Author: admin

ಬಂಟ ಸಮುದಾಯದ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಮಹಾರಾಷ್ಟ್ರ ಶಾಸಕ ಸಂಜಯ್ ಗಾಯಕ್ವಾಡ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಜುಲೈ 14ರ ಸೋಮವಾರದಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಸುಮಾರು 60 ಬಂಟರ ಸಂಘಗಳ ಪ್ರತಿನಿಧಿಗಳು ಮತ್ತು ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತಿತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ತಮ್ಮ ಬೇಡಿಕೆಯ ಮನವಿಯನ್ನು ರವಾನಿಸಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಆಗಮಿಸಿ ಬಂಟ ಸಮಾಜವನ್ನು ಮತ್ತು ಬಂಟ ಸಮಾಜದ ಬಂಧುಗಳು ನಡೆಸುತ್ತಿರುವ ಹೋಟೆಲುಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದವರು. ಇದೀಗ ಅವರ ಪಕ್ಷದ ಶಾಸಕರಿಂದಲೇ ಬಂಟ ಸಮಾಜದ ಮೇಲೆ ನಡೆದಿರುವ ಅವಮಾನದ ಹೇಳಿಕೆಗಳು ಸಮಾಜಕ್ಕೆ ನೋವನ್ನು ತಂದಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕೋಟ್ಯಾಂತರ ರೂಪಾಯಿಯಲ್ಲಿ ಬಂಟ ಸಮಾಜದ ಉದ್ಯಮದ…

Read More

ಶಿಯಾನ ಪ್ರೊಡಕ್ಷನ್ ಬ್ಯಾನರ್ ನಡಿಯಲ್ಲಿ ತಯಾರಾದ ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ನಿರ್ದೇಶನದ ವಿಭಿನ್ನ ತಂತ್ರಜ್ಞಾನದಿಂದ ಕೂಡಿದ “ಪಿಲಿ ಪಂಜ” ತುಳು ಸಿನಿಮಾ ನವೆಂಬರ್ 7 ರ ಬದಲು ಡಿಸೆಂಬರ್ 12ಕ್ಕೆ ಬಿಡುಗಡೆಯಾಗಲಿದೆ. ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ನವೆಂಬರ್ 14ಕ್ಕೆ ಬಿಡುಗಡೆಯಾಗುವುದರಿಂದ ತುಳು ಸಿನಿಮಾದಲ್ಲಿ ಪೈಪೋಟಿ ಸಲ್ಲದು ಎಂದು ಮನಗಂಡು ಪಿಲಿ ಪಂಜ ಸಿನಿಮಾ ಬಿಡುಗಡೆಯ ದಿನಾಂಕವನ್ನು ಡಿಸೆಂಬರ್ 12ಕ್ಕೆ ಮುಂದೂಡಿತು. ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರು ಬಿಡುಗಡೆ ದಿನಾಂಕವನ್ನು ಬದಲಾವಣೆ ಮಾಡುವುದರ ಮುಖೇನ ಇದೊಂದು ಉತ್ತಮ ಬೆಳವಣಿಗೆ. ಪಿಲಿ ಪಂಜ ತಂಡದ ಉತ್ತಮ ನಿರ್ಧಾರವನ್ನು ಸ್ವಾಗತಿಸುತ್ತಾ ನಮ್ಮ ಜೈ ಚಿತ್ರ ತಂಡ ಪಿಲಿ ಪಂಜ ಚಿತ್ರತಂಡಕ್ಕೆ ಬೆಂಬಲ ಕೊಡುತ್ತೇವೆ. ಎಲ್ಲಾ ಸಿನಿಮಾ ಪ್ರೇಕ್ಷಕರು ಪಿಲಿ ಪಂಜ ಚಿತ್ರ ತಂಡವನ್ನು ಬೆಂಬಲಿಸಿ ಸಿನಿಮಾವನ್ನು ಗೆಲ್ಲಿಸಬೇಕು ಎಂದು ಹೇಳುತ್ತಾ ಚಿತ್ರ ತಂಡಕ್ಕೆ ಶುಭ ಕೋರಿದರು. ಈ ಸಂಧರ್ಭ ನಿರ್ಮಾಪಕ ಪ್ರತೀಕ್ ಯು…

Read More

ಜೀವನದ ಕರ್ಮಯೋಗದ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಭಗವದ್ಗೀತೆಯ ಸಾರ ಮಹತ್ತರ ಪಾತ್ರವನ್ನು ವಹಿಸುತ್ತದೆ. ಭಗವದ್ಗೀತೆ ಸಾಮಾನ್ಯ ಮನುಷ್ಯನಿಗೆ ಜೀವನದ ಸೂತ್ರ, ಮಾರ್ಗದರ್ಶನ ಹಾಗೂ ನೀತಿ ಭೋಧನೆಯನ್ನು ಸಾರುತ್ತಿದೆ ಎಂದು ವಿಧ್ವಾನ್ ರಾಧಾಕೃಷ್ಣ ಭಟ್ ರವರು ವ್ಯಾಖ್ಯಾನಿಸಿದರು. ಅವರು ವೀರಕೇಸರಿ ಸಂಘದವರು ದ್ವಿತೀಯ ವರ್ಷದಲ್ಲಿ ಭಯಂದರ್ ಸೈಂಟ್ ಅಗ್ನೇಸಿಯಸ್ ಸ್ಕೂಲ್ ಸಭಾಗೃಹದಲ್ಲಿ ಜುಲೈ 20 ರಂದು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಆಯೋಜಿಸಿದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆಗೆ ಚಾಲನೆ ನೀಡಿ ನುಡಿದರು. ಹಲವಾರು ಅವತಾರವೆತ್ತ ಶ್ರೀಕೃಷ್ಣ, ಮಹಾಭಾರತದಲ್ಲಿ ಅರ್ಜುನನಿಗೆ ಭೋಧಿಸಿದ ಹಾಗೂ ಮಾನವನ ಜೀವನಕ್ಕೆ ಪವಿತ್ರ ಗ್ರಂಥವಾಗಿರುವ ಭಗವದ್ಗೀತೆಯ ಅನುಕರಣೆಯಿಂದ ಜೀವನ ಸಾರ್ಥಕವಾಗಬಹುದು. ಮಹಾತ್ಮ ಗಾಂಧಿ, ಬಾಲಗಂಗಾಧರ ತಿಲಕ, ಸುಭಾಸ್ ಚಂದ್ರಭೋಸ್ ರಂತಹ ಮಹಾನ್ ಮತ್ತು ಆದ್ಯಾತ್ಮಿಕ ಗುರುಗಳು ಭಗವದ್ಗೀತೆಯ ಸಾರವನ್ನು ಪಠಿಸಿದ್ದಾರೆ. ಇದು ಹಿಂದೂ ಧರ್ಮದರಿಗೆ ಮಾತ್ರ ಸೀಮಿತವಲ್ಲ. ಜಗತ್ತಿನ ಎಲ್ಲಾ ಧರ್ಮದವರಿಗೂ ಅನ್ವಯವಾಗಬಹುದು ಎಂದು ಅವರು ತಿಳಿಸಿದರು. ಸಮಾರಂಭಕ್ಕೆ ಅತಿಥಿಯಾಗಿ ಅಗಮಿಸಿದ ಬಂಟರ ಸಂಘ ಮುಂಬಯಿ ಇದರ ಮೀರಾ ಭಯಂದರ್ ಪ್ರಾದೇಶಿಕ…

Read More

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗನವಾಡಿ ಕೇಂದ್ರ ಕೋಟೆ ಸೂರಿಂಜೆ, ಲಯನ್ಸ್ ಕ್ಲಬ್ ಸುರತ್ಕಲ್, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಮತ್ತು ನಾಯರ್ ಕೋಡಿ ಫ್ರೆಂಡ್ಸ್ ಸರ್ಕಲ್ ಸಹಯೋಗದೊಂದಿಗೆ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಕೋಟೆ ಸೂರಿಂಜೆ ಅಂಗನವಾಡಿಯಲ್ಲಿ ಜರುಗಿತು. ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಸೂರಿಂಜೆ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಜಾಕ್, ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ, ಪ್ರಧಾನ ಕಾರ್ಯದರ್ಶಿ ಕಿರಣ್ ಅಚಾರ್ಯ, ಸದಸ್ಯರಾದ ಕುಶಾಲ್ ಎಂ, ಸಂತೋಷ್ ಬೇಕಲ್, ರಾಜೇಶ್, ಗಿರೀಶ್ ಕೋಟೆ, ಪುಷ್ಪರಾಜ್ ಶೆಟ್ಟಿ ಮಧ್ಯ, ಲಯನ್ ಮೊಯಿದಿನ್ ಕುಂಙ, ಲಯನ್ ಅಲ್ವಿನ್ ನೊರೊನಾ, ಲಯನ್ ರಾಜಯ್ಯ, ಕಾಟಿಪಳ್ಳ ಅರೋಗ್ಯ ಇಲಾಖೆ ಹಿರಿಯ ಸಹಾಯಕಿ ನಾಗರತ್ನ , ಅಂಗನವಾಡಿ…

Read More

ಕಳೆದ ಐದು ದಶಕಗಳಿಂದ ಮುಂಬೈಯಲ್ಲಿ ಊರು ಪರವೂರಿನ ಬೇರೆ ಬೇರೆ ಮೇಳಗಳ, ತಂಡಗಳ ಸಾವಿರಾರು ತೆಂಕು ಬಡಗು ಯಕ್ಷಗಾನ ಬಯಲಾಟ, ತಾಳಮದ್ದಳೆ, ನಾಟಕಗಳನ್ನು ವೀಕ್ಷಣೆ ಮಾಡಿರುವ ಅಪೂರ್ವ ಕಲಾಭಿಮಾನಿ, ಕಲಾ ವಿಮರ್ಶಕ ಭಾಸ್ಕರ ಶೆಟ್ಟಿ ಕಾಜುಪಾಡ ಅವರನ್ನು ಕುರ್ಲಾ ಜೆರಿಮೆರಿ ಕನ್ನಡ ಸಂಘದಲ್ಲಿ ನಡೆದ “ಶನೀಶ್ವರ ಮಹಾತ್ಮೆ” ಯಕ್ಷಗಾನ ಕಾರ್ಯಕ್ರಮದಲ್ಲಿ “ಕಲಾವಲ್ಲಭ” ಬಿರುದು ನೀಡಿ ಅಭಿನಂದಿಸಲಾಯಿತು. ಉದ್ಯಮಿ ರವೀಂದ್ರನಾಥ ಭಂಡಾರಿ ಅವರು ಅಧ್ಯಕ್ಷತೆ ವಹಿಸಿದ್ದರು. ಮುಂಬೈಯ ಕಳೆದ ಐದು ದಶಕಗಳ ಸಾಂಸ್ಕೃತಿಕ, ಸಾಮಾಜಿಕ ಸ್ಥಿತಿ ಗತಿಗಳ ಅಪೂರ್ವ ಅನುಭವ ಸಂಪನ್ನ ಭಾಸ್ಕರ ಶೆಟ್ಟಿ ಅವರು ಪಕ್ಷಿಕೆರೆ ಶನೀಶ್ವರ ಮಂಡಳಿಯ ಮುಂಬೈಯ ಆರು ಯಕ್ಷಯಾನ ವೀಕ್ಷಣೆ ಮಾಡಿ ಪ್ರೋತ್ಸಾಹ ನೀಡಿದವರು. ಖಳ ಪಾತ್ರಗಳನ್ನು ನಿರ್ವಹಿಸುತ್ತಿರುವ ಕಲಾವಿದರ ಮಹಾ ಅಭಿಮಾನಿ ಆಗಿರುವುದು ಇವರ ವಿಶೇಷತೆ ಎಂದು ಕದ್ರಿ ನವನೀತ ಶೆಟ್ಟಿ ಅಭಿನಂದಿಸಿದರು. ಶ್ಯಾಮ್ ಸಾಲಿಯಾನ್, ಹಿರಿಯ ರಂಗ ನಟ ಉಮೇಶ್ ಶೆಟ್ಟಿ, ನಾಗೇಶ್ ಪೂಜಾರಿ, ನಿತ್ಯಾನಂದ ಗುರು ಸ್ವಾಮಿ, ಹೇಮಂತ ಶೆಟ್ಟಿ ಕಾವೂರು ಗುತ್ತು,…

Read More

ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಜುಲೈ ಒಂದರ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಾಗೇಶ್ ಪುತ್ರನ್ ಅವರನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಪದಗ್ರಹಣ ಕಾರ್ಯಕ್ರಮದಲ್ಲಿ ಕ್ಲಬ್ ನ ನೂತನ ಅಧ್ಯಕ್ಷರಾದ ಲ. ಡಾ| ಅಂಪಾರು ನಿತ್ಯಾನಂದ ಶೆಟ್ಟಿಯವರುಮಾಜಿ ಜಿಲ್ಲಾ ಗವರ್ನರ್ ಲ. ಎಂಜೆಎಫ್ ದಿವಾಕರ ಶೆಟ್ಟಿ, ಪಿಎಂಜೆಎಫ್ ಲ. ರಂಜನ್ ಕಲ್ಕೂರ, ಪ್ರಾಂತಿಯ ಅಧ್ಯಕ್ಷರಾದ ಲ. ರಜತ ಹೆಗ್ಡೆ, ವಲಯ ಅಧ್ಯಕ್ಷರಾದ ಲ. ವಸಂತರಾಜ್ ಶೆಟ್ಟಿ, ಎಕ್ಸ್ಟೆಂಶನ್ ಚೇರ್ಮನ್ ಲ. ಅರುಣ್ ಕುಮಾರ್ ಹೆಗ್ಡೆಯವರ ಸಮಕ್ಷಮದಲ್ಲಿ ಸನ್ಮಾನಿಸಿ ಗೌರವಿಸಿದರು. ಈ ಸಂಧರ್ಭದಲ್ಲಿ ಪ್ರಾಂತೀಯ ಕಾರ್ಯದರ್ಶಿ ಲ. ಏಕನಾಥ ಬೋಳಾರ್, ಸ್ಥಾಪಕ ಅಧ್ಯಕ್ಷರಾದ ಲ. ಅಶೋಕ್ ಶೆಟ್ಟಿ ಸಂಸಾಡಿ, ಮಾಜಿ ಅಧ್ಯಕ್ಷರಾದ ಲ. ಉದಯ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಲ. ವೆಂಕಟರಮಣ ನಾಯಕ್, ಕೋಶಾಧಿಕಾರಿ ಲ. ಅರುಣ್ ಕುಮಾರ್ ಶೆಟ್ಟಿ, ನೂತನ ಕಾರ್ಯದರ್ಶಿ ಲ.ಭುಜಂಗ ಶೆಟ್ಟಿ ರಟ್ಟಾಡಿ, ಕೋಶಾಧಿಕಾರಿ ಲ. ಅಣ್ಣಪ್ಪ…

Read More

ಭಾರತ ಸಂಸ್ಕೃತಿಯನ್ನು ಉಳಿಸಿ ಸಾರ್ಥಕತೆಯ ಜೀವನವನ್ನು ನಡೆಸಲು ಕೋವಿಡ್ ಮಹಾ ಕಾಯಿಲೆ ನಮಗೆ ಕಳಿಸಿಕೊಟ್ಟಿದೆ. ಜೀವನ ಸಾರ್ಥಕವಾಗಬೇಕಾದರೆ ಇನ್ನೊಬ್ಬರಿಗೆ ಅನ್ಯಾಯವನ್ನು ಮಾಡದೆ ಸತ್ಕಾರ್ಯಗಳನ್ನು ಮಾಡುತ್ತಾ, ದಾನ ಧರ್ಮಗಳನ್ನು, ಪುಣ್ಯದ ಕಾರ್ಯಗಳನ್ನು ಮಾಡುತ್ತಾ ಬದುಕು ಕಟ್ಟಿದಾಗ ಜೀವನ ಸಾರ್ಥಕವಾಗುತ್ತದೆ ಎಂದು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ತಿಳಿಸಿದರು. ಸಯನ್ ಪೂರ್ವದ ನಿತ್ಯಾನಂದ ಸಭಾಗೃಹದಲ್ಲಿ ಜುಲೈ 20 ರಂದು ಜರಗಿದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚಿಸಿ, ಮುಂಬಯಿ ಮಹಾನಗರದಲ್ಲಿ ಅದೆಷ್ಟೋ ಜನರು ಸಂಪಾದನೆಯ ಬಹು ಪಾಲನ್ನು ಸಮಾಜ ಸೇವೆ, ದಾನ ಧರ್ಮಗಳ ಕಾರ್ಯಗಳಿಗಾಗಿ ವಿನಿಯೋಗಿಸುತ್ತಾರೆ. ಕಳೆದ ಹಲವಾರು ವರ್ಷಗಳಿಂದ ಗುರುದೇವ ಸೇವಾ ಬಳಗದ ಮೂಲಕವೂ ಸಮಾಜದ ಹಾಗೂ ಧರ್ಮದ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಅತ್ಯಂತ ಪುಣ್ಯದ ಕಾರ್ಯವಾಗಿದೆ. ಯಾವುದನ್ನೂ ಉಚಿತವಾಗಿ ಪಡೆದರೆ ಇದಕ್ಕೆ ಬೆಲೆ ಇರುವುದಿಲ್ಲ. ಶ್ರಮಪಟ್ಟು ಸಾಧನೆ ಮಾಡಿದಾಗ ಅದಕ್ಕೆ ಬೆಲೆ ಬರುತ್ತದೆ. ಆದ್ದರಿಂದ ಶ್ರಮಪಟ್ಟು ಸಾಧನೆಯಿಂದ ನಡೆಯಬೇಕು. ಅದರಿಂದ ಭಕ್ತಿ ಮಾರ್ಗವೂ ಕೂಡ ಸುಲಭವಾಗಿ ಲಭಿಸುತ್ತದೆ. ದಾನ ಧರ್ಮಗಳನ್ನು ಮಾಡುವಾಗ…

Read More

ಭೂಮಿಯ ಮೇಲೆ ಸಾವಿಲ್ಲದ ಯಾವುದೇ ವ್ಯಕ್ತಿ ಇಲ್ಲ. ಹುಟ್ಟಿದ ವ್ಯಕ್ತಿ ಒಂದಲ್ಲ ಒಂದು ದಿನ ಸಾಯಲೇಬೇಕು. ‎ಸತ್ತ ಮೇಲೆ ಪ್ರತಿಯೊಬ್ಬರಿಗೂ ಅವರ ಧರ್ಮದ ಪ್ರಕಾರ ಕೊನೆಯ ಕಾರ್ಯವನ್ನು ನಡೆಸಲಾಗುತ್ತದೆ. ಹಿಂದೂಗಳಲ್ಲಿ ಕೆಲವರಲ್ಲಿ ದೇಹವನ್ನು ಸುಡುವ ಪದ್ಧತಿ ಇದೆ. ಒಂದೊಂದು ಜಾತಿಯಲ್ಲಿ ಒಂದೊಂದು ವಿಧಾನದಲ್ಲಿ ಅಂತ್ಯಕ್ರಿಯೆಯನ್ನು ಕೈಗೊಳ್ಳಲಾಗುತ್ತದೆ. ‎ಆದರೆ ನಮಗೆ ಇಷ್ಟ ಬಂದ ಹಾಗೇ ಯಾವಾಗೆಂದರೆ ಆವಾಗ ಸತ್ತ ಹೆಣವನ್ನು ಸುಡಬಾರದು ಹಾಗೂ ಆ ಸತ್ತ ಹೆಣವನ್ನು ಒಬ್ಬಂಟಿಯಾಗಿ ಬಿಟ್ಟು ಹೋಗಲೂ ಬಾರದು. ಗರುಡ ಪುರಾಣದ ಪ್ರಕಾರ ಇಂತಹ ತಪ್ಪುಗಳನ್ನು ಮಾಡಲೇಬಾರದು ಎಂಬ ಉಲ್ಲೇಖವಿದೆ. ಸಾವಿನ ನಂತರದ ಕಾರ್ಯದ ಬಗ್ಗೆ ಗರುಡ ಪುರಾಣ ಏನು ಹೇಳುತ್ತದೆ. ‎ಸೂರ್ಯಾಸ್ತದ ನಂತರ ಅಂತ್ಯಕ್ರಿಯೆ ಮಾಡಿದರೆ ಏನಾಗುತ್ತದೆ? ಯಾವುದಾದರೂ ವ್ಯಕ್ತಿ ಸೂರ್ಯಾಸ್ತದ ನಂತರ ಸತ್ತರೆ ಆತನ ಅಂತ್ಯಕ್ರಿಯೆಯನ್ನು ಮಾರನೇ ದಿನ ಬೆಳಗ್ಗೆ ನೆರವೇರಿಸಬೇಕು ಹಾಗೂ ಆ ಹೆಣವನ್ನು ರಾತ್ರಿಯಿಡೀ ಇಟ್ಟುಕೊಳ್ಳಬೇಕು. ಯಾರಾದರೂ ಒಬ್ಬರು ಆ ಹೆಣದ ಪಕ್ಕದಲ್ಲಿ ಕೂರಲೇಬೇಕು. ಹೆಣವನ್ನು ಬಿಟ್ಟು ಎಲ್ಲಿಯೂ ಹೋಗುವ ಹಾಗಿಲ್ಲ. ‎ಗರುಡ…

Read More

ಹಲವಾರು ಸರಕಾರಿ ನೇಮಕಾತಿಗಳಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ನೇಮಕಾತಿಗೊಳ್ಳುವಂತೆ ಮಾಡಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಕೇಂದ್ರ ಕಛೇರಿ ಪುತ್ತೂರಿನಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಯುಸಿ/ಪದವಿ ವ್ಯಾಸಂಗದ ನಂತರದ ಅವಕಾಶಗಳ ಕುರಿತಾಗಿ ಒಂದು ದಿನದ ಮಾಹಿತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಸ್ಪರ್ಧಾತ್ಮಕ ಪರೀಕ್ಷೆಗಳ ಖ್ಯಾತ ತರಬೇತುದಾರ ಹಾಗೂ ಶಿಕ್ಷಣ ತಜ್ಞ ಅರವಿಂದ ಚೊಕ್ಕಾಡಿಯವರು ಕಾರ್ಯಾಗಾರವನ್ನು ಉದ್ಘಾಟಿಸಿದರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈಯವರು ಪ್ರಸ್ತಾವಿಕವಾಗಿ ಮಾತನಾಡಿ, ಖಾಸಗಿ ಮತ್ತು ಸರಕಾರಿ ವಲಯದ ಉದ್ಯೋಗಗಳ ಮಹತ್ವವನ್ನು ವಿವರಿಸಿ, ವಿದ್ಯಾಮಾತಾ ಅಕಾಡೆಮಿಯಲ್ಲಿರುವ ಅವಕಾಶಗಳ ಕುರಿತು ಬೆಳಕು ಚೆಲ್ಲಿದರು. ನಂತರದಲ್ಲಿ ಅರವಿಂದ ಚೊಕ್ಕಾಡಿರವರು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಿದರು. ಉದ್ಯೋಗಾದರಿತವಾಗಿ ಮಾಹಿತಿಗಳ ಕೊರತೆಯಿಂದ ಹಲವಾರು ನೇಮಕಾತಿ ಪ್ರಕ್ರಿಯೆಗಳಲ್ಲಿ ಅವಕಾಶ ಕಳೆದುಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರತಿನಿತ್ಯ ಬೆಳಿಗ್ಗೆ 11…

Read More

ಪುತ್ತೂರು ತಾಲೂಕು ಮಹಿಳಾ ಬಂಟರ ವಿಭಾಗದ ಕಾರ್ಯಕಾರಿ ಸಮಿತಿ ಸಭೆಯು ಜುಲೈ 15 ರಂದು ಪುತ್ತೂರು ಎಂ. ಸುಂದರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರುರವರು ಮಾತನಾಡಿ, ಆಗಸ್ಟ್ 3ರಂದು ಪುತ್ತೂರು ತಾಲೂಕು ಮಹಿಳಾ ಬಂಟರ ವಿಭಾಗದ ಆಶ್ರಯದಲ್ಲಿ ಆಟಿದ ಕೂಟ ಕಾರ್ಯಕ್ರಮ, ಬಂಟರ ಯಾನೆ ನಾಡವರ ಮಾತೃ ಸಂಘ, ಪುತ್ತೂರು ತಾಲೂಕು ಬಂಟರ ಸಂಘ ಹಾಗೂ ಯುವ ಮತ್ತು ವಿದ್ಯಾರ್ಥಿ ಬಂಟರ ವಿಭಾಗದ ಸಹಯೋಗದೊಂದಿಗೆ ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿದ್ದು, ಈ ಕಾರ್ಯಕ್ರಮದಲ್ಲಿ ಪುತ್ತೂರು ಕಡಬ ತಾಲೂಕು ವ್ಯಾಪ್ತಿಯಲ್ಲಿರುವ ಎಲ್ಲಾ ಬಂಟ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಮಾದರಿ ಕಾರ್ಯಕ್ರಮವಾಗಬೇಕು. ಈ ಬಾರಿ ಆಟಿದ ಕೂಟ ಕಾರ್ಯಕ್ರಮದ ನೇತೃತ್ವವನ್ನು ಮಹಿಳಾ ಬಂಟರ ವಿಭಾಗದವರು ವಹಿಸಿಕೊಂಡು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಬೇಕೆಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ…

Read More