Author: admin

‘ವೈದ್ಯೋ ನಾರಾಯಣೊ ಹರಿಃ’ ಎಂಬ ಮಾತೊಂದಿದೆ. ವೈದ್ಯರಾದವನು ದೇವರಿಗೆ ಸಮಾನರಾದವರು. ರೋಗಿಯು ತನ್ನ ಅಂತರಂಗವನ್ನು ಬಿಚ್ಚಿಡುವುದು ವೈದ್ಯನ ಮುಂದೆ ಮಾತ್ರ. ಇಂದು ವೈದ್ಯರಾದ ಡಾ. ಎ.ಎ ಶೆಟ್ಟಿ ಎಂದೇ ಖ್ಯಾತರಾದ ಅಸೋಡು ಅನಂತರಾಮ ಶೆಟ್ಟಿಯವರನ್ನು ಪರಿಚಯಿಸುತ್ತಿದ್ದೇನೆ. ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಅಸೋಡು ಎಂಬ ಗ್ರಾಮ ಪರಿಸರದಲ್ಲಿ ಹುಟ್ಟಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಮುಗಿಸಿ, ಕೇವಲ ಒಂದು ಸಾವಿರ ರೂಪಾಯಿ ಹಿಡಿದುಕೊಂಡು ಲಂಡನ್ ಗೆ ಹೋದ ಇವರು ಇಂದು ಪ್ರಪಂಚದ ಟಾಪ್ 10 ವೈದ್ಯರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಹೆಮ್ಮೆಯ ಬಂಟ. ಅಸೋಡು ಅನಂತರಾಮ ಶೆಟ್ಟಿ ಅವರ ಬಗ್ಗೆ ಅನೇಕ ಕಡೆಗಳಲ್ಲಿ, ಜಾಲತಾಣಗಳಲ್ಲಿ, ಸಮೂಹ ಮಾಧ್ಯಮಗಳಲ್ಲಿ, ಹುಟ್ಟೂರಿನ ಸನ್ಮಾನದಲ್ಲಿ ನೋಡಿ ಒಮ್ಮೆ ಅವರನ್ನು ಭೇಟಿ ಆಗಬೇಕೆಂಬ ಆಸೆ ಆಗಿತ್ತು. ವಿಸ್ಮಯವೇ ಎಂಬಂತೆ ಅಂದು ಹಾಲಾಡಿಯ ಯುವ ಮೆರಿಡಿಯನ್ ಸಭಾಭವನದ ರೆಸಾರ್ಟ್ ನಲ್ಲಿ ಅವರನ್ನು ಭೇಟಿಯಾಗಲು ಹೋದಾಗ ನನ್ನನ್ನು ಕರೆದು ಅತ್ಯಂತ ಆತ್ಮೀಯವಾಗಿ ಮಾತನಾಡಿಸಿದರು. ಅಂದು ಅವರೊಂದಿಗೆ ಮಾತನಾಡಿ ಅವರಿಗೆ ನಮಸ್ಕರಿಸಿದ ಆ…

Read More

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ 2025- 26 ನೇ ಸಾಲಿನ ಯಕ್ಷಗಾನ ತರಗತಿಯು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ ಇಲ್ಲಿ ರವಿವಾರ ಆರಂಭಗೊಂಡಿತು. ತರಗತಿಯನ್ನು ಪಟ್ಲ ಫೌಂಡೇಶನ್ ಎಕ್ಕಾರ್ ಘಟಕದ ಗೌರವಾಧ್ಯಕ್ಷರಾದ ರತ್ನಾಕರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಪುಟ್ಟಸ್ವಾಮಿ ಸಭೆಯನ್ನುದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ್, ಎಕ್ಕಾರು ಘಟಕದ ಕಾರ್ಯದರ್ಶಿ ಸತೀಶ್ ಶೆಟ್ಟಿ, ಯಕ್ಷಗಾನ ಶಿಕ್ಷಕರಾದ ವರುಣ್ ಆಚಾರ್ಯ, ಸಂಸ್ಥೆಯ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಕ್ಷರಾದ ಜಕೀಯ ಬತೂಲ್ ಯಕ್ಷಗಾನದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಾಪಕ ಭೀಮಶಂಕರ ಸ್ವಾಗತಿಸಿದರು. ಅಧ್ಯಾಪಕ ಸಂಗಮೇಶ್ ವಂದಿಸಿದರು. ಉಪನ್ಯಾಸಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.

Read More

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಜುಲೈ 12 ರಂದು ಪುತ್ತೂರು ಎಂ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿರುವ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜುಲೈ 01 ರಂದು ಜರಗಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ಬಂಟರ ಭವನದ ಬಂಟರ ಚಾವಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು. ಬಳಿಕ ಸರಳ ರೀತಿಯ ಸಭಾ ಕಾರ್ಯಕ್ರಮ ನಡೆಯಿತು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜುಲೈ 12 ರಂದು ಜರಗಲಿರುವ ಪೆರ್ಮೆದ…

Read More

ಎಂಪಿಎಂಎಲ್ಎ ನ್ಯೂಸ್ ವತಿಯಿಂದ 13ನೇ ಸೌಹಾರ್ದ ಸಂಗಮವು ಜೂನ್ 24ರ ಮಂಗಳವಾರ ಸಂಜೆ ಗಂಟೆ 4.00 ರಿಂದ 9.00ರ ತನಕ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್‍ಹಾಲ್) ದಲ್ಲಿ ನಡೆಯಿತು. ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು, ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಸೌಹಾರ್ದತೆಯಲ್ಲಿ ಕೊರತೆಯಿದೆ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಸೌಹಾರ್ದ ಸಂಗಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಸೌಹಾರ್ದತೆ ಎನ್ನುವುದು ಈ ಸಮಾಜಕ್ಕೆ ಬೀಜ ಮಂತ್ರವಾಗಲಿ. ಶಾಂತಿ ಸಾಮರಸ್ಯ, ಸಹಬಾಳ್ವೆ, ಸೌಹಾರ್ದ ಸಂಗಮದ ಮೂಲಕ ರಾಷ್ಟ್ರವ್ಯಾಪ್ತಿ ಪಸರಿಸಲಿ ಎಂದು ದೇವರಾಜ ಅರಸು ರಾಜ್ಯಪ್ರಶಸ್ತಿ…

Read More

೨೦೨೪-೨೫ರ ಸಾಲಿನಲ್ಲಿ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ತೆರ್ಗಡೆ ಹೊಂದಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಹೆಮ್ಮೆಯ ಸಂಸ್ಥೆಯಾಗಿದೆ. ಅಷ್ಟೇ ಅಲ್ಲದೇ ೨೦೨೫ರ ಸಾಲಿನ ಸಿಎಸ್ ಪರೀಕ್ಷೆಯಲ್ಲಿಯೂ ನಿರೀಕ್ಷೆಗೂ ಮೀರಿ ತೇರ್ಗಡೆಯ ಫಲಿತಾಂಶ ಪಡೆದು, ಇಡೀ ಉಡುಪಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅಂಕ ಪಡೆದಿದ್ದು ನಮ್ಮ ಎಕ್ಸಲೆಂಟ್ ಸಂಸ್ಥೆ ಆಗಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಎಲ್ಲಾ ಅತ್ಯುತ್ತಮ ಸಾಧನೆ ಮಾಡಲು ಸಿಎ, ಸಿಎಸ್ & ಸಿಎಮ್‌ಎ ಫೌಂಡೇಶನ್ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಸತತವಾಗಿ ತರಬೇತಿಯನ್ನು ನೀಡುತ್ತಾ ಬಂದಿರುವುದರಿ0ದ ಸಾಧ್ಯವಾಗಿದೆ. ದಿನಾಂಕ: ೩೦-೬-೨೦೨೫ರಂದು ಎಕ್ಸಲೆಂಟ್ ಸಂಸ್ಥೆಯ ಆವರಣದಲ್ಲಿ ಸಿಎ, ಸಿಎಸ್ & ಸಿಎಮ್‌ಎ ಫೌಂಡೇಶನ್ ತರಗತಿಯ ಉದ್ಘಾಟನೆಯನ್ನು ಪ್ರಖ್ಯಾತ ತರಬೇತುದಾರರಾದ ನಾಗೇಂದ್ರ ಭಕ್ತ ಅವರ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಲಾಯಿತು. ಈ ಸುಸಂದರ್ಭ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಶ್ರೀಯುತರು, ವಿದ್ಯಾರ್ಥಿಗಳ ಕಲಿಕೆಯ ತವಕ ಮತ್ತು ಸಂಸ್ಕಾರದ ಬಗ್ಗೆ ತಿಳಿಸಿ, ಸಿಎ, ಸಿಎಸ್, ಸಿಎಮ್‌ಎ ಫೌಂಡೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಮಗ್ರವಾಗಿ…

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2021ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ‘ಸಂಪನ್ನಂ‘ ಬೀಳ್ಕೊಡುಗೆ ಸಮಾರಂಭ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಡಾ. ಎಂ. ಮೋಹನ ಆಳ್ವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ನಿರಂತರ ಸಫಲತೆಯನ್ನು ಸಾಧಿಸಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಪದವಿಯನ್ನು ಕೇವಲ ಪಡೆದುಕೊಳ್ಳಬೇಕು ಎಂಬುದಕ್ಕೆ ಮಾತ್ರ ಸೀಮಿತರಾಗದೆ, ಅದನ್ನು ಉಳಿಸಿಕೊಂಡು, ತಾವು ಅಪೇಕ್ಷಿಸಿದ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ಮತ್ತಷ್ಟು ಬೆಳೆಯಬೇಕಾದ ಜವಾಬ್ದಾರಿಯೂ ಇದೆ ಎಂದರು. ಇಂದಿನ ಯುಗದಲ್ಲಿ ಆಯುರ್ವೇದದ ಜೊತೆಗೆ ವೈಜ್ಞಾನಿಕ, ತಾಂತ್ರಿಕ ಮತ್ತು ಸಂಶೋಧನಾ ವಿಚಾರಗಳನ್ನು ಸಮನ್ವಯಗೊಳಿಸಿ ಹೊಸ ದಿಕ್ಕಿನಲ್ಲಿ ಉತ್ತಮ ಸಾಧನೆಗಳನ್ನು ಮಾಡಬಹುದಾದ ಅನೇಕ ಅವಕಾಶಗಳು ಲಭ್ಯವಿವೆ. ಅಂತಹ ಅವಕಾಶಗಳನ್ನು ವಿದ್ಯಾರ್ಥಿಗಳೇ ತಾವಾಗಿ ಅನ್ವೇಷಿಸಿ, ಮುಂದಕ್ಕೆ ಸಾಗಬೇಕಾಗಿದೆ. ಇಂದಿನಿಂದ ನೀವು ಹೊಸ ಜಗತ್ತಿಗೆ ಹೆಜ್ಜೆ ಇಡುತ್ತಿರುವಿರಿ. ಆ ಜಗತ್ತು…

Read More

ಪ್ರತಿಷ್ಠಿತ ಶಿರ್ವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಸಮಾಜಸೇವಕ ಕುತ್ಯಾರು ಕೇಂಜ ಅಬ್ಬೆಟ್ಟು ಗುತ್ತು ಸಾಯಿನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರು ಪ್ರಗತಿಪರ ಕೃಷಿಕರಾಗಿ, ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

Read More

ಹಸಿರು ಉಳಿಸಿದಾಗ ಉಸಿರಿಗೆ ಬಲ ಬರುತ್ತದೆ. ಅರಿವಿನ ಮೂಲಕ ಪರಿಸರ ಸಂರಕ್ಷಣೆ ಕೆಲಸವಾಗಬೇಕು. ಪರಿಸರ ದಿನದ ಆಚರಣೆ ಪ್ರತಿನಿತ್ಯ ನಡೆಯುವ ಜೊತೆಗೆ ಗಿಡವನ್ನು ನೆಟ್ಟ ಬಳಿಕ ಪೋಷಿಸುವ ಅನಿವಾರ್ಯತೆ ಇದೆ ಎಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಕನ್ಯಾನದಲ್ಲಿರುವ ಒಡಿಯೂರು ಶ್ರೀ ಗುರುದೇವ ಐಟಿಐ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದಿಂದ ಮಂಗಳೂರು ವಿಭಾಗ ಮಟ್ಟದ ಗಿಡ ನೆಡುವ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿಯ ಜತೆಗೆ ಬದುಕನ್ನು ರೂಪಿಸುವ ಶಿಕ್ಷಣದ ಅಗತ್ಯವಿದೆ. ಸಂಸ್ಕಾರವನ್ನು ಮೈಗೂಡಿಸಿಕೊಂಡಾಗ ಪ್ರಕೃತಿ ಚೆನ್ನಾಗಿರುತ್ತದೆ. ವಿಜಯ ಎಂಬುದು ಅಂತರಂಗದಲ್ಲಿ ಮೊದಲು ಆಗಬೇಕಾಗಿದ್ದು, ಅಂತರಂಗದ ಉಗ್ರಗಾಮಿಗಳನ್ನು ಧಮನಿಸುವ ಕಾರ್ಯವಾಗಬೇಕು. ಶಿಕ್ಷಣ ಪ್ರಜ್ಞಾವಂತ ಪ್ರಜೆಗಳನ್ನು ನಿರ್ಮಾಣ ಮಾಡುತ್ತದೆಯಾದರೂ, ವಿದ್ಯಾವಂತರಿಂದಲೇ ಸಮಾಜಕ್ಕೆ ಸಮಸ್ಯೆಯಾಗುತ್ತಿರುವುದು ಆಘಾತಕಾರಿಯಾಗಿದೆ. ಆಧ್ಯಾತ್ಮಿಕ ಬದುಕಿನಲ್ಲಿ ದ್ವೇಷಕ್ಕೆ ಅವಕಾಶವಿಲ್ಲ. ಧರ್ಮವನ್ನು ಸೀಮಿತಗೊಳಿಸುವುದು ಸರಿಯಲ್ಲ. ದೇಶ ಉಳಿದರೆ ಧರ್ಮಾನುಷ್ಟಾನ ಸಾಧ್ಯ ಎಂದರು.ಕೆ.ಆರ್.ಎಂ.ಎಸ್.ಎಸ್ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ.…

Read More

ಮಹಿಳೆ ಎಲ್ಲ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿದ್ದಾಳೆ. ಈ ಮೂಲಕ ಹೆಣ್ಣು ಅಂದರೆ ಅಬಲೆ ಅಲ್ಲ ಸಬಲೆ ಎಂಬುದನ್ನು ತೋರಿಸಿ ಕೊಟ್ಟಿದ್ದಾಳೆ. ಸಮಾಜಕ್ಕೆ ಏನಾದರೂ ಕೊಡುಗೆ ಕೊಡಲೇಬೇಕೆಂಬುದು ಎಲ್ಲರ ಆಶಯವಾಗಬೇಕೆಂದು ಗ್ರೂಪ್ ಆಫ್ ಪ್ರಕಲ್ಪ ನಿರ್ದೇಶಕಿ ಕಲ್ಪನಾ ಪ್ರಕಾಶ ನಾಯಕ ಅಭಿಪ್ರಾಯಪಟ್ಟರು. ರೋಟರಿ ಕ್ಲಬ್ ಆಫ್ ಮಿಡ್ ಟೌನ್ ಹುಬ್ಬಳ್ಳಿ ವತಿಯಿಂದ ಆಯೋಜಿಸಿದ್ದ ‘ರೋಟರಿ ಸಂಭ್ರಮ’ ನಾಗರೀಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಪ್ರತೀ ಪುರುಷನ ಯಶಸ್ಸಿನ ಹಿಂದೆ ಮಹಿಳೆ ಇರುತ್ತಾಳೆ ಎನ್ನಲಾಗುತ್ತದೆ. ಆದರೆ, ನನ್ನ ಬೆಳವಣಿಗೆ, ಸಾಧನೆಗೆ ಪತಿಯೇ ಕಾರಣ. ಏನಾದರೂ ಮಾಡು ಎಂದು ಸದಾ ಪ್ರೇರಣೆ ನೀಡುತ್ತಿದ್ದು, ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಆಶಯದೊಂದಿಗೆ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ಉದ್ಯಮಿ ನಂದಕುಮಾರ್ ಎಚ್.ಎನ್ ಮಾತನಾಡಿ, ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದರೆ ನಮಗೆ ಜವಾಬ್ದಾರಿ ಹೆಚ್ಚಿಸುತ್ತದೆ. ಸಮಾಜದಿಂದ ಪಡೆದದನ್ನು ಸಮಾಜಕ್ಕೆ ವಾಪಸ್ ಕೊಡಬೇಕು. ಸಮಾಜದಿಂದಲೇ ವ್ಯಕ್ತಿ ರೂಪುಗೊಳ್ಳುತ್ತಾನೆ. ಸಮಾಜ ನಮಗೆ ಸಾಕಷ್ಟು ಕೊಡುತ್ತದೆ. ಸಮಾಜಕ್ಕಾಗಿ ನಾವು…

Read More

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯದ ಕೀರ್ತಿ ಪತಾಕೆ ಹಾರಿಸಿದ, ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಕೊಡಗಿನ‌ ದೀಪಾ ಭಾಸ್ತಿ ಅವರಿಗೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಬೃಹತ್ ಗೌರವ ಸನ್ಮಾನ ‘ಅಭಿವಂದನಾ ದೀಪಾ’ ಕಾರ್ಯಕ್ರಮ ಜೂನ್ 29 ರಂದು ಮಡಿಕೇರಿಯಲ್ಲಿ ನಡೆಯಿತು. ಸತ್ಕಾರ್ ಸಭಾಂಗಣದಲ್ಲಿ ನಡೆದ ಈ ಅಪರೂಪದ ಕಾರ್ಯಕ್ರಮದಲ್ಲಿ ಜಿಲ್ಲೆಯ 50 ಸಂಘ ಸಂಸ್ಥೆಗಳು ದೀಪಾ ಅವರನ್ನು ಸನ್ಮಾನಿಸಿ ಗೌರವಿಸಿದವು. ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದಲೂ ಪೇಟ, ಹಾರ ತೊಡಿಸಿ ಯಕ್ಷಗಾನ ಕಿರೀಟದ ಪ್ರತಿರೂಪವನ್ನು ನೀಡಿ ಗೌರವಿಸಲಾಯಿತು. ಅಧ್ಯಕ್ಷ ಜಗದೀಶ್ ರೈ ನೇತೃತ್ವದಲ್ಲಿ ನಡೆದ ಗೌರವ ಸಮರ್ಪಣೆ ಸಂಧರ್ಭ ಜಿಲ್ಲಾ ಸಂಘ, ತಾಲೂಕು ಘಟಕ, ನಗರದ ಮಹಿಳಾ ಘಟಕ, ತಾಲೂಕು ಮಹಿಳಾ ಘಟಕ, ಯುವ ಬಂಟ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More