Author: admin
‘ಗ್ರಹ ಪಂಕ್ತಿಯಲ್ಲಿ ಅತ್ಯಂತ ಪ್ರಭಾವಶಾಲಿಯಾದ ಶನಿ ಗ್ರಹದ ಕಾರಣದಿಂದ ವಿವಿಧ ಬಗೆಯ ಜಾತಕ ದೋಷಗಳು ಸಂಭವಿಸುತ್ತವೆ. ಅದರ ನಿವಾರಣೆಗಾಗಿ ಉಳ್ಳವರು ದುಬಾರಿ ಶನಿ ಶಾಂತಿ ಪೂಜೆಗಳನ್ನು ಮಾಡಿಸುವುದು ವಾಡಿಕೆಯಾಗಿದೆ. ಆದರೆ ಶನಿಕಥಾ ಪ್ರವಚನ, ಪಠಣ, ಕೀರ್ತನ ಮತ್ತು ಅವುಗಳನ್ನು ಭಕ್ತಿಪೂರ್ವಕ ಶ್ರವಣ ಮಾಡುವುದರಿಂದ ಜನಸಾಮಾನ್ಯರೂ ಬಹು ಸುಲಭವಾಗಿ ಶನಿದೋಷ ಮುಕ್ತರಾಗಲು ಸಾಧ್ಯ’ ಎಂದು ಯಕ್ಷಗಾನ ಅರ್ಥಧಾರಿ ಮತ್ತು ಪ್ರವಚನಕಾರ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು. ಬಜ್ಪೆ ಶ್ರೀ ಶನೈಶ್ಚರ ದೇವಸ್ಥಾನದ ವಾರ್ಷಿಕ ಜಾತ್ರಾ ಸಂದರ್ಭದಲ್ಲಿ ‘ಶ್ರೀ ಶನೈಶ್ಚರ ಮಹಾತ್ಮೆ – ಯಕ್ಷ ಕಾವ್ಯ ಕಥನ’ ಕಾರ್ಯಕ್ರಮದಲ್ಲಿ ಪ್ರವಚನಕಾರರಾಗಿ ಅವರು ಮಾತನಾಡಿದರು. ಖ್ಯಾತ ಹರಿದಾಸ ಮತ್ತು ಗಾಯಕ ತೋನ್ಸೆ ಪುಷ್ಕಳ ಕುಮಾರ್ ಹಾಗೂ ಮಹಿಳಾ ಭಾಗವತರು ಭವ್ಯಶ್ರೀ ಕುಲ್ಕುಂದ ಕಾವ್ಯ ಗಾಯನ ಮಾಡಿದರು. ವರುಣ್ ಆಚಾರ್ಯ ಮತ್ತು ಸಮರ್ಥ್ ಉಡುಪ ಚೆಂಡೆ ಮದ್ದಲೆಗಳಲ್ಲಿ ಸಹಕರಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ವ್ಯಾಖ್ಯಾನ ನೀಡಿದರು.ಶ್ರೀ ಶನೈಶ್ಚರ ದೇವಸ್ಥಾನದ ಧರ್ಮದರ್ಶಿ ಆನಂದ ಪೂಜಾರಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.…
ಕ್ರಿಯೇಟಿವ್ ಪ.ಪೂ. ಕಾಲೇಜು, ಕಾರ್ಕಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ, ಸಿದ್ಧಾಪುರ, ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸನಿವಾಸ ಪ್ರೇರಣಾ ಶಿಬಿರ – 2025 ಉದ್ಘಾಟನೆಗೊಳಿಸಲಾಯಿತು. ಶಿರಸಿಯ ಸಿದ್ಧಾಪುರ ಕಾನಸೂರಿನಲ್ಲಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶಿಬಿರಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಉದ್ಘಾಟಕರಾಗಿ ಆಗಮಿಸಿ ಮಾತನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ಮಾತನಾಡಿ ಹತ್ತನೆಯ ತರಗತಿಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಏನಾಗಬೇಕೆಂದು ಕನಸು ಕಾಣುತ್ತಾರೋ ಅದನ್ನು ನನಸು ಮಾಡಲು ಮುಂದಿನ ಪಿ.ಯು.ಸಿ ಶಿಕ್ಷಣ ಅತ್ಯಂತ ಪ್ರಮುಖವಾದದ್ದು. ದೂರದರ್ಶಿತ್ವದೊಂದಿಗೆ ಮುಂದಿನ ಹೆಜ್ಜೆ ಇರಿಸಿ, ಉತ್ತಮ ಫಲಿತಾಂಶವೂ ಇಂತಹ ಶಿಬಿರಗಳಿಂದ ದೊರಕುತ್ತದೆ. ಶಿರಸಿ – ಸಿದ್ಧಾಪುರದ ಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಎಚ್. ನಾಯ್ಕ ಅವರು ಮುಂದಿನ ಶೈಕ್ಷಣಿಕ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನಿಯಾಗಿ ಮೂಡಿಬರುವಂತೆ ಪ್ರಯತ್ನ…
ಮೂಡುಬಿದಿರೆ: ಹೊರಗಿನ ಪ್ರಪಂಚವನ್ನು ತೆರೆದ ಕಣ್ಣುಗಳಿಂದ ಕಂಡಾಗ ಅನೇಕ ಸಂಗತಿಗಳು ನಮ್ಮ ಮನಸ್ಸನ್ನು ತಟ್ಟಿ ಯೋಚನೆಗೀಡು ಮಾಡಿದಾಗ ಅಂತಹ ಸಂಗತಿಗಳೇ ನಮ್ಮನ್ನು ಕವಿತ್ವದೆಡೆಗೆ ಸೆಳೆಯುತ್ತವೆ ಎಂದು ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ನುಡಿದರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಮತ್ತು ಶ್ರೀ ಮಹಾವೀರ ಪ.ಪೂ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಕನ್ನಡ ಚಿಂತನ ಕಾರ್ಯಕ್ರಮದಲ್ಲಿ ಅವರು ‘ಕನ್ನಡ ಕಾವ್ಯ ಮತ್ತು ಜೀವನಪ್ರೀತಿ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಭಾವನಾತ್ಮಕ ಸಂಗತಿಗಳಿರಬಹುದು, ನೋವಿನ ಘಟನೆಗಳೇ ಇರಬಹುದು, ಸಂತೋಷದ ಕ್ಷಣಗಳೇ ಇರಬಹುದು ಆ ಸಂದರ್ಭಗಳಲ್ಲಿ ನಮ್ಮನ್ನು ಕಾಡುವ ಸಂವೇದನೆ, ಜೀವನಪ್ರೀತಿ ಕವಿಮನಸ್ಸಿಗೆ ಮೂಲ. ಒಳ್ಳೆಯ ಬರಹವೂ ಕಾವ್ಯವಾಗಬಲ್ಲುದು ಮತ್ತು ಕಾವ್ಯ ರಚಿಸದಿದ್ದರೂ ಜೀವನ ಪ್ರೀತಿಯ ಸಂವೇದನೆ ಇರುವವರೆಲ್ಲರೂ ಕವಿಗಳೇ ಆಗಿರುತ್ತಾರೆ ಎಂದರು. ಸಭಾಧ್ಯಕ್ಷತೆಯನ್ನುವಹಿಸಿದ್ದ ಕ.ಸಾ.ಪ. ಮೂಡುಬಿದಿರೆತಾಲೂಕು ಘಟಕದ ಅಧ್ಯಕ್ಷ ಪ್ರೊ. ಕೆ.ವೇಣುಗೋಪಾಲ ಶೆಟ್ಟಿಯವರು ಮಾತನಾಡಿ, ಇಂದಿನ ಯುವಜನತೆಯಲ್ಲಿ ಭಾವನಾತ್ಮಕ ಸಂಬಂಧಗಳು…
ಮೂಡುಬಿದಿರೆ: ಕಾಲ ಕಾಲಕ್ಕೆ ಸರಿಯಾದ ವಿದ್ಯೆ ಬುದ್ಧಿಯ ಜೊತೆಗೆ ಹೃದಯಕ್ಕೆ ಸಂಸ್ಕಾರವನ್ನು ಒದಗಿಸುವ ಕೆಲಸ ಈ ಪ್ರತಿಭಾ ಕಲೋತ್ಸವದ ಮೂಲಕ ಸಹಕಾರಗೊಳ್ಳಲಿದೆ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಆಯಕ್ತ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ನುಡಿದರು. ಭಾರತ್ ಸ್ಕೌಟ್ಸ್ ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ‘ಪ್ರತಿಭಾ ಕಲೋತ್ಸವ’ವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲೆ ಮೊಟ್ಟ ಮೊದಲ ಬಾರಿಗೆ ಭಾರತ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಪ್ರತಿಭಾ ಕಲೋತ್ಸವ ಹಮ್ಮಿಕೊಂಡಿರುವುದು ಖುಷಿ ನೀಡಿದೆ. ಪಠ್ಯೇತರವಾಗಿ ಮನಸ್ಸನ್ನು ಕಟ್ಟುವ ಇಂತಹ ಕರ್ಯಕ್ರಮಗಳು ಎಲ್ಲಾ ಭಾಗಗಳಲ್ಲೂ ನಡೆಯಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್ ಕುರಿತು ಇನ್ನಷ್ಟು ಜಾಗೃತಿ ಮೂಡಿ, ಸ್ಕೌಟ್ಸ್ ಗೈಡ್ಸ್ ಆಂದೋಲನ ದೇಶದಾದ್ಯಂತ ಮುಂಚೂಣಿಯಲ್ಲಿ ನಿಲ್ಲಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕು…
ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಉದ್ಯೋಗ ಕೌಶಲ್ಯ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ 2025 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಹೊಸ ಬ್ಯಾಚ್ ಗಳನ್ನು ಲಯನ್ಸ್ ವಲಯ-1 ರ ವಲಯ ಅಧ್ಯಕ್ಷ ಹಾಗೂ ದುರ್ಗಾಂಬಾ ವಿದ್ಯಾ ಸಂಸ್ಥೆ ಅಲಂಕಾರು ಇದರ ಸಂಚಾಲಕರಾದ ದಯಾನಂದ ರೈ ಮನವಳಿಕೆ ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತರಬೇತಿಗೆ ಸೇರಿದ ವಿದ್ಯಾರ್ಥಿಗಳಿಗೆ ಅವರು ಶುಭ ಹಾರೈಸಿ ವಿದ್ಯಾಮಾತಾ ಅಕಾಡೆಮಿಯು ನಡೆಸುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಹಾಜಿ ಕುಕ್ಕುವಳ್ಳಿಯವರು ಈಗಾಗಲೇ ತರಬೇತಿ ಮುಗಿಸಿರುವ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರನ್ನು ಸನ್ಮಾನಿಸಲಾಯಿತು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ದಯಾನಂದ ರೈ ಮನವಳಿಕೆಯವರು ಬಹುಮಾನವನ್ನು ವಿತರಿಸಿದರು. ತರಬೇತಿ ಪಡೆದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ವಿದ್ಯಾಮಾತಾ ಅಕಾಡೆಮಿಯಲ್ಲಿ ಎಫ್.ಡಿ.ಎ., ಎಸ್.ಡಿ.ಎ., ಪಿ.ಡಿ.ಓ., ವಿ.ಎ.ಓ., ಬ್ಯಾಂಕಿಂಗ್ ಕಾರ್ಪೊರೇಟಿವ್, ರೈಲ್ವೆ…
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರ ಉಪಸ್ಥಿತಿಯಲ್ಲಿ ಜನವರಿ 6ರಂದು ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ನೀಲಯ್ಯ ಅಗರಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಡಿ.ಆರ್ ರಮೇಶ್ ಸೇರಿದಂತೆ ಯೂನಿಯನ್ ನ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು. ಚುನಾವಣಾ ರೆಟರ್ನಿಂಗ್ ಅಧಿಕಾರಿ ಸುಧೀರ್ ರವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷರ ಪರಿಚಯ: ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿರುವ ಶಶಿಕುಮಾರ್ ರೈರವರು ಪುತ್ತೂರು ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಎಂಟು ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ…
ಸಾಣೂರು ಮುರತ್ತಂಗಡಿ ಶ್ರೀ ಭಕ್ತ ವತ್ಸಲ ಅಯ್ಯಪ್ಪ ಸೇವಾ ಸಮಿತಿಯ ಆಶ್ರಯದಲ್ಲಿ 13ನೇ ವರ್ಷದ ಮಹಾಪೂಜೆಯು ಜನವರಿ 10ರಂದು ಜರುಗಲಿದೆ. ಶಿವಾನಂದ ಶಾಂತಿ ಮೂಡಬಿದಿರೆ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಬೆಳಿಗ್ಗೆ 7:30ರಿಂದ ಸ್ವಾಮಿಗಳು ಇರುಮುಡಿ ಕಟ್ಟುವುದು, 10 ಗಂಟೆಗೆ ಭಜನಾ ಕಾರ್ಯಕ್ರಮ, 12 ಗಂಟೆಗೆ ಮಹಾಪೂಜೆಯಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಶ್ರೀ ಸೌಕೂರು ಕ್ಷೇತ್ರ ಮಹಾತ್ಮೆ : ಸಂಜೆ ಏಳರಿಂದ ತುಳಸಿ ಶೆಟ್ಟಿ ಮತ್ತು ಗಣೇಶ್ ಶೆಟ್ಟಿ ಹಾಗೂ ಮಕ್ಕಳು ಇವರ ಸೇವಾರ್ಥವಾಗಿ ಪಂಚ ಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಸಾರಥ್ಯದ ಸದಾಶಿವ ಅಮೀನ್ ಇವರ ಪ್ರಧಾನ ಭಾಗವತಿಕೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಸೌಕೂರು ಇವರು ‘ಭಕ್ತ ವತ್ಸಲ’ ಮನೆಯ ಮುಂಭಾಗದಲ್ಲಿನ ಭವ್ಯ ರಂಗಮಂಟಪದಲ್ಲಿ ಶ್ರೀ ಸೌಕೂರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ಆಡಿ ತೋರಿಸಲಿದ್ದಾರೆ. ಸಂಜೆ 6.30ಕ್ಕೆ ಚೌಕಿ ಪೂಜೆ ನಂತರ 8ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ.ಸಭಾ ಕಾರ್ಯಕ್ರಮದಲ್ಲಿ ಸಾಣೂರು…
ವೀರ ಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ. ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ 2025 ಜನವರಿ 11 ಶನಿವಾರ ಸಂಜೆ 4 ಗಂಟೆಗೆ ಸುರತ್ಕಲ್ ಬಂಟರ ಭವನದ ಹತ್ತಿರ ನಡೆಯಲಿದೆ. ಉದ್ಘಾಟನಾ ಸಮಾರಂಭ ಸಂಜೆ 4 ಗಂಟೆಗೆ ನಡೆಯಲಿದೆ. ಅಧ್ಯಕ್ಷತೆಯನ್ನು ಬಿ.ಎ.ಎಸ್.ಎಫ್ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ್ ಪ್ರಾಣೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಸದಾಶಿವ ಮಹಾಗಪತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಎಸ್ ಗಣಪತಿ ಮಯ್ಯ, ಶ್ರೀ ಮಹಮ್ಮಾಯಿ ದೇವಸ್ಥಾನದ ಧರ್ಮದರ್ಶಿ ಅರುಣ್ ಪೈ, ಮೋಹನ್ ಪೂಜಾರಿ ಅಗರಮೇಲು, ಸಚ್ಚೀಂದ್ರ ಮೆಂಡನ್ ದೊಡ್ಡಕೊಪ್ಲ, ಕಾರ್ಪೋರೇಟರ್ ಗಳಾದ ಸರಿತಾ ಶಶಿಧರ್, ನಯನ ಕೋಟ್ಯಾನ್, ಶ್ವೇತಾ ಪೂಜಾರಿ, ಶೋಭಾ ರಾಜೇಶ್, ರಾಷ್ಟ್ರಭಕ್ತ ನಾಗರೀಕ ವೇದಿಕೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ…
ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 04-01-2025 ರಂದು ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು “ವಿವಿಧತೆಯಲ್ಲಿ ಏಕತೆ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್ ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ನಾ ಸೋಮೇಶ್ವರ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ ಸಂವಾದ ಕಾರ್ಯಕ್ರಮವು ಖ್ಯಾತ ನಿರೂಪಕ ಅವಿನಾಶ್ಕಾ ಮತ್ ರವರ ಮುಖೇನ ನಡೆಸಲ್ಪಟ್ಟಿತು. ” ಕವಿತೆ ಹುಟ್ಟುವ ಸಮಯ ” ಸಂವಾದ ಕಾರ್ಯಕ್ರಮದಲ್ಲಿ ಬಿ ಆರ್ ಲಕ್ಷ್ಮಣರಾವ್ ರವರು ಸಂವಾದ ನಡೆಸುತ್ತಾ ವಿದ್ಯಾರ್ಥಿ ಸಮೂಹವನ್ನುದ್ದೇಶಿಸಿ ಹಾಡುಗಳ ನಿರಂತರತೆಗೆ ಕಾರಣ ಮುಂದಿನ ಪೀಳಿಗೆಯಾಗಿರುವ ವಿದ್ಯಾರ್ಥಿಗಳು ಎಂದರು. ಮಜಾ ಟಾಕೀಸ್ ಖ್ಯಾತಿಯ ಮೋಹನ್ ಕಾರ್ಕಳ ಮತ್ತು ತಂಡದವರಿಂದ ಬಿ ಆರ್ ಲಕ್ಷ್ಮಣರಾವ್ ವಿರಚಿತ ಕವಿತೆಗಳ ಗಾಯನ ಕಾರ್ಯಕ್ರಮ ಜರುಗಿತು. ಪ್ರಖ್ಯಾತ ವೈದ್ಯ, ಕ್ವಿಜ್ ಮಾಸ್ಟರ್, ಲೇಖಕರು ಹಾಗೂ ಅಂಕಣಕಾರರಾದ ಡಾ. ನಾ ಸೋಮೇಶ್ವರರವರು…
ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಇದರ ವತಿಯಿಂದ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಬಾಲಕ ಬಾಲಕಿಯರು ಭಾಗವಹಿಸಿದ ತಂಡ ಎರಡು ವಿಭಾಗದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಬಾಲಕರ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ, ಮೈಸೂರು ಜಿಲ್ಲಾ ತಂಡವನ್ನು 35-11 ಹಾಗೂ 35 14 ನೇರ ಸೆಟ್ಗಳಿಂದ ಸೋಲಿಸಿ ಗೆಲುವು ಸಾಧಿಸಿತು. ಬಾಲಕಿಯರ ವಿಭಾಗದ ಫೈನಲ್ಸ್ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವು ಮಂಡ್ಯ ಜಿಲ್ಲಾ ತಂಡವನ್ನು 35-14 ಹಾಗ 35-11 ನೇರ ಸೆಟ್ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿದ ತಂಡದಲ್ಲಿ ಪ್ರಮುಖ ಆಟಗಾರರಾಗಿ ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ 5 ಬಾಲಕರು ಹಾಗೂ 5 ಬಾಲಕಿಯರು ಪ್ರತಿನಿಧಿಸಿದ್ದು ಗೆಲುವಿಗೆ ಸಹಕಾರಿಯಾಯಿತು. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ತಂಡ, ಬಾಲಕ ಹಾಗೂ ಬಾಲಕಿಯರ…