Author: admin
ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವ ಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಶ್ರೀಶಾಂತ್ ಕೆ ಮತ್ತು ದ್ವಿತೀಯ ಪಿಯುಸಿಯ ಪ್ರಜ್ವಲ್ ಎಸ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಎಂಕುಲು ಎಲ್ಯ ಉಪ್ಪುನಗ ಅಮ್ಮ ಯಾಪಾಲ ಪನೊಂದು ಇತ್ತೆರ್, ನಮ್ಮ ಬಾಯಿಡ್ ಎಪಲ ಎಡ್ಡೆ ಪಾತೆರ ಪನೊಂದ್ ಉಪ್ಪುಡುಗೆ. ಅವುಲ ಪೋಸಗ್ ಬಾಯಿರ್ದ್ ಬೊರ್ಚಾಂದಿನ ಪಾತೆರ ಬರ್ರೆ ಬಲ್ಲಿಗೆ. ದಾಯೆಗ್ ಪಂಡ ದೇವೆರ್ ಗೆ ಯಾಪಾಲ ತಥಾಸ್ತು ತಥಾಸ್ತು ಪಂದ್ ಪನೊಂದ್ ಉಪ್ಪುವೆರ್ ಗೆ. ಅಪಗ ನಮ್ಮ ಬಾಯಿರ್ದ್ ಬೊರ್ಚಾಂದಿನ ಪಾತೆರ ಬತ್ತ್ಂಡ ಅವು ಅಂಚೆನೆ ಅಪುಂಡ್ಗೆ. ಆ ಪೋರ್ತ್ ಗ್ ದೇವೆರೆನ ನಾಮಸ್ಮರಣೆ ಮಲ್ಪೊಡ್ ಗೆ. ಆಯ್ಕಾದ್ ಬಯ್ಯದ ಪೋರ್ತುಗ್ ಭಜನೆ ಪನೊಂದ್ ಇತ್ತ. ಅಂಚನೆ ನಮ ಯಾಪಾಲ ಲಾಯಿಕ್ ದ ಪಾತೆರ ಪನೊಂದ್ ಉಪ್ಪೋಡ್ ಪಂದ್ ನಮ್ಮ ಅಮ್ಮಾ ಪನೊಂದ್ ಇತ್ತೆರ್. ಅದಗ ಯಂಕ್ ಉಂದೆತ ಮಿತ್ತ್ ಸಂಶಯ ಬರೋಂದ್ ಇತ್ತ್ಂಡ್. ಉಂದ್ ಸತ್ಯ ಉಪ್ಪುವ? ದೇವೆರ್ನ ತಥಾಸ್ತು ನಂಕ್ ಎಂಚ ತಾಗ್ ನು ಪಂದ್. ಆಂಡಲ ‘ಅಮ್ಮ ಪಂಡಿನ ವೇದ ವಾಕ್ಯ’ದಂಚ ನಂಬೊಂದ್ ಇತ್ತ. ಬೊಕ್ಕ ಯಾನ್ ಕಾಲೇಜುಡ್ ಭೌತಶಾಸ್ತ್ರ ಕಲ್ತೊಂದು ಉಪ್ಪುನಗ, ಅವುಲ್ ಫಿಸಿಕ್ಸ್ ದ…
ನಾನು ನನ್ನ ಈ ಮೊದಲಿನ ಲೇಖನಗಳ ಸಾಲುಗಳನ್ನೆ ಇಲ್ಲಿಯೂ ಪುನರುಚ್ಛರಿಸುವುದಾದರೆ ನಮ್ಮ ಬಂಟ ಸಮುದಾಯದ ವಿದ್ಯಾವಂತ ಯುವಕರು ಒಂದು ಕಾಲದಲ್ಲಿ ಯಾರೂ ಆಸಕ್ತಿ ತೋರದ ಆದರೆ ತಮ್ಮ ಇಚ್ಛಾಶಕ್ತಿ, ಸತತ ಪರಿಶ್ರಮ, ಸಾಧನೆ ಮೂಲಕ ಯಾವ ಹೊಸ ಉದ್ಯಮಗಳನ್ನೂ ಮಾರುಕಟ್ಟೆಗೆ ಪರಿಚಯಿಸಿ ಗ್ರಾಹಕರು ಅಚ್ಚರಿ ಕಣ್ಣುಗಳಿಂದ ನೋಡುವಂತೆ ಮಾಡಬಲ್ಲರು ಎನ್ನುವುದಕ್ಕೆ ಮಣಿಪಾಲದಲ್ಲಿ ಬಿ.ಕಾಂ.ಶಿಕ್ಷಣ ಮುಗಿಸಿ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಕಾಲ ಕೆಲಸ ಮಾಡಿದರೂ ಉದ್ಯೋಗ ಸಂತೃಪ್ತಿ ಇಲ್ಲದೆ ಹುಟ್ಟೂರಿಗೆ ಆಗಮಿಸಿ ಯಾವುದೆ ರೀತಿಯ ಕಲಬೆರಕೆ ಮಸಾಲ ಮಿಕ್ಸ್ ಇಲ್ಲದ ಸಾದ ಚಹಾ ಪುಡಿಯ ಸ್ವಾದವನ್ನು, ಪರಿಮಳವನ್ನು ಉಡುಪಿ ಪರಿಸರದಲ್ಲಿ ಪಸರಿಸಿದ ರೋಚಕ ವೃತ್ತಾಂತ ಇಲ್ಲಿದೆ ಓದಿ. ಯುವಕನ ಅನ್ವರ್ಥ ನಾಮ ಪ್ರಶಾಂತ ಹೌದು ಪ್ರಶಾಂತ ಸ್ವಭಾವದ ಆದರೆ ಪರಿಶ್ರಮಕ್ಕೆ ಪರ್ಯಾಯ ಇಲ್ಲ ಎನ್ನುವ ಪ್ರಶಾಂತ್ ಕನಸು ಈಗ ನನಸಾಗಿ ಉಡುಪಿ ಟೀ ಲೇಬಲ್ ಮಾನ್ಯತೆ ಪಡೆದು ಜನಮಾನ್ಯತೆ ಬೇಡಿಕೆ ಪಡೆದ ಈ ಕತೆ ಒಂದೇ ದಿನದಲ್ಲಿ ಬರೆದುದಲ್ಲ. ಗ್ರಾಹಕರಲ್ಲಿ ತಮ್ಮ ಉತ್ಪಾದನೆ ಕುರಿತಂತೆ…
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಮುಂಬೈಗೆ ಆಗಮಿಸಿದ ಡಾ. ಪಿ ವಿ ಶೆಟ್ಟಿಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಭವ್ಯ ಸ್ವಾಗತ
ಕರ್ನಾಟಕ ಸರಕಾರದ ಅತ್ಯುನ್ನತ ಗೌರವಾನ್ವಿತ ಪ್ರಶಸ್ತಿ ‘ಕರ್ನಾಟಕ ರಾಜ್ಯೋತ್ಸವ’ ಪ್ರಶಸ್ತಿಯನ್ನು ನವೆಂಬರ್ 1 ರಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹಿತ ರಾಜ್ಯದ ಗೌರವಾನ್ವಿತ ಮಂತ್ರಿಗಳ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಮುಂಬೈಗೆ ಆಗಮಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ, ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಮಾಜಿ ಜೊತೆ ಕಾರ್ಯದರ್ಶಿಯಾದ ಡಾ. ಪಿ ವಿ ಶೆಟ್ಟಿ ಶಿಮಂತೂರು ನಡಿಗುತ್ತು ಅವರನ್ನು ನವೆಂಬರ್ 2 ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮತ್ತು ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಪ್ರಶಸ್ತಿಯೊಂದಿಗೆ ಮುಂಬೈಗೆ ಆಗಮಿಸಿದ ಡಾ. ಪಿ ವಿ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಶಕೀಲಾ ಪಿ ಶೆಟ್ಟಿ ದಂಪತಿಯನ್ನು ಐಕಳ ಹರೀಶ್ ಶೆಟ್ಟಿಯವರು ಶಾಲು, ಮೈಸೂರು ಪೇಟ, ಬೃಹತ್ ಹೂವಿನ ಹಾರದೊಂದಿಗೆ ಅಭಿನಂದಿಸಿದರು. ಈ ಸಂದರ್ಭದಲ್ಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ…
ಭಾರತದ ನಿಜವಾದ ಶಕ್ತಿ ಅದರ ವೈವಿಧ್ಯತೆಯಲ್ಲಿ ಅಡಗಿದೆ. ದೇಶದ ಪ್ರತಿಯೊಂದು ಭಾಗದ ಸಂಸ್ಕೃತಿ ಮತ್ತು ಪರಂಪರೆಗಳು ಭಾರತದ ಅಸ್ತಿತ್ವವನ್ನು ಶ್ರೀಮಂತಗೊಳಿಸಿವೆ. ಪರಸ್ಪರ ಗೌರವ, ಸಹಬಾಳ್ವೆ ಮತ್ತು ಒಗ್ಗಟ್ಟಿನ ಮನೋಭಾವವೇ ನಿಜವಾದ ಏಕತೆಯ ಮೂಲ ಎಂದು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡು ರಾವ್ ಹೇಳಿದರು. ಅವರು ಮಿಜಾರಿನ ಆಳ್ವಾಸ್ ತಾಂತಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಾರ್ತ್ ಈಸ್ಟರ್ನ್ ಪೀಪಲ್ಸ್ ಅಸೋಸಿಯೇಷನ್ (ನೇಪಮ್) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ನೇಪಮ್ ಫ್ರೆಶರ್ಸ್ ಮೀಟ್ ೨೦೨೫ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ ಸೌಂದರ್ಯ ಅದರ ವೈವಿಧ್ಯತೆಯಲ್ಲಿ ಅಡಗಿದೆ. ಪರಸ್ಪರದ ಭಿನ್ನತೆಯನ್ನು ಗೌರವಿಸಿ, ಸಾಮಾನ್ಯ ಮೌಲ್ಯಗಳಲ್ಲಿ ಒಂದಾಗುವ ಮನೋಭಾವವೇ ನಮ್ಮ ದೇಶದ ಶಕ್ತಿ. ಈಶಾನ್ಯ ಭಾರತದ ಜನರು ಕರ್ನಾಟಕದ ಜೀವನದ ಅಂಗವಾಗಿ ಬೆರೆತು, ರಾಷ್ಟ್ರದ ಏಕತೆಯನ್ನು ಬಲಪಡಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ…
“ಅಭಿಮತ” ವಾಹಿನಿಯ ಮುಖ್ಯಸ್ಥೆಯಾಗಿರುವ ಡಾ| ಮಮತಾ ಪಿ.ಶೆಟ್ಟಿಯವರಿಗೆ 2025 ರ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗೌರವವು ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ದೊರೆತಿದೆ. ತಮ್ಮ ವೃತ್ತಿ ಜೀವನದ ಪ್ರಯಾಣವನ್ನು ಸುದ್ದಿ ವಾಚಕಿಯಾಗಿ, ಕಾರ್ಯಕ್ರಮ ನಿರೂಪಕಿಯಾಗಿ ಆರಂಭಿಸಿದ ಅವರು ಬಳಿಕ ಕಾರ್ಯಕ್ರಮ ನಿರ್ಮಾಪಕರಾಗಿ ಈಗ ಸ್ವಂತ ವಾಹಿನಿ “ಅಭಿಮತ” ದ ಮುಖ್ಯಸ್ಥೆಯಾಗಿ ಮುನ್ನಡೆಸುತ್ತಿದ್ದಾರೆ. ನಿರಂತರ ಕಲಿಕೆಯಿಂದ ಆಧುನಿಕ ಇಲೆಕ್ಟ್ರಾನಿಕ್ ಮಾಧ್ಯಮದ ತಾಂತ್ರಿಕ ಸಂಗತಿಗಳು ಮತ್ತು ಅವುಗಳ ನಿರ್ವಹಣೆಯನ್ನು ಕೈವಶ ಮಾಡಿಕೊಂಡಿರುವ ಅವರು ಸದಾ ಅನ್ವೇಷಣೆ, ನಾವಿನ್ಯತೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ. ತಮ್ಮ ಸಂಸ್ಥೆಯಲ್ಲಿ ಮಹಿಳೆಯರಿಗೆ ಆದ್ಯತೆಯಲ್ಲಿ ಉದ್ಯೋಗ ನೀಡಿದ್ದಾರೆ. ತುಳು ಸಂಸ್ಕೃತಿಯ, ಪರಂಪರೆಯ ಕುರಿತಾದ ಆಳವಾದ ಜ್ಞಾನ, ಕೆಲವು ನಂಬಿಕೆಗಳ ಕುರಿತಾಗಿ ಅವರು ನವೀನ ರೀತಿಯಲ್ಲಿ ಯೋಚಿಸುವಂತೆ ಮಾಡಿದೆ. ಮಂಚಿ ಸಾಲೆತ್ತೂರಿನಂತಹ ಗ್ರಾಮೀಣ ಪ್ರದೇಶದಿಂದ ಬಂದ ಡಾ| ಮಮತಾ ಪಿ ಶೆಟ್ಟಿಯವರು ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಳುವಾಗಿದ್ದವರು. ಕಾಲೇಜು ಚಾಂಪಿಯನ್, ರಾಜ್ಯ ಮಟ್ಟದಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದವರು. ಸ್ಕೌಟ್ಸ್ ಗೈಡ್ಸ್ ಕ್ಷೇತ್ರದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ…
ಉಡುಪಿ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಮಿತಿಯವರು ನವೆಂಬರ್ 01 ರ ಶನಿವಾರ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ, ಜಾನಪದ ಅಧ್ಯಯನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಡಾ| ನಿತ್ಯಾನಂದ ಶೆಟ್ಟಿ ಅಂಪಾರುರವರನ್ನು 2025ರ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಪತ್ರವನ್ನು ಕರ್ನಾಟಕ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳಕರ್ ಹಾಗೂ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಆಚರಣ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾಗಿರುವ ಶ್ರೀಮತಿ ಸ್ವರೂಪಾ. ಟಿ ಕೆ ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ವಹಿಸಿದರು. ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರ್ಮೆ…
ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಒಂದಾಗಿ ಕಲಿಯುವ ಈ ನೆಲದಲ್ಲಿ ಭಾಷೆ ಒಗ್ಗೂಡಿಸಲಿ, ಮನಸ್ಸು ಬೆಳಗಲಿ – ವಿವೇಕ್ ಆಳ್ವ
ಕರ್ನಾಟಕದ ಏಕೀಕರಣ ಸುದೀರ್ಘ ಕಾಲದ ಹೋರಾಟದ ಫಲವಾಗಿದ್ದು, ಈ ಹೋರಾಟವನ್ನು ಅರಿತುಕೊಳ್ಳುವುದರಿಂದ ಕನ್ನಡದ ಇತಿಹಾಸ ಪ್ರಜ್ಞೆ ಮತ್ತು ರಾಜ್ಯೋತ್ಸವದ ಮಹತ್ವ ಅರಿಯಲು ಸಾಧ್ಯ ಎಂದು ಆಳ್ವಾಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ಹೇಳಿದರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರದಂದು ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕನ್ನಡ ರಾಜ್ಯೋತ್ಸವ ಕೇವಲ ಆಚರಣೆಗೆ ಸೀಮಿತವಲ್ಲ. ಅದು ನಮ್ಮ ಗುರುತು, ಆತ್ಮಗೌರವ ಮತ್ತು ಒಗ್ಗಟ್ಟಿನ ಸಂಕೇತ. ಇಲ್ಲಿನ ಜನರ ಸಂಸ್ಕೃತಿ, ಭಾಷೆ, ಕಲೆ ಮತ್ತು ಧರ್ಮಗಳ ವೈವಿಧ್ಯತೆಯಿಂದಾಗಿ, ಕರ್ನಾಟಕವನ್ನು ಬಹುಸಂಸ್ಕೃತಿಯ ಆಡುಂಬೊಲವನ್ನಾಗಿಸಿದೆ. ನಮ್ಮ ನಾಡಗೀತೆಯಲ್ಲಿ ಕವಿ ಕುವೆಂಪು ಅವರು ಕರ್ನಾಟಕವನ್ನು ಭಾರತದ ಮಗಳಾಗಿ ಚಿತ್ರಿಸಿದ್ದಾರೆ. ಭಾರತದ ಅಖಂಡತೆಗೆ ಕರ್ನಾಟಕ ಪೂರಕವಾಗಿದೆ. ಭಾಷೆ ಉಳಿಯಬೇಕಾದದ್ದು ಹೃದಯದಲ್ಲಿ. ನಮ್ಮ ಭಾಷೆಯ ಮೇಲೆ ಅಭಿಮಾನ ಇರಬೇಕು, ಆದರೆ ಅಂಧಾಭಿಮಾನ ಇರಕೂಡದು. ಕನ್ನಡದ ಮೊದಲ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಯವರು ಕೊಂಕಣಿ ಮಾತೃಭಾಷೆಯವರಾದರೂ ಕನ್ನಡದಲ್ಲಿ ಅನೇಕ ಅಮೂಲ್ಯ ಕೃತಿಗಳನ್ನು ರಚಿಸಿ,…
ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಿಜಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಮೂಡುಬಿದಿರೆ ತಾಲೂಕು, ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯ ವಿಮುಕ್ತಿ ಚಿಕಿತ್ಸಾ ಕೇಂದ್ರ, ಮಿಜಾರು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನೆ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 2000ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮಿಜಾರಿನ ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ನಾನೇ ಸ್ವತಃ ಮದ್ಯ ವ್ಯಸನದ ವಿರುದ್ಧ ಸದಾ ಹೋರಾಡುತ್ತ ಬಂದವನು. ಸುಖದಲ್ಲಾಗಲಿ ದುಃಖದಲ್ಲಾಗಲಿ ನಾನು ಎಂದಿಗೂ ಮದ್ಯವನ್ನು ಸ್ಪರ್ಶಿಸಿದವನಲ್ಲ. ಮದ್ಯಪಾನ ಮಾಡಿದವನ ಮನಸ್ಸು ಅವನ ಸ್ವಾಧೀನದಲ್ಲಿರುವುದಿಲ್ಲ. ನಮ್ಮ ರಾಜ್ಯದಲ್ಲಿ 11,700 ಕ್ಕೂ ಹೆಚ್ಚು ಮದ್ಯದಂಗಡಿಗಳು ಇರುವುದೇ ಒಂದು ವಿಷಾದಕರ ಸ್ಥಿತಿ. ನಮ್ಮನ್ನು ಆಳುವ ಸರ್ಕಾರಗಳು ಮಧ್ಯಪಾನ ಅಥವಾ…
“ಉಗಮ-೨೦೨೫” ಡಾ. ಬಿ. ಬಿ ಹೆಗ್ಡೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ‘ಅಂತರ್ ಕಾಲೇಜು ಪೆಸ್ಟ್-೨೦೨೫’ ಉಡುಪಿ ಜಿಲ್ಲಾ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ೧೬ ಕಾಲೇಜುಗಳಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ತಂಡವು ಉಡುಪಿ ಜಿಲ್ಲೆಗೆ ಪ್ರಥಮ ಚಾಂಪಿಯನ್ಶಿಫ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಥಮ ೦೩, ದ್ವಿತೀಯ ೦೨, ಹಾಗೂ ತೃತೀಯ ೦೧ ಪ್ರಶಸ್ತಿಗಳೊಂದಿಗೆ ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ಚಾಂಪಿಯನ್ಶಿಫ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಸಾಧನೆಯನ್ನು ಮಾಡಿದ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು ಎಂ. ಮಹೇಶ್ ಹೆಗ್ಡೆ, ಪ್ರಾಂಶುಪಾಲರು ನಾಗರಾಜ್ ಶೆಟ್ಟಿ ಹಾಗೂ ಬೋಧಕ- ಬೋಧಕೇತರ ವರ್ಗದವರು ಶುಭಹಾರೈಸಿದ್ದಾರೆ.















