Author: admin

ಯುಎಇ ಬಂಟ್ಸ್ ವತಿಯಿಂದ ಬ್ಯಾಡ್ಮಿಂಟನ್ ಮತ್ತು ವಾಲಿಬಾಲ್ ಪಂದ್ಯಾವಳಿಗಳು ಸೆಪ್ಟೆಂಬರ್ 21 ರಂದು ದುಬೈಯ ಅಲ್ ಇತಿಯಾದ್ ಪ್ರೈವೇಟ್ ಶಾಲೆ ಮಮ್ಜಾರ್ ನಲ್ಲಿ ಯಶಸ್ವಿಯಾಗಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಯುಎಇ ಬಂಟ್ಸ್ ನ ಪೋಷಕರಾದ ಸರ್ವೋತ್ತಮ ಶೆಟ್ಟಿ ಮತ್ತು ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ ದೀಪವನ್ನು ಬೆಳಗಿಸುವ ಮೂಲಕ ಕ್ರೀಡಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಯುಎಇ ಬಂಟ್ಸ್ ನ ಪದಾಧಿಕಾರಿಗಳಾದ ಪ್ರೇಮನಾಥ್ ಶೆಟ್ಟಿ, ದಿನೇಶ್ ಶೆಟ್ಟಿ ಕೊಟ್ಟಿಂಜ, ರವಿರಾಜ್ ಶೆಟ್ಟಿ, ವಾಸು ಶೆಟ್ಟಿ, ಗುಣಶೀಲ್ ಶೆಟ್ಟಿ, ಕ್ರೀಡಾ ಕಾರ್ಯಕ್ರಮದ ಸಂಘಟಕರಾದ ಸುಪ್ರಜ್ ಶೆಟ್ಟಿ ಉಪಸ್ಥಿತರಿದ್ದರು. ಬೆಳಿಗ್ಗೆಯಿಂದ ರಾತ್ರಿ ಎಂಟು ಗಂಟೆಯವರೆಗೆ ನಡೆದ ಬ್ಯಾಡ್ಮಿಂಟನ್ ಮತ್ತು ವಾಲಿಬಾಲ್ ಪಂದ್ಯಾಟದಲ್ಲಿ ಹದಿನೈದು ವರ್ಷ ಒಳಗಿನ ಹೆಣ್ಮಕ್ಕಳ ಸಿಂಗಲ್ ಪಂದ್ಯಾಟದಲ್ಲಿ ಸಾಂಚಿ ದಯಾಕರ ಶೆಟ್ಟಿ ವಿನ್ನರ್, ಅನ್ನಿ ಶೆಟ್ಟಿ ರನ್ನರ್ ಅಪ್, ಗಂಡಸರ ಸಿಂಗಲ್ ಪಂದ್ಯಾಟದಲ್ಲಿ ಯತಾರ್ಥ್ ಶೆಟ್ಟಿ ವಿನ್ನರ್, ಆಯುಷ್ ಶೆಟ್ಟಿ ರನ್ನರ್ ಅಪ್, ಹದಿನೈದು ವರ್ಷದಿಂದ ಐವತ್ತು…

Read More

ನಿಮ್ಮ ಹೃದಯವೇ ನಿಮ್ಮ ಜೀವನ. ಅದನ್ನು ಆರೋಗ್ಯಕರವಾಗಿ ಕಾಯ್ದುಕೊಳ್ಳಲು ತಪಾಸಣೆ ಮತ್ತು ಸರಿಯಾದ ಜೀವನ ಶೈಲಿ ಬಹಳ ಮುಖ್ಯ. ಈ ಶಿಬಿರದ ಮೂಲಕ ನಾವು ಪುತ್ತೂರು ಜನತೆಗೆ ಹೃದಯ ಆರೋಗ್ಯ ಜಾಗೃತಿ ಮೂಡಿಸಲು ಬದ್ಧರಾಗಿದ್ದೇವೆ. ಪ್ರತಿ ವರ್ಷ ಸೆಪ್ಟೆಂಬರ್ 29ರಂದು ಆಚರಿಸಲಾಗುವ ವಿಶ್ವ ಹೃದಯ ದಿನದ ಅಂಗವಾಗಿ ಡಾ. ರೈ ಹೋಮಿಯೋಪಥಿ ಸೆಂಟರ್ ನ ತಜ್ಞ ವೈದ್ಯರು ವಿಶೇಷ ಹೃದಯ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಿದ್ದಾರೆ. ಈ ಶಿಬಿರವು ಸೆಪ್ಟೆಂಬರ್ 27 ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ನಡೆಯಲಿದೆ. ಶಿಬಿರದ ವಿಶೇಷತೆಗಳು: ಉಚಿತ ಬಿ.ಪಿ ತಪಾಸಣೆ, ಉಚಿತ ಹೋಮಿಯೋಪಥಿಕ್ ಸಲಹೆ ಮತ್ತು ಮಾರ್ಗದರ್ಶನ, ರಿಯಾಯಿತಿ ದರದಲ್ಲಿ ಹೋಮಿಯೋಪಥಿಕ್ ಔಷಧಿ ಲಭ್ಯತೆ. ರಕ್ತದೊತ್ತಡ, ಹೆಚ್ಚಿದ ಕೊಲೆಸ್ಟ್ರಾಲ್, ಮಕ್ಕಳ ಆನುವಂಶಿಕ ಹೃದಯ ಕಾಯಿಲೆಗಳು, ಬೊಜ್ಜುತನ, ಉಸಿರಾಟದ ತೊಂದರೆ, ಹೃದಯಾಘಾತ ತಡೆಗಟ್ಟುವ ಮಾರ್ಗಗಳು ಇತ್ಯಾದಿಗಳ ಬಗ್ಗೆ ವಿಶೇಷ ಪ್ರಾಮುಖ್ಯತೆಯನ್ನು ಈ ಶಿಬಿರದಲ್ಲಿ ನೀಡಲಾಗುವುದು ಎಂದು ಪತ್ರಿಕಾ…

Read More

ಆಳ್ವಾಸ್ ಪಿಯು ಕಾಲೇಜಿನಲ್ಲಿ ನಡೆದ ನಾಟಾ ಪರೀಕ್ಷೆಯ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ವಾಸ್ತುಶಿಲ್ಪ ಕ್ಷೇತ್ರದ ಭವಿಷ್ಯ ಹಾಗೂ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು. ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಚರ್‌ನ ನಿರ್ದೇಶಕ ವಿನೋದ್ ರ‍್ಹಾನ ಮಾತನಾಡಿ, ವಾಸ್ತುಶಿಲ್ಪದಲ್ಲಿ ತಾಂತ್ರಿಕ ಜ್ಞಾನ, ಸೃಜನಶೀಲತೆ ಹಾಗೂ ಕಲಾತ್ಮಕ ಚಿಂತನೆಯ ಸಮನ್ವಯ ಅಗತ್ಯ. ಪಿಯುಸಿ ನಂತರ ವಾಸ್ತುಶಿಲ್ಪ ಪದವಿಗೆ ಪ್ರವೇಶ ಪಡೆಯಲು ದೇಶದಾದ್ಯಂತ ನಡೆಯುವ ನಾಟಾ (NATA) ಹಾಗೂ ಜೆಇಇ ಬಿಆರ್ಕ್ (JEE B.Arch) ಪರೀಕ್ಷೆಗಳ ಮಹತ್ವವನ್ನು ವಿವರಿಸಿದರು. ನಾಟಾ ಪರೀಕ್ಷೆಯಲ್ಲಿ ಗಣಿತ, ರೇಖಾಚಿತ್ರ ದೃಶ್ಯಗ್ರಹಣ ಹಾಗೂ ತಾರ್ಕಿಕ ಚಿಂತನೆಗೆ ಸಂಬಂಧಿಸಿದ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಸಿದ್ಧತೆಗಾಗಿ ಸೂಕ್ತ ಮಾರ್ಗದರ್ಶನ ಒದಗಿಸಿದರು. ಬಿ.ಆರ್ಕ್ ಪದವಿಯ ಕುರಿತು ಮಾತನಾಡಿ, ಈ ಐದು ವರ್ಷದ ಕೋರ್ಸ್ ನಲ್ಲಿ ವಾಸ್ತು ವಿನ್ಯಾಸ, ನಗರ ಯೋಜನೆ, ಪರಿಸರ ಸ್ನೇಹಿ ನಿರ್ಮಾಣ ಮುಂತಾದ ಹಲವು ವಿಷಯಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ. ಬಿ.ಆರ್ಕ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ವಾಸ್ತುಶಿಲ್ಪಿ, ಒಳಾಂಗಣ ವಿನ್ಯಾಸಕರ, ನಗರ ಯೋಜನೆ ಮುಂತಾದ…

Read More

ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರು ಸಕ್ರೀಯವಾಗಿರಬೇಕು. ಭಾ.ಜ.ಪ ಕೇವಲ ರಾಜಕೀಯ ಪಕ್ಷವಾಗಿರದೆ ತತ್ವ ಸಿದ್ದಾಂತದ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸಕ್ರೀಯವಾಗಿದೆ. 20 ಕೋಟಿಗಿಂತಲೂ ಹೆಚ್ಚು ಸದಸ್ಯರನ್ನು ಹೊಂದಿರುವ ಬಿಜೆಪಿಯು ಜಗತ್ತಿನ ಅತೀ ದೊಡ್ಡ ಸಂಘಟಿತ ರಾಜಕೀಯ ಪಕ್ಷವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು ಮಾಣಿ ಮಹಾಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಕ್ತಿ ಕೇಂದ್ರದ ಪ್ರಮುಖ ಹರೀಶ್ ಕುಲಾಲ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಬಂಟ್ವಾಳ ಮಂಡಲ ಕಾರ್ಯದರ್ಶಿ ಸುದರ್ಶನ್ ಬಜ, ಮಾಣಿ ಶಕ್ತಿ ಕೇಂದ್ರದ ಅಧ್ಯಕ್ಷ ಅರವಿಂದ ರೈ, ಪ್ರಧಾನ ಕಾರ್ಯದರ್ಶಿ ನಾಗೇಶ ಭಂಡಾರಿ, ಮಹಿಳಾ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯೆ ಭವಾನಿ ಶೆಟ್ಟಿ ಉಪಸ್ಥಿತರಿದ್ದರು. ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವಪ್ಪ ಪೂಜಾರಿ, ವಿಕಾಸ್ ಪುತ್ತೂರು ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿ ವಿಷಯ…

Read More

ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನು ‘ಟೂರಿಸಂ ಹಬ್’ ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು. ಈ ಕುರಿತು ಶೀಘ್ರವೇ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲಾಗುವುದು. ಜಿಲ್ಲೆಗಳಲ್ಲಿ ಸಭೆ ನಡೆಸಲು ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವುದರಿಂದ ಅವರ ಮೂಲಕ ಸಭೆ ಕರೆದು ಅದಕ್ಕೆ ಸದಸ್ಯರನ್ನು ಆಹ್ವಾನಿಸಿ, ಪ್ರವಾಸೋದ್ಯಮ ಚಟುವಟಿಕೆ ಗಳಿಗಾಗಿ ಅನುದಾನವನ್ನು ವಿನಿಯೋಗಿಸುವ ಬಗ್ಗೆ ಯೋಜನೆ ಮಾಡಲಾಗುವುದು ಮತ್ತು ‘ರಿವರ್ ಫೆಸ್ಟ್ರವಲ್’ ಬಗ್ಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಜೀವಿಶಾಸ್ತ್ರ ಸಚಿವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ…

Read More

ಬಹು ನಿರೀಕ್ಷಿತ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಜಿ.ಎಲ್ ಮಹಲ್ ನ ಭಾರತ್ ಸಿನಿಮಾಸ್ ನಲ್ಲಿ ಸೆಪ್ಟೆಂಬರ್ 22 ರಂದು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನ್ಮಥ ಶೆಟ್ಟಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ಧರ್ಮಚಾವಡಿ ತುಳು ಸಿನಿಮಾ ನಿರ್ಮಾಪಕ ಜಗದೀಶ್ ಅಮೀನ್, ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ವಸಂತ್ ಮೂಲ್ಯ, ಸುದ್ದಿ ಬಿಡುಗಡೆ ದಿನಪತ್ರಿಕೆಯ ಹಿರಿಯ ವರದಿಗಾರ ಉಮಾಪ್ರಸಾದ್ ರೈ ನಡುಬೈಲು, ಪತ್ರಕರ್ತ ವಿ.ಜೆ ವಿಖ್ಯಾತ್, ಚಿತ್ರದ ನಿರ್ದೇಶಕ ರವಿಚಂದ್ರ ರೈ ಮುಂಡೂರು ಹಾಗೂ ಚಿತ್ರ ತಂಡದ ಎಲ್ಲಾ ಸದಸ್ಯರು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು. ಈ ಚಿತ್ರವು ಎರಡು ಹೌಸ್ ಫುಲ್ ಷೋಗಳನ್ನು ಕಂಡು ಜನರ ಪ್ರಶಂಸೆಗೆ ಪಾತ್ರವಾಯಿತು. ಚಿತ್ರದ ನಾಯಕಿ ಶ್ರೇಯಾ ಸುಳ್ಯ ಕಾರ್ಯಕ್ರಮ ನಿರೂಪಿಸಿದರು.

Read More

ಇಂದಿನ ಮಕ್ಕಳೇ ಮುಂದಿನ ಭವಿಷ್ಯ. ಇದನ್ನು ರೂಪಿಸುವಲ್ಲಿ ಅನೇಕ ತ್ಯಾಗಗಳೊಂದಿಗೆ ಶಿಕ್ಷಕರು ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತಾರೆ. ಯುವಶಕ್ತಿಗೆ ಪ್ರೇರಣಾ ಶಕ್ತಿ ಶಿಕ್ಷಕರು. ಅಂತಹ ಎಲ್ಲಾ ಶಿಕ್ಷಕರಿಗೆ ಶಿಕ್ಷಕ ರಕ್ಷಕ ಪದಾಧಿಕಾರಿಗಳ ನಮನ ಎಂದು ಪುಷ್ಪರಾಜ್ ಶೆಟ್ಟಿ ಮಧ್ಯ ಹೇಳಿದರು. ಇವರು ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಗೋವಿಂದದಾಸ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಆಡಳಿತ ನಿರ್ದೇಶಕ ಪ್ರೊ ರಮೇಶ್ ಭಟ್ ಇವರು ಶಿಕ್ಷಕರ ಕರ್ತವ್ಯವನ್ನು ನೆನಪಿಸಿದರು. ಈ ಸಂದರ್ಭ ಎಲ್ಲಾ ಅಧ್ಯಾಪಕರನ್ನು ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳಾದ ಇಸ್ಮಾಯಿಲ್, ಪ್ರದೀಪ್ ರಾವ್, ವಾಸುದೇವ ಶಾನುಭೋಗ, ಸವಿತಾ, ಲಕ್ಷ್ಮಿ, ವಿಭ ಗೌರವಿಸಿದರು. ಪ್ರಾಂಶುಪಾಲೆ ಲಕ್ಷ್ಮಿ ಪಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲೆ ಸುನಿತಾ ಕೆ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಗಂಗಾಧರ್ ಕೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧೃತಿ ಕೋಟ್ಯಾನ್ ಸ್ವಾಗತಿಸಿ, ಕುಮಾರಿ ಗ್ರೀಷ್ಮ ವಂದಿಸಿದರು. ಸುಜಾತ ಸತೀಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Read More

ಮುಂಬೈಯ ತುಳು ಕನ್ನಡಿಗರ ಪ್ರತಿಷ್ಠಿತ ಹಣಕಾಸು ಸಲಹೆಗಾರರೆಂದೇ ಪ್ರಸಿದ್ಧಿ ಪಡೆದ ಅಂತರಾಷ್ಟ್ರೀಯ ಖ್ಯಾತಿಯ ಆರ್ಥಿಕ ತಜ್ಞ, ಪ್ರಸಿದ್ಧ ಜೀವವಿಮಾ ಸಲಹೆಗಾರ ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಆರ್ ಕೆ ಶೆಟ್ಟಿ ಆಂಡ್ ಕಂಪನಿಯ ಆಡಳಿತ ನಿರ್ದೇಶಕ ಡಾ| ಆರ್ ಕೆ ಶೆಟ್ಟಿ ಅವರಿಗೆ ಭಾರತೀಯ ಜೀವವಿಮಾ ನಿಗಮದ ಎಲ್ಐಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಕ ಗೌರವ ಪುರಸ್ಕಾರ ಲಭಿಸಿದೆ. ಭಾರತೀಯ ಜೀವವಿಮಾ ನಿಗಮದ ಕೇಂದ್ರ ಕಚೇರಿ ವತಿಯಿಂದ ಮುಂಬೈ ನರಿಮಾನ್ ಪಾಯಿಂಟ್ ನ ಯೋಗ ಕ್ಷೇಮ ಸಭಾಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಅಧ್ಯಕ್ಷ ಆಲಿಸ್ಟೇರ್ ರಿಚರ್ಡ್ಸ್ ಸಹಿ ಹಾಕಿರುವ ಪ್ರಮಾಣ ಪತ್ರವನ್ನು ಎಲ್ಐಸಿ ಸಿಇಓ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ಮೋಹಂತಿ ಹಸ್ತಾಂತರಿಸಿ ಎಲ್ಐಸಿ ಗಿನ್ನಿಸ್ ಓಲ್ಡ್ ರೆಕಾರ್ಡ್ ಸಾಧನ ಗೌರವ ಪುರಸ್ಕಾರವನ್ನು ಡಾ| ಆರ್ ಕೆ ಶೆಟ್ಟಿ ಅವರಿಗೆ ಪ್ರಧಾನ ಮಾಡಿ ಅಭಿನಂದಿಸಿದರು. ಗ್ಲೋಬಲ್ ಇಂಡಿಯನ್ ಅವಾರ್ಡ್, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಹಾರಾಷ್ಟ್ರ…

Read More

ಚಿಣ್ಣರಬಿಂಬ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಒಂದು ಒಳ್ಳೆಯ ಕಾರ್ಯಕ್ರಮವನ್ನು ಮಾಡುತ್ತಾ ಇರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ನಿಸ್ವಾರ್ಥ ಮನೋಭಾವನೆ ಇರುವ ಈ ಸಂಸ್ಥೆ ನಮ್ಮ ಊರಿನ ನೆಲದ ಸಾರ ಹಾಗೂ ಜನಪದ ಸಂಸ್ಕೃತಿಯನ್ನು ಮಹಾರಾಷ್ಟ್ರದ ಮಣ್ಣಿನಲ್ಲಿ ನಮ್ಮ ಊರಿನ ಮಕ್ಕಳಿಗೆ ಕಲಿಸಿಕೊಡುವ ಕೆಲಸ ನಿಜವಾಗಿಯೂ ಶ್ಲಾಘನೀಯ. ಈ ಸಂಸ್ಥೆ ಇನ್ನಷ್ಟು ಹೆಮ್ಮರವಾಗಿ ಬೆಳೆಯಲಿ ಎಂದು ನಾನು ಆಶಿಸುತ್ತೇನೆ. ಈ ಸಂಸ್ಥೆಯಲ್ಲಿರುವ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಬಂಟರ ಸಂಘ ಮುಂಬಯಿ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ ಶೆಟ್ಟಿಯವರು ನುಡಿದರು. ಅವರು ಸೆಪ್ಟೆಂಬರ್ 14 ರಂದು ಭಾನುವಾರ ಸಮತ ವಿದ್ಯಾ ಮಂದಿರ ಸಾಕಿನಾಕದಲ್ಲಿ ನಡೆದ ಚಿಣ್ಣರಬಿಂಬ 2025- 26 ನೇ ಸಾಲಿನ ಸಾಕಿನಾಕ ಶಿಬಿರದ ಮಕ್ಕಳ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ನಾನು ತುಂಬಾ ಸಂಘ ಸಂಸ್ಥೆಗಳಿಗೆ ಭೇಟಿದಾಗ ಸಿಗುವ ಆನಂದಕ್ಕಿಂತ ಮಕ್ಕಳ ಈ ಸಂಸ್ಥೆಯಲ್ಲಿ ಸ್ವಲ್ಪ ಹೊತ್ತು ಕಳೆದದ್ದು ಖುಷಿಯನ್ನು ನೀಡಿದೆ. ಇಲ್ಲಿಯ ಮಕ್ಕಳ…

Read More

ಬಾರ್ಕೂರಿನಂತಹ ಐತಿಹಾಸಿಕ ಪ್ರದೇಶ ಚಾರಿತ್ರಿಕ ಕಾಲಘಟ್ಟದಲ್ಲಿ ತುಳುನಾಡಿನ ರಾಜಧಾನಿಯಾಗಿದ್ದು, ತನ್ನದೇ ವೈಶಿಷ್ಟತೆ ಹೊಂದಿದೆ ಎಂದು ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡು ಹೇಳಿದರು. ಬಾರ್ಕೂರಿನ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತುಳು ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ನಡೆದ ‘ಬಾರ್ಕೂರು ಮರೆಯಲಾಗದ ತುಳುನಾಡಿನ ರಾಜಧಾನಿ’ ಎಂಬ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗೋವಾ ವಿಶ್ವವಿದ್ಯಾಲಯದ ಕಲಾನಿಕಾಯದ ಡೀನ್ ಮತ್ತು ಇತಿಹಾಸಕಾರ ಪ್ರೊ ನಾಗೇಂದ್ರ ರಾವ್ ದಿಕ್ಸೂಚಿ ಭಾಷಣ ಮಾಡಿ ಬಾರ್ಕೂರಿನ ಸಾಂಸ್ಕೃತಿಕ, ಆರ್ಥಿಕ ಮತ್ತು ಭೌಗೋಳಿಕ ಅನನ್ಯತೆ, ತುಳುನಾಡು ಮತ್ತು ವಿಜಯನಗರ ಸಾಮ್ರಾಜ್ಯದ ನಡುವೆ ಬಾರ್ಕೂರು ಮುಖ್ಯ ಪ್ರದೇಶವಾಗಿದ್ದುದರ ಕುರಿತು ವಿವರಿಸಿದರು. ಸಂಸ್ಥೆಯ ಪ್ರಿನ್ಸಿಪಲ್ ಪ್ರೊ. ಭಾಸ್ಕರ್ ಶೆಟ್ಟಿ ಸಲ್ವಾಡಿ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮಹೇಶ್ ಉಡುಪ, ತುಳು ಅಕಾಡೆಮಿ ರಿಜಿಸ್ಟರ್ ಪೂರ್ಣಿಮಾ, ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಉಪಸ್ಥಿತರಿದ್ದರು. ವಿಚಾರ…

Read More