Author: admin

ಕೊಣಾಜೆ ಮಂಗಳ ಗಂಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ ‘ವೇವ್ಸ್ -2025’ರಲ್ಲಿ ಸಂಗೀತ, ರಂಗಕಲೆ, ನೃತ್ಯ ಹಾಗೂ ಸಾಹಿತ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು, ಎಲ್ಲಾ ಐದು ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮೆರೆದು ಸತತ 24 ವರ್ಷ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಒಟ್ಟು ನಡೆದ 27 ಸ್ಪರ್ಧೆಗಳಲ್ಲಿ 16 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನದೊಂದಿಗೆ ಒಟ್ಟು 22 ಸ್ಥಾನಗಳಲ್ಲಿ ಪ್ರಶಸ್ತಿಯನ್ನು ಗಳಿಸಿ ಈ ಸಾಧನೆ ಮೆರೆದಿದೆ. ಸಾಧನೆ ಮೆರೆದ ವಿದ್ಯಾರ್ಥಿಗಳಿಗೆ ಡಾ. ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

Read More

ಮಕ್ಕಳ ಬಾಲ್ಯ ಎಂದರೆ ಕುತೂಹಲದ ಜಗತ್ತು. ಏಕೆ? ಹೇಗೆ? ಸಾಧ್ಯವೇ? ಎಂಬ ಅನೇಕ ಪ್ರಶ್ನೆಗಳೆ ಅವರ ಮನದಲ್ಲಿ ಮೂಡುತ್ತಿರುತ್ತವೆ. ಹೊಸದನ್ನು ಮಾಡಬೇಕು, ಕಂಡು ಹಿಡಿಯಬೇಕು ಎನ್ನುವ ಕಾತರ. ಆದರೆ ತರಗತಿಗಳು ಮೇಲಕ್ಕೆ ಏರಿದಂತೆ ಈ ಗುಣಗಳು ನಿಧಾನವಾಗಿ ಕ್ಷೀಣಿಸುತ್ತಾ ಸಾಗುತ್ತವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನುಡಿದರು. ಅವರು ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ ಎಂಟನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದರು. ಈ ಪರಿವರ್ತನೆಗೆ ನಮ್ಮ ಶಿಕ್ಷಣ ಪದ್ಧತಿ, ಶಿಕ್ಷಕರು ಹಾಗೂ ಪೋಷಕರು ಮುಖ್ಯ ಕಾರಣವಾಗಿದ್ದಾರೆ. ಮಕ್ಕಳ ಕುತೂಹಲ ಬೆಳೆಯುವುದು ಅವರ ಪ್ರಶ್ನೆಯನ್ನು ಜೀವಂತವಾಗಿಡುವ ಮೂಲಕ. ಶಿಕ್ಷಕರು ಎಲ್ಲವನ್ನೂ ಬೋಧಿಸಬೇಕಾಗಿಲ್ಲ, ಬದಲಿಗೆ ತಿಳಿಯುವ ಆಸೆ ಉಳಿಯುವಂತೆ ಬೆಂಬಲಿಸಬೇಕು. ಪೋಷಕರು ಪಾಠವನ್ನು ಕೇವಲ ಪುಸ್ತಕದಲ್ಲಿ ಅಲ್ಲ, ಜೀವನದಲ್ಲೂ ಕಂಡುಕೊಳ್ಳುವಂತೆ ಮಾರ್ಗದರ್ಶನ ನೀಡಬೇಕು. ಪೋಷಕರು ಪ್ರೋತ್ಸಾಹಿಸಿದರೆ ಕುತೂಹಲದಿಂದ ಕಲಿಯುವ ಮಗು ನಾಳೆ ಸಮಾಜಕ್ಕೆ ಜವಾಬ್ದಾರಿಯುತ, ವಿಚಾರಶೀಲ, ಮೌಲ್ಯಯುತ ನಾಗರೀಕನಾಗುತ್ತಾನೆ. ಇದೇ ನಿಜವಾದ ಶಿಕ್ಷಣದ ಗುರಿ…

Read More

ವಿಟ್ಲ ಪಟ್ಟಣ ಪಂಚಾಯತ್ ನ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಎರಡು ಬಾರಿ ಪಟ್ಟಣ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಹಿರಿಯ ಅನುಭವಿ ರಾಜಕಾರಣಿಯಾಗಿದ್ದು, ಅನೇಕ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್ ನ ಚುನಾಯಿತ ಮಂಡಳಿಯ ಮೊದಲ ವರ್ಷದ ಸ್ಥಾಯಿ ಸಮಿತಿಯ ಅವಧಿ ಮುಗಿದಿರುವುದರಿಂದ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆಯ ಬಗ್ಗೆ ಸಮಿತಿಯ ಸದಸ್ಯರ ಸಭೆಯು ವಿಟ್ಲ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ನಾಯ್ತೊಟ್ಟುರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಸಮಿತಿಯ ಸದಸ್ಯರಾದ ಅರುಣ್ ರವರ ಸೂಚನೆಯಂತೆ ಸರ್ವಾನುಮತದಿಂದ ಅಶೋಕ್ ಶೆಟ್ಟಿಯವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

Read More

ಗುರು ಹಿರಿಯರ ಅನುಭವದ ಮಾತುಗಳು ನಮ್ಮ ಬದುಕಿಗೆ ಸ್ಪೂರ್ತಿ. ಶ್ರದ್ಧೆ, ಪ್ರಾಮಾಣಿಕತೆಯೇ ಯಶಸ್ಸಿನ ಗುಟ್ಟು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹೇಳಿದರು. ಅವರು ನವೆಂಬರ್ 29ರಂದು ಕಾರ್ಕಳ ಜ್ಞಾನಸುಧ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ‘ಜ್ಞಾನ ಸಂಭ್ರಮ’ದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಮನನ ಮಾಡಿಕೊಂಡರೆ ಸದಾ ಕ್ರೀಯಾಶೀಲರಾಗಲು ಸಾಧ್ಯ ಎಂದು ಹೇಳಿದ ಅವರು ಇಂದಿನ ಜ್ಞಾನ ಯುಗದಲ್ಲಿ ಜ್ಞಾನಸುಧ ಶಿಕ್ಷಣ ಸಂಸ್ಥೆಯು ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಬಗ್ಗೆ ಹೆಮ್ಮೆಯಿದೆ ಎಂದರು. ಸಹಶಿಕ್ಷಕಿ ವಿಜೇತರಾಣಿ ವಾರ್ಷಿಕ ವರದಿ ವಾಚಿಸಿದರು. ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ, ಟ್ರಸ್ಟಿಗಳಾದ ಕೆ ನಿತ್ಯಾನಂದ ಪ್ರಭು, ಜ್ಞಾನಸುಧ ಸಮೂಹ ಶಿಕ್ಷಣ ಸಂಸ್ಥೆಗಳ ದಿನೇಶ್ ಎಂ ಕೊಡವೂರು, ಸಾರ್ವಜನಿಕ ಸಂಪರ್ಕ ಅಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಕಾಲೇಜಿನ ಉಪ ಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್ ಯು, ಹಿತೈಷಿಗಳಾದ ದೇವೇಂದ್ರ ನಾಯಕ್,…

Read More

ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‍ನ 21ನೇ ವರ್ಷದ ವಾರ್ಷಿಕೋತ್ಸವವು ನವೆಂಬರ್ 27 ಹಾಗೂ 28ರಂದು ಅತ್ಯಂತ ಸಂಭ್ರಮದಿಂದ ನೆರವೇರಿತು. ಮೊದಲನೆಯ ದಿನದ ಕಾರ್ಯಕ್ರಮದ ಮುಖ್ಯ ಅತಿಥಿ ಉಡುಪಿ ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಮಾತನಾಡಿ ಶಾಲಾ ವಾರ್ಷಿಕೋತ್ಸವವು ನಮ್ಮ ಮಕ್ಕಳ ಸಾಧನೆ, ಬೆಳವಣಿಗೆ ಮತ್ತು ಪ್ರತಿಭೆಯನ್ನು ಆಚರಿಸುವ ವಿಶೇಷ ಸಂದರ್ಭವಾಗಿದೆ. ಜಿ ಎಮ್‍ನ ವೇದಿಕೆ ಇಲ್ಲಿನ ಮಕ್ಕಳ ಆತ್ಮಸ್ಥೈರ್ಯ ನಗುವನ್ನು ನೋಡುವಾಗ ರಿಯಾಲಿಟಿ ಶೋ ನೋಡಿದ ಅನುಭವವಾಗುತ್ತಿದೆ. ಮಕ್ಕಳು ಮುಂದೆ ಉತ್ತಮ ಸಾಧನೆಯನ್ನು ಮಾಡಿದ ನಂತರ ತಾನು ಕಲಿತ ವಿದ್ಯಾ ದೇಗುಲವನ್ನು, ಗುರುಗಳನ್ನು, ಪೋಷಕರನ್ನು ನೆನಪು ಮಾಡಿಕೊಳ್ಳಬೇಕೆಂದರು. ಅಪರಾಹ್ನದ ಕಾರ್ಯಕ್ರಮದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣ ಪ್ರಸಾದ್ ಕುಡ್ಲು ಮಾತನಾಡಿ ಜಿ ಎಮ್ ನಾನು ಕಂಡಂತಹ ಅತ್ಯಂತ ಶಿಸ್ತುಬದ್ಧ ಶಾಲೆ. ಇಲ್ಲಿ ಜ್ಞಾನ, ಶೃದ್ಧೆ, ಶಿಸ್ತು ಮತ್ತು ವ್ಯಕ್ತಿತ್ವಕ್ಕೆ ಪ್ರಾಮುಖ್ಯತೆಯನ್ನು ಕೊಡಲಾಗುತ್ತಿದೆ. ಮಕ್ಕಳಿಗೆ ಜೀವನದಲ್ಲಿ ಸಾಧನೆಗೆ ಕಠಿಣಶ್ರಮ, ಬದ್ಧತೆ ಅತೀ ಅವಶ್ಯಕ.…

Read More

ಕುಂದಾಪುರ ತಾಲೂಕು ಯುವ ಬಂಟರ ಸಂಘ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಜಂಟಿಯಾಗಿ ಆರ್.ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ ಶಾನಾಡಿ, ಗಿಳಿಯಾರು ಕುಶಲ್ ಹೆಗ್ಡೆ ಮೆಮೊರಿಯಲ್ ಟ್ರಸ್ಟಿನ ಉದಯ್ ಕುಮಾರ್ ಹೆಗ್ಡೆ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಬಿ ಅರುಣ್ ಕುಮಾರ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಹೇಶ ಹೆಗ್ಡೆ ಮೊಳಹಳ್ಳಿ, ಯುವ ಬಂಟರ ಸಂಘದ…

Read More

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹಿಳಾ ವೇದಿಕೆ ಸಕ್ಷಮ ಹಾಗೂ ಐಎಪಿಇಎನ್ ಸಂಸ್ಥೆಯ ಮಂಗಳೂರು ಘಟಕದ ಸಹಯೋಗದಲ್ಲಿ ಗುರುವಾರ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಮಹಿಳಾ ಆರೋಗ್ಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಕ್ಷೇಮವನ ಸಂಸ್ಥೆಯ ಕಾರ‍್ಯನಿರ್ವಾಹಕ ನಿರ್ದೇಶಕಿ ಶ್ರದ್ಧಾ ಅಮಿತ್, ಇಂದಿನ ಮಹಿಳೆ ಶಿಕ್ಷಣದಲ್ಲಿ ಮೇಲುಗೈ ಸಾಧಿಸಿದ್ದರೂ, ಜಾಗತಿಕ ಮಟ್ಟದಲ್ಲಿ ಕೇವಲ 15% ಮಹಿಳೆಯರು ಉನ್ನತ ಕಂಪೆನಿಗಳ ಪ್ರಮುಖ ನಿರ್ವಹಣಾ ಸ್ಥಾನದಲ್ಲಿದ್ದಾರೆ. ಮಹಿಳೆಯರಿಂದ ಮುನ್ನಡೆಸುವ ಸಂಸ್ಥೆಗಳು ಹೆಚ್ಚಿನ ಉತ್ಪಾದಕತೆ ಮತ್ತು ಕಾರ್ಯಕ್ಷಮತೆ ತೋರುತ್ತಿದ್ದರೂ ಮಹಿಳೆಯರ ನಾಯಕತ್ವ ಪ್ರತಿನಿಧಿತ್ವದಲ್ಲಿ ಗಣನೀಯ ಏರಿಕೆ ಕಂಡುಬಂದಿಲ್ಲ ಎಂದರು. ಮುಟ್ಟಿನ ರಜಾ ನೀತಿ ಪ್ರಗತಿ ಶೀಲವಾದರೂ, ಕಾರ್ಯಕ್ಷಮತೆಯ ಕೊರತೆ ಎಂಬ ಭಾವನೆಯನ್ನು ಮೂಡಿಸಬಹುದು ಎಂದರು. ಸ್ತ್ರೀರೋಗ ತಜ್ಞೆ ಡಾ. ಅಖಿಲಾ ವಾಸುದೇವನ್ ಮಾತನಾಡಿ, ಪ್ರೌಢಾವಸ್ಥೆಯಲ್ಲಿ ಹೆಣ್ಣುಮಕ್ಕಳ ಆರೋಗ್ಯದಲ್ಲಿ ಸಾಕಷ್ಟು ಬದಲಾವಣೆ ಕಂಡು ಬರುತ್ತದೆ. ಈ ಸಮಯದಲ್ಲಿ ಪಾಲಕರ ಮಾರ್ಗದರ್ಶನ ಅತೀ ಅಗತ್ಯ. ಆರೋಗ್ಯವನ್ನು ಕಾಪಾಡಿಕೊಳ್ಳಲು ವ್ಯಾಯಾಮ ಮತ್ತು ಸರಿಯಾದ ಆಹಾರ…

Read More

ಡಾ| ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ಯಕ್ಷಭಾರತಿ ( ರಿ.) ಪುತ್ತೂರು ಇವರ ಸಹಯೋಗದೊಂದಿಗೆ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಿದ 13ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ನಾಲ್ಕನೇ ದಿನ ಹಿರಿಯ ವಿದ್ವಾಂಸ ಮತ್ತು ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ದಿ| ವಿದ್ವಾನ್ ಕೆ. ಕಾಂತ ರೈ ಮೂಡುಬಿದಿರೆ ಅವರ ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಮಂಗಳೂರು ಎಸ್.ಕೆ. ಗೋಲ್ಡ್ ಸ್ಮಿತ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಉಪೇಂದ್ರ ಆಚಾರ್ಯ ಪೆರ್ಡೂರು ಸಂಸ್ಮರಣಾ ಜ್ಯೋತಿ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ‘ಯಕ್ಷಗಾನವನ್ನು ಪ್ರೀತಿಸುವವರು ತಮ್ಮ ಹಿರಿಯರನ್ನು ಯಾವತ್ತೂ ಗೌರವಿಸುತ್ತಾರೆ. ಯಕ್ಷಗಾನ ವಾಙ್ಮಯಕ್ಕೆ ಅಪೂರ್ವ ಕೊಡುಗೆ ನೀಡಿದ ಹಿರಿಯ ಅರ್ಥಧಾರಿ ವಿದ್ವಾನ್ ಕಾಂತ ರೈಯವರ ಬಂಧುಗಳು ಪ್ರತಿ ವರ್ಷ ಅದ್ದೂರಿ ಕಾರ್ಯಕ್ರಮದ ಮೂಲಕ ಅವರನ್ನು ಸ್ಮರಿಸಿಕೊಳ್ಳುತ್ತಿರುವುದು ಇದಕ್ಕೆ ಜ್ವಲಂತ ಸಾಕ್ಷಿ’ ಎಂದರು. ಉಳ್ಳಾಲ…

Read More

ಕಲಾಪೋಷಕ ಕುಂಬ್ರ ಬಾಲಕೃಷ್ಣ ರೈ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಸಂಸ್ಮರಣೆ, ಗೌರವಾರ್ಪಣೆ, ಆರ್ಥಿಕ ಸಹಾಯ ಕಾರ್ಯಕ್ರಮ ನವೆಂಬರ್ 22 ರಂದು ಕುಂಬ್ರ ಮನೆಯಲ್ಲಿ ಜರಗಿತು. ಸಭಾಧ್ಯಕ್ಷರಾಗಿ ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ಭಾಗವಹಿಸಿದ್ದರು. ದೀಪ ಪ್ರಜ್ವಲನೆಯನ್ನು ಜಿ ಮಹಾಬಲ ರೈ ಒಳತಡ್ಕ (ಸದಸ್ಯರು ವ್ಯವಸ್ಥಾಪನಾ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು) ಇವರು ನೆರವೇರಿಸಿದರು. ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ದಿವಂಗತ ಬಾಲಕೃಷ್ಣ ರೈಯವರ ಸಂಸ್ಮರಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ಸರಪ್ಪಾಡಿ ಅಶೋಕ್ ಶೆಟ್ಟಿ, ಪ್ರಕಾಶ್ಚಂದ್ರ ರೈ ಕೈಕಾರ, ಮೋನಪ್ಪ ಪೂಜಾರಿ ಬಡಕ್ಕೋಡಿ ಮತ್ತು ನಾರಾಯಣ ರೈ ಬಾರಿಕೆ ಭಾಗವಹಿಸಿದ್ದರು. ಹಿರಿಯ ಯಕ್ಷಗಾನ ಕಲಾವಿದರನ್ನು ನಗದು, ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅಶಕ್ತ 5 ಜನರಿಗೆ ನಗದು ವಿತರಿಸಿ ಒಟ್ಟು 50,000 ಮೊತ್ತವನ್ನು ನೀಡಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುಂದರ ರೈ ಮಂದಾರ ಇವರನ್ನು ಗೌರವಿಸಲಾಯಿತು. ಪುಟಾಣಿ ಹಂಸಿಕ ಪ್ರಾರ್ಥಿಸಿ, ಉದ್ಯಮಿ ಮೋಹನದಾಸ್ ರೈ ಸ್ವಾಗತಿಸಿ, ರಾಜಪ್ರಕಾಶ್ ರೈ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ 29ನೇ ವಾರ್ಷಿಕ ಮಹಾಸಭೆಯು ನವೆಂಬರ್25 ರಂದು ಮಂಗಳವಾರ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಮೂರು ವರ್ಷಗಳ ಕಾಲಾವಧಿಗೆ ಪದಾಧಿಕಾರಿಗಳಾಗಿ ಆಯ್ಕೆಗೊಂಡ ಅವರ ಹೆಸರುಗಳನ್ನು ಚುನಾವಣೆ ಅಧಿಕಾರಿ ಪೃಥ್ವಿರಾಜ್ ರೈ ಸಭೆಗೆ ತಿಳಿಸಿದರು. ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆಗೊಂಡರೆ, ಉಪಾಧ್ಯಕ್ಷರಾಗಿ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿಯಾಗಿ ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾಗಿ ಕೊಲ್ಲಾಡಿ ಬಾಲಕೃಷ್ಣ ರೈಯವರು ಆಯ್ಕೆಗೊಂಡರು. ಐಕಳ ಹರೀಶ್ ಶೆಟ್ಟಿ ಅವರನ್ನು ಶ್ರೀ ಗುರುದೇವಾನಂದ ಸ್ವಾಮೀಜಿ…

Read More