Author: admin

ಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಸಮಿತಿಯ ಅಂಗವಾಗಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವತಿಯಿಂದ ವನಮಹೋತ್ಸವ ಆಚಾರಿಸಲಾಯ್ತು . ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾಧ್ವಿ ಶ್ರೀ ಮಾತಾನಂದಮಯೀ ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಣುಕಾ ಎಸ್. ರೈ ಉಪಸ್ಥಿತರಿದ್ದರು.ಶಾಲಾ ಶಿಕ್ಷಕ ವೃಂದದವರು ಹಾಗು ವಿದ್ಯಾರ್ಥಿಗಳು ಆಟದ ಮೈದಾನದ ಸುತ್ತಲೂ ವಿವಿಧ ಹಣ್ಣು ಹೂಗಳ ಹಾಗು ಮೌಲ್ಯಯುತ ಮರಗಳ ಸಸಿಗಳನ್ನು ನೆಟ್ಟರು.

Read More

ಮಂಗಳೂರು ತಾಲೂಕು ಪೊಳಲಿ ಸೀಮೆಯ ಪುಟ್ಟ ಗ್ರಾಮವೊಂದರ ಕಾಂತಪ್ಪ ಎಂಬ ಹುಡುಗ ಐಟಿಐ ಮುಗಿಸಿ ಬೆಂಗಳೂರಿನ ಹೆಚ್‌ಎಎಲ್‌ಗೆ ತರಬೇತಿಗೆಂದು ಹೋದ. ಬೆಂಗಳೂರಿನಲ್ಲಿ ತನ್ನ ಸಂಬಂಧಿಕರೂ, ಕಟ್ಟರ್ ಕಾಂಗ್ರೆಸಿಗರೂ ಆಗಿದ್ದ ಜೀವರಾಜ ಆಳ್ವರ ಮನೆಯಲ್ಲಿದ್ದುಕೊಂಡು ಹೆಚ್‌ಎಎಲ್‌ಗೆ ಹೋಗತೊಡಗಿದ. ಊರಿನಿಂದ ಬಂದಿದ್ದ ಸಂಬಂಧಿಕರ ಹುಡುಗನನ್ನು ಶಿಸ್ತಿನಿಂದ ಬೆಳೆಸಬೇಕು ಎಂದುಕೊಂಡಿದ್ದ ಜೀವರಾಜ ಆಳ್ವರಿಗೆ ಕೆಲವೇ ದಿನಗಳಲ್ಲಿ ಹುಡುಗ ದಾರಿ ತಪ್ಪುತ್ತಿದ್ದಾನೆ ಎನಿಸಲಾರಂಭಿಸಿತು. ಹುಡುಗನನ್ನು ಕರೆದು ಬಯ್ದರು, ಬುದ್ಧಿ ಹೇಳಿದರು, ತಿದ್ದಲು ಇನ್ನಿಲ್ಲದ ಪ್ರಯತ್ನ ಮಾಡತೊಡಗಿದರು. ಆದರೆ ಹುಡುಗ, ಆಳ್ವರ ಮಾತನ್ನು ಕೇಳದೆ ತನ್ನದೇ ದಾರಿಯಲ್ಲಿ ನಡೆಯತೊಡಗಿದ. ತಾನು ನಡೆಯುತ್ತಿದ್ದ ದಾರಿಯಲ್ಲಿ ಆತನಿಗೆ ಯಾವುದೋ ಒಂದು ಭವಿಷ್ಯ ಕಾಣಿಸತೊಡಗಿತು. ಜೀವರಾಜ ಆಳ್ವರಿಗೆ ಹುಡುಗ ದಾರಿ ತಪ್ಪುತ್ತಿದ್ದಾನೆ ಎನಿಸಿದ್ದು ಆತ ಆರೆಸ್ಸೆಸ್ಸಿನ ಶಾಖೆಗೆ ಹೋಗಲಾರಂಭಿಸಿದ್ದಕ್ಕೆ. ಮನೆಯ ಹುಡುಗನೇ ಶಾಖೆಗೆ ಹೋಗುವುದನ್ನು ನೋಡಿದರೆ ಜನ ಏನೆಂದುಕೊಂಡಾರು ಮತ್ತು ಇದು ತನ್ನ ರಾಜಕೀಯ ಬದುಕಿಗೆ ಹಿನ್ನಡೆಯಾಗಬಹುದೆಂಬ ಭಯ ಜೀವರಾಜ ಆಳ್ವರಿಗಿತ್ತು. ಆದರೆ ಆಳ್ವರು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾದವು. ಹುಡುಗ ಮುಂಗೋಪಿ…

Read More

” ಭಾರತೀಯ ಭಾವೈಕೆಯ ಸಾಂಸ್ಕೃತಿಕ ವೈಭವವನ್ನು ಮುಂಬಯಿಯಲ್ಲಿ ಬಿಂಬಿಸಿದ ಕರ್ನಾಟಕ ಸಂಘದ 90 ರ ಸಂಭ್ರಮ : ಪ್ರವೀಣ್ ಶೆಟ್ಟಿ ವಕ್ವಾಡಿ ದುಬೈ ಚಿತ್ರ ವರದಿ  ದಿನೇಶ್ ಕುಲಾಲ್ ಮುಂಬೈ  :  ಹೊರನಾಡಿನ ಕನ್ನಡಿಗರಿಗೆ  ಕನ್ನಡದ ಭಾಷೆ ಸಂಸ್ಕೃತಿಯ ಬಗ್ಗೆ ಅಪಾರ  ಅಭಿಮಾನವಿದ್ದು,ಅದು ಅವರನ್ನು ಜಾಗೃತ ಗೊಳಿಸಿ  ವೈಶಿಷ್ಟ ಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.ಕನ್ನಡ ಭಾಷೆಯ ಉಳಿವಿಗಾಗಿ ನಿರಂತರವಾಗಿ ಕೆಲಸ   ಕಾರ್ಯಗಳು ಮಹಾರಾಷ್ಟ್ರದಲ್ಲಿ ನಡೆಯುವಷ್ಟು ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮ ನಮ್ಮ ಕನ್ನಡ ನಾಡಿನಲ್ಲೂ ನಡೆಯುವುದಿಲ್ಲ.90 ವರ್ಷಗಳಿಂದ ಕರ್ನಾಟಕ ಸಂಘ ಮಾಡುತ್ತಿರುವ ಕನ್ನಡ ಪರ  ಕಾರ್ಯಗಳು ತುಂಬಾ ಪ್ರಸಿದ್ದಿಯನ್ನು ಪಡೆದಿದ್ದು, ಸರಕಾರವು ಇಂತಹ ಮೇರು ಸಂಸ್ಥೆಗಳ ತ್ತ ಗಮನ ಹರಿಸಬೇಕು. ನಮ್ಮ ನಾಡಿನ ಮೇಲೆ, ಭಾಷೆಯ ಮೇಲೆ ಅಭಿಮಾನ ಇದ್ದವರು ಮಾತ್ರ ಇಂಥ  ಕಾರ್ಯದಲ್ಲಿ ಪಾಲ್ಗೊಳ್ಳಲು ಸಾಧ್ಯ ಸಂಸ್ಕೃತಿ ಉಳಿದರೆ ಧರ್ಮವು ಉಳಿಯುವುದಕ್ಕೆ ಸಾಧ್ಯ ಧರ್ಮದಿಂದ ದೇಶ ಉಳಿದಾಗೆ, ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು   ಮುಂಬೈಯಲ್ಲಿ ಮತ್ತೆ ಅದ್ಬುತವಾಗಿ ಮಾಡ ಬೇಕಾದರೆ …

Read More

ಯುವ ಬಂಟರ ಸಂಘ (ರಿ.) ಕಂಬಳಕಟ್ಟ-ಕೊಡವೂರು ಇದರ ದಶಮಾನೋತ್ಸವದ ಅಂಗವಾಗಿ ಸಂಘದ ಸದಸ್ಯರುಗಳಿಗೆ “ಬಂಟ ಕ್ರೀಡೋತ್ಸವ”ವನ್ನು ದಿನಾಂಕ 02.04.2023 ರವಿವಾರ ಆದಿವುಡುಪಿ ಶಾಲಾ ಮೈದಾನದಲ್ಲಿ ಏರ್ಪಡಿಸಲಾಯಿತು. ಈ ಸಮಾರಂಭವನ್ನು ಹಿರಿಯರಾದ ಆದಿವುಡುಪಿ ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಜಯಕರ ಶೆಟ್ಟಿ ಅಂಬಲಪಾಡಿ ಇವರು ದೀಪ ಬೆಳಗುವುದರೊಂದಿಗೆ ಉದ್ಘಾಟಿಸಿದರು. ಲl ವಿದ್ಯಾಲತಾ ಯು ಶೆಟ್ಟಿ ಬನ್ನಂಜೆ ಇವರು ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸುವ ಮೂಲಕ “ಬಂಟ ಕ್ರೀಡೋತ್ಸವ”ಕ್ಕೆ ಚಾಲನೆ ನೀಡಿದರು. ಈ ಕ್ರೀಡಾ ಕೂಟಕ್ಕೆ ಶುಭ ಹಾರೈಸುತ್ತಾ ಮಾತಾಡಿದ ಅವರು ಸಮಾಜವನ್ನು ಒಗ್ಗೂಡಿಸುವಲ್ಲಿ ಇಂತಹ ಕ್ರೀಡಾಕೂಟಗಳು ಉತ್ತಮ ಪಾತ್ರವಹಿಸುತ್ತದೆ. ಈ ಕ್ರೀಡಾಕೂಟದಲ್ಲಿ ಒಂದು ಭಾಗವಾಗಿ ಪಾಲ್ಗೊಂಡಿದ್ದು ತುಂಬಾ ಹೆಮ್ಮೆತಂದಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಆದಿವುಡುಪಿ ಪ್ರೌಢಶಾಲಾ ದೈಹಿಕ ಶಿಕ್ಷಕರಾದ ಶ್ರೀಯುತ ಇಮ್ಮಾನ್ಯವೆಲ್ ಡೇವಿಡ್ ಆಲ್ಬರ್ಟ್ ಹಾಗೂ ಉಡುಪಿ ನಗರಸಭಾ ಸ್ಥಾಯೀ ಸಮಿತಿಯ ನೂತನ ಅಧ್ಯಕ್ಷರಾದ ಶ್ರೀ ಶ್ರೀಶ ಭಟ್ ಕೊಡವೂರು ಅವರುಗಳಿಗೆ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಬಂಟರ ಸಂಘದ ಕಾರ್ಯದರ್ಶಿ ಶ್ರೀ…

Read More

ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ ಚೆನ್ನಯರ ಹೆಸರು ನಾಮಕರಣದ ಸಮಾರಂಭ ಮಾ. 26ರಂದು ನಡೆಯಿತು. ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ ಹಾಗೂ ಶಾಸಕ ಸಂಜೀವ ಮಠಂದೂರು ನಾಮಕರಣ ಫ‌ಲಕ ಅನಾವರಣ ಮಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾಧಿಕಾರಿ ಎಂ.ಆರ್‌. ರವಿಕುಮಾರ್‌, ನಗರಸಭೆ ಅಧ್ಯಕ್ಷ ಕೆ. ಜೀವಂಧರ್‌ ಜೈನ್‌, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿದರು. ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣ ಮಾಡಲು ಕಾರಣರಾದ ಶಾಸಕ ಸಂಜೀವ ಮಠಂದೂರು ಅವರನ್ನು ಬಿಲ್ಲವ ಸಮಾಜದ ವಿವಿಧ ಸಂಘಟನೆಗಳಿಂದ ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್‌ ಗೌರಿ, ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮೀ ಅಶೋಕ್‌ ಶೆಣೈ, ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಆರ್‌.ಸಿ. ನಾರಾಯಣ್‌, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್‌ ಕೋಟ್ಯಾನ್‌,…

Read More

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಶೇ. 60ರಷ್ಟು ಪೂರ್ಣಗೊಂಡಿದೆ. ಮಸ್ಕತ್‌ನಲ್ಲಿ ಅನಿವಾಸಿ ಭಾರತೀಯರ (ಎನ್‌ಆರ್‌ಐ) ಸಮಿತಿಯನ್ನು ರಚಿಸಲಾಗಿದ್ದು ವಿವಿಧ ರಾಷ್ಟ್ರಗಳಲ್ಲಿ 12 ಘಟಕಗಳನ್ನು ರಚಿಸಿ ಅಮ್ಮನ ದೇಗುಲ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಮಿತಿಯ ಅಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ ಮತ್ತು ಕಾರ್ಯಾಧ್ಯಕ್ಷರಾಗಿ ಮಸ್ಕತ್‌ನ ಶಶಿಧರ ಶೆಟ್ಟಿ ಮಲ್ಲಾರು ಆಯ್ಕೆಯಾಗಿದ್ದಾರೆ ಎಂದರು. ವಿವಿಧ ರಾಷ್ಟ್ರಗಳಲ್ಲಿ 12 ಘಟಕ ರಚನೆ ಅನಿವಾಸಿ ಭಾರತೀಯ ಉದ್ಯಮಿಗಳಾದ ದಿವಾಕರ ಶೆಟ್ಟಿ ಮಲ್ಲಾರು (ಒಮಾನ್‌), ವಕ್ವಾಡಿ ಪ್ರವೀಣ್‌ ಕುಮಾರ್‌ ಶೆಟ್ಟಿ (ಯುಎಇ) ರವಿ ಶೆಟ್ಟಿ (ಕತಾರ್‌), ಸನತ್‌ ಶೆಟ್ಟಿ (ಕುವೈಟ್‌), ರಾಜೇಶ್‌ ಶೆಟ್ಟಿ (ಬಹ್ರೈನ್‌), ಶಿವರಾಮ ಶೆಟ್ಟಿ (ಆಸ್ಟ್ರೇಲಿಯಾ ಸಿಡ್ನಿ), ನಿಶಿಕಾಂತ್‌ ಸೆಮಿತಾ (ಆಸ್ಟ್ರೇಲಿಯಾ ಮೆಲ್ಬರ್ನ್), ಭಾಸ್ಕರ್‌ ಸೇರಿಗಾರ್‌ (ಯುಎಸ್‌ಎ ಬೋಸ್ಟನ್‌), ವಿಜಯ ಶೆಟ್ಟಿ (ಕೆನಡಾ ನಾರ್ತ್‌ ಅಮೆರಿಕ), ಪೃಥ್ವಿ ಶೆಟ್ಟಿ (ಯುಕೆ), ಸಂತೋಷ್‌ ಕುಮಾರ್‌ ಶೆಟ್ಟಿ (ಸೌದಿ ಅರೇಬಿಯಾ), ಮಹೇಶ್‌…

Read More

ಬಂಟರ ಸಂಘ ಪಿಂಪ್ರಿ- ಚಿಂಚ್ವಾಡ್ ವತಿಯಿಂದ ಸಮಾಜಬಾಂಧವರಿಗಾಗಿ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟ ಹಾಗೂ ರಾಷ್ಟ್ರಮಟ್ಟದ ಕಬಡ್ಡಿ ಮತ್ತು ತ್ರೋಬಾಲ್ ಪಂದ್ಯಾಟವು ಫೆ .5 ರಂದು ಮೋರ್ಯಾ ಗೋಸಾವಿ ಕ್ರೀಡಾ ಸಂಕುಲ್ ,ಕೇಶವ್ ನಗರ್ ,ಚಿಂಚ್ವಾಡ್ ಇಲ್ಲಿ ಬೆಳಗ್ಗೆ ಗಂಟೆ 8 :30 ರಿಂದ ನಡೆಯಲಿದೆ . ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆಯ ಖ್ಯಾತ ಮಕ್ಕಳ ತಜ್ಞ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಸುಧಾಕರ ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ತುಳು ಸಂಘ ಪಿಂಪ್ರಿ -ಚಿಂಚ್ವಾಡ್ ಇದರ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕುರ್ಕಾಲ್ ಆಗಮಿಸಲಿದ್ದಾರೆ. ಸಂಜೆ ನಡೆವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕರ್ನಾಟಕ ರಾಜ್ಯ ಇದರ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ,ಗೌರವ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ ,ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ…

Read More

ಸಾಧಿಸಬೇಕೆಂಬ ಛಲವಿದ್ದವನು ಸಾಧನೆಯ ಹಾದಿಯಲ್ಲಿ ಕೇಳಿ ಬರುವ ಕೊಂಕು ಮಾತುಗಳ ಕಡೆಗೆ ಲಕ್ಷ್ಯ ವಹಿಸದೆ ತಮ್ಮ ಗುರಿಯತ್ತ ಕಠಿಣ ಶ್ರಮ ವಹಿಸಬೇಕು. ಇದಕ್ಕೆ ಉದಾಹರಣೆಯಂತೆ ಸಾಧನೆಯ ಹಾದಿಯಲ್ಲಿ ಬೆಳಗುತ್ತಿರುವ ರಾಷ್ಟ್ರ ಮಟ್ಟದ ಪ್ರತಿಭೆ ಹರ್ಷಿಣಿ ಶೆಟ್ಟಿ ಬೆಳ್ತಂಗಡಿಯವರು 13-12-2000 ರಲ್ಲಿ ರವಿ ಶೆಟ್ಟಿ ಹಾಗೂ ಶಶಿಕಲಾ ಶೆಟ್ಟಿ ದಂಪತಿಗಳ ಪುತ್ರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಕ್ತಿನಗರದಲ್ಲಿ ಜನಿಸಿದರು. ಹರ್ಷಿಣಿ ಶೆಟ್ಟಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಪ್ರಾಥಮಿಕ ಶಾಲೆ ಮಾಲಾಡಿಯಲ್ಲಿ ಪೂರ್ಣಗೊಳಿಸಿ ಎಂಟನೇ ತರಗತಿಯನ್ನು ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ, ಒಂಭತ್ತನೇ ತರಗತಿ ಶಿಕ್ಷಣವನ್ನು ಎಸ್ ಡಿ ಎಂ ಪ್ರೌಢಶಾಲೆ ಉಜಿರೆ ಹಾಗೂ ಹತ್ತನೇ ತರಗತಿಯನ್ನು ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಪೂರ್ಣಗೊಳಿಸಿದರು. ನಂತರ ಪಿ‌.ಯು.ಸಿ ಶಿಕ್ಷಣವನ್ನು ಮಂಗಳೂರಿನ ವಿಕಾಸ್ ಕಾಲೇಜಿನಲ್ಲಿ ಪಡೆದು ಆಳ್ವಾಸ್ ಕಾಲೇಜು ಮೂಡುಬಿದಿರೆಯಲ್ಲಿ ಬಿ.ಕಾಂ ಶಿಕ್ಷಣವನ್ನು ಪಡೆದರು. ಶಾಲಾ ದಿನಗಳಿಂದಲೂ ಕ್ರೀಡೆಯತ್ತ ಒಲವು ತುಂಬಿ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸುತ್ತಿದ್ದರು. ನಂತರದ ದಿನಗಳಲ್ಲಿ ಕಬಡ್ಡಿ ಆಟದತ್ತ ಹೆಚ್ಚಿನ ಆಸಕ್ತಿ…

Read More

ಮೂಲತ: ಮೂಡಂಬೈಲು ರವಿ ಶೆಟ್ಟಿ ದೋಣಿಂಜೆಗುತ್ತು ಅವರು ಕತಾರ್ ನಲ್ಲಿ ಎಟಿಎಸ್ ಸಂಸ್ಥೆಯ ಆಡಳಿತ ನಿರ್ದೇಶಕರು.ಇಂಜಿನಿಯರ್ ಪಧವೀಧರರಾದ ಅವರು ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಬೀರಿದವರು. ಕರ್ನಾಟಕ ಮೂಲದ ಸುಮಾರು 2000 ಜನರಿಗೆ ಇದುವರೆಗೆ ಅವರು ಉದ್ಯೋಗವನ್ನು ನೀಡಿದ್ದಾರೆ. ತಮ್ಮ ಜೀವನದಲ್ಲಿ ಸಮಾಜಸೇವೆಗೆ ಹೆಚ್ಚು ಮಹತ್ವ ನೀಡಿದ ಅವರು ಅಶಕ್ತರ,ನೊಂದವರ ಬಾಳಿಗೆ ಬೆಳಕಾದವರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ, ಆರೋಗ್ಯ ಸಮಸ್ಯೆಯಲ್ಲಿ ಇರುವ ಅದೆಷ್ಟೋ ನೊಂದವರಿಗೆ ಸಹಾಯ, ವಿ ದೇವಾಲಯಗಳ ಜೀರ್ಣೋದ್ಧಾರ ಹೀಗೆ ನಾನಾ ತರದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಅವರಿಗೆ ಆರ್ಯಭಟ ಪ್ರಶಸ್ತಿ, ಮದರ್ ಥೆರೇಸಾ ಸೋಶಿಯಲ್ ಹಾರ್ಮೋನಿ ಪ್ರಶಸ್ತಿ, ಅಭಿಯಂತರ ಪ್ರಶಸ್ತಿ, ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಆಂಡ್ ಬಿಜಿನೆಸ್ ಎಕ್ಸೆಲೆನ್ಸ್ ಅವಾರ್ಡ್, ನೆಲ್ಸನ್ ಮಂಡೇಲಾ ಅವಾರ್ಡ್ ಫಾರ್ ಹ್ಯೂಮಾನಿಟಿ ಮೊದಲಾದ ಅನೇಕ ರಾಜ್ಯ,ರಾಷ್ಟ್ರ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ದೊರೆತಿವೆ. ಮುಂಬಯಿ ವಿಶ್ವವಿದ್ಯಾಲಯ,ಕನ್ನಡ ವಿಭಾಗ ಇತ್ತೀಚೆಗೆ ರವಿತೇಜ ಎಂಬ ಪುಸ್ತಕವನ್ನು ಕನ್ನಡ ಮತ್ತು ಇಂಗ್ಲಿಷನಲ್ಲಿ ರಚಿಸಿ ಅರ್ಪಿಸಿತ್ತು.

Read More

‘ಒಂದು ಮೊಟ್ಟೆಯ ಕಥೆ’ ಚಿತ್ರ ತಂಡದ ನೇತೃತ್ವದಲ್ಲಿ ವೈಭವ್ ಪ್ರಿಕ್ಸ್ ಅಡಿಯಲ್ಲಿ, ಮ್ಯಾಂಗೋ ಪಿಕಲ್ ಬ್ಯಾನರ್ ಸಹಭಾಗಿತ್ವದಲ್ಲಿ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ತುಳು ಚಿತ್ರ ನಿರ್ಮಾಣಗೊಂಡಿದ್ದು, ಮೇ 20 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಈ ಚಿತ್ರವು ಸಂಪೂರ್ಣ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಆಗಿದ್ದು, ಚಿತ್ರದ ಟೀಸರ್ ಕೆಲವೇ ದಿನಗಳಲ್ಲಿ ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ತುಳು ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿ ಸಂಚಲನ ಮೂಡಿಸಿದೆ. ಇತ್ತೀಚೆಗೆ ಚಿತ್ರ ತಂಡವು ಕಟೀಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಚಿತ್ರದ ತುಳು ಗೀತೆ ಟೈಟಲ್ ಟ್ರ್ಯಾಕ್ ಬಿಡುಗಡೆಗೊಳಿಸಿತ್ತು. ಅದ್ದೂರಿಯಾಗಿ ಮೂಡಿಬಂದ ಚಿತ್ರದ ಗೀತೆಯು ಕರಾವಳಿಯಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ತುಳು ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದೆ. ಚಿತ್ರದಲ್ಲಿ ಮದುವೆ ಮತ್ತು ಮದರಂಗಿ ಕಾರ್ಯಕ್ರಮದ ಕಥಾ ಹಂದರವನ್ನು ಹೊಂದಿದ್ದು, ನೈಜತೆಗೆ ಒತ್ತುಕೊಟ್ಟು ಸುಂದರವಾಗಿ ಸೆರೆಹಿಡಿಯಲಾಗಿದೆ. ಕೌಟುಂಬಿಕ ಮನೋರಂಜನೆಯ ಜತೆಗೆ ಹಾಸ್ಯಕ್ಕೂ ಪ್ರಾಮುಖ್ಯತೆ ನೀಡಲಾಗಿದೆ. ಈ ಚಿತ್ರವನ್ನು ಯುವನಟ ರಾಹುಲ್ ಅಮೀನ್ ನಿರ್ದೇಶಿಸಿದ್ದು, ಆನಂದ್ ಎನ್ ಕುಂಪಲ ನಿರ್ಮಾಪಕರಾಗಿದ್ದಾರೆ. ಈ…

Read More