Author: admin
ಬಂಟರ ಸಂಘ ಪಿಂಪ್ರಿ -ಚಿಂಚ್ವಾಡ್ ವತಿಯಿಂದ ವಾರ್ಷಿಕ ಕ್ರೀಡಾಕೂಟ ಹಾಗೂ ರಾಷ್ಟ್ರಮಟ್ಟದ ಕಬಡ್ಡಿ ಮತ್ತು ತ್ರೋ ಬಾಲ್ ಪಂದ್ಯಾಟ
ಬಂಟರ ಸಂಘ ಪಿಂಪ್ರಿ- ಚಿಂಚ್ವಾಡ್ ವತಿಯಿಂದ ಸಮಾಜಬಾಂಧವರಿಗಾಗಿ ಆಯೋಜಿಸಿದ ವಾರ್ಷಿಕ ಕ್ರೀಡಾಕೂಟ ಹಾಗೂ ರಾಷ್ಟ್ರಮಟ್ಟದ ಕಬಡ್ಡಿ ಮತ್ತು ತ್ರೋಬಾಲ್ ಪಂದ್ಯಾಟವು ಫೆ .5 ರಂದು ಮೋರ್ಯಾ ಗೋಸಾವಿ ಕ್ರೀಡಾ ಸಂಕುಲ್ ,ಕೇಶವ್ ನಗರ್ ,ಚಿಂಚ್ವಾಡ್ ಇಲ್ಲಿ ಬೆಳಗ್ಗೆ ಗಂಟೆ 8 :30 ರಿಂದ ನಡೆಯಲಿದೆ . ಸಂಘದ ಅಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ ಇವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆಯ ಖ್ಯಾತ ಮಕ್ಕಳ ತಜ್ಞ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಸುಧಾಕರ ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ತುಳು ಸಂಘ ಪಿಂಪ್ರಿ -ಚಿಂಚ್ವಾಡ್ ಇದರ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕುರ್ಕಾಲ್ ಆಗಮಿಸಲಿದ್ದಾರೆ. ಸಂಜೆ ನಡೆವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕರ್ನಾಟಕ ರಾಜ್ಯ ಇದರ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ ,ಗೌರವ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ ,ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ…
ಸಾಧಿಸಬೇಕೆಂಬ ಛಲವಿದ್ದವನು ಸಾಧನೆಯ ಹಾದಿಯಲ್ಲಿ ಕೇಳಿ ಬರುವ ಕೊಂಕು ಮಾತುಗಳ ಕಡೆಗೆ ಲಕ್ಷ್ಯ ವಹಿಸದೆ ತಮ್ಮ ಗುರಿಯತ್ತ ಕಠಿಣ ಶ್ರಮ ವಹಿಸಬೇಕು. ಇದಕ್ಕೆ ಉದಾಹರಣೆಯಂತೆ ಸಾಧನೆಯ ಹಾದಿಯಲ್ಲಿ ಬೆಳಗುತ್ತಿರುವ ರಾಷ್ಟ್ರ ಮಟ್ಟದ ಪ್ರತಿಭೆ ಹರ್ಷಿಣಿ ಶೆಟ್ಟಿ ಬೆಳ್ತಂಗಡಿಯವರು 13-12-2000 ರಲ್ಲಿ ರವಿ ಶೆಟ್ಟಿ ಹಾಗೂ ಶಶಿಕಲಾ ಶೆಟ್ಟಿ ದಂಪತಿಗಳ ಪುತ್ರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಕ್ತಿನಗರದಲ್ಲಿ ಜನಿಸಿದರು. ಹರ್ಷಿಣಿ ಶೆಟ್ಟಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಪ್ರಾಥಮಿಕ ಶಾಲೆ ಮಾಲಾಡಿಯಲ್ಲಿ ಪೂರ್ಣಗೊಳಿಸಿ ಎಂಟನೇ ತರಗತಿಯನ್ನು ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ, ಒಂಭತ್ತನೇ ತರಗತಿ ಶಿಕ್ಷಣವನ್ನು ಎಸ್ ಡಿ ಎಂ ಪ್ರೌಢಶಾಲೆ ಉಜಿರೆ ಹಾಗೂ ಹತ್ತನೇ ತರಗತಿಯನ್ನು ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಪೂರ್ಣಗೊಳಿಸಿದರು. ನಂತರ ಪಿ.ಯು.ಸಿ ಶಿಕ್ಷಣವನ್ನು ಮಂಗಳೂರಿನ ವಿಕಾಸ್ ಕಾಲೇಜಿನಲ್ಲಿ ಪಡೆದು ಆಳ್ವಾಸ್ ಕಾಲೇಜು ಮೂಡುಬಿದಿರೆಯಲ್ಲಿ ಬಿ.ಕಾಂ ಶಿಕ್ಷಣವನ್ನು ಪಡೆದರು. ಶಾಲಾ ದಿನಗಳಿಂದಲೂ ಕ್ರೀಡೆಯತ್ತ ಒಲವು ತುಂಬಿ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸುತ್ತಿದ್ದರು. ನಂತರದ ದಿನಗಳಲ್ಲಿ ಕಬಡ್ಡಿ ಆಟದತ್ತ ಹೆಚ್ಚಿನ ಆಸಕ್ತಿ…
ಮೂಲತ: ಮೂಡಂಬೈಲು ರವಿ ಶೆಟ್ಟಿ ದೋಣಿಂಜೆಗುತ್ತು ಅವರು ಕತಾರ್ ನಲ್ಲಿ ಎಟಿಎಸ್ ಸಂಸ್ಥೆಯ ಆಡಳಿತ ನಿರ್ದೇಶಕರು.ಇಂಜಿನಿಯರ್ ಪಧವೀಧರರಾದ ಅವರು ಉದ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಬೀರಿದವರು. ಕರ್ನಾಟಕ ಮೂಲದ ಸುಮಾರು 2000 ಜನರಿಗೆ ಇದುವರೆಗೆ ಅವರು ಉದ್ಯೋಗವನ್ನು ನೀಡಿದ್ದಾರೆ. ತಮ್ಮ ಜೀವನದಲ್ಲಿ ಸಮಾಜಸೇವೆಗೆ ಹೆಚ್ಚು ಮಹತ್ವ ನೀಡಿದ ಅವರು ಅಶಕ್ತರ,ನೊಂದವರ ಬಾಳಿಗೆ ಬೆಳಕಾದವರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ, ಆರೋಗ್ಯ ಸಮಸ್ಯೆಯಲ್ಲಿ ಇರುವ ಅದೆಷ್ಟೋ ನೊಂದವರಿಗೆ ಸಹಾಯ, ವಿ ದೇವಾಲಯಗಳ ಜೀರ್ಣೋದ್ಧಾರ ಹೀಗೆ ನಾನಾ ತರದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಅವರಿಗೆ ಆರ್ಯಭಟ ಪ್ರಶಸ್ತಿ, ಮದರ್ ಥೆರೇಸಾ ಸೋಶಿಯಲ್ ಹಾರ್ಮೋನಿ ಪ್ರಶಸ್ತಿ, ಅಭಿಯಂತರ ಪ್ರಶಸ್ತಿ, ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಆಂಡ್ ಬಿಜಿನೆಸ್ ಎಕ್ಸೆಲೆನ್ಸ್ ಅವಾರ್ಡ್, ನೆಲ್ಸನ್ ಮಂಡೇಲಾ ಅವಾರ್ಡ್ ಫಾರ್ ಹ್ಯೂಮಾನಿಟಿ ಮೊದಲಾದ ಅನೇಕ ರಾಜ್ಯ,ರಾಷ್ಟ್ರ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ದೊರೆತಿವೆ. ಮುಂಬಯಿ ವಿಶ್ವವಿದ್ಯಾಲಯ,ಕನ್ನಡ ವಿಭಾಗ ಇತ್ತೀಚೆಗೆ ರವಿತೇಜ ಎಂಬ ಪುಸ್ತಕವನ್ನು ಕನ್ನಡ ಮತ್ತು ಇಂಗ್ಲಿಷನಲ್ಲಿ ರಚಿಸಿ ಅರ್ಪಿಸಿತ್ತು.
‘ಒಂದು ಮೊಟ್ಟೆಯ ಕಥೆ’ ಚಿತ್ರ ತಂಡದ ನೇತೃತ್ವದಲ್ಲಿ ವೈಭವ್ ಪ್ರಿಕ್ಸ್ ಅಡಿಯಲ್ಲಿ, ಮ್ಯಾಂಗೋ ಪಿಕಲ್ ಬ್ಯಾನರ್ ಸಹಭಾಗಿತ್ವದಲ್ಲಿ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ತುಳು ಚಿತ್ರ ನಿರ್ಮಾಣಗೊಂಡಿದ್ದು, ಮೇ 20 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಈ ಚಿತ್ರವು ಸಂಪೂರ್ಣ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಆಗಿದ್ದು, ಚಿತ್ರದ ಟೀಸರ್ ಕೆಲವೇ ದಿನಗಳಲ್ಲಿ ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ತುಳು ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿ ಸಂಚಲನ ಮೂಡಿಸಿದೆ. ಇತ್ತೀಚೆಗೆ ಚಿತ್ರ ತಂಡವು ಕಟೀಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಚಿತ್ರದ ತುಳು ಗೀತೆ ಟೈಟಲ್ ಟ್ರ್ಯಾಕ್ ಬಿಡುಗಡೆಗೊಳಿಸಿತ್ತು. ಅದ್ದೂರಿಯಾಗಿ ಮೂಡಿಬಂದ ಚಿತ್ರದ ಗೀತೆಯು ಕರಾವಳಿಯಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ತುಳು ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದೆ. ಚಿತ್ರದಲ್ಲಿ ಮದುವೆ ಮತ್ತು ಮದರಂಗಿ ಕಾರ್ಯಕ್ರಮದ ಕಥಾ ಹಂದರವನ್ನು ಹೊಂದಿದ್ದು, ನೈಜತೆಗೆ ಒತ್ತುಕೊಟ್ಟು ಸುಂದರವಾಗಿ ಸೆರೆಹಿಡಿಯಲಾಗಿದೆ. ಕೌಟುಂಬಿಕ ಮನೋರಂಜನೆಯ ಜತೆಗೆ ಹಾಸ್ಯಕ್ಕೂ ಪ್ರಾಮುಖ್ಯತೆ ನೀಡಲಾಗಿದೆ. ಈ ಚಿತ್ರವನ್ನು ಯುವನಟ ರಾಹುಲ್ ಅಮೀನ್ ನಿರ್ದೇಶಿಸಿದ್ದು, ಆನಂದ್ ಎನ್ ಕುಂಪಲ ನಿರ್ಮಾಪಕರಾಗಿದ್ದಾರೆ. ಈ…
ಒಬ್ಬನೇ ವ್ಯಕ್ತಿಯಲ್ಲಿ ಅನೇಕ ಪ್ರತಿಭಾ ಸಾಮರ್ಥ್ಯಗಳು ಮೇಳವಿಸಿದರೆ ಆತ ಸಮಾಜದಲ್ಲಿ ಭಿನ್ನ ಪಂಕ್ತಿಯಲ್ಲಿ ಗೌರವಿಸಲ್ಪಡುತ್ತಾನೆ. ಅಂಥವರಲ್ಲಿ ವಿರಳಾತಿ ವಿರಳ ವ್ಯಕ್ತಿ ವಿಶೇಷ ನಮ್ಮ ಅಶೋಕ ಪಕ್ಕಳರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಸನ್ನಿಧಿ ಗುತ್ತು ಮನೆತನದ ಸಂಜಾತ ಎಂ ಎ ಪಕ್ಕಳ ಮತ್ತು ಶ್ರೀಮತಿ ನಾಗಮ್ಮ ಪಕ್ಕಳ ದಂಪತಿಯರಿಗೆ ಮೂರನೆಯ ಹಾಗೂ ಕಿರಿಯ ಮುದ್ದಿನ ಮುದ್ದು ಮುದ್ದಾದ ಮಗನಾಗಿ ಜನಿಸಿದವರು ಅಶೋಕ್. ಪ್ರಾಥಮಿಕ ಹಂತದ ವಿದ್ಯಾಭ್ಯಾಸವನ್ನು ಹುಟ್ಟೂರಿನಲ್ಲಿ ಮುಗಿಸಿದ ಬಳಿಕ ಜೈನಕಾಶಿ ಎಂಬ ಪ್ರಸಿದ್ಧಿ ಪಡೆದ ಮೂಡಬಿದಿರೆಯ ಧವಳ ಕಾಲೇಜಿನ ಮುಖಾಂತರ ಪದವಿಪೂರ್ವ ಹಾಗೂ ಪದವಿ ಶಿಕ್ಷಣ ಪೂರೈಸಿಕೊಂಡರು. ತನ್ನ ಶಾಲಾ ಕಾಲೇಜು ದಿನಗಳಲ್ಲಿ ದೈನಂದಿನ ಪಾಠ ವಿಷಯಗಳ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಸದಾ ಮುಂದಿದ್ದು ಶಿಕ್ಷಕರ ಪ್ರಾಧ್ಯಾಪಕರ ಅಚ್ಚು ಮೆಚ್ಚಿನ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದರು. ಮುಂದೆ ಈ ಕನಸು ಕಂಗಳ ಯುವಕ ಹಿರಿಯಣ್ಣನ ಕರೆಯನ್ನು ಗೌರವಿಸಿ ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬಯಿಗೆ ಆಗಮಿಸಿ ಅಣ್ಣನ ಜೊತೆಗೆ…
ನಮ್ಮ ದೇಶದ ಭವಿಷ್ಯವಾಗಿರುವ ಯುವ ಸಮುದಾಯವು ಉನ್ನತ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದರೂ ಜೀವನದಲ್ಲಿ ಸೋಲುವುದು ಯಾಕೆ ಎಂಬುದು ಚಿಂತಿಸಬೇಕಾದ ಗಂಭೀರ ವಿಷಯ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧಕ್ಕಿಂತಲೂ ಹೆಚ್ಚು ಮಂದಿ 25 ವರ್ಷದೊಳಗಿನವರು ಮತ್ತು ಶೇ. 65ರಷ್ಟು ಮಂದಿ 35 ವರ್ಷದೊಳಗಿನವರು. ಮುಂದೆ ಭಾರತವು ವಿಶ್ವದ ಉತ್ಪಾದನೆಯ ಕಾರ್ಖಾನೆಯಾಗಲು ಈ ಯುವಶಕ್ತಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಇನ್ನೂ ಹೆತ್ತವರ ಪ್ರಭಾವ, ಅಭಿಲಾಷೆ ಕಡಿಮೆಯಾಗಿಲ್ಲ. ಹೆತ್ತವರು ನಿರ್ಧರಿಸಿದ ಶಿಕ್ಷಣವನ್ನು ಪಡೆಯುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೆಚ್ಚಿರುವುದು ವಾಸ್ತವ. ಜತೆಗೆ ನಮ್ಮ ಶಿಕ್ಷಣ ವ್ಯವಸ್ಥೆಯೂ ವಿದ್ಯಾರ್ಥಿಗಳ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ ಎಂಬ ಆರೋಪವೂ ಇದೆ. ನೀಟ್ ಸಹಿತ ಕೆಲವು ಪರೀಕ್ಷೆಗಳಿಗೆ ಆಕ್ಷೇಪ, ವಿರೋಧವೂ ಅಲ್ಲಲ್ಲಿ ಕೇಳಿ ಬರುತ್ತಿದೆ. ನಮ್ಮ ಶಿಕ್ಷಣ ವ್ಯವಸ್ಥೆಯು ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವ ಯಂತ್ರವನ್ನಾಗಿ ಮಾರ್ಪಡಿಸುತ್ತಿದೆ. ಇದು ಅವರ ಚಿಂತನೆಯ ಶಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂಬ ಆರೋಪವೂ ಚಾಲ್ತಿಯಲ್ಲಿದೆ. ದುರ್ಬಲವಾಗುತ್ತಿರುವ ಮಾನಸಿಕ ಸ್ಥೈರ್ಯ : ಶಿಕ್ಷಣದಲ್ಲಿ ಸವಾಲು ಎದುರಾಗುವುದು,…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರಿಶ್ ಶೆಟ್ಟಿಯವರ ಮಹತ್ವಕಾಂಕ್ಷೆಯ ಕಾರ್ಯಕ್ರಮವಾದ ವಿಶ್ವ ಬಂಟರ ಸಮ್ಮೇಳನ 2023 ಕಾರ್ಯಕ್ರಮವು ಅಕ್ಟೋಬರ್ ದಿನಾಂಕ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಕೋರಿಕೆಗೆ ಸ್ಪಂದಿಸಿ ಕರ್ನಾಟಕದ ಮುಖ್ಯ ಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು 28.10.2023ರಂದು ಉಡುಪಿಗೆ ಆಗಮಿಸಿ ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದಿನಾಂಕ 18.10.2023 ರಂದು ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಆತ್ಮೀಯ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಹಾಗೂ ಒಕ್ಕೂಟದ ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಉಪಸ್ಥಿತರಿದ್ದರು.
“ಬಂಟರಲ್ಲಿ ನಾಯಕತ್ವದ ಗುಣಗಳಿವೆ. ವೈದ್ಯಕೀಯ ಕ್ಷೇತ್ರ, ಕ್ರೀಡಾ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ, ಹೋಟೆಲ್ ಉದ್ಯಮ ಹೀಗೇ ಎಲ್ಲಾ ಕ್ಷೇತ್ರಗಳಲ್ಲೂ ರಾಜ್ಯ ರಾಷ್ಟ್ರಮಟ್ಟದಲ್ಲಿ ಇಂದು ಬಂಟರು ಗುರುತಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ದೊಡ್ಡದಿದೆ. ಅಂತಹ ನಾಯಕತ್ವ ನಮಗೆ ಅತೀ ಅಗತ್ಯವಾಗಿದೆ. ಬಂಟ ಸಮಾಜದ ಮಹಿಳೆಯರು ಕೂಡ ಸಾಕಷ್ಟು ಪ್ರಬಲರಾಗಿದ್ದಾರೆ. ಇತರರಿಗೆ ಮಾದರಿಯಾಗಿ ಬೆಳೆದಿದ್ದಾರೆ. ಬಂಟರು ಇನ್ನು ಮುಂದೆಯೂ ಸಾಮಾಜಿಕವಾಗಿ ಹೆಚ್ಚೆಚ್ಚು ಪ್ರಬಲರಾಗಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಮಾಜದಲ್ಲಿ ಒಗ್ಗಟ್ಟನ್ನು ಉಳಿಸಿ ಅಭಿವೃದ್ಧಿಗೆ ಕೊಡುಗೆ ಕೊಡಿ. ವಿಘ್ನ ನಿವಾರಕ ಗಣೇಶನ ಆಶೀರ್ವಾದ ನಮ್ಮ ನಿಮ್ಮೆಲ್ಲರ ಮೇಲಿರಲಿ” ಎಂದು ಅರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಎರಡನೇ ದಿನದ ಧಾರ್ಮಿಕ ಸಭೆಯಲ್ಲಿ…
ಇತ್ತೀಚೆಗೆ ಬಹರೈನ್ ದೇಶಕ್ಕೆ ಆಗಮಿಸಿ ಅಧಿಕಾರ ವಹಿಸಿಕೊಂಡ ಭಾರತದ ನೂತನ ನಿಯೋಜಿತ ರಾಯಭಾರಿ ಘನತೆವೆತ್ತ ಶ್ರೀ ವಿನೋದ್ ಕೆ. ಜೇಕಬ್ ಅವರನ್ನು ಕನ್ನಡ ಸಂಘದ ಅಧ್ಯಕ್ಷರಾದ ಶ್ರೀ ಅಮರನಾಥ್ ರೈ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಅಭಿನಂದಿಸಿದರು. ಅಧ್ಯಕ್ಷ ಶ್ರೀ ಅಮರನಾಥ್ ರೈಯವರು ರಾಯಭಾರಿಯವರಿಗೆ ಹೂಗುಚ್ಛ, ಸ್ಮರಣಸಂಚಿಕೆ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು. ಬಳಿಕ ಶ್ರೀ ರೈಯವರು ಕನ್ನಡ ಸಂಘವು ನಡೆದು ಬಂದ ಹಾದಿ, ಕನ್ನಡ ಭವನ ನಿರ್ಮಾಣದ ಕುರಿತು ವಿಸ್ತೃತವಾಗಿ ವಿವರಿಸಿದರು. ಜೊತೆಗೆ ಇದೇ ಸೆಪ್ಟೆಂಬರ್ ನಲ್ಲಿ ನಡೆಯುವ ಪದಗ್ರಹಣ ಸಮಾರಂಭಕ್ಕೆ ಅತಿಥಿಗಳಾಗಿ ಬರುವಂತೆ ಆಹ್ವಾನಿಸಿದರು. ಘನತೆವೆತ್ತ ಶ್ರೀ ವಿನೋದ್ ಕೆ. ಜೇಕಬ್ ರವರು ಕನ್ನಡ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದು ಸಂಘಟನೆಯನ್ನು ಶ್ಲಾಘಿಸಿದರು. ತಾವು ಕನ್ನಡ ಭವನವನ್ನು ಸಂದರ್ಶಿಸುವದರೊಂದಿಗೆ ಮುಂದಿನ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಭರವಸೆ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಭಾರತೀಯ ದೂತಾವಾಸದ ಶ್ರೀ ಇಜ಼ಾಸ್ ಅಸ್ಲಂ, ದ್ವಿತೀಯ ಕಾರ್ಯದರ್ಶಿ (ರಾಜಕೀಯ, ಪತ್ರಿಕಾ, ಮಾಹಿತಿ ಮತ್ತು ಸಂಸ್ಕೃತಿ) ಉಪಸ್ಥಿತರಿದ್ದರು.
ಮುಂಬಯಿಯ ಪ್ರಸಿದ್ಧ ಸಮಾಜ ಸೇವಕ, ಶಿಕ್ಷಣ ತಜ್ಞ, ಬಂಟರ ಸಂಘ ಮೀರಾ- ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಧ್ಯಕ್ಷ ಬಿಳಿಯೂರುಗುತ್ತು ಡಾ. ಅರುಣೋದಯ ರೈ ಅವರು ಸ್ಥಾಪಿಸಿರುವ ರೈ ಸುಮತಿ ಎಜುಕೇಶನ್ ಟ್ರಸ್ಟಿನ ಆಡಳಿತದಲ್ಲಿರುವ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್ ನಲ್ಲಿ ಗುರು ಪೂರ್ಣಿಮದ ದಿನದಂದು ವಿದ್ಯಾರ್ಥಿಗಳಿಗೆ ಗುರುವಿನ ಬಗ್ಗೆ ಮತ್ತು ಮಾತಾಪಿತರ ಬಗ್ಗೆ ಜ್ಞಾನ ವೃದ್ಧಿಸುವ ವಿಶೇಷ ಕಾರ್ಯಕ್ರಮ ನಡೆಯಿತು. ಶಾಲೆಯಲ್ಲಿ ಸುಮಾರು 3000 ವಿದ್ಯಾರ್ಥಿಗಳಿದ್ದು ಗುರು ಪೂರ್ಣಿಮೆಯಂದು ಜೂನಿಯರ್ ಸೀನಿಯರ್ ಹಾಗೂ ಒಂದನೇ ತರಗತಿ ಮತ್ತು ಎರಡನೇ ತರಗತಿಯ ಸುಮಾರು 1180 ವಿದ್ಯಾರ್ಥಿಗಳಿಗೆ ಗುರುವಿನ ಮತ್ತು ಮಾತಾಪಿತರ ಮಹತ್ವದ ಅರಿವನ್ನು ಮೂಡಿಸುವುದಕ್ಕಾಗಿ ತಾಯಿಯ ಪಾದ ಪೂಜೆಯನ್ನು ಮಾಡಿಸಿ ವಿದ್ಯಾರ್ಥಿಗಳಿಗೆ ತಾಯಿಯ ಮಹತ್ವವನ್ನು ತಿಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅರುಣೋದಯ ರೈ ಸಾವಿರಾರು ಮಕ್ಕಳು ಹಾಗೂ ಅವರೊಂದಿಗೆ ಅಷ್ಟೇ ತಾಯಂದಿರು ಇಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಕ್ಕಳಿಗೆ ತಮ್ಮ ಸಂಸ್ಕೃತಿಯನ್ನು ಜೀವಂತವಾಗಿರಿಸಲು ಈ ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗಿದೆ. ಇದೇ…















