Author: admin

ಯುಎಇಯಲ್ಲಿ ಹಾಗೂ ಕರಾವಳಿಯಲ್ಲಿ ಹೆಸರು ವಾಸಿಯಾಗಿರುವ ಹೋಟೆಲ್ ಉದ್ಯಮ ಸಂಸ್ಥೆ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ನಿರ್ದೇಶಕರಾದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಕಳೆದ 13 ವರ್ಷದಿಂದ ತನ್ನ ಮಾತೃಪಿತರ ಮದುವೆಯ ವಾರ್ಷಿಕ ದಿನದಂದು ದುಬೈನಲ್ಲಿ ನಡೆಸಿಕೊಂಡು ಬರುತ್ತಿರುವ ರಕ್ತದಾನ ಶಿಬಿರದ ಕಾರ್ಯಕ್ರಮ ಮೇ 22 ರಂದು ಫಾರ್ಚೂನ್ ಪ್ಲಾಝದಲ್ಲಿ ಯಶಸ್ವಿಯಾಗಿ ನಡೆಯಿತು. ದುಬೈ ಹೆಲ್ತ್ ಅಥೋರಿಟಿಯ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಯಶಸ್ವಿಯಾಗಿ ಜರುಗಿತು. ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಸಿಬ್ಬಂದಿ ವರ್ಗದವರು, ದುಬೈ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪ್ರವೀಣ್ ಶೆಟ್ಟಿಯವರ ಸ್ನೇಹಿತರು ಶಿಬಿರದಲ್ಲಿ ರಕ್ತದಾನ ಮಾಡಿ ಶಿಬಿರವನ್ನು ಯಶಸ್ವಿಗೊಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು, ನನ್ನ ಮಾತೃಪಿತರಾದ ಶ್ರೀಮತಿ ಸರೋಜಿನಿ ಶೆಟ್ಟಿ ಮತ್ತು ಶ್ರೀ ನಾರಾಯಣ ಶೆಟ್ಟಿಯವರ ಮದುವೆಯ ವರ್ಷದ ಈ ಶುಭ ದಿನದಂದು ಕಳೆದ ಹದಿಮೂರು ವರ್ಷಗಳಿಂದ ಈ…

Read More

ಭಾರಿ ಜಿದ್ದಾಜಿದ್ದಿನಿಂದ ಕೂಡಿದ್ದ ಅಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೇ 23 ರಂದು ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ರಮೇಶ್ ಭಟ್ ಉಪ್ಪಂಗಳ ಮತ್ತು ಉಪಾಧ್ಯಕ್ಷರಾಗಿ ದಯಾನಂದ ರೈ ಮನವಳಿಕೆ ಆಯ್ಕೆಯಾದರು.ದಯಾನಂದ ರೈ ಮನವಳಿಕೆಯವರು ಅಲಂಕಾರು ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಯಾಗಿ ನಿವೃತ್ತರಾಗಿದ್ದರು. ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Read More

ಮಂಗಳೂರು ನಗರದ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸ್ಪರ್ಶ ಬಿ ಶೆಟ್ಟಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ 600 (ಶೇ 96) ಅಂಕ ಪಡೆದಿದ್ದಾಳೆ.ಈಕೆ ಬಿಜೈ ಕಾಪಿಕಾಡ್ 3 ನೇ ಕ್ರಾಸ್ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಸಪ್ನಾ ದಂಪತಿಯ ಪುತ್ರಿ.

Read More

ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನಲ್ಲಿ ಶಿಕ್ಷಕವೃಂದದವರಿಗೆ ನವೀನ ಮಾದರಿಯ ಭೋದನಾ ವಿಧಾನ ಹಾಗೂ ಪರಿಣಾಮಕಾರಿ ಸಂವಹನ ಕೌಶಲಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಒರಿಯೆಂಟ್ ಬ್ಲಾಕ್‍ಸ್ವಾನ್ ಪ್ರೈ. ಲಿಮಿಟೆಡ್‍ನ ಸೆಂಟ್ರಲ್ ಮ್ಯಾನೇಜರ್ ಡಾ. ಸ್ಮಿತಾ ಮತಾಯಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಅವರು ಸಂಸ್ಥೆಯ ಶಿಕ್ಷಕರಿಗೆ ಚಟುವಟಿಕೆ ಆಧಾರಿತ ಬೋಧನಾ ವಿಧಾನ, ಪ್ರಾಯೋಗಿಕ ಕಲಿಕೆ, ಸಂವಹನ ಕೌಶಲ, ಸಮಯ ನಿರ್ವಹಣೆ, ಸೃಜನಾತ್ಮಕ ಮತ್ತು ವಿಮರ್ಶಾತ್ಮಕ ಚಿಂತನೆ, ಪಾಠಯೋಜನೆ, ಮೌಲ್ಯಮಾಪನದ ಕುರಿತು ತರಬೇತಿ ನೀಡಿದರು.ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಆಧುನಿಕತೆಗೆ ತಕ್ಕಂತೆ ನಮ್ಮನ್ನು ನಾವು ನವೀಕರಿಸಿಕೊಳ್ಳಬೇಕು. ಕೇಳುಗರ ಮನಸ್ಸನ್ನು ಮುಟ್ಟುವಂತಹ ಮಾತುಗಾರಿಕೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಶಿಕ್ಷಕರು ಕಾರ್ಯಾಗಾರದಲ್ಲಿ ಪಡೆದ ಮಾಹಿತಿಯನ್ನು ತರಗತಿಯ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅನುಷ್ಠಾನಗೊಳಿಸಬೇಕೆಂದು ಸಲಹೆ ನೀಡಿದರು. ಕಾರ್ಯಾಗಾರದಲ್ಲಿ ಒರಿಯೆಂಟ್ ಬ್ಲ್ಯಾಕ್ ಸ್ವಾನ್‍ನ ಚೇತನ್ ಕುಮಾರ್, ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Read More

ಜೂನ್ 1ರಂದು ಮಂಗಳೂರು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ -2025’ ರಾಷ್ಟ್ರೀಯ ಕಲಾ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಮೇ 20 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಪುತ್ತೂರು ಘಟಕದ ನಿಕಟಪೂರ್ವ ಅಧ್ಯಕ್ಷ ಜೈರಾಜ್ ಭಂಡಾರಿ ನೊಣಾಲು ಡಿಂಬ್ರಿರವರು ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರಿಗೆ ಹಸ್ತಾಂತರ ಮಾಡುವ ಮೂಲಕ, ಬಂಟ ಸಮಾಜ ಬಾಂಧವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಪುತ್ತೂರು ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ಬೂಡಿಯಾರ್ ರಾಧಾಕೃಷ್ಣ ರೈ, ಶಶಿಕುಮಾರ್ ರೈ ಬಾಲ್ಯೊಟ್ಟು, ಎ. ಕೃಷ್ಣ ರೈ ಪುಣ್ಚಪ್ಪಾಡಿ ತಳಮನೆ, ಕಡಮಜಲು ಸುಭಾಸ್ ರೈ, ರಮೇಶ್ ರೈ ಬೋಳೋಡಿ, ಪುರಂದರ ರೈ ಮಿತ್ರಂಪಾಡಿ, ಎನ್. ಚಂದ್ರಹಾಸ್ ಶೆಟ್ಟಿ, ಚನಿಲ ತಿಮ್ಮಪ್ಪ ಶೆಟ್ಟಿ, ಮೋಹನ್ ರೈ ನರಿಮೊಗರು, ಪಿ.ಡಿ. ಕೃಷ್ಣಕುಮಾರ್ ರೈ ದೇವಸ್ಯ, ಸಂಜೀವ ಆಳ್ವ ಹಾರಾಡಿ, ಕಿಶೋರ್ ಶೆಟ್ಟಿ ಅರಿಯಡ್ಕ, ಜಯಕುಮಾರ್ ರೈ ಮಿತ್ರಂಪಾಡಿ, ನಾರಾಯಣ ರೈ ಬಾರಿಕೆ,…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಗೌರವಾಧ್ಯಕ್ಷತೆಯಲ್ಲಿ ಹಾಗೂ ಪುರುಷೋತ್ತಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಿನ್ನಿಗೋಳಿ ಘಟಕದ ಧನ್ಯೋತ್ಸವ ಕಾರ್ಯಕ್ರಮ ಕಿನ್ನಿಗೋಳಿಯಲ್ಲಿ ನಡೆಯಿತು. ಮೇ 9 ರಂದು ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಕಿನ್ನಿಗೋಳಿ ಘಟಕದ ಅದ್ದೂರಿ ಕಾರ್ಯಕ್ರಮದಲ್ಲಿ ಸಹಕಾರ ನೀಡಿದ ಎಲ್ಲಾ ಫೌಂಡೇಶನ್ ಅಭಿಮಾನಿ ಬಂಧುಗಳಿಗೆ ಧನ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಐಕಳ ಹರೀಶ್ ಶೆಟ್ಟಿಯವರು ಮಾತನಾಡಿ, ಮೊನ್ನೆ ನಡೆದ ಘಟಕದ ಉದ್ಘಾಟನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆದಿದೆ. ಹಾಗೆಯೇ ಜೂನ್ ಒಂದರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಫೌಂಡೇಶನ್ ನ ದಶಮಾನ ಉತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರೂ ಬಂದು ಮುಕ್ತ ಮನಸ್ಸಿನಿಂದ ಸಹಕಾರ, ಸಹಾಯ ನೀಡಬೇಕೆಂದು ಎಲ್ಲರಲ್ಲಿ ಮನವಿ ಮಾಡಿಕೊಂಡರು. ಕಿನ್ನಿಗೋಳಿ ಘಟಕದ ವತಿಯಿಂದ ದಶಮಾನೋತ್ಸವ ಸಂಭ್ರಮದ ಸಲುವಾಗಿ ಫೌಂಡೇಶನ್ ಗೆ ಈಗಾಗಲೇ 10 ಲಕ್ಷ ರೂಪಾಯಿ (10 ಟ್ರಸ್ಟಿಗಳನ್ನು) ಒಟ್ಟು ಮಾಡಿದ್ದು, ಜೂನ್ ಒಂದರ ಒಳಗೆ…

Read More

ಜಗತ್ತಿನ ಅತ್ಯಂತ ಪ್ರಾಚೀನ ಯುದ್ಧಕಲೆ ಎಂದು ಖ್ಯಾತಿ ಪಡೆದ ಕಳರಿ ಪೈಟ್ ತುಳುನಾಡಿನಿಂದಲೇ ಉದ್ಭವವಾಗಿದೆ ಎಂಬುದು ಹೆಮ್ಮೆಯ ವಿಷಯ. ಹಿಂದೆ ದ.ಕ., ಕಣ್ಣೂರು, ವಯನಾಡು ಮತ್ತು ಕೊಝೀಕೋಡ್‌ ಭಾಗಗಳನ್ನೊಳಗೊಂಡ ಭಾಗವನ್ನು ತುಳುನಾಡು ಎಂದು ಕರೆಯಲಾಗುತ್ತಿತ್ತು. ಈ ಪ್ರದೇಶವು ಯುದ್ಧಕಲೆ ಅಭ್ಯಾಸದ ಪ್ರಬಲ ಕೇಂದ್ರವಾಗಿತ್ತು. ಕೇರಳದಲ್ಲೂ ಇದನ್ನು “ತುಳುನಾಡನ್ ಕಳರಿ” ಎಂದೇ ಕರೆಯುತ್ತಾರೆ. ಪುರಾವೆಗಳ ಪ್ರಕಾರ, ಹಲವಾರು ರಾಜರು ಹಾಗೂ ಸೇನಾ ನಾಯಕರು ತುಳುನಾಡಿಗೆ ಬಂದು ಕಲರಿ ಪೈಟ್ ಕಲಿತಿದ್ದರು. ಕೋಟಿ ಚೆನ್ನಯರು ಗರಡಿಗಳ ಮೂಲಕ ಈ ಕಲೆಯ ಉಳಿವಿಗೆ ಶ್ರಮಿಸಿದರು. ಅವರ ಗುರು ನಾನಯ್ಯರಿಗೆ ಕೇರಳದ ರಾಜರು ಗ್ರಾಮಗಳನ್ನು ದತ್ತವಾಗಿ ನೀಡಿದ ದಾಖಲೆಗಳೂ ಇವೆ. ಅದೇ ರೀತಿ ಅವಳಿ ವೀರರಾದ ಮುದ್ದ ಕಳಲೆರ್, ಕಾನದ ಕಟದೆರ್ ಇವರ ಶೌರ್ಯಗಳು ಕಳರಿಯಿಂದಲೇ ಬೆಳೆದು ಬಂದಿದೆ. ಕಲರಿ ಪೈಟ್‌ನಲ್ಲಿ 108 ಮರ್ಮ ಬಿಂದುಗಳಲ್ಲಿ 64ಕ್ಕೆ ಸಂಬಂಧಪಟ್ಟ ಮರ್ಮ ವಿದ್ಯೆಗಳು ಪ್ರಮುಖ. ಇದು ದೇಹ ಹಾಗೂ ಮನಸ್ಸಿಗೆ ಆರೋಗ್ಯ ನೀಡುವುದಲ್ಲದೆ, ಯುದ್ಧ ತಂತ್ರಗಳು, ಕಣ್ಕಟ್ಟು ವಿದ್ಯೆ,…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದಶಮ ಸಂಭ್ರಮಕ್ಕೆ ಉದ್ಯಮಿ ಕೆ.ಕೆ ಶೆಟ್ಟಿ ಅವರು ದೊಡ್ಡ ಮೊತ್ತದ ದೇಣಿಗೆ ನೀಡಿದ್ದಾರೆ. ದಶಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಬರೋಡ ಶಶಿಧರ ಶೆಟ್ಟಿ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಮನವಿಗೆ ಸ್ಪಂದಿಸಿದ ಅಹಮದ್ ನಗರದ ಪ್ರಖ್ಯಾತ ಹೋಟೆಲ್ ಉದ್ಯಮಿಗಳು, ಮುಂಡಪಲ್ಲ (ಕಾಸರಗೋಡು) ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಕೆ ಶೆಟ್ಟಿಯವರು “ಪಟ್ಲ ದಶಮ ಸಂಭ್ರಮಕ್ಕೆ” ದೊಡ್ಡ ಮೊತ್ತದ ಆರ್ಥಿಕ ನೆರವನ್ನು ನೀಡಿದ್ದಾರೆ.ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೆಲಸ ಕಾರ್ಯಗಳು ಇದೇ ರೀತಿ ನಿರಂತರವಾಗಿ ಸಾಗಲಿ, ಕಲಾವಿದರ ಪಾಲಿನ ಕಾಮಧೇನು ಆಗಿರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಕೆ.ಕೆ ಶೆಟ್ಟಿಯವರು ಹಾರೈಸಿದ್ದಾರೆ. ಕೆ.ಕೆ ಶೆಟ್ಟಿ ಅವರಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ ಡಾ| ಕನ್ಯಾನ ಸದಾಶಿವ ಶೆಟ್ಟಿ, ಡಾ| ಕೆ ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಹಾಗೂ ಪಟ್ಲ ಟ್ರಸ್ಟ್…

Read More

‘ತೆಂಕು ತಿಟ್ಟಿನ ಬಣ್ಣದ ವೇಷಗಾರಿಕೆ ಯಕ್ಷಗಾನ ರಂಗದ ವಿಸ್ಮಯಗಳಲ್ಲೊಂದು. ಅನುಭವೀ ಹಿರಿಯ ಕಲಾವಿದರು ಈ ಪ್ರಕಾರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಅದೇ ಪರಂಪರೆಯ ಜಾಡಿನಲ್ಲಿ ಹೊಸ ಆವಿಷ್ಕಾರದೊಂದಿಗೆ ಜನಮನ ಗೆದ್ದ ಕಲಾವಿದ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್. ಅವರು ಓರ್ವ ಪ್ರಯೋಗಶೀಲ ಬಣ್ಣದ ವೇಷಧಾರಿ’ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಹೇಳಿದ್ದಾರೆ. ಬೆಂಗಳೂರಿನ ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರಸಿದ್ಧ ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರಿಗೆ ಗೃಹ ಸಮ್ಮಾನದೊಂದಿಗೆ ಅಳಿಕೆ ರಾಮಯ್ಯ ರೈ ಯಕ್ಷ ಸಹಾಯನಿಧಿ ಪ್ರದಾನ ಮಾಡಿದ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಮುಖ್ಯ ಸಲಹೆಗಾರರಾಗಿ ಅವರು ಮಾತನಾಡಿದರು. ಇನ್ನೋರ್ವ ಸಲಹೆಗಾರ ಹಾಗೂ ಸದಾಶಿವ ಶೆಟ್ಟಿಗಾರ್ ಅವರ ಒಡನಾಡಿ ಹಿರಿಯ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು. ಆಯ್ಕೆ ಸಮಿತಿ ಸಂಚಾಲಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಬಣ್ಣದ ಮಾಲಿಂಗಜ್ಜನ ಗರಡಿಯಲ್ಲಿ ಪಳಗಿದ ಸದಾಶಿವ ಶೆಟ್ಟಿಗಾರ್ ರವರು…

Read More

ಯಕ್ಷದ್ರುವ ಪಟ್ಲ ಫೌಂಡೇಶನ್ ನ ದಶಮ ಸಂಭ್ರಮಕ್ಕೆ ಉದ್ಯಮಿ, ಸಮಾಜ ಸೇವಕ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ದೊಡ್ಡ ಮೊತ್ತದ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದ್ದಾರೆ. ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಬರೋಡ ಶಶಿಧರ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಪಟ್ಲ ಫೌಂಡೇಶನ್ ನ ಕಾರ್ಯ ಚಟುವಟಿಕೆಗಳನ್ನು ಮೆಚ್ಚಿ ದೇಣಿಗೆ ನೀಡುತ್ತಿದ್ದಾರೆ.ಉದ್ಯಮಿಯಾಗಿರುವ ಕಾಂಗ್ರೆಸ್ ನ ಮುಖಂಡರಾದ ಉದಯ ಕುಮಾರ್ “ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್”ನ್ನು ಸ್ಥಾಪಿಸಿ ಅನೇಕ ಸಾಮಾಜಿಕ ಜನಪರ ಕಾರ್ಯಕ್ರಮಗಳನ್ನು ಮಾಡಿದವರು. ಅವರಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷರಾದ ಡಾ| ಕನ್ಯಾನ ಸದಾಶಿವ ಶೆಟ್ಟಿ, ಡಾ| ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಹಾಗೂ ಟ್ರಸ್ಟ್ ನ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

Read More