Author: admin
ಮೂಡುಬಿದಿರೆಯ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರೀಸರ್ಚ್ ಸೆಂಟರ್ ನ ಡೀನ್ ಆಗಿರುವ ಡಾ. ಮಹಾಬಲೇಶ್ ಶೆಟ್ಟಿ ಅವರು ಫೋರೋನಿಕ್ಸ್ ಮೆಡಿಸಿನ್ ಮತ್ತು ಮೆಡಿಕಲ್ ಕ್ಷೇತ್ರದಲ್ಲಿ ಸಲ್ಲಿಸಿದ ಅಸಾಧಾರಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ಮೆಡಿಕೋಲಿಗಲ್ ಸೊಸೈಟಿಯು ಇವರಿಗೆ 2025 ನೇ ಸಾಲಿನ ಪ್ರತಿಷ್ಠಿತ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿಯನ್ನು ಬಾಗಲಕೋಟೆಯ ಎಸ್.ಆರ್ ಪರ್ಡಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ರಾಜ್ಯ ಸಮಾವೇಶದಲ್ಲಿ ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರಾದ ರವಿ ವಿ ಹೊಸ್ಮಾನಿ ಹಾಗೂ ಮಾಜಿ ಸಚಿವ ಎಸ್ ಆರ್ ಪಾಟೀಲ್ ಅವರು ಪ್ರಶಸ್ತಿಯನ್ನು ಪ್ರದಾನಿಸಿದರು.
ದೇವಾಸ್ಥಾನ ದ ಜೀರ್ಣೋದ್ಧಾರ, ಬೆಳ್ಳಿ ಮುಚ್ಚಳಿಕೆ, ಬಂಗಾರ ಮುಚ್ಚಳಿಕೆ, ಬ್ರಹ್ಮಕಲಶ, ಯಾಗ ಯಜ್ಞ, ದಾನ ಧರ್ಮ ಹೀಗೆ ಎಲ್ಲಾ ವೈದಿಕ ಆಚಾರ ವಿಚಾರದಲ್ಲಿ ಬಂಟರು ಮೊದಲಿಗರು. ಆದುದರಿಂದ ದೈವಾನುಗ್ರಹ ಬಂಟರ ಮೇಲೆ ಅತೀ ಹೆಚ್ಚು. ಎಲ್ಲಿಯವರೆಗೆ ಹೆಚ್ಚೆಂದರೆ ಕರ್ನಾಟಕದಲ್ಲೇ ಡಿವೋರ್ಸ್ ಪ್ರಕರಣದಲ್ಲಿ ಉಡುಪಿ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯು ಪೈಪೋಟಿಯಲ್ಲಿದೆ. ಉಡುಪಿಯಲ್ಲಿ ಯಾವ ಸಮಾಜ ನಂ 1 ಎಂದು ಕೇಳಿದರೆ ಅದು ನಮ್ಮ ಬಂಟ ಸಮಾಜ. ಅಖಂಡ ಕರ್ನಾಟಕದಲ್ಲಿ ಡಿವೋರ್ಸ್ ಪ್ರಕರಣದಲ್ಲಿ ಬಂಟರು ನಂ 1 ..! ನಮ್ಮ ಸಮಾಜದ ಶ್ರೀಮಂತರ ದಾನ ಧರ್ಮದ ಫಲ ಶ್ರುತಿ ಇದೆನ್ನಬಹುದು ..!! ಒಬ್ಬ ದೇವಾಸ್ಥಾನದ ಅರ್ಚಕ ದಾನ ಧರ್ಮದ ಸೇವೆ ನೀಡುವವನಿಗಿಂತ ಹೆಚ್ಚು ಶ್ರೀಮಂತನಿರಬಹುದು..! ಆದರೆ ಆತ ಒಂದು ರೂಪಾಯಿ ಕೂಡಾ ದಾನ ಮಾಡಲಾರ. ದಾನ ಧರ್ಮಕ್ಕೆ ಬಂಟರಿದ್ದಾರೆ. ಒಂದು ದೇವಸ್ಥಾನ ಊರಿಗೆ ಸಂಬಂಧ ಪಟ್ಟದ್ದು ಅದು ಕೇವಲ ಬಂಟರಿಗೆ ಸೀಮಿತವೇ ..? ಅದೇ ದಾನ ಧರ್ಮ ಮಾಡುವವನಿಗೆ ಆತನ…
ಬಂಟರ ಸಂಘ ಪಡುಬಿದ್ರಿಯ ಅಧ್ಯಕ್ಷರಾಗಿ ಮೂರನೇ ಅವಧಿಗೆ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ಪುನರಾಯ್ಕೆಗೊಂಡಿದ್ದಾರೆ. ಸಂಘದ ಅಧ್ಯಕ್ಷರಾಗಿ ಈ ಹಿಂದಿನ ಅವಧಿಗಳಲ್ಲಿ ಇವರು ಸಂಘದ ಸಭಾಭವನಗಳಿಗೆ ಹವಾ ನಿಯಂತ್ರಿತ ವ್ಯವಸ್ಥೆ, ಸಿರಿಮುಡಿ ಕೋ ಆಪರೇಟಿವ್ ಸೊಸೈಟಿ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿದ್ದರು. ಈ ಅವಧಿಯಲ್ಲಿ ಸಂಘದ 15 ಕೋಟಿಗಳ ಮಹತ್ವಾಕಾಂಕ್ಷೆಯ ಬಂಟಾಶ್ರಯ ಯೋಜನೆಗೆ ಮುಂದಿನ ತಿಂಗಳಿನಲ್ಲಿ ಭೂಮಿ ಪೂಜೆ ನಡೆಸುವುದಾಗಿ ಅವರು ತಿಳಿಸಿದ್ದಾರೆ. ಡಾ| ಶೆಟ್ಟಿ ಅವರು ರಾಜಕೀಯ, ಸಹಕಾರಿ, ಕಂಬಳ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನೂತನ ಉಪಾಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪಲ್ಲವಿ, ಶ್ರೀನಾಥ ಹೆಗ್ಡೆ ನಡ್ಸಾಲು ಗುತ್ತು, ಅನಿತ ವಿಶುಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿಯಾಗಿ ರವಿ ಶೆಟ್ಟಿ ಗುಂಡ್ಲಾಡಿ, ಜೊತೆ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಪಲಿಮಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನವೀನ್ ಎನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಿವಿಧ ಉಪ ಸಮಿತಿಗಳನ್ನು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಸಂಘದ…
ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ : ಭಾರತ GDP ಯಲ್ಲಿ ಮುಂದಿರುವಾಗ ಮಾನವ ಹಕ್ಕುಗಳಲ್ಲಿ ಹಿಂದುಳಿಯುವುದೇಕೆ? ವಿಚಾರ ಸಂಕಿರಣ
ಯುನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಸಹ ಘಟಕವಾದ ಯುನಿವರ್ಸಲ್ ಸ್ಕೂಲ್ ಆಫ್ ಲಾ ವತಿಯಿಂದ ಭಾರತ GDP ಯಲ್ಲಿ ಮುಂದಿರುವಾಗ ಮಾನವ ಹಕ್ಕುಗಳಲ್ಲಿ ಹಿಂದುಳಿಯುವುದೇಕೆ? ಎಂಬ ವಿಷಯದ ಮೇಲೆ ವಿಶೇಷ ಕಾರ್ಯಕ್ರಮವನ್ನು 9 ಡಿಸೆಂಬರ್ 2025 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ನ ಕರ್ನಾಟಕ ಸರ್ಕಾರ ನೌಕರರ ಸಂಘ ಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗೌರವಾನ್ವಿತ ಡಾ. ಜಸ್ಟಿಸ್ ಅಶೋಕ್ ಬಿ. ಹಿಂಚಿಗೇರಿ, ಅಧ್ಯಕ್ಷರು ಕರ್ನಾಟಕ ಕಾನೂನು ಆಯೋಗ ಹಾಗೂ ಮಾಜಿ ನ್ಯಾಯಮೂರ್ತಿ ಕರ್ನಾಟಕ ಹೈಕೋರ್ಟ್ ಅವರು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಅವರು, ಆರ್ಥಿಕ ಬೆಳವಣಿಗೆ ಮತ್ತು ಮಾನವ ಹಕ್ಕುಗಳ ಜಾರಿಯ ನಡುವೆ ಸಮತೋಲನ ತರಲು ಬಲವಾದ ಸಂಸ್ಥಾ ಸಂರಚನೆ ಹಾಗೂ ಜನಜಾಗೃತಿ ಅತ್ಯವಶ್ಯಕ ಎಂದು ಹೇಳಿದರು. ಅವರು ಭಾರತದ 40% ಸಂಪತ್ತನ್ನು ಕೇವಲ 1% ಭಾರತೀಯರು ಹೊಂದಿದ್ದಾರೆ ಎಂಬ ಅಸಮಾನತೆಯನ್ನು ಉಲ್ಲೇಖಿಸಿದರು. ಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳು ಒಟ್ಟಿಗೆ ಸಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಮಾನವ ಹಕ್ಕುಗಳು ಮೂಲ…
ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಚ್ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಮೂರನೇ ಬಾರಿಗೆ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ರಾಜ್ ಬಿ ಶೆಟ್ಟಿ ನಟನೆಯ ʻಲ್ಯಾಂಡ್ಲಾರ್ಡ್ʼ ಸಿನಿಮಾವು ಜನವರಿ 23 ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ‘ರೂಲರ್’ ಎಂಬ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಲ್ಯಾಂಡ್ಲಾರ್ಡ್’ ನಿರ್ದೇಶಕ ಜಡೇಶ್ ಕೆ ಹಂಪಿ ಅವರೊಂದಿಗೆ ಕೆಲಸ ಮಾಡಿದ್ದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ ರಾಜ್. ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಬಹಳ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೂಡ ನಟಿಸುತ್ತಿರುವುದು ಈಗ ನಿರೀಕ್ಷೆ ಡಬಲ್ ಆಗಲು ಕಾರಣವಾಗಿದೆ. ಹೌದು, ‘ಲ್ಯಾಂಡ್ಲಾರ್ಡ್’ ಸಿನಿಮಾದಲ್ಲಿ ರೂಲರ್ ಆಗಿ ರಾಜ್ ಬಿ ಶೆಟ್ಟಿ ವಿಲನ್ ಪಾತ್ರದಲ್ಲಿ ಮಿಂಚಲಿದ್ದಾರೆ. ಈಚೆಗೆ ರಾಜ್ ಬಿ ಶೆಟ್ಟಿ ಅವರ ಪಾತ್ರದ ಟೀಸರ್ ರಿಲೀಸ್ ಆಗಿದೆ. ಈ ಬಾರಿ ವಿಗ್ ಧರಿಸಿ, ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ ರಾಜ್ ಬಿ ಶೆಟ್ಟಿ. ರಾಜ್ ಬಿ ಶೆಟ್ಟಿ ಹೇಳಿದ್ದೇನು? “ನಾನು ಈ ಚಿತ್ರ ಒಪ್ಪಿಕೊಳ್ಳಲು ಮೊದಲ ಕಾರಣ ನಿರ್ದೇಶಕ ಜಡೇಶ್. ಒಬ್ಬ ನಿರ್ದೇಶಕ ಗೆಲ್ಲಲ್ಲೇಬೇಕು ಎಂದು ಬಯಸುವವನು ನಾನು. ಈ…
ಹುಟ್ಟು ನಿಶ್ಚಿತ ಸಾವು ಖಚಿತ ಆದರೆ ಅದಕ್ಕೊಂದು ಕರುಣೆ ಇಲ್ಲ. ವಯಸ್ಸಿನ ಲೆಕ್ಕಾಚಾರವನ್ನು ಹಾಕಲ್ಲ. ಬೈಕಾಡಿ ಜೀವನ್ ಶೆಟ್ರು ಉಡುಪಿ ಜಿಲ್ಲೆಯ ಪ್ರಸಿದ್ಧ ಪಿಡಬ್ಲ್ಯೂಡಿ ಗುತ್ತಿಗೆದಾರರು. ಅದೆಷ್ಟೋ ಜನರು ತಮ್ಮೂರಿಗೊಂದು ರಸ್ತೆ ಸ್ಯಾಂಕ್ಷನ್ ಆದಾಗ ಅದರ ಗುತ್ತಿಗೆ ಬೈಕಾಡಿ ಜೀವನಣ್ಣನಿಗೆ ಸಿಗಲಿ ಅಂತ ಪ್ರಾರ್ಥಿಸಿದವರಿದ್ದಾರೆ. ಎಲ್ಲೇ ರಸ್ತೆ ನಿರ್ಮಾಣ ಕಾಮಗಾರಿ ಆದರೂ ಕೂಡ ಎಲ್ಲಾ ಗುತ್ತಿಗೆದಾರರಿಗಿಂತ ಹೆಚ್ಚು ಹಣವನ್ನು ರಸ್ತೆಗೆ ಹಾಕಿ ಗುಣಮಟ್ಟದ ಕಾಮಗಾರಿಯನ್ನು ಮಾಡಿ ಎಲ್ಲಾ ಸ್ಥರದ ಜನರಿಂದಲೂ ಸೈ ಅನಿಸಿಕೊಂಡವರು. ನೀಳಕಾಯದ ನಗುಮೊಗದ ಶುಭ್ರ ವಸ್ತ್ರಧಾರಿಯಾಗಿರುತ್ತಿದ್ದ ಜೀವನಣ್ಣನನ್ನು ನೋಡುವಾಗಲೇ ಎಂಥವರಲ್ಲೂ ಗೌರವ ಹೊರ ಹೊಮ್ಮುತ್ತಿತ್ತು. ಎಳ್ಳಂಪಳ್ಳಿ ರಸ್ತೆ ಕಾಮಗಾರಿಯಾಗುವಾಗ ಮುಂಜಾನೆ ಬಂದು ಅರ್ಧ ತೋಳಿನ ಬಿಳಿಯಂಗಿಯನ್ನು ತೊಟ್ಟು ಕೆಲಸಗಾರರಿಗೆ ಸೂಚನೆಯನ್ನು ಕೊಡುತ್ತಿದ್ದ ಅವರಿಗೊಂದು ನಮಸ್ಕಾರ ಮಾಡಿ ನಾನು ಶಾಲಾ ಕರ್ತವ್ಯಕ್ಕೆ ಮುಂದುವರಿಯುತ್ತಿದ್ದೆ. ಅವರಿಗೆ ನಮಸ್ಕರಿಸುವುದೇ ನಮ್ಮಂಥವರಿಗೆ ಹೆಮ್ಮೆಯ ವಿಷಯವಾಗಿತ್ತು ಮುರಳಿ ಕೃಷ್ಣ ನಾಮಾಂಕಿತದೊಂದಿಗೆ ಕರಾವಳಿಯಲ್ಲಿ ಮಿಂಚಿದ ಪ್ರಸಿದ್ಧ ಕನ್ಸ್ಟ್ರಕ್ಷನ್ ಕಂಪೆನಿ ಇವರದ್ದು. ತಮ್ಮ ಸಂಸ್ಥೆಯ ಮುಖಾಂತರವಾಗಿ ಅದೆಷ್ಟೋ ಜನರಿಗೆ…
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಹರೀಶ್ ಶೆಟ್ಟಿ ಬಂಡ್ಸಾಲೆ ಇವರು ಇಂಗ್ಲೆಂಡ್ನ ಪ್ರತಿಷ್ಠಿತ ಬಾತ್ ಯೂನಿವರ್ಸಿಟಿಯಿಂದ ಪಿಹೆಚ್ಡಿ ಪದವಿ ಪಡೆದಿದ್ದಾರೆ. ಹರೀಶ್ ಶೆಟ್ಟಿ ಬಂಡ್ಸಾಲೆ ಹಾರಾಡಿ ಗ್ರಾಮದ ಕೆಳಬಣಸಾಲೆ ಮನೆ ರತ್ನಾವತಿ ಶೆಟ್ಟಿ ಹಾಗೂ ಹಳುವಳ್ಳಿ- ಕೋಂಟಿಬೈಲು ಲಕ್ಷಣ ಶೆಟ್ಟಿ ಅವರ ಮಗನಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಹೊನ್ನಾಳ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ಪಡೆದು ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಬ್ರಹ್ಮಾವರದ ಎಸ್ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಪಡೆದಿದ್ದರು. ಹಾರಾಡಿಯ ಡಾ.ಎ.ವಿ ಬಾಳಿಗಾ ಕಾಲೇಜಿನಲ್ಲಿ ಬಿಎಸ್ಡಬ್ಲ್ಯೂ ಮುಗಿಸಿ ಮಂಗಳೂರಿನ ಡಾ. ಎಂ.ವಿ ಶೆಟ್ಟಿ ಕಾಲೇಜಿನಲ್ಲಿ ಎಂ.ಎಸ್.ಡಬ್ಲ್ಯೂ ಪದವಿ ಪಡೆದಿದ್ದರು. ಅಹಮ್ಮದಾಬಾದ್ನ ಐಐಎಂನಲ್ಲಿ ಪಿಎಚ್ಡಿಯನ್ನು ಪ್ರಾರಂಬಿಸಿ ಅಲ್ಲಿಂದ ಇಂಗ್ಲೆಂಡ್ನ ಪ್ರತಿಷ್ಠಿತ ಯೂನಿವರ್ಸಿಟಿ ಆಫ್ ಬಾತ್ನಿಂದ ಸ್ಕಾಲರ್ಶಿಪ್ ಪಡೆದು ಕಟ್ಟಡ ಕಾರ್ಮಿಕರ ಬಗ್ಗೆ ಆಳವಾದ ಅಧ್ಯಯನ ಮಾಡಿ ತಮ್ಮ ಪ್ರಬಂಧವನ್ನು ಮಂಡಿಸಿ, ಯಾವುದೇ ತಿದ್ದುಪಡಿ ಇಲ್ಲದೆ ಮೊದಲ ಹಂತದಲ್ಲೇ ಉತ್ತೀರ್ಣರಾಗಿ…
ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನೊಳಗೊಂಡ ಪ್ರಜಾವಾಣಿ ದಿನಪತ್ರಿಕೆಯನ್ನು ಸರಕಾರಿ ಪ್ರೌಢಶಾಲೆ ಕಾಬೆಟ್ಟು ಕಾರ್ಕಳ ಇಲ್ಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಅಂತಿಮ ಪರೀಕ್ಷೆಯವರೆಗೆ ಪ್ರತಿದಿನ ಪ್ರತಿ ವಿದ್ಯಾರ್ಥಿಗಳಿಗೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ದಿನಪತ್ರಿಕೆಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ರೋಟರಿಯ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಯ ಭಾಗವಾಗಿ ಈ ಸವಲತ್ತುಗಳನ್ನು ನೀಡುತ್ತಿದ್ದೇವೆ. ಒಳ್ಳೆಯ ಶಿಕ್ಷಣ ಪಡೆದು ಮುಂದೆ ಉತ್ತಮ ಸಮಾಜ ಸೇವೆ ಮಾಡುವ ಅವಕಾಶ ನಿಮಗೆ ಸಿಗಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಉಪನ್ಯಾಸಕರು, ಪ್ರಜಾವಾಣಿ ಪತ್ರಿಕೆಯ ವರದಿಗಾರರಾದ ಸಿದ್ದಾಪುರ ವಾಸುದೇವ ಭಟ್ ಮಾತನಾಡುತ್ತಾ, ವಿದ್ಯಾರ್ಥಿಗಳು ಮಾತನಾಡಬೇಕು, ಬರೆಯಬೇಕು, ಓದಬೇಕು ಈ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು. ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಇಂಟರ್ಯಾಕ್ಟ್ ಕ್ಲಬ್ಬಿನ ಅಧ್ಯಕ್ಷೆ ಸಾಕ್ಷಿ, ಸಮುದಾಯ ಸೇವೆಗಳ ಚೇರ್ಮನ್ ವಸಂತ್ ಎಂ,…
ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು ನಿಧನ
ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ) ಅವರು ಡಿ.4ರಂದು ಸ್ವಗೃಹದಲ್ಲಿ ನಿಧನರಾದರು. ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪೆಟ್ಟು ಇದರ ಶೆಟ್ಟಿ ಬಾಲೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಗುಂಡು ಶೆಟ್ಟಿ ಕಪ್ಪೆಟ್ಟು ಅವರು, ತನ್ನ ನೇರ ನಡೆ- ನುಡಿಗಳಿಂದ ಜನಾನುರಾಗಿಯಾಗಿದ್ದು, ದೈವಾರಾಧನೆ ಸಹಿತ ದೈವಸ್ಥಾನಗಳ ಧಾರ್ಮಿಕ ಆಚರಣೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರ ಸಹಿತ ಬಂಧು ವರ್ಗ ಮತ್ತು ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.















