Author: admin

ಒಂದು ಕಾಲದಲ್ಲಿ ಅಯ್ಯೋ ಚಳಿಚಳಿ ಎಂಬ ಕಾಲಕ್ಕೆ ಬರುತ್ತಿತ್ತು ಈ ಧನುರ್ಮಾಸ. ಆದರೆ ಕಾಲ ಪ್ರಭಾವವೋ, ಪ್ರಕೃತಿಯ ಮೇಲಿನ ಮನುಷ್ಯನ ನಿರಂತರವಾದ ಆಕ್ರಮಣದ ಕಾರಣವೋ? ಎಂಬಂತೆ ಕೆಲ ವರ್ಷಗಳಿಂದ ಚಳಿಯೇ ಇಲ್ಲ. ಆದರೆ ಈ ಸಲ ಸ್ವಲ್ಪ ಚಳಿಯ ವಾತಾವರಣ ಇದೆ. ಈಗೀಗ ವರ್ಷದ ಮೂರು ಕಾಲಗಳೂ ಋತುಮಾನಕ್ಕನುಗುಣವಾಗಿ ಇಲ್ಲವೇ ಇಲ್ಲ. ಆದರೆ ಕ್ಯಾಲೆಂಡರ್ ಮತ್ತು ಪಂಚಾಂಗದ ಪ್ರಕಾರ ನಮ್ಮೆಲ್ಲಾ ಹಬ್ಬ ಹರಿದಿನ, ರೀತಿ ರಿವಾಜುಗಳು ಹಿಂದೆಂದಿಗಿಂತಲೂ ವಿಜೃಂಭಣೆಯಿಂದ ನಡೆಯುತ್ತಿದೆ. ಇದು ಸಂತೋಷವೂ ಆಗಿದೆ. ಜೊತೆಗೆ ನಮ್ಮ ಮುಂದಿನ ಪೀಳಿಗೆಗೆ ಜಾಗೃತಿ ಮೂಡಿಸುವ ಉದ್ದೇಶವೂ ಆಗಿದೆ. ಈ ಸಲ ಈವತ್ತಿನಿಂದ ಪ್ರಾರಂಭವಾಗಿದೆ ಧನುರ್ಮಾಸ. ಹೆಚ್ಚಿನ ಎಲ್ಲಾ ಊರಿನ ಬಹುತೇಕ ದೇವಾಲಯಗಳಲ್ಲೂ ಪ್ರಾತಃ ಕಾಲದ “ಧನುಪೂಜೆ” ವಿಶೇಷವಾಗಿ ನಡೆಯುತ್ತದೆ. ಈ ಕುರಿತು ಸಂಗ್ರಹಿತ ಮಾಹಿತಿಯಂತೆ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಮಾಸಗಳನ್ನು ಕುರಿತು ಹೇಳುವಾಗ ಧನುರ್ಮಾಸದ ಮಹಾತ್ಮೆಗೆ ವಿಶೇಷ ಒತ್ತು ನೀಡಿ “ಮಾಸಾನಾಂ ಮಾರ್ಗಶೀರ್ಷೋಸ್ಮಿ” ಎಂದು ಅಪ್ಪಣೆ ಕೊಡಿಸಿದ್ದಾರೆ. ಸೂರ್ಯ ಒಂದು ರಾಶಿಯಿಂದ ಇನ್ನೊಂದು…

Read More

ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯಮಟ್ಟದ ಜಂಪ್‍ರೋಪ್ ಸ್ಪರ್ಧೆಯ 30ಸೆಕೆಂಡ್ ಡಬಲ್ ಅಂಡರ್ ರಿಲೇ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್ ಗೌಡ ವಿ, ಪ್ರಥಮೇಶ್ ಡಿ.ಪಿ, ಎನ್.ನಿಖಿಲ್, ಶಾನ್ವಿ ಎಸ್ ಹಾಗೂ ಕಾಜೊಲ್.ಎಂ.ಪಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

Read More

ಬ್ರಹ್ಮಾವರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಡಿಸೆಂಬರ್ 16 ರಂದು ಡಾ. ಚಂದ್ರಶೇಖರ ಕಂಬಾರ ಅವರು ಬರೆದ ಕಥೆಗಳನ್ನಾಧರಿಸಿದ ಕೆ. ಜಿ. ಕೃಷ್ಣಮೂರ್ತಿ, ಸಜಿ ಆರ್. ತುಮರಿ ಅರುಣ ಎನ್, ಕಿನ್ನರಿ ಮೇಳದವರು ನಿರ್ದೇಶಿಸಿರುವ ‘ಮರವೇ ಮರ್ಮರ’ವೇ ಮಕ್ಕಳ ನಾಟಕದ ರಂಗಪ್ರದರ್ಶನ ಏರ್ಪಡಿಸಲಾಗಿತ್ತು. ಜಾನಪದ ಕಥೆಗಳನ್ನಾಧರಿಸಿದ ರಂಗ ಪ್ರಸ್ತುತಿಯಲ್ಲಿ ಕಾಡು ಮತ್ತು ನಾಡಿಗೆ ತಾಯಿ ಮಕ್ಕಳ ಸಂಬಂಧವಿದೆ. ಆದರೆ ಪ್ರಕೃತಿ ಕೊಟ್ಟ ವರಗಳನ್ನು ಮನುಷ್ಯ ತನ್ನ ದುರಾಸೆಯಿಂದಾಗಿ ಶಾಪವಾಗಿ ಪರಿವರ್ತಿಸಿಕೊಳ್ಳುತ್ತಿದ್ದಾನೆಂಬ ಅಂಶವನ್ನು ಪ್ರದರ್ಶನದ ಮೂಲಕ ಬೆಳಕಿಗೆ ತಂದರು. ಇದ್ದಿಲು ಮಹಾರಾಜ, ಬಿದಿರಿನ ಚೆಲುವೆ ಮತ್ತು ಆತ್ಮಹತ್ಯೆ ಎಂಬ ಮೂರು ಕಥೆಗಳ ಆಯ್ಕೆಯ ಮೂಲಕ ರಂಗ ಪ್ರಸ್ತುತಿ ಏರ್ಪಡಿಸಿದ್ದರು. ವಿದ್ಯಾರ್ಥಿಗಳು ಕಾಡು ಮತ್ತು ನಾಡಿಗಿರುವ ತಾಯಿಯ ಸಂಬಂಧ ಮತ್ತು ಮರದ ರಕ್ಷಣೆಯ ಕುರಿತು ಮನುಷ್ಯರಿಗಿರುವ ಜವಾಬ್ದಾರಿಗಳನ್ನು ಅರಿತುಕೊಂಡರು. ವಿದ್ಯಾರ್ಥಿಗಳಿಗೆ ಕಾಡು ಬೆಳೆಸಿ ನಾಡು ಉಳಿಸಿ ಎಂಬ ಸಂದೇಶವನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್‍ರವರು ರಂಗ ಪ್ರದರ್ಶನದ ಕುರಿತು ಮೆಚ್ಚುಗೆ…

Read More

ಹಲವಾರು ಅನಿವಾಸಿ ಕನ್ನಡಿಗರ ಸಂಘಟನೆಗಳು ಡಾ| ರೊನಾಲ್ಡ್ ಕೊಲಾಸೊ ಅವರ ನೇತೃತ್ವದಲ್ಲಿ ತಮ್ಮ ವಿವಿಧ ಬೇಡಿಕೆಗಳ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. 2023 ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಎರಡು ಪ್ರಮುಖ ಚುನಾವಣಾ ಭರವಸೆಗಳಾಗಿದ್ದ ಅನಿವಾಸಿ ಕನ್ನಡಿಗರ ವ್ಯವಹಾರಗಳಿಗೆ ಪ್ರತ್ಯೇಕ ಸಚಿವಾಲಯ ಮತ್ತು ಇಲಾಖೆಯ ರಚನೆ ಹಾಗೂ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅಥವಾ ರಾಜ್ಯಕ್ಕೆ ಶಾಶ್ವತವಾಗಿ ಸ್ಥಳಾಂತರಗೊಳ್ಳಲು ಬಯಸುವ ಅನಿವಾಸಿ ಕನ್ನಡಿಗರನ್ನು ಬೆಂಬಲಿಸಲು 1,000 ಕೋ. ರೂ. ಮೊತ್ತದ ನಿಧಿ ಸ್ಥಾಪನೆ ಬಗ್ಗೆ ಸರಕಾರ ಇನ್ನೂ ಕ್ರಮ ಕೈಗೊಂಡಿಲ್ಲ. ಸರಕಾರ ರಚನೆಯಾಗಿ 2.5 ವರ್ಷ ಕಳೆದಿದ್ದರೂ ಈ ಭರವನೆಗಳನ್ನು ಈಡೇರಿಸದೆ ಇರುವುದು ನಮಗೆಲ್ಲ ತುಂಬಾ ಬೇಸರ ಉಂಟು ಮಾಡಿದೆ. ಈ ಭರವಸೆಗಳು ಈಡೇರಿದ್ದರೆ ರಾಜ್ಯಕ್ಕೆ ಹಾಗೂ ಅನಿವಾಸಿ ಕನ್ನಡಿಗರಿಗೂ ತುಂಬಾ ಅನುಕೂಲ ಆಗುತ್ತಿತ್ತು. ಆದ್ದರಿಂದ ಈ ಎರಡು ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇವೆರಡು ಕಾರ್ಯರೂಪಕ್ಕೆ ಬಂದರೆ ಹೂಡಿಕೆ,…

Read More

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು, ರೋಟರಿ ಕ್ಲಬ್ ಕಾರ್ಕಳ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸಾ ಶಿಬಿರವು ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಕಾರ್ಕಳ ಇಲ್ಲಿ ನಡೆಯಿತು. ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಯು ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಕಣ್ಣು ದೇಹದ ಅಮೂಲ್ಯವಾದ ಅಂಗ. ಇದರ ಬಗ್ಗೆ ಗ್ರಾಮೀಣ ಜನರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ. ಇದರಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದರು. ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿ ಸಂದೀಪ್ ಕುಡ್ವ ಮಾತನಾಡುತ್ತಾ, ಈಗಿನ ಜೀವನ ಶೈಲಿ, ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇಂಥ ಕಾರ್ಯಕ್ರಮಗಳಿಗೆ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಅತಿ ಅಗತ್ಯ ಎಂದರು. ಗ್ರಾಮ ಪಂಚಾಯತ್…

Read More

ಗುರುಪುರ ದೋಣಿಂಜೆ ಗುತ್ತು ಗಡಿ ಪ್ರಧಾನರಾದ ಪ್ರಮೋದ್ ಕುಮಾರ್ ರೈಯವರ ಅಧ್ಯಕ್ಷತೆಯಲ್ಲಿ, ಯತಿವರ್ಯ ಹಾಗೂ ತಂತ್ರಿವರ್ಯರ ಅನುಗ್ರಹ ಮಾರ್ಗದರ್ಶನ ಮತ್ತು ಪವಿತ್ರ ಸಾನ್ನಿಧ್ಯದಲ್ಲಿ ಡಿಸೆಂಬರ್ 21ರಂದು ನಗರದ ಉರ್ವಾ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಲಿರುವ ‘ಧರ್ಮಾವಲೋಕನ ಸಭೆ’ಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಜರಗಿತು. ಈ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್‌, ಹಿಂದೂ ಯುವಸೇನೆ ಮತ್ತು ತುಳುನಾಡ ರಕ್ಷಣಾ ವೇದಿಕೆಯ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ನಂತರ ಮಾತನಾಡಿದ ಗಡಿ ಪ್ರಧಾನ ಪ್ರಮೋದ್ ಕುಮಾರ್ ರೈ ಅವರು, ‘ಹಿಂದೂ ಧರ್ಮದ ಸಂರಕ್ಷಣೆ, ಧರ್ಮದ ಮೂಲ ಸಿದ್ಧಾಂತಗಳ ಅರಿವು ಮತ್ತು ಯುವ ಪೀಳಿಗೆಯಲ್ಲಿ ಧಾರ್ಮಿಕ ಜಾಗೃತಿ ಮೂಡಿಸಲು ಸಮಾಜದ ಎಲ್ಲ ವರ್ಗದ ಜನರನ್ನು ಒಂದೇ ವೇದಿಕೆಗೆ ತರಲು ಈ ಧರ್ಮಾವಲೋಕನ ಸಭೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಧರ್ಮದ ಒಳಿತು ಕೆಡುಕುಗಳ ಅಧ್ಯಯನ ಮತ್ತು ಚಿಂತನೆಗೆ ಇದು ಮಹತ್ತ್ವದ ವೇದಿಕೆ ಆಗಲಿದೆ’ ಎಂದು ಹೇಳಿದರು.…

Read More

ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಂತಾವರ ಗ್ರಾಮದ ಬಾರಾಡಿ ಕ್ರಾಸ್ ಬಳಿ ಪೊಲೀಸ್ ಇಲಾಖೆಯ ಉಪಯೋಗಕ್ಕಾಗಿ ನಿರ್ಮಿಸಲಾದ ತನಿಖಾ ಠಾಣೆ ಚೆಕ್ ಪೋಸ್ಟ್)ಯನ್ನು ಕಾರ್ಕಳ ಉಪ ವಿಭಾಗದ ಸಹಾಯಕ ಪೋಲೀಸ್ ಅಧೀಕ್ಷಕರಾದ ಡಾ| ಹರ್ಷ ಪ್ರಿಯಂವದಾ ಉದ್ಘಾಟಿಸಿದರು. ದಾನಿಗಳು, ರೋಟರಿ ಕ್ಲಬ್, ಗ್ರಾಮ ಪಂಚಾಯತ್ ಹಾಗೂ ಊರವರ ಸಹಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು. ಸಂಪೂರ್ಣ ಮೂಲ ಸೌಲಭ್ಯದೊಂದಿಗೆ ಸುಸಜ್ಜಿತ ತನಿಖಾ ಠಾಣೆಯನ್ನು ನಿರ್ಮಿಸಿಕೊಟ್ಟ ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ವಿನೀಶ್, ನೆಲಹಾಸಿಗೆ ಟೈಲ್ಸ್ ಅಳವಡಿಸಿದ ರೋಟರಿ ಕ್ಲಬ್ಬಿನ ಪರವಾಗಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹಾಗೂ ಕಾಂತಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್ ರವರನ್ನು ಇಲಾಖಾ ವತಿಯಿಂದ ಸಹಾಯಕ ಪೊಲೀಸ್ ಅಧೀಕ್ಷಕರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ವ್ರತ್ತ ನಿರೀಕ್ಷಕ ಮಂಜಪ್ಪ ಡಿ.ಆರ್ ಗ್ರಾಮಾಂತರ ಠಾಣೆಯ ಉಪ ನಿರೀಕ್ಷಕರಾದ ಪ್ರಸನ್ನ ಎಸ್.ಎನ್, ನಗರ ಠಾಣೆಯ ಮುರಳೀಧರ್ ನಾಯಕ್, ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಸಮದ್ ಖಾನ್, ವಸಂತ್ ಎಂ, ಬಾಲಕೃಷ್ಣ…

Read More

ಮೊಗ್ಗುಂದು ಚಿಗುರಿತ್ತು ಕಾನನದೊಳು ಅರಳುತ್ತಾ ಅರಳುತ್ತಾ ತನ್ನೊಳಗೆ ಖುಷಿಪಟ್ಟಿತ್ತು || ತನ್ನ ಅಂದ ಚಂದಕ್ಕೆ ತನ್ನ ಮಾಧುರ್ಯಕ್ಕೆ ತಾನೊಂದು ದಿನ ದೇವರಮುಡಿ ಸೇರುವೆಂಬ ನಂಬಿಕೆ ಅದಕ್ಕಿತ್ತು || ಎಲ್ಲರಂತೆ ಅರಳುತ್ತಾ ಖುಷಿಪಟ್ಟಿತ್ತು ನಾನು ಕೂಡ ಅರಳಿದೆ ಇನ್ನೀಗ ದೇವರ ಮುಡಿ ಸೇರಲಿರುವೆನೆಂದು ನಲಿದಾಡಿತ್ತು ಸಂಭ್ರಮಿಸಿತ್ತು || ಮಾಲಿಯಿಂದು ಬಂದ ಹೂವ ಕೊಯ್ದ ಎಲ್ಲಾ ಹೂಗಳೊಡನೆ ಅದನ್ನು ಒಯ್ದ ಪೇಟೆಯೊಳಗಣ ಮಾರಾಟಕ್ಕಿಟ್ಟ || ಯಾರೋ ಬಂದರೂ ಬಿಡಿ ಹೂಗಳಲ್ಲಿ ಅದನ್ನೋಯಿದರು || ದೇವರ ಮುಡಿ ಸೇರುವೆನೆಂದು ನಂಬಿದ್ದ ಆ ಪುಟ್ಟ ಹೂವು ಮರಣದ ಮನೆ ಸೇರಿತು ಹೆಣದ ಕೊರಳೇರಿತು ಮಸಣದ ಕಡೆ ಹೊರಟಿತು ಬೆಂಕಿಯ ಅಟ್ಟಕೇರಿತು || ತಾನೂ ಹೆಣವಾಯಿತು ತನ್ನ ಕನಸಿನೊಂದಿಗೆ ಸುಟ್ಟು ಕರಕಲಾಯಿತು || ತಾನೊಂದು ನೆನೆದರೆ ದೈವ ಇನ್ನೇನೋ ಬರೆದಿತ್ತು ಕನಸು ಕನಸಾಗಿಯೇ ಉಳಿಯಿತು. ಲೇಖಕಿ : ಸಮೀಪ ಶೆಟ್ಟಿ

Read More

ಕ್ಯಾಂಪ್ಕೊ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಎಸ್.ಆರ್ ಸತೀಶ್ಚಂದ್ರರವರಿಗೆ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಅಭಿನಂದನಾ ಸಮಾರಂಭವನ್ನು ಬ್ಯಾಂಕಿನ ಸಭಾಂಗಣದಲ್ಲಿ ಗೌರವಪೂರ್ವಕವಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಎನ್. ಕಿಶೋರ್ ಕೊಳತ್ತಾಯ ಅವರು ಅಧ್ಯಕ್ಷತೆ ವಹಿಸಿ, ವಿಶೇಷ ಅಭಿನಂದನಾ ಭಾಷಣದ ಮೂಲಕ ಪುತ್ತೂರು ಟೌನ್ ಬ್ಯಾಂಕ್ ಮತ್ತು ಸತೀಶ್ಚಂದ್ರರವರ ನಡುವಿನ ಅವಿನಾಭಾವ ಬಾಂಧವ್ಯವನ್ನು ಸ್ಮರಿಸಿದರು. ಬ್ಯಾಂಕಿನ ಅಭಿವೃದ್ಧಿ ಹಾಗೂ ಪ್ರಗತಿಪರ ಚಟುವಟಿಕೆಗಳಲ್ಲಿ ಅವರು ನೀಡಿರುವ ಮಾರ್ಗದರ್ಶನವನ್ನು ವಿಶೇಷವಾಗಿ ಉಲ್ಲೇಖಿಸಿ, ಬ್ಯಾಂಕಿನ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಅರ್ಪಿಸಿದರು. ಮುಂದುವರೆದು ಮಾತನಾಡಿದ ಅವರು, ನೂತನ ಕ್ಯಾಲೆಂಡರ್ ವರ್ಷದಲ್ಲಿ ಬ್ಯಾಂಕ್ ಹಲವು ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರುವ ಉದ್ದೇಶವಿದ್ದು, ಬ್ಯಾಂಕಿನ ಡಿಜಿಟಲೀಕರಣಕ್ಕೆ ವಿಶೇಷ ಪ್ರಾಧಾನ್ಯತೆ ನೀಡಲಾಗುತ್ತಿದೆ ಎಂದರು. ಈ ವರ್ಷಾಂತ್ಯದೊಳಗೆ ಬ್ಯಾಂಕಿನ ಸಂಪೂರ್ಣ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸವನ್ನೂ ವ್ಯಕ್ತಪಡಿಸಿದರು. ಅಭಿನಂದನೆ ಸ್ವೀಕರಿಸಿದ ಎಸ್.ಆರ್. ಸತೀಶ್ಚಂದ್ರರು, ತಮ್ಮ ಬಾಲ್ಯದಿಂದಲೂ ಪುತ್ತೂರು ಟೌನ್ ಬ್ಯಾಂಕಿನೊಂದಿಗೆ ಹೊಂದಿರುವ ಭಾವನಾತ್ಮಕ ಹಾಗೂ ನಿಕಟವಾದ ಸಂಬಂಧವನ್ನು ನೆನೆದು ಸಂತಸ ವ್ಯಕ್ತಪಡಿಸಿದರು.…

Read More

ಆಳ್ವಾಸ್ ಸ್ವಾಯತ್ತ ಕಾಲೇಜಿನ ಮಾನವ ಹಕ್ಕುಗಳ ಕೋಶ ಹಾಗೂ ಸಮಾಜ ಕಾರ್ಯ ವಿಭಾಗ, ಮಾನವಿಕ ವಿಭಾಗ, ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗ, ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಘಟಕಗಳ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕ ಹಾಗೂ ಬರಹಗಾರ ಅರವಿಂದ ಚೊಕ್ಕಾಡಿ ಮಾತನಾಡಿ, ಮಾನವ ಹಕ್ಕುಗಳ ದಿನಾಚರಣೆ ಎಲ್ಲೆಡೆ ನಡೆಯುತ್ತಿದ್ದರೂ ಅದರ ಗಂಭೀರತೆಯನ್ನು ಮನಸ್ಸಿನಲ್ಲಿ ಇಟ್ಟು ಕಾರ್ಯಕ್ರಮ ಕೈಗೊಳ್ಳುವುದು ಕಡಿಮೆ. ಜಾತಿ, ಧರ್ಮ, ವರ್ಣ, ವರ್ಗ, ಲಿಂಗ ಭೇದಗಳು ಸಮಾಜದಲ್ಲಿ ಇನ್ನೂ ಮುಂದುವರಿದಿವೆ ಎಂದು ಸೂಚಿಸಿದ ಅವರು, ತಾರತಮ್ಯ ಇದೆ ಎಂದು ಹೇಳುವುದಕ್ಕಿಂತಲೂ ಅದು ಎಲ್ಲಿ, ಹೇಗೆ ಇದೆ ಎನ್ನುವುದನ್ನು ಪತ್ತೆ ಹಚ್ಚಿದಾಗ ಮಾತ್ರ ಮಾನವ ಹಕ್ಕುಗಳ ಚರ್ಚೆ ಫಲಪ್ರದವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಸುನ್ನತ್, ಹೆಣ್ಣು ಶಿಶು ಹತ್ಯೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳಂತಹ ಗಂಭೀರ ಸಾಮಾಜಿಕ ಸಮಸ್ಯೆಗಳನ್ನು ಉದಾಹರಿಸಿ ಮಾನವ ಹಕ್ಕುಗಳು ಜಾರಿಗೊಂಡ ಸನ್ನಿವೇಶವನ್ನು ತಿಳಿಸಿದರು. ಕಾನೂನಿನ ಮುಂದೆ ಸಮಾನತೆ ಎನ್ನುವುದೇ ಮಾನವ…

Read More