Author: admin
ಖ್ಯಾತ ಚುಟುಕು ಸಾಹಿತಿ, ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರ ನೇನೋ ಕತೆಗಳ ಸಂಕಲನ ‘ಕೋಲ್ಮಿಂಚು’ ಜನವರಿ 25 ರಂದು ಭಾನುವಾರ ಕದ್ರಿ ದೇವಾಲಯದ ಅಭಿಷೇಕ ಕಲಾಮಂದಿರದಲ್ಲಿ ನಡೆಯುವ ಸಾಹಿತ್ಯ ವೈಭವ – 2026 ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ದಿವ್ಯಹಸ್ತದಿಂದ ಬಿಡುಗಡೆಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಚು.ಸಾ.ಪ ಗೌರವಾಧ್ಯಕ್ಷರಾದ ಇರಾ ನೇಮು ಪೂಜಾರಿಯವರ ಚುಟುಕು ಕಾಮಿನಿ ಕಾವ್ಯಸಂಕಲನವನ್ನು ಡಾ| ಎ ಜನಾರ್ಧನ ಶೆಟ್ಟಿಯವರು ಬಿಡುಗಡೆಗೊಳಿಸಲಿರುವರು. ಕಾರ್ಯಕ್ರಮವನ್ನು ಎಸ್ ಗಣೇಶ್ ರಾವ್ ಉದ್ಘಾಟಿಸಲಿರುವರು. ಕಾರ್ಯಕ್ರಮದಲ್ಲಿ ಸದಾಶಿವ ಉಳ್ಳಾಲ್ ಮತ್ತು ಗೋಪಾಲಕೃಷ್ಣ ಶೆಟ್ಟಿ, ಡಾ| ಎಂ ಜಗದೀಶ್ ಶೆಟ್ಟಿ, ಶ್ರೀಮತಿ ಪುಷ್ಪಲತಾ ಮತ್ತು ನಾರಾಯಣಯ್ಯ ಮೂಳೂರು ಅತಿಥಿಗಳಾಗಿ ಆಗಮಿಸಲಿದ್ದು, ಚು.ಸಾ.ಪ ಸಂಚಾಲಕರಾದ ಡಾ| ಎಂ.ಜಿ.ಆರ್ ಅರಸ್ ಅವರು ಅಧ್ಯಕ್ಷತೆ ವಹಿಸಲಿರುವರು.
ಸಮರ್ಪಣಾ ಮನೋಭಾವದ ಶಿಕ್ಷಕರು ಹಾಗೂ ಊರ ಶಾಲಾಭಿಮಾನಿ ದಾನಿಗಳ ಸಹಕಾರದಿಂದ ಒಂದು ಶಾಲೆಯು ಉತ್ತಮ ಶಾಲೆಯಾಗಿ ಮೂಡಿಬರಲು ಸಾಧ್ಯ ಎನ್ನುವುದಕ್ಕೆ ನಮ್ಮೂರ ಶಾಲೆಯೇ ಸಾಕ್ಷಿ. ಈ ಶಾಲೆ ಬಗ್ಗೆ ತುಂಬಾ ಹೆಮ್ಮೆಯಾಗುತ್ತದೆ ಎಂದು ಕಲ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಪೂಜಾ ಹೇಳಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಇದರ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶಂಕರ್ ಆಚಾರ್ಯ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಸಂಸ್ಕಾರಯುತ ಜೀವನ ನಡೆಸಿ, ದೇಶದ ಉತ್ತಮ ನಾಗರೀಕರಾಗಿ ತಮ್ಮ ಹೆಸರು ಉಳಿಯುವಂತೆ ಬಾಳಿ ಎಂದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಪ್ರೇಮಾ, ಜಗದೀಶ್ ಆಚಾರ್ಯ, ಸಂಜೀವ ಶೆಟ್ಟಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಭಾಶ್ಚಂದ್ರ ಶೆಟ್ಟಿಗಾರ್, ಶಾಲಾ ಹಳೆ ವಿದ್ಯಾರ್ಥಿ…
ಕಾರ್ಕಳ : ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ ನಡೆಸಿದ ಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ – ಜನವರಿ 2026) ನಲ್ಲಿ ಜ್ಞಾನಸುಧಾದ ವಾಣಿಜ್ಯ ವಿಭಾಗದ 48 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ ಗ್ಯಾನ್ ಹೆಗ್ಡೆ ಅವರು 200ರಲ್ಲಿ 145 ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಯಾಗಿದ್ದು, ಜೊತೆಗೆ ಕಾರ್ತಿಕ್ ಶೆಟ್ಟಿ (142 ಅಂಕ), ಶ್ರೀಕರ ಎಸ್ ಉಪಾಧ್ಯಾಯ (141 ಅಂಕ), ವಿಭೂಷಿತ್ ಶೆಟ್ಟಿ (134 ಅಂಕ), ಪ್ರತುಲ್ ಡಿ’ಸೋಜ (132 ಅಂಕ) ಹಾಗೂ ರಕ್ಷಿತ್ ಶೆಟ್ಟಿ (132 ಅಂಕ) ಪಡೆದಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹಾಗೂ ಜ್ಞಾನಸುಧಾ ಪರಿವಾರವು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ಗಮ್ಮತ್ ಕಲಾವಿದರ್ ಯುಎಇ 2011ರಲ್ಲಿ ಸ್ಥಾಪನೆಗೊಂಡು ತುಳು ರಂಗಭೂಮಿಯನ್ನು ಸಕ್ರಿಯವಾಗಿ ಮರಳುನಾಡಿನಲ್ಲಿ ಬೆಳೆಸಿಕೊಂಡು ಬರುತ್ತಿದ್ದು, ಗುಣಮಟ್ಟದ ನಾಟಕ ಪ್ರದರ್ಶನಗಳು, ಪರಿಪಕ್ವವಾದ ಅಭಿನಯಗಳ ಮೂಲಕ ಕೊಲ್ಲಿ ರಾಷ್ಟ್ರದಲ್ಲಿ ಮಾತ್ರವಲ್ಲದೆ ತಾಯ್ನಾಡಿನ ತುಳು ರಂಗಭೂಮಿಯಲ್ಲಿ ತನ್ನದೇ ಆದ ಗೌರವಾನ್ವಿತ ಸ್ಥಾನವನ್ನು ಗಳಿಸಿದೆ. ರಂಗಭೂಮಿಯ ಚಟುವಟಿಕೆಗಳಷ್ಟೇ ಅಲ್ಲದೆ, ಗಮ್ಮತ್ ಕಲಾವಿದರ್ ಯುಎಇ ಕಳೆದ ಒಂದು ದಶಕಕ್ಕಿಂತ ಹೆಚ್ಚು ಕಾಲ ಸ್ವದೇಶದಲ್ಲಿನ ವಿವಿಧ ಸಮಾಜಮುಖಿ ಕಾರ್ಯಗಳಿಗೆ ಸಹಾಯ ಹಸ್ತ ನೀಡುತ್ತಾ ಸಾಂಸ್ಕೃತಿಕ ಪ್ರಚಾರದ ಜೊತೆಗೆ ಅರ್ಥಪೂರ್ಣ ಸಾಮಾಜಿಕ ಸೇವೆಯನ್ನು ಸಮತೋಲನದಿಂದ ಮುಂದುವರೆಸುತ್ತಿರುವುದು ಗಮನಾರ್ಹ ಅಂಶ. ಗಮ್ಮತ್ ಕಲಾವಿದರ್ ಯುಎಇ ತಮ್ಮ ಮುಂದಿನ ಕಾರ್ಯಕ್ರಮಗಳು ಮತ್ತು ಯೋಜನೆಗಳಿಗೆ ಬಲ ತುಂಬುವ ಉದ್ದೇಶದಿಂದ 2026–27 ಅವಧಿಯ ನೂತನ ಕಾರ್ಯಕಾರಿ ಸಮಿತಿಯನ್ನು 18 ಜನವರಿ 2026ರಂದು ದುಬೈಯ ಬರ್ ದುಬೈಯಲ್ಲಿರುವ ಗ್ರ್ಯಾಂಡ್ ಎಕ್ಸೆಲ್ಸಿಯರ್ ಹೋಟೆಲ್ನ ಘಜಲ್ ರೆಸ್ಟೋರೆಂಟ್ನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ರಚಿಸಲಾಯಿತು. ವಾರ್ಷಿಕ ಸಭೆಯು ಸಂಸ್ಥೆಯ ಗೌರವ ಪೋಷಕರು ಹಾಗೂ ಕನ್ನಡ ಚಿತ್ರ…
ಗಂಗಾ ಪ್ರತಿಷ್ಠಾನ ಕುಮಾರಪುರ ಅರ್ಪಿಸುವ ‘ಕಲ್ಲುರ್ಟಿ ಕಥನ’ ಕಲ್ಲುರ್ಟಿ ದೈವದ ಕುರಿತಾದ ಒಂದು ಸಮಗ್ರ ಮತ್ತು ರೋಚಕವಾದ ಗೀತಾ ಕಥನ ‘ನಮ್ಮ ಕೊಂಬಾರು’ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆಗೊಂಡಿದೆ. ಹಿರಿಯ ಕವಿ, ಸಾಹಿತಿ ಮತ್ತು ಯಕ್ಷಗಾನ ಅರ್ಥಧಾರಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರ ಸಾಹಿತ್ಯಕ್ಕೆ ಖ್ಯಾತ ಗಾಯಕ ಎಂ. ರವೀಂದ್ರ ಪ್ರಭು ಧ್ವನಿ ನೀಡಿದ್ದಾರೆ. ಪ್ರತಿಷ್ಠಾನದ ಸಂಚಾಲಕ ಹಾಗೂ ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾಗಿರುವ ಪ್ರವೀಣ ಕುಮಾರ್ ಕಟ್ಟೆ ಇದರ ನಿರ್ಮಾಪಕರು. ತುಳುನಾಡಿನ ಸತ್ಯ ದೇವತೆ ಕಾರಣೀಕದ ಶ್ರೀ ಕಲ್ಲುರ್ಟಿ ದೈವದ ಆರಾಧನಾ ಕ್ಷೇತ್ರಗಳು ಹಲವು. ಬಂಟ್ವಾಳ ತಾಲೂಕಿನ ಪಣೋಲಿಬೈಲು, ಬಾಳ್ತಿಲ ಗ್ರಾಮದ ಚೆಂಡೆ ಮೊದಲಾದೆಡೆ ನೆಲೆ ನಿಂತು ನಂಬಿದವರನ್ನು ಪವಾಡ ಸದೃಶವಾಗಿ ಅನುಗ್ರಹಿಸುವ ಕಲ್ಲುರ್ಟಿ ಅಮ್ಮನ ಕಥನವು ಅಷ್ಟೇ ಹೃದಯಂಗಮವಾದುದು. ತುಳು ಜನಪದ ಸಾಹಿತ್ಯದಲ್ಲಿ ಕೆಲ್ಲತ್ತ ಮಾರ್ನಾಡಿನ ಬಡ ಕಲ್ಲು ಕುಟಿಗರ ಕುಟುಂಬವೊಂದರಲ್ಲಿ ಹುಟ್ಟಿದ ಅಣ್ಣ ತಂಗಿಯರು ವೀರ ಕಲ್ಕುಡ ಮತ್ತು ಕಾಳಮ್ಮರು ಆಳರಸರ ದೌರ್ಜನ್ಯಕ್ಕೊಳಗಾಗಿ ತಮ್ಮ ಭೌತಿಕ ಕಾಯವನ್ನು ತ್ಯಜಿಸಿ ಮಾಯಾ…
ಕರ್ನಾಟಕ ರಕ್ಷಣಾ ವೇದಿಕೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ (ಉತ್ತರ ಬೆಂಗಳೂರು) ಉದ್ದಿಮೆದಾರರ ಘಟಕದ ಅಧ್ಯಕ್ಷರಾಗಿ ಕೈಗಾರಿಕೋದ್ಯಮಿ, ಸಮಾಜಸೇವಕ ಡಾ| ಜೆ.ಕೆ ಶೆಟ್ಟಿಯವರು ನಿಯುಕ್ತಿಗೊಂಡಿದ್ದಾರೆ. ಪ್ರವೀಣ್ ಕುಮಾರ್ ಶೆಟ್ಟಿಯವರು ವೇದಿಕೆಯ ನಾಯಕರಾಗಿದ್ದು, ಕನ್ನಡ ಭಾಷೆ ಮತ್ತು ಕರ್ನಾಟಕದ ಹಿತಾಸಕ್ತಿಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಕನ್ನಡಿಗರ ಉದ್ಯೋಗ, ಗಡಿ ಭಾಗಗಳ ಸಮಸ್ಯೆಗಳು, ಕನ್ನಡ ಜಾಹೀರಾತುಗಳು ಮತ್ತು ಕನ್ನಡ ಶಾಲೆಗಳ ಅಭಿವೃದ್ಧಿ ಮುಂತಾದ ವಿಷಯಗಳ ಬಗ್ಗೆ ಧ್ವನಿ ಎತ್ತಿದ್ದಾರೆ.
ರೈಡ್ ಫಾರ್ ರೋಟರಿ ಕಾರ್ಯಕ್ರಮದ ಅಂಗವಾಗಿ ಹತ್ತು ದೇಶಗಳಿಂದ ಆಗಮಿಸಿದ್ದ ಮೂವತ್ತಕ್ಕೂ ಹೆಚ್ಚು ಅಂತರಾಷ್ಟ್ರೀಯ ರೋಟೇರಿಯನ್ಗಳು ಕಾರ್ಕಳ ರೋಟರಿ ಕ್ಲಬ್ನ ಆತಿಥ್ಯವನ್ನು ಪಡೆದರು. ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಕಾರ್ಕಳದ ಶೀತಲ್ ಗಾರ್ಡನ್ ಫ್ಯಾಮಿಲಿ ರೆಸ್ಟೋರೆಂಟ್ನಲ್ಲಿ ಆತಿಥ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ರೊಮೇನಿಯಾ, ಆಸ್ಟ್ರಿಯಾ, ಜರ್ಮನಿ, ಕೆನಡಾ, ಸ್ವೀಡನ್, ನಾರ್ವೆ, ಬೆಲ್ಜಿಯಂ, ಪೋಲಂಡ್, ನೆದರ್ಲ್ಯಾಂಡ್ ಹಾಗೂ ಡೆನ್ಮಾರ್ಕ್ ದೇಶಗಳಿಂದ ಬಂದ ರೋಟೇರಿಯನ್ ರೈಡರ್ಸ್ಗಳು ಹಾಗೂ ಅವರೊಂದಿಗೆ ಆಗಮಿಸಿದ ರೋಟರಿ ಡಿಸ್ಟ್ರಿಕ್ಟ್ 3180ರ ಸದಸ್ಯರು ಆತಿಥ್ಯವನ್ನು ಸ್ವೀಕರಿಸಿ ಕಾರ್ಕಳ ರೋಟರಿ ಕ್ಲಬ್ನ ಸಂಘಟನಾ ಸಾಮರ್ಥ್ಯ ಹಾಗೂ ಆತ್ಮೀಯತೆಯನ್ನು ಮೆಚ್ಚಿದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ರೋಟೇರಿಯನ್ಗಳು ಮತ್ತು ಕಾರ್ಕಳ ರೋಟರಿ ಕ್ಲಬ್ ನಡುವಿನ ಸ್ನೇಹದ ಸಂಕೇತವಾಗಿ ಫ್ಲಾಗ್ ಎಕ್ಸ್ಚೇಂಜ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ PdG ಡಾ. ಭರತೇಶ ಆದಿರಾಜ್, ಹರಿಪ್ರಕಾಶ್ ಶೆಟ್ಟಿ, ಜಾನ್ ಆರ್ ಡಿ’ಸಿಲ್ವಾ, ರೇಖಾ ಉಪಾಧ್ಯಾಯ, ಸುರೇಶ್ ನಾಯಕ್, ವಸಂತ ಎಂ., ಇಕ್ಬಾಲ್ ಅಹ್ಮದ್,…
ಮಹಾರಾಷ್ಟ್ರದಲ್ಲಿ ಮುಂಬಯಿ ಮಹಾನಗರ ಪಾಲಿಕೆ (ಬಿಎಂಸಿ) ಸಹಿತ 29 ಮಹಾನಗರ ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳಾಗಿ ಕಣಕ್ಕಿಳಿದ ಬಂಟ ಅಭ್ಯರ್ಥಿಗಳು ಉತ್ತಮ ಹೋರಾಟ ಮಾಡಿ ಗೆಲುವು ಸಾಧಿಸಿದ್ದಾರೆ. ಕಲ್ಯಾಣ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ಮಲ್ಲೇಶ್ ಶೆಟ್ಟಿ ಹಾಗೂ ಅವರ ಸುಪುತ್ರ ಹರ್ಮೇಶ್ ಮಲ್ಲೇಶ್ ಶೆಟ್ಟಿಯವರು ಶಿಂದೆ ಬಣದ ಶಿವಸೇನೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಗಳಿಸಿದ್ದಾರೆ. ಪನ್ವೇಲ್ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಂತೋಷ್ ಜಿ ಶೆಟ್ಟಿ ಸತತ ಐದನೇ ಬಾರಿ ಗೆಲುವು ಸಾಧಿಸುವ ಮೂಲಕ ವಿಕ್ರಮ ಸಾಧಿಸಿದ್ದಾರೆ. ಬಿಎಂಸಿ ಚುನಾವಣೆಯಲ್ಲಿ ಮುಂಬೈಯ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರದ ಟ್ರಸ್ಟಿಯಾಗಿ ಸಮಾಜ ಸೇವೆಯ ಮೂಲಕ ಜನಾನುರಾಗಿಯಾಗಿರುವ ಇನ್ನಾ ಭಾಸ್ಕರ್ ಶೆಟ್ಟಿ ಅವರು ಶಿವಸೇನೆ ಅಭ್ಯರ್ಥಿಯಾಗಿ ಧಾರಾವಿ ವಾರ್ಡಿನಲ್ಲಿ ಜಯಭೇರಿ ಬಾರಿಸಿದ್ದಾರೆ. ಬಿಎಂಸಿ ವಾರ್ಡ್ ನಂಬರ್ 9ರಲ್ಲಿ ಗೊರಾಯಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವಾನಂದ ಶೆಟ್ಟಿ ಚುನಾಯಿತರಾದರೆ, ನವಿ ಮುಂಬೈ ಮಹಾನಗರ ಪಾಲಿಕೆ…
ರೆಡ್ಕ್ರಾಸ್ನಿಂದ ರಾಷ್ಟ್ರೀಯ ಯುವ ದಿನಾಚರಣೆ : ಮಾನವೀಯ ಸೇವೆಗೆ ವಿವೇಕಾನಂದರ ಸಂದೇಶ ಸ್ಫೂರ್ತಿ – ಸಿಎ ಶಾಂತಾರಾಮ ಶೆಟ್ಟಿ
ವಿದ್ಯಾರ್ಥಿಗಳು ಮೋಜಿನ ಆಕರ್ಷಣೆಗಳಿಂದ ವಿಚಲಿತರಾಗದೆ ಭವಿಷ್ಯದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲೇ ಸೇವೆಗೆ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಯುವಜನತೆ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸ್ವಾಮಿ ವಿವೇಕಾನಂದರ ಸಂದೇಶ ಸ್ಫೂರ್ತಿಯಾಗಿದೆ ಎಂದು ರೆಡ್ಕ್ರಾಸ್ ದ.ಕ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ಭಾರತೀಯ ರೆಡ್ಕ್ರಾಸ್ ಸೊಸೈಟಿ ಮತ್ತು ಯೂತ್ ರೆಡ್ಕ್ರಾಸ್ ಸೊಸೈಟಿ ದ.ಕ ಜಿಲ್ಲಾ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 164ನೇ ಜಯಂತಿ ಅಂಗವಾಗಿ ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಗಳಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುಬ್ರಹ್ಮಣ್ಯ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಯುವ ಸಾಧಕರಾದ ವಿಶ್ವಕಪ್ ವಿಜೇತ ಭಾರತೀಯ ಮಹಿಳಾ ಕಬಡ್ಡಿ ತಂಡದ ಆಟಗಾರ್ತಿ ಧನಲಕ್ಷ್ಮಿಪೂಜಾರಿ, ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ವಿಶ್ವದಾಖಲೆಯ ವಿದುಷಿ ದೀಕ್ಷಾ ಎಸ್. ಮತ್ತು ರಾಷ್ಟ್ರಪತಿ ರೋವರ್ಸ್ ಅವಾರ್ಡ್ ವಿಜೇತ ಪ್ರೀತೇಶ್ ಇವರುಗಳನ್ನು ಸನ್ಮಾನಿಸಲಾಯಿತು. ಮಂಗಳೂರು ವಿ.ವಿ, ಯೇನೆಪೊಯಾ ಪರಿಗಣಿತ…
ಜೇಸಿಐ ವಲಯದ ಅತ್ಯಂತ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೇಸಿಐ ಗಣೇಶಪುರದ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಬೈಕಂಪಾಡಿಯ ಕೈಗಾರಿಕಾ ಭವನದಲ್ಲಿ ಜನವರಿ 11ರಂದು ನಡೆಯಿತು. ಘಟಕದ 11 ನೇಯ ಅಧ್ಯಕ್ಷರಾಗಿ ಚೇಳ್ಯಾರು ಗುತ್ತು ಮನೆತನದ ಖ್ಯಾತ ವಾಗ್ಮಿ, ಸಾಹಿತಿ, ಪ್ರತಿಷ್ಠಿತ ಎಂ.ಆರ್.ಪಿ.ಎಲ್ ಸಂಸ್ಥೆಯ ನಿವೃತ್ತ ಮಹಾ ಪ್ರಬಂಧಕರಾದ ಶ್ರೀಮತಿ ವೀಣಾ ಟಿ ಶೆಟ್ಟಿ ಮತ್ತು ಉದ್ಯಮಿ ತಾರನಾಥ ಶೆಟ್ಟಿ ದಂಪತಿಗಳ ಸುಪುತ್ರ ಜೇ.ಎಫ್.ಎಂ ದೇವಿಚರಣ್ ಟಿ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಜೆ.ಎಫ್.ಎಂ ಅಶ್ವಿನ್ ಶೇಖರವರು ನೂತನ ಅಧ್ಯಕ್ಷ ರಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯದರ್ಶಿಯಾಗಿ ಜೇಸಿ ಅಶ್ವತ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಜೇಸಿ ರಜತ್ ಶೆಟ್ಟಿ, ಖಜಾಂಚಿಯಾಗಿ ಜೇಸಿ ರಿತೇಶ್, ಮಹಿಳಾ ಜೇಸಿ ಸಂಯೋಜಕರಾಗಿ ಜೇಸಿ ಶುಭ ಶರತ್, ಯುವ ಜೇಸಿ ಸಂಯೋಜಕರಾಗಿ ಜೇಜೇಸಿ ವಿನೀತ್ ಅಧಿಕಾರ ವಹಿಸಿಕೊಂಡರು. ಇದೇ ಸಂದರ್ಭದಲ್ಲಿ ಮೂವರು ಹೊಸ ಜೇಸಿ ಸದಸ್ಯರನ್ನು ವಲಯ ಅಧ್ಯಕ್ಷ ಸಂತೋಷ್ ಶೆಟ್ಟಿಯವರು ಪ್ರಮಾಣವಚನ…















