Author: admin
ಬಂಟರ ಸಂಘ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿ : ಮಹಿಳಾ ವಿಭಾಗದ ವತಿಯಿಂದ ಹರಸಿನ ಕುಂಕುಮ ಮತ್ತು ಮಾತಾ ಕೀ ಚೌಕಿ
ಬಂಟರ ಸಂಘ ಇದರ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಹರಸಿನ ಕುಂಕುಮ ಮತ್ತು ಮಾತಾ ಕೀ ಚೌಕಿ ಕಾರ್ಯಕ್ರಮವು ಸೆಪ್ಟೆಂಬರ್ 25 ರಂದು ಮೀರಾರೋಡ್ ಸಾಯಿ ಬಾಬಾ ನಗರದ ಸೈಂಟ್ ಥೋಮಸ್ ಕೆಥೋಲಿಕ್ ಚರ್ಚ್ ಹಾಲ್ ನಲ್ಲಿ ನಡೆಯಿತು. ಸಭಾ ಕಾರ್ಯಕ್ರಮವನ್ನು ಗಣ್ಯರು ಸೇರಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರು, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಇಂತಹ ಭಕ್ತಿ ಪ್ರಧಾನವಾದ ಕಾರ್ಯಕ್ರಮ ಅತ್ಯುತ್ತಮವಾಗಿ ಮೂಡಿಬಂದಿದೆ. ನಮ್ಮ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಕೊಟ್ರಪಾಡಿಯವರ ನೇತೃತ್ವದಲ್ಲಿ ಹಾಗೂ ಸದಾ ಹಸನ್ಮುಖಿಯಾಗಿ ಎಲ್ಲರನ್ನೂ ಪ್ರೀತಿಯಿಂದ ಆದರಿಸುವ ಕಾರ್ಯಾಧ್ಯಕ್ಷೆ ವಸಂತಿ ಎಸ್. ಶೆಟ್ಟಿಯವರ ಮುತುವರ್ಜಿಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ. ಬಂಟರ ಸಂಘದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಒಂದಾದ ಈ ಪ್ರಾದೇಶಿಕ ಸಮಿತಿಯ ಈ ಧಾರ್ಮಿಕ ಚಿಂತನೆಯ ಕಾರ್ಯಕ್ರಮವು ನೆರೆದ ಭಕ್ತರಿಗೆ…
ದಸರಾ ಹಬ್ಬಕ್ಕೆ ಸಾಹಿತ್ಯ ಸಂಸ್ಕೃತಿಯ ಮೆರುಗು : ಮಂಗಳಾದೇವಿ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಸ್ಕರ ರೈ ಕುಕ್ಕುವಳ್ಳಿ
‘ದಸರಾ ಕನ್ನಡಿಗರ ನಾಡಹಬ್ಬ. ವಿಜಯನಗರ ಅರಸರ ಕಾಲದಿಂದಲೂ ಅದು ಕೇವಲ ಧಾರ್ಮಿಕ ಆಚರಣೆಯಾಗಿರದೆ ಅದರಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿತ್ತು. ಆಧುನಿಕ ಸಮಾಜದ ಸಂಭ್ರಮೋಲ್ಲಾಸ ಏನೇ ಇದ್ದರೂ ಈ ಉತ್ಸವ ನಡೆವಲ್ಲಿ ನಮ್ಮ ಸಾಹಿತ್ಯ ಸಂಸ್ಕೃತಿಯ ಮೆರುಗು ನೀಡಿ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸುವ ಅಗತ್ಯವಿದೆ’ ಎಂದು ಕವಿ, ಸಾಹಿತಿ ಮತ್ತು ಮಾಧ್ಯಮ ತಜ್ಞ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಶರನ್ನವರಾತ್ರಿ ಪ್ರಯುಕ್ತ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಅಕ್ಟೋಬರ್ 2ರಂದು ಜರಗಿದ ‘ದಸರಾ ಕವಿಗೋಷ್ಠಿ – 2025’ ನವರಸ ರಂಜನೆಯ ಬಹುಭಾಷಾ ಕವಿಮೇಳದ ಅಧ್ಯಕ್ಷ ಸ್ಥಾನದಿಂದ ಅವರು ಮಾತನಾಡಿದರು. ‘ನವರಾತ್ರಿ ಧಾರ್ಮಿಕ ಹಬ್ಬ. ಹಬ್ಬಗಳಲ್ಲಿ ರಾಷ್ಟ್ರೀಯ, ನಾಡ ಹಬ್ಬ, ಜಾತಿ-ಧರ್ಮಗಳಿಗೆ ಸಂಬಂಧಿಸಿದವುಗಳಿವೆ. ಹಿಂದಿನ ಕಾಲದಲ್ಲೂ ಹಬ್ಬಗಳಿದ್ದವು. ಆಗ ಮಾಧ್ಯಮಗಳ ಸೌಕರ್ಯ ಈಗಿನಷ್ಟು ಇರಲಿಲ್ಲ. ಇಚ್ಛಾಶಕ್ತಿಯಿಂದ ನೈತಿಕ ನೆಲೆಯಲ್ಲಿ ಆಚರಣೆ ಇತ್ತು’ ಎಂದ ಅವರು ‘ಹಬ್ಬ ಎನ್ನುವುದು ಮನುಕುಲವನ್ನು ಬೆಸೆಯುವ ಆಚರಣೆಯಾಗಬೇಕು. ಈ ಆಚರಣೆಗಳು ವಿಘಟನೆಯನ್ನು ಮಾಡುವುದಾಗಬಾರದು ಎಂಬ…
ತುಳುವರು ಪ್ರತಿಯೊಂದನ್ನು ವಿಚಾರವನ್ನು ಆರಾಧಿಸುವ ಗುಣವುಳ್ಳವರು, ಯಾವುದನ್ನು ಬೇಕಾದರೂ ಬಿಟ್ಟುಕೊಟ್ಟರು ಆದರೆ ನಂಬಿಕೆ ಆರಾಧನೆಯನ್ನಲ್ಲ ಎಂಬುದು ಕಟು ಸತ್ಯ. ತೌಳವ ನಾಡಿನಲ್ಲಿ ಪ್ರತಿ ಆರಾಧನೆಗೆ ಅದರದ್ದೆಯಾದ ನಂಬಿಕೆ, ಕಟ್ಟುಪಾಡುಗಳಿವೆ. ಇಂತಹ ಒಂದು ಆರಾಧನೆಯ ಭಾಗವೇ ಪಿಲಿವೇಷ. ಮಾರ್ನೆಮಿ (ನವರಾತ್ರಿ)ಯಲ್ಲಿ ಮನೆ ಮನೆಗೆ, ಪೇಟೆಯಲ್ಲಿ ಸುತ್ತುತ್ತಿದ್ದ ಪಿಲಿವೇಷ ಇಂದು ವ್ಯವಸ್ಥೆಯ ರೀತಿಯಲ್ಲಿ ಅಚ್ಚುಕಟ್ಟಾಗಿ ಸ್ಪರ್ಧಾತ್ಮಕ ರೀತಿಯಲ್ಲಿ ನಡೆಯುತ್ತಿದೆ ಎಂದರೆ ಅದಕ್ಕೆ ಹಲವು ಕಾರಣವಿದ್ದರೂ ಮುಖ್ಯವಾಗಿ ಕಾಣ ಸಿಗುವುದು ಯುವ ನಾಯಕ ಮಿಥುನ್ ರೈ. ಸುಮಾರು ಹತ್ತು ವರ್ಷದ ಹಿಂದೆ ಪಿಲಿವೇಷ ಪ್ರತಿಷ್ಠಾನ (ರಿ) ಎಂಬ ಸಂಘಟನೆಯನ್ನು ಕಟ್ಟಿಕೊಂಡು ನಮ್ಮ ಟಿವಿ (ಚಾನೆಲ್) ಜೊತೆ ಸೇರಿ ಒಂದೊಳ್ಳೆಯ ವೇದಿಕೆ ನಿರ್ಮಿಸಿ ಲಕ್ಷ-ಲಕ್ಷ ಬಹುಮಾನವನ್ನು ಘೋಷಿಸಿ ಪಿಲಿವೇಷದಲ್ಲಿ ಪ್ರಾಮಖ್ಯವಾಗಿರುವ ಧರಣಿ ಮಂಡಲ, ಅಟ್ಟೆ, ಪೌಲ, ಜಂಡೆ ಬೀಸುವುದು, ಬಣ್ಣಗಾರಿಕೆ, ಅಕ್ಕಿಮುಡಿ, ಬ್ಲಾಕ್ ಟೈಗರ್, ಅಪ್ಪೆ ಪಿಲಿ, ಟ್ರಂಪೆಟ್, ದೋಲು, ತಾಸೆ, ಮೂಲಕ ವ್ಯವಸ್ಥಿತ ರೀತಿಯಲ್ಲಿ ಪಿಲಿವೇಷಕ್ಕೆ ಸ್ಟಾರ್ ಟಚ್ ನೀಡಿದ ಕೀರ್ತಿ ರೈ ಅವರಿಗೆ ಸಲ್ಲುತ್ತದೆ.…
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಇದರ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶವು ಅಕ್ಟೋಬರ್ 03 ರಂದು ನಡೆಯಿತು. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್ ಅವರು ಕಟ್ಟಡ ಶಿಲಾನ್ಯಾಸ ನೆರವೇರಿಸಿದರು. ಆ ನಂತರ ಕಾರ್ಯಕರ್ತರ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ…
ಬಹುನಿರೀಕ್ಷಿತ “ಕಾಂತಾರ ಚಾಪ್ಟರ್ -1” ಪ್ರೀಮಿಯರ್ ಶೋ ದುಬೈನಲ್ಲಿ ಹೌಸ್ ಫುಲ್ ಪ್ರದರ್ಶನಗೊಂಡು ಒಳ್ಳೆಯ ಪ್ರತಿಕ್ರಿಯೆಗೆ ಪಾತ್ರವಾಗಿದೆ. ಫೋರ್ಚುನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ ನೇತೃತ್ವದಲ್ಲಿ ನಡೆದ ಪ್ರೀಮಿಯರ್ ಪ್ರದರ್ಶನದಲ್ಲಿ ಯುಎಇಯ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಿನಿಮಾವನ್ನು ನೋಡಿ ಒಳ್ಳೆಯ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸರಳ ರೀತಿಯಲ್ಲಿ ನಡೆದ ಪ್ರೀಮಿಯರ್ ಶೋ ನ ಬಿಡುಗಡೆಯ ಸಭಾ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ ಮೂಲಕ ಯುಎಇಯಲ್ಲಿ ಚಿತ್ರ ಬಿಡುಗಡೆಗೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ಯುಎಇ ಎಮಿರೇಟ್ಸ್ ನ ಉದ್ಯಮಿ ಡಾ. ಬು. ಅಬ್ಧುಲ್ಲಾ, ಅಬ್ದುಲ್ಲಾ ಅಲ್ ಝಫಾಲೀ, ಅಮಲ್ ಅಬ್ದುಲ್ಲಾ,ಜ್ಯೊಲ್ಲೆ ಜಬ್ಬಾರ್, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಹರೀಶ್ ಬಂಗೇರ, ದೀಪಕ್ ಸೋಮಶೇಖರ್ ಉಪಸ್ಥಿತರಿದ್ದರು. ಎಲ್ಲಾ ಅತಿಥಿಗಳನ್ನು ಪ್ರವೀಣ್ ಕುಮಾರ್ ಶೆಟ್ಟಿಯವರು ಶಾಲು ಹೊದಿಸಿ ಗೌರವಿಸಿದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಥೆ ಏನು? ಬಾಂಗ್ರಾ ರಾಜ ಮನೆತನ ಮತ್ತು…
ಬ್ರಹ್ಮಾವರ: ಅ 2: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ಮಹಾನ್ ನಾಯಕರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮಾತನಾಡಿ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣವನ್ನು ತ್ಯಾಗಮಾಡಿದ್ದಾರೆ. ಆದರೆ ಗಾಂಧೀಜಿಯವರನ್ನು ಮಾತ್ರ ರಾಷ್ಟ್ರಪಿತ ಎಂದು ಕರೆಯುತ್ತೇವೆ. ಅವರು ತಮ್ಮ ಅಹಿಂಸಾ ತತ್ವದಿಂದ ಪ್ರಪಂಚದ ಎಲ್ಲಾ ಜನರ ಮನಸ್ಸನ್ನು ಗೆದ್ದವರು. ಅದೇ ರೀತಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ತಮ್ಮ ಸರಳತೆಯ ಜೊತೆಗೆ ದೇಶವನ್ನು ಕಾಯುವ ಸಶಸ್ತ್ರ ಪಡೆಗಳಿಗೆ ಹೆಚ್ಚಿನ ಗೌರವ ಮತ್ತು ಪ್ರಾಮುಖ್ಯತೆಯನ್ನು ನೀಡಿದ್ದರು. ಅವರ ‘ಜೈ ಜವಾನ್ ಜೈ ಕಿಸಾನ್’ ಘೋಷವಾಕ್ಯ ರೈತರು ಹಾಗೂ ಸೈನಿಕರ ಕುರಿತು ಅವರಿಗಿರುವ ಕಾಳಜಿ ಮತ್ತು ಗೌರವವನ್ನು ಎತ್ತಿ ತೋರಿಸುತ್ತದೆ ಎಂದರು. ಶಾಲಾ ದೈಹಿಕ ಶಿಕ್ಷಕರಾದ ಸೀತರಾಮ ಗೌಡ ಲಾಲ್ ಬಹದ್ದೂರ್ ಶಾಸ್ತ್ರೀಯವರು ದೇಶಕ್ಕೆ ನೀಡಿದ ಕೊಡುಗೆಗಳು ಹಾಗೂ ದಿನೇಶ್ರವರು ಗಾಂಧೀಜಿಯವರ ಜೀವನ ಸಾಧನೆ, ತತ್ವಗಳ…
ಕೇಂದ್ರ ಲೋಕಸೇವಾ ಆಯೋಗ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ನಡೆದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ 14 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಎಸ್.ಎಸ್.ಬಿ. ( ಸರ್ವಿಸ್ ಸೆಲೆಕ್ಷನ್ ಬೋರ್ಡ್ ) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ನಾಗದೇವ ಎಂ.ಜಿ, ಪ್ರಥಮ್ ತಮ್ಮಣ್ಣಗೌಡರ್, ನಿಶಾಂತ್ ಹೊನ್ನಾವರ, ನಮಿತ್ ಕೃಷ್ಣಮೂರ್ತಿ ಹೆಗ್ಡೆ, ಸಂವಿತ್ ಅಮಿತ್ ಗೋಕರ್ಣ, ಸುಕ್ಷಿತ್ ಗಿರೀಶ್ ಗೌಡ, ಅಭಿರಾಮ್ ಭಟ್ ಜಿ.ಪಿ, ಪ್ರಜ್ವಲ್ ಭಟ್, ಆರ್ಯ. ವಿ, ಸೃಜನಾ. ಎಸ್, ಯಜತ್ ಗೌಡ ಎಸ್.ಪಿ, ವಿಶ್ವೇಶ್ ಎನ್.ಎಚ್, ನಿನಾದ್ ರಾಜೇಶ್ ನಾಯ್ಕ್, ಅನುರಾಗ್ ಎಸ್. ಶಿರ್ಸಟ್ ತಮ್ಮ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಸಾಧನೆಗೈದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ತೇರ್ಗಡೆಗೊಂಡ 7,650 ವಿದ್ಯಾರ್ಥಿಗಳಲ್ಲಿ 14 ಜನ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ತೇರ್ಗಡೆಗೊಂಡ 500 ವಿದ್ಯಾರ್ಥಿನಿಯರಲ್ಲಿ ಒಬ್ಬರು ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿನಿ ಎಂಬುದು ಶ್ಲಾಘನೀಯ ವಿಚಾರ. ಎನ್. ಡಿ. ಎ. ದೇಶಮಟ್ಟದಲ್ಲಿ ನಡೆಯುವ ಅತ್ಯಂತ…
ನಾಡಿನೆಲ್ಲೆಡೆ ವಿಜಯ ದಶಮಿಯ ಸಂಭ್ರಮ ಕಳೆಗಟ್ಟಿರುವ ಸಂದರ್ಭದಲ್ಲಿ, ಅಕ್ಟೋಬರ್ 2ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಾರದ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾ ನಗರ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ವಿದ್ಯಾರ್ಥಿಗಳು ಭಕ್ತಿ ಸುಧೆಯ ಗೀತ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ರವಿ ಜಿ, ಹೇಮಂತ್ , ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಭ್ರಮದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆಂಗ್ಲ ಭಾಷೆ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.
ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಅಲ್ಲಿನ ನಿವಾಸಿಗಳಿಗೆ ಆಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬೆರೆತರು. ಇದೇ ಸಂದರ್ಭ ಆಶ್ರಮದ ನಿವಾಸಿಗಳಿಗೆ ವಿದ್ಯಾರ್ಥಿಗಳು ತಂದ ದಿನಸಿ ಸಾಮಾಗ್ರಿಗಳನ್ನು ಹಂಚಿ ಖುಷಿಪಟ್ಟರು. ಇದೇ ಸಂದರ್ಭ ಸಂಸ್ಥೆಯ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಘಟಕಾಧಿಕಾರಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಶೈಲೇಶ್, ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಕೀರ್ತಿ ಆಚಾರ್ಯ, ಹಿಂದಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಕ್ಷೇಮಪಾಲಕರಾದ ಸುಕೇಶ್, ಮಂಜುನಾಥ್, ಚಾಲಕರಾದ ಚಂದ್ರಶೇಖರ್ ಮತ್ತು ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.
ದುಷ್ಟ ಸಂಹಾರಕ್ಕಾಗಿಯೇ ಅವತರಿಸಿದ ದುರ್ಗಾ ಮಾತೆಯ ಪೂಜನೀಯ ಪುಣ್ಯ ಪರ್ವವಿದು. ನವರಾತ್ರಿ ಉತ್ಸವದಲ್ಲಿ ಭಕ್ತರು ಒಂಬತ್ತು ರೂಪಗಳಲ್ಲಿ ದುರ್ಗಾ ದೇವಿಯನ್ನು ಪೂಜಿಸುತ್ತಾರೆ. ಲೋಕ ಕಲ್ಯಾಣಾರ್ಥವಾಗಿ ಕೂಡಾ ಇದು ಮಹತ್ವದ್ದು. ವಿಶೇಷವಾಗಿ ನವರಾತ್ರಿ ಈ ಸುಸಂದರ್ಭದಲ್ಲಿ ಪುಣೆ ಬಂಟರ ಸಂಘದ ದುರ್ಗಾ ಪೂಜೆಯಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ವಿಶೇಷ ರೀತಿಯ ಸಂಪ್ರದಾಯದ ಪ್ರಕಾರ ಇಲ್ಲಿ ದುರ್ಗಾ ಪೂಜೆ, ಮತ್ತು ತಮ್ಮ ಪ್ರಕೃತಿಯೊಂದಿಗಿನ ಬಾಂಧವ್ಯದ ಆಚರಣೆಯನ್ನು ನೋಡುವ ಭಾಗ್ಯ ಸಿಕ್ಕಿದೆ. ಅದೇ ರೀತಿ ನನ್ನ ಸಾಮಾಜಿಕ ಸೇವೆಯನ್ನು ಪರಿಗಣಿಸಿ ನೀಡಿದ ನವದುರ್ಗಾ ಪ್ರಶಸ್ತಿಗೆ ಋಣಿಯಾಗಿದ್ದೇನೆ. ಈ ಪ್ರಶಸ್ತಿಯನ್ನು ನನ್ನ ಸೇವಾ ಸಂಸ್ಥೆಯ ಅನಾಥ ಮಕ್ಕಳಿಗೆ ಅರ್ಪಣೆ ಮಾಡುತಿದ್ದೇನೆ. ಅನಾಥ ಮತ್ತು ಅಂಗವಿಕಲ ಮಕ್ಕಳನ್ನು ಮಾನಸಿಕ ಸಮತೋಲನಕ್ಕೆ ತಂದು, ಸಾಮಾಜಿಕ ಚಿಂತನೆಯನ್ನು ತಿಳಿ ಹೇಳುವ ಮೂಲಕ ಅಜ್ಞಾನದಿಂದ ಜ್ಞಾನದೆಡೆಗೆ ಪರಿವರ್ತಿಸಿ, ಸ್ವಪರಿಶ್ರಮದಿಂದ ಸಬಲೀಕರಣಗೊಳಿಸಿ ಸ್ವಾವಲಂಭಿಗಳಾಗಿ ಮಾಡುವುದರಲ್ಲಿ ನಮಗೆ ಆತ್ಮ ತೃಪ್ತಿ ಇದೆ. ಇದು ನಮಗೆ ಸವಾಲಿನ ಪ್ರಶ್ನೆಯಾದರೂ ಹಲವಾರು ವರ್ಷಗಳಿಂದ ಈ ಅನಿಕೇತ್ ಸೇವಾಭಾವಿ ಸಂಸ್ಥೆ…















