Author: admin
ಮುಂಬಯಿ ಮಹಾನಗರದಲ್ಲಿ ಮುಂಚೂಣಿಯಲ್ಲಿರುವ ಜಾತೀಯ ಸಂಘಟಣೆಗಳಲ್ಲೊಂದಾದ ಬೋಂಬೆ ಬಂಟ್ಸ್ ಅಸೋಸಿಯೇಷನ್, ಪ್ರತಿ ಬಾರಿ ಎರಡು ವರ್ಷಗಳಿಗೊಮ್ಮೆ ಬದಲಾವಣೆಗೊಳ್ಳುವ, ಆಡಳಿತ ಕಾರ್ಯಕಾರಿ ಸಮಿತಿ, ಆಡಳಿತ ಸಮಿತಿ ಸದಸ್ಯರ, ಮಾಜಿ ಅಧ್ಯಕ್ಷರುಗಳು, ವಿಶ್ವಸ್ಥರ ಹಾಗೂ ಮಹಿಳಾ ವಿಭಾಗ, ಯುವ ವಿಭಾಗ, ಕಾರ್ಯಕಾರಿ ಸಮಿತಿಗಳ ಗುಂಪು ಛಾಯಾಚಿತ್ರ ತೆಗೆಯುವ ರೂಢಿಯನ್ನು ಹಲವಾರು ವರ್ಷಗಳಿಂದ ಅನುಸರಿಸುತ್ತಾ ಬಂದಿದೆ. ಆ ಪರಿಕ್ರಮ, ಚುನಾಯಿತಗೊಂಡ ಪ್ರತಿಯೊಂದು ಆಡಳಿತ ಸಮಿತಿಯಿಂದ ನಡೆಯುವ ವಾರ್ಷಿಕ ಮಹಾಸಭೆಯ ಮುಂಚಿತವಾಗಿ ನಡೆಯುತ್ತದೆ. ಅದೇ ರೀತಿ ಈ ಬಾರಿಯ ಆಡಳಿತ ಸಮಿತಿಯ (2024 -2026) ವಾರ್ಷಿಕ ಮಹಾಸಭೆಯು ನವೆಂಬರ್ 16 ರಂದು ನಡೆಯಲಿರುವುದರಿಂದ, ಗುಂಪು ಛಾಯಾಚಿತ್ರದ ಕಾರ್ಯಕ್ರಮವನ್ನು ಅಕ್ಟೋಬರ್ 18 ರಂದು ಸಂಜೆ 4.00 ಗಂಟೆಗೆ ಸಯನ್ ನಿತ್ಯಾನಂದ ಸಭಾಗೃಹದಲ್ಲಿ ಬೋಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಅಡ್ವೋಕೇಟ್ ಡಿ.ಕೆ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆಡಳಿತ ಸಮಿತಿ ಕಾರ್ಯಕಾರಿ ಸದಸ್ಯರು, ಮಾಜಿ ಅಧ್ಯಕ್ಷರು, ವಿಶ್ವಸ್ಥರು, ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಹಾಗೂ ಮಹಿಳಾ ವಿಭಾಗ ಮತ್ತು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿಯ ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಗೆ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರು ಮತ್ತು ಭಾರತ್ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ ಇವರು ಭೇಟಿ ನೀಡಿದ ಸಂದರ್ಭ ಅವರನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮತ್ತು ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಸೂರ್ಯಕಾಂತ್ ಜೆ ಸುವರ್ಣ ಅವರು ಬಿಲ್ಲವ ಮಹಾಮಂಡಲದ ಅಧ್ಯಕ್ಷರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳಾರ್, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸಿವಿಲ್ ಕಂಟ್ರಾಕ್ಟರ್ ಶಿವಪ್ರಸಾದ ರೈ, ರವಿರಾಜ್ ಶೆಟ್ಟಿ ಜತ್ತಬೆಟ್ಟು, ಸೂರ್ಯಕಾಂತ್ ಸುವರ್ಣರವರ ಅಭಿಮಾನಿಗಳಾದ ಮೋಹನ್ ಕೋಟ್ಯಾನ್, ಯೋಗೀಶ್ ಕೋಟ್ಯಾನ್,…
ಸಾಮಾಜಿಕ ಜೀವನದ ಜೊತೆ ಜೊತೆಗೆ ಆರ್ಥಿಕ ಸ್ವಾವಲಂಬನೆಯ ಕಡೆಗೆ ಗಮನ ಹರಿಸಬೇಕು – ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು
ಯುವ ಜನತೆ ಉದ್ಯೋಗಾಸಕ್ತಿಗಿಂತ ಹೆಚ್ಚು ಉದ್ಯಮಶೀಲತೆಯ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಸಾಮಾಜಿಕ ಜೀವನದ ಜೊತೆ ಜೊತೆಗೆ ಆರ್ಥಿಕ ಸ್ವಾವಲಂಬನೆಯ ಕಡೆಗೆ ಗಮನ ಹರಿಸಬೇಕು ಎಂದು ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಅಭಿಪ್ರಾಯ ಪಟ್ಟರು. ಅವರು ಅ. 27 ರಂದು ಕಾರ್ಕಳದ ಕಟೀಲ್ ಇಂಟರ್ನ್ಯಾಷನಲ್ ಹೋಟೆಲ್ ನಲ್ಲಿ ಶುಭಾರಂಭಗೊಂಡ ಕೌಟುಂಬಿಕ, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆಯ ಶಕ್ತಿ ಇವೆಂಟ್ಸ್ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಬೆಂಗಳೂರು ಮತ್ತು ಮಂಗಳೂರು ಭಾಗದಲ್ಲಿ ಹೆಚ್ಚಿನ ಇವೆಂಟ್ ಕಂಪನಿಗಳು ಕಾರ್ಯಾಚರಿಸುತ್ತಿದ್ದು, ಕಾರ್ಕಳದಲ್ಲಿ ಶಕ್ತಿ ಇವೆಂಟ್ಸ್ ಸಂಸ್ಥೆ ಆರಂಭವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಯಶಸ್ವಿಯಾಗಿ ಮುನ್ನಡೆಯಲ್ಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಬೋಳ ಶ್ರೀನಿವಾಸ್ ಕಾಮತ್, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು ಮತ್ತು ನಿತ್ಯಾನಂದ ಪೈ ಉಪಸ್ಥಿತರಿದ್ದರು. ಸಂಸ್ಥೆಯ ಪಾಲುದಾರರಾದ ಗುರುಪ್ರಸಾದ್ ನಾರಾವಿ, ಶ್ರೀಕಾಂತ್ ಶೆಟ್ಟಿ ಮತ್ತು ಸಂತೋಷ್ ಸ್ವಾಗತಿಸಿದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.
ಸಮಾಜದ ಸಂಕಷ್ಟದ ಸಮಯದಲ್ಲಿ ಸ್ವಯಂ ಸ್ಫೂರ್ತಿಯಿಂದ ಮುನ್ನುಗ್ಗಿ ಕಾರ್ಯಪ್ರವೃತ್ತರಾಗುವ ತೀರಾ ಅಪರೂಪದ ವ್ಯಕ್ತಿಗಳಲ್ಲಿ ದಿ| ಜಲಂಧರ ರೈ ಪ್ರಮುಖರು. ಅವರು ಓರ್ವ ನಿಸ್ಪೃಹ ಸರ್ವ ಸಮರ್ಪಿತ ಕಾರ್ಯಕರ್ತ. ಕಾರ್ಕಳದ ಅಜೆಕಾರು ಮತ್ತು ಕೋಟೆಕಾರಿನ ಆನಂದಾಶ್ರಮ ಪ್ರೌಢ ಶಾಲೆಗಳಲ್ಲಿ ಜನಮನ ಗೆದ್ದ ಅಧ್ಯಾಪಕರಾಗಿ, ಸಾಮಾಜಿಕ ಸಂಘಟಕರಾಗಿ, ಕ್ರೀಡಾ ತರಬೇತುದಾರರಾಗಿ, ಯಕ್ಷಗಾನ ಕಲಾವಿದರಾಗಿ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಬಹುಮುಖೀ ಸಾಧಕರಾಗಿ ಸಾವಿರಾರು ಜನರಿಗೆ ಮಾರ್ಗದರ್ಶಕರಾಗಿದ್ದ ಅವರು ನಾಡಿನಾದ್ಯಂತ ಸಂಚರಿಸಿದ ಧೀಮಂತ ನಾಯಕ. ಶ್ರೇಷ್ಠ ಮಾನವತಾವಾದಿ ಎಂದು ದಿ| ಜಲಂಧರ ರೈ ಅವರ ನಿಕಟವರ್ತಿ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಬೀರಿ ಕೋಟೆಕಾರ್ ಮತ್ತು ಶ್ರೀ ಗಣೇಶ ಭಜನಾ ಮಂದಿರ ಬೀರಿ ಆಶ್ರಯದಲ್ಲಿ ಆನಂದಾಶ್ರಮ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಹಿತೈಷಿಗಳ ಸಹಕಾರದೊಂದಿಗೆ ದಿ| ಎಸ್. ಜಲಂಧರ ರೈ ಅವರ 25 ನೇ ವರ್ಷದ ಪುಣ್ಯ ಸ್ಮರಣೆಗಾಗಿ ಸಂಕೊಳಿಗೆಯ ಶಕ್ತಿ…
ರೋಟರಿ ಕ್ಲಬ್ ಕಾರ್ಕಳ ಪ್ರಾಯೋಜಿತ ರೋಟರಿ ಸಮುದಾಯ ದಳ ಕಲ್ಲಂಬಾಡಿ ಪದವು ಇದರ ವತಿಯಿಂದ ಕಾರ್ಕಳ ಕಣಂಜಾರು ಹೊಸ ಬೆಳಕು ಆಶ್ರಮಕ್ಕೆ ದೀಪಾವಳಿಯ ಪ್ರಯುಕ್ತ ಆಶ್ರಮ ವಾಸಿಗಳಿಗೆ ಮಧ್ಯಾಹ್ನದ ಊಟ, ತಿಂಡಿ ತಿನಿಸುಗಳು ಹಾಗೂ ಹಣ್ಣನ್ನು ನೀಡಲಾಯಿತು. ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಆಶ್ರಮದಲ್ಲಿರುವ ಹಿರಿಯರು ಅನುಭವಿಗಳಾಗಿದ್ದು ಸಮಾಜದ ಮಾರ್ಗದರ್ಶಕರಾಗಿರಬೇಕಾದವರು. ಆದರೆ ಕಾಲನ ಕೈಗೆ ಸಿಲುಕಿ ಇಂದು ಆಶ್ರಮದ ವಾಸಿಗಳಾಗಿದ್ದಾರೆ. ಇವರನ್ನು ನೋಡಿಕೊಳ್ಳುತ್ತಿರುವ, ಆರೈಕೆ ಮಾಡುತ್ತಿರುವ ಆಶ್ರಮದ ಮುಖ್ಯಸ್ಥರು, ಸಿಬ್ಬಂದಿ ವರ್ಗದವರ ಕಾಳಜಿ, ತ್ಯಾಗ, ಸೇವೆಯು ಪ್ರಶಂಸನೀಯ ಎಂದರು. ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಆರ್.ಸಿ.ಸಿ ಅಧ್ಯಕ್ಷ ಸುರೇಶ ಆಚಾರ್ಯ, ಕಾರ್ಯದರ್ಶಿ ಜಗದೀಶ್ ನಾಯಕ್ ಹಾಗೂ ಹಿರಿಯ ರೊಟೇರಿಯನ್ ಜಗದೀಶ್ ಟಿ ಎ. ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಆಶ್ರಮವಾಸಿಗಳಿಬ್ಬರು ಆಶ್ರಮದ ದಿನಚರಿಯ ಬಗ್ಗೆ ಮಾಹಿತಿ ನೀಡಿ, ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಮೆಚ್ಚುಗೆಯ ಮಾತುಗಳನ್ನು ಆಡಿದರು. ಕ್ಲಬ್ಬಿನ ಸದಸ್ಯರಾದ ಸುರೇಶ್ ನಾಯಕ್,…
ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಕಾಲೇಜು : ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಆಗಮನ ಕಾರ್ಯಕ್ರಮ
ಯೋಗವನ್ನು ಜಾಗತಿಕ ವೇದಿಕೆಗೆ ಕೊಂಡೊಯ್ದ ನಮ್ಮ ಪ್ರಧಾನ ಮಂತ್ರಿಗಳ ಪ್ರಯತ್ನದಿಂದ ನ್ಯಾಚುರೋಪತಿ ಹಾಗೂ ಯೋಗ ವೈದ್ಯಕೀಯ ಕ್ಷೇತ್ರಕ್ಕೆ ವಿಶ್ವದಾದ್ಯಂತ ಹೊಸ ಅವಕಾಶಗಳು ಲಭಿಸುತ್ತಿವೆ ಎಂದು ಪುಣೆ ಮೂಲದ ಆತ್ಮನ್ತನ್ ವೆಲ್ನೆಸ್ ಸೆಂಟರ್ನ ವೈದ್ಯಕೀಯ ನಿರ್ದೇಶಕ ಹಾಗೂ ಸಿಇಒ ಡಾ. ಮನೋಜ್ ಕುಟ್ಟೇರಿ ನುಡಿದರು. ಅವರು ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ನಡೆದ 2025–26ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಆಗಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರತಿ ದಿನವೂ ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ನವೀಕರಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕಾಲೇಜು ಮಾರ್ಗದರ್ಶನ ನೀಡಬಹುದು, ಆದರೆ ನಿಜವಾದ ಬೆಳವಣಿಗೆ ನಮ್ಮ ಪ್ರಯತ್ನದಲ್ಲಿದೆ. ನ್ಯಾಚುರೋಪತಿ ಸಾಮಾನ್ಯ ವೈದ್ಯಕೀಯ ಶಾಖೆಯಲ್ಲ. ಇದು ಭವಿಷ್ಯದ ಭರವಸೆಯ ವೈದ್ಯಕೀಯ ಶಾಖೆ. ಹೆಚ್ಚುತ್ತಿರುವ ಸಮಗ್ರ ಆರೋಗ್ಯದ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದ ಅವರು, ನ್ಯಾಚುರೋಪತಿ ವೈದ್ಯರು ವೈಯಕ್ತಿಕ ಚಿಕಿತ್ಸೆಯತ್ತ ಹೆಚ್ಚು ಗಮನ ಹರಿಸಬೇಕು. ಈ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿವೆ. ವೈದ್ಯರಾಗಿ, ಆಕ್ಯುಪಂಕ್ಚರಿಸ್ಟ್ ಆಗಿ, ಪೌಷ್ಟಿಕ ತಜ್ಞರಾಗಿ, ಕಾರ್ಪೊರೇಟ್ ವೆಲ್ನೆಸ್ ಕೋಚ್ಗಳಾಗಿ,…
ಡಾ| ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು, ಅಮೃತ ಪ್ರಕಾಶ ಪತ್ರಿಕೆಯ ಸರಣಿ ಕೃತಿ 45ನೇಯ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಕಾವೇರಿ ಎಂಬ ಕೃತಿಯನ್ನು ಮಂಗಳೂರಿನ ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು. ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು ಕಾವೇರಿ ಮಾತೆಯ ಆದಿಯನ್ನು ವಿವರಣೆ ಮತ್ತು ವರ್ಣ ಚಿತ್ರದ ಮೂಲಕ ಕಣ್ಣಿಗೆ ಬಿ.ಕೆ ಗಣೇಶ್ ರೈ ಅವರು ಕಟ್ಟಿಕೊಟ್ಟಿದ್ದಾರೆ. ಹೆಚ್ಚಿನ ಎಲ್ಲರಿಗೂ ಕಾವೇರಿ ಮಾತೆಯ ಪುರಾಣ ಕಥೆಗಳ ಪರಿಚಯ ಇರುವುದಿಲ್ಲ. ಈ ಕೃತಿಯ ಓದುಗರ ಮೂಲಕ ಕಥೆಯ ಸಾಕ್ಷಾತ್ಕಾರವಾಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಗೌಡ…
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಯಿತು. ಸಹಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್ ರವರು ಮಾತನಾಡಿ 'ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಣ ಸಂಸ್ಥೆ, ಪೋಷಕರು ಮತ್ತು ಶಿಕ್ಷಕರ ತ್ರಿಕೋನ ಸಹಕಾರ ಅತ್ಯವಶ್ಯಕ' ಎಂದು ಹೇಳಿದರು. ಅಶ್ವತ್ ಎಸ್.ಎಲ್ ರವರು 'ಶಿಕ್ಷಕರು ಮತ್ತು ಪಾಲಕರು ಇಬ್ಬರು ಒಂದೇ ಹಾದಿಯಲ್ಲಿ ನಡೆದು ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದಾಗ, ಸಮಾಜಕ್ಕೆ ಒಳ್ಳೆಯ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ' ಎನ್ನುತ್ತಾ ಕ್ರಿಯೇಟಿವ್ ನ ಕಾರ್ಯ ಯೋಜನೆಗಳ ಬಗ್ಗೆ ವಿವರಣೆಗಳನ್ನು ನೀಡಿದರು. ಡಾ. ಬಿ. ಗಣನಾಥ ಶೆಟ್ಟಿ ರವರು ಮಾತನಾಡುತ್ತಾ ' ವಿದ್ಯಾರ್ಥಿಗಳು ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಂಡು, ಶ್ರದ್ಧೆ ಮತ್ತು ಶ್ರಮದಿಂದ ಓದುತ್ತ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗಬೇಕು' ಎಂದು ಕರೆ ನೀಡಿದರು. ಗಣಪತಿ ಭಟ್…
ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 45 ನೇ ಘಟಕ ಇತ್ತೀಚೆಗೆ ರಚನೆಗೊಂಡಿತು. ಗೌರವಾಧ್ಯಕ್ಷರಾಗಿ ನಕ್ರೆ ಸತೀಶ್ಚಂದ್ರ ಶೆಟ್ಟಿ ಆಯ್ಕೆಯಾದರು. ಅಧ್ಯಕ್ಷರಾಗಿ ಯದುನಾಥ್ ಆಳ್ವ ನೇಮಕಗೊಂಡರು. ಸಂಚಾಲಕರಾಗಿ ಸನತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ವಿಲ್ಸನ್ ಡಿ’ಸೋಜಾ, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಎಸ್ ಪೂಜಾರಿ, ಖಜಾಂಚಿಯಾಗಿ ಅಬ್ದುಲ್ ರಜಾಕ್ ನಿಟ್ಟೆ, ಜಂಟಿ ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಸಾಲಿಯಾನ್, ಕಲ್ಯಾಣ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಶ್ರೀನಾಥ್ ಪ್ರಭು ಆಯ್ಕೆಗೊಂಡರು.
ರೋಟರಿ ಕ್ಲಬ್ ಕಾರ್ಕಳ ಇದರ ಆತಿಥ್ಯದಲ್ಲಿ ರೋಟರಿ ಫೌಂಡೇಶನ್ ಹಾಗೂ ಪೋಲಿಯೋ ಪ್ಲಸ್ ಬಗ್ಗೆ ವಲಯ ಮಟ್ಟದ ವಿಚಾರ ಸಂಕಿರಣವು ರೋಟರಿ ಬಾಲಭವನ ಕಾರ್ಕಳ ಇಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರೋಟರಿ ಜಿಲ್ಲಾ ಮಾಜಿ ಗವರ್ನರ್ ರಾಜಾರಾಮ್ ಭಟ್ ರವರು ರೋಟರಿ ಫೌಂಡೇಶನ್ ಬಗ್ಗೆ ಉಪಯುಕ್ತ ಮಾಹಿತಿಯನ್ನು ಸವಿವರವಾಗಿ ನೀಡಿದರು. ವಲಯ ಕಾರ್ಯದರ್ಶಿ ಆಲ್ವಿನ್ ನೇರಿ ಪಿಂಟೋ ವರದಿ ಮಂಡಿಸಿದರು. ಸಹಾಯಕ ಗವರ್ನರ್ ವಿಘ್ನೇಶ್ ಶೆಣೈರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಲಯ ಸಂಪನ್ಮೂಲ ವ್ಯಕ್ತಿ ಅನಿಲ್ ಡೇಸಾ, ವಲಯ ಸೇನಾನಿಗಳಾದ ಜಾನ್ ಡಿಸಿಲ್ವ, ಸಂದೀಪ್ ಬಂಗೇರ, ಪ್ರಶಾಂತ್ ಬೆಳಿರಾಯ, ಟಿ.ಆರ್.ಎಫ್ ಸಂಯೋಜಕ ಇಕ್ಬಾಲ್ ಅಹಮದ್, ಪೋಲಿಯೋ ಪ್ಲಸ್ ಸಂಯೋಜಕ ಶೇಖರ್ ಹೆಚ್, ಕಾರ್ಕಳ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಗೀತಾ ಕಾಮತ್ ಪ್ರಾರ್ಥಿಸಿದರು. ಸಹಾಯಕ ಗವರ್ನರ್ ವಿಘ್ನೇಶ್ ಶೆಣೈ ನಿರೂಪಿಸಿದರು. ಕಾರ್ಯದರ್ಶಿ ಚೇತನ್ ನಾಯಕ್ ವಂದಿಸಿದರು.















