Author: admin

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೋತ್ತಾನ ಪದವಿ ಪೂರ್ವಕಾಲೇಜು ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿಯ ಅಜ್ಲೀನ್ ಅನ್ನ ಅರಹ್ನ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಕ್ಷಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

Read More

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‍ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಭುವನ್ ಎಸ್ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಜಿಲ್ಲಾಮಟ್ಟದ ಜಂಪ್ ಹಗ್ಗ ಪಂದ್ಯಾವಳಿಯು ಬಾರಕೂರಿನ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ನಡೆಯಿತು. ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ತಮ ಫಲಿತಾಂಶಗಳೊಂದಿಗೆ ಜಯಗಳಿಸಿದ್ದಾರೆ. ಹುಡುಗಿಯರ ವಿಭಾಗದಲ್ಲಿ ವಿದ್ಯಾರ್ಥಿನಿಯರಾದ ಪ್ರಥಮ ಪಿ ಸಿ ಎಂ ಬಿ ವಿಭಾಗದ ವೇದ ಎಂ. ಪಚ್ಚೆನ್ನವರ್ 30 ಸೆಕೆಂಡುಗಳ ವೇಗದ ಜಂಪ್ ರೋಪಿಂಗ್ ಸ್ಪರ್ಧೆಯಲ್ಲಿ ಕಂಚು, 30 ಸೆಕೆಂಡುಗಳ ಡಬಲ್ ಅಂಡರ್ ನಲ್ಲಿ ಪ್ರಥಮ ಪಿ ಸಿ ಎಂ ಬಿ ವಿಭಾಗದ ಶ್ರೇಷ್ಠ ಎಸ್. ಗೋಲ್ಡ್ ಮೆಡಲ್, ಉಚಿತ ಶೈಲಿಯಲ್ಲಿ ಪ್ರಥಮ ಪಿ ಸಿ ಎಂ ಬಿ ವಿಭಾಗದ ಅನುಷ್ಕ ಮಹಾಂತೇಶ ಮುರ್ಗೋಡ್ ಚಿನ್ನದ ಪದಕ, 3 ನಿಮಿಷಗಳ ಸಹಿಷ್ಣುತೆಯಲ್ಲಿ ಪ್ರಥಮ ಪಿ ಸಿ ಎಮ್ ಸಿ ವಿಭಾಗದ ಗುಂಡಲ ಶ್ರೀಗವಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.ಹುಡುಗರ ವಿಭಾಗದಲ್ಲಿ 30 ಸೆಕೆಂಡುಗಳ ವೇಗದ ಜಂಪ್ ರೋಪಿಂಗ್ ನಲ್ಲಿ ದ್ವಿತೀಯ ಪಿಸಿಎಂಬಿ ವಿಭಾಗದ ಅಭಿಷೇಕ್ ಚಿನ್ನದ ಪದಕ, 3 ನಿಮಿಷಗಳ ಸಹಿಷ್ಣುತೆ ವಿಭಾಗದಲ್ಲಿ ದ್ವಿತೀಯ ಪಿ ಸಿ ಎಂ…

Read More

ದಿನಾಂಕ 19/09/2025ರಂದು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು,ವಿದ್ಯಾ ನಗರದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಾರ್ಥ ಜೆ ಗೌಡ 100ಮೀ ಬ್ಯಾಕ್ ಸ್ಟ್ರೋಕ್‍ವಿಭಾಗದಲ್ಲಿ ಪ್ರಥಮ ಹಾಗೂ 50ಮೀ. ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ದ್ವೀತಿಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ಪಾವನಿ ಬಿ ನಾಯಕ್ 100ಮೀ ಫ್ರೀಸ್ಟೈಲ್ ನಲ್ಲಿ ದ್ವೀತಿಯ ಸ್ಥಾನ ಗಳಿಸಿರುತ್ತಾರೆ. ವಿಜೇತರನ್ನು ಅಜೆಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು, ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿರುತ್ತಾರೆ.

Read More

‘ಅಂಕಿತ್ ವಿಸ್ತಾ’ ಸುಮಾರು ಇಪ್ಪತ್ತು ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಎದ್ದು ನಿಂತಿರುವ ರೆಸಾರ್ಟ್. ಬೆಂಗಳೂರಿನ ನೆಲಮಂಗಳದಲ್ಲಿ ಪ್ರವಾಸಿಗರ ಆಕರ್ಷಣೆ ಕೇಂದ್ರವೆಂದು ದೇಶಾದ್ಯಂತ ಹೆಸರು ಗಳಿಸಿದ ಈ ಸಂಕೀರ್ಣದಲ್ಲಿ ವಿವಾಹ ಸಮಾರಂಭ ಮೊದಲಾದ ಶುಭಕಾರ್ಯಗಳಿಗೆ ತೆರೆದುಕೊಂಡಿರುವ ಸುಸಜ್ಜಿತ ಸಭಾಗೃಹ ಜೊತೆಗೆ ದಣಿದ ಜೀವಗಳಿಗೆ ವಿಶ್ರಾಂತಿ ನೀಡುವ ಸಕಲ ಸೌಲಭ್ಯಗಳನ್ನು ಹೊಂದಿದ ವಸತಿ ಗೃಹ ಸಮುಚ್ಚಯ ಪ್ರವಾಸಿಗರನ್ನು ಈ ಕಡೆಗೆ ಕೈ ಬೀಸಿ ಕರೆಯುತ್ತಿದೆ. ಈಜು ಕೊಳ, ವಿಶಾಲ ಆಟದ ಮೈದಾನ, ದೇಹ ಮನಸ್ಸುಗಳಿಗೆ ಹಿತವಾದ ವ್ಯಾಯಾಮ ನೀಡಬಹುದಾದ ಪ್ರಶಸ್ತ ಸ್ಥಳ ಸಲಕರಣೆಗಳು, ಭೋಜನ ಶಾಲೆ, ಅತಿಥಿ ಸತ್ಕಾರ ವಿಭಾಗ ಎಲ್ಲವೂ ಇಲ್ಲಿವೆ. ಸಮಾಲೋಚನಾ ಕೊಠಡಿಗಳು, ಹಸಿರು ತಂಪು ವಾತಾವರಣ, ಬಗೆ ಬಗೆಯ ವೃಕ್ಷ ಜಾತಿಗಳು ಗಿಡ ಬಳ್ಳಿಗಳು ಎಲ್ಲವೂ ಸುಂದರ ಹೃದ್ಯ ಮನೋಹರ. ಕರಾವಳಿ ಕರ್ನಾಟಕದ ಪರಿಸರದೊಂದಿಗೆ ನಮ್ಮನ್ನು ಜೋಡಿಸಿ ತಾದಾತ್ಮ್ಯತೆಗೊಳಿಸುವ ನಿಸರ್ಗ ಸೌಂದರ್ಯ ಇದೆ.ತುಳುನಾಡಿನ ಹೆಮ್ಮೆಯ ಉದ್ಯಮಿ ವಸಂತ ಕುಮಾರ್ ಶೆಟ್ಟಿ ಅವರ ಕನಸಿನ ಕೂಸು ಇಲ್ಲಿ ಅದ್ಭುತ ರೀತಿಯಲ್ಲಿ ಸಾಕಾರಗೊಂಡಿದೆ.…

Read More

ಗ್ಲೋಬಲ್ ಅಲಿಯನ್ಸ್ ಆಫ್ ತುಳು ಅಸೋಸಿಯೇಷನ್ (GATA) ವಿಶ್ವದ ಎಲ್ಲಾ ದೇಶಗಳ ತುಳು ನಾಯಕರುಗಳನ್ನು ಒಳಗೊಂಡ ಸಂಸ್ಥೆ. ತನ್ನ ಮೊದಲನೆಯ ತುಳು ಲಿಪಿ ಕಲಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ಈ ತಿಂಗಳ ಸೆಪ್ಟೆಂಬರ್ 21 ರಂದು Zoom ವೇದಿಕೆಯಲ್ಲಿ ಭಾರತದ ಸಮಯ ಸಂಜೆ 7 ಗಂಟೆಗೆ ಆಯೋಜಿಸಿದೆ. ಈ ಸಂದರ್ಭದಲ್ಲಿ ಒಡಿಯೂರು ಶ್ರೀಗಳು ಆಶೀರ್ವಚನ ಕೊಡಲಿದ್ದು, ಹಿರಿಯರಾದ ಡಿ.ಕೆ. ಶೆಟ್ಟಿ ಹಾಗೂ ಸರ್ವೋತ್ತಮ ಶೆಟ್ಟಿ (ಅಬುಧಾಬಿ) ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಫ್ಲೋರಿಡಾ (ಯುಎಸ್ಎ) ದ ಶ್ರೀಮತಿ ಶ್ರೀವಲ್ಲಿ ರೈ ಮಾರ್ಟೆಲ್ ಅವರು ತುಳು ಲಿಪಿ ಕಲಿಸುತ್ತಿದ್ದು, ಅವರಿಗೆ ಸಹಾಯಕರಾಗಿ ಪ್ರಭಾಕರ್ ಭಟ್ (ಯುಎಸ್ಎ), ಸುರೇಶ್ ಪೂಂಜ ಆಸ್ಟ್ರೇಲಿಯಾ, ಶುಭಶ್ರಿ ಕೆ.ಎಂ(ಇಂಡಿಯಾ), ಸರಿತಾ ಅರುಣ್ ಶೆಟ್ಟಿ (ಯುಕೆ), ಶ್ರುತಾ ಶೆಟ್ಟಿ (ಯುಕೆ), ಚಂದ್ರಹಾಸ ಶೆಟ್ಟಿ (ಮಸ್ಕಟ್) ಸಹಕರಿಸಲಿದ್ದಾರೆ. ತಂಡಕ್ಕೆ ಟೀಮ್ ಐಲೇಸಾ ತಾಂತ್ರಿಕ ಸಹಕಾರ ನೀಡುತ್ತಿದೆ. ತುಳು ಲಿಪಿ ಕಲಿಯಲು ಇಚ್ಛಿಸುವವರು ಕೆಳಗಿನ Google Form ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.Registration Form https://forms.gle/y3VRfqvRDUT6UBQ68 ಫಾರ್ಮ್ ತುಂಬಲು…

Read More

ಎಪಿಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪೆರ್ಡೂರಿನಲ್ಲಿ 33 ವರ್ಷಗಳ ಕಾಲ ಶಿಕ್ಷಕರಾಗಿ ವಯೋ ನಿವೃತ್ತಿ ಹೊಂದಿದ ಉದಯಕುಮಾರ್ ಹೆಗ್ಡೆ ಕುಕ್ಕೆಹಳ್ಳಿ ಇವರನ್ನು ಅವರ ಸ್ವಗೃಹ ಕುಕ್ಕೆಹಳ್ಳಿಯಲ್ಲಿ ಕುಂದಾಪುರ ಫ್ರೆಂಡ್ಸ್ ವತಿಯಿಂದ ಸನ್ಮಾನಿಸಲಾಯಿತು. ಕೆಂಜೂರು ವೀರೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ನವೀನ್ ಚಂದ್ರ ಶೆಟ್ಟಿ ಪ್ರಸ್ತಾವಿಸಿದರು. ನಿವೃತ್ತ ಶಿಕ್ಷಕ ಸಂತೋಷ್ ಕುಮಾರ್ ಹೆಗ್ಡೆ ಮೊಳಹಳ್ಳಿ ಅವರು ನಿವೃತ್ತರಿಗೆ ಶಾಲು ಹೊದಿಸಿ ಸನ್ಮಾನಿಸಿದರು.ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಸಮೂಹ ಸಂಪನ್ಮೂಲ ವ್ಯಕ್ತಿ ವಂಡ್ಸೆ ನಾಗರಾಜ ಶೆಟ್ಟಿ, ಚೋನಾಳಿ ಶಾಲೆಯ ಮುಖ್ಯ ಉಪಾಧ್ಯಾಯ ಪ್ರದೀಪ್ ಕುಮಾರ್ ಭಂಡಾರಿ, ದೈಹಿಕ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ ಕೆಂಜೂರು, ಪಿಎಂ ಶ್ರೀ ಕುವೆಂಪು ಶಾಲೆ ತೆಕ್ಕಟ್ಟೆಯ ಅಧ್ಯಾಪಕ ಸದಾನಂದ ಶೆಟ್ಟಿ ವಕ್ವಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹನುಮಂತನಗರದ ದೈಹಿಕ ಶಿಕ್ಷಣ ಶಿಕ್ಷಕಿ ವಿನಯ ಹೆಗ್ಡೆ ಉಪಸ್ಥಿತರಿದ್ದರು.

Read More

ಯಕ್ಷ ಮಿತ್ರರು ದುಬೈ ಇವರ 22 ನೇ ವರ್ಷದ ದುಬೈ “ಯಕ್ಷ ಸಂಭ್ರಮ – 2025” ಕಾರ್ಯಕ್ರಮದಲ್ಲಿ ತಂಡದ ಹಿರಿಯ ಸದಸ್ಯ ಜಯಂತ್ ಶೆಟ್ಟಿ ದುಬೈಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸೆಪ್ಟೆಂಬರ್ 14 ರಂದು ನಗರದ ಎಮಿರೇಟ್ಸ್ ಥೀಯೇಟರ್ ನಲ್ಲಿ ಯಕ್ಷ ಸಂಭ್ರಮದ ಸಭಾ ವೇದಿಕೆಯಲ್ಲಿ ದುಬೈನಲ್ಲಿ ಕಳೆದ ಮೂವತ್ತೇಳು ವರ್ಷಗಳಿಂದ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಉತ್ತಮ ಸಂಘಟಕರ ಎಂಬ ಖ್ಯಾತಿ ಪಡೆದಿರುವ ಜಯಂತ್ ಶೆಟ್ಟಿಯವರನ್ನು ಶಾಲು ಹೊದಿಸಿ ಫಲಪುಷ್ಪ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಉದ್ಯಮಿಗಳಾದ ದಿವಾಕರ ಶೆಟ್ಟಿ, ಪುತ್ತಿಗೆ ವಾಸುದೇವ ಭಟ್, ಸತೀಶ್ ಶೆಟ್ಟಿ, ಪದ್ಮರಾಜ್ ಎಕ್ಕಾರ್, ದಯಾ ಕಿರೊಡಿಯನ್, ರವಿ ಕೋಟ್ಯಾನ್ ಉಪಸ್ಥಿತರಿದ್ದರು. ನಂತರ ತಂಡದ ಕಲಾವಿದರು ಹಾಗೂ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಶಬರಿಮಲೆ ಸ್ವಾಮಿ ಅಯ್ಯಪ್ಪ” ಯಕ್ಷಗಾನ ಪ್ರದರ್ಶನಗೊಂಡಿತು. ಮುಂಬಯಿ ಮಹಾನಗರದಲ್ಲಿ ಐತಪ್ಪ ಶೆಟ್ಟಿ ಮತ್ತು ಭವಾನಿ ಶೆಟ್ಟಿಯವರ ಮಗನಾಗಿ ಜನಿಸಿದ ಜಯಂತ್ ಶೆಟ್ಟಿಯವರು ಅರ್ಥಶಾಸ್ತ್ರ ವಿಭಾಗದಲ್ಲಿ ಪದವಿಯನ್ನು ಮುಂಬಯಿಯಲ್ಲಿ ಪಡೆದು ಉದರ ನಿಮಿತ್ತ…

Read More

ಮೂಡುಬಿದಿರೆ: ವೈಜ್ಞಾನಿಕ ಅಧ್ಯಯನಗಳ ಮೂಲಕ ಹೋಮಿಯೋಪಥಿಗೆ ಇನ್ನೂ ಹೆಚ್ಚಿನ ಮಾನ್ಯತೆ ಸಿಗಬೇಕು ಎಂದು ದೆಹಲಿಯ ಕೇಂದ್ರೀಯ ಹೋಮಿಯೋಪತಿ ಸಂಶೋಧನಾ ಪರಿಷತ್‌ನ ವೈಜ್ಞಾನಿಕ ಸಲಹಾ ಮಂಡಳಿ ಅಧ್ಯಕ್ಷ ಡಾ. ಎ. ಎಸ್. ಕುಮಾರ್ ಮಿತ್ರಚಂದ್ರ ಧಾವಲೆ ಹೇಳಿದರು. ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ವಿದ್ಯಾಗಿರಿಯ  ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆಯುತ್ತಿರುವ 2 ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೊಮಿಯೋಪತಿ ಪಠ್ಯಕ್ರಮದಲ್ಲಿ ಸಂಶೋಧನಾ ವಿಧಾನಶಾಸ್ತ್ರ  ವಿಷಯವನ್ನು ಪರಿಚಯಿಸಿರುವುದು  ಉತ್ತಮ ನಿರ್ಧಾರ. ಇದರಿಂದ ಹೋಮಿಯೋಪಥಿ ವಿದ್ಯಾರ್ಥಿಗಳಿಗೆ ಹೋಮಿಯೋಪಥಿಯನ್ನು ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಲು, ಸಂಶೋಧನೆ ನಡೆಸಲು ಮತ್ತು ಲೇಖನಗಳನ್ನು ಪ್ರಕಟಿಸಲು ಸಹಾಯವಾಗುತ್ತದೆ.ಹೋಮಿಯೋಪಥಿಯಲ್ಲಿ ವೈಜ್ಞಾನಿಕವಾಗಿ ಸಾಬೀತಾದ ಅಧ್ಯಯನಗಳು ಮತ್ತು ಅವುಗಳ ಪ್ರಕಟಣೆಗಳಿಲ್ಲದೆ, ಅದಕ್ಕೆ ತಕ್ಕ ಮಾನ್ಯತೆ ಸಿಗುವುದಿಲ್ಲ. ಹೋಮಿಯೋಪಥಿಗೆ 250 ವರ್ಷಗಳ ಇತಿಹಾಸವಿದ್ದರೂ, ಅದನ್ನು ವಿಜ್ಞಾನವೆಂದು ಸ್ವೀಕರಿಸುವಲ್ಲಿ ಇನ್ನೂ ಅಡೆತಡೆಗಳಿವೆ. ವೈಜ್ಞಾನಿಕ ಅಧ್ಯಯನಗಳ ಚರ್ಚೆ ಇನ್ನಷ್ಟು ವಿಚಾರ ಸಂಕಿರಣಗಳಲ್ಲಿ ನಡೆಯಬೇಕು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ…

Read More

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತೋಷಿತ್ ಎಸ್ ಬಾಬು 50ಮೀ ಮತ್ತು 100ಮೀ ಫ್ರೀಸ್ಟೈಲ್‍ನಲ್ಲಿ ಪ್ರಥಮ ಹಾಗೂ 50ಮೀ ಬ್ರೆಸ್ಟ್‍ಸ್ಟ್ರೋಕ್‍ಲ್ಲಿ ದ್ವಿತೀಯ, ಸುಯಾಶ್ ಎನ್ ಹೆಗ್ಡೆ 100ಮೀ ಬಟರ್‍ಫ್ಲೈಲ್ಲಿನಲ್ಲಿ ಪ್ರಥಮ ಹಾಗೂ 100ಮೀ ಫ್ರೀಸ್ಟೈಲ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಶಶಾಂಕ್ ವಿ 50ಮೀ ಬಟರ್‍ಫ್ಲೈನಲ್ಲಿ ಪ್ರಥಮ ಮತ್ತು 400ಮೀ ಫ್ರೀಸ್ತೈಲ್‍ನಲ್ಲಿ ತೃತೀಯ ಸ್ಥಾನವನ್ನು, ಯು.ಭಕ್ತಿ 50ಮೀ. ಮತ್ತು 100ಮೀ ಬ್ರೆಸ್ಟ್‍ಸ್ಟ್ರೋಕ್‍ನಲ್ಲಿ ಪ್ರಥಮ ಸ್ಥಾನವನ್ನು, ಶ್ರೇಯಾ ಎಸ್.ಆರ್.ಯು 50ಮೀ. ಮತ್ತು 100ಮೀ ಫ್ರೀಸ್ಟೈಲ್‍ನಲ್ಲಿ ಪ್ರಥಮ ಸ್ಥಾನವನ್ನು ಹಾಗೂ 4×100ಮೀ ರಿಲೆಯಲ್ಲಿ ಕಾರ್ಕಳ ಜ್ಞಾನಸುಧಾ ತಂಡವು ಪ್ರಥಮ ಸ್ಥಾನವನ್ನು ಪಡೆದು ಈ ಮೂಲಕ ದಿಗಂತ್ ಎಚ್ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು…

Read More