Author: admin
ಒಳ್ಳೆಯತನ ಎಂದರೆ ಮಾನವೀಯ ಗುಣಗಳನ್ನು ಹೊಂದಿರುತ್ತದೆ. ಅಂತಹ ಮಾನವೀಯ ಗುಣಗಳೆಂದರೆ ಸಹಕಾರ, ಸಹಾಯ, ದಯೆ, ಕರುಣೆ, ಸಹಾನುಭೂತಿ, ಸಾಮಾಜಿಕ ಪ್ರಜ್ಞೆ, ಭಾತೃತ್ವ, ಪ್ರೀತಿ, ಸೇವಾ ಮನೋಭಾವನೆ, ಹೃದಯ ವೈಶಾಲ್ಯತೆ. ಇಂತಹ ಎಲ್ಲಾ ಗುಣಗಳನ್ನು ಹೊಂದಿರುವ ನಮ್ಮ ಬಂಟ ಸಮಾಜದ ಮುಂದಿನ ಯುವ ಪೀಳಿಗೆಯ ಅಭಿವೃದ್ದಿ ಹೇಗೆ ಎಂಬದನ್ನು ಅರಿತು ಮುನ್ನಡೆಯಬೇಕಾದ ಸವಾಲು ನಮ್ಮ ಸಮಾಜದ ಮುಂದಿದೆ. ಸನಾತನ ಭಾರತೀಯ ಸಂಸ್ಕ್ರತಿ, ಹಿಂದುತ್ವದ ತತ್ವದ ಮೇಲೆ ನಿಂತಿದೆ. ಧಾರ್ಮಿಕ ಆಚರಣೆಗಳ ಮಹತ್ವ, ಸಂಸ್ಕೃತಿ, ಸಂಸ್ಕಾರಗಳ ಅರಿವು ಮಕ್ಕಳಿಗೆ ಮೂಡಿಸುವ ಕಾರ್ಯ ಕೂಡಾ ಆಗಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸಮಾಜದ ಸಂಘ ಸಂಸ್ಥೆಗಳ ಮೇಲೆ ಮಹತ್ತರವಾದ ಜವಾಬ್ದಾರಿ ಇದೆ. ನಮ್ಮಬಂಟರ ಸಾಂಘಿಕ ಶಕ್ತಿಯಿಂದ ಇದು ಸಾಧ್ಯ ಎಂಬುದನ್ನು ಅರಿತಿದ್ದೇವೆ. ಈ ಬಗ್ಗೆ ನಾವು ಬಂಟರ ಸಂಘ ಮುಂಬಯಿ ಮತ್ತು ನನ್ನ ಸೇವಾ ಸಂಸ್ಥೆ ಸಂಜೀವಿನಿ ಟ್ರಸ್ಟ್ ಮೂಲಕ ಬಹಳಷ್ಟು ಕಾರ್ಯಗಳನ್ನು ಮಾಡುತ್ತಿದ್ದೇವೆ. ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘ ಕೂಡಾ ಈ ಕಾರ್ಯ ಮಾಡುತ್ತಿದೆ ಎಂದು…
ಡಾ| ಹರ್ಷಕುಮಾರ್ ರೈ ಮಾಡಾವು ನಿರ್ಮಾಣದ ‘ಇರ್ದೆ ವಿಷ್ಣುಮೂರ್ತಿ’ ತುಳು ಭಕ್ತಿಗೀತೆಯ ಪೋಸ್ಟರ್ ಶಾಸಕ ಅಶೋಕ್ ರೈಯವರಿಂದ ಅನಾವರಣ
ಜನ್ಮ ಕ್ರಿಯೇಷನ್ ಪುತ್ತೂರು ಅರ್ಪಿಸುವ ಉದ್ಯಮಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ| ಹರ್ಷಕುಮಾರ್ ರೈ ಮಾಡಾವು ನಿರ್ಮಾಣದಲ್ಲಿ ಮೂಡಿ ಬಂದಿರುವ ಇರ್ದೆ ಶ್ರೀ ವಿಷ್ಣುಮೂರ್ತಿ ದೇವರ ಕುರಿತಾದ ಮೊಟ್ಟ ಮೊದಲ ತುಳು ಭಕ್ತಿಗೀತೆ ‘ಇರ್ದೆ ವಿಷ್ಣುಮೂರ್ತಿ’ ಇದರ ಪೋಸ್ಟರನ್ನು ಶಾಸಕ ಅಶೋಕ್ ಕುಮಾರ್ ರೈ ಮತ್ತು ಸುಮಾ ಅಶೋಕ್ ರೈಯವರು ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಡಾ| ಹರ್ಷಕುಮಾರ್ ರೈ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು, ರೈ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಸದಾಶಿವ ರೈ ಮಠಂತಬೆಟ್ಟು, ದೇವಸ್ಥಾನದ ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆ ಗುತ್ತು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಅಕ್ಟೋಬರ್ 2ರಂದು ಇರ್ದೆಯಲ್ಲಿ ನಡೆಯುವ ಶಾರದೋತ್ಸವ ಕಾರ್ಯಕ್ರಮದಲ್ಲಿ ಅನು ಆಡಿಯೋಸ್ ಯೌಟ್ಯೂಬ್ ಚಾನೆಲ್ ನಲ್ಲಿ ಭಕ್ತಿಗೀತೆ ಬಿಡುಗಡೆಗೊಳ್ಳಲಿದೆ. ಚರಣ್ ಉಪ್ಪಳಿಗೆ, ಸಾರಥ್ಯ ಶೆಟ್ಟಿ, ಅಜಯ್ ರಾಜ್ ಸಾಹಿತ್ಯದಲ್ಲಿ ಮೂಡಿ ಬಂದಿರುವ…
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ರಾಜಾಂಗಣದಲ್ಲಿ ಸೆಪ್ಟೆಂಬರ್ 27 ರಂದು ಯಕ್ಷಕಲಾ ಪೊಳಲಿ ಇದರ 30 ನೇ ವರ್ಷದ ಪ್ರಯುಕ್ತ ತ್ರಿಂಶತಿ ಸಂಭ್ರಮದ ‘ಪೊಳಲಿ ಯಕ್ಷೋತ್ಸವ’ವು ಪ್ರಶಸ್ತಿ ಪ್ರದಾನ, ಗೌರವಾರ್ಪಣೆ, ಸಮ್ಮಾನ, ಸಂಸ್ಮರಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ಸಂಪನ್ನಗೊಂಡಿತು. ಪೊಳಲಿ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಯಕ್ಷಕಲಾ ಪೋಷಕ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಇವರಿಗೆ ‘ಪೊಳಲಿ ಯಕ್ಷೋತ್ಸವ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಅಲ್ಲದೇ ಯಕ್ಷಗಾನ ರಂಗದ ವಿಶಿಷ್ಟ ಸಾಧನೆಗಾಗಿ ಹಿರಿಯ ಕಲಾವಿದರಾದ ಭಾಸ್ಕರ ರೈ ಕುಕ್ಕುವಳ್ಳಿ, ಮಾಂಬಾಡಿ ಸುಬ್ರಹ್ಮಣ್ಯ ಭಟ್, ಅಡೂರು ಲಕ್ಷ್ಮೀನಾರಾಯಣ ರಾವ್, ಕೊಳ್ತಿಗೆ ನಾರಾಯಣ ಗೌಡ, ಉಬರಡ್ಕ ಉಮೇಶ್ ಶೆಟ್ಟಿ, ಜಬ್ಬಾರ್ ಸಮೋ ಸಂಪಾಜೆ, ಶಿವರಾಮ ಪಣಂಬೂರು, ಗಿರೀಶ್ ಹೆಗ್ಡೆ ಪುತ್ತೂರು, ಜಗದಾಭಿರಾಮ ಸ್ವಾಮಿ ಪಡುಬಿದ್ರೆ, ನಾ. ಕಾರಂತ ಪೆರಾಜೆ, ನಗ್ರಿ ಮಹಾಬಲ ರೈ, ಮಹಾಬಲೇಶ್ವರ ಭಟ್ ಭಾಗಮಂಡಲ ಹಾಗೂ ಲೇಖಕ ಡಾ. ವಸಂತಕುಮಾರ ಪೆರ್ಲ…
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗಿದ ಸೌಹಾರ್ದ ಸಹಕಾರಿಗಳ ರಜತ ಮಹೋತ್ಸವ ಸಮಾವೇಶ ಸಂದರ್ಭದಲ್ಲಿ ಸಹಕಾರ ರತ್ನ ಪುರಸ್ಕೃತ ಆರ್ಬಿಐನ ಮಾಜಿ ನಿರ್ದೇಶಕರೂ ಆಗಿರುವ ಪುತ್ತೂರಿನ ಡಾ| ಅಗರಿ ನವೀನ್ ಭಂಡಾರಿಯವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಅನೇಕ ಗಣ್ಯರು ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮಾವೇಶದಲ್ಲಿ ಉಪಸ್ಥಿತರಿದ್ದರು. ಚಿತ್ರ, ವರದಿ : ಉಮಾಪ್ರಸಾದ್ ರೈ
ಮುಂಬೈ: ಮುಂಬೈ ವಿದ್ಯಾಲಯ, ಕನ್ನಡ ವಿಭಾಗವು ಶೈಕ್ಷಣಿಕ ಸೇವೆಯೊಂದಿಗೆ ಮುಂಬಯಿನ ಅನೇಕ ಸಂಘ ಸಂಸ್ಥೆಗಳೊಂದಿಗೆ ಕೈಜೋಡಿಸಿ ವಿಭಿನ್ನ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದೆ ಎನ್ನಲು ಸಂತೋಷವಾಗುತ್ತದೆ. ವಿಭಾಗವು ಎಲ್ಲರ ಜೊತೆ ಸೇರಿ ಕನ್ನಡವನ್ನು ಕಟ್ಟುವ ಕೆಲಸವನ್ನು ಮಾಡುತ್ತಿದೆ. ಮುಂಬೈಯಲ್ಲಿರುವ ಸಂಘ -ಸಂಸ್ಥೆಗಳು ತಮ್ಮನ್ನು ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ, ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ದೇಶದ ಯಾವುದೇ ಭಾಗದಲ್ಲಿ ಈ ಪ್ರಕ್ರಿಯೆ ಇಲ್ಲ. ಮುಂಬೈಯ ಸಂಘ –ಸಂಸ್ಥೆಗಳು ಮಾಡುತ್ತಿರುವ ಕಾರ್ಯಗಳು ಅಪೂರ್ವವಾದುದು. ಮುಂಬೈಯಲ್ಲಿ ಈಗ ಶತಕೋತ್ತರ ಸಂಭ್ರಮದಲ್ಲಿರುವ ಸಂಸ್ಥೆಗಳನ್ನು ಗೌರವಿಸಲು ಸಂತೋಷವಾಗುತ್ತದೆ. ಸುಮಾರು 147 ವರ್ಷಗಳಷ್ಟು ಹಳೆಯದಾದ ಶ್ರೀಮದ್ಭಾರತ ಮಂಡಳಿ, ಶತ ಸಂಭ್ರಮದಲ್ಲಿರುವ ಬಿ. ಎಸ್. ಕೆ .ಬಿ ಅಸೋಸಿಯೇಷನ್, ದೇವಾಡಿಗ ಸಂಘ, ಮೈಸೂರು ಅಸೋಸಿಯೇಷನ್, ಬಂಟರ ಸಂಘ ಈ ಸಂಸ್ಥೆಗಳನ್ನು ಗೌರವಿಸುವುದು ಸಂತೋಷವನ್ನು ನೀಡಿದೆ. ಮುಂಬಯಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಪ್ರಕ್ರಿಯೆಯನ್ನು ವಿಭಾಗ ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಇಂದು ಈ ಕಾರ್ಯಕ್ರಮವನ್ನು ಅಸೀಮ ಸಾಧಕ, ತಾರಾ…
ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಡುಪಿಯ ವಿ-ರೀಚ್ ಅಕಾಡೆಮಿಯ ಮುಖ್ಯಸ್ಥ ಸಿ.ಎಸ್ ಸಂತೋಷ್ ಪ್ರಭು ಇವರಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಜರುಗಿತು. ಪ್ರಸ್ತುತ ವಾಣಿಜ್ಯ ಕ್ಷೇತ್ರದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ತಿಳಿಸುತ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿಕೊಟ್ಟರು. ಇದೇ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಶೈಲೇಶ್ ಉಪಸ್ಥಿತರಿದ್ದರು.
ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ವತಿಯಿಂದ 5ನೇ ವರ್ಷದ ಶ್ರೀ ಶಾರದಾ ಪೂಜೆಯು ಕಾಲೇಜಿನ ಜಸ್ಟಿಸ್ ಕೆ. ಎಸ್. ಹೆಗ್ಡೆ ಕೇಂದ್ರ ಗ್ರಂಥಾಲಯದಲ್ಲಿ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯವನ್ನು ಮೈಸೂರು ದಸರಾ ಶೈಲಿಯ ಗೊಂಬೆಗಳಿಂದ ಅಲಂಕರಿಸಲಾಗಿತ್ತು. ಬಗೆ ಬಗೆಯ ದೀಪಗಳು, ಆಯುರ್ವೇದ ಗ್ರಂಥಗಳು, ಫಲಪುಷ್ಪ ಹಾಗೂ ರಂಗೋಲಿಗಳಿಂದ ಇಡೀ ವಾತವರಣವನ್ನು ಹಬ್ಬದ ಆಚರಣೆಗಾಗಿ ಸಜ್ಜುಗೊಳಿಸಲಾಗಿತ್ತು. ಮುದ್ದು ಮಕ್ಕಳ ಕಲರವ ಮತ್ತು ವಿದ್ಯಾರ್ಥಿಗಳ ಸಾಂಪ್ರದಾಯಿಕ ವೇಷಭೂಷಣವು ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿತು. ಪೂಜಾ ವಿಧಿಯಲ್ಲಿ ದೇವಿ ಸ್ತೋತ್ರ ಪಾರಾಯಣ, ಭಜನೆ, ಕುಂಕುಮಾರ್ಚನೆ, ಶಾರದಾ ಪೂಜೆ, ವಾಚನ-ಪ್ರವಚನ, ರಸಪ್ರಶ್ನೆ, ಸಂಖ್ಯಾ ಬಂಧ (ಸುಡೋಕು), ಅಷ್ಟಾವಧಾನ ಸೇವೆ ಹಾಗೂ ಪ್ರಸಾದ ವಿತರಣೆ, ವಂದೇ ಮಾತರಂ ನಡೆಯಿತು. ಆಳ್ವಾಸ್ ಪದವಿ ಕಾಲೇಜು, ಅಂತೆಯೇ ಆಳ್ವಾಸ್ ಪದವಿ ಕಾಲೇಜಿನ ಗ್ರಂಥಾಲಯದಲ್ಲಿ ನೂತನ ಶಾರದಾ ಬಿಂಬದ ಪ್ರತಿಷ್ಠಾಪನೆಯೊಂದಿಗೆ ಶಾರದಾ ಪೂಜೆ ನಡೆಯಿತು. ಅನಂತ ಪದ್ಮನಾಭ ಅಸ್ರಣ್ಣರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.…
ಬಂಟರ ಸಂಘ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿ : ಅ. 2 ರಂದು ಯುವ ವಿಭಾಗದ ವತಿಯಿಂದ ದಾಂಡಿಯಾ ರಾಸ್ ಮತ್ತು ಗರ್ಬಾ ನೈಟ್ ಕಾರ್ಯಕ್ರಮ
ಬಂಟರ ಸಂಘ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಗುತ್ತಿನಾರ್ ರವೀಂದ್ರ ಶೆಟ್ಟಿ ಕೊಟ್ರಪಾಡಿಯವರ ನೇತೃತ್ವದಲ್ಲಿ ಹಾಗೂ ಯುವ ವಿಭಾಗದ ಕಾರ್ಯಾಧ್ಯಕ್ಷ ವೃಷಭ್ ಶೆಟ್ಟಿಯವರ ಮುಂದಾಳತ್ವದಲ್ಲಿ ದಾಂಡಿಯಾ ರಾಸ್ ಹಾಗೂ ಗರ್ಬಾ ನೈಟ್ ಮತ್ತು ವಿವಿಧ ರೀತಿಯ ಕಾರ್ಯಕ್ರಮಗಳು ಇದೇ ಬರುವ ಅಕ್ಟೋಬರ್ 2 ರ ಗುರುವಾರದಂದು ಸಂಜೆ 7 ಗಂಟೆಯಿಂದ ಭಯಂದರ್ ಗೊಲ್ಡನ್ ನೆಸ್ಟ್ ಸರ್ಕಲ್ ಸಮೀಪದ ದಿ ಕ್ರೌನ್ ಬ್ಯುಸಿನೆಸ್ ಹೊಟೇಲ್ ಇಲ್ಲಿ ನಡೆಯಲಿದೆ. ಪ್ರಾದೇಶಿಕ ಸಮಿತಿಯ ಯುವ ವಿಭಾಗದ ವತಿಯಿಂದ ಅದ್ದೂರಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ 7 ವರ್ಷ ಕೆಳಗಿನ ವಯೋಮಿತಿಯ ಪುಟಾಣಿಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು. ದಾಂಡಿಯಾ ರಾಸ್ ಹಾಗೂ ಗರ್ಬಾ ನೈಟ್ ನಲ್ಲಿ ಭಾಗವಹಿಸುವ ಪುರುಷ ಹಾಗೂ ಮಹಿಳೆಯರಿಗೆ ರಮಣೀಯವಾಗಿ ಧರಿಸುವ ಬಟ್ಟೆಗಳ ಆಧಾರದ ಮೇಲೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಮತ್ತು ಪುರುಷ ಹಾಗೂ ಮಹಿಳಾ ವಿಭಾಗದ ನೃತ್ಯಗಾರರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಪ್ರಾಶಸ್ತ್ಯದ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಗುವುದು.…
ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಮಹಿಳಾ ವಿಭಾಗದ ವತಿಯಿಂದ ಸೆಪ್ಟೆಂಬರ್ 26 ರಂದು ಮಹಿಳಾ ಕಾರ್ಯಾಧ್ಯಕ್ಷೆ ಶಾಂತ ಎನ್ ಶೆಟ್ಟಿಯವರ ಮುತಾಲಿಕೆಯಲ್ಲಿ ಲಲಿತ ಸಹಸ್ರನಾಮ, ಭಜನೆ ಹಾಗೂ ದಸರಾ ಮಹೋತ್ಸವದ ಅಂಗವಾಗಿ ಕೀರ್ತನೆ ಮತ್ತು ದಾಂಡಿಯ ನೃತ್ಯ ಕಾರ್ಯಕ್ರಮ ನಡೆಯಿತು. ಬಾಂಬೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿಯವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಂಸ್ಥೆಯ ಮಹಿಳೆಯರ ಉತ್ಸಾಹದ ಲವಲವಿಕೆಯನ್ನು ಕಂಡು, ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿ ನಮ್ಮ ಕರ್ತವ್ಯವನ್ನು ನಾವು ಮಾಡುತ್ತಿರಬೇಕು. ಇದು ನಮ್ಮ ಮುಂದಿನ ಪೀಳಿಗೆಗೆ ಮಾದರಿ ಆಗಬೇಕು ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಹಿರಿಯ ಮಹಿಳಾ ಸದಸ್ಯೆ ವಸಂತಿ ಸಿ ಶೆಟ್ಟಿಯವರು ಆಗಮಿಸಿದ್ದರು. ಅಲ್ಲದೇ ಉಪಾಧ್ಯಕ್ಷರಾದ ಐಕಳ ಕಿಶೋರ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಅಡ್ವೊಕೇಟ್ ಶೇಖರ್ ಆರ್ ಶೆಟ್ಟಿ, ಸಮಿತಿ ಸದಸ್ಯರಾದ ರತ್ನಾಕರ ಶೆಟ್ಟಿ ಐಕಳ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆಯವರಾದ ಶೈಲಜಾ ಎ.ಶೆಟ್ಟಿ, ಶಾರದಾ ಎಸ್…
ಮೈಸೂರು ದಸರಾ ಪ್ರಯುಕ್ತ ನಡೆದ ರಾಜ್ಯ ಮಟ್ಟದ ದಸರಾ ಸಿಎಂ ಕಪ್ 2025 ರಲ್ಲಿ ಆಳ್ವಾಸ್ ತಂಡವು ಹಲವು ಪ್ರಶಸ್ತಿ ಮತ್ತು ಪದಕಗಳನ್ನು ಪಡೆದುಕೊಂಡಿದೆ. ತಂಡ ವಿಭಾಗದ ಕ್ರೀಡೆಗಳಾದ ಪುರುಷರ ಕಬಡ್ಡಿಯಲ್ಲಿ ಆಳ್ವಾಸ್ ತಂಡ ಬೆಂಗಳೂರು ಸಿಟಿಯ ವಿರುದ್ಧ 13 ಅಂಕಗಳ ಅಂತರದಿಂದ ಜಯಶಾಲಿಯಾದರೆ, ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ನಲ್ಲಿ ಆಳ್ವಾಸ್ ತಂಡ ಬೆಂಗಳೂರು ಗ್ರಾಮಾಂತರ ತಂಡದ ವಿರುದ್ಧ 30-08, 35-20 ನೇರ ಸೆಟ್ಗಳಿಂದ ಸೋಲಿಸಿ ಪ್ರಥಮ ಸ್ಥಾನವನ್ನು ಪಡೆಯಿತು. ಅಂತೆಯೇ ಮಹಿಳಾ ಕಬಡ್ಡಿ, ಪುರುಷರ ಖೋ-ಖೋ, ಬಾಲ್ ಬ್ಯಾಡ್ಮಿಂಟನ್ನಲ್ಲಿ ಆಳ್ವಾಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಅಥ್ಲೇಟಿಕ್ಸ್ ನಲ್ಲಿ ಆಳ್ವಾಸ್ನ ನಾಗ್ರೇಂದ್ರ ಡಿಸ್ಕಸ್ ಥ್ರೋನಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದರೆ, 800 ಮೀ ಓಟದಲ್ಲಿ ಆಳ್ವಾಸ್ನ ರೇಖಾ ಬಸಪ್ಪ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ. ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದ ಒಟ್ಟು ಕ್ರೀಡಾಕೂಟದಲ್ಲಿ 6 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕವನ್ನು, ವೇಯ್ಟ್ ಲಿಫ್ಟಿಂಗ್ನಲ್ಲಿ…















