Author: admin
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್.ಎಸ್ 99.4676491, ಸಾನಿಕ ಕೆ.ಎನ್ 99. 2028725, ಎಂ. ಮಂಜುನಾಥ್ 99.0174525, ಮೋಹಿತ್ ಎಂ 99.1632262, ಎಚ್. ಎ ರಾಜೇಶ್ 99.1055485, ಪಸರ್ಂಟೈಲ್ ಗಳಿಸಿರುತ್ತಾರೆ. 99 ಪಸೆರ್ಂಟೈಲ್ ಗಿಂತ ಅಧಿಕ 5 ವಿದ್ಯಾರ್ಥಿಗಳು, 98ಕ್ಕಿಂತ ಅಧಿಕ 14, 95ಕ್ಕಿಂತ ಅಧಿಕ 49, 90 ಪಸೆರ್ಂಟೈಲ್ ಗಿಂತ ಮೇಲ್ಪಟ್ಟು 111 ವಿದ್ಯಾರ್ಥಿಗಳು ಗುರುತರ ಶ್ರೇಣಿಯನ್ನು ಪಡೆದುಕೊಂಡಿರುತ್ತಾರೆ. ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಜೆ.ಇ.ಇ (ಮೈನ್) ಪರೀಕ್ಷೆಯ ಸಂಯೋಜಕರಾದ ನಂದೀಶ್ ಎಚ್.ಬಿ, ಆದಿತ್ಯ ವಟಿ ಕೆ ಮತ್ತು ವಿನಯ…
ಮೂಡುಬಿದಿರೆ: ಅಕಾಡೆಮಿ ಆಫ್ ಸರ್ಟಿಫೈಡ್ ಹಝಾರ್ಡಸ್ ಮೆಟೀರಿಯಲ್ಸ್ ಮ್ಯಾನೇಜರ್ (ಎಸಿಎಚ್ಎಂಎಂ)-ಇಂಡಿಯಾ ಚಾಪ್ಟರ್, ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಹಾಗೂ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಜಂಟಿ ಸಹಯೋಗದಲ್ಲಿ ನಡೆಯಲಿರುವ 3 ದಿನಗಳ ಕಾರ್ಯಗಾರವನ್ನು ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು. ಭಾರತ ಹಾಗೂ ಅಮೆರಿಕಾ ದೇಶಗಳ ಸಂಪನ್ಮೂಲ ವ್ಯಕ್ತಿಗಳನ್ನು ಒಳಗೊಂಡ ಈ ಕಾರ್ಯಗಾರವನ್ನು ಎಸಿಎಚ್ಎಂಎಂ-ಇಂಡಿಯಾ ಚಾಪ್ಟರ್ ಸಂಸ್ಥೆಯ ಸ್ಥಾಪಕ ಹಾಗೂ ಅಧ್ಯಕ್ಷ ಡಾ. ರಾಂಪುರ್ ವಿಶ್ವನಾಥ್ ಉದ್ಘಾಟಿಸಿ ಅಪಾಯಕಾರಿ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಿಸುವುದು ಮಾನವ ಹಾಗೂ ಪರಿಸರದ ಸುಸ್ಥಿರತೆಗೆ ಬಹಳ ಅಗತ್ಯ. ಅಪಾಯಕಾರಿ ವಸ್ತುಗಳನ್ನು ನಿರ್ವಹಿಸುವುದು ಪ್ರತಿಯೊಬ್ಬರ ಜವಬ್ದಾರಿ.ನಾವು ಯಾವುದೇ ಜ್ಞಾನವನ್ನು ಇತರರೊಂದಿಗೆ ಹಂಚಿಕೊಂಡಾಗ ಆ ಜ್ಞಾನವು ಕೆಲವರಿಗಾದರು ಉಪಯುಕ್ತವಾಗುತ್ತದೆ. ಪ್ರತಿಯೊಬ್ಬರು ತಮ್ಮ ಅನುಭವ, ಪರಿಣತಿ ಹಾಗೂ ವಿಷಯದ ತಿಳಿವಳಿಕೆಯನ್ನು ಹಂಚಿಕೊಳ್ಳಲು ಉತ್ಸುಕರಾಗಿರಬೇಕು. ಎಸಿಎಚ್ಎಂಎಂ ಸಂಸ್ಥೆಯ ಮೂಲಕ ಅಪಾಯಕಾರಿ ವಸ್ತುಗಳನ್ನು ನಿರ್ವಹಣೆಗೆ ಸಂಬಂಧಿಸಿದ 30 ಮಾದರಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇವುಗಳಲ್ಲಿ 18 ನಿರ್ವಹಣಾ ಮಾದರಿಗಳ ಕುರಿತು ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ…
ಕಾರ್ಕಳ : ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ..ಎ ನಡೆಸಿದ ಜೆಇಇ ಮೈನ್ 1ನೇ ಫೇಸ್ನ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಧನುಷ್ ನಾಯಕ್ 99.7330507 ಪರ್ಸಂಟೈಲ್, ತರುಣ್ ಸುರಾನ 99.7329879 ಪರ್ಸಂಟೈಲ್, ಚಿಂತನ್ ಜೆ. ಎಂ 99.6686123 ಪರ್ಸಂಟೈಲ್, ಆಕಾಶ್ ಎಚ್. ಪ್ರಭು 99.6148310 ಪರ್ಸಂಟೈಲ್, ಹೃತ್ವಿಕ್ ಶೆಟ್ಟಿ 99.4580440 ಪರ್ಸಂಟೈಲ್, ಕೆ.ಮನೋಜ್ ಕಾಮತ್ 99.4567815 ಪರ್ಸಂಟೈಲ್, ವೇದಾಂತ್ ಶೆಟ್ಟಿ 99.2929708 ಪರ್ಸಂಟೈಲ್ ಮತ್ತು ಸತೀಶ್ ಎಸ್.ಕೆ. 99.1444377 ಪರ್ಸಂಟೈಲ್ ಪಡೆದ ಸಾಧಕ ವಿದ್ಯಾರ್ಥಿಗಳಾಗಿದ್ದಾರೆ. ಈ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯಾ ಪರಿಶ್ರಮವನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ. ಜ್ಞಾನಸುಧಾದ ಒಟ್ಟು 9 ವಿದ್ಯಾರ್ಥಿಗಳು 98 ಪಸರ್ಂಟೈಲ್ಗಿಂತ ಅಧಿಕ, 45 ವಿದ್ಯಾರ್ಥಿಗಳು 95 ಪಸರ್ಂಟೈಲ್ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಪಸರ್ಂಟೈಲ್ ಗಳಿಸಿರುತ್ತಾರೆ.…
ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ “ಪಿಲಿಪಂಜ” ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿದೆ. ಒಟ್ಟು ಮೂರು ಹಂತಗಳಲ್ಲಿ ಚಿತ್ರೀಕರಣ ಮಾಡಿದ್ದ ಈ ಸಿನಿಮಾ ಫೆಬ್ರವರಿ 2ರಿಂದ ಸಾಲೆತ್ತೂರು, ಕುಳಾಲು, ಕಾಡುಮಠ, ಕುಡ್ತಮುಗೇರು ಪರಿಸರದಲ್ಲಿ 5 ದಿನ ಹಾಡಿನ ಚಿತ್ರೀಕರಣವನ್ನು ಮಾಡಿ ಫೆಬ್ರವರಿ 6ರಂದು ಕುಂಬಳಕಾಯಿ ಹೊಡೆಯುವ ಮೂಲಕ ಯಶಸ್ವಿಯಾಗಿ ಚಿತ್ರೀಕರಣವನ್ನು ಮುಗಿಸಿದೆ. ಒಟ್ಟು 3 ಹಂತಗಳಲ್ಲಿ ದ.ಕ ಜಿಲ್ಲೆಯ ಬೇರೆ ಬೇರೆ ಪ್ರದೇಶದಲ್ಲಿ ಯಶಸ್ವಿಯಾಗಿ ಚಿತ್ರೀಕರಣವನ್ನು ಮಾಡಿ ಮುಗಿಸಿದ ಚಿತ್ರತಂಡ ಬೇಗನೆ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿದೆ. ಚಿತ್ರದಲ್ಲಿ ಒಟ್ಟು 2 ಹಾಡುಗಳಿದ್ದು, 2 ಫೈಟುಗಳಿವೆ. ದ.ಕ ಜಿಲ್ಲೆಯ ರಮಣೀಯ ಸ್ಥಳದಲ್ಲಿ ಚಿತ್ರೀಕರಣ ಮಾಡುವುದರೊಂದಿಗೆ, ಕರಾವಳಿಯ ಮನಮೋಹಕ ದೃಶ್ಯಗಳನ್ನು ಛಾಯಾಗ್ರಾಹಕ ಉದಯ ಬಳ್ಳಾಲ್ ಬಹಳ ಸುಂದರವಾಗಿ ಸೆರೆ ಹಿಡಿದಿದ್ದಾರೆ. ಹಾಡಿನ ಚಿತ್ರೀಕರಣದಲ್ಲಿ ರಾಜೇಶ್ ಕಣ್ಣೂರು ನೃತ್ಯ ನಿರ್ದೇಶನ…
ಭಾರತೀಯ ಕಲೆ, ಲಲಿತ ಕಲೆ, ಸಂಸ್ಕೃತಿಯನ್ನು ಉತ್ತೇಜಿಸುವ ಸಲುವಾಗಿ ಕೆಲಸ ಮಾಡುವ ರಾಷ್ಟ್ರೀಯ ಚಿಂತನೆ ಸಂಸ್ಥೆಯ ಸಂಸ್ಕಾರ ಭಾರತಿ, ಬೇರೆ ಬೇರೆ ವಿಶೇಷ ಕೆಲಸ ಕಾರ್ಯಗಳ ಮೂಲಕ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರನ್ನಾಗಿ ಮನ್ಮಥ ಶೆಟ್ಟಿ ಪುತ್ತೂರು ಇವರನ್ನು ಜಿಲ್ಲಾ ಸಭೆಯಲ್ಲಿ ಘೋಷಣೆ ಮಾಡಲಾಗಿದೆ. ಸಂಸ್ಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ತಾರಾನಾಥ್ ಕೊಟ್ಟಾರಿಯವರು ಜಿಲ್ಲಾ ಬೈಠಕ್ ನ ಪ್ರಮುಖರ ಸಭೆಯಲ್ಲಿ ಘೋಷಿಸಿದರು.ಬರಹಗಾರರಾಗಿ, ಭಾಷಣಗಾರರಾಗಿ, ದೈವರಾದನೆ, ಸಾಹಿತ್ಯ, ಜಾನಪದ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಇವರು ಕಳೆದ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದು, ಬೇರೆ ಪ್ರಶಸ್ತಿಗಳನ್ನು ಪಡೆದುಕೊಂಡವರಾಗಿದ್ದಾರೆ. ಸಭೆಯಲ್ಲಿ ಬೆಳ್ತಂಗಡಿ, ಬಂಟ್ವಾಳ, ಪುತ್ತೂರಿನ ಸಂಯೋಜಕರು, ಗೌರವಾಧ್ಯಕ್ಷರು, ಪ್ರಮುಖರು ಉಪಸ್ಥಿತರಿದ್ದರು.
ಶಿವಾಯ ಫೌಂಡೇಶನ್ ಮುಂಬೈ ಸಂಸ್ಥೆಯ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ, ದಕ್ಷಿಣದ ಕುಂಭ ಮೇಳವೆಂದೇ ಪ್ರಸಿದ್ಧಿ ಪಡೆದಿರುವ, ಲಕ್ಷಾಂತರ ಭಕ್ತ ಜನರು ಸೇರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ವೇದಿಕೆಯಲ್ಲಿ ಸೇವಾ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಸ್ವಾಮಿಗಳು, ತುಮಕೂರು ಸಿದ್ದಗಂಗ ಮಠದ ಶ್ರೀ ಸಿದ್ಧಲಿಂಗ ಮಹಾ ಸ್ವಾಮಿಗಳು, ಶ್ರೀ ಷಣ್ಮುಖರೂಢ ಮಠ ವಿಜಯಪುರದ ಶ್ರೀ ಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಸೇರಿದಂತೆ ಬಸವ ತತ್ವವನ್ನು ಪ್ರತಿಪಾದಿಸುವ ಶರಣರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಿಂದೂಸ್ತಾನಿ ಗಾಯಕರಾದ ಡಾ. ವೆಂಕಟೇಶ್ ಕುಮಾರ್, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಅತಿಥಿ ಗಣ್ಯರು ಮಠದ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಪರವಾಗಿ ಪ್ರಶಾಂತ್ ಶೆಟ್ಟಿ ಪಲಿಮಾರು, ಮಧುಸೂದನ್ ಶೆಟ್ಟಿ ಹಿರಿಯಡ್ಕ, ಪ್ರಶಾಂತ್ ಶೆಟ್ಟಿ ಪಂಜ ಮತ್ತು ಡಾ. ಸ್ವರ್ಣಾ ಶೆಟ್ಟಿಯವರು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ತುಳುನಾಡಿನ ಕಲೆ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ತ್ರಿರಂಗ ಸಂಗಮದ ಪಾತ್ರ ಬಹಳವಿದೆ. ಇದರ ರೂವಾರಿಗಳಾದ ಕಲಾ ಸಂಘಟಕರಾದ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ ಬಾಳಿಕೆ ಅವರು ನಿರಂತರ ಕಲೆ ಹಾಗೂ ಕಲಾವಿದರಿಗಾಗಿ ವೇದಿಕೆ ಒದಗಿಸುವುದರೊಂದಿಗೆ ನಮ್ಮ ಧರ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದ್ದಾರೆ. ಇಂತಹ ಕಲಾವಿದರಿಗೆ ನಾವು ಪ್ರೋತ್ಸಾಹ ನೀಡಬೇಕು. ಇವರಿಂದ ಕಲಾ ಸೇವೆ ನಿರಂತರ ನಡೆಯುತ್ತಿರಲಿ ಎಂದು ಉದ್ಯಮಿ ವೆಲ್ಕಂ ಪ್ಯಾಕೇಜ್ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ರವೀಂದ್ರನಾಥ್ ಭಂಡಾರಿ ತಿಳಿಸಿದರು. ಕುರ್ಲಾ ಪೂರ್ವಾದ ಬಂಟರ ಭವನದಲ್ಲಿ ಫೆಬ್ರವರಿ 9ರಂದು ಜರಗಿದ ಮುಂಬೈಯ ಕಲಾ ಸಂಘಟಕರಾದ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ ಬಾಳಿಕೆ ನೇತೃತ್ವದ ತ್ರಿರಂಗ ಸಂಗಮ ಮುಂಬೈ ಇದರ ಮೂರನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ ಪ್ರಭು ದ್ವೀಪ ಪ್ರಜ್ವಲಿಸಿ ಆಶೀರ್ವಚಿಸಿ, ನಮ್ಮ ಸಂಸ್ಕೃತಿ,…
ಮೂಡುಬಿದಿರೆ: ವೈದ್ಯಕೀಯ ನಿರ್ಧಾರಗಳು ಕ್ಲಿನಿಕಲ್ ಲ್ಯಾಬೋರೇಟರಿ ಫಲಿತಾಂಶಗಳ ಮೇಲೆ ಆಧಾರಿತವಾಗಿರುವುದರಿಂದ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ ವಿಷಯದಲ್ಲಿ ಜ್ಞಾನವರ್ಧನೆ ಅಗತ್ಯವಿದೆ ಎಂದು ಆಳ್ವಾಸ್ ಹೆಲ್ತ್ ಸೆಂಟರ್ನ ಹೃದ್ರೋಗ ತಜ್ಞ ಡಾ. ಸದಾನಂದ್ ನಾಯ್ಕ ಹೇಳಿದರು. ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ವಿಭಾಗದ ವತಿಯಿಂದ `ಮೆಡಿಕಲ್ ಲ್ಯಾಬೋರೇಟರಿ ತಂತ್ರಜ್ಞಾನದಲ್ಲಿ ಆಗುತ್ತಿರುವ ನವೀಕರಣದ ಕುರಿತು ಕುವೆಂಪು ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೈದ್ಯಕೀಯ ಸೇವೆಗಳು ನೈತಿಕತೆ ಉಳಿಸಿಕೊಂಡು ಸಾಮಾನ್ಯರಿಗೂ ಕೈಗೆಟಕುವಂತಿರಬೇಕು.ವಿದ್ಯಾರ್ಥಿಗಳು ತಂತ್ರಜ್ಞಾನಗಳ ಕುರಿತು ಹೆಚ್ಚಿನ ಅಧ್ಯಯನ ಮಾಡಿ ವೈದ್ಯಕೀಯ ಕ್ಷೇತ್ರದ ನಿರ್ಧಾರಗಳನ್ನು ಅತ್ಯಂತ ವಿಶ್ವಾಸಾರ್ಹಗೊಳಿಸುವಲ್ಲಿ ಸಹಕರಿಸಬೇಕು ಎಂದರು. ಸAಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಎಜೆ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಅರವಿಂದ್, ಟ್ರಾನ್ಸ್ಫ್ಯೂಷನ್ ಮೆಡಿಸಿನ್ನಲ್ಲಿ ವಿಶೇಷವಾಗಿ ರಕ್ತ ನಿಧಿಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಗತ್ಯವಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಬಯೋಕೆಮಿಸ್ಟಿç ವಿಭಾಗದ ಮುಖ್ಯಸ್ಥ ಡಾ.…
ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 15ರವರೆಗೆ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ನೇತೃತ್ವದಲ್ಲಿ ನವೋದಯ ಸ್ವಸಹಾಯ ಸಂಘ ಮತ್ತು ಊರ ಸಮಸ್ತರಿಂದ 17ನೇ ವರ್ಷದ ಹೊರೆ ಕಾಣಿಕೆ ಸಮರ್ಪಣೆ ಭಾನುವಾರ ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎಚ್. ಧನಂಜಯ ಶೆಟ್ಟಿ, ಮೊಕ್ತೇಸರ ಶ್ರೀನಿವಾಸ ಶೆಟ್ಟಿ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ, ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಮಕೃಷ್ಣ ಶೆಟ್ಟಿ, ನವೋದಯ ಸ್ವಸಹಾಯ ಸಂಘದ ಜಿಲ್ಲಾ ಮೇಲ್ವಿಚಾರಕ ಹರಿನಾಥ, ತಾಲೂಕು ಮೇಲ್ವಿಚಾರಕ ಕೃಷ್ಣ, ಮಂದಾರ್ತಿ ವಲಯ ಪ್ರೇರಕಿ ಶೋಭ ಭಾಗವಹಿಸಿದ್ದರು.
ತುಳುನಾಡಿನಲ್ಲಿ ಧಾರ್ಮಿಕ, ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಭಾಷೆಯ ಜಾಗೃತಿ ಮೂಡಿಸಲಾಗುತ್ತದೆ. ನಾಲ್ಕು ಕಾಲ ಬದುಕುವ, ಉಳಿಯುವಂತಹ ಸಾಹಿತ್ಯ ರಚನೆಯಾಗಬೇಕು. ನೆಲ ಮೂಲದ ಗ್ರಾಮ ಸಂಸ್ಕೃತಿಯತ್ತ ಬರಹಗಾರರು ಗಮನಿಸಬೇಕು. ತುಳುವರನ್ನು ಓದಿನೆಡೆಗೆ ಆಕರ್ಷಿಸುವಂತಹ ರಚನಾತ್ಮಕ ಕೆಲಸಗಳು ಸಾಹಿತ್ಯದಲ್ಲಿ ನಡೆಯಬೇಕು ಎಂದು ತುಳು ಕನ್ನಡ ಸಾಹಿತಿ, ಕರ್ನಾಟಕ ಜಾನಪದ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕರೆ ನೀಡಿದರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರು ರಥೋತ್ಸವ ಹಾಗೂ ತುಳುನಾಡು ಜಾತ್ರೆಯ ಸಂದರ್ಭದಲ್ಲಿ ‘25ನೇ ತುಳು ಸಾಹಿತ್ಯ ಸಮ್ಮೇಳನ’ ದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಂಗಾರದ ಬಟ್ಟಲಾಗಿದ್ದ ತುಳುನಾಡು ಈಗ ಬರಡು ನೆಲವಾಗುತ್ತಿದೆ. ಯುವಕರು ಕೃಷಿ ತ್ಯಜಿಸಿ ಪೇಟೆ ಕಡೆಗೆ ಅಥವಾ ವಿದೇಶಕ್ಕೆ ತೆರಳುತ್ತಿರುವುದು ಬೇಸರದ ವಿಚಾರ. ಇಂದು ತುಳು ಸಾಹಿತ್ಯ ಮತ್ತು ಸಂಸ್ಕೃತಿಯ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆ ಆಗುತ್ತಿದ್ದು ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ತುಳು ಭಾಷೆಗೆ ಮಾನ್ಯತೆ ಸಿಗುತ್ತಿಲ್ಲ ಎಂದವರು ವಿಷಾದಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ…