ಸಭೆಯನ್ನು ಕರೆದು ದೊಡ್ಡ ಮಟ್ಟದ ಸಮಾಲೋಚನೆಯನ್ನು ಮಾಡಿ ಈ ಬಗ್ಗೆ ತೀರ್ಮಾನವನ್ನು ಕೈಗೊಳ್ಳುತ್ತೇನೆ” ಎಂಬ ಭರವಸೆಯನ್ನು ನೀಡಿದರು. “ಗುರುಪುರ ಬಂಟರ ಮಾತೃಸಂಘದ ದಶಮಾನೋತ್ಸವ ಸಮಾರಂಭವು ಅತ್ಯಂತ…















