Author: admin

ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಬಜೆಟ್‌ ಮೇಲೆ ಚರ್ಚಿಸಲು ಸೋಮವಾರ ಸ್ಪೀಕರ್‌ ಯು.ಟಿ ಖಾದರ್‌ ಅವಕಾಶ ಮಾಡಿಕೊಟ್ಟರು. ಈ ವೇಳೆ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಅವರು ಕೋಳಿ ಕಥೆ ಹೇಳಿ ಸರ್ಕಾರಕ್ಕೆ ಅಭಿವೃದ್ದಿ ಪಾಠ ಮಾಡಿ ಗಮನ ಸೆಳೆದರು. ಬಡವರ ಮನೆಗೆ ಅಕ್ಕಿ ಮುಟ್ಟಿಸುವ ಯೋಚನೆ ಮತ್ತು ಯೋಜನೆ ಯಾವುದೇ ಸರ್ಕಾರ ಮಾಡಿದ್ದರೂ ಅಭಿನಂದನೀಯ. ಆದರೆ, ಯಾವುದೇ ದೇಶ ಅಥವಾ ರಾಜ್ಯದ ಬಂಡವಾಳ ವೆಚ್ಚ ಹೆಚ್ಚಾದರಷ್ಟೇ ಅಭಿವೃದ್ಧಿ ಸಾಧ್ಯ. ನಮ್ಮಲ್ಲಿ ವಿದ್ಯಾಕೇಂದ್ರಗಳು ಸಾಕಷ್ಟಿವೆ. ಮೀನುಗಾರಿಕೆ ಸೇರಿದಂತೆ ಹಲವು ಉದ್ಯಮಗಳಿವೆ. ದುಡಿಯುವ ಕೈಗಳಿಗೆ ಆಧಾರ ಕೊಟ್ಟರೆ ಬಡತನ ದೂರಾಗುತ್ತದೆ. ಜನಪ್ರಿಯ ಯೋಜನೆಗಳು ಬಡತನವನ್ನು ಅಣಕಿಸುತ್ತಿವೆಯೋ? ಆಡಳಿತವನ್ನು ಅಣಕಿಸುತ್ತಿವೆಯೋ ಎಂದು 5 ಗ್ಯಾರಂಟಿಗಳ ಹೆಸರು ಹೇಳದೆಯೇ ಟೀಕಿಸಿದರು. ಇದನ್ನು ಪುಷ್ಟೀಕರಿಸುವಂತೆ ಕಥೆಯೊಂದನ್ನೂ ಹೇಳಿದ ಅವರು, ಕೋಳಿಯ ಪುಕ್ಕ ಕಿತ್ತಾಗ ಜೀವಂತ ಕೋಳಿ ನೋವಿನಿಂದ ಒದ್ದಾಡುತ್ತಿರುತ್ತದೆ. ಪುಕ್ಕ ಕಿತ್ತ ನಂತರ ಅದೇ ವ್ಯಕ್ತಿ ಎರಡೆರಡು ಅಕ್ಕಿ ಕಾಳು ಹಾಕುತ್ತಾ ಹೋಗುತ್ತಾನೆ. ಆ ಕೋಳಿಯೂ…

Read More

ಮೂರು ವರ್ಷ ಪ್ರಾಕೃತಿಕ ವಿಕೋಪ, ನೆರೆ, ಕೊರೊನಾ ಹಾವಳಿಯ ನಡುವೆಯೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ 2,250 ಕೋಟಿ ರೂ. ಅನುದಾನ ತರುವಲ್ಲಿ ಸಫಲನಾಗಿದ್ದೇನೆ ಎಂದು ಶಾಸಕ ಡಾ. ಭರತ್‌ ಶೆಟ್ಟಿ ವೈ. ಹೇಳಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತ ಪ್ರಗತಿ ಪಥ ಕೈಪಿಡಿಯನ್ನು ಬಿಡುಗಡೆ ಗೊಳಿಸಿ ಅವರು ಮಾತನಾಡಿದರು. ಶಾಶ್ವತ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕ್ಷೇತ್ರದಾದ್ಯಂತ ಸಮರೋಪಾದಿಯಾಗಿ ಆಗಿದೆ. ಜಲಜೀವನ್‌, ಜಲಸಿರಿ ಕುಡಿ ಯುವ ನೀರು, ಬೀಚ್‌ ಟೂರಿಸಂ, ಪಾರ್ಕ್‌ ಅಭಿವೃದ್ಧಿ, ಚರಂಡಿ ಯೋಜನೆ, ಕೆರೆಗಳ ಅಭಿವೃದ್ಧಿ, ತ್ಯಾಜ್ಯ ಸಂಸ್ಕರಣೆ ಘಟಕ, ಐತಿಹಾಸಿಕ ಇತಿಹಾಸ ಸಾರುವ ಪ್ರಮುಖ ಜಂಕ್ಷನ್‌ಗಳ ಅಭಿವೃದ್ಧಿ ಇತ್ಯಾದಿಗೆ ಆದ್ಯತೆ ನೀಡಿದ್ದೇನೆ. ಮುಡಾ, ಸ್ಮಾರ್ಟ್‌ ಸಿಟಿ ಅನುದಾನವನ್ನೂ ಇದಕ್ಕಾಗಿ ಬಳಸಿಕೊಂಡು ಕೆರೆ, ಪಾರ್ಕ್‌ ಅಭಿವೃದ್ಧಿ ಮಾಡಲಾಗಿದೆ, ಕ್ಷೇತ್ರದ ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗಿರುತ್ತದೆ ಎಂದರು. ರಾಜ್ಯದ ಪ್ರಪ್ರಥಮ ಹೈಟೆಕ್‌ ಬಸ್‌ ನಿಲ್ದಾಣ ನಿರ್ಮಾಣ, ರಾಜ್ಯದ 2ನೇ ಒಣತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ, 6,500 ಕುಟುಂಬಕ್ಕೆ ಹಕ್ಕು…

Read More

ಪುಷ್ಕರ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಹೇಮಂತ್ ಎಂ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಕನ್ನಡ ಸಿನಿಮಾದ ಎರಡನೇ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಚೈತ್ರಾ ಆಚಾರ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್, ರಮೇಶ್, ಇಂದಿರಾ, ಗೋಪಾಲ್ ಕೃಷ್ಣ ದೇಶಪಾಂಡೆ, ಅವಿನಾಶ್ ಮತ್ತು ಇತರರು ಪೋಷಕ ಪಾತ್ರದಲ್ಲಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವನ್ನು ಪುಷ್ಕರ ಮಲ್ಲಿಕಾರ್ಜುನಯ್ಯ ನಿರ್ಮಿಸಿದ್ದಾರೆ, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿದೆ. ಚಿತ್ರವು ಇಬ್ಬರು ಪ್ರಬಲ ವ್ಯಕ್ತಿಗಳ ಪ್ರೇಮಕಥೆಯ ಮೇಲೆ ಕೇಂದ್ರೀಕೃತವಾಗಿದೆ. ಅವರು ದೂರದಲ್ಲಿದ್ದರೂ ಪ್ರೀತಿಯ ಪರೀಕ್ಷೆಯನ್ನು ಎದುರಿಸುತ್ತಾರೆ. ಪರಂವಾ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಕನ್ನಡ ಸಿನಿಮಾ ‘ಇಬ್ಬನಿ ತಬ್ಬಿದ ಇಳೆಯಲಿ’ ಪೋಸ್ಟರ್ ಬಿಡುಗಡೆಯಾಗಿದೆ. ಇಬ್ಬನಿ ತಬ್ಬಿದ ಇಳೆಯಲಿ ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಕನ್ನಡ ರೋಮ್ಯಾಂಟಿಕ್ ಸಿನಿಮಾ. ಸಿನಿಮಾ ನಿನ್ನೆ, ಇಂದು ಮತ್ತು ನಾಳೆಯ…

Read More

ಇತ್ತೀಚೆಗೆ ಒಂದು ಫೇಸ್ಬುಕ್ ಪೋಸ್ಟ್ ನೋಡ್ತಾ ಇದ್ದೆ. ಅದ್ರಲ್ಲಿ ಕಮೆಂಟ್ ಸೆಕ್ಷನ್ ಅಲ್ಲಿದ್ದ ನೆಗೆಟಿವ್ ಕಮೆಂಟ್ಗಳಿಗೆಲ್ಲ ಆ ಪೋಸ್ಟ್ ಮಾಡಿದ ವ್ಯಕ್ತಿ ಖಾರವಾದ ಪ್ರತಿಕ್ರಿಯೆ ನೀಡ್ತಾ ಇದ್ರು. ಪುನಃ ಆ ಕಮೆಂಟ್ಗಳಿಗೆ ಮತ್ತೆ ವಾದಿಗಳು , ಪ್ರತಿವಾದಿಗಳು ಹೀಗೆ ಪಟ್ಟಿ ಬೆಳೀತಾನೆ ಇತ್ತು .. ಕೊನೆಗೆ ಗೆಲುವು ಯಾರದ್ದು ಅಂತ ಕೇಳಿದ್ರೆ ಅದು ಕೊನೆಯಿರದ ಯುದ್ಧ ಅಷ್ಟೇ.. ಕಮೆಂಟ್ಗಳಿಗೆ, ಬೇರೆಯವರ ಮಾತುಗಳಿಗೆ ತಲೆ ಕೆಡಿಸಿಕೊಳ್ಳದೆ ಇರೋದು ಜೀವನದಲ್ಲಿ ಎಲ್ಲರಿಗೂ ಇರಲೇಬೇಕಾಗಿರುವ ಗುಣ ಅಂದ್ರೆ ಒಪ್ತೀರಿ ಅಲ್ವಾ , ಅದು ಜೀವನ ಬೇಕಾದ್ರೂ ಆಗಿರಲಿ ಅಥವಾ ಸಾಮಾಜಿಕ ಜಾಲತಾಣಗಳು ಬೇಕಾದರೂ ಆಗಿರಲಿ. ಚಿಕ್ಕ ವಯಸ್ಸಿನಲ್ಲಿ ನನಗೆ ಯಾರಾದರೂ ನನ್ನ ವಿಚಾರವಾಗಿ ಕಮೆಂಟ್ಗಳನ್ನು ಮಾಡಿದಾಗ, ತಮ್ಮ ಅಭಿಪ್ರಾಯಗಳನ್ನು ಅನಗತ್ಯ ವಾಗಿ ಹೇರಿದಾಗ ಅದನ್ನ ಸ್ವೀಕರಿಸುವುದಕ್ಕೆ ಬಹಳ ಕಷ್ಟ ಆಗ್ತಿತ್ತು. ಕೋಪ ಬರ್ತಾ ಇತ್ತು ಬೇಜಾರ್ ಆಗ್ತಾ ಇತ್ತು. ಎಲ್ಲೋ ಒಂದು ಕಡೆ ಕೀಳರಿಮೆ ಕೂಡ ಕಾಡ್ತಿತ್ತು. ಆತ್ಮವಿಶ್ವಾಸದ ಮೇಲೆ ಒಂದು ರೀತಿ ಹೊಡೆತ ಬಿದ್ದಂತಹ…

Read More

ಮುಂಬಯಿ (ಆರ್‍ಬಿಐ), ಜ.25: ಐಲೇಸಾ-ದಿ ವಾಯ್ಸ್ ಆಫ್ ಓಷನ್ (ರಿ). ಡಿಜಿಟಲ್ ಸಂಸ್ಥೆಯು ಇದೇ ಶನಿವಾರ (ಜ.28) ಝೂಮ್ ಡಿಜಿಟಲ್ ವೇದಿಕೆಯಲ್ಲಿ `ಬಾನ ಚಂದ್ರೆ ತೆಲಿಪುನಾನಿ’ ತುಳು ಹಾಡು ಬಿಡುಗಡೆ ಮಾಡಲಿದೆ. ಕಳೆದ ವರ್ಷ ಹನ್ನೊಂದು ತುಳು ಹಾಡುಗಳನ್ನು ಬಿಡುಗಡೆ ಗೊಳಿಸಿದ ಐಲೇಸಾ ಸಂಸ್ಥೆ ಈ ವರ್ಷದ ಮೊದಲ ಕಾಣಿಕೆಯಾಗಿ ಯುವ ಸಾಹಿತಿ ನರೇಂದ್ರ ಕಬ್ಬಿನಾಲೆ ಅವರ ಬಾನ ಚಂದ್ರೆ ತೆಲಿಪುನಾನಿ ಎನ್ನುವ ತಾಯಿ ಮಕ್ಕಳ ಬಾಂಧವ್ಯದ ಮಧುರ ಗೀತೆಯನ್ನು ಹೆಣ್ಣು ತನ್ನೆಲ್ಲಾ ಆಸೆ ಆಕಾಂಕ್ಷೆಗಳನ್ನು ತನ್ನ ಸಾಂಸಾರಿಕ ಜೀವನದ ಒತ್ತೆಯಿಡುತ್ತಾ ಗಂಡ ಮಕ್ಕಳ ನಗುವಲ್ಲಿ ಬೆಳದಿಂಗಳಂತೆ ಲೀನಳಾಗುವ ಚಿತ್ರಣದ ಹಾಡನ್ನು ಬಿಡುಗಡೆ ಗೊಳಿಸಲಿದೆ. ಪ್ರೇಮಲತಾ ದಿವಾಕರ್ ಈ ಹಾಡನ್ನು ಮಧುರವಾಗಿ ಸಂಯೋಜಿಸಿದ್ದು ಪ್ರಖ್ಯಾತ ಗಾಯಕಿ ಮಾಲಿನಿ ಕೇಶವ ಪ್ರಸಾದ್ ಅವರ ಧ್ವನಿಯಲ್ಲಿ ಮುದ್ರಿಸಲಾಗಿದೆ. ಪ್ರಮೋದ್ ಸಹಕಾರದಲ್ಲಿ ನಿಶಾಂತ್ ಕ್ಯಾಲಿಕಟ್ ಅವರ ವಾದ್ಯ ಸಂಗೀತವಿದ್ದು ಹಾಡನ್ನು ಮಹಿಷಮರ್ದಿನಿ ದೇವಸ್ಥಾನ ಅಜ್ಜಾವರ ಸುಳ್ಯ ಇದರ ಧರ್ಮದರ್ಶಿ ಶ್ರೀ ಶಿವರಾಯ ಇವರು ಬಿಡುಗಡೆ ಗೊಳಿಸಲಿದ್ದಾರೆ.…

Read More

ವಿಶ್ವ ಬಂಟ ಸಮ್ಮೇಳನದ ಹಿನ್ನೆಲೆಯಲ್ಲಿ “ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ” ಕುರಿತ ವಿಚಾರ ಸಂಕಿರಣವು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಜರುಗಿತು. ಹೇರಂಬ ಇಂಡಸ್ಟ್ರೀಸ್ ಲಿ. ಮುಂಬೈ ಇದರ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು. ಅಧ್ಯಕ್ಷತೆಯನ್ನು ವಿಸ್ವತ್ ಕೆಮಿಕಲ್ಸ್ ಲಿ, ಮುಂಬೈ ಇದರ ಸಿಎಂಡಿ ಬಿ.ವಿವೇಕ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ, ಭಾಸ್ಕರ ರೈ ಕುಕ್ಕುವಳ್ಳಿ ಅವರು ಪ್ರಸ್ತಾವನೆಗೈದು “ಇವತ್ತಿನ ಶಿಕ್ಷಣ ಎತ್ತ ಸಾಗುತ್ತಿದೆ, ನಿರುದ್ಯೋಗವನ್ನೇ ಸೃಷ್ಟಿ ಮಾಡುವ ಶಿಕ್ಷಣ ಸಂಸ್ಥೆಗಳು ಉದ್ಯೋಗ ಕಲ್ಪಿಸುವುದು ಹೇಗೆ? ಇಲ್ಲಿ ಕಲಿತ ಅರ್ಹ ಯುವಕರಿಗೆ ಉದ್ಯೋಗ ಸಿಗದೆ ವಿದೇಶಕ್ಕೆ ಹೋಗಬೇಕಾಗುತ್ತದೆ. ಇದನ್ನು ಪ್ರತಿಭಾ ಪಲಾಯನ ಎನ್ನುತ್ತಾರೆ. ಪ್ರತಿಭಾವಂತ ಬಂಟ ಸಮುದಾಯದ ಯುವಕರನ್ನು ನಮ್ಮ ಸಮಾಜದ ಅಭಿವೃದ್ಧಿಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ವಿಚಾರ ವಿನಿಮಯ ನಡೆಯಬೇಕು”…

Read More

ಕಾರ್ಕಳ ಬಂಟರ ಸಂಘದ ವತಿಯಿಂದ ಆಟಿಡೊಂಜಿ ಬಂಟ ಕೂಟ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿ ಭಾನುವಾರ ನಡೆಯಿತು. ಮಂಗಳೂರು ತಾಲೂಕು ಬಂಟರ ಸಂಘದ ಸಂಚಾಲಕ ವಸಂತ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜವನ್ನು ಮುನ್ನೆಡೆಸುವ ಜವಾಬ್ದಾರಿ ವಿದ್ಯಾರ್ಥಿಗಳು ಮತ್ತು ಯುವಜನತೆ ಮೇಲಿದೆ. ಬಂಟ ಸಮಾಜದ ಪ್ರತಿಯೊಬ್ಬರೂ ಆರ್ಥಿಕ ಸಾಮಾಜಿಕ ಕಾಣುವಲ್ಲಿ ಸಂಘವು ಪ್ರಯತ್ನಸ ಬೇಕಾಗಿದೆ. ಬಾಲ್ಯದಿಂದಲೇ ಮಕ್ಕಳಿಗೆ ಸಂಘದ ತಿಳುವಳಿಕೆಯ ಜತೆಗೆ ಸಾಮಾಜಿಕ ಜ್ಞಾನವನ್ನು ನೀಡಿದಾಗ ಸಾಮಾಜಿಕ ಪರಿವರ್ತನೆ ಸಾಧ್ಯ. ಈ ನಿಟ್ಟಿನಲ್ಲಿ ಹೆತ್ತವರು ಕೂಡ ಪ್ರಯತ್ನಿಸಬೇಕು. ನಾವು ನಡೆದು ಬಂದ ದಾರಿಯ ಬಗ್ಗೆ ಅವರಿಗೆ ತಿಳಿ ಹೇಳುವ ಕೆಲಸವಾಗಬೇಕು ಎಂದರು. ಬಂಟರ ಸಂಘದ ನಿಕಟಪೂರ್ವ ಸಂಚಾಲಕ ಮಣಿರಾಜ್ ಶೆಟ್ಟಿ ಕಾರ್ಕಳ, ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ರಾಜ್ಯ ಸ್ಟೋನ್ ಆಂಡ್ ಕ್ರಷರ್ ರಾಜ್ಯ ಘಟಕದ ಅಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ, ಬಂಟರ ಮಾತೃ ಸಂಘದ ಸದಸ್ಯ ಚೇತನ್ ಶೆಟ್ಟಿ ಕೊರಳ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸವಿತಾ ಶೆಟ್ಟಿ,…

Read More

ಕರ್ನಾಟಕ ಕರಾವಳಿಯ ಆಟಿ ತಿಂಗಳಿಗೆ ಕ್ಷಣಗಣನೆ ಆರಂಭವಾಗಿದೆ. ಜಡಿ ಮಳೆಯ ನಡುವೆ ಆಂಗ್ಲ ಕ್ಯಾಲೆಂಡರಿನ ಜುಲೈ- ಆಗಸ್ಟ್‌ ನಡುವೆ ಮತ್ತು ಸಾಂಪ್ರದಾಯಿಕ ತುಳುವಿನ ನಾಲ್ಕನೆಯ ತಿಂಗಳು. ಈ ಹಿಂದಿನ ಕಾಲಘಟ್ಟದಲ್ಲಿ ಪ್ರಚಲಿತ ಆಧುನಿಕ ಜೀವನ ಶೈಲಿಯ ಆಟಿ ಆಚರಣೆಗೂ ಬಹಳಷ್ಟು ವ್ಯತ್ಯಾಸಗಳು ಕಾಲ ಸಹಜವಾಗಿ ಉಂಟಾಗಿದೆ. ಇದು ಸಹಜ ಮತ್ತು ಅನಿವಾರ್ಯ ಕೂಡ. ಆದರೆ ಈ ಆಟಿ ಅನ್ನುವುದು ತುಳುನಾಡಿನ ಸಂಪ್ರದಾಯ ಮತ್ತು ಪರಂಪರೆಯ ಮಹತ್ವದ ಕೊಂಡಿ ಎಂಬ ಬಗ್ಗೆ ಎರಡು ಮಾತಿಲ್ಲ. ಈ ಬಗ್ಗೆ ಪುಟ್ಟ ಇಣುಕು ನೋಟ ಇಲ್ಲಿ ಪ್ರಸ್ತುತವಾಗಬಹುದು. ಸುಮಾರು ನಾಲ್ಕೈದು ದಶಕಗಳ ಹಿಂದಿನ ವರೆಗೂ ಈ ಆಟಿ ಅನ್ನುವುದು ದುಡಿಯುವ ಶ್ರಮಿಕ; ಬೇಸಾಯವೇ ಪ್ರಧಾನವಾಗಿದ್ದ, ಆರ್ಥಿಕವಾಗಿ ಸಶಕ್ತವಲ್ಲದ ಕುಟುಂಬಗಳಿಗೆ ಪ್ರಯಾಸಕರ ಆಗಿತ್ತು. ಆಗ ತಾನೇ ಏಣಿಲು ಭತ್ತದ ಉಳುಮೆ- ನಾಟಿ ಕಾರ್ಯ ಪೂರ್ಣಗೊಂಡು ನಿರ್ದಿಷ್ಟ ವರ್ಗಕ್ಕೆ ಆದಾಯ ಮೂಲವಿರಲಿಲ್ಲ. ನಿಜ ಅರ್ಥದ ಕಷ್ಟ ಕಾರ್ಪಣ್ಯದ ದಿನಗಳು. ಧೋ ಎಂದು ಸುರಿಯುವ ಮಳೆಯ ನಡುವೆ ಕೆಲಸ ಕಾರ್ಯಗಳಿಲ್ಲ;…

Read More

ಶಿವಶಾಂತಿ ಲಯನ್ಸ್ ಕ್ಲಬ್ ಮೊಳಹಳ್ಳಿ ಹುಣ್ಸೆಮಕ್ಕಿ ಇದರ 2023-24ನೇ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹೊಂಬಾಡಿ ಮಂಡಾಡಿಯಲ್ಲಿ ಇತ್ತೀಚಿಗೆ ಜರುಗಿತು. ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ಲಯನ್ ಎಸ್. ರತ್ನಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಲಯನ್ ದಯಾನಂದ, ಕೋಶಾಧಿಕಾರಿಯಾಗಿ ಲಯನ್ ಅನಿಲ್ ಕುಮಾರ್ ಶೆಟ್ಟಿ ಅವರಿಗೆ ಡಿಸ್ಟಿಕ್ಟ್ 317 ಸಿ ಇದರ ಚೀಫ್ ಕೋ ಆರ್ಡಿನೇಟರ್ ಆಗಿರುವ ಲಯನ್ ಸುನೀಲ್ ಕುಮಾರ್ ಶೆಟ್ಟಿ ಪ್ರಮಾಣ ವಚನ ಬೋಧಿಸಿದರು. ಬಿ. ಅರುಣ್ ಕುಮಾರ್ ಹೆಗ್ಡೆ, ಎಚ್. ದೀನ್ ಪಾಲ್ ಶೆಟ್ಟಿ, ಯು. ಮೋಹನ್ ದಾಸ್ ಶೆಟ್ಟಿ, ಇಂಜಿನಿಯರ್ ರತ್ನಾಕರ್ ಶೆಟ್ಟಿ, ಶಂಕರ ಶೆಟ್ಟಿ, ಎಚ್. ಬಾಲಕೃಷ್ಣ ಹೆಗ್ಡೆ, ಸುದೀರ್ ಕುಮಾರ್ ಶೆಟ್ಟಿ, ರಜತ್ ಹೆಗ್ಡೆ ಹಾಗೂ ಕ್ಲಬ್ಬಿನ ಸದಸ್ಯರು ಇದ್ದರು.

Read More

ಸುರತ್ಕಲ್ ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಜೂನ್ 4 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಮಹಾಸಭೆ, ಸಂಜೆ 5 ಗಂಟೆಗೆ ಬಂಟರ ಭವನದಲ್ಲಿ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಡೆಯಲಿದೆ. ಸಮಾರಂಭವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ) ನ ಸ್ಥಾಪಕಾಧ್ಯಕ್ಷ ಎ ಸದಾನಂದ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ, ಬಂಟರ ಸಂಘ ಮುಂಬೈ ಪೂರ್ವ ವಲಯದ ಸಮನ್ವಯಕ ಸುಬ್ಬಯ್ಯ ಎ ಶೆಟ್ಟಿ, ಹುಬ್ಬಳ್ಳಿ ಪಂಜುರ್ಲಿ ಗ್ರೂಪ್ಸ್ ನ ಮಾಲಕ ರಾಜೇಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಶೈಕ್ಷಣಿಕ ಮತ್ತು ವಿವಿಧ…

Read More