Author: admin

ಮೂಡುಬಿದಿರೆ: ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥೆಯಲ್ಲಿ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಡಿ 26ರಿಂದ 30ರವರೆಗೆ ನಡೆದ 84ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ  ಪುರುಷ ಹಾಗೂ ಮಹಿಳಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿ ತಂಡವು ರಾಷ್ಟ್ರೀಯ ಮಟ್ಟದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಿಂಹಪಾಲಿನ ಕೊಡುಗೆಯಿಂದ  ಸತತ 8ನೇ ಬಾರಿಗೆ  ಸಮಗ್ರ ಚಾಂಪಿಯನ್‌ಶಿಪ್ ಪಟ್ಟ ಮುಡಿಗೇರಿಸಿಕೊಂಡಿತು. ಪುರುಷ ಹಾಗೂ ಮಹಿಳೆಯರ ಎರಡು ವಿಭಾಗದಲ್ಲಿ ಮಂಗಳೂರು ವಿವಿ 48(ಪುರುಷರ) ಹಾಗೂ 73(ಮಹಿಳೆಯರ) ಅಂಕಗಳೊಂದಿಗೆ ಒಟ್ಟು 121 ಅಂಕ ಪಡೆದು ಎರಡು ವಿಭಾಗದ ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಮಂಗಳೂರು ವಿವಿ ಎರಡು ವಿಭಾಗಗಳಲ್ಲಿ ಒಟ್ಟು  5 ಚಿನ್ನ, 5 ಬೆಳ್ಳಿ, 7 ಕಂಚಿನ ಪದಕದೊಂದಿಗೆ ಒಟ್ಟು 17 ಪದಕವನ್ನು ಪಡೆದುಕೊಂಡಿತು.  ಪದಕ ವಿಜೇತ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಪದಕಗಳ ವಿವರ ಪುರುಷರ ವಿಭಾಗದಲ್ಲಿ 5000ಮೀ ಓಟದಲ್ಲಿ ಗಗನ ಪ್ರಥಮ, 20ಕೀ.ಮಿ ನಡಿಗೆ ಓಟದಲ್ಲಿ ಸಚಿನ್ ಪ್ರಥಮ,…

Read More

ಪಡುಬಿದ್ರೆ ಬಂಟರ ಸಂಘ ಮತ್ತು ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪಡುಬಿದ್ರೆಯಲ್ಲಿ ದಿವಂಗತ ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಅಂತಾರಾಜ್ಯ ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸೆಮಿಫೈನಲ್ ನಲ್ಲಿ ಬಂಟ್ವಾಳ ತಂಡದ ಎದುರು ಜಯ ಸಾಧಿಸಿದ ಸುರತ್ಕಲ್ ತಂಡ ಫೈನಲ್ ನಲ್ಲಿ ಮಂಜೇಶ್ವರ ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿ ಜಯಿಸಿತು.ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮುನಿಯಾಲು ಉದಯಕುಮಾರ್ ಶೆಟ್ಟಿ ಪ್ರಶಸ್ತಿ ಹಸ್ತಾಂತರಿಸಿದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕ್ರೀಡಾ ಕಾರ್ಯದರ್ಶಿಗಳಾದ ಶಿಶಿರ್ ಶೆಟ್ಟಿ, ಬಬಿತಾ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು 75 ಸಾವಿರ ನಗದು ಮತ್ತು ಪ್ರಶಸ್ತಿಯನ್ನು ಒಳಗೊಂಡಿತ್ತು. ಬಬಿತಾ, ಅಕ್ಷತಾ, ಮಂದಾರ್ತಿ, ಶಿಲ್ಪಾ, ಧನ್ಯ, ನವ್ಯ, ಪ್ರತೀಕ್ಷಾ, ದೀಕ್ಷಾ, ಭಾರತಿ,…

Read More

ತೆಂಕು ಬಡಗು ಯಕ್ಷಗಾನ ರಂಗದ ಚಾರ್ಲಿ ಚಾಪ್ಲಿನ್ ಬಿರುದಾಂಕಿತ ಸೀತಾರಾಮ ಕುಮಾರ್ ಕಟೀಲು ಅವರ ಯಕ್ಷ ಪಯಣದ ಸುವರ್ಣ ಸಂಭ್ರಮಾಚರಣೆಯನ್ನು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ನಾಗವೃಜ ಕ್ಷೇತ್ರ ಪಾವಂಜೆ ಇಲ್ಲಿ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ಸಂಸ್ಮರಣಾ ವೇದಿಕೆಯಲ್ಲಿ ವಿವಿಧ ಯಕ್ಷಗಾನ, ತಾಳಮದ್ದಲೆ, ನೃತ್ಯ ವೈಭವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶ್ರೀ ಕ್ಷೇತ್ರ ಕಟೀಲು ಅನುವಂಶಿಕ ಮೊಕ್ತೇಸರ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ ಹಾಗೂ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಎಡನೀರು ಮಠ ಅವರ ಉಪಸ್ಥಿತಿಯಲ್ಲಿ ಜರಗಿತು. ಈ ಸಂದರ್ಭ ಪುಣೆಯ ಉದ್ಯಮಿ, ಸಮಾಜ ಸೇವಕ, ಪುಣೆ ಬಂಟರ ಸಂಘದ ಉಪಾಧ್ಯಕ್ಷ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಚಾಲಕ, 2024ರ ಸಾಲಿನ ಬಂಟರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ಪ್ರವೀಣ್ ಶೆಟ್ಟಿ ಪುತ್ತೂರು ಅವರಿಗೆ ಯಕ್ಷರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್, ಕಲಾ ಪೋಷಕ ಟಿ…

Read More

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಪುತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಚುನಾವಣಾ ಅಧಿಕಾರಿ ಸುಧೀರ್ ಕುಮಾರ್ ಕೆ. ರವರು ಆಯ್ಕೆ ಪ್ರಕ್ರಿಯೆ ನಡೆಸಿ ನಿರ್ದೇಶಕರ ಹೆಸರನ್ನು ಘೋಷಣೆ ಮಾಡಿದ್ದಾರೆ. ಶಶಿಕುಮಾರ್ ರೈ ಬಾಲ್ಯೊಟ್ಟುರವರು ಇರ್ದೆ ಗ್ರಾಮದ ಬಾಲ್ಯೊಟ್ಟು ನಿವಾಸಿಯಾಗಿದ್ದು, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, 8 ವರ್ಷ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಇರ್ದೆ ಹಾಗೂ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಂದ್ರತೀರ್ಥ ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ, ಪೇರ್ಲತ್ತಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ, ಇರ್ದೆ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾಗಿ, ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾಗಿ, ಸಾರ್ವಜನಿಕ ಶಾರದೋತ್ಸವ ಸಮಿತಿಯಲ್ಲಿ…

Read More

ಮುಂಬಯಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಮಾನಸ್ ವಿ.ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಎಂ.ಸಿ.ಸಿ ಕಾಲೇಜ್ ಮುಲುಂಡ್ ಇಲ್ಲಿ ಪದವೀಧರರಾಗಿದ್ದು ಥಾಣೆಯ ವಾಗ್ಲೇ ಎಸ್ಟೇಟ್‌ನ ಹೆಸರಾಂತ ಸಿಎ ಕಂಪನಿಯಲ್ಲೊಂದಾದ ಪಂಕಜ್ ಪರೇಖ್ ಆಂಡ್ ಕಂಪೆನಿಯಲ್ಲಿ ಆರ್‌ಟಿಕಲ್‌ಸಿಫ್‌ನ್ನು ಮಾಡುತ್ತಿದ್ಡಾರೆ.  ಮಾನಸ್ ಶೆಟ್ಟಿ ಇವರು ಬೋಳ ಪರಾರಿ ವಿನಯ್ ಪಿ.ಶೆಟ್ಟಿ ಮತ್ತು ಮೂಲ್ಕಿ ಕಕ್ಕ ಪರಾರಿ ರೇಷ್ಮಾ ವಿ.ಶೆಟ್ಟಿ ದಂಪತಿ ಸುಪುತ್ರರಾಗಿದ್ದಾರೆ.

Read More

ಮುಂಬಯಿ: ಕರುನಾಡಿನಲ್ಲಿ ಆಚರಿಸುವ ಕರ್ನಾಟಕ ರಾಜ್ಯೋತ್ಸವವು ಬರೇ ಕರ್ನಾಟಕದಲ್ಲಿ ಅಲ್ಲ ಇಡೀ ಭಾರತ ದೇಶದಲ್ಲಿ ಎಲ್ಲ ಕನ್ನಡಿಗರು ಒಟ್ಟಿಗೆ ಸೇರಿ ಆಚರಿಸುತ್ತಿರುವುದು ಅಭಿನಂದನೀಯ. ಕರ್ನಾಟಕ ರಾಜ್ಯೋತ್ಸವಕ್ಕೆ ತುಂಬಾ ಮಹತ್ವವಿದೆ. ಯಾಕೆಂದರೆ ನಮಗೆ ನಮ್ಮ ರಾಜ್ಯದ ಮೇಲೆ ಇರುವ ಪ್ರೀತಿ ಮತ್ತು ಜನ್ಮಭೂಮಿಯಲ್ಲಿರುವಂತಹ ವಿಶ್ವಾಸ. ಈ ಸಡಗರವನ್ನು ಇಂದಿಲ್ಲಿ ಮುಂಬಯಿಯಲ್ಲಿ ಆಚರಿಸುತ್ತಿರುವುದು ಅರ್ಥಪೂರ್ಣ. ಸಾಂಸ್ಕೃತಿಕ ಕಾರ್ಯಕ್ರಮ ಕಾಣುವಾಗ ಕನ್ನಡ, ನಮ್ಮ ರಾಜ್ಯ, ಸಂಸ್ಕೃತಿ ಏನೆಂದು  ಭಾವೀ ಜನಾಂಗಕ್ಕೆ ತಿಳಿಸಿ ಕೊಟ್ಟಂತಾಗುವುದು ಜೊತೆಗೆ ಅವರನ್ನು ಕನ್ನಡಕ್ಕೆ ಸೇರಿಸಿದಂತಾಗುವುದು. ಎಲ್ಲಾ ಕನ್ನಡಿಗರು ಒಟ್ಟಿಗೆ ಸೇರಬೇಕು. ನಮ್ಮ ರಾಜ್ಯದ ಪ್ರೀತಿಯನ್ನು ತೋರಿಸಬೇಕು. ಅಲ್ಲಿಯ ಸಂಸ್ಕೃತಿಯನ್ನು ಮುಂಬಯಿಯಲ್ಲಿ ಬೆಳೆಸಿ, ಊಳಿಸಬೇಕು ಎಂದು ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿ ತಿಳಿಸಿದರು. ಇಂದಿಲ್ಲಿ ಭಾನುವಾರ ಮಧ್ಯಾಹ್ನ ಕುರ್ಲಾ ಪೂರ್ವದ ಚುನ್ನಾಭಟ್ಟಿ ಇಲ್ಲಿನ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ಒಕ್ಕಲಿಗರ ಸಂಘ…

Read More

ವಿದ್ಯಾಗಿರಿ: ನಿಮ್ಮ ಅಮೂಲ್ಯ ಸಮಯವನ್ನು ನಿಮ್ಮ ಮಕ್ಕಳಿಗಾಗಿ ಮೀಸಲಿಡಿ. ದಿನಕ್ಕೆ ಕನಿಷ್ಠ ೩೦ ನಿಮಿಷಗಳನ್ನಾದರೂ ಮಕ್ಕಳ ಜೊತೆ ಕಳೆಯಿರಿ ಎಂದು ಮಂಗಳೂರಿನ ಇಸ್ಕಾನ್ ಒಕ್ಕೂಟದ ಮುಖ್ಯಸ್ಥ ಶ್ವೇತಾದ್ವೀಪ ದಾಸ ಹೇಳಿದರು. ಆಳ್ವಾಸ್  ಕೃಷಿ ಸಿರಿ ವೇದಿಕೆಯಲ್ಲಿ ಸೋಮವಾರ ನಡೆದ ಆಳ್ವಾಸ್ ಕಿಂಡರ್‌ಗಾರ್ಟನ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ಮಕ್ಕಳಿಗೆ ಸ್ಮಾರ್ಟ್ ಫೋನ್, ಅಲೆಕ್ಸಾ, ಲ್ಯಾಪ್‌ಟಾಪ್‌ಗಿಂತಲೂ ಮುಖ್ಯವಾದ್ದದ್ದು ಪೋಷಕರ ಸಮಯ. ಮಕ್ಕಳ ಜೊತೆ ಕುಳಿತು ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ. ಇದರಿಂದ ಮಕ್ಕಳಿಗೂ ಹೊಸ ವಿಷಯಗಳ ಕುರಿತು ತಿಳಿಯುವ ಕುತೂಹಲ ಹೆಚ್ಚುತ್ತದೆ ಎಂದರು. ನಿಮ್ಮ ಕನಸುಗಳನ್ನು ನಿಮ್ಮ ಮಕ್ಕಳ ಮೇಲೆ ಹೇರಬೇಡಿ. ಅವರೇ ಸ್ವಯಂ ಕನಸು ಕಾಣಲಿ ಎಂದು ಸಲಹೆ ನೀಡಿದರು.   ಮಕ್ಕಳ ಪೋಷಣಾ ವಿಧಾನ ಬದಲಾಗುತ್ತಾ ಇರುತ್ತದೆ. ಪ್ರತಿ ಹಂತದಲ್ಲೂ ಯಾವ ವಿಷಯ ಮಕ್ಕಳಿಗೆ ಒಳಿತು -ಕೆಡುಕು ಎಂಬುದನ್ನು ತಿಳಿದುಕೊಳ್ಳಬೇಕು.ನಿರಾಕರಣೆಯನ್ನೂ ಸ್ವೀಕರಿಸುವ ಮನೋಭಾವ ಮಕ್ಕಳಲ್ಲಿ ವೃದ್ಧಿಯಾಗಬೇಕು. ಮಕ್ಕಳೊಂದಿಗೆ ಮಾತೃ ಭಾಷೆಯಲ್ಲೂ ಮಾತನಾಡುವ ಅಭ್ಯಾಸ ಬೆಳಿಸಿದಾಗ ಅವರ ಜ್ಞಾನಶಕ್ತಿಯು ಹೆಚ್ಚುತ್ತದೆ ಎಂದರು. ಆಳ್ವಾಸ್ ಶಿಕ್ಷಣ…

Read More

ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಠದ ನೂತನ ಸಂಚಾಲಕರಾಗಿ ಬೋಳ ಸದಾಶಿವ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಡಿಸೆಂಬರ್ 28ರಂದು ಸಹಕಾರ ಭಾರತಿಯ ರಾಜ್ಯಾಧ್ಯಕ್ಷರಾದ ಪ್ರಭುದೇವ ಆರ್ ಮಾಗನೂರ್ ಅವರು ಉಡುಪಿ ಕಿಸಾನ್ ಸಭಾ ಸಭಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ಸಹಕಾರ ಭಾರತಿ ಕಾರ್ಯಕಾರಿಣಿಯಲ್ಲಿ ರಾಜ್ಯದ ಹಾಲು ಪ್ರಕೋಷ್ಠದ ನೂತನ ಸಂಚಾಲಕರಾಗಿ ಬೋಳ ಸದಾಶಿವ ಶೆಟ್ಟಿ ಅವರ ಆಯ್ಕೆಯನ್ನು ಘೋಷಿಸಿ ಜವಾಬ್ದಾರಿಯನ್ನು ನೀಡಿದರು. ಬೋಳ ಸದಾಶಿವ ಶೆಟ್ಟಿಯವರು ಕಳೆದ ಎರಡು ಅವಧಿಗಳಲ್ಲಿ ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಈ ಸಂದರ್ಭ ರಾಜ್ಯದ ನೂತನ ಪ್ರಧಾನ ಕಾರ್ಯದರ್ಶಿಗಳಾದ ಸಾಣೂರು ನರಸಿಂಹ ಕಾಮತ್, ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ, ರಾಜ್ಯ ಸಂಘಟನಾ ಪ್ರಮುಖರಾದ ಮಂಜುನಾಥ, ರಾಜ್ಯ ಮಹಿಳಾ ಪ್ರಮುಖರಾದ ವಿದ್ಯಾ ಪೈ, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಮಂಜುನಾಥ ಎಸ್. ಕೆ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೇಶ್ ನಾಯಕ್ ಹಾಗೂ ಸಂಘಟನಾ ಕಾರ್ಯದರ್ಶಿ ಸುಜಿತ್ ಶೆಟ್ಟಿ ಉಪಸ್ಥಿತರಿದ್ದರು.

Read More

ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದ 8ನೇ ವರ್ಷದ ‘ಮಂಗಳೂರು ಕಂಬಳ’ಕ್ಕೆ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಇಂದು (ಡಿ.28) ಚಾಲನೆ ನೀಡಲಾಯಿತು. ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ತಂದೆ, ಎಂಆರ್‌ಪಿಎಲ್‌ನ ನಿವೃತ್ತ ಆಡಳಿತ ನಿರ್ದೇಶಕರಾದ ಎಂ.ವೆಂಕಟೇಶ್‌ ಅವರು ಕಂಬಳಕ್ಕೆ ಚಾಲನೆ ನೀಡಿದರು. ಮಾಜಿ ಮೇಲ್ಮನೆ ಸದಸ್ಯ ಕ್ಯಾ. ಗಣೇಶ್‌ ಕಾರ್ಣಿಕ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ. ವಿ.ಕುಲಪತಿ ಪಿ.ಎಲ್ ಧರ್ಮ, ಚಿತ್ತರಂಜನ್, (ಬ್ರಹ್ಮಬೈದರ್ಕಳ ಗರೋಡಿ), ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ, ಪ್ರಮುಖರಾದ ಪ್ರದೀಪ್ ಕುಮಾರ್ ಕಲ್ಕೂರ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಟೀಲು ಅನಂತ ಪದ್ಮನಾಭ ಆಸ್ರಣ್ಣ, ಜಯರಾಮ್ ಶೆಟ್ಟಿ, ಕಾರ್ಪೊರೇಟರ್ ಕಿರಣ್ ಕೋಡಿಕಲ್, ಮಂಗಳೂರು ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅನಿಲ್ ಕುಮಾರ್, ತರ್ಜನಿ ಕಮ್ಯುನಿಕೇಶನ್ ಸಂಸ್ಥೆಯ ಸಂಜಯ ಪ್ರಭು, ಮಾಜಿ ಮೇಯರ್…

Read More

ಕರಾವಳಿಯ ಯಕ್ಷಗಾನ ಕಲೆಯನ್ನು ಪ್ರಸ್ತುತ ಕಾಲಘಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಪಸರಿಸುತ್ತಿರುವ ಹಾಗೂ ತನ್ಮೂಲಕ ಯಕ್ಷಗಾನದ ಕಲಾವಿದರಿಗಲ್ಲದೇ ಇತರೇ ವಿವಿಧ ಪ್ರಕಾರದ ಅಶಕ್ತರ ಬಾಳಿಗೆ ಬೆಳಕಾಗಿ ಮೂಡಿಬಂದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ 10ನೇ ವರ್ಷದ ಪಟ್ಲ ಸಂಭ್ರಮ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರಗಿಸುವ ಕುರಿತಾಗಿ ಫೌಂಡೇಶನ್ನಿನ ಮಹಾದಾನಿಗಳ, ಮಹಾಪೋಷಕರ, ಟ್ರಸ್ಟಿಗಳ, ವಿವಿಧ ಪ್ರಾದೇಶಿಕ ಘಟಕಗಳ ಪದಾಧಿಕಾರಿಗಳ ಹಾಗೂ ಪಟ್ಲ ಅಭಿಮಾನಿಗಳ ಸಮಲೋಚನಾ ಸಭೆಯು ಪ್ರತಿಷ್ಠಿತ ಗೋಲ್ಡ್ ಪಿಂಚ್ ಹೋಟೆಲ್ ಸಭಾಂಗಣದಲ್ಲಿ ಜರಗಿತು. ಸಭೆಯ ವೇದಿಕೆಯಲ್ಲಿ ಟ್ರಸ್ಟಿನ ಗೌರವಾಧ್ಯಕ್ಷರು, ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿ, ಡಾ| ಕೆ ಪ್ರಕಾಶ್ ಶೆಟ್ಟಿ (MRG Group), ಟ್ರಸ್ಟಿನ ಸಂಚಾಲಕರಾದ ಐಕಳ ಹರೀಶ್ ಶೆಟ್ಟಿ, ಮಹಾಪೋಷಕರಾದ ಕೆ.ಎಂ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಾಡಿ, ಸಂತೋಷ್ ಶೆಟ್ಟಿ ಪೂನಾ, ಕರ್ನಿರೆ ವಿಶ್ವನಾಥ ಶೆಟ್ಟಿ, ಸವಣೂರು ಸೀತಾರಾಮ ರೈಯವರು ಉಪಸ್ಥಿತರಿದ್ದು, ದಶಮಾನೋತ್ಸವ ಸಂಭ್ರಮವು ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯಕ್ರಮವಾಗಲಿ, ಕಾರ್ಯಕ್ರಮದ ಯಶಸ್ಸಿಗೆ ಗರಿಷ್ಠ ಮೊತ್ತದ ದೇಣಿಯನ್ನು ನೀಡಿ…

Read More