Author: admin

ಮೂಡುಬಿದಿರೆ: ತುಳುನಾಡು ಸರ್ವಧರ್ಮೀಯರ ನಾಡು. ಇಲ್ಲಿ ಜಾತಿ ಮತ ಪಂಥವೆಂಬ ಭೇದವಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ನುಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ತುಳು ಸಂಘದ ಸಹಯೋಗದಲ್ಲಿ ತುಳು ಬಾಷೆ ಬದ್ಕ್ ಗೇನದ ಪೊಲಬು ತುಲಿಪು ಕಾರ್ಯಕ್ರಮ ಶುಕ್ರವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಿತು. ಶೈಕ್ಷಣಿಕ ಕ್ಷೇತ್ರಕ್ಕೆ ಯಾವ ಭಾಷೆ ಪ್ರವೇಶಿಸುತ್ತದೆಯೋ ಆ ಭಾಷೆಯ ಮೌಲ್ಯ ಮತ್ತು ವಿಸ್ತಾರಗೊಳ್ಳುತ್ತದೆ. ಇಂತಹ ಕಾರ್ಯಕ್ರಮಗಳು ತುಳು ಭಾಷೆಯನ್ನು ಇನ್ನಷ್ಟು ಶ್ರೀಮಂತಗೊಳಿಸಬಲ್ಲದು. ತುಳುನಾಡಿನಲ್ಲಿ 160ಕ್ಕೂ ಹೆಚ್ಚಿನ ಕ್ರೀಡೆಗಳಿವೆ. ತುಳುನಾಡಿನ ಔಷದೋಪಚಾರ ವಿಶಿಷ್ಟವಾಗಿದೆ. ಪ್ರತಿಯೊಂದು ಊರಿನ ಹೆಸರಿಗೂ ಪ್ರಾಚೀನ ಇತಿಹಾಸವಿದೆ. ಇದರ ಬಗ್ಗೆ ಅಧ್ಯಯನ ಮಾಡಿ ತುಳುವನ್ನು ಸಮಗ್ರ ನೆಲೆಯಲ್ಲಿ ಕಟ್ಟುವ ಕೆಲಸವಾಗಬೇಕಿದೆ. ಸುಮಾರು 5,000 ಕ್ಕೂ ಹೆಚ್ಚಿನ ತುಳು ಪುಸ್ತಕಗಳು ತುಳು ಸಾಹಿತ್ಯ ಅಕಾಡೆಮಿಯಲ್ಲಿ ಲಭ್ಯವಿದೆ. ಇದರ ಮೂಲಕ ತುಳುನಾಡಿನ ಪರಂಪರೆಯನ್ನು ತಿಳಿದುಕೊಳ್ಳಬಹುದಾಗಿದೆ. ತಾಯಿ ಭಾಷೆ ಮತ್ತು…

Read More

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(NTA) ನಡೆಸುವ ರಾಷ್ಟೃಮಟ್ಟದ NIFT ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ, ಚರಣ್ ಜಿಎಂ, ಚಿನ್ಮಯಿ ಆರ್, ಹರ್ಷ ಎಸ್ ಗೌಡ, ಜೀವಿತ ಜಿ ಆರ್, ಮಾನಸಿ ಪಿ, ನವ್ಯ ಕೆ.ಆರ್, ಪೂರ್ವಿಕ್ ಕೆ.ಸಿ, ಪ್ರಾಪ್ತಿ ಎಂ.ಗೌಡ, ರಕ್ಷಾ, ಸುಖಿ ಆರ್. ಗೌಡ, ವಿಕಾಸ್ ಡಿ. ಸಿ. ಆಯ್ಕೆಯಾದ ವಿದ್ಯಾರ್ಥಿಗಳು. ಪಿಯು ವಿದ್ಯಾರ್ಥಿಗಳು ಎದುರಿಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅತ್ಯುತ್ತಮ ತರಬೇತಿಯನ್ನು ನೀಡುತ್ತಾ ಬಂದಿದ್ದು ಎಲ್ಲಾ ವಿಭಾಗದಲ್ಲೂ ಯಶಸ್ವೀ ಫಲಿತಾಂಶ ನೀಡುತ್ತಿದೆ.ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, NIFT ಪರೀಕ್ಷೆಯ ಸಂಯೋಜಕರಾದ ರಕ್ಷಿತ್, ಸುಮಂತ್ ದಾಮ್ಲೆ, ಶರತ್ ಅಭಿನಂದಿಸಿದ್ದಾರೆ.

Read More

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜು ಕಳೆದ 26 ವರ್ಷಗಳಿಂದ ಕಲಿಕೆಗೆ ಮತ್ತು ಫಲಿತಾಂಶಕ್ಕೆ ಒತ್ತು ನೀಡುವ ಮೂಲಕ ಇದುವರೆಗ 63 ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ವಿಧ್ಯಾಭ್ಯಾಸ ನೀಡಿದ ಹೆಗ್ಗಳಿಕೆ ಪಡೆದಿದೆ. ಈಗಾಗಲೇ ಸಂಸ್ಥೆಯಲ್ಲಿ  2025-26ನೇ ಸಾಲಿನ  ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ  ಪಿಯು ಪ್ರವೇಶಾತಿ ಆರಂಭಗೊಂಡಿದ್ದು,  ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ತಿಂಗಳ ಮೊದಲ ವಾರದಲ್ಲಿ ಬರುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳು ತಮ್ಮ 9ನೇ ತರಗತಿ  ಅಥವಾ ಪ್ರಿಪರೇಟರಿ ಪರೀಕ್ಷಾ ಅಂಕಗಳ ಆಧಾರದ ಮೇಲೆ  ಕಾಲೇಜಿನಲ್ಲಿ  ತಮ್ಮ ಸೀಟುಗಳನ್ನು ಕಾಯ್ದಿರಿಸಬಹುದು.ಹತ್ತನೇ ತರಗತಿಯ ನಂತರದ ಎರಡು ವರ್ಷಗಳು, ವಿದ್ಯಾರ್ಥಿ ಜೀವನದ ಪ್ರಮುಖ ಕಾಲಘಟ್ಟ. ಈ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ಹಾಗೂ ಅಂಕಗಳಿಸುವ ಕಡೆಗೆ ಹೆಚ್ಚು ಒತ್ತು ಕೊಟ್ಟು ಕಲಿಯಬೇಕಾಗುತ್ತದೆ. ಅವರ ಜೀವನದ ಗುರಿ ಸಾಧನೆಯು  ಪಿಯುಸಿಯಲ್ಲಿ ಅವರು ಪಡೆಯುವ ಅಂಕಗಳ ಮೇಲೆ  ನಿರ್ಧಾರಿತವಾಗಿರುತ್ತದೆ. ಹೆತ್ತವರು ಸಾಧಾರಣವಾಗಿ ಮಕ್ಕಳನ್ನು ಇತರ ಚಟುವಟಿಕೆಗಳಿಂದ ಮುಕ್ತಗೊಳಿಸಿ ಓದಿನ ಕಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು…

Read More

ಇತ್ತಿಚೆಗ್ ಒಂಜಿ ಹಿರಿಯಾರೆಡ ಪಾತೆರ್ನಗ ಪಂಡೆರ್ ನಮ್ಮ ದೈವಾರಾಧನೆ ಜೋಕುಲು ಗೊಬ್ಬು ದಕ್ಕಿನ ಗೊಂಬೆದಲೆಕ ಅತಿಂದ್ ಪಂಡ್ದು! ಅಂಡ ಈ ಸರಿಕಟ್ಟು ಮೀಸೆ ಬರಂದಿನ ಜವಾನೆರ್ ದೈವೋಲೆಗ್ ಮದಿಪುನ ತೂನಗ ಅನ್ನಿಸಾಂಡ್ ಜೋಕುಲು ಗೊಬ್ಬುದಕ್ಕಿನ ಗೊಂಬೆ ಅತಿಜಿ, ಜೋಕುಲು ಗೊಬ್ಬುನ ಮೈದಾನ ಅತಿಂಡ್ ದೈವದ ಕಲ ಪಂಡ್ದು. ಕಾರಣ, ಯೂಟ್ಯೂಬ್ ತೂದು ಬೈಪಾಟ ಮಾಲ್ತ್ ಮದಿಪುನ, ನಿಮಿಷಗಟ್ಲೆ ದೈವದ ಕಥೆ ಪಂನ್ಪುನ, ಮದಿಪು ಪಂನ್ಪುನವು ದೈವನ್ ಮಾನವುನವು ಅಂಡ ದೈವ ನುಡಿ ಕೊರ್ಪೂನ ಧಾಟಿಡ್, ಯಕ್ಷಗಾನದ ಧಾಟಿಡ್ ಮದಿಪುನ! ಉಂದೆತ ಅಗತ್ಯ ಉಂಡ?! ನನಲ ಪರಶುರಾಮ ಸೃಷ್ಟಿ, ಪರಶುರಾಮ ಸೃಷ್ಟಿ ಪನೊಂದು ತಿರ್ಗೊಂದುಲ್ಲೆರ್, ನಮನ್ ಬರೆತಿ ಬೆಮ್ಮೆರೆನ ನೆಂಪೆ ಇಜ್ಜಿ ಮೊಕ್ಲೆಗ್! ಕುಡ ಮೊಕ್ಲೆಗ್ ಕ್ಯಾಮೆರಾ ಮ್ಯಾನ್, ಆವೆನ್ ಎಡಿಟ್ ಮಲ್ಪರೆ ನನೊರಿ! ಈ ವಿಡಿಯೋಗ್ರಾಫಿದ ಶೋಕಿ ಇಪ್ಪುನಕ್ಲೆನ್ ಲೆಪ್ಪುನಗ ನಮ ಯೋಚನೆ ಮಲ್ಪೊಡ್! ಆಂಕರಿಂಗ್ ಮಲ್ಪುನಕುಲು ಮದಿಪುನ ಖಂಡಿತ ತಪ್ಪತ್ತು, ಅಂಡ ದೈವಗು ಮದಿಪುಣ ಕೆಲವು ವಿಚಾರನು ಬಾಕಿದ ವೇದಿಕೆಡ್…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ ತೋನ್ಸೆ ಪುಷ್ಕಳ ಕುಮಾರ್, ದಿವಾಕರ ಆಚಾರ್ಯ ಗೇರುಕಟ್ಟೆ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು, ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ, ಸಹ ಕಾರ್ಯದರ್ಶಿಗಳಾಗಿ ಮಧುಸೂಧನ ಅಲೆವೂರಾಯ ಮತ್ತು ಕುಂಜತ್ತೂರು ಗಣೇಶ್, ಸಹ ಸಂಚಾಲಕರಾಗಿ ಚಂದ್ರಶೇಖರ ಕೊಂಕಣಾಜೆ ಮತ್ತು ಹರಿಶ್ಚಂದ್ರ ನಾಯ್ಕ ಮಾಡೂರು ಆಯ್ಕೆಯಾದರು. ಗೌರವ ಸಲಹೆಗಾರರಾಗಿ ಡಾ ಎಂ ಪ್ರಭಾಕರ ಜೋಶಿ, ಜಬ್ಬಾರ್ ಸಮೋ ಸಂಪಾಜೆ, ಹರೀಶ್ ಬಳಂತಿಮೊಗರು, ಸುಬ್ರಹ್ಮಣ್ಯ ಬೈಪಡಿತ್ತಾಯ, ಪ್ರೊ ಭಾಸ್ಕರ್ ರೈ ಕುಕ್ಕುವಳ್ಳಿ, ಸುಂದರ ಶೆಟ್ಟಿ ಬೆಟ್ಟಂಪಾಡಿ ಆಯ್ಕೆಯಾದರು.ಇದೇ ಸಂದರ್ಭದಲ್ಲಿ ಜೂನ್ 1 ರಂದು…

Read More

ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದಿಲ್ ರಾಜ್ ಆಳ್ವ ಆಯ್ಕೆಯಾಗಿದ್ದಾರೆ. ದಿಲ್ ರಾಜ್ ಆಳ್ವ ಅವರು ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಕ್ರೀಯರಾಗಿದ್ದಾರೆ. ಅವರು ದ.ಕ. ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಸಮಾಜಪರ ಚಿಂತನೆಯುಳ್ಳ ದಿಲ್ ರಾಜ್ ಆಳ್ವರವರು ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈಗ ಕದ್ರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

Read More

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಶ್ರೀಯುತ ಬಿ. ಜಯಕರ ಶೆಟ್ಟಿಯವರು ಮಾತನಾಡಿ, ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯ ಅನಾವರಣಕ್ಕಾಗಿ ಸರಕಾರವು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ಆರಂಭಿಸಿದೆ. ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ ಅನಾವರಣಗೊಳಿಸುವ ಪ್ರಯತ್ನ ಆಗಬೇಕು. ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಸಹಕಾರಿಯಾಗುತ್ತದೆ. ಬೇಸಿಗೆ ಶಿಬಿರಗಳು ಕೂಡ ಮಕ್ಕಳಿಗೆ ಉತ್ತಮ ವೇದಿಕೆಯಾಗಿದ್ದು ಅಲ್ಲಿ ಕಲಿಸಿಕೊಡುವ ಕೌಶಲಗಳು, ಸಂಸ್ಕಾರವನ್ನು ಮಕ್ಕಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಂಡು ಭವಿಷ್ಯದ ಉತ್ತಮ ಪ್ರಜೆಗಳಾಗಿ ಬಾಳುವಂತಾಗಬೇಕು ಎಂದರು. ರಘುಸನ್ ಟೈಲ್ಸ್…

Read More

ರಕ್ಷಾ ರಾಮ್‍ಚಂದ್ರ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಮೊದಲ ಸ್ಥಾನ ಗಣಿತ ನಗರ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ನಾಯಕ್ ರಕ್ಷಾ ರಾಮಚಂದ್ರ 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿರುತ್ತಾರೆ. ಇವರು ಮೂಲಗಣಿತ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕವನ್ನು, ಇಂಗ್ಲಿಷ್‍ನಲ್ಲಿ 98 ಹಾಗೂ ಹಿಂದಿಯಲ್ಲಿ 99 ಅಂಕ ಪಡೆದಿದ್ದಾರೆ. ಈಕೆ ಬೈಲೂರು ನಿವಾಸಿಯಾದ ರಾಮ್‍ಚಂದ್ರ ನಾಯಕ್ ಮತ್ತು ಅನುಪಮ ನಾಯಕ್ ದಂಪತಿಗಳ ಸುಪುತ್ರಿ. ವಿಜ್ಞಾನ ವಿಭಾಗದಲ್ಲಿ ಆಸ್ತಿ ಎಸ್ ಶೆಟ್ಟಿ 596 ಅಂಕಗಳೊಂದಿಗೆ ರಾಜ್ಯಕ್ಕೆ ನಾಲ್ಕನೇ ಹಾಗೂ ಜಿಲ್ಲೆಗೆ ಮೊದಲ ಸ್ಥಾನಿಯಾಗಿ ಹೊರಹೊಮ್ಮಿದ್ದರು. ಸಂಸ್ಥೆಯು ಮರುಮೌಲ್ಯಮಾಪನದ ಮೂಲಕ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 37 ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಮೊದಲ ಹತ್ತು…

Read More

ಮೂಡುಬಿದಿರೆ: ಭಾರತ ದೇಶ ಮಾತ್ರವಲ್ಲದೇ ಇಡೀ ಜಗತ್ತಿಗೆ ಡ್ರಗ್ಸ್ ಅತ್ಯಂತ ಅಪಾಯಕಾರಿ ವ್ಯವಸ್ಥೆಯಾಗಿ ಮಾರ್ಪಟ್ಟಿದೆ. ಇಂದಿನ ಯುವಕರು, ವಿದ್ಯಾರ್ಥಿಗಳು ನಶೆಗಾಗಿ ಸೇವನೆ ಮಾಡುವುದರಿಂದ ತಮ್ಮ ಜೀವನವನ್ನು ತಾವೇ ಹಾಳು ಮಾಡುಕೊಳ್ಳುತ್ತಿದ್ದಾರೆ. ಭಾರತದ ಶಕ್ತಿಯೇ ಯುವಕರು. ದೇಶದ ಯುವಶಕ್ತಿಯನ್ನು ಡ್ರಗ್ಸ್ ಮುಕ್ತರನ್ನಾಗಿಸಲು ಎಲ್ಲರೂ ಕೈ ಜೋಡಿಸಿಬೇಕು ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸಮಾಜಕಾರ್ಯ ವಿಭಾಗದ ‘ರಜತ ಮಹೋತ್ಸವ’ದ ಅಂಗವಾಗಿ ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಿಂದ ಮೂಡುಬಿದಿರೆ ತಾಲೂಕು ಕಚೇರಿಯವರೆಗೆ ಮಂಗಳವಾರ ನಡೆದ “ಮಾದಕ- ದ್ರವ್ಯ ವಿರೋಧಿ ಜಾಗೃತಿ ಜಾಥಾ” ದಲ್ಲಿ ಪಾಲ್ಗೊಂಡು ಮಾತನಾಡಿದರು. ಮೂಡುಬಿದಿರೆಯ ವಿವಿಧ ಕಾಲೇಜು ಮತ್ತು ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ಮುಕ್ತ ಜಾಥಾ ನಿರ್ಮಿಸಲು ನಡೆಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾದಲ್ಲಿ ಕಾಲ್ನಡಿಗೆಯ ಮೂಲಕ ಪಾಲ್ಗೊಂಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು. ಡ್ರಗ್ಸ್ನಿಂದ ವಿದ್ಯಾರ್ಥಿಗಳು ಸಂಪೂರ್ಣವಾಗಿ ದೂರವಿದ್ದು ಡ್ರಗ್ಸ್ ಸೇವನೆ ಮಾಡುವವರನ್ನು ವಿರೋಧಿಸಬೇಕು ಎಂದು ತಿಳಿಸಿದರು. ಮೂಡುಬಿದಿರೆ ಸರ್ಕಲ್ ಇನ್ಸ್ಪೆಕ್ಟರ್…

Read More

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇದರ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ ಮಾತನಾಡಿ, ನಮ್ಮ ಬದುಕಿಗೆ ಅಗತ್ಯವಾದ ಕಲೆಗಳನ್ನು, ತತ್ವಗಳನ್ನು, ಕೌಶಲಗಳನ್ನು, ಬೇಸಿಗೆ ಶಿಬಿರದಲ್ಲಿ ಕಲಿಸಿ ಕೊಡುತ್ತಾರೆ. ಅವುಗಳನ್ನು ಮಕ್ಕಳು ಜೀವನದುದ್ದಕ್ಕೂ ಅಳವಡಿಸಿಕೊಂಡು ಬದುಕನ್ನು ಇನ್ನಷ್ಟು ಸರಳವಾಗಿಸಿ ಉಲ್ಲಾಸಮಯವಾಗಿರಿಸಿಕೊಳ್ಳಬಹುದು. ಶಿಕ್ಷಣದಲ್ಲಿ ಪಾಠ ಅಧ್ಯಯನದ ಜೊತೆ ಬದುಕನ್ನು ಕಟ್ಟಿ ಕೊಡುವ ಪಠ್ಯೇತರ ಚಟುವಟಿಕೆಗಳ ಕಲಿಕೆ ಅತ್ಯಗತ್ಯ. ಮಕ್ಕಳ ಸರ್ವತೋಮುಖ ಪ್ರಗತಿಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯವಾಗಿದೆ. ಈ ತರಬೇತಿ ಕಾರ್ಯಕ್ರಮಗಳು, ಮಾಹಿತಿ ಕಾರ್ಯಕ್ರಮಗಳು, ಚಟುವಟಿಕೆಗಳು ನಮ್ಮ ಬದುಕನ್ನು ಪರಿಪೂರ್ಣತೆಯತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ. ಈ ಸಂಸ್ಥೆಯು ಇಂತಹ ಒಂದು ಉತ್ಕೃಷ್ಟ ಮಟ್ಟದ ಬೇಸಿಗೆ ಶಿಬಿರವನ್ನು…

Read More