Author: admin

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತೋಷಿತ್ ಎಸ್ ಬಾಬು 50ಮೀ ಮತ್ತು 100ಮೀ ಫ್ರೀಸ್ಟೈಲ್‍ನಲ್ಲಿ ಪ್ರಥಮ ಹಾಗೂ 50ಮೀ ಬ್ರೆಸ್ಟ್‍ಸ್ಟ್ರೋಕ್‍ಲ್ಲಿ ದ್ವಿತೀಯ, ಸುಯಾಶ್ ಎನ್ ಹೆಗ್ಡೆ 100ಮೀ ಬಟರ್‍ಫ್ಲೈಲ್ಲಿನಲ್ಲಿ ಪ್ರಥಮ ಹಾಗೂ 100ಮೀ ಫ್ರೀಸ್ಟೈಲ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಶಶಾಂಕ್ ವಿ 50ಮೀ ಬಟರ್‍ಫ್ಲೈನಲ್ಲಿ ಪ್ರಥಮ ಮತ್ತು 400ಮೀ ಫ್ರೀಸ್ತೈಲ್‍ನಲ್ಲಿ ತೃತೀಯ ಸ್ಥಾನವನ್ನು, ಯು.ಭಕ್ತಿ 50ಮೀ. ಮತ್ತು 100ಮೀ ಬ್ರೆಸ್ಟ್‍ಸ್ಟ್ರೋಕ್‍ನಲ್ಲಿ ಪ್ರಥಮ ಸ್ಥಾನವನ್ನು, ಶ್ರೇಯಾ ಎಸ್.ಆರ್.ಯು 50ಮೀ. ಮತ್ತು 100ಮೀ ಫ್ರೀಸ್ಟೈಲ್‍ನಲ್ಲಿ ಪ್ರಥಮ ಸ್ಥಾನವನ್ನು ಹಾಗೂ 4×100ಮೀ ರಿಲೆಯಲ್ಲಿ ಕಾರ್ಕಳ ಜ್ಞಾನಸುಧಾ ತಂಡವು ಪ್ರಥಮ ಸ್ಥಾನವನ್ನು ಪಡೆದು ಈ ಮೂಲಕ ದಿಗಂತ್ ಎಚ್ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು…

Read More

ತನ್ನ ಪ್ರಭಲ ಇಚ್ಚಾಶಕ್ತಿ ಯಿಂದ ಏನನ್ನಾದರೂ ಸಾಧಿಸಬಹುದೆಂಬ ಮಾತಿಗೆ ಉದಾಹರಣೆಯಾದವರು ಬೇಕರಿ ಕ್ಷೇತ್ರದಲ್ಲಿ ದಾಖಲೆ ಯಶಸ್ಸು ಸಾಧಿಸಿದ ಅಪರೂಪದ ವ್ಯಕ್ತಿ ಶಮಿತ್ ಶೆಟ್ಟಿ ಕೆಮ್ತೂರು. ಬಾಲ್ಯದಲ್ಲಿಯೇ ತನ್ನ ತಂದೆಯನ್ನು ಕಳೆದುಕೊಂಡ ಶಮಿತ್ ಅವರು ಪ್ರತಿಕೂಲ ಪರಿಸ್ಥಿತಿಗಳನ್ನು ತನ್ನ ಬಲವನ್ನಾಗಿ ಪರಿವರ್ತಿಸಿಕೊಂಡು ತನ್ನ ಅದೃಷ್ಟವನ್ನು ತಾನೇ ಬರೆದು ಬಡತನದಲ್ಲಿ ಬಾಲ್ಯಕಳೆದರೂ ಇಂದು ಓರ್ವ ಯಶಸ್ವಿ ಉದ್ಯಮಿಯಾಗಿ ಗುರುತಿಸಿ ಕೊಂಡಿದ್ದಾರೆ. ತನ್ನ ಬೆನ್ನಲ್ಲಿ ಹುಟ್ಟಿಕೊಂಡ ಮೂವರು ಸಹೋದರಿಯರ ಭವಿಷ್ಯ ರೂಪಿಸಬೇಕಾದ ಹೊಣೆ ಬಾಲಕ ಶಮಿತ್ ಅವರ ಹೆಗಲೇರಿತ್ತು. ಆದರೆ ಎದೆಗುಂದದೆ ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುತ್ತಲೇ ಬೆಂಕಿಯಲ್ಲಿ ಅರಳಿದ ಹೂವಿನಂತೆ ತನ್ನ ವ್ಯಕ್ತಿತ್ವವನ್ನು ತಾನೇ ರೂಪಿಸಿಕೊಂಡು ಮೂವರು ಸಹೋದರಿಯರ ವಿವಾಹವನ್ನೂ ಪೂರೈಸಿ ಧನ್ಯತಾ ಭಾವವನ್ನು ಹೊಂದಿದ ಅಪ್ರತಿಮ ಸಾಧಕರಿವರು.ಮೂಡುಬೆಳ್ಳೆ ಸಮೀಪದ ಎಡ್ಮೇರು ಮೂಲದ ಶಮಿತ್ ಶೆಟ್ಟಿ ಅವರು ಬಿ ಕಾಂ ಪದವಿಧರು. ಎಡ್ಮೇರು ಅಪ್ಪು ಶೆಟ್ಟಿ ಹಾಗೂ ಕೆಮ್ತೂರು ದೇವಕಿ ಶೆಟ್ಟಿ ದಂಪತಿಗೆ ಪುತ್ರರಾಗಿ ಜನಿಸಿದ ಶಮಿತ್ ಶೆಟ್ಟಿ ಅವರು ಮಂಗಳೂರಿನ ಹೃದಯಭಾಗದಲ್ಲಿ ಬೇಕರಿ…

Read More

ಮೋಟಾರು ರ‍್ಯಾಲಿಯಲ್ಲಿ ಕಳೆದ ಎರಡೂವರೆ ದಶಕಗಳಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅಶ್ವಿನ್ ನಾಯ್ಕ್ ಅತ್ಯುನ್ನತ ಮಟ್ಟದ ಪ್ರದರ್ಶನ ನೀಡುತ್ತಾ ದೇಶ ಮತ್ತು ವಿದೇಶಗಳ 250 ಕ್ಕೂ ಹೆಚ್ಚು ರ‍್ಯಾಲಿಗಳಲ್ಲಿ ಭಾಗವಹಿಸಿದ ಎಲ್ಲಾ ರ‍್ಯಾಲಿಗಳಲ್ಲೂ ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡಿರುವ ದಾಖಲೆಯನ್ನು ಹೊಂದಿದ್ದಾರೆ. 150ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರ‍್ಯಾಲಿಗಳಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿ ಭಾರತ ಮತ್ತು ಬ್ರಿಟಿಷ್ ಹಾಗೂ ಯುರೋಪಿಯನ್ ರ‍್ಯಾಲಿಯ ಚಾಂಪಿಯನ್ ಶಿಪ್ ರೌಂಡ್ ನ ವಿನ್ನರ್ ಪಟ್ಟಕ್ಕೇರಿದ ಭಾರತದ ಪ್ರಥಮ ಹಾಗೂ ಏಕೈಕ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಾಥಮಿಕ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಮಂಗಳೂರಿನ ಮಿಲಾಗ್ರಿಸ್ ಹೈಸ್ಕೂಲ್ ನಲ್ಲಿ ಪಡೆಯುತ್ತಿರುವಾಗಲೇ ಕ್ರೀಡೆಯಲ್ಲಿ (ಟ್ರ್ಯಾಕ್ & ಫೀಲ್ಡ್ ) ವಾಲಿಬಾಲ್, ಜಾವಲಿನ್ ತ್ರೋ ಮತ್ತು ಹೈ ಜಂಪ್ ಗಳಲ್ಲಿ ಜಿಲ್ಲಾ ಮತ್ತು ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು. 6 ಅಡಿ 2 ಇಂಚು ಎತ್ತರದ ದೃಢಕಾಯದ ಅಶ್ವಿನ್ ನಾಯ್ಕ್ ಅವರು 1995 – 1999 (ಸೈಂಟ್ ಅಲೋಶಿಯಸ್ ಪಿ.ಯು ಕಾಲೇಜಿನ ದಿನಗಳಲ್ಲಿ…

Read More

ಬಂಟರು ಮತ್ತು ನಾಡವರು ಅನಾದಿ ಕಾಲದಿಂದಲೂ ಒಂದೇ ಆಗಿದ್ದಾರೆ. ಬ್ರಿಟಿಷರ ಕಾಲದ ದಾಖಲೆಗಳಲ್ಲೂ ಇದನ್ನೇ ಹೇಳಲಾಗಿದೆ. ಆನಂತರ ಬಂಟರು ಮತ್ತು ನಾಡವರನ್ನು ವಿಂಗಡಣೆ ಮಾಡಲಾಗಿದೆ. ಬಂಟರು ಮತ್ತು ನಾಡವರನ್ನು ಒಂದೇ ಕೆಟಗರಿಯಲ್ಲಿ ಸೇರಿಸುವಂತೆ ಅನೇಕ ಸಲ ಸರಕಾರಗಳ ಗಮನಕ್ಕೆ ತಂದಿದ್ದೇವೆ. ನಾನೇ ಸುಮಾರು 20 ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದಿದ್ದೇನೆ. ಆದರೂ ಇಲ್ಲಿಯವರೆಗೆ ಬೇಡಿಕೆ ಈಡೇರಿಲ್ಲ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು. ಅವರು ನಗರದ ಬಂಟ್ಸ್ ಹಾಸ್ಟೆಲ್ ನ ಅಮೃತ ಮಹೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿದ ವರದಿಯಲ್ಲಿ ಬಂಟರ ಹಾಗೂ ನಾಡವರ ಜನಸಂಖ್ಯೆ 3,15,000 ಇದೆ ಎಂದು ನಮೂದಿಸಲಾಗಿದೆ ಎಂದು ಮಾಹಿತಿ…

Read More

ಮಂಗಳೂರು ಎಂದರೆ ಒಂದು ಕಾಲದಲ್ಲಿ ರೌಡಿಸಂ, ಹೋಟೆಲ್ ಉದ್ಯಮ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಪ್ರಸಿದ್ಧ. ಅದರಂತೆಯೆ ಮಂಗಳೂರನ್ನು ಅದೆಷ್ಟೋ ಜನ ಆಳೆದು ಹೋಗಿದ್ದಾರೆ. ಅಂತಹದರಲ್ಲಿ ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ ಕೂಡ ಒಬ್ಬರು. ಒಂದು ಕಾಲದಲ್ಲಿ ಮಂಗಳೂರಿನ ಹೆಸರಾಂತ ಹೊಟೇಲ್ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ (72) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಂಬೈ ಭೂಗತ ಲೋಕಕ್ಕೆ ಮಂಗಳೂರು ಸನಿಹ ಇತ್ತು. ಅದರಂತೆಯೇ 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ ಡಾನ್ ಗೆ ಕಾರು ಚಾಲಕನಾಗಿದ್ದರು. ಬಳಿಕ ಮಂಗಳೂರಿಗೆ ಬಂದು 1986ರಲ್ಲಿ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ನಿರ್ಮಾಣ ಮಾಡಿದ್ದರು. ಆ ಸಮಯದಲ್ಲಿ ಐಷಾರಾಮಿ ಹೋಟೆಲ್ ಅಂದರೆ ಮೋತಿಮಹಲ್ ಬಿಟ್ಟರೆ ಪೂಂಜಾ ಇಂಟರ್ ನ್ಯಾಷನಲ್ ಆಗಿತ್ತು. ಭೂಗತ ಜಗತ್ತಿನಲ್ಲಿ ಡಾನ್ ಆಗಿದ್ದ ಶರದ್ ಶೆಟ್ಟಿ ಇವರ ಖಾಸಾ ಭಾವನಾಗಿದ್ದು, ಅದೇ ನಂಟಿನಲ್ಲಿ ಮಂಗಳೂರಿನಲ್ಲಿ ಹೊಟೇಲ್ ವ್ಯವಹಾರ…

Read More

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್ನಲ್ಲಿ ಸ್ವಿಚ್‌ಗೇರ್ ಅಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್  ನ ಹೊಸ ಘಟಕವನ್ನು ಉದ್ಘಾಟಿಸಲಾಯಿತು. ಘಟಕ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು, “ಇಂತಹ ಅಂತರರಾಷ್ಟ್ರೀಯ ಕಂಪನಿಗಳು ಕರಾವಳಿ ಭಾಗದಲ್ಲಿ ಸ್ಥಾಪನೆಯಾಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳು ದೊರೆತು, ಅವರ ಪ್ರತಿಭೆಗೆ ಪೂರಕ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದರು. ಪ್ರಸ್ತುತ ಆಳ್ವಾಸ್ ಟೆಕ್ ಪಾರ್ಕ್ನಲ್ಲಿ 8 ಕಾರ್ಪೊರೇಟ್ ಕಂಪನಿಗಳು, 4 ಸ್ಟಾರ್ಟ್ಅಪ್‌ಗಳು ಮತ್ತು 2 ‘ಸೆಂಟರ್ ಆಫ್ ಎಕ್ಸಲೆನ್ಸ್’ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳು ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿವೆ. ಈಗಾಗಲೇ 75 ವಿದ್ಯಾರ್ಥಿಗಳು ತಮ್ಮ 12 ಹೊಸ ಸ್ಟಾರ್ಟ್ಅಪ್ ಆಲೋಚನೆಗಳನ್ನು ಕಾರ್ಯಗತಗೊಳಿಸಲು ಸಕ್ರಿಯ ತರಬೇತಿ ಪಡೆಯುತ್ತಿದ್ದಾರೆ. ಉದ್ಯಮಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಟೈ , ಸಿಐಐ  ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ ಎಂದರು.ಲಿಮಿಟೆಡ್  ನ ನಿರ್ದೇಶಕ ಹರ್ಷಿತ್ ಶೆಟ್ಟಿ ಮಾತನಾಡಿ, “ನಮ್ಮ ಕಂಪನಿ…

Read More

ಪ್ರತಿಷ್ಠಿತ ಬಾಂಬೆ ಬಂಟ್ಸ್ ಅಸೋಸಿಯೇಶನ್ 1982ರಲ್ಲಿ ಸಮಾನ ಮನಸ್ಕರಿಂದ, ಸ್ವಜಾತಿ ಬಾಂಧವರನ್ನು ಒಗ್ಗೂಡಿಸಿ, ಮೈತ್ರಿ ಒಗ್ಗಟ್ಟನ್ನು ಬೆಳೆಸಿ, ಸಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಹಾಗೂ ಧಾರ್ಮಿಕ ಬೆಳವಣಿಗೆಯ ಉದ್ದೇಶವನ್ನೇ ಮುಖ್ಯ ಧ್ಯೇಯವನ್ನಾಗಿ ಹುಟ್ಟು ಹಾಕಿದ ಸಂಸ್ಥೆ. ಇಂದಿಗೂ ಅದೇ ರೀತಿಯಲ್ಲಿ ವರ್ಷಂಪ್ರತಿ ಸಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಮತ್ತು ಧಾರ್ಮಿಕ ವಿಚಾರವಾಗಿ ಬೇರೆ ಬೇರೆ ಸಾಮಾಜಿಕ ಕೆಲಸ ಕಾರ್ಯಗಳನ್ನು, ಶೈಕ್ಷಣಿಕ ನೆರವು, ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುತ್ತಾ ಬಂದಿದೆ. ಅದಲ್ಲದೇ ಧಾರ್ಮಿಕ ಜಾಗ್ರತಿಯನ್ನು ಮೂಡಿಸುವ ಉದ್ದೇಶದಿಂದ ಭಜನೆ, ಕುಣಿತ ಭಜನೆ, ಲಲಿತ ಸಹಸ್ರನಾಮಾರ್ಚನೆ, ಗುರುಪೂರ್ಣಿಮೆ ಮುಂತಾದ ಧಾರ್ಮಿಕತೆಗೆ ಸಂಬಂಧ ಪಟ್ಟ ಕಾರ್ಯಕ್ರಮಗಳನ್ನು ಆಚರಿಸುತ್ತದೆ. ಆ ಧಾರ್ಮಿಕ ಬೆಳವಣಿಗೆಯ ನಿಟ್ಟಿನಿಂದ ಬಾಂಬೆ ಬಂಟ್ಸ್ ಅಸೋಸಿಯೇಶನ್ ಅದರ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜಯ ಸಿ ಶೆಟ್ಟಿ ಮತ್ತು ಶಶಿಧರ ಶೆಟ್ಟಿಯವರ ಮುತುವರ್ಜಿಯಿಂದ ಮತ್ತು ಅಧ್ಯಕ್ಷ ನ್ಯಾ. ಡಿ.ಕೆ ಶೆಟ್ಟಿ ಹಾಗೂ ಎಲ್ಲಾ ಪಧಾದಿಕಾರಿಗಳ ಬೆಂಬಲದೊಂದಿಗೆ ಈ ಬಾರಿ ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 24 ರವರೆಗೆ…

Read More

ಸಾರ್ವಜನಿಕರ ಬಹು ಬೇಡಿಕೆಯ ರಸ್ತೆಯಾದ ಕುಳಾಯಿ ಕಾನ ಬ್ರಿಡ್ಜ್ ರಸ್ತೆಗೆ ಸುಮಾರು 26 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂಧರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ವರುಣ್ ಚೌಟ, ಬಿಜೆಪಿ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ದಿನಕರ್ ಇಡ್ಯಾ, ಸುನಿಲ್ ಕುಳಾಯಿ, ಮಹಾ ಶಕ್ತಿಕೇಂದ್ರ ಸುರತ್ಕಲ್ 1 ಮತ್ತು 2ರ ಬಿಜೆಪಿಯ ನಿಕಟ ಪೂರ್ವ ಮನಪಾ ಸದಸ್ಯರು, ಬಿಜೆಪಿ ಮುಂಖಡರು, ವಾರ್ಡ್ ಅಧ್ಯಕ್ಷರು, ಕಾರ್ಯದರ್ಶಿ, ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪ್ರಮುಖ ಕಾರ್ಯಕರ್ತರು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Read More

ಮೀರಾ ಭಾಯಂದರ್ ಪರಿಸರದ ಜನಪ್ರಿಯ ಸಂಘಟಕ, ಸಮಾಜ ಸೇವಕ, ಬಂಟ್ಸ್ ಫೋರಂ ಮೀರಾ ಭಾಯಂದರ್ ಸಮಿತಿಯ ಸಕ್ರಿಯ ಸದಸ್ಯ, ಭಗವಾನ್ ನಿತ್ಯಾನಂದ ಸೇವಾ ಟ್ರಸ್ಟ್ ಇದರ ಪದಾಧಿಕಾರಿ, ಭಾಜಪ ದಕ್ಷಿಣ ಭಾರತೀಯ ಘಟಕದ ಸದಸ್ಯ, ದಹಿಸರ್ ವೈಶಾಲಿ ನಗರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಮಂಡಳಿ ಇದರ ಅಧ್ಯಕ್ಷ, ತನ್ನ ಸ್ನೇಹ ಪರ ವ್ಯಕ್ತಿತ್ವದಿಂದ ಜನಾನುರಾಗಿ ಆಗಿದ್ದ ಹೊಟೇಲ್ ಉದ್ಯಮಿ ಚಿರಂಜೀವಿ ಸುರೇಶ್ ಶೆಟ್ಟಿಯವರು ನಿಧನರಾಗಿದ್ದಾರೆ. ಸುರೇಶ್ ಶೆಟ್ಟಿಯವರ ನಿಧನಕ್ಕೆ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಗೌರವ ಸಂಪಾದಕರಾದ ಅರುಣ್ ಶೆಟ್ಟಿ ಎರ್ಮಾಳ್, ವ್ಯವಸ್ಥಾಪಕ ಸಂಪಾದಕ ಕೆ ಆರ್ ಶೆಟ್ಟಿ, ಉದ್ಯಮಿ ಪುರುಷೋತ್ತಮ ಶೆಟ್ಟಿ, ಹೋಟೆಲು ಉದ್ಯಮಿ ಗಣೇಶ್ ಶೆಟ್ಟಿ ತನಿಷ್ಕ, ಬಂಟ್ಸ್ ಫೋರಂ ಅಧ್ಯಕ್ಷ ಉದಯ ಶೆಟ್ಟಿ ಮಲಾರಬೀಡು ತೀವ್ರ ಸಂತಾಪ ಸೂಚಿಸಿದ್ದಾರೆ.

Read More

ಮುಂಬಯಿ: ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 20ರ ಶನಿವಾರ ಮಧ್ಯಾಹ್ನ 2ರಿಂದ  ಜೆ.ಪಿ ನಾಯಕ್ ಭವನ, ಮುಂಬೈ ವಿಶ್ವವಿದ್ಯಾಲಯ ಸಾಂತಾಕ್ರೂಜ್(ಪೂ) ಮುಂಬೈ ಇಲ್ಲಿ ಕನ್ನಡ ವಿಭಾಗದ ನಲ್ವತ್ತೇಳರ ಸಂಭ್ರಮ, ಕೃತಿ ಬಿಡುಗಡೆ, ಗೌರವಾರ್ಪಣೆ, ಪದವಿ ಪ್ರದಾನ ಕಾರ್ಯಕ್ರಮ  ನಡೆಯಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ಐಕಳ ಹರೀಶ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮುಂಬೈ ವಿಶ್ವವಿದ್ಯಾಲಯದಲ್ಲಿ ಕನ್ನಡದ ಕಂಪು (ಕನ್ನಡ ವಿಭಾಗದ ಕಿರು ಸಾಧನೆಯ ಅವಲೋಕನ)  ಕೃತಿ ಬಿಡುಗಡೆಯನ್ನು ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಬೈ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಜಿ.ಎನ್.ಉಪಾಧ್ಯ ಅವರು ವಹಿಸಲಿದ್ದಾರೆ. ಇದೇ  ಸಂದರ್ಭದಲ್ಲಿ ಮುಂಬೈ ಕನ್ನಡ ಸಂಸ್ಥೆಗಳ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ. ಶತಕೋತ್ತರ ಸಾಧನೆಯ ಸಂಸ್ಥೆಗಳಾದ ಶ್ರೀಮದ್ಭಾರತ ಮಂಡಳಿ,  ಮೊಗವೀರ ವ್ಯವಸ್ಥಾಪಕ ಮಂಡಳಿ,  ಬಿ. ಎಸ್  ಕೆ. ಬಿ ಅಸೋಸಿಯೇಷನ್,  ದೇವಾಡಿಗರ ಸಂಘ, ಮೈಸೂರು ಅಸೋಸಿಯೇಷನ್, ಬಂಟರ ಸಂಘ ಮೊದಲಾದ…

Read More