Author: admin
ಮೂಡುಬಿದಿರೆ: ಇಂದಿನ ಜಾಗತಿಕ ಯುಗದಲ್ಲಿ ವಿದ್ಯಾಭ್ಯಾಸದ ಉದ್ದೇಶ ಕೇವಲ ಉದ್ಯೋಗ ಪಡೆಯುವುದಲ್ಲ. ಸಮಾಜದಲ್ಲಿ ಬದಲಾವಣೆ ತರಲು, ಹೊಸ ಅವಕಾಶಗಳನ್ನು ಸೃಷ್ಟಿಸಲು, ಮತ್ತೊಬ್ಬರಿಗೆ ಜೀವನೋಪಾಯ ಕಲ್ಪಿಸಲು ನಾವು ಉದ್ಯೋಗದಾತರಾಗಬೇಕು ಎಂದು ಪುದುಚೇರಿಯ ಕರಾವಳಿ ರಕ್ಷಣಾ ಪಡೆಯ ಇನ್ಸ್ಪೆಕ್ಟರ್ ಜನರಲ್ ಸುರೇಂದ್ರಸಿಂಗ್ ದಾಸೀಲರು ನುಡಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಉದ್ಯೋಗವನ್ನು ಮಾತ್ರ ಕನಸು ಕಾಣದೆ, ಸಮಾಜಕ್ಕೆ ಹೊಸ ಉದ್ಯೋಗಾವಕಾಶಗಳನ್ನು ನೀಡಬಲ್ಲ ನಾಯಕರಾಗಿ ರೂಪುಗೊಳ್ಳಬೇಕು. ನಾಯಕತ್ವದ ನಿಜವಾದ ಅರ್ಥವು ಸಂಕಷ್ಟದ ಸಂದರ್ಭಗಳಲ್ಲಿ ಸಹಾನುಭೂತಿಯೊಂದಿಗೆ ನಡೆದುಕೊಳ್ಳುವುದರಲ್ಲಿ ಅಡಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ಸದಾ ಆತ್ಮವಿಶ್ವಾಸದಿಂದಿರಬೇಕು. ತಮಗೆ ತಾವೇ ಪ್ರೋತ್ಸಾಹ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಕೀಳರಿಮೆ ಬೆಳೆಸದೆ, ತಮ್ಮ ಬೆನ್ನನ್ನು ತಾವೇ ತಟ್ಟುತ್ತಾ ಮುಂದೆ ಸಾಗುವುದು ಸಾಧನೆಯ ರಹಸ್ಯವಾಗಿದೆ. ಮಾನಸಿಕ, ದೈಹಿಕ, ಭಾವನಾತ್ಮಕ, ಸಾಮಾಜಿಕ ಹಾಗೂ ಆರ್ಥಿಕ ಆರೋಗ್ಯಗಳ ಕಡೆಗೆ ಪ್ರಾಮುಖ್ಯತೆಯನ್ನು ನೀಡಿ. ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ ನಿರ್ಮಾಣದ ಅವಧಿ. ಈ ಹಂತದಲ್ಲಿ ನೈತಿಕ ಮೌಲ್ಯಗಳು,…
ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2025–26ನೇ ಸಾಲಿನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವು ಕಾರ್ಕಳ ತಾಲೂಕಿನ ಕಲತ್ರಪಾದೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಕರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ ಪೂಜಾರಿ, ಈ ವಿಶೇಷ ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಾಮಾಜಿಕ ಹೊಣೆಗಾರಿಕೆ ಹಾಗೂ ಸಕಾರಾತ್ಮಕ ಬದಲಾವಣೆಯನ್ನು ತರಲಿ ಎಂದು ಆಶಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ನಿರಂಜನ್ ಮಾತನಾಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸಾಂಸ್ಕೃತಿಕವಾಗಿ ಹಾಗೂ ಶೈಕ್ಷಣಿಕವಾಗಿ ಶ್ರೇಷ್ಠ ಸಾಧನೆ ತೋರಿದೆ. ಈ ಸಂಸ್ಥೆಯ ಮಕ್ಕಳು ನಮ್ಮ ಶಾಲೆಯಲ್ಲಿ ಶಿಬಿರ ನಡೆಸುತ್ತಿರುವುದು ನಮಗೆ ಹರ್ಷ ತಂದಿದೆ ಎಂದರು. ಅಧ್ಯಕ್ಷತೆವಹಿಸಿದ ಮಾತನಾಡಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ಈ ವರ್ಷದ ವಿಶೇಷ ಶಿಬಿರವು ನಶಾ ಮುಕ್ತ ಭಾರತ ಎಂಬ ಘೋಷವಾಕ್ಯದೊಂದಿಗೆ ನಡೆಯಲಿದೆ. ಈ ಘೋಷವಾಕ್ಯ ಕೇವಲ ಪೋಷಣೆಗೆ ಮಾತ್ರ ಸೀಮಿತವಲ್ಲ, ಅದರ ಮಹತ್ವವನ್ನು ಅರಿತು, ಜೀವನದಲ್ಲಿ ಅಳವಡಿಸಿಕೊಳ್ಳಿ…
ಮೂಡುಬಿದಿರೆ: ಕರ್ನಾಟಕ ವಾಲಿಬಾಲ್ ಸಂಸ್ಥೆ ಆಯೊಜಿಸಿದ್ದ ಲೋಕೆಶ್ ಗೌಡ ಟ್ರೋಫಿ ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಮೂಡುಬಿದಿರೆಯ ಆಳ್ವಾಸ್ ಸ್ಪೋಟ್ಸ್ ಕ್ಲಬ್ ತಂಡ ಪುರುಷರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿತು. ಬೆಂಗಳೂರಿನ ಶ್ರೀಕಂಠಿರವ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಭಾಗದ ಫೈನಲ್ನಲ್ಲಿ ಆಳ್ವಾಸ್ ತಂಡ 3-1 ಅಂತರದಿ0ದ ಕರ್ನಾಟಕ ರಾಜ್ಯ ಪೋಲಿಸ್ ತಂಡವನ್ನು ಮಣಿಸಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಮೇಲುಗೈ ಸಾಧಿಸಿದ ಆಳ್ವಾಸ್ ಆಟಗಾರರು ಪ್ರಶಸ್ತಿಗೆ ಮುತ್ತಿಕ್ಕಿದರು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ನಲ್ಲಿ ಆಳ್ವಾಸ್ ತಂಡ, ಕ್ರೀಡಾ ಹಾಸ್ಟೆಲ್ ಬಿಜಿ ತಂಡವನ್ನು 3-1 ಅಂತರದಿ0ದ ಪರಭವಗೊಳಿಸಿತ್ತು. ವಿಜೇತರಿಗೆ ಕರ್ನಾಟಕದ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಪ್ರಶಸ್ತಿ ವಿತರಿಸಿದರು. ವಿಜೇತ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕಾಂತಾರ ಚಾಪ್ಟರ್ ೧ ರ ಟ್ರೈಲರ್ ಬಂದಿದೆ. ರಿಷಬ್ ಶೆಟ್ಟಿಯವರಿಂದ ದೈವಗಳ ನಂಬಿಕೆ ಹಾಳಾಯಿತು ಎಂದು ವಾದಿಸುವ ಒಂದು ವರ್ಗ ಈಗ ಮೆಲ್ಲ ಥಿಯೇಟರ್ ಕಡೆ ಸಾಗುವ ಪರಿಸ್ಥಿತಿ ಬರಬಹುದು. ಯಾಕೆಂದರೆ ಟ್ರೈಲರ್ ನಲ್ಲಿ ಬೆರ್ಮೆರೆ ಹಾಗೂ ಇತರ ದೇವರ ಕಥೆಯೂ ಉಲ್ಲೇಖ ಆಗಿದೆ. ದೈವಗಳ ವೇಷವನ್ನು ಹಿಂದೆ ಅಂದರೆ ನಮ್ಮ ಶಾಲಾ ದಿನಗಳಲ್ಲಿ ನಾಟಕದಲ್ಲಿ, ಆಟದಲ್ಲಿ ಹಾಕಿ ಕುಣಿದವರು ನಾವುಗಳು. ನಮಗ್ಯಾರಿಗೂ ಅದನ್ನು ಅಪಹಾಸ್ಯ ಮಾಡುವ ಉದ್ಧೇಶ ಇರಲಿಲ್ಲ. ಕಾಂತಾರ ಬರುವುದಕ್ಕೂ ಮೊದಲೇ ದೈವಗಳ ಬಗ್ಗೆ ವಿಶ್ವದ ಅನೇಕ ಭಾಗದ ಜನ ಅಧ್ಯಯನಕ್ಕೂ ಬಂದಿದ್ದರು. ಹಾಗಾಗಿ ರಿಷಬ್ ಶೆಟ್ಟಿಯವರಿಂದ ದೈವಗಳು ಜಗತ್ತಿನ ಜನಕ್ಕೆ ಗೊತ್ತಾದದ್ದಲ್ಲ. ಆದರೂ ಅವರನ್ನು ಟಾರ್ಗೆಟ್ ಮಾಡುವ ಉದ್ಧೇಶ ಸ್ಪಷ್ಟ.ಯಾರು ದೈವಗಳನ್ನ ಅಪಹಾಸ್ಯ ಮಾಡುತ್ತಾರೋ ಅವರ ನಿಂದನೆ ಸರಿ. ಅವರ ವಿರುದ್ಧ ಈ ಸಂಸ್ಕೃತಿ ರಕ್ಷಕರು ಅಂದುಕೊಂಡಿರುವವರು ಕೇಸು ಹಾಕಲಿ. ಹಾಗಂತಾ ತಾನು ಭಕ್ತಿಯಲ್ಲಿದ್ದು ಚಿತ್ರದ ಮೂಲಕ ತೋರಿಸಿದಕ್ಕೆ ಟೀಕಿಸುವುದು ಸರಿ ಅಲ್ಲ. ಒಟ್ಟಿನಲ್ಲಿ ಕಾಂತಾರ ಗೆಲ್ಲಲಿ.…
ಬೆಳುವಾಯಿ ಶ್ರೀ ಯಕ್ಷದೇವ ಮಿತ್ರ ಮಂಡಳಿಯವರು 28 ನೇಯ ವರ್ಷದ ಯಕ್ಷ ಸಂಭ್ರಮ ಕಾರ್ಯಕ್ರಮದಲ್ಲಿ ಯುವ ಉದ್ಯಮಿ, ಸಮಾಜ ಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಸಮರ್ಥ ಬಿಲ್ಡರ್ಸ್ ನ ಆಡಳಿತ ನಿರ್ದೇಶಕರಾದ ಬೆಳುವಾಯಿ ಸಂದೀಪ್ ಶೆಟ್ಟಿಯವರಿಗೆ ಉದ್ಯಮ ಕ್ಷೇತ್ರದ ಸಾಧನೆಗಾಗಿ 2025 ರ ಸಾಲಿನ ಶ್ರೀ ಯಕ್ಷದೇವ ಸಾಧನಾ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಸಂದೀಪ್ ಶೆಟ್ಟಿಯವರು ಮೂಡಬಿದಿರೆ ಯುವ ಬಂಟರ ಸಂಘದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಈ ಸಂಧರ್ಭದಲ್ಲಿ ಹರಿಕೃಷ್ಣ ಪುನರೂರು, ನಿಕಟಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಲಯನ್ ಗೋವರ್ಧನ್ ಶೆಟ್ಟಿ, ದೇವಾನಂದ ಭಟ್, ಉದ್ಯಮಿ ಶ್ರೀಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಗಾಗಿ ಸುದ್ದಿ ಬಿಡುಗಡೆ ದಿನಪತ್ರಿಕೆಯ ಹಿರಿಯ ವರದಿಗಾರ ಉಮಾಪ್ರಸಾದ್ ರೈ ನಡುಬೈಲುರವರನ್ನು ಸಮರ್ಥ ಜನಸೇವಾ ಟ್ರಸ್ಟ್ ಪುಣ್ಚಪಾಡಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಉಮಾಪ್ರಸಾದ್ ರೈ ನಡುಬೈಲುರವರು 1993 ರಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರಿನ ಸುದ್ದಿ ಬಿಡುಗಡೆ ದಿನಪತ್ರಿಕೆಯಲ್ಲಿ 20 ವರ್ಷಗಳಿಂದ ವರದಿಗಾರರಾಗಿದ್ದು, ಪತ್ರಿಕಾ ಕ್ಷೇತ್ರದಲ್ಲಿ 32 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಸಮರ್ಥ ಜನ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಿರಿಶಂಕರ ಸುಲಾಯರವರು ಅಧ್ಯಕ್ಷತೆ ವಹಿಸಿದ್ದರು. ಜೊತೆ ಕಾರ್ಯದರ್ಶಿ ನಾಗರಾಜ ನಿಡ್ವಣ್ಣಾಯ, ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಟ್ರಸ್ಟಿಗಳಾದ ನಾಗೇಶ್ ಓಡಂತರ್ಯ, ರಾಜೇಶ್ವರಿ ಕನ್ಯಾಮಂಗಳ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಶ್ರೀ ಕುಚ್ಚೆಜಾಲು, ಯಶೋದ ನೂಜಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಬಗ್ಗೆ ಮೂಲ್ಕಿ ಮೂಡುಬಿದ್ರೆ ಕ್ಷೇತ್ರದ ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವು ಇಂದು ಮೂಡುಬಿದಿರೆಯ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಶ್ರೀಧರ್ ಎಸ್ ಮುಂದಲಮನಿ, ಮಾಸ್ಟರ್ ಟ್ರೈನರ್ ಎ.ಜಿ. ಸೋನ್ಸ್ ಐಟಿಐ ಇದರ ತರಬೇತಿ ಅಧಿಕಾರಿ ಕೆ. ಶಿವಪ್ರಸಾದ್ ಹೆಗ್ಡೆ ಮತ್ತು ಮೂಡುಬಿದಿರೆ ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ| ಹರೀಶ್ ಎಚ್, ಚುನಾವಣಾ ಶಾಖೆಯ ಕೇಶವ ಹಾಗೂ ಮಲ್ಲೇಶ್ ಉಪಸ್ಥಿತರಿದ್ದರು.201 ಮೂಡುಬಿದಿರೆ ಕ್ಷೇತ್ರದ ಎಲ್ಲಾ ಬೂತ್ ಮಟ್ಟದ ಮೇಲ್ವಿಚಾರಕರು, ಬೂತ್ ಮಟ್ಟದ ಅಧಿಕಾರಿಗಳು ತರಬೇತಿಯಲ್ಲಿ ಹಾಜರಿದ್ದರು. ಈ ವಿಶೇಷ ಸಮಗ್ರ ಪರಿಷ್ಕರಣೆಯು ಕರ್ನಾಟಕ ರಾಜ್ಯದಲ್ಲಿ ಈ ಹಿಂದೆ 2002 ರಲ್ಲಿ ನಡೆದಿದ್ದು, 23 ವರ್ಷಗಳ ಬಳಿಕ ಈ ಪ್ರಕ್ರಿಯೆ ಮತ್ತೆ ನಡೆಯುತ್ತಿದೆ. ಇದು ಮತದಾರರ ಪಟ್ಟಿಯಲ್ಲಿನ ಎಲ್ಲಾ ಲೋಪದೋಷಗಳನ್ನು ದೂರೀಕರಿಸಲು ಸಹಕಾರಿಯಾಗಲಿದೆ.
ತೆಂಕನಿಡಿಯೂರು ಬಬ್ಬುಸ್ವಾಮಿ, ಪರಿವಾರ ದೈವಗಳ ದೈವಸ್ಥಾನ, ಮೂಕಾಂಬಿಕಾ ಅಮ್ಮನವರ ಸನ್ನಿಧಿ : ಅಧ್ಯಕ್ಷರಾಗಿ ಪ್ರಖ್ಯಾತ್ ಶೆಟ್ಟಿ
ತೆಂಕನಿಡಿಯೂರು ಶ್ರೀ ಬಬ್ಬುಸ್ವಾಮಿ, ಪರಿವಾರ ದೈವಗಳ ದೈವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಅಮ್ಮನವರ ಸನ್ನಿಧಿಯ ಅಧ್ಯಕ್ಷರಾಗಿ ಉದ್ಯಮಿ, ಕಾಂಗ್ರೆಸ್ ಮುಖಂಡ ಪ್ರಖ್ಯಾತ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅಜಿತ್ ಶೆಟ್ಟಿ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ, ಕೃಷ್ಣ ಪೂಜಾರಿ, ವೆಂಕಟೇಶ್ ಕುಲಾಲ್, ದೀಪಕ್, ಪ್ರಧಾನ ಕಾರ್ಯದರ್ಶಿಯಾಗಿ ಚೇತನ್ ಜೆ ರಾವ್, ಕಾರ್ಯದರ್ಶಿಯಾಗಿ ಮಂಜುನಾಥ, ಜೊತೆ ಕಾರ್ಯದರ್ಶಿಯಾಗಿ ದೀಪಕ್, ಕೋಶಾಧಿಕಾರಿಯಾಗಿ ಸತೀಶ್, ಗೌರವ ಸಲಹೆಗಾರರಾಗಿ ಅಣ್ಣಯ್ಯ ಪಾಲನ್, ಸಂದೀಪ್ ಕುಮಾರ್, ಮಂಜಪ್ಪ ಪಾಲನ್, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಮತಾ ಪಿ ಶೆಟ್ಟಿಯವರು ನೇಮಕಗೊಂಡಿದ್ದಾರೆ.
ಬ್ರಹ್ಮಾವರ ಸೆ. 20 ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿತ್ತು. ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಯುತ ಮುನಿರಾಜ್ ರೆಂಜಾಳರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅವರು ಮಾತನಾಡಿ ಮಕ್ಕಳನ್ನು ಶಾಲೆಗೆ ಸೇರಿಸಿದ ಮಾತ್ರಕ್ಕೆ ಪೋಷಕರು ಕರ್ತವ್ಯ ಮುಗಿಯಿತು ಅಂದುಕೊಳ್ಳದೇ ಅವರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ತಿಳಿಸಿದರು. ಮಕ್ಕಳ ಭವಿಷ್ಯಕ್ಕಾಗಿ ಮೌಲ್ಯಯುತ ಶಿಕ್ಷಣ ನೀಡಿ, ಋಣಪ್ರಜ್ಞೆಯ ಮತ್ತು ದೇವರ ಅಸ್ತಿತ್ವದ ಭಾವನೆಯನ್ನು ಮೂಡಿಸಿ ಮಕ್ಕಳಲ್ಲಿ ಧನಾತ್ಮಕ ಚಿಂತನೆಗಳನ್ನು ಬೆಳೆಸಬೇಕೆಂದು ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಪ್ರಕಾಶ್ಚಂದ್ರ ಶೆಟ್ಟಿಯವರು ಮಾತನಾಡಿ ನಮ್ಮ ವಿದ್ಯಾಸಂಸ್ಥೆಯು ಮಕ್ಕಳ ಜೀವನೋಪಾಯಕ್ಕಾಗಿ ಮಾತ್ರ ಶಿಕ್ಷಣ ನೀಡದೇ ಅವರ ಉತ್ತಮ ಜೀವನಕ್ಕಾಗಿ ಸಂಸ್ಕಾರದ ಜೊತೆಗೆ ಜ್ಞಾನವನ್ನು ನೀಡುತ್ತಿದೆಯೆಂದು ತಿಳಿಸಿದರು.ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ರವರು ಪೋಷಕರ ಪ್ರಶ್ನೆಗಳಿಗೆ ಉತ್ತರಿಸಿ, ಅತಿಥಿಗಳು ಪೋಷಕರಿಗೆ ನೀಡಿದ ಸಲಹೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನೂಷಾ ಸುಬ್ರಹ್ಮಣ್ಯಂ ಮಾತನಾಡಿ ಪೋಷಕರು ಮಕ್ಕಳ…
ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ನ್ಯಾಷನಲ್ ಪಿ.ಯು ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಜಂಪ್ರೋಪ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕಾರ್ತಿಕ್ ಎಲ್.ಎಚ್ ಫ್ರೀಸ್ಟೈಲ್ ನಲ್ಲಿ ಪ್ರಥಮ ಸ್ಥಾನವನ್ನು, 30ಸೆಕೆಂಡ್ ಡಬಲ್ ಅಂಡರ್ನಲ್ಲಿ ಕಾರ್ಕಳ ಜ್ಞಾನಸುಧಾ ಬಾಲಕರ ತಂಡವು (ನಿಖಿಲ್ ಎಂ.ವಿ, ಪೂರ್ವಜ್ ಗೌಡ ವಿ, ಪ್ರಥಮೇಶ್ ಡಿ.ಪಿ ಹಾಗೂ ಎನ್.ನಿಖಿಲ್) ಪ್ರಥಮ ಸ್ಥಾನವನ್ನು, 3 ನಿಮಿಷಾ ಎಂಡುರೆನ್ಸ್ನಲ್ಲಿ ಶಾನ್ವಿ ಎಸ್ ದ್ವಿತೀಯ ಸ್ಥಾನವನ್ನು, 30ಸೆಕೆಂಡ್ ಸ್ಪೀಡ್ ನಲ್ಲಿ ಕಾಜೊಲ್ ಎಂ ಪಿ ದ್ವಿತೀಯ ಸ್ಥಾನವನ್ನು ಪಡೆದು ಒಟ್ಟು 7 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಕ್ಷಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.















