Author: admin

ಬ್ರಹ್ಮಾವರ ವ್ಯ.ಸೇ.ಸ. ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಬಿರ್ತಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ದಿಗ್ವಿಜಯ ಸಾಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲೂ ಜಯ ಗಳಿಸಿದ್ದರು. ಇದೀಗ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿರ್ತಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಹಂದಾಡಿ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಪದಗ್ರಹಣ ಕಾರ್ಯಕ್ರಮವು ಜನವರಿ 16 ರಂದು ಸಂಜೆ 4ಗಂಟೆಗೆ ನಡೆಯಿತು.

Read More

ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾಬಂಧು ವತಿಯಿಂದ ಕರಾವಳಿ ಕಲೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸರಪಾಡಿ ಯಕ್ಷಗಾನ ಅಭಿಮಾನಿ ಬಳಗದ ಸಹಕಾರದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿಯವರ ಯಕ್ಷ ಪಯಣದ 50ರ ಸಂಭ್ರಮ ಮತ್ತು ಪುಸ್ತಕ ಬಿಡುಗಡೆ ಸಮಾರಂಭ ‘ಸುವರ್ಣ ಸರಪಾಡಿ’ ಕಾರ್ಯಕ್ರಮ ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ನಡೆಯಿತು.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದೀಪ ಪ್ರಜ್ವಲನೆ ಮಾಡಿ ಮಾತನಾಡಿ, ‘ಇಂದು ಯಕ್ಷಗಾನದಲ್ಲಿ ಪಾತ್ರೋಚಿತವಾದ ಮಾತುಗಳನ್ನು ಅದ್ಭುತ ಅಭಿನಯದ ಮೂಲಕ ಮಾಡುವ ಕಲಾವಿದರ ಪೈಕಿ ಸರಪಾಡಿ ಅಶೋಕ ಶೆಟ್ಟರು ಅಗ್ರಪಂಕ್ತಿಗೆ ಸೇರುತ್ತಾರೆ. ಅವರು ಯಕ್ಷಗಾನವಷ್ಟೇ ಅಲ್ಲ, ರಾಜಕೀಯ, ಸಮಾಜ ಸೇವೆಯಲ್ಲೂ ಮಿಂಚಿದವರು, ಕಲಾವಿದರಿಗಾಗಿ ಸ್ಪಂದಿಸಿದವರು’ ಎಂದು ಶ್ಲಾಘಿಸಿದರು. ಅಭಿನಂದನಾ ಭಾಷಣದಲ್ಲಿ ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ,…

Read More

ನಮ್ಮ ಕಾಲೇಜಿನಲ್ಲಿ ಹಳ್ಳಿಯ ಪ್ರದೇಶಗಳಿಂದ ವಿದ್ಯಾರ್ಥಿಗಳು ಹೆಚ್ಚಾಗಿ ಬರುತ್ತಿದ್ದರು. ಆಗ ಹೆಣ್ಣು ಮಕ್ಕಳು ಉನ್ನತ ಅಧ್ಯಯನ ಮಾಡುತ್ತಿದ್ದುದೇ ಕಡಿಮೆ.‌ ನಾವು ಆಪ್ತತೆಯಿಂದಲೇ ಕಲಿಸಿದೆವು. ಅದರ ಪರಿಣಾಮ ಇಂದು ಈ ಮಕ್ಕಳಿಂದ ಇಂದಿಗೂ ನಮಗೆ ಆ ಪ್ರೀತಿ ಸಿಕ್ಕಿದೆ. ನಾವು ಗಳಿಸಿದ್ದು ವಿದ್ಯಾರ್ಥಿಗಳ ಪ್ರೀತಿ ವಿಶ್ವಾಸವನ್ನು ಮಾತ್ರ. ಒಬ್ಬ ಶಿಕ್ಷಕಿಯಾಗಿ ವಿದ್ಯಾರ್ಥಿಗಳೇ ನನ್ನ ಆಸ್ತಿ.‌ ಇಷ್ಟು ಅಲ್ಪ ಸಮಯದಲ್ಲಿ ಇವರು ಅಭಿನಂದನೆ, ಗುರುವಂದನೆಯಲ್ಲಿ ತೊಡಗಿಸಿಕೊಂಡ ರೀತಿಗೆ ಬೆರಗಾಗಿದ್ದೇನೆ. ಈ ವಿದ್ಯಾರ್ಥಿಗಳೆಲ್ಲರೂ ದೂರ ದೂರದಿಂದ ಇಂದು ಇಲ್ಲಿಗೆ ಬಂದು ತೋರಿದ ಆದರಾಭಿಮಾನಕ್ಕೆ ಮೂಕಳಾಗಿದ್ದೇನೆ ಎಂದು ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ನಿವೃತ್ತ ಉಪನ್ಯಾಸಕಿ, ಪ್ರಾಂಶುಪಾಲರಾಗಿದ್ದ ಪ್ರೊ. ಮಿತ್ರಪ್ರಭಾ ಹೆಗ್ಡೆ ನುಡಿದರು. ಅವರು ಜನವರಿ 12 ಆದಿತ್ಯವಾರದಂದು ನವೋದಯ ಕನ್ನಡ ಸೇವಾ ಸಂಘದ ಸಭಾಂಗಣದಲ್ಲಿ ನಡೆದ ಎಸ್.ವಿ.ಟಿ ಹಳೆ ವಿದ್ಯಾರ್ಥಿ ಬಳಗ ಮುಂಬಯಿ ಸಮಾಗಮದಲ್ಲಿ ಗುರುವಂದನೆಯನ್ನು ಸ್ವೀಕರಿಸಿ ಮಾತನಾಡಿದರು. ಅವರು ಮಾತನ್ನು ಮುಂದುವರೆಸುತ್ತಾ, ನನ್ನ‌ ವಿದ್ಯಾರ್ಥಿನಿಯರು ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಗಳನ್ನು‌ ಮಾಡಿದ್ದಾರೆ‌ ಎನ್ನಲು ಅಭಿಮಾನವಾಗುತ್ತದೆ.…

Read More

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ದ ವಾರ್ಷಿಕ ಪ್ರಶಸ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ತುಮಕೂರಿನಲ್ಲಿ ಜನವರಿ 18 ಮತ್ತು 19ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ವಾರಪತ್ರಿಕೆಯಲ್ಲಿ ಪ್ರಕಟವಾದ ಚಿತ್ರಲೇಖನಕ್ಕೆ ಕೊಡಮಾಡುವ ‘ಮಂಗಳ ಎಂ.ಸಿ ವರ್ಗಿಸ್ ಪ್ರಶಸ್ತಿ’ಗೆ ಸುದ್ದಿ ಬಿಡುಗಡೆ ಅಂಕಣಕಾರ ಹಾಗೂ ಮಧುಪ್ರಪಂಚ ಪತ್ರಿಕೆಯ ಸಂಪಾದಕರೂ ಆಗಿರುವ ನಾರಾಯಣ ರೈ ಕುಕ್ಕುವಳ್ಳಿ ಆಯ್ಕೆಯಾಗಿದ್ದಾರೆ.ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರೂ ಆಗಿರುವ ನಾರಾಯಣ ರೈ ಕುಕ್ಕುವಳ್ಳಿ ಅವರು ಸಾಹಿತಿಯೂ ಆಗಿದ್ದಾರೆ. ಇವರ ಸೇವೆ ಸಾಧನೆಯನ್ನು ಗುರುತಿಸಿ ಈಗಾಗಲೇ ಹಲವು ಪ್ರಶಸ್ತಿ, ಸನ್ಮಾನಗಳೊಂದಿಗೆ ಪುರಸ್ಕೃತರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆಯ ಅಂಕಣಕಾರರಾಗಿರುವ ಇವರು ಪತ್ರಿಕೆಯಲ್ಲಿ ಪ್ರಕಟವಾಗುವ ‘ಪ್ರತಿಭಾರಂಗ’ದ ನಿರ್ವಾಹಕರೂ ಆಗಿದ್ದು, ಈಗಾಗಲೇ ಹಲವು ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದ್ದಾರೆ.

Read More

ಏಷ್ಯನ್ ಮಾಸ್ಟರ್ಸ್ ವೆಯ್ಟ್ ಲಿಫ್ಟಿಂಗ್ ಕಮಿಟಿ (ಎಂಎಂಡಬ್ಲ್ಯೂ) ಗೆ ಮುಂಬಯಿಯ ಉದಯ ಶೆಟ್ಟಿ ಅವರನ್ನು ಎಂಎಂಡಬ್ಲ್ಯೂ ಗೆ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ಉದಯ ಶೆಟ್ಟಿಯವರು ವೆಯ್ಟ್ ಲಿಫ್ಟಿಂಗ್ ನಲ್ಲಿ ಉನ್ನತ ಮಟ್ಟದ ಅನುಭವವನ್ನು ಹೊಂದಿದ್ದು, ಓರ್ವ ಯಶಸ್ವಿ ವೆಯ್ಟ್ ಲಿಫ್ಟರ್ ಆಗಿ ಎಲ್ಲೆಡೆ ಮಿಂಚಿದ್ದಾರೆ.ಇವರು ಹಲವಾರು ವರ್ಷಗಳಿಂದ ಭಾರತೀಯ ಮಾಸ್ಟರ್ಸ್ ವೆಯ್ಟ್ ಲಿಫ್ಟಿಂಗ್ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತನ್ನ ಅಧಿಕಾರಾವಧಿಯಲ್ಲಿ ಇವರು ಭಾರತದಲ್ಲಿ ವೆಯ್ಟ್ ಲಿಫ್ಟಿಂಗ್ ಕ್ರೀಡೆಯನ್ನು ಉತ್ತೇಜಿಸುವಲ್ಲಿ ಮತ್ತು ಅಭಿವೃದ್ಧಿ ಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಮತ್ತು ದೇಶದಲ್ಲಿ ಮಾಸ್ಟರ್ಸ್ ವೆಯ್ಟ್ ಲಿಫ್ಟಿಂಗ್ ಸಮುದಾಯದ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡಿದ್ದಾರೆ.ಪೋಲೆಂಡ್ ನ ಕ್ರಾಕೋವ್ ನಲ್ಲಿ ನಡೆದ ಮಾಸ್ಟರ್ಸ್ ವರ್ಲ್ಡ್ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಉದಯ ಎಸ್. ಶೆಟ್ಟಿಯವರು ತನ್ನ ತಂಡದ ಏಳು ಮಂದಿ ವೆಯ್ಟ್ ಲಿಫ್ಟರ್ಸ್ ನೊಂದಿಗೆ ಭಾರತವನ್ನು ಪ್ರತಿನಿಧಿಸಿದ್ದಾರೆ. 1994 ರಿಂದ ಭಾರತೀಯ ವೆಯ್ಟ್ ಲಿಫ್ಟಿಂಗ್ ಫೆಡರೇಶನ್ ನ…

Read More

ಮಂದಾರ್ತಿ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್ ಗಂಗಾಧರ ಶೆಟ್ಟಿ ಮಂದಾರ್ತಿ ನೇತೃತ್ವದ ಬಿಜೆಪಿ ಬೆಂಬಲಿತ ಸದಸ್ಯರು ಎಲ್ಲಾ 12 ಸ್ಥಾನಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಸ್ಥಾನದಿಂದ ಎಚ್. ಗಂಗಾಧರ ಶೆಟ್ಟಿ ಮಂದಾರ್ತಿ, ಪೃಥ್ವಿರಾಜ ಶೆಟ್ಟಿ ಬಿಲ್ಲಾಡಿ, ಗಣೇಶ ಶೆಟ್ಟಿ ಮಂದಾರ್ತಿ, ಜಂಲಧರ ಶೆಟ್ಟಿ ನಡೂರು, ದಿನೇಶ ಮರಕಾಲ ಮಂದಾರ್ತಿ, ಚಂದ್ರಶೇಖರ ಪೂಜಾರಿ ಶಿರೂರು, ಹಿಂದುಳಿದ ವರ್ಗ ಬಿ ಸ್ಥಾನದಿಂದ ಸುರೇಶ ಶೆಟ್ಟಿ ಕಾಡೂರು, ಹಿಂದುಳಿದ ವರ್ಗ ಎ ಸ್ಥಾನದಿಂದ ಕೆ. ಶಂಭುಶಂಕರ ರಾವ್ ಹೆಗ್ಗುಂಜೆ, ಮಹಿಳಾ ಮೀಸಲು ಸ್ಥಾನದಿಂದ ಗುಲಾಬಿ ಬಾಯಿ ಹೆಗ್ಗುಂಜೆ, ಪ್ರೇಮಾ ಮರಕಾಲ್ತಿ ಹೆಗ್ಗುಂಜೆ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಬಸವ ನಾಯ್ಕ್ ಕಾಡೂರು, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ರಾಧಾ ಹೆಗ್ಗುಂಜೆ ಆಯ್ಕೆಯಾದರು. ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಕೆ.ಆರ್ ರೋಹಿತ್ ಚುನಾವಣಾ ಅಧಿಕಾರಿಯಾಗಿದ್ದರು.

Read More

“ಮಕ್ಕಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಸವಾಲುಗಳನ್ನು ಸ್ವೀಕರಿಸಿ ಎದುರಿಸಲು ಚೆಸ್ ಆಟ ಬಹಳ ಸಹಕಾರಿಯಾಗಿದೆ. ಚೆಸ್ ಆಟದ ಮೂಲಕ ಮಕ್ಕಳು ತಮ್ಮ ಏಕಾಗ್ರತೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯ. ಚೆಸ್ ಆಟದಿಂದ ಮಕ್ಕಳ ಸ್ಮರಣ ಶಕ್ತಿ ವೃದ್ಧಿಯಾಗುತ್ತದೆ ಮತ್ತು ಇದು ಕಲಿಕೆಯ ಮೇಲೆ ಉತ್ತಮ ಧನಾತ್ಮಕ ಪ್ರಭಾವವನ್ನು ಬೀರುತ್ತದೆ. ಚೆಸ್ ಆಟದಲ್ಲಿ ಆಸಕ್ತಿಯುಳ್ಳ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ದೊರೆತರೆ ಅವರು ಮುಂದೆ ದೊಡ್ಡ ಸಾಧಕರಾಗಬಹುದು. ಏಕಾಗ್ರತೆ ಸ್ಮರಣಶಕ್ತಿ ಉತ್ತಮ ಭಾವನಾತ್ಮಕ ಕೌಶಲ್ಯಗಳನ್ನು ಚೆಸ್ ಆಟ ವೃದ್ಧಿಸುವುದರಿಂದ ಮಕ್ಕಳು ಬಹಳ ಉತ್ಸುಕತೆಯಿಂದ ಕಲಿಕೆಯಲ್ಲಿ ಸಾಗಲು ಸಾಧ್ಯವಾಗುತ್ತದೆ. ಈ ಸಂಸ್ಥೆಯ ಮಕ್ಕಳು ಕೂಡ ಉತ್ತಮ ಚೆಸ್ ಆಟಗಾರರಾಗಿ ಸಾಧನೆಯನ್ನು ಮಾಡಲಿ” ಎಂದು ಅರ್ಜುನ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ಗ್ರಾಂಡ್ ಮಾಸ್ಟರ್ ಪ್ರವೀಣ್ ಎಂ. ತಿಪ್ಸೆ ಹೇಳಿದರು. ಯಡಾಡಿ ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಚೆಸ್ ಒರಿಯೆಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ…

Read More

ನಮ್ಮ ಬಂಟರ ಸಂಘದ ಪ್ರಾದೇಶಿಕ ಸಮಿತಿಗಳ ಮುಖೇನ ಉತ್ತಮವಾದ ಕೆಲಸವನ್ನು ಮಾಡುತ್ತಿದ್ದೇವೆ. ಪ್ರಾದೇಶಿಕ ಸಮಿತಿಯವರು ಇವತ್ತು ಆಯೋಜಿಸಿರುವಂತಹ ಈ ಉಚಿತ ವೈದ್ಯಕೀಯ ಶಿಬಿರ ಪ್ರತಿ ಮೂರು ತಿಂಗಳಿಗೊಮ್ಮೆ ಆದರೂ ನಡೆಯಬೇಕು. ಈ ಮೂಲಕ ನಮ್ಮ ಜನರನ್ನು ಅನಾರೋಗ್ಯದಿಂದ ಪಾರು ಮಾಡುವ ನಿಟ್ಟಿನಲ್ಲಿ ಸ್ವಲ್ಪವಾದರೂ ಸಹಾಯವಾದಿತು. ಜನರಿಗೆ ಮನೆ ಮನೆಗೆ ವೈದ್ಯಕೀಯ ಸಹಾಯ ದೊರೆಯುವಲ್ಲಿ ಡಾ| ಆರ್.ಕೆ. ಶೆಟ್ಟಿ, ಬಾಬಾ ಮಹೇಶ್ ಶೆಟ್ಟಿ ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಪ್ರಾದೇಶಿಕ ಸಮಿತಿಯ ಮೂಲಕ ಸೂರಜ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸಂತೋಷ್ ಶೆಟ್ಟಿ ಮೊದಲಾದವರು ಶ್ರಮಿಸುತಿದ್ದಾರೆ. ಇವೆಲ್ಲವೂ ಒಗ್ಗಟ್ಟಿನಿಂದ ಮಾತ್ರ ಸಾಧ್ಯ. ಸಂಸ್ಥೆಯಲ್ಲಿ ‘ನಾನು’ ಎನ್ನದೇ ‘ನಾವು’ ಎಂದು ಕೈಜೋಡಿಸಿ ಕೆಲಸ ಮಾಡಬೇಕು. ಆಗ ಯಶಸ್ಸು ನಮ್ಮದಾಗುತ್ತದೆ. ಎಲ್ಲರೂ ಆರೋಗ್ಯವಂತರಾಗಿ ಬಾಳುವಂತಾಗಲಿ ಎಂದು ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ನುಡಿದರು. ಅವರು ಬಂಟರ ಸಂಘ ಮುಂಬಯಿ ಅಂಧೇರಿ- ಬಾಂದ್ರಾ ಪ್ರಾದೇಶಿಕ ಸಮಿತಿಯ ವೈದ್ಯಕೀಯ ಸಮಿತಿಯ ನೇತೃತ್ವದಲ್ಲಿ ನಡೆದ ಉಚಿತ…

Read More

ವಿದ್ಯಾಗಿರಿ: ಜಗತ್ತಿನಲ್ಲಿ ಅತಿಹೆಚ್ಚು ಬಳಕೆಯಾದ ಸಮೂಹ ಸಂವಹನ ಮಾಧ್ಯಮಗಳಲ್ಲಿ ರೇಡಿಯೋ ಸಹ ಒಂದು. ೨೦ನೇ ಶತಮಾನದಲ್ಲಿ ಪ್ರಮುಖ ಮಾಧ್ಯಮವಾಗಿ ಉದಯಿಸಿ, ಇಂದಿಗೂ ತನ್ನ ಪ್ರಸ್ತುತತೆಯನ್ನು ಕಾಪಾಡಿಕೊಂಡು ಬಂದಿದೆ ಎಂದು ಮಂಗಳೂರು ಆಕಾಶವಾಣಿಯ ಪ್ರಸರಣ ಕಾರ್ಯನಿರ್ವಾಹಕ ಲತೀಶ್ ಪಾಲ್ದಾನೆ ನುಡಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವತಿಯಿಂದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬುಧವಾರ ಆಳ್ವಾಸ್‌ನ ಜೆಎಂಸಿ ಹಾಲ್‌ನಲ್ಲಿ ನಡೆದ ‘ಡಿಜಿಟಲ್ ಯುಗದಲ್ಲಿ ರೇಡಿಯೋ ಅವಕಾಶಗಳು ಹಾಗೂ ಸವಾಲುಗಳು’ ಎಂಬ ವಿಷಯದ ಕುರಿತು ಅವರು ಮಾತನಾಡಿದರು. ರೇಡಿಯೋವು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಮತ್ತು ಮಹಿಳಾ ಸಬಲೀಕರಣದ ಕುರಿತ ಮಾಹಿತಿಗೆ ಪ್ರಮುಖ ಸಾಧನವಾಗಿದೆ. ಸರಳ ಭಾಷೆಯಲ್ಲಿ ಪರಿಚಾರಕರಿಂದ ಪ್ರಸಾರಮಾಡುವ ಮಾಹಿತಿ, ಸಾರ್ವಜನಿಕರಿಗೆ ನೇರವಾಗಿ ತಲುಪುತ್ತಿದೆ.ಸರ್ಕಾರದ ಅನೇಕ ಯೋಜನೆಗಳು, ಶಿಕ್ಷಣ ಮತ್ತು ಮನರಂಜನೆ ಪಡೆಯಲು ವ್ಯಾಪಕವಾಗಿ ಬಳಸಲ್ಪಡುವ ಮಾಧ್ಯಮವಾಗಿ ಬಳಕೆಯಾಗುತ್ತಿದೆ. ಪ್ರಸ್ತುತ ಭಾರತದಲ್ಲಿ ೪೦೦ ಕ್ಕೂ ಹೆಚ್ಚು ಆಕಾಶವಾಣಿ ರೇಡಿಯೋ ಸ್ಟೇಷನ್ ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಸಾಮಾಜಿಕ ನೆಲೆಯಲ್ಲಿ ವಿಭಿನ್ನ ಮತ್ತು ವಿನೂತನ ಕಾರ್ಯಕ್ರಮಗಳಿಂದ…

Read More

ಕುಂದಾಪುರ ಯುವ ಬಂಟರ ಸಂಘದ ಆಶ್ರಯದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ವೇತನದ ಬದಲು ಆಧುನಿಕ ಕಲಿಕಾ ಸಾಧನಗಳನ್ನು ವಿತರಿಸುವ ಈ ಕಾರ್ಯಕ್ರಮ ಮಾದರಿಯಾಗಿದೆ. ಇದರಿಂದ ಸಮುದಾಯದ ಮಕ್ಕಳ ಶೈಕ್ಷಣಿಕ ಉನ್ನತಿಗೆ ಇನ್ನಷ್ಟು ಉತ್ತೇಜನ ನೀಡಿದಂತಾಗಿದೆ. ಯುವ ಸಂಘಟನೆ ಹತ್ತಾರು ಮಾದರಿ ಕಾರ್ಯ ಮಾಡುತ್ತಿದೆ ಎಂದು ಬೆಂಗಳೂರಿನ ಸೌತ್ ಫೀಲ್ಡ್ ಫೈಂಟ್ಸ್ ನ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ಶ್ಲಾಘಿಸಿದರು. ಅವರು ಕುಂದಾಪುರದ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅರಿವು ಯೋಜನೆಯಡಿ ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ಸಾಧನಗಳ ಹಸ್ತಾಂತರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಬಂಟ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದರು. ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಲೆಕ್ಕ ಪರಿಶೋಧಕ ಸಿಎ ಸುಧಾಕರ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಿದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ…

Read More