Author: admin

ಬಳ್ಳಾರಿಯ ರೇಣುಕಾ ಬೇಕರಿ ಮಾಲೀಕರಾದ ಶ್ರೀಮತಿ ಸುಮಿತ್ರ ವಸಂತ ಶೆಟ್ಟಿಯವರ ಸುಪುತ್ರಿ ಶ್ರೀಮತಿ ಸ್ವಾತಿ ಪ್ರಶಾಂತ್ ಶೆಟ್ಟಿಯವರ ಸೀಮಂತ ಸಮಾರಂಭಕ್ಕೆ ಬಳ್ಳಾರಿಯ ಹೋಟೆಲ್, ಬೇಕರಿ ಉದ್ಯಮಿಗಳಾದ ಪಿ. ಸತೀಶ್ ಶೆಟ್ಟಿ ಗುರ್ಮೆ, ಎಸ್ ವಿಶ್ವನಾಥ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸಂದೇಶ್ ಶೆಟ್ಟಿ ಹಾಗೂ ಹೋಟೆಲ್ ಉಡುಪಿ ಪಾರ್ಕ್ ನ ಮಾಲಕರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಹಾಗೂ ಮರ್ಲು ಚಿಕ್ಕು ದೇವಸ್ಥಾನ ಹಾಲಾಡಿ ಇದರ ಆಡಳಿತ ಮೊಕ್ತೇಸರರಾದ ಶ್ರೀಯುತ ಅಮರನಾಥ ಶೆಟ್ಟಿಯವರು ಹಿತೈಷಿಗಳೊಂದಿಗೆ ಆಗಮಿಸಿ ಶುಭ ಹಾರೈಸಿದರು.

Read More

ಮೂಡುಬಿದಿರೆ: ವಿದ್ಯಾರ್ಥಿಗಳು ಪಠ್ಯದಷ್ಟೇ ಆಸಕ್ತಿ ಪಠ್ಯೇತರ ಚಟುವಟಿಕೆಯಲ್ಲಿ ವಹಿಸಬೇಕು. ಅದರಲ್ಲೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾತ್ರವಲ್ಲದೆ ಅವರ ಮಾನಸಿಕ ವಿಕಸನಕ್ಕೂ ಪೂರಕವಾಗಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸ್ಕೌಟ್ಸ್ ಮತ್ತು ಗೈಡ್‌ನ ದ.ಕ.ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ. ಮೋಹನ್ ಆಳ್ವ ನುಡಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗಾಗಿ ಸ್ವರಾಜ್ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡೋತ್ಸವ-2024ನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ, ಸಾಮರಸ್ಯದ ಬದುಕನ್ನು ಕಲಿಸುವುದರ ಜೊತೆಗೆ ಹೋರಾಟ ಮನೋಭಾವವನ್ನು ಮೈಗೂಡಿಸಿಕೊಳ್ಳಲು ಸಹಕರಿಸುತ್ತದೆ. ಇದೇ ಮೊದಲ ಬಾರಿಗೆ ಇಂತಹ ಕ್ರೀಡಾ ಕೂಟ ಆಯೋಜನೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಏರ್ಪಡಿಸುವ ಉದ್ದೇಶವಿದೆ ಎಂದು ಆಶಯ ವ್ಯಕ್ತಪಡಿಸಿದರು. ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಿ ಮೊಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್, ಜಿಲ್ಲಾ…

Read More

ಮೂಡುಬಿದಿರೆ: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಡಾ ಎಂ ವೀರಪ್ಪ ಮೊಯಿಲಿಯವರ ‘’ವಿಶ್ವಸಂಸ್ಕೃತಿ ಮಹಾಯಾನ’’ – ಸಂಪುಟ-2, ಗದ್ಯ ಮಹಾಕಾವ್ಯ ಬಿಡುಗಡೆ ಸಮಾರಂಭ ಜನವರಿ 12ರಂದು ಭಾನುವಾರ 11 ಗಂಟೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿ ಆವರಣದ ಡಾ ವಿಎಸ್ ಆಚಾರ್ಯ ಸಭಾಭವನದಲ್ಲಿ ಜರುಗಲಿದೆ. ಈ ಕಾರ್ಯಕಮ್ರವು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಹಾಗೂ ಬೆಂಗಳೂರಿನ ಸಪ್ನ ಬುಕ್ ಹೌಸ್‍ನ ಸಹಯೋಗದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ವಹಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರು ವಿವಿಯ ನಿವೃತ್ತ ಆಂಗ್ಲ ಪ್ರಾಧ್ಯಪಕ ಹಾಗೂ ಖ್ಯಾತ ವಿಮರ್ಶಕ ಪ್ರೋ.ಸಿ. ನಾಗಣ್ಣ ಗ್ರಂಥವನ್ನು ಬಿಡುಗಡೆಗೊಳಿಸಲಿದ್ದಾರೆ. ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿಗಳಾದ ಡಾ ಬಿ.ಎಂ ವಿವೇಕ…

Read More

ರಾಷ್ಟ್ರೀಯ ಸ್ವಯಂಸೇವಕ ಸಂಘ, ಧಾರ್ಮಿಕ ಕ್ಷೇತ್ರ, ಭಾರತೀಯ ಜನತಾಪಕ್ಷ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾರ್ವಜನಿಕ ಬದುಕಿಗೆ ಕಾಲಿಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಸದಾ ಕ್ರಿಯಾಶೀಲ, ಸಂಘಟನಾ ಚತುರ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಹೆಸರು ಬಿಜೆಪಿ ವಲಯದಲ್ಲಿ ಸದಾ ಚಾಲ್ತಿಯಲ್ಲಿದೆ. ಧರ್ಮ ಜಾಗರಣಾ, ಆರ್.ಎಸ್.ಎಸ್, ಭಾಜಾಪದ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ಹೊತ್ತ ಸಂದರ್ಭದಲ್ಲೇ ನಳಿನ್ ಕುಮಾರ್ ಕಟೀಲ್ ಹೆಸರು ಜಿಲ್ಲೆಯ ಮೂಲೆ ಮೂಲೆಯ ತಳಮಟ್ಟದ ಕಾರ್ಯಕರ್ತರಿಗೆ ಬಹಳ ಹತ್ತಿರದ ನಂಟು ಹೊಂದಿತ್ತು. ಜಿಲ್ಲೆಯಲ್ಲಿ ಸುಮಾರು ಎರಡುವರೆ ದಶಕಗಳ ಹಿಂದೆ ತಲೆಯೆತ್ತಿದ ಪರಿಸರದ ಮಾರಕ ಅವೈಜ್ಞಾನಿಕ ಯೋಜನೆಗಳ ವಿರುದ್ಧ ಸಂಘಟಿತ ಹೋರಾಟ, ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳ ನೂರಾರು ಬ್ರಹ್ಮಕಲಶೋತ್ಸವದ ಅಧ್ಯಕ್ಷ ಗೌರವಾಧ್ಯಕ್ಷರಾಗಿ ಮಾದರಿ ಬ್ರಹ್ಮಕಲಶೋತ್ಸವನ್ನು ಹಾಗೂ ಸಂಘಟನಾ ಚಾತುರ್ಯತೆಯನ್ನು ಜಿಲ್ಲೆಗೆ ಪಸರಿಸಿ ಮಾದರಿ ಬ್ರಹ್ಮಕಲಶೋತ್ಸವದ ರೂವಾರಿಯಾಗಿ, ಎತ್ತಿನಹೊಳೆ ಯೋಜನೆಯ ವಿರುದ್ಧದ ಹೋರಾಟ ಸಂಘಟನೆಯ ಪ್ರಚಾರಕರಾಗಿ ಸಂಘಟನಾತ್ಮಕ ಹಿನ್ನೆಲೆಯಲ್ಲಿ ಪಕ್ಷದ…

Read More

ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಹಿರ್ಗಾನದ ಸಿರಿಯಣ್ಣ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉದ್ಯಮಿ, ಪ್ರಗತಿಪರ ಕೃಷಿಕರಾಗಿರುವ ಸಿರಿಯಣ್ಣ ಶೆಟ್ಟಿಯವರು ಕಳೆದ ಸಾಲಿನಲ್ಲೂ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಆ ಮೊದಲು ಸಂಘದ ನಿರ್ದೇಶಕರಾಗಿ, ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಜನವರಿ 8ರಂದು ಸಂಘದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಚುನಾವಣಾ ಅಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಜಯಂತಿ ಎಸ್. ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಉದ್ಯಮಿ ಚೇತನ್ ಶೆಟ್ಟಿ, ವಾಸು ಶೆಟ್ಟಿ, ಸಂಘದ ಮಾಜಿ ನಿರ್ದೇಶಕ ಎಂ. ರತ್ನಾಕರ ರಾವ್, ಸಂಘದ ನಿರ್ದೇಶಕರಾದ ಶಂಕರ ನಾಯಕ್, ಹರೀಶ್ ಶೆಟ್ಟಿ, ತಾರನಾಥ ಶೆಟ್ಟಿ, ಉಮೇಶ್ ನಾಯ್ಕ್, ಪ್ರಕಾಶ್ ಗೋಕುಲ್ ನಾಯ್ಕ್, ಕಲ್ಯಾಣಿ ಶೆಟ್ಟಿ, ರತ್ನಾವತಿ ಎನ್. ನಾಯಕ್, ಅನಿಲ್ ಪೂಜಾರಿ ಉಪಸ್ಥಿತರಿದ್ದರು. ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಜಯಂತ್ ಕುಮಾರ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ವಾಘಲೆ ಕಾರ್ಯಕ್ರಮ ನಿರ್ವಹಿಸಿದರು.

Read More

ಜಡ್ಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ – 2025ರ ಅಂಗವಾಗಿ ಪ್ರತಿಭಾ ಸಿಂಚನ ಕಾರ್ಯಕ್ರಮ ಜರಗಿತು. ಬೆಳಗ್ಗೆ ಜಡ್ಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭಾರತಿ ಜೆ ಶೆಟ್ಟಿ ಧ್ವಜಾರೋಹಣಗೈದರು. ಜಡ್ಕಲ್ ಸೈಂಟ್ ಜಾರ್ಜ್ ಚರ್ಚ್ ಧರ್ಮಗುರು ಮಾಣಿ ವಿದ್ಯಾರ್ಥಿಗಳ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಸಂಜೆ ಸಭಾ ಕಾರ್ಯಕ್ರಮವನ್ನು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿದರು. ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಬೆಳಾರಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ದೇವದಾಸ್ ವಿಜೆ, ಲಕ್ಷ್ಮಿ ಚಂದನ್, ಬೆಂಗಳೂರಿನ ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ನಾಯಕ್, ಉಪಾಧ್ಯಕ್ಷ ರಾಘವೇಂದ್ರ ಬೆಳಾರಿ, ಸಂಘಟಕ ರಾಜೇಂದ್ರ ಶೆಟ್ಟಿ, ಕೊಲ್ಲೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ, ವಿದ್ಯಾರ್ಥಿ ನಾಯಕ ಸುಧನ್ವ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ರೋಸಮ್ಮ ಸೆಬಾಸ್ಟಿಯನ್ ಸ್ವಾಗತಿಸಿದರು. ಶಿಕ್ಷಕಿ ಗೀತಾ ವರದಿ ವಾಚಿಸಿದರು. ಶಿಕ್ಷಕಿ ಸುಮಲತಾ ಕಾರ್ಯಕ್ರಮ ನಿರೂಪಿಸಿದರು.

Read More

ಗ್ಲೋಬಲ್ ಹೆಲ್ತ್ ಕೇರ್ ವೆಲ್ನೆಸ್ ಅವಾರ್ಡ್ಸ್ ಮತ್ತು ಸಮಿಟ್ -2025 ರಲ್ಲಿ ಕೊಡ ಮಾಡುವ ಮೆಡಿಕಲ್ ಎಂಟರ್ಪ್ರಿನರ್ ಆಫ್ ದಿ ಇಯರ್ ಪ್ರಶಸ್ತಿಗೆ ಜನ ವೈದ್ಯದ ಸಂಸ್ಥಾಪಕ ಡಾ. ಅಬಿತ್. ಬಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಚೆನ್ನೈನ ಸಿಟಿ ಸೆಂಟರ್ ನ ರಾಡಿಸನ್ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.ಬೆಂಗಳೂರಿನಲ್ಲಿ ಮನೆ ಭೇಟಿ ಮಾಡಿ ಚಿಕಿತ್ಸೆ ನೀಡುವ “ಜನವೈದ್ಯ”ಎಂಬ ವ್ಯವಸ್ಥೆಯನ್ನು ಪ್ರಾರಂಭಿಸಿದ್ದು, ತನ್ಮೂಲಕ ಕಳೆದ ಮೂರೂವರೆ ವರ್ಷಗಳಲ್ಲಿ 2500ಕ್ಕೂ ಹೆಚ್ಚು ರೋಗಿಗಳಿಗೆ ಸೇವೆ ಸಲ್ಲಿಸಿದ್ದಾರೆ. 2024ರ ನವೆಂಬರ್ ನಿಂದ ಕಾರ್ಕಳದಲ್ಲೂ ಜನವೈದ್ಯ ಸೇವೆಯನ್ನು ಪ್ರಾರಂಭಿಸಿದ್ದಾರೆ. ಇವರು ಮೂಲತಃ ಕಾರ್ಕಳ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿಯಾಗಿದ್ದು, ಭಾಸ್ಕರ ಶೆಟ್ಟಿ ಮತ್ತು ಅಮೃತ ಶೆಟ್ಟಿ ದಂಪತಿ ಪುತ್ರ, ಪ್ರಸ್ತುತ ಮುಂಬೈನಲ್ಲಿ ವಾಸವಾಗಿದ್ದು, ಸೇಥ್ ಜಿಎಸ್ ವೈದ್ಯಕೀಯ ಕಾಲೇಜು ಮತ್ತು ಕೆಇಎಂ ಆಸ್ಪತ್ರೆಯಲ್ಲಿ ಎಂಡಿ ಸಮುದಾಯ ವೈದ್ಯಕೀಯದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Read More

ಬಂಟರ ಸಂಘ ಬೆಂಗಳೂರು ಈ ಬಾರಿ ಯುವ ಬಂಟರ ಸಮಿತಿ ಬಂಟರನ್ನು ಒಗ್ಗೂಡಿಸಿ ಅದ್ದೂರಿಯಾಗಿ 31ನೇ ಡಿಸೆಂಬರ್ 2024 ರಂದು ಸಂಘದ ಆವರಣದಲ್ಲಿ ಹೊಸ ವರ್ಷಾಚರಣೆಯನ್ನು ಹಮ್ಮಿಕೊಂಡಿತ್ತು. ನವೆಂಬರ್ 22ರಂದು ಗಣ್ಯರ ಸಮ್ಮುಖದಲ್ಲಿ ಪೋಸ್ಟರ್ ಲೋಕಾರ್ಪಣೆ ಮಾಡಿ ಸಮಾಜದ ಜನರ ಜೊತೆ ಕಾರ್ಯಕ್ರಮ ಸಂಬಂಧಿಸಿದ ವಿಚಾರಗಳನ್ನು ಹಂಚಿಕೊಳ್ಳುತ್ತಾ ಬಂದಿದ್ದ ತಂಡ ಜನರ ಮನ ಮುಟ್ಟಲು ಎಲ್ಲಾ ತರದಲ್ಲೂ ಪ್ರಯತ್ನಿಸಿತ್ತು.31ರ ಸಂಜೆ ಕಿಕ್ಕಿರಿದು ತುಂಬಿದ್ದ ಬಂಟರ ಬಳಗ, ದೀಪಾಲಂಕಾರಗೊಂಡು ಮಿರುಗುತ್ತಿದ್ದ ಬಂಟರ ಸಂಘದ ಆವರಣದಲ್ಲಿ ಸಂಜೆ 7 ರಿಂದಲೇ ಕಾರ್ಯಕ್ರಮಗಳು ಪ್ರಾರಂಭವಾದವು. ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿಜಯ ಶೆಟ್ಟಿ ಹಾಲಾಡಿ, ಕೋಶಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಯುವ ಸಮಿತಿ ಅಧ್ಯಕ್ಷ ಅಜಿತ್ ವಿ ಶೆಟ್ಟಿ ಹಾಗೂ ಸಂಚಾಲಕ ಪ್ರಸಾದ್ ಶೆಟ್ಟಿ ಅರೆಹೊಳೆ ಸಮೇತರಾಗಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ವೇದಿಕೆ ಅಲಂಕರಿಸಿ ನೆರೆದ ಬಂಟ ಬಂಧುಗಳಿಗೆ ಸ್ವಾಗತಿಸಿ ಕಾರ್ಯಕ್ರಮಕ್ಕೆ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘಕ್ಕೆ ಒಂದು ಲಕ್ಷ ರೂಪಾಯಿ ಧನಸಹಾಯ ನೀಡಿದರು. ದೇಣಿಗೆಯ ಚೆಕ್ಕನ್ನು ನೀಡಿ ಸಮಾಜಮುಖಿ ಕೆಲಸ ಕಾರ್ಯ ನಿರ್ವಹಿಸುವಂತೆ ಹೇಳಿ ಶುಭ ಹಾರೈಸಿದರು. ಈ ಸಂಧರ್ಭ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪುತ್ತೂರು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷ ಕುಮಾರ್ ರೈ, ಕಾರ್ಯದರ್ಶಿ ಪ್ರಜ್ವಲ್ ರೈ ಸೊರಕೆ, ಪುತ್ತೂರು ಬಂಟರ ಸಂಘದ ಮಾಜಿ ಕಾರ್ಯದರ್ಶಿ ಮೊಹನ ರೈ ನರಿಮೊಗರು, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ ಶೆಟ್ಟಿ ಉಪಸ್ಥಿತರಿದ್ದರು.

Read More

ಕಿಡ್ನಿ ಪೈಲೂರ್ ಪ್ರಕರಣದಲ್ಲಿ ಈಗ ಮೊವ್ವತ್ತರೊಳಗಿನ ಮಕ್ಕಳೂ ಜಾಸ್ತಿಯಾಗಿ ಸಿಲುಕುತ್ತಿದ್ದಾರೆ. ಕಿಡ್ನಿ ಡಯಾಲಿಸೀಸ್ ವಾರ್ಡಿಗೊಮ್ಮೆ ನೀವು ಎಂಟ್ರಿ ಕೊಟ್ಟರೆ ಈ ಕರಾಳ ಸತ್ಯ ನಿಮಗೂ ಅರ್ಥವಾದೀತು. ಸ್ಟಿಂಗ್ ಎನ್ನುವ ಹೆಸರಿನ ಬಣ್ಣ ಬಣ್ಣದ ಪೇಯವೊಂದು ಮಕ್ಕಳ ಕೈಗೆ ಬಹಳ ಸುಲಭವಾಗಿ ಸಿಗುತ್ತಿದೆ, ಕೇವಲ ಮೂರೇ ಮೂರು ದಿವಸ ಯಾವುದೇ ಮಗು ಸ್ಟಿಂಗ್ ಕುಡಿದರೆ ಅದರ ಅಡಿಕ್ಷನ್ ಶುರುವಾಗುತ್ತದೆ ಮತ್ತು ಆ ಮಗುವಿನ ಕರಾಳ ಅಂತ್ಯವೂ ಸಮೀಪಿಸುತ್ತದೆ! ಅಂಗಡಿ, ಬೇಕರಿಗಳ ಮತ್ತು ಮಾಲ್ ಗಳಲ್ಲಿ ಇದನ್ನ ಮಾರಾಟಕ್ಕಿಟ್ಟವರಿಗೆ ಮನೆಯಲ್ಲಿ ಮಕ್ಕಳಿದ್ದರೆ, ಕನಿಷ್ಠ ಪಾಪ ಪ್ರಜ್ಜೆ ಇದ್ದರೆ ದಯವಿಟ್ಟು ಸ್ಟಿಂಗ್ ಎನ್ನುವ ವಿಷವನ್ನ ಮಾರಾಟ ಮಾಡಿ ಪಾಪವನ್ನು ಕೊಳ್ಳಬೇಡಿ! ಯಾರದೋ ಮನೆಯ ಬೆಳಕು ಆರಲಿಕ್ಕೆ ನೀವೂ ಕಾರಣರಾಗುತ್ತೀರಿ ಎನ್ನುವುದನ್ನ ಮರೆಯಬೇಡಿ. ನಮ್ಮ ಟೀಮ್ ಅಭಿಮತ ಇದನ್ನ ಯಾವುದೇ ಅಂಗಡಿಯಲ್ಲಿ ಮಾರಾಟ ಮಾಡುವುದನ್ನ ಗಮನಿಸಿದರೂ ಅವರಿಗೆ ಮನವರಿಕೆ ಮಾಡಿ ಇನ್ನುಮುಂದೆ ಮಾರಾಟ ಮಾಡದಂತೆ ಒತ್ತಾಯಿಸುತ್ತದೆ. ನಾನೂ ರೆಡ್ ಬುಲ್ ಕುಡಿಯುತ್ತೇನೆ! ರಾತ್ರಿ ಪ್ರಯಾಣದ ವೇಳೆಯಲ್ಲಿ ನಿದ್ದೆ…

Read More