Author: admin

ಕನ್ನಡ ವೆಲ್ಫೇರ್ ಸೂಸೈಟಿ ಘಾಟ್ಕೋಪರ್ ಈ ಸಂಸ್ಥೆ ನಿರಂತರ ಕಳೆದ 59 ವರ್ಷಗಳಿಂದ ಸಮಾಜಪರ ಕಾರ್ಯಗಳೊಂದಿಗೆ ಪರಿಸರದ ತುಳು ಕನ್ನಡಿಗರನ್ನು ಒಂದುಗೂಡಿಸಿ ಆ ಮೂಲಕ ಕ್ರಿಯಾಶೀಲವಾಗಿ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ವೈದ್ಯಕೀಯ ಹಾಗೂ ನಮ್ಮ ಕಲೆ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಮತ್ತು ಉಳಿಸಿ ಬೆಳೆಸುವ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಇದೀಗ ಈ ಸಂಸ್ಥೆ ವಜ್ರ ಮಹೋತ್ಸವವನ್ನು ಆಚರಿಸುವ ಸಿದ್ಧತೆಯಲ್ಲಿದ್ದು, ಮುಂಬರುವ ಫೆಬ್ರವರಿ 01 ರಂದು ಕುರ್ಲಾದ ಬಂಟರ ಭವನದಲ್ಲಿ ಬೆಳಿಗ್ಗೆ ಗಂಟೆ 10 ರಿಂದ ಸಂಜೆ 08 ರ ತನಕ ಅದ್ದೂರಿಯಾಗಿ ಆಚರಿಸಿಕೊಳ್ಳಲಿದೆ. ಈ ನಿಟ್ಟಿನಲ್ಲಿ ಸಂಪೂರ್ಣ ಕಾರ್ಯಕ್ರಮವು ಯಶಸ್ವಿಯಾಗಿ ವಿಜೃಂಭಣೆಯಿಂದ ನಡೆಯಬೇಕೆಂಬ ಉದ್ದೇಶದಿಂದ ನಗರದ ಮಹಾದಾನಿಗಳು, ಕಲೆ ಸಂಸ್ಕೃತಿಯ ಪ್ರೋತ್ಸಾಹಕರು, ತುಳು ಕನ್ನಡ ಸಂಘ ಸಂಸ್ಥೆಗಳಿಗೆ, ಜಾತಿಯ ಸಂಸ್ಥೆಗಳಿಗೂ ನಿರಂತರ ಬೆಂಬಲವನ್ನು ನೀಡುತ್ತಿರುವ ಉದ್ಯಮಿಗಳಾದ ವಿ.ಕೆ ಗ್ರೂಪ್ ಆಫ್ ಕಂಪೆನಿಯ ಆಡಳಿತ ನಿರ್ದೇಶಕ ಕೆ.ಎಂ ಶೆಟ್ಟಿ, ಬಾಬಾಸ್ ಗ್ರೂಪ್ ನ ಆಡಳಿತ ನಿರ್ದೇಶಕ ಮಹೇಶ್ ಎಸ್ ಶೆಟ್ಟಿ, ವೆಲ್ಕಮ್ ಪ್ಯಾಕೇಜ್ ಇಂಡಸ್ಟ್ರೀಸ್…

Read More

ಕಲಾ, ಸಂಸ್ಕೃತಿ, ಸಮಾಜಮುಖಿ ಸೇವೆ ಹಾಗೂ ವೈದ್ಯಕೀಯ ಕ್ಷೇತ್ರಗಳಲ್ಲಿ ಸಾಧನೆ ಮೆರೆದಿರುವ ಡಾ. ಅವಿನ್ ಬಿ ಆರ್ ಆಳ್ವ ಅವರನ್ನು ತುಳುವ ಮಹಾಸಭೆ ಮಂಗಳೂರು ಮಹಾನಗರ ಸಂಚಾಲಕರಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ಅವರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ಮತ್ತು ಆಸ್ಪತ್ರೆಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಸಮುದಾಯ ವೈದ್ಯಕೀಯ ಬೋಧನೆ, ಸಂಶೋಧನೆ, ಗ್ರಾಮೀಣ ಆರೋಗ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲೆಟ್ ಗಳ ಆರೋಗ್ಯ ತಪಾಸಣೆ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಕೋವಿಡ್ ವಾರಿಯರ್ ಪ್ರಶಸ್ತಿ ಪಡೆದಿದ್ದಾರೆ. ರಾಜ್ಯ ಕಿರಿಯ ವೈದ್ಯರ ಸಂಘದ ಸಲಹಾ ಮಂಡಳಿ ಸದಸ್ಯರಾಗಿದ್ದಾರೆ. ಟೀಚರ್ಸ್ ಸಹಕಾರ ಬ್ಯಾಂಕ್ ನಿರ್ದೇಶಕರಾಗಿದ್ದಾರೆ. ನಿಟ್ಟೆ ವಿಶ್ವ ವಿದ್ಯಾಲಯದ ಕೆ ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ NSS ಪ್ರೋಗ್ರಾಂ…

Read More

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಸುರತ್ಕಲ್‌ನ ಗೋವಿಂದದಾಸ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಸುರತ್ಕಲ್‌ನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಆಳ್ವಾಸ್ ಪ.ಪೂ ಕಾಲೇಜು 8 ಚಿನ್ನ ಹಾಗೂ 3 ಬೆಳ್ಳಿಯೊಂದಿಗೆ ಒಟ್ಟು 11 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲೂ ಆಳ್ವಾಸ್ 6 ಚಿನ್ನ ಹಾಗೂ 3 ಕಂಚಿನೊಂದಿಗೆ ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡು ಅವಳಿ ಪ್ರಶಸ್ತಿಗೆ ಭಾಜನವಾಯಿತು. ಹುಡುಗರ ವಿಭಾಗದಲ್ಲಿ ಆಳ್ವಾಸ್ ಸಾಧನೆ : 61 ಕೆಜಿ – ಅರುಣ್ (ಪ್ರಥಮ), 65 ಕೆಜಿ – ಶಶಿಕುಮಾರ್ (ಪ್ರಥಮ), ರಂಜನ್ (ದ್ವಿತೀಯ), 70 ಕೆಜಿ – ಮನೋಜ್ (ಪ್ರಥಮ), 74 ಕೆಜಿ – ಶಿವರಾಜ್ ಕುಮಾರ್ (ಪ್ರಥಮ), ರಜತ್ ಬಾಸು (ದ್ವಿತೀಯ), 79 ಕೆಜಿ – ಸಂಕೇತ್ (ಪ್ರಥಮ), 86 ಕೆಜಿ – ಕುಶಾಲ್ (ಪ್ರಥಮ), 92 ಕೆಜಿ – ಶಮಂತ್ ಶೆಟ್ಟಿ (ಪ್ರಥಮ),…

Read More

ಬ್ರಹ್ಮಾವರ ಸಂಸ್ಥೆ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮಹತ್ವಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಯುತ ಜಾರ್ಜ್ ಕುರಿಯನ್ ರವರು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿ, ವಿದ್ಯಾರ್ಥಿಗಳಿಗೆ ಎಲ್ಲಕ್ಕಿಂತ ಶ್ರೇಷ್ಠವಾದ ಪದ, ವೃತ್ತಿ, ಸನ್ಮಾರ್ಗವನ್ನು ತೋರಿಸುವವನು “ಗುರು” ಎಂದು. ಗುರು ಎಂಬ ಪದದ ಮಹತ್ವವನ್ನು ತಿಳಿಸಿದರು. ಶಿಕ್ಷಕರಿಗೆ ಬೋಧನೆಯಲ್ಲಿ ಹೊಸ ಹೊಸ ಬೋಧನಾ ವಿಧಾನ, ಕೌಶಲ ಮತ್ತು ಜ್ಞಾನವನ್ನು ಅಳವಡಿಸಿಕೊಳ್ಳುವಂತೆ ಸಲಹೆಯನ್ನು ನೀಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಪ್ರಕಾಶ್ಚಂದ್ರ ಶೆಟ್ಟಿಯವರು ಶಿಕ್ಷಕರಿಂದ ಪ್ರತಿಜ್ಞೆಯನ್ನು ಸ್ವೀಕರಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದೆ ಗುರುಯಿರಬೇಕು, ಹಿಂದೆ ಗುರಿಯಿರಬೇಕು. ನಮ್ಮ ಸಂಸ್ಥೆಯು ಉತ್ತಮ ಶಿಕ್ಷಕ ವೃಂದದವರನ್ನು ಹೊಂದಿದ್ದು, ಅವರ ಮಾರ್ಗದರ್ಶನದಲ್ಲಿ ಕಲಿಯುವ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆಯೆಂದು ಶುಭ ಹಾರೈಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಶುಭಾಶಯ ಪತ್ರಗಳ ಮತ್ತು ಗಾಯನದ ಮೂಲಕ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿದರು. ಶಿಕ್ಷಕ ವೃಂದದವರು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಶಿಕ್ಷಕರಿಗಾಗಿ ವಿವಿಧ…

Read More

ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಇದರ ವತಿಯಿಂದ ನಡೆದ 11ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಅಜ್ಮಾನ್ ನ ಇಂಡಿಯನ್ ಅಸೋಸಿಯೇಷನ್ ಹಾಲ್ ನಲ್ಲಿ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಪುರೋಹಿತರಾದ ಸಾಂತೂರು ಲಕ್ಷ್ಮಿಕಾಂತ್ ಭಟ್ ಹಾಗೂ ರಾಜೇಶ್ ಅಡಿಗರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿತು. ಬೆಳಗ್ಗೆ ಗಣಹೋಮದೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಮಹಾ ಅನ್ನದಾನದಲ್ಲಿ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಸಂಜೆ ವಿಸರ್ಜನಾ ಮೆರವಣಿಗೆ ನಡೆಯಿತು. ಈ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಡಾ| ಬಿ.ಆರ್ ಶೆಟ್ಟಿ, ಯು.ಎ.ಇ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಉದ್ಯಮಿ ಸಂಘಟಕ ಸರ್ವೋತ್ತಮ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ವಿದ್ವಾನ್ ಡಾ. ಸತ್ಯಕೃಷ್ಣ ಭಟ್, ಮೂಡಬಿದ್ರಿ ಶಾಸಕ ಉಮಾನಾಥ್ ಕೋಟ್ಯಾನ್, ಉದ್ಯಮಿ ರಾಘವೇಂದ್ರ ಕುಡ್ವ, ಮಾರ್ಗದೀಪ ಸಮಿತಿಯ ಅಧ್ಯಕ್ಷ ಮಹೇಶ್ ಚಂದ್ರಗಿರಿ, ಉಪಾಧ್ಯಕ್ಷ ಪ್ರವೀಣ್ ಉಪ್ಪೂರು, ಜೊತೆ ಕಾರ್ಯದರ್ಶಿ ಬಿಪಿನ್ ಚಂದ್ರ ನಾಯಕ್, ಕೋಶಾಧಿಕಾರಿ…

Read More

ಬಾರಕೂರು ರಾಜಧಾನಿ ರಾಜ ಗಣೇಶೋತ್ಸವದ ಮೂಲಕ ಮತ್ತೆ ಬಾರಕೂರಿನ ಗತವೈಭವ ಮರುಕಳಿಸುವಂತಾಗಬೇಕು. ಯುವ ಶಕ್ತಿಗಳು ಒಂದಾಗಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ದೇಶ ಕಟ್ಟುವ ಕಾರ್ಯ ಮಾಡಬೇಕು ಎಂದು ಎಂಆರ್‌ಜಿ ಗ್ರೂಪ್ ಸಂಸ್ಥಾಪಕ ಡಾ| ಕೆ ಪ್ರಕಾಶ್ ಶೆಟ್ಟಿ ಹೇಳಿದರು. ಇಲ್ಲಿನ ರಾಜಧಾನಿ ರಾಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಕೋಟೆಕೇರಿ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಥಮ ಬಾರಿಗೆ ಬಾರಕೂರಿಗೆ ಆಗಮಿಸಿದ ಡಾ|ಕೆ ಪ್ರಕಾಶ್ ಶೆಟ್ಟಿ, ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನ ಅಧ್ಯಕ್ಷ ದೀಪಕ್ ಶೆಟ್ಟಿ, ಭಾಗವತ ಉದಯ ಕುಮಾರ್ ಹೊಸಾಲ, ದೈವ ನರ್ತಕ ಸಂತೋಷ ಕುಮಾರ್ ಆರ್ಡಿ ಅವರನ್ನು ಗೌರವಿಸಲಾಯಿತು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಾರಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶಾಂತಾರಾಮ ಶೆಟ್ಟಿ, ಸುಧೀರ್…

Read More

ಪ್ರತಿಷ್ಠಿತ ಜಾತೀಯ ಸಂಘ ಸಂಸ್ಥೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ವತಿಯಿಂದ ತವರೂರಿನ ನಾಮಾಂಕಿತ ಕಲಾವಿದರ ಕೂಡುವಿಕೆಯಲ್ಲಿ ‘ಭೃಗು ಶಾಪ’ ಪೌರಾಣಿಕ ಯಕ್ಷಗಾನ ತಾಳಮದ್ದಳೆಯು ಸೆಪ್ಟೆಂಬರ್ 6ರಂದು ಅಪರಾಹ್ನ 3 ರಿಂದ ಜೂಯಿ ನಗರದ ಬಂಟ್ಸ್ ಸೆಂಟರ್ ನಲ್ಲಿ ಜರುಗಲಿದೆ. ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆ ಶೆಟ್ಟಿಯವರ ಮುಂದಾಳತ್ವದಲ್ಲಿ ಕಲಾ ಸಂಘಟಕ ಪ್ರಕಾಶ್ ಶೆಟ್ಟಿ ಸುರತ್ಕಲ್ ಅವರ ಕಲಾ ಪ್ರಕಾಶ ಪ್ರತಿಷ್ಠಾನ ಮುಂಬೈ ಇದರ ಸಂಯೋಜನೆಯಲ್ಲಿ ಅಸೋಸಿಯೇಷನ್ ನ ಪದಾಧಿಕಾರಿಗಳು, ಸದಸ್ಯರ ಸಹಕಾರದೊಂದಿಗೆ ನಡೆಯಲಿರುವ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ, ಮದ್ದಲೆಯಲ್ಲಿ ಮಧುಸೂದನ್ ಪಾಲನ್, ಚೆಂಡೆಯಲ್ಲಿ ಆಶಿಶ್ ಆರ್ ದೇವಾಡಿಗ, ಕಲಾವಿದರಾಗಿ ಜಬ್ಬಾರ್ ಸಮೋ ಸಂಪಾಜೆ, ಪ್ರೊ. ಪವನ್ ಕಿರಣ್ ಕೆರೆ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಸುರೇಶ್ ಶೆಟ್ಟಿ ನಂದ್ರೊಳ್ಳಿ, ಡಾ| ಮಹೇಶ್ ಸಾಣೂರು ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸದಸ್ಯರು, ಸಮಾಜ ಬಾಂಧವರು, ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಬಾಂಬೆ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ…

Read More

ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ (ಪದವಿಪೂರ್ವ) ಸಹಯೋಗದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಾ. ಶಿವರಾಮ ಕಾರಂತ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು, 1969 ರ ಸೆಪ್ಟೆಂಬರ್ 24ರಂದು ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಸೇವಾ ಯೋಜನೆ ಘೋಷಿತವಾಗಿ, ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿಯಂದು ಅಧಿಕೃತವಾಗಿ ಅನುಷ್ಠಾನಗೊಂಡಿತು. ಇಂದು ಈ ಯೋಜನೆ ಐವತ್ತು ವರ್ಷಗಳ ಸಮೃದ್ಧ ಇತಿಹಾಸದ ಮೂಲಕ ಲಕ್ಷಾಂತರ ಯುವಕರಲ್ಲಿ ಸೇವಾ ಮನೋಭಾವವನ್ನು ಬೆಳೆಸಿದ ಮಹತ್ವದ ಚಳವಳಿಯಾಗಿದೆ ಎಂದರು. ಶಿಕ್ಷಣ ಎಂದರೆ ಕೇವಲ ಪಠ್ಯಪುಸ್ತಕದ ಜ್ಞಾನವಲ್ಲ. ಶಕ್ತಿಯ ಅರಿವನ್ನು ಮೂಡಿಸುವುದೇ ಶಿಕ್ಷಣದ ನಿಜವಾದ ಉದ್ದೇಶ. ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಭಿನ್ನ ಸಾಮರ್ಥ್ಯ ಅಡಗಿದೆ. ಅದನ್ನು ಬೆಳಸಿಕೊಳ್ಳುವುದೇ ನಿಜವಾದ ಸಾಧನೆ. ಕೌಶಲ್ಯ ಎಂದರೆ ಕೆಲಸವನ್ನು ಪರಿಣಿತವಾಗಿ ಮಾಡುವ ಸಾಮರ್ಥ್ಯ. ಈ ಕೌಶಲ್ಯವನ್ನು ರೂಡಿಸಿಕೊಂಡರೆ ಮಾತ್ರ…

Read More

ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹುಡುಗರ ತಂಡವು ದ್ವೀತಿಯ ಸ್ಥಾನ ಪಡೆಯಿತು. ತಂಡದ ಐವರು ವಿದ್ಯಾರ್ಥಿಗಳಾದ ಆಯುಷ್ ಶೆಟ್ಟಿ, ಅನುಜ್ ಅಂಬ್ಲಿ, ಕನಿಷ್ಕ್, ಸನ್ವಿತ್ ಮತ್ತು ಅಭಿಷ್ ಜಿಲ್ಲಾ ಮಟ್ಟದ ಕ್ರಿಕೆಟ್ ತಂಡಕ್ಕೆ ಆಯ್ಕೆ ಆಗಿದ್ದಾರೆ. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಫಲಕ ಪದಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಹಾಗೂ ಸೂರ್ಯ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು.

Read More

ಮಂದಾರ್ತಿ ಸೇವಾ ಸಹಕಾರಿ ಸಂಘವು 2024 -25 ನೇ ಸಾಲಿನಲ್ಲಿ ನಡೆಸಿದ ಅತ್ಯುತ್ತಮ ಸಾಧನೆಗಾಗಿ ಮೂರನೇ ಬಾರಿ ಅಪೆಕ್ಸ್ ಬ್ಯಾಂಕಿನ ಪ್ರಶಸ್ತಿಗೆ ಭಾಜನವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್ ಗಂಗಾಧರ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಮಾಜಿ ನಿರ್ದೇಶಕ ಎಚ್ ವಿಠಲ ಶೆಟ್ಟಿ, ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ಶೆಟ್ಟಿ ಬಾಲ್ಯೊಟ್ಟು, ದಿವಾಕರ ರೈ ವಿನಯಕುಮಾರ್ ಸೂರಿಂಜೆ, ಮಹೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಮಂಗಳೂರು ಡಿಆರ್ ರಮೇಶ್, ಉಡುಪಿ ಡಿಆರ್ ಲಾವಣ್ಯ ಉಪಸ್ಥಿತರಿದ್ದರು.

Read More