Author: admin
ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ಶಿರ್ವದ ವಿದ್ಯಾವರ್ಧಕ ಸಂಘದ ಕ್ಯಾಂಪಸ್ ನಲ್ಲಿ 2 ಕೋ. ರೂ. ವೆಚ್ಚದಲ್ಲಿ ನಿರ್ಮಿಸಿ ನಿರ್ವಹಿಸಲ್ಪಡುವ ಜಸ್ಟಿಸ್ ಕೆ. ಎಸ್. ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರದ ಉದ್ಘಾಟನೆ ಅ.20 ರಂದು ಬೆಳಗ್ಗೆ 10 ಗಂಟೆಗೆ ಜರಗಲಿದೆ. ಸರ್ವೋಚ್ಚ ನ್ಯಾಯಾಲಯದ ನಿವೃತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಲಿದ್ದು ನಿಟ್ಟೆ ವಿ. ವಿ. ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿರ್ವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಶಾಸಕ ಸುರೇಶ್ ಪಿ. ಶೆಟ್ಟಿ ಗುರ್ಮೆ, ನಿಟ್ಟೆ ವಿ. ವಿ. ಸಹಕುಲಾಧಿಪತಿಗಳಾದ ಡಾ. ಎಂ. ಶಾಂತಾರಾಮ ಶೆಟ್ಟಿ, ವಿಶಾಲ್ ಹೆಗ್ಡೆ, ಕುಲಪತಿ ಡಾ. ಎಂ. ಎಸ್. ಮೂಡಿತ್ತಾಯ, ಉಪಾಧ್ಯಕ್ಷ (ಸಿಆರ್ ಎಲ್ ಮತ್ತು ಐ ಎಸ್ ಆರ್) ಡಾ. ಸತೀಶ್ ಕುಮಾರ್ ಭಂಡಾರಿ ಹಾಗೂ ಶಿರ್ವ ಗ್ರಾ.ಪಂ. ಅಧ್ಯಕ್ಷೆ ಸವಿತಾ ರಾಜೇಶ್ ಭಾಗವಹಿಸಲಿದ್ದಾರೆ. ಗ್ರಾಮೀಣ ಅರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯ ಸೇವೆಗಳು ಲಭಿಸಿದ್ದು, ಕೆಲವು ಸೇವೆಗಳು ಮತ್ತು…
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ 17 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದ ಯಶಸ್ಸಿನ ಹಿನ್ನಲೆಯಲ್ಲಿ ಬಂಟ್ಸ್ ಹಾಸ್ಟೇಲ್ ಓಂಕಾರ ನಗರದಲ್ಲಿ ಧನ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಿದ್ದರು. ಗಣೇಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಅಹರ್ನಿಶಿಯಾಗಿ ದುಡಿದ ಸಮಾಜ ಬಾಂಧವರನ್ನು ಅಜಿತ್ ಕುಮಾರ್ ರೈ ಮಾಲಾಡಿ ಅವರು ಅಭಿನಂದಿಸಿದರು. ಕಾರ್ಯಕರ್ತರ ದುಡಿಮೆ, ಶ್ರಮಕ್ಕೆ ಭಗವಂತನ ಆಶೀರ್ವಾದ ಇದೆ. ಬಂಟರ ಮಾತೃ ಸಂಘ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ನಿರಂತರವಾಗಿ ಪಾಲ್ಗೊಳ್ಳಿ ಎಂದರು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಪ್ರತಿಷ್ಠಾನದ ಟ್ರಸ್ಟಿ ನಿಟ್ಟೆಗುತ್ತು ರವಿರಾಜ ಶೆಟ್ಟಿ, ಡಾ ಆಶಾಜ್ಯೋತಿ ರೈ, ಸಂಚಾಲಕರಾದ ಮಿಥುನ್ ರೈ, ಪ್ರವೀಣ್…
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ದೇವಸ್ಥಾನಗಳ ಬಂಟ ಆಡಳಿತ ಮೊಕ್ತೇಸರರಿಗೆ ಗೌರವಾರ್ಪಣೆ ಕಾರ್ಯಕ್ರಮ ಬುಧವಾರ ಬೆಳಗ್ಗೆ ನಡೆಯಿತು. ಪ್ರಾಸ್ತಾವಿಕ ಮಾತನ್ನಾಡಿದ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಅವರು, “ಬಂಟ ಎಂದರೆ ಅದೊಂದು ಜಾತಿಯಲ್ಲ ಅದೊಂದು ಧರ್ಮ. ಯಾಕೆಂದರೆ ಬಂಟ ಸಮುದಾಯಕ್ಕೆ ಸಮಾಜದಲ್ಲಿ ಅದರದ್ದೇ ಆದ ಐತಿಹ್ಯವಿದೆ. ಇಂದು ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಬಂಟರನ್ನು ಸ್ಥಾನ ಪಲ್ಲಟ ಮಾಡುವಂತಹ ಯೋಜನೆ ಹಿಂದಿನಿಂದ ನಡೆಯುತ್ತಿದೆ. ಹೀಗಾಗಿ ಬಂಟರು ಸಂಘಟಿತರಾಗಬೇಕು. ನಮ್ಮ ಹಕ್ಕು, ಕರ್ತವ್ಯಗಳನ್ನು ಮರೆಯದೆ ನಮ್ಮತನವನ್ನು ಉಳಿಸಿಕೊಳ್ಳಬೇಕು” ಎಂದರು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಆಶಯದ ನುಡಿಗಳನ್ನಾಡಿದ ಜಾನಪದ ವಿದ್ವಾಂಸ ಡಾ.ವೈ.ಎನ್. ಶೆಟ್ಟಿ…
ಈ ವರ್ಷದ ಸಾರ್ವಜನಿಕ ಗಣೇಶೋತ್ಸವವು ಬಂಟರ ಯಾನೆ ನಾಡವರ ಮಾತೃ ಸಂಘದ ಓಂಕಾರ ನಗರದಲ್ಲಿ ಮಾತೃಸಂಘ, ಸಿದ್ಧಿವಿನಾಯಕ ಪ್ರತಿಷ್ಠಾನ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಎಲ್ಲಾ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ನಡೆಯಲಿದೆ. ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ಹಾಗೂ ಪೂರ್ವಭಾವಿಯಾಗಿ ಅನೇಕ ಮಹತ್ವಪೂರ್ಣ ಕಾರ್ಯಕ್ರಮಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳೂ ಬಂಟ್ಸ್ ಹಾಸ್ಟೆಲ್ನ ಓಂಕಾರ ನಗರದಲ್ಲಿ ಜರಗಲಿದ್ದು ಸೆ.3ರ ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಇಡೀ ದಿನ “ಬಂಟ ಕಲಾ ಸಂಭ್ರಮ” ಜರಗಲಿದ್ದು, ಮೂರು ಜಿಲ್ಲೆಗಳ ಸುಮಾರು ಹದಿನೆಂಟು ಪ್ರಮುಖ ತಂಡಗಳು ಭಾಗವಹಿಸಲಿದ್ದು ಒಂದೊಂದು ತಂಡದಲ್ಲಿ ಕನಿಷ್ಠ 25 ಕಲಾವಿದರು ಪಾಲ್ಗೊಳ್ಳಲಿದ್ದಾರೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಹಾಗೂ ಸಿದ್ಧಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಭಾರತ ದರ್ಶನ ಹೆಸರಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಕವಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ದೇಶದ ಕಲೆ, ಜನಪದ,…
ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಬಜೆಟ್ ಮೇಲೆ ಚರ್ಚಿಸಲು ಸೋಮವಾರ ಸ್ಪೀಕರ್ ಯು.ಟಿ ಖಾದರ್ ಅವಕಾಶ ಮಾಡಿಕೊಟ್ಟರು. ಈ ವೇಳೆ ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಕೋಳಿ ಕಥೆ ಹೇಳಿ ಸರ್ಕಾರಕ್ಕೆ ಅಭಿವೃದ್ದಿ ಪಾಠ ಮಾಡಿ ಗಮನ ಸೆಳೆದರು. ಬಡವರ ಮನೆಗೆ ಅಕ್ಕಿ ಮುಟ್ಟಿಸುವ ಯೋಚನೆ ಮತ್ತು ಯೋಜನೆ ಯಾವುದೇ ಸರ್ಕಾರ ಮಾಡಿದ್ದರೂ ಅಭಿನಂದನೀಯ. ಆದರೆ, ಯಾವುದೇ ದೇಶ ಅಥವಾ ರಾಜ್ಯದ ಬಂಡವಾಳ ವೆಚ್ಚ ಹೆಚ್ಚಾದರಷ್ಟೇ ಅಭಿವೃದ್ಧಿ ಸಾಧ್ಯ. ನಮ್ಮಲ್ಲಿ ವಿದ್ಯಾಕೇಂದ್ರಗಳು ಸಾಕಷ್ಟಿವೆ. ಮೀನುಗಾರಿಕೆ ಸೇರಿದಂತೆ ಹಲವು ಉದ್ಯಮಗಳಿವೆ. ದುಡಿಯುವ ಕೈಗಳಿಗೆ ಆಧಾರ ಕೊಟ್ಟರೆ ಬಡತನ ದೂರಾಗುತ್ತದೆ. ಜನಪ್ರಿಯ ಯೋಜನೆಗಳು ಬಡತನವನ್ನು ಅಣಕಿಸುತ್ತಿವೆಯೋ? ಆಡಳಿತವನ್ನು ಅಣಕಿಸುತ್ತಿವೆಯೋ ಎಂದು 5 ಗ್ಯಾರಂಟಿಗಳ ಹೆಸರು ಹೇಳದೆಯೇ ಟೀಕಿಸಿದರು. ಇದನ್ನು ಪುಷ್ಟೀಕರಿಸುವಂತೆ ಕಥೆಯೊಂದನ್ನೂ ಹೇಳಿದ ಅವರು, ಕೋಳಿಯ ಪುಕ್ಕ ಕಿತ್ತಾಗ ಜೀವಂತ ಕೋಳಿ ನೋವಿನಿಂದ ಒದ್ದಾಡುತ್ತಿರುತ್ತದೆ. ಪುಕ್ಕ ಕಿತ್ತ ನಂತರ ಅದೇ ವ್ಯಕ್ತಿ ಎರಡೆರಡು ಅಕ್ಕಿ ಕಾಳು ಹಾಕುತ್ತಾ ಹೋಗುತ್ತಾನೆ. ಆ ಕೋಳಿಯೂ…
ಮೂರು ವರ್ಷ ಪ್ರಾಕೃತಿಕ ವಿಕೋಪ, ನೆರೆ, ಕೊರೊನಾ ಹಾವಳಿಯ ನಡುವೆಯೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ 2,250 ಕೋಟಿ ರೂ. ಅನುದಾನ ತರುವಲ್ಲಿ ಸಫಲನಾಗಿದ್ದೇನೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ಹೇಳಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತ ಪ್ರಗತಿ ಪಥ ಕೈಪಿಡಿಯನ್ನು ಬಿಡುಗಡೆ ಗೊಳಿಸಿ ಅವರು ಮಾತನಾಡಿದರು. ಶಾಶ್ವತ ಕಾಂಕ್ರೀಟ್ ರಸ್ತೆ ನಿರ್ಮಾಣ ಕ್ಷೇತ್ರದಾದ್ಯಂತ ಸಮರೋಪಾದಿಯಾಗಿ ಆಗಿದೆ. ಜಲಜೀವನ್, ಜಲಸಿರಿ ಕುಡಿ ಯುವ ನೀರು, ಬೀಚ್ ಟೂರಿಸಂ, ಪಾರ್ಕ್ ಅಭಿವೃದ್ಧಿ, ಚರಂಡಿ ಯೋಜನೆ, ಕೆರೆಗಳ ಅಭಿವೃದ್ಧಿ, ತ್ಯಾಜ್ಯ ಸಂಸ್ಕರಣೆ ಘಟಕ, ಐತಿಹಾಸಿಕ ಇತಿಹಾಸ ಸಾರುವ ಪ್ರಮುಖ ಜಂಕ್ಷನ್ಗಳ ಅಭಿವೃದ್ಧಿ ಇತ್ಯಾದಿಗೆ ಆದ್ಯತೆ ನೀಡಿದ್ದೇನೆ. ಮುಡಾ, ಸ್ಮಾರ್ಟ್ ಸಿಟಿ ಅನುದಾನವನ್ನೂ ಇದಕ್ಕಾಗಿ ಬಳಸಿಕೊಂಡು ಕೆರೆ, ಪಾರ್ಕ್ ಅಭಿವೃದ್ಧಿ ಮಾಡಲಾಗಿದೆ, ಕ್ಷೇತ್ರದ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗಿರುತ್ತದೆ ಎಂದರು. ರಾಜ್ಯದ ಪ್ರಪ್ರಥಮ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ, ರಾಜ್ಯದ 2ನೇ ಒಣತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, 6,500 ಕುಟುಂಬಕ್ಕೆ ಹಕ್ಕು…
ಪುಷ್ಕರ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಹೇಮಂತ್ ಎಂ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಕನ್ನಡ ಸಿನಿಮಾದ ಎರಡನೇ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಚೈತ್ರಾ ಆಚಾರ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್, ರಮೇಶ್, ಇಂದಿರಾ, ಗೋಪಾಲ್ ಕೃಷ್ಣ ದೇಶಪಾಂಡೆ, ಅವಿನಾಶ್ ಮತ್ತು ಇತರರು ಪೋಷಕ ಪಾತ್ರದಲ್ಲಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವನ್ನು ಪುಷ್ಕರ ಮಲ್ಲಿಕಾರ್ಜುನಯ್ಯ ನಿರ್ಮಿಸಿದ್ದಾರೆ, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ. ಚಿತ್ರವು ಇಬ್ಬರು ಪ್ರಬಲ ವ್ಯಕ್ತಿಗಳ ಪ್ರೇಮಕಥೆಯ ಮೇಲೆ ಕೇಂದ್ರೀಕೃತವಾಗಿದೆ. ಅವರು ದೂರದಲ್ಲಿದ್ದರೂ ಪ್ರೀತಿಯ ಪರೀಕ್ಷೆಯನ್ನು ಎದುರಿಸುತ್ತಾರೆ. ಪರಂವಾ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಕನ್ನಡ ಸಿನಿಮಾ ‘ಇಬ್ಬನಿ ತಬ್ಬಿದ ಇಳೆಯಲಿ’ ಪೋಸ್ಟರ್ ಬಿಡುಗಡೆಯಾಗಿದೆ. ಇಬ್ಬನಿ ತಬ್ಬಿದ ಇಳೆಯಲಿ ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಕನ್ನಡ ರೋಮ್ಯಾಂಟಿಕ್ ಸಿನಿಮಾ. ಸಿನಿಮಾ ನಿನ್ನೆ, ಇಂದು ಮತ್ತು ನಾಳೆಯ…
ಇತ್ತೀಚೆಗೆ ಒಂದು ಫೇಸ್ಬುಕ್ ಪೋಸ್ಟ್ ನೋಡ್ತಾ ಇದ್ದೆ. ಅದ್ರಲ್ಲಿ ಕಮೆಂಟ್ ಸೆಕ್ಷನ್ ಅಲ್ಲಿದ್ದ ನೆಗೆಟಿವ್ ಕಮೆಂಟ್ಗಳಿಗೆಲ್ಲ ಆ ಪೋಸ್ಟ್ ಮಾಡಿದ ವ್ಯಕ್ತಿ ಖಾರವಾದ ಪ್ರತಿಕ್ರಿಯೆ ನೀಡ್ತಾ ಇದ್ರು. ಪುನಃ ಆ ಕಮೆಂಟ್ಗಳಿಗೆ ಮತ್ತೆ ವಾದಿಗಳು , ಪ್ರತಿವಾದಿಗಳು ಹೀಗೆ ಪಟ್ಟಿ ಬೆಳೀತಾನೆ ಇತ್ತು .. ಕೊನೆಗೆ ಗೆಲುವು ಯಾರದ್ದು ಅಂತ ಕೇಳಿದ್ರೆ ಅದು ಕೊನೆಯಿರದ ಯುದ್ಧ ಅಷ್ಟೇ.. ಕಮೆಂಟ್ಗಳಿಗೆ, ಬೇರೆಯವರ ಮಾತುಗಳಿಗೆ ತಲೆ ಕೆಡಿಸಿಕೊಳ್ಳದೆ ಇರೋದು ಜೀವನದಲ್ಲಿ ಎಲ್ಲರಿಗೂ ಇರಲೇಬೇಕಾಗಿರುವ ಗುಣ ಅಂದ್ರೆ ಒಪ್ತೀರಿ ಅಲ್ವಾ , ಅದು ಜೀವನ ಬೇಕಾದ್ರೂ ಆಗಿರಲಿ ಅಥವಾ ಸಾಮಾಜಿಕ ಜಾಲತಾಣಗಳು ಬೇಕಾದರೂ ಆಗಿರಲಿ. ಚಿಕ್ಕ ವಯಸ್ಸಿನಲ್ಲಿ ನನಗೆ ಯಾರಾದರೂ ನನ್ನ ವಿಚಾರವಾಗಿ ಕಮೆಂಟ್ಗಳನ್ನು ಮಾಡಿದಾಗ, ತಮ್ಮ ಅಭಿಪ್ರಾಯಗಳನ್ನು ಅನಗತ್ಯ ವಾಗಿ ಹೇರಿದಾಗ ಅದನ್ನ ಸ್ವೀಕರಿಸುವುದಕ್ಕೆ ಬಹಳ ಕಷ್ಟ ಆಗ್ತಿತ್ತು. ಕೋಪ ಬರ್ತಾ ಇತ್ತು ಬೇಜಾರ್ ಆಗ್ತಾ ಇತ್ತು. ಎಲ್ಲೋ ಒಂದು ಕಡೆ ಕೀಳರಿಮೆ ಕೂಡ ಕಾಡ್ತಿತ್ತು. ಆತ್ಮವಿಶ್ವಾಸದ ಮೇಲೆ ಒಂದು ರೀತಿ ಹೊಡೆತ ಬಿದ್ದಂತಹ…
ಮುಂಬಯಿ (ಆರ್ಬಿಐ), ಜ.25: ಐಲೇಸಾ-ದಿ ವಾಯ್ಸ್ ಆಫ್ ಓಷನ್ (ರಿ). ಡಿಜಿಟಲ್ ಸಂಸ್ಥೆಯು ಇದೇ ಶನಿವಾರ (ಜ.28) ಝೂಮ್ ಡಿಜಿಟಲ್ ವೇದಿಕೆಯಲ್ಲಿ `ಬಾನ ಚಂದ್ರೆ ತೆಲಿಪುನಾನಿ’ ತುಳು ಹಾಡು ಬಿಡುಗಡೆ ಮಾಡಲಿದೆ. ಕಳೆದ ವರ್ಷ ಹನ್ನೊಂದು ತುಳು ಹಾಡುಗಳನ್ನು ಬಿಡುಗಡೆ ಗೊಳಿಸಿದ ಐಲೇಸಾ ಸಂಸ್ಥೆ ಈ ವರ್ಷದ ಮೊದಲ ಕಾಣಿಕೆಯಾಗಿ ಯುವ ಸಾಹಿತಿ ನರೇಂದ್ರ ಕಬ್ಬಿನಾಲೆ ಅವರ ಬಾನ ಚಂದ್ರೆ ತೆಲಿಪುನಾನಿ ಎನ್ನುವ ತಾಯಿ ಮಕ್ಕಳ ಬಾಂಧವ್ಯದ ಮಧುರ ಗೀತೆಯನ್ನು ಹೆಣ್ಣು ತನ್ನೆಲ್ಲಾ ಆಸೆ ಆಕಾಂಕ್ಷೆಗಳನ್ನು ತನ್ನ ಸಾಂಸಾರಿಕ ಜೀವನದ ಒತ್ತೆಯಿಡುತ್ತಾ ಗಂಡ ಮಕ್ಕಳ ನಗುವಲ್ಲಿ ಬೆಳದಿಂಗಳಂತೆ ಲೀನಳಾಗುವ ಚಿತ್ರಣದ ಹಾಡನ್ನು ಬಿಡುಗಡೆ ಗೊಳಿಸಲಿದೆ. ಪ್ರೇಮಲತಾ ದಿವಾಕರ್ ಈ ಹಾಡನ್ನು ಮಧುರವಾಗಿ ಸಂಯೋಜಿಸಿದ್ದು ಪ್ರಖ್ಯಾತ ಗಾಯಕಿ ಮಾಲಿನಿ ಕೇಶವ ಪ್ರಸಾದ್ ಅವರ ಧ್ವನಿಯಲ್ಲಿ ಮುದ್ರಿಸಲಾಗಿದೆ. ಪ್ರಮೋದ್ ಸಹಕಾರದಲ್ಲಿ ನಿಶಾಂತ್ ಕ್ಯಾಲಿಕಟ್ ಅವರ ವಾದ್ಯ ಸಂಗೀತವಿದ್ದು ಹಾಡನ್ನು ಮಹಿಷಮರ್ದಿನಿ ದೇವಸ್ಥಾನ ಅಜ್ಜಾವರ ಸುಳ್ಯ ಇದರ ಧರ್ಮದರ್ಶಿ ಶ್ರೀ ಶಿವರಾಯ ಇವರು ಬಿಡುಗಡೆ ಗೊಳಿಸಲಿದ್ದಾರೆ.…
ವಿಶ್ವ ಬಂಟ ಸಮ್ಮೇಳನದ ಹಿನ್ನೆಲೆಯಲ್ಲಿ “ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ” ಕುರಿತ ವಿಚಾರ ಸಂಕಿರಣವು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಜರುಗಿತು. ಹೇರಂಬ ಇಂಡಸ್ಟ್ರೀಸ್ ಲಿ. ಮುಂಬೈ ಇದರ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು. ಅಧ್ಯಕ್ಷತೆಯನ್ನು ವಿಸ್ವತ್ ಕೆಮಿಕಲ್ಸ್ ಲಿ, ಮುಂಬೈ ಇದರ ಸಿಎಂಡಿ ಬಿ.ವಿವೇಕ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ, ಭಾಸ್ಕರ ರೈ ಕುಕ್ಕುವಳ್ಳಿ ಅವರು ಪ್ರಸ್ತಾವನೆಗೈದು “ಇವತ್ತಿನ ಶಿಕ್ಷಣ ಎತ್ತ ಸಾಗುತ್ತಿದೆ, ನಿರುದ್ಯೋಗವನ್ನೇ ಸೃಷ್ಟಿ ಮಾಡುವ ಶಿಕ್ಷಣ ಸಂಸ್ಥೆಗಳು ಉದ್ಯೋಗ ಕಲ್ಪಿಸುವುದು ಹೇಗೆ? ಇಲ್ಲಿ ಕಲಿತ ಅರ್ಹ ಯುವಕರಿಗೆ ಉದ್ಯೋಗ ಸಿಗದೆ ವಿದೇಶಕ್ಕೆ ಹೋಗಬೇಕಾಗುತ್ತದೆ. ಇದನ್ನು ಪ್ರತಿಭಾ ಪಲಾಯನ ಎನ್ನುತ್ತಾರೆ. ಪ್ರತಿಭಾವಂತ ಬಂಟ ಸಮುದಾಯದ ಯುವಕರನ್ನು ನಮ್ಮ ಸಮಾಜದ ಅಭಿವೃದ್ಧಿಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ವಿಚಾರ ವಿನಿಮಯ ನಡೆಯಬೇಕು”…















