Author: admin

ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ  ವಜ್ರಮಾತಾ ಮಹಿಳಾವಿಕಾಸ ಕೇಂದ್ರ ಪುಣೆ  ಇದರ ವತಿಯಿಂದ  ಹನುಮ ಜಯಂತಿ   ಆಚರಣೆಯು ಎಪ್ರಿಲ್ 6 ರಂದು ಪುಣೆಯ ಸ್ವಾರ್ ಗೇಟ್ ನ ಮಹಾರಾಷ್ಟ್ರ ಚೇಂಬರ್ ಆಫ್ ಕಾಮರ್ಸ್ ಲಕಾಕಿ ಹಾಲ್ ನಲ್ಲಿ ವಿವಿದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು . ದೀಪ ಕಾರ್ಯಕ್ರಮದ ಮೊದಲಿಗೆ ಪ್ರಾರ್ಥನೆ ಗೈದು ಪುಣೆ ಬಳಗದ ಗೌರವಾಧ್ಯಕ್ಷರಾದ ಸದಾನಂದ ಕೆ .ಶೆಟ್ಟಿ ,ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಮತ್ತು ವಿಬಾಗದ ಅಧ್ಯಕ್ಷೆ ಜಯಲಕ್ಷ್ಮಿ ಪಿ .ಶೆಟ್ಟಿ ಯವರು ಹನುಮ ದೇವರಿಗೆ ದೀಪ ಬೆಳಗಿಸಿ  ಪೂಜೆ ಸಲ್ಲಿಸಿದರು  ,ನಂತರ ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಸದೆಸ್ಯೆಯರು ಹಾಗು ಬಳಗದ ಸದಸ್ಯರಿಂದ ,ದಾಮೋದರ ಬಂಗೆರರವರ ಮಾರ್ಗದರ್ಶನದಲ್ಲಿ  ಬಳಗದ  ಭಜನಾ ಮಂಡಳಿಯ    ಭಜನೆ ನಡೆಯಿತು .ಸೇರಿದ ಭಕ್ತರೆಲ್ಲರೂ ಸಾಮೂಹಿಕವಾಗಿ ಹನುಮಾನ್ ಚಾಲಿಸವನ್ನು ಪಠಿಸಿದರು ,ನಂತರ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. ಶ್ರೀ ಸದಾನಂದ ಕೆ .ಶೆಟ್ಟಿ ,ಅಧ್ಯಕ್ಷ ಪ್ರಭಾಕರ್ ಶೆಟ್ಟಿ ,ವೀಣಾ ಪಿ .ಶೆಟ್ಟಿ…

Read More

ಗುರ್ಮೆ ಸುರೇಶ್ ಶೆಟ್ಟರ ಬಗ್ಗೆ ಎಷ್ಟು ಬರೆದರೂ, ಮಾತಾಡಿದರೂ ಕಡಿಮೆ. ಸರ್ವರನ್ನೂ ಪ್ರೀತಿಯಿಂದ, ಆಪ್ತತೆಯಿಂದ ಮಾತಾಡಿಸುವ ಸುರೇಶಣ್ಣ ಒಂದು ರೀತಿಯಲ್ಲಿ ಹಸುವಿನಂತವರು ಅಥವಾ ಹಸುಗೂಸಿನಂತವರು. ಕೊಟ್ಟ ಕೊಡುಗೆಯ ನೆನಪಿಡದ ದಾನಿ ಸುರೇಶಣ್ಣ. ವಿಧಾನಸೌಧದ ವಿಧಾನ ಮಂಡಲದಲ್ಲಿ ಸುರೇಶಣ್ಣನಂತಹ ಜ್ಞಾನಿಗಳು, ವಾಕ್ಪಟುಗಳು, ಸಜ್ಜನರು ಇದ್ದಾಗಲೇ ಅದಕ್ಕೊಂದು ಗೌರವ. ನಿನ್ನೆ ಯಾರೋ ಕಾಪುವಿನಲ್ಲಿ ಜಾತಿ ಲೆಕ್ಕಾಚಾರದ ಬಗ್ಗೆ ಮಾತಾಡುತ್ತಿದ್ದರು. ನಾನು ಹೇಳಿದೆ ಸುರೇಶಣ್ಣನ ಜಾತಿಯೇ ಬೇರೆ, ಅವರದ್ದು ಮಾನವೀಯತೆಯ ಮೌಲ್ಯವನ್ನು ಒಪ್ಪಿ ಅಪ್ಪಿಕೊಂಡ ಜಾತಿ. ಅದು ಪಕ್ಷಾತೀತ ನೆಲೆಯಲ್ಲಿಯೂ ಚಾಚಿಕೊಂಡಿದೆ. ಕಾಪು ಸುರೇಶಣ್ಣನ ಹುಟ್ಟೂರು. ಕಾಪುವಿನ ಜನರಿಗೆ ಅದೊಂದು ಅಸ್ಮೀತೆ. ವಿನಯ್ ಕುಮಾರ್ ಸೊರಕೆ ಎಷ್ಟೇ ಆದರೂ ಪುತ್ತೂರಿನವರು. ಪುತ್ತೂರಿನ ಸೊರಕೆಯವರಿಗಿಂತ ಹುಟ್ಟೂರಿನ ಸುರೇಶಣ್ಣನನ್ನೇ ಕಾಪು ಕ್ಷೇತ್ರದ ಜನ ನೆಚ್ಚಿಕೊಳ್ಳುತ್ತಾರೆ. ಅಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಸುರೇಶಣ್ಣನನ್ನ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಹೆಗಲಿಗೇರಿಸಿಕೊಂಡಿದ್ದಾರೆ. ಇಡೀ ಬಿಜೆಪಿ ಒಂದು ಕುಟುಂಬವಾಗಿ ಹಗಲಿರುಳು ಶ್ರಮಿಸುತ್ತಿದೆ. ಇನ್ನು ಜಾತಿ ಲೆಕ್ಕಕ್ಕೆ ಬರುವುದಾದರೆ ಅಲ್ಲಿ ಬಿಲ್ಲವ ಮತಗಳೇ ಮುಖ್ಯ. ಬಿಜೆಪಿ…

Read More

ಹೊಸದುರ್ಗ-ರಂಗ ಸುಹಾಸ ಟ್ರಸ್ಟ್ (ರಿ)ಸಾಣೇಹಳ್ಳಿ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ತರಬೇತಿ 1995-96 ನೆ ಸಾಲಿನ ವಿದ್ಯಾರ್ಥಿಗಳ ಗುರುವಂದನೆ ಹಾಗೂ ಅಭಿನಂದನಾ ಪುರಸ್ಕಾರ ಕಾರ್ಯಕ್ರಮ ಹಿರೇಮಗಳೂರಿನ ಎಲ್.ಜೆ.ಎಂ ಸಭಾಂಗಣದಲ್ಲಿ ಜರುಗಿತು. 1995-96 ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಶಿಕ್ಷಕರ ತರಬೇತಿ ಪಡೆದು ಪ್ರತಿಷ್ಠಿತ ಎಂ‌.ಆರ್.ಪಿ.ಎಲ್ ಶಾಲೆಯ ಕ್ರೀಡಾ ತರಬೇತುದಾರರಾಗಿ ಸುಮಾರು 20 ವರ್ಷಗಳ ಸೇವೆ ಸಲ್ಲಿಸಿ,1987 ರಲ್ಲಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಸ್ಥಾಪಿಸಿ ಹಲವಾರು ಕ್ರೀಡಾಕೂಟಗಳನ್ನು ಸಂಘಟಿಸಿ,ಅನೇಕ ಕ್ರೀಡಾಪಟುಗಳ ಬದುಕನ್ನು ರೂಪಿಸಿ,ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುತ್ತಿರುವ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಮತ್ತು ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಕುಂದಾಪುರ ಇವರಿಗೆ “ಸಾರ್ಥಕ ಹೆಜ್ಜೆ ಗುರುತು ಅಭಿನಂದನಾ ಪುರಸ್ಕಾರ” ನೀಡಿ ಗೌರವಿಸಲಾಯಿತು. ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದ ಗೌತಮ್ ಶೆಟ್ಟಿ “ಕ್ರೀಡೆ ಜೀವನದ ಅಮೂಲ್ಯ ಆಸ್ತಿ. ಕ್ರೀಡೆಯಿಂದ ಜೀವನ ಕೌಶಲ್ಯವನ್ನು ಕಲಿಯುತ್ತೇವೆ.ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಿ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳುತ್ತೇವೆ ಎಂದರು…

Read More

ಮುಂಬಯಿಯ ಉದ್ಯಮಿ ಹೇರಂಭ ಇಂಡಸ್ಟ್ರೀಸ್ ಇದರ ಆಡಳಿತ ನಿರ್ದೇಶಕರಾದ ಕೂಳೂರು ಕನ್ಯಾನ ರಘುರಾಮ ಶೆಟ್ಟಿಯವರು ಪುಣೆ ಬಂಟರ ಸಂಘದ ಕಲ್ಪವೃಕ್ಷ ಸಮಾಜ ಕಲ್ಯಾಣ ಯೋಜನೆಯ ನೂತನ ವಿಶ್ವಸ್ಥರಾಗಿ ನೇಮಕಗೊಂಡಿದ್ದಾರೆ. ಮುಂಬಯಿಯ ಖ್ಯಾತ ಉದ್ಯಮಿ, ಸಮಾಜ ಸೇವಕ ಪುಣೆ ಬಂಟರ ಸಂಘದ ಕಲ್ಪವೃಕ್ಪ ಸಮಾಜಕಲ್ಯಾಣ ಯೋಜನೆಯ ವಿಶ್ವಸ್ಥರಾದ ಕನ್ಯಾನ ಸದಾಶಿವ ಶೆಟ್ಟಿಯವರ ಸಹೋದರನಾದ ರಘುರಾಮ ಶೆಟ್ಟಿಯವರು ಇತ್ತೀಚಿಗೆ ಪುಣೆ ಬಂಟರ ಭವನಕ್ಕೆ ಭೇಟಿ ನೀಡಿದ್ದು ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ಅಪೇಕ್ಷೆಯ ಮೇರೆಗೆ ಸಂಘದ ಅಧ್ಯಕ್ಷರ ದೂರದೃಷ್ಟಿ ಹಾಗೂ ಸಮಾಜ ಪರ ಚಿಂತನೆಗಳು ಹಾಗೂ ಸಂಘದ ಮುಖಾಂತರ ನಡೆಯುತ್ತಿರುವ ಸಮಾಜಮುಖಿ ಯೋಜನೆಗಳನ್ನು ಮೆಚ್ಚಿ ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಸಂಘದ ಭವಿಷ್ಯದ ಯೋಜನೆಗಳಿಗೆ ಸಹಕಾರ ನೀಡುವುದಾಗಿ ಅವರು ಈ ಸಂದರ್ಭ ತಿಳಿಸಿದ್ದಾರೆ. ಅವರನ್ನು ಸಂತೋಷ್ ಶೆಟ್ಟಿಯವರು ನೆನಪಿನ ಕಾಣಿಕೆ ನೀಡಿ ಸಮ್ಮಾನಿಸಿದರು. ಈ ಸಂದರ್ಭ ಪುಣೆಯ ಹೋಟೆಲ್ ಉದ್ಯಮಿ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಹೆಜಮಾಡಿ…

Read More

ಅಭಿನಯ ಕಲೆಯಾದ ನಾಟಕವು ಸಾಮಾಜಿಕ ಶೋಷಣೆ, ದೌರ್ಜನ್ಯ, ಮೂಢ ನಂಬಿಕೆಗಳ ವಿರುದ್ಧ ಮೌನ ಕ್ರಾಂತಿ ಮಾಡುತ್ತಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಹೇಳಿದರು. ರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಂಡಿರುವ ರಂಗಭೂಮಿ ರಂಗೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಬುಧವಾರ ವಾರ್ಷಿಕ ಸ್ಮರಣ ಸಂಚಿಕೆ “ಕಲಾಂಜಲಿ’ ಬಿಡುಗಡೆ ಮಾಡಿ ಅವರು ಮಾತನಾಡಿದರು. ಅಭಿನಯ ಕಲೆ ಜೀವನದಲ್ಲಿ ಅತ್ಯಗತ್ಯ. ಇದು ಕರಗತವಾದಲ್ಲಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಮಾನವನ ಬಾಲ್ಯ, ಪ್ರೌಢಾವಸ್ಥೆ, ದಾಂಪತ್ಯ, ವೃತ್ತಿ ಜೀವನ, ವೃದ್ಧಾಪ್ಯ ಹೀಗೆ ಎಲ್ಲ ಕಾಲಘಟ್ಟದಲ್ಲೂ ಅಭಿನಯ ಕಲೆಯ ಪ್ರಭಾವ ಹೆಚ್ಚಿದೆ. ನಾಟಕ ಸಾಮಾಜಿಕ ಜಾಗೃತಿ ಉಂಟು ಮಾಡುತ್ತಿದೆ. ಇದನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಸಭಾಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌. ಎಸ್‌.ಬಲ್ಲಾಳ್‌, ಸಿನೆಮಾ ಕಲಾವಿದರಿ ಗಿಂತ ರಂಗಭೂಮಿ ಕಲಾವಿದರದಲ್ಲಿ ಹೆಚ್ಚಿನ ಪ್ರತಿಭೆ ಇರುತ್ತದೆ. ಯುವ ಜನತೆಯಲ್ಲಿ ರಂಗಭೂಮಿಯ ಬಗ್ಗೆ…

Read More

” ಮನುಷ್ಯನ ಮೆದುಳಿನ ಬ್ರೈನ್ ಸ್ಟೋಕ್ ಮತ್ತು    ತಡೆಗಟ್ಟುವಂತಹ ವಿಧಾನ ಹಾಗೂ ಸಂರಕ್ಷಣೆಯ ಪಾತ್ರ…!” ” ಮನುಷ್ಯನ ಕೇಂದ್ರಬಿಂದು ಮೆದುಳು ಪರಿಚಲನೆ ಮತ್ತು ಬ್ರೈನ್ ಸ್ಟ್ರೋಕ್ ಸಾಧಕ ಬಾಧಕಗಳ  ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮ…!” -ಕೆ. ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ ,ಉಡುಪಿ ಜಿಲ್ಲೆ (ಪತ್ರಕರ್ತರು ಮಾಧ್ಯಮ ವಿಶ್ಲೇಷಕರು)’ m:9632581508 ಮನುಷ್ಯನ ಪ್ರತಿಯೊಂದು ಅಂಗಗಳು ತಮ್ಮದೇ ಆದಂತಹ ಕಾರ್ಯಗಳು ನಿರ್ವಹಿಸುತ್ತದೆ. ಅದೇ ರೀತಿಯಾಗಿ ನಮ್ಮ ಮೆದುಳಿನ ಕ್ರಿಯೆಗಳು ದೇಹದಲ್ಲಿನ ವಾತಾವರಣವನ್ನ ಸೃಷ್ಟಿಸುವುದರಿಂದ ದೇಹದಲ್ಲಿನ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿದ್ದು, ಅವು ತನ್ನ ದಿನದ ಕಾರ್ಯವನ್ನು 24 ಗಂಟೆಯೂ ನಿರ್ವಹಿಸುತ್ತದೆ. ಅದಲ್ಲದೆ ನಮ್ಮ ಮೆದುಳಿನ ಭಾಗ ದೇಹದ ಕೇಂದ್ರ ಬಿಂದು ಆದ್ದರಿಂದ ಮೆದುಳಿನ ಸಂರಕ್ಷಣೆ ನಾವು ಯಾವ ರೀತಿ ಕೈಗೊಳ್ಳಬೇಕು ಮತ್ತು ಮೆದುಳಿನ ಸಂರಕ್ಷಣೆಯಿಂದ ಮನುಷ್ಯನ ಯಾವ್ಯಾವ ಭಾಗಗಳಿಗೆ ಒಳಿತನ್ನ ನೀಡುತ್ತದೆ ಅದಲ್ಲದೆ ನಿಷ್ಕಲ್ಮಶಕ್ತಿಯನ್ನು ಹೊಂದಿರುವಂತಹ ಮೆದುಳು, ಯಾವ ರೀತಿ ದೇಹ ರಚನೆಯನ್ನ ನಿರ್ಮಾಣ ಮಾಡುತ್ತದೆ. ಎನ್ನುವುದು ತಿಳಿಯುವುದು ಅತ್ಯಗತ್ಯ ಅದರಲ್ಲಿ ಮನುಷ್ಯನ ವಿವಿಧ…

Read More

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಯಕ್ಷಸಿರಿ ಬಂಟರ ಸಂಘ ಸುರತ್ಕಲ್ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನಾ ಸಮಾರಂಭವು ಎಪ್ರಿಲ್ 14 ರಂದು ಗುರುವಾರ ಸಂಜೆ 4 ಗಂಟೆಗೆ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪಂಚ ಯಕ್ಷಗಾನ ಮೇಳಗಳ ಸಂಚಾಲಕರಾದ ಪಳ್ಳಿ ಕಿಶನ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್. ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ಕದ್ರಿ ನವನೀತ ಶೆಟ್ಟಿ, ಮಾಧವ ಭಂಡಾರಿ ಕುಳಾಯಿ, ಸುರತ್ಕಲ್ ಅಗರಿ ಸಂಸ್ಥರಣಾ ವೇದಿಕೆಯ ಅಧ್ಯಕ್ಷ ಅಗರಿ ರಾಘವೆಂದ್ರ ರಾವ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸುರತ್ಕಲ್ ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕೇಂದ್ರಿಯ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ, ಯಕ್ಷಗುರು ರಾಕೇಶ್ ರೈ ಅಡ್ಕ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಂಚಾಲಕರು ತಿಳಿಸಿದ್ದಾರೆ.

Read More

ನಮ್ಮ ತುಳುನಾಡಿನ ಮಣ್ಣಿನಲ್ಲಿ ಹುಟ್ಟಿ ಮಹಾನಗರ ಮುಂಬಯಿಯಲ್ಲಿ ಹತ್ತಾರು ಕ್ಷೇತ್ರಗಳಲ್ಲಿ ಹೆಸರು ಮಾಡಿದ ವ್ಯಕ್ತಿ ವಿಶೇಷರ ಸಾಲಿನಲ್ಲಿ ಗುರುತಿಸಲ್ಪಡುವ ಹೆಸರು ನವೀನ್ ಶೆಟ್ಟಿ ಇನ್ನ ಬಾಳಿಕೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇನ್ನ ಬಾಳಿಕೆ ಎಂಬ ಪ್ರತಿಷ್ಠಿತ ಬಂಟ ಕುಟುಂಬದ ವಿಠಲ ಶೆಟ್ಟಿ ಮತ್ತು ಅಡ್ವೆ ಕೆಳಗಿನ ಮನೆ ಶ್ರೀಮತಿ ಸುಲೋಚನಾ ವಿ.ಶೆಟ್ಟಿ ದಂಪತಿಯರ ಮೂವರು ಮಕ್ಕಳಲ್ಲಿ ದ್ವಿತೀಯರಾಗಿ ಜನಿಸಿದ ನವೀನ್ ಅವರು ಅಡ್ವೆ ಪ್ರಾಥಮಿಕ ಶಾಲೆಯಲ್ಲಿ ಆರಂಭಿಕ ಶಿಕ್ಷಣವನ್ನು ಮುಗಿಸಿ ನಂತರ ಇನ್ನದ ಎಂ.ವಿ.ಶಾಸ್ತ್ರಿ ಹೈಸ್ಕೂಲ್ ನಲ್ಲಿ ಮಾಧ್ಯಮಿಕ ಶಿಕ್ಷಣ ಪೂರೈಸಿ ಮುಂದಿನ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ಪೂರೈಸುವ ಉದ್ದೇಶದಿಂದ 1987 ರಲ್ಲಿ ತನ್ನ ಸೋದರತ್ತೆಯ ಜೊತೆ ಮುಂಬಯಿಗೆ ಆಗಮಿಸಿ, ತನ್ನ ಸಂಬಂಧಿಯೋರ್ವರ ಹೋಟೆಲಿನಲ್ಲಿ ದುಡಿಯುತ್ತಾ ಹೋಟೆಲ್ ಉದ್ಯಮ ಕುರಿತ ಮಹತ್ತರ ಅನುಭವ ಸಂಪಾದಿಸಿದರು. ಶಿವ್ಡಿಯ ಲಕ್ಷ್ಮಿ ಹೋಟೆಲ್ ಮಾಲಕರು ಇವರ ಸಂಬಂಧಿಕರಾದ ಕಾರಣ ಕೆಲಕಾಲ ನಿಷ್ಠೆ, ಪ್ರಾಮಾಣಿಕತೆಯಿಂದ ದುಡಿದು ಪ್ರೀತಿ ವಿಶ್ವಾಸ ಗಳಿಸಿಕೊಂಡರು. ಇದು ಅವರಿಗೆ ತನ್ನ ಮುಂದಿನ…

Read More

ನಮ್ಮ ಭಾರತವು ಹಬ್ಬಗಳಲ್ಲಿ ಅರಳುವ ದೇಶ. ಅದರಲ್ಲೂ ದೀಪಾವಳಿ ಎಂದರೆ ಎಲ್ಲೆಡೆ ಸಾಲು ಸಾಲು ದೀಪಗಳ ರಂಗು ರಂಗಿನ ಹಣತೆಗಳು ಉರಿದು ಬಣ್ಣದ ಬೆಳಕು ಹರಿಸಿ ಚೆಲುವ ಸೂಸುವ ಸೊಬಗು. ಜಗಮಗ ಪಟಾಕಿಗಳು ನಕ್ಷತ್ರಲೋಕ ಸೃಷ್ಟಿಸಿ ಬದುಕಿನಲ್ಲಿ ಬಣ್ಣದ ಬೆಳಕು ಹರಿಸುತ್ತದೆ. ಹೊಂಬಣ್ಣದ ‌ಬೆಳಕು ಅಜ್ಞಾನದ ಅಂಧಕಾರವ ತೊಳೆದು ಸುಜ್ಞಾನದ ದೀವಿಗೆಯನ್ನು ಬೆಳಗುವ ಬೆಳಕಿನ ಹಬ್ಬ ದೀಪಾವಳಿ ಹಲವು ವೈವಿಧ್ಯತೆಗಳಿಂದ‌ ಗಮನ ಸೆಳೆಯುತ್ತಾ ಬಂದಿದೆ. ಮನೆ ಮನಗಳ ಬೆಳಗಿಸುವ ಸಂಭ್ರಮದ ಹಬ್ಬವಿದು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಸ್ವರೂಪದ ಬೆಳಕಿನ ‌ಹಬ್ಬ ನಮ್ಮ ದೇಶ ಮಾತ್ರವಲ್ಲದೇ ವಿಶ್ವದ ಹಲವು ರಾಷ್ಟ್ರಗಳಲ್ಲಿ ದೀಪಾವಳಿ ಆಚರಿಸಲಾಗುತ್ತದೆ. ಬೆಳಕಿನ ಹಬ್ಬ ದೀಪಾವಳಿ ಖುಷಿ ತರುವ ಹಬ್ಬ. ತಳಿರು ತೋರಣಗಳ ಮೆರಗು, ಸಿಹಿ ತಿಂಡಿ, ಪಟಾಕಿ ಹಾರಿಸುವ ಸಂಭ್ರಮ, ಬಣ್ಣಬಣ್ಣಗಳಿಂದ ಅಲಂಕೃತಗೊಂಡ ರಂಗೋಲಿಗೂ ದೀಪಾವಳಿಗೂ ಅವಿನಾಭಾವ ನಂಟು. ವಿವಿಧ ಬಗೆಯ ಬಣ್ಣಗಳನ್ನು ತುಂಬಿ ಅಲ್ಲಲ್ಲಿ ಹಣತೆಗಳನ್ನು ಹಚ್ಚಿ ಇಡುವ ರಂಗೋಲಿಗಳ ಚಿತ್ತಾರ, ಹಣತೆ ದೀಪದ ಜಗಮಗ ಹೊಂಬೆಳಕಿನಲ್ಲಿ ಅಮಾವಾಸ್ಯೆಯ‌‌‌…

Read More

ಪಡುಬಿದ್ರಿ ಬಂಟರ ಸಂಘದ ವತಿಯಿಂದ ಸಮಾಜದ ಆರ್ಥಿಕ ದುರ್ಬಲರಿಗೆ, ಆಶಕ್ತರಿಗೆ, ಅನಾರೋಗ್ಯ, ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘದ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸುಮಾರು 20 ಲಕ್ಷ ರೂ ಸಹಾಯಧನವನ್ನು ಅಕ್ಟೋಬರ್ 1ರ ಆದಿತ್ಯವಾರ ಬೆಳಗ್ಗೆ 10 ಗಂಟೆಗೆ ವಿತರಿಸಲಾಗುವುದೆಂದು ಬಂಟರ ಸಂಘದ ಅಧ್ಯಕ್ಷರಾದ ಡಾ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಬಂಟರ ಸಂಘದ ವ್ಯಾಪ್ತಿಯಲ್ಲಿ ಪ್ರಪ್ರಥಮ ಬಾರಿಗೆ ಸಮಾಜದ ವೃದ್ದರಿಗೆ ನಮ್ಮ ಸಂಘವು ಆಶ್ರಯವಾಗಬೇಕೆಂಬ ದೃಷ್ಟಿಯಿಂದ ಸುಮಾರು 6ಎಕರೆ ಜಾಗದಲ್ಲಿ ಬಂಟಾಶ್ರಯ, ಕುಟುಂಬ ಸೇವಾಶ್ರಮ ಎಂಬ ವೃದ್ದಾಶ್ರಮ ನಿರ್ಮಿಸಿರುವ ಯೋಜನೆ ಹಾಕಿಕೊಳ್ಳಲಾಗಿದೆ. ಪಡುಬಿದ್ರಿ ಬಂಟರ ಸಂಘದ ಸಹಭಾಗಿತ್ವದಲ್ಲಿ ಆರ್ಥಿಕ ಸಬಲೀಕರಣ ಮತ್ತು ಎಲ್ಲಾ ಸಮಾಜದವರಿಗೂ ಅನುಕೂಲವಾಗುವಂತೆ ಸಿರಿಮುಡಿ ಕ್ರೆಡಿಟ್ ಕೋ -ಆಪರೇಟಿವ್ ಬ್ಯಾಂಕ್ ಸ್ಥಾಪನೆಗೆ ಚಾಲನೆ ನೀಡಲಾಗುತ್ತದೆ. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಸಮಾಜದ ವತಿಯಿಂದ ಅಭಿನಂದನೆ ನಡೆಯಲಿದ್ದು, ಹುಬ್ಬಳ್ಳಿಯ ಉದ್ಯಮಿ ರಾಜೇಂದ್ರ ಶೆಟ್ಟಿ ವಿವಿಧ ಗಣ್ಯರನ್ನು ಗೌರವಿಸಲಿದ್ದಾರೆ. ಮುಂಬೈ ಬಂಟರ…

Read More