Author: admin
“ಮಳೆ ಇದ್ದರೆ ಇಳೆ, ಇಳೆ ಇದ್ದರೆ ಬೆಳೆ’ ಎನ್ನುವ ಧ್ಯೇಯ ವಾಕ್ಯದಂತೆ ಮಳೆ ನೀರಿನ ಮಹತ್ವವನ್ನು ಚೆನ್ನಾಗಿಯೇ ಅರಿತಿರುವ ವಕ್ವಾಡಿಯ ಗುರುಕುಲ ಶಿಕ್ಷಣ ಸಂಸ್ಥೆಯು ತನ್ನ 42 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಮಳೆ ನೀರನ್ನು ಸಂಗ್ರಹಿಸಿಡುವ ಮಹತ್ಕಾರ್ಯ ಮಾಡುತ್ತಿದ್ದು, ಆ ಮೂಲಕ ಮಕ್ಕಳಿಗೂ ಜಲ ಸಾಕ್ಷರತೆಯ ಪಾಠವನ್ನು ಮಾಡುತ್ತಿದೆ. ಗುರುಕುಲ ಶಿಕ್ಷಣ ಸಂಸ್ಥೆಯು ನಮ್ಮ ಸಂಸ್ಕೃತಿ, ದೇಶಿಯ ಚಿಂತನೆಗಳು, ಪ್ರಾಚೀನ ಶಿಕ್ಷಣ ಪದ್ಧತಿಗೆ ಆದ್ಯತೆ ನೀಡಿರುವುದು ಮಾತ್ರವಲ್ಲದೆ, ಪರಿಸರಕ್ಕೆ ಪೂರಕವಾದ ಹತ್ತಾರ ಮಾರ್ಗೋಪಾಯಗಳನ್ನು ಕೈಗೊಳ್ಳುವ ಮೂಲಕವು ಮಹತ್ತರವಾದ ಕೊಡುಗೆಯನ್ನು ನೀಡುತ್ತಿದೆ. ಫಲ ಕೊಟ್ಟ ಇಂಗುಗುಂಡಿ ಶಾಲಾ ಕಟ್ಟಡ, ಕಚೇರಿ ಕಟ್ಟಡ, ಹಾಸ್ಟೆಲ್ ಕಟ್ಟಡಗಳಿಂದ ಬೀಳುವ ಮಳೆ ನೀರನ್ನು 4 ಕಡೆಗಳಲ್ಲಿ ಇಂಗು ಗುಂಡಿ ಹಾಗೂ 2 ಕಡೆಗಳಲ್ಲಿ ಬೃಹತ್ತಾದ ಇಂಗು ಬಾವಿಗಳಿಗೆ ಬಿಡುವ ವ್ಯವಸ್ಥೆಯನ್ನು ಮಾಡಿದ್ದು, ಇದರಿಂದ ಬೇಸಗೆಯಲ್ಲಿ ಇಲ್ಲಿರುವ ಬಾವಿಗಳು, ಬೋರ್ವೆಲ್ಗಳಲ್ಲಿ ನೀರಿನ ಮಟ್ಟವು ಉತ್ತಮವಾಗಿದೆ. ಇಲ್ಲಿ ನೀರಿನ ಸಮಸ್ಯೆಯೇ ಎದುರಾಗಿಲ್ಲ. ತ್ಯಾಜ್ಯ ನೀರು ಶುದ್ಧಿಕರಿಸಿ ಬಳಕೆ ಇನ್ನು ಹಾಸ್ಟೆಲ್ಗಳಲ್ಲಿನ…
ಜಾನಪದ ಜನಜೀವನದ ಜೀವಾಳವಾಗಿದೆ : ಚಂದ್ರಹಾಸ ಕೆ.ಶೆಟ್ಟಿ (ಚಿತ್ರ / ವರದಿ : ರೋನ್ಸ್ ಬಂಟ್ವಾಳ್) ಮುಂಬಯಿ, ಎ.16: ಜನಜೀವನದಲ್ಲಿ ಜಾನಪದ ಜೀವಾಳವಾಗಿದೆ. ಜಾನಪದದ ವಿಶೇಷತೆ ಸಾಂಸ್ಕೃತಿಕವಾಗಿ ರೂಪುಗೊಂಡಿದೆ. ಜಾನಪದ ಅನ್ನೋದು ಮನುಕುಲದ ಜೀವನವಾಗಿದೆ. ಆದರೆ ಕಾಲಕ್ರಮೇಣ ಇದರ ಅರಿವು ಕ್ಷಿಣಿಸುತ್ತಿರುವುದು ಸಮಂಜಸವಲ್ಲ. ಇಂತಹ ಸಮಯದಲ್ಲಿ ಈ ಜಾನಪದ ಪರಿಷತ್ತು ಜನರೆಲ್ಲರನ್ನೂ ಒಗ್ಗೂಡಿಸಿ ಜಾನಪದ ಸೊಡಗನ್ನು ನವಜನಾಂಗಕ್ಕೆ ಪರಿಚಯಿಸಿ ಬೆಳೆಸುತ್ತಿರುವ ಕಾಯಕ ಶ್ಲಾಘನೀಯವಾಗಿದೆ. ಇದೊಂದು ಉತ್ತಮ ಸೇವೆಯಾಗಿದೆ ಎಂದು ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ ತಿಳಿಸಿದರು. ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು ಇದರ ಮಹಾರಾಷ್ಟ್ರ ಘಟಕವು ಇಂದಿಲ್ಲಿ ಭಾನುವಾರ ಅಪರಾಹ್ನ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದ ಕಂಬಿಹಳ್ಳಿ ಶ್ರೀಮತಿ ಅಪ್ಪಿ ಕೃಷ್ಣ ಶೆಟ್ಟಿ ವೇದಿಕೆಯಲ್ಲಿ ಸುವರ್ಣ ಕರುನಾಡ ಸನಾತನ ಸಂಸ್ಕೃತಿಯ ಮೇರು ಕಲಾಪ್ರಕಾರಗಳ ಚಿಂತನ-ಮಂಥನ-ಗಾಯನ-ನರ್ತನ-ಸಮಗ್ರ ಸಂಗಮಗಳ ಜಾನಪದ ಕಲಾ ಮಹೋತ್ಸವ ಸಂಭ್ರಮಿಸಿದ್ದು ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆಯನ್ನಿತ್ತು ಚಂದ್ರಹಾಸ ಶೆಟ್ಟಿ…
ಸಾಮಾನ್ಯವಾಗಿ ಮಕ್ಕಳು ಉದ್ಯೋಗ ಪಡೆದು ಉನ್ನತ ಮಟ್ಟದಲ್ಲಿ ಇರಬೇಕೆಂಬುದು ಸಾಧರಣ ಎಲ್ಲಾ ತಂದೆ ತಾಯಂದಿರ ಬಯಕೆ. ಅನಿವಾಸಿ ಭಾರತೀಯರಿಗೆ ತಂದೆ ತಾಯಿ ಕುಟುಂಬ ಬಂಧು ಮಿತ್ರರೊಂದಿಗೆ ಕೂಡಲು ಸಮಯ ಸಿಗುವುದೇ ವಿರಳ. ಹಾಗೆಂದು ಮಕ್ಕಳನ್ನು ಕಾಣಲು- ಕೂಡಲು ಸ್ವತಃ ತಂದೆ ತಾಯಂದಿರು ವಿದೇಶಕ್ಕೆ ಹೋಗಿ ಬರುವುದಿದೆ. ಅಂತಹ ಒಂದು ಸಮಯವನ್ನು ಅವಿಸ್ಮರಣೀಯನ್ನಾಗಿಸಿದ ವಿಶಿಷ್ಟ ಕಾರ್ಯಕ್ರಮವೊಂದು ಬರ್ ದುಬೈಯಲ್ಲಿ ನಡೆಯಿತು. ಮಗಳನ್ನು ಕಾಣಲೆಂದು ಊರಿಂದ ಬಂದ ತಂದೆ ಈ ಸಂಸಾರದ ಹಾಗೂ ನಾಡಿನ ಅಂದ ಚಂದ ನೋಡಿ ಮೈಮರೆಯುವುದರೊಳಗೆ ತನ್ನ ತಂದೆಗೆ ಗೊತ್ತಿಲ್ಲದಂತೆ ಬಂಧು ಮಿತ್ರರನ್ನು ಒಂದೆಡೆ ಸೇರಿಸಿಕೊಂಡು ಆಪ್ತ ಸನ್ಮಾನ ಏರ್ಪಡಿಸಿದ ವಿಶೇಷ ಕಾರ್ಯಕ್ರಮವೊಂದು ಇತ್ತೀಚೆಗೆ ಜರಗಿ ವೈಶಿಷ್ಟತೆ ಮೆರೆಯಿತು. ನಗರದ ಬರ್ ದುಬೈನಲ್ಲಿ ನೆಲೆಸಿರುವ ಶ್ರೀಮತಿ ಅಶ್ವಿನಿ ಪುರಂದರ ಶೆಟ್ಟಿಯವರು ತನ್ನ ಏಳಿಗೆಗೆ ಕಾರಣೀಭೂತರಾದ ತಂದೆಗೆ ಅಚಾನಕ್ ಒಂದು ಗೌರವಾರ್ಪಣೆ ಏರ್ಪಡಿಸಿದ ಕಾರ್ಯಕ್ರಮಕ್ಕೆ ಹಲವಾರು ಬಂಧು ಬಾಂಧವರು ಸಾಕ್ಷಿಯಾದರು. ಕಳೆದ 34 ವರ್ಷಗಳಿಂದ ಬೆಳಗಾಂ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಅಶ್ವಿನಿ…
‘ಕಾಂತಾರ’ ನಟ ರಿಷಬ್ ಶೆಟ್ಟಿಗೆ ಕುಂದಾಪುರ ವಕೀಲರ ಸಂಘದ ವತಿಯಿಂದ ದಿನಾಂಕ 07-12-2022 ರಂದು ವಕೀಲರ ಸಂಘದ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಕಾಂತಾರ ನಟ ರಿಷಬ್ ಶೆಟ್ಟಿ “ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವಿತ ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಕುಂದಾಪುರ ವಕೀಲರ ಸಂಘದವರು ನೀಡಿದ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ” ಎಂದರು. ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹೀಮ್ ಹುಸೇನ್ ಶೇಖ್, ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ರಾಜು, ಪ್ರಧಾನ ಸಿವಿಲ್ ನ್ಯಾಯಾಧೀಶ ಧನೇಶ್ ಮುಗಳಿ, ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ರೋಹಿಣಿ ಡಿ, ಎರಡನೇ ಹೆಚ್ಚುವರಿ ಸಿವಿಲ್ & ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ವಿದ್ಯಾ ಎ.ಎಸ್ ಉಪಸ್ಥಿತರಿದ್ದರು. ಬನ್ನಾಡಿ ಸೋಮನಾಥ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಾರ್ ಅಸೋಸೀಯೇಶನ್ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್ ಸ್ವಾಗತಿಸಿದರು, ರೇಶ್ಮಾ…
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಪಟ್ಲ ಫೌಂಡೇಶನ್ ಟ್ರಸ್ಟ್ ಉತ್ತಮ ಸಮಾಜ ಸೇವೆ ಮಾಡುತ್ತಿದ್ದು ಸರ್ವ ರೀತಿಯ ಬೆಂಬಲವನ್ನು ಎಲ್ಲರೂ ನೀಡಬೇಕು. ಯಾರೂ ಸಮಾಜಕ್ಕಾಗಿ ವಿಶ್ವಾಸ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೋ ನಾನು ಅವರ ಜತೆಗಿರುತ್ತೇನೆ ಎಂದು ಉದ್ಯಮಿ ಕೂಳೂರು ಸದಾಶಿವ ಶೆಟ್ಟಿ ಕನ್ಯಾನ ಹೇಳಿದರು. ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸಹಯೋಗದಲ್ಲಿ ಡಿ. 4ರಂದು ಮುಲ್ಕಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ನಿವೇಶನದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಯುವ ಸಮಾಜ ಕಲ್ಯಾಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಮಾನ್ಯ ಮಧ್ಯಮ ವರ್ಗದ ಬಡ ಕುಟುಂಬದಲ್ಲಿ ಜನಿಸಿ ಶಿಕ್ಷಣ ಪಡೆಯಲು ಕಷ್ಟವಾದಾಗ ಬಂಟರ ಸಂಘವು ಆರ್ಥಿಕ ಸಹಾಯ ಮಾಡಿ ಬೆಂಬಲಿಸಿ ಬೆಳೆಸಿದೆ. ಇದೀಗ ನಾನು ಆರ್ಥಿಕವಾಗಿ ಬಲವಾದಾಗ ನಮ್ಮ ಬಂಟ ಸಮಾಜ ಹಾಗೂ ಇತರ ಸಮಾಜಕ್ಕೆ ತನ್ನಿಂದಾಗುವ ಸಹಾಯ ಮಾಡುತ್ತಿದ್ದೇನೆ. ಐಕಳ ಹರೀಶ್…
ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆಯ ಅಧ್ಯಕ್ಷರಾದ ಲ. ರಾಜಾರಾಮ್ ಶೆಟ್ಟಿ ಕಲ್ಕಟ್ಟೆ ಇವರ ಅಧ್ಯಕ್ಷತೆಯಲ್ಲಿ 2 ನೇ ವಲಯದ ಸಮಾಜಸೇವಾ ಕಾರ್ಯಕ್ರಮ ಬನ್ನಾಡಿ ಸುಬ್ಬಣ್ಣ ಹೆಗ್ಡೆ ಸಭಾ ಭವನದಲ್ಲಿ ದಿನಾಂಕ 26-11-2022 ನೇ ಶನಿವಾರ ನಡೆಯಿತು. ಝೋನ್ ಚಯರ್ ಪರ್ಸನ್ ಲ. ಇಂಜಿನಿಯರ್ ಪ್ರವೀಣ್ ಕುಮಾರ್ ಶೆಟ್ಟಿ ಮಾತನಾಡಿ ಕೇವಲ “ಫೋಟೋ” ಕ್ಕೋಸ್ಕರ ಸೇವಾ ಕಾರ್ಯಕ್ರಮಗಳನ್ನು ಮಾಡದೇ, “ನೇತ್ರದಾನ, ರಕ್ತ ದಾನ, ಪರಿಸರ ಸಂರಕ್ಷಣೆ, ಲಯನ್ಸ್ ಇಮೇಜ್ ಬಿಲ್ಡಿಂಗ್ ಮುಂತಾದ ಕಾರ್ಯಕ್ರಮಗಳನ್ನು ಮನಃಪೂರ್ವಕ ಬಾಗಿ ಮಾಡುವುದರ ಜೊತೆಗೆ ಆರ್ಥಿಕ ಸಂಕಸ್ಟದಲ್ಲಿರುವವರಿಗೆ, ಬಡ ವಿದ್ಯಾರ್ಥಿಗಳಿಗೆ ಸಹಾಯವನ್ನು ಕ್ಲಬ್ ಗಳು ಮಾಡಬೇಕು” ಎಂದು ಹೇಳಿದರು. ಸೇವಾ ಕಾರ್ಯಕ್ರಮದ ಅಂಗವಾಗಿ, ಇತ್ತೀಚೆಗೆ ಸಣ್ಣ ಪ್ರಾಯದಲ್ಲಿ ಅಕಾಲಿಕ ಮರಣ ಹೊಂದಿದ ಕ್ಲಬ್ ವ್ಯಾಪ್ತಿಯ ಓರ್ವರ ಮಗಳ ವಿದ್ಯಾಭ್ಯಾಸಕ್ಕೆ ಕ್ಲಬ್ ಸದಸ್ಯರಿಂದ ಸಂಗ್ರಹಿಸಿದ ಮೊತ್ತವನ್ನು ನೀಡಲಾಯಿತು. ಹಾಗೂ ಈ ಸಂದರ್ಭ ಇದೇ ಕುಟುಂಬಕ್ಕೆ ಪ್ರತೀ ತಿಂಗಳು ಆರ್ಥಿಕ ಸಹಾಯ ಮಾಡುತ್ತಿರುವ ಕ್ಲಬ್ ನ ಸದಸ್ಯರಾದ ಲ. ವಸಂತ್ ಶೆಟ್ಟಿ…
ಎಂ.ಆರ್.ಜಿ. ಗ್ರೂಪಿನ ಸ್ಥಾಪಕಾಧ್ಯಕ್ಷರು ಶ್ರೀ ಕೆ.ಪ್ರಕಾಶ್ ಶೆಟ್ಟಿ ಅವರಿಗೆ ದಕ್ಷಿಣ ಭಾರತದ ಆತಿಥ್ಯ ಕ್ಷೇತ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಎಸ್.ಐ.ಎಚ್.ಆರ್.ಎ. ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಕ್ಷಿಣ ಭಾರತದ ಹೊಟೇಲ್ ಮತ್ತು ರೆಸ್ಟೋರೆಂಟ್ ಗಳ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ನಡೆದ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕರ್ನಾಟಕದ ಪ್ರವಾಸೋದ್ಯಮ ಸಚಿವರಾದ ಶ್ರೀ ಆನಂದ ಸಿಂಗ್, ತಮಿಳುನಾಡಿನ ಪ್ರವಾಸೋದ್ಯಮ ಸಚಿವ ಡಾ. ಮತಿವೆಂತನ್, ಪುದುಚೇರಿ ಪ್ರವಾಸೋದ್ಯಮ ಸಚಿವ ಕೆ.ಲಕ್ಷ್ಮೀನಾರಾಯಣನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಸುರತ್ಕಲ್ ಬಂಟರ ಸಂಘ, ರೋಟರಿ ಕ್ಲಬ್ ಬೈಕಂಪಾಡಿ, ಶ್ರೀನಿವಾಸ ಆಸ್ಪತ್ರೆ ಮುಕ್ಕ ಐ ನೀಡ್ಸ್ ಆಪ್ಟಿಕಲ್ಸ್ ಸುರತ್ಕಲ್ ಇದರ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ನೇತ್ರ ತಪಾಸಣೆ ಇಎನ್ಟಿ ಟೆಸ್ಟ್ ಮತ್ತು ತಪಾಸಣೆ ಶಿಬಿರ ಸುರತ್ಕಲ್ ಬಂಟರ ಸಂಘದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ರೋಟರಿ ಎಂಜೆ, ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕಾರ್ಯಕ್ರಮ ಶ್ಲಾಘಿಸಿ, ಆರೋಗ್ಯ, ಜಲ ಸಿರಿ, ಮತ್ತು ವಿದ್ಯಾನಿಧಿ ಯೋಜನೆ ಇವು ರೋಟರಿಯ ಈ ವರ್ಷದ ಧ್ಯೇಯವಾಕ್ಯಗಳಾಗಿದ್ದು ಈ ಕ್ಷೇತ್ರಗಳಲ್ಲಿ ಕನಿಷ್ಟ ಒಂದು ಲಕ್ಷ ಮಂದಿಗೆ ಸೇವೆ ಸಲ್ಲಿಸುವ ಗುರಿಇದೆ ಎಂದು ಹೇಳಿದರು. ಮುಕ್ಕ ಶ್ರೀನಿವಾಸ ವಿವಿ ಪ್ರೊ. ಛಾನ್ಸಲರ್ ಡಾ ಎ ಶ್ರೀನಿವಾಸ ರಾವ್, ರೋಟರಿ ಸಹಾಯಕ ಗವರ್ನರ್ ಬಾಲಕೃಷ್ಣ ಶೆಟ್ಟಿ, ಸುರತ್ಕಲ್ ವಿಜಯ ಮೆಡಿಕಲ್ಸ್ ನ ದಯಾನಂದ ಶೆಟ್ಟಿ, ರೋಟರಿ ವಲಯಾಧಿಕಾರಿ ಜಯ ಕುಮಾರ್ , ಶ್ರೀನಿವಾಸ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಡೇವಿಡ್, ಐ ನೀಡ್ಸ್ ಆಪ್ಟಿಕಲ್ಸ್ ನ ಯೋಗೀಶ್ ನಾಯಕ್, ಸುರತ್ಕಲ್…
ಸಮಾಜಸೇವಕ, ನ್ಯಾಯವಾದಿ ಎಂ.ದಾಮೋದರ ಶೆಟ್ಟಿಯವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಸ್ಥಾಯಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದು ಕಾಸರಗೋಡು ಜಿಲ್ಲೆಗೆ ತುಂಬಾ ಮಾನ್ಯತೆ ಕೊಟ್ಟಂತಹ ಸ್ಥಾನವಗಿದೆ. ವೃತ್ತಿಯಲ್ಲಿ ನ್ಯಾಯವಾದಿಯಾಗಿ ಪ್ರವೃತ್ತಿಯಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದರಾಗಿರುವ ಶೆಟ್ಟರು ಬಾಲ್ಯದಿಂದಲೂ ಯಕ್ಷಗಾನದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಇವರು ಕಾಲೇಜು ದಿವಸಗಳಲ್ಲಿ ಯಕ್ಷಗಾನದ ಪ್ರೌಢ ಕಲಾವಿದರಾಗಿ ಗುರಿತಿಸಿಕೊಂಡಿದ್ದಾರೆ. ಉಪ್ಪಳ ದಿ. ಕೃಷ್ಣ ಮಾಸ್ಟರವರಿಂದ ಯಕ್ಷಗಾನದ ನಾಟ್ಯವನ್ನು, ಮಾಂಬಾಡಿ ಸುಬ್ರಹ್ಮಣ್ಯ ಭಟ್ ಮತ್ತು ಬೆಳಿಂಜ ವೆಂಕಪ್ಪ ರೈಯವರಿಂದ ಭಾಗವತಿಕೆಯನ್ನು ಹಾಗೂ ಪೆರುವಾಯಿ ನಾರಾಯಣ ಶೆಟ್ಟಿಯವರಿಂದ ಬಣ್ಣಗಾರಿಕೆಯನ್ನು ಕಲಿತರು. ಮುಮ್ಮೇಳ- ಹಿಮ್ಮೇಳ ಪ್ರಾವೀಣ್ಯತೆಯನ್ನು ಪಡೆದು ರಾವಣ, ಅತಿಕಾಯ, ಅರ್ಜುನ, ದೇವೇಂದ್ರ, ಶುಂಭ, ಕಂಸ, ದಶರಥ, ರಕ್ತಬೀಜ, ಇಂದ್ರಜಿತ್, ಕರ್ಣ ಹೀಗೆ ಹತ್ತು ಹಲಾವರು ವೇಷಗಳಿಗೆ ಜೀವ ತುಂಬಿ ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಹಲವಾರು ಅಭಿಮಾನಿಗಳ ತಂಡವನ್ನೇ ರೂಪಿಸಿಕೊಂಡಿದ್ದಾರೆ. ಉತ್ತಮವಾದ ವ್ಯಾಕ್ಚತುರ್ಯ ವನ್ನು ಹೊಂದಿದ್ದ ಶೆಟ್ಟರು ತಾಳಮದ್ದಳೆಯ ಅರ್ಥದಾರಿಯಾಗಿ ಅತಿಕಾಯ, ಕರ್ಣ, ಭೀಷ್ಮ, ರಕ್ತಬೀಜನ ಪಾತ್ರದಲ್ಲಿ ಮಿಂಚಿ ಕಲಾ ರಸಿಕರ…
ಭಾರತೀಯ ರೆಡ್ಕ್ರಾಸ್ ಸೊಸೈಟಿ (ಐಆರ್ಸಿ ಎಸ್)ಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ರಾಜ್ಯದಲ್ಲಿಯೇ ಅತ್ಯುತ್ತಮವಾಗಿ ರಕ್ತ ನಿಧಿಯನ್ನು ನಿರ್ವಹಿಸಿ ಅತಿ ಹೆಚ್ಚು ಬಡ ರೋಗಿಗಳಿಗೆ ರಕ್ತ ಪೂರೈಸಿದ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ರೆಡ್ಕ್ರಾಸ್ ರಾಜ್ಯ ಘಟಕದ ಮಹಾಸಭೆಯಲ್ಲಿ ರಾಜ್ಯಪಾಲ ಹಾಗೂ ಐಆರ್ಸಿಎಸ್ ರಾಜ್ಯ ಘಟಕದ ಅಧ್ಯಕ್ಷ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಜಿಲ್ಲಾ ಘಟಕದ ಚೇರ್ಮನ್ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯ ಘಟಕದ ದ.ಕ. ಜಿಲ್ಲಾ ಪ್ರತಿನಿಧಿ ಯತೀಶ್ ಬೈಕಂಪಾಡಿ, ಜಿಲ್ಲಾ ಘಟಕದ ನಿರ್ದೇಶಕರಾದ ಡಾ. ಸಚ್ಚಿದಾನಂದ ರೈ, ಗುರುದತ್ ಎಂ. ನಾಯಕ್, ಪಿ.ಬಿ. ಹರೀಶ್ ರೈ, ರಾಜ್ಯ ಘಟಕದ ಉಪಾಧ್ಯಕ್ಷ ಗೋಪಾಲ್ ಹೊಸೂರು, ಚೇರ್ಮನ್ ವಿಜಯಕುಮಾರ್ ಪಾಟೀಲ್ ಉಪಸ್ಥಿತರಿದ್ದರು. ರೆಡ್ಕ್ರಾಸ್ ದ.ಕ. ಶಾಖೆಯ ಬ್ಲಿಡ್ ಬ್ಯಾಂಕ್ನಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಪ್ರತೀ ತಿಂಗಳು 450ಕ್ಕೂ ಅಧಿಕ ಯೂನಿಟ್ ರಕ್ತವನ್ನು ಉಚಿತವಾಗಿ ನೀಡುತ್ತಿದೆ. ಈಗ ಅತ್ಯುತ್ತಮ ರಕ್ತ ನಿಧಿ ಪ್ರಶಸ್ತಿ…















